Author: UllalaVani

Kannada News From Coastal Karnataka

ಪುತ್ತೂರು : ಕುಸ್ಮಾರ್ ಗ್ರಾಮದ ಕೂರತ್ ಮಸೀದಿಯಲ್ಲಿ ಕೂರತ್ ತಂಙಳ್‌ರ ಹೆಸರಿನಲ್ಲಿ ನಡೆಯುತ್ತಿದ್ದ ಉರೂಸ್ ಕಾರ್ಯಕ್ರಮದ ಅಂತಿಮ ದಿನವಾದ ರವಿವಾರ ಭಾರೀ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರಿಂದ ಜನದಟ್ಟಣೆ ಉಂಟಾಗಿ ಆರು ಮಂದಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ಉರೂಸ್ ಕಾರ್ಯಕ್ರಮಕ್ಕೆ ವಿವಿಧ ಸ್ಥಳಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದ್ದರು. ಭಾರೀ ಜನದಟ್ಟಣೆಯ ಕಾರಣ ಆರು ಮಂದಿ ದೈಹಿಕವಾಗಿ ನಿತ್ರಾಣಗೊಂಡಿದ್ದರು. ಅವರನ್ನು ತಕ್ಷಣ ಸ್ಥಳದಲ್ಲಿದ್ದ ಆರೋಗ್ಯ ಇಲಾಖೆಯ ಸಿಬ್ಬಂದಿ ಉಪಚರಿಸಿದ್ದು ಇಬ್ಬರ ಆರೋಗ್ಯ ಸ್ಥಳದಲ್ಲೇ ಸುಧಾರಿಸಿದೆ. ಉಳಿದ ನಾಲ್ವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ಹೊರರೋಗಿಗಳಾಗಿ ಚಿಕಿತ್ಸೆ ಪಡೆದು ತೆರಳಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರು ಯಾವುದೇ ಸುಳ್ಳು ವದಂತಿಗಳನ್ನು ಹರಡಬಾರದು ಹಾಗೂ ಸುಳ್ಳು ವದಂತಿಗಳಿಗೆ ಕಿವಿಗೊಡಬಾರದು ಎಂದು ಎಸ್ಪಿ ವಿನಂತಿ ಮಾಡಿದ್ದಾರೆ.ರವಿವಾರ ಮುಂಜಾನೆಯಿಂದಲೂ ಭಾರೀ ಸಂಖ್ಯೆಯಲ್ಲಿ ಜನರು ವಾಹನಗಳಲ್ಲಿ ಆಗಮಿಸಿದ್ದರಿಂದ ಉರೂಸ್ ನಡೆಯುವ ಪ್ರದೇಶದ ಎಲ್ಲಾ ರಸ್ತೆಗಳಲ್ಲೂ ಸಂಚಾರ ದಟ್ಟಣೆ ಉಂಟಾಗಿತ್ತು

Read More

ಮಂಗಳೂರು : ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟಿಸುವ ಕುರಿತು ರವಿವಾರ ಬೆಳಗ್ಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ ಎಂದು ವರದಿಯಾಗಿದೆ. ಮಂಗಳೂರು, ಹುಬ್ಬಳ್ಳಿ, ಬೆಳಗಾವಿ, ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. ಬಜ್ಪೆಯ ಮಂಗಳೂರು ಅಂತರ್‌ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬೆದರಿಕೆ ಬಂದಿದ್ದು ಈ ಬಗ್ಗೆ ಪೊಲೀಸರು ಭದ್ರತೆಯ ಬಗ್ಗೆ ನಿಗಾವಹಿಸಿದ್ದಾರೆ ಎಂದು ಬಜ್ಪೆ ಪೋಲೀಸರು ತಿಳಿಸಿದ್ದಾರೆ. ವಿಮಾನ ನಿಲ್ದಾಣದ ಆವರಣ ಪ್ರವೇಶಿಸುವ ಪ್ರತಿಯೊಬ್ಬ ಪ್ರಯಾಣಿಕರನ್ನು ಮತ್ತು ಸಾರ್ವಜನಿಕರನ್ನು ತೀವ್ರ ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.ಬಾಂಬ್ ನಿಷ್ಕ್ರಿಯ ದಳ, ಶ್ವಾನ ದಳ, ಪೊಲೀಸ್, ಅಂತರಿಕ ಭದ್ರತಾ ಸಿಬ್ಬಂದಿ ಮತ್ತು ಗುಪ್ತಚರ ಇಲಾಖೆ ನಿಗಾ ವಹಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Read More

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2025-27 ನೇ ಸಾಲಿನ ನಿರ್ದೇಶಕರ ಸಭೆ ಸುರತ್ಕಲ್ ಬಂಟರ ಭವನದಲ್ಲಿ ನಡೆಯಿತು. ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ ಆಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಪ್ರವೀಣ್ ಪಿ ಶೆಟ್ಟಿ , ಪ್ರಧಾನ ಕಾರ್ಯದರ್ಶಿಯಾಗಿ ಲೀಲಾಧರ್ ಶೆಟ್ಟಿ ಕಟ್ಲ , ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಸುರತ್ಕಲ್, ಸಹಕಾರ್ಯದರ್ಶಿಯಾಗಿ ಮೀರಾ ವಾಣಿ ಶೆಟ್ಟಿ ಕಾಟಿಪಳ್ಳ, ಸಂಘಟನಾ ಕಾರ್ಯದರ್ಶಿಯಾಗಿ ಪುಷ್ಪರಾಜ್ ಶೆಟ್ಟಿ ಕುಡುಂಬೂರು , ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ದೇವೇಂದ್ರ ಕೆ ಶೆಟ್ಟಿ ಕ್ರೀಡಾ ಕಾರ್ಯದರ್ಶಿಯಾಗಿ ಪುಷ್ಪರಾಜ್ ಶೆಟ್ಟಿ ಮದ್ಯ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿ ಸದಸ್ಯರಾಗಿ ಶ್ರೀಕಾಂತ್ ಶೆಟ್ಟಿ ಕಾಟಿಪಳ್ಳ, ಸುಜೀರ್ ಶೆಟ್ಟಿ ಸೂರಿಂಜೆ, ಗಿರೀಶ್ ಎಂ ಶೆಟ್ಟಿ ಪೆರ್ಮುದೆ, ಪ್ರಮೋದ್ ಶೆಟ್ಟಿ ಹೊಸಬೆಟ್ಟು, ಸುಕೇಶ್ ಶೆಟ್ಟಿ ಚೇಳಾರ್, ರಾಮಚಂದ್ರ ಶೆಟ್ಟಿ ಕುಳಾಯಿ, ದಾಮೋದರ ಶೆಟ್ಟಿ ತೋಕೂರು, ಪದ್ಮನಾಭ ಶೆಟ್ಟಿ ಕುತ್ತೆತ್ತೂರು, ಸವಿತಾ ಭವಾನಿ ಶಂಕರ್ ಶೆಟ್ಟಿ ಬಾಳ, ಜ್ಯೋತಿ…

Read More

ಉಳ್ಳಾಲ: ಜೂ.28 ರಂದು ಇನ್ಸ್ಟಾಗ್ರಾಮ್‌ ನಲ್ಲಿ ಅಪ್ರಾಪ್ತೆಯ ಪರಿಚಯ ಮಾಡಿಕೊಂಡ ಯುವಕನೋರ್ವ ಆಕೆಯನ್ನು ಪುಸಲಾಯಿಸಿ ಕರೆದೊಯ್ದು ಸೋಮೇಶ್ವರ ಸಮುದ್ರ ತೀರದಲ್ಲಿ ಕಾರೊಳಗಡೆಯೇ ಅತ್ಯಾಚಾರವೆಸಗಿರುವ ಘಟನೆ ಶುಕ್ರವಾರ ಸಂಜೆ ಬೆಳಕಿಗೆ ಬಂದಿದೆ. ಈ ಕುರಿತು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ದಾಖಲಾದ ಪ್ರಕರಣದಂತೆ ಆರೋಪಿ ಅಡ್ಯಾರ್‌ ವಳಚ್ಚಿಲ್‌ ನಿವಾಸಿ ಕೆಲ್ವಿನ್‌ (೨೪) ಎಂಬಾತನನ್ನು ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ.ತನ್ನ ಪಿಯುಸಿ ಮುಗಿಸಿ ನರ್ಸಿಂಗ್‌ ಶಿಕ್ಷಣಕ್ಕೆ ಕಾಯುತ್ತಿದ್ದ ಅಪ್ರಾಪ್ತೆಯನ್ನು ಕೆಲ್ವಿನ್‌ ಇನ್ಸ್ಟಾಗ್ರಾಮ್‌ ಮೂಲಕ ಪರಿಚಯಿಸಿಕೊಂಡಿದ್ದನು. ಪರಿಚಯ ಮಾಡಿದ ನಾಲ್ಕನೇ ದಿನದಲ್ಲಿ ಭೇಟಿಯಾಗುವ ಉದ್ದೇಶ ಮಾಡಿಕೊಂಡು ಆಕೆಯ ಉಳ್ಳಾಲದ ಸ್ಥಳೀಯ ಠಾಣಾ ಸರಹದ್ದು ವ್ಯಾಪ್ತಿಯ ಮನೆಗೆ ಕಾರಿನಲ್ಲಿ ಬಂದಿದ್ದನು. ಬಳಿಕ ಅಪ್ರಾಪ್ತೆಯನ್ನು ಕರೆದೊಯ್ದು ಕುತ್ತಾರು ಸಮೀಪ ಲಾಡ್ಜ್‌ ವೊಂದರಲ್ಲಿ ರೂಮ್‌ ಕೇಳಿದ್ದಾನೆ. ಆದರೆ ಅಪ್ರಾಪ್ತೆಯಾಗಿರುವ ಹಿನ್ನೆಲೆಯಲ್ಲಿ ಲಾಡ್ಜ್‌ ಸಿಬ್ಬಂದಿ ರೂಮ್‌ ಕೊಟ್ಟಿರಲಿಲ್ಲ. ಅದಕ್ಕಾಗಿ ಕಾರಿನಲ್ಲೇ ಕೊಂಡೊಯ್ದ ಆರೋಪಿ ಸೋಮೇಶ್ವರ ಸಮುದ್ರ ತೀರದಲ್ಲಿ ಕಾರೊಳಗಡೆಯೇ ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದನು. ನಂತರ ಆಕೆಯ ಮನೆಯವರೆಗೂ ಕಾರಿನಲ್ಲಿ ಬಿಟ್ಟುಹೋಗಿದ್ದಾನೆ. ಬೆಳಿಗ್ಗೆ…

Read More

ಮಂಗಳೂರು : ಪುಟ್ಟ ಮಕ್ಕಳಿಬ್ಬರ ಹುಟ್ಟುಹಬ್ಬವನ್ನು ಆರೋಗ್ಯ ಸ್ನೇಹಿ, ಪರಿಸರ ಸ್ನೇಹಿ ಮತ್ತು ಶೂನ್ಯ ತ್ಯಾಜ್ಯ ಪರಿಕಲ್ಪನೆಯಲ್ಲಿ ಆಚರಿಸುವ ಮೂಲಕ ಇತರರಿಗೂ ಮಾದರಿಯಾಗಲು ಉದ್ದೇಶಿಸಲಾಗಿದೆ ಎಂದು ಸಾಮಾಜಿಕ ಕಾರ್ಯಕರ್ತ, ಪರಿಸರ ಪ್ರೇಮಿ ಜಯಪ್ರಕಾಶ್ ಶೆಟ್ಟಿ ಎಕ್ಕೂರು ಅವರು ತಿಳಿಸಿದ್ದಾರೆ. ಶನಿವಾರ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಮಂಜಲ್‌ಕಟ್ಟೆಯ ರೇಶ್ಮಾ ಮತ್ತು ಲಕ್ಷ್ಮಿಕಾಂತ್ ದಂಪತಿಯ ಪುತ್ರಿಯರಾದ ಕ್ಷೀರ್ಷಾಳ ಮೊದಲ ವರ್ಷದ ಹುಟ್ಟುಹಬ್ಬ ಮತ್ತು ಮೋಕ್ಷಾಳ 10ನೇ ಚರ್ಷದ ಜನ್ಮದಿನವನ್ನು ಜು.5ರಂದು ರಾತ್ರಿ 7 ಗಂಟೆಗೆ ಕದ್ರಿಪಾರ್ಕ್‌ ಬಳಿಯ ಲಯನ್ಸ್ ಅಶೋಕ ಸೇವಾಭವನದಲ್ಲಿ ಆಯೋಜಿಸಲಾಗಿದೆ ಎಂದರು. ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಕೇಕ್ ಇತ್ಯಾದಿಗಳ ಬದಲಾಗಿ ತರಕಾರಿ, ಹಣ್ಣು ಸೊಪ್ಪು, ಡ್ರೈಫೂಟ್ಸ್ ಇತ್ಯಾದಿಗಳನ್ನು ಬಳಕೆ ಮಾಡಲಾಗುತ್ತದೆ ಮರಗಳ ನಾಶಕ್ಕೆ ಕಾರಣವಾಗಿರುವ ಟಿಶ್ಯೂ ಪೇಪರ್, ಪರಿಸರಕ್ಕೆ ಮಾರಕವಾಗಿರುವ ನೀರಿನ ಬಾಟಲ್, ಪೇಪರ್, ಪ್ಲಾಸಿಕ್ ಕಪ್‌ಗಳು ಇಲ್ಲದೆ, ಶೂನ್ಯ ತ್ಯಾಜ್ಯದೊಂದಿಗೆ ಕಾರ್ಯಕ್ರಮವನ್ನು ವಿಶೇಷವಾಗಿ ಆಯೋಜಿಸಲಾಗುತ್ತಿದೆ. ಈ ರೀತಿಯ ಆಚರಣೆ ಮೂಲಕ ಇತರರೂ ಪರಿಸರಕ್ಕೆ…

Read More

ಲೋ ಬಿಪಿಯಿಂದ ಸ್ವಂತ ಅಂಗಡಿಯಲ್ಲೇ ಕುಸಿದುಬಿದ್ದಿದ್ದ ಮೊಂಟೆಪದವು ನಿವಾಸಿ ನವವಿವಾಹಿತ ಚಿಕಿತ್ಸೆ ಫಲಕಾರಿಯಾಗದೆ  ಸಾವುಉಳ್ಳಾಲ : ಲೋ ಬಿಪಿಗೆ ಒಳಗಾಗಿ ಮಂಗಳೂರಿನ ಫಾರಮ್ ಮಾಲ್ ನಲ್ಲಿರುವ ಸ್ವಂತ ಮಳಿಗೆಯಲ್ಲಿ ಕುಸಿದುಬಿದ್ದಿದ್ದ ಮಂಜನಾಡಿ ನಿವಾಸಿ ನವವಿವಾಹಿತ ಇಂದು ಚಿಜಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಮಂಜನಾಡಿ ಮೊಂಟೆಪದವು ವೀರಮಾರುತಿ ಮಂದಿರ ಬಳಿಯ ಶಾಂತನಗರ ನಿವಾಸಿ ದಿ. ವೆಂಕಪ್ಪ ಟೈಲರ್ ಮತ್ತು ಪಾರ್ವತಿ ದಂಪತಿ ಪುತ್ರ ಭರತ್ (36) ಮೃತರು.  ಜು.1 ರಂದು ಫಾರಮ್ ಮಾಲ್ ನಲ್ಲಿರುವ ಅಂಗಡಿಯಲ್ಲಿ ಇರುವಾಗ ಲೋ ಬಿಪಿಯಾಗಿ ಎಕಾಏಕಿ ಕುಸಿದುಬಿದ್ದಿದ್ದರು.  ತಕ್ಷಣ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಇಂದು 9 ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಭರತ್ ಸಾವನ್ನಾಪ್ಪಿದ್ದಾರೆ. ಏಪ್ರಿಲ್ 21 ರಂದು ವಿವಾಹವಾಗಿದ್ದರು . ಪತ್ನಿಯೂ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದಾರೆ.ಮೃತರು ತಾಯಿ , ಮೂವರು ಸಹೋದರಿಯರನ್ನು ಅಗಲಿದ್ದಾರೆ.

Read More

ಮಂಗಳೂರು : ಒಡಿಯೂರು ಶ್ರೀಗಳ ಜನ್ಮ ದಿನೋತ್ಸವ ಸಮಿತಿ ವತಿಯಿಂದ ಆಗಸ್ಟ್ 6 ಮತ್ತು 7ರಂದು ವರ್ತಮಾನದ ತಲ್ಲಣಗಳು’ ಎಂಬ ವಿಷಯದಲ್ಲಿ ಅಂತರ್ ಕಾಲೇಜು ಕಿರು ನಾಟಕ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಒಡಿಯೂರು ಶ್ರೀಗಳ ಜನ್ಮ ದಿನೋತ್ಸವ ಸಮಿತಿಯ ಸಂಯೋಜಕ ಕದ್ರಿ ನವನೀತ ಶೆಟ್ಟಿ, ಒಡಿಯೂರು ಸಂಸ್ಥಾನದ ರಾಜಾಂಗಣದಲ್ಲಿ ಈ ಸ್ಪರ್ಧೆ ನಡೆಯಲಿದೆ ಎಂದರು. ದ.ಕ. ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳ ಪದವಿ ಪೂರ್ವ, ಡಿಪ್ಲೊಮಾ, ವೃತ್ತಿಪರ ಕೋರ್ಸ್, ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು 10 ನಿಮಿಷದ ಕನ್ನಡ ಅಥವಾ ತುಳು ಭಾಷೆಯ ಈ ಕಿರು ನಾಟಕ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ವಿದ್ಯಾಸಂಸ್ಥೆಯ ಮೂಲಕ ಹೆಸರು ನೋಂದಣಿ ಮಾಡಬೇಕಾಗಿದ್ದು ಸಂಸ್ಥೆಯ ಗರಿಷ್ಟ 2 ತಂಡಗಳಿಗೆ ಭಾಗವಹಿಸಲು ಅವಕಾಶವಿದೆ. ಧ್ವನಿ ಮುದ್ರಿತ ಸಂಭಾಷಣೆ ಸಂಗೀತ ಬಳಸಲು ಅವಕಾಶ ಇರುವುದಿಲ್ಲ ಯಾವುದೇ ಜಾತಿ, ಪಂಗಡ, ಲಿಂಗ ನಿಂದನೆಗಳಿಗೆ ಅವಕಾಶ ಇರುವುದಿಲ್ಲ. ಸ್ಪರ್ಧೆಗೆ ನೋಂದಣಿ ಮಾಡಲು ಜುಲೈ 8…

Read More

ಪಜೀರು ಸುಮಾರು 12 ವರ್ಷದ ಹಿಂದೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಕ್ಕಳ ಕಳ್ಳ ಸಾಗಾಟ ಪ್ರಕರಣದ ಮೂವರು ಆರೋಪಿಗಳಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ಗುರುವಾರ ಶಿಕ್ಷೆ ಘೋಷಿಸಿದೆ. ಶಿಕ್ಷೆಯ ಪ್ರಮಾಣವನ್ನು ಸೋಮವಾರ ಪ್ರಕಟಿಸುವುದಾಗಿ ನ್ಯಾಯಾಲಯ ತಿಳಿಸಿದೆ. ಲೆನೆಟ್ ವೇಗಸ್, ಜೊಸ್ಸಿ ವೇಗಸ್, ಲಸ್ಸಿ ವೇಗಸ್ ಶಿಕ್ಷೆಗೊಳಗಾದ ಆರೋಪಿಗಳಾಗಿದ್ದಾರೆ. ಘಟನೆಯ ವಿವರ : 2013ರಲ್ಲಿ ಅಂಗನವಾಡಿ ಕಾರ್ಯಕರ್ತೆ ಫಾತಿಮಾ ಎಂಬಾಕೆ ಮನೆ ಮನೆಗೆ ತೆರಳಿ ಮಕ್ಕಳ ಸಮೀಕ್ಷೆ ಮಾಡುವ ಸಂದರ್ಭ ಲೆನೆಟ್ ವೇಗಸ್‌ರ ಎಂಬವರ ಮನೆಯಲ್ಲಿ ಮಾರಾಟಕ್ಕೆ ಮಗು ವನ್ನು ಇಟ್ಟಿರುವ ಬಗ್ಗೆ ಮಾಹಿತಿ ಪಡೆದು ಪತ್ರಕರ್ತ ನವೀನ್ ಸೂರಿಂಜೆಯ ಗಮನಕ್ಕೆ ತಂದಿದ್ದರು. ನಂತರ ಚೈಲ್ಡ್‌ಲೈನ್ ಸಂಸ್ಥೆಯವರು ಲೆನೆಟ್ ಮನೆಗೆ ತೆರಳಿ ಮಗುವಿನ ಕುರಿತು ವಿಚಾರಿಸಿದಾಗ ಮಗು ತನ್ನದೇ ಎಂದು ಲೆನೆಟ್ ಪ್ರತಿಪಾದಿಸಿದ್ದರಲ್ಲದೆ, ಆ ಮಗುವನ್ನು ತಾನೇ ಹೆತ್ತಿದ್ದು ಎಂಬುದಕ್ಕೆ ಮಂಗಳೂರಿನ ನರ್ಸಿಂಗ್ ಹೋಂ ಒಂದರ ಡಿಸ್ಚಾರ್ಜ್ ದಾಖಲೆಗಳನ್ನೂ ತೋರಿಸಿದ್ದಳು.  ರಾತ್ರಿ-ಹಗಲು ಕಾರ್ಯಾಚರಣೆ ಮಾಡಿ ಮಗುವಿನ…

Read More

ಮಂಗಳೂರು: ಶಿಕ್ಷಕ, ಸಾಹಿತಿ, ಸಂಘಟಕ, ಕೃಷಿಕನಾಗಿಯೂ ತನ್ನನ್ನು ತಾನು ತೊಡಗಿಸಿಕೊಂಡು ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರವೀಂದ್ರ ರೈ ಕಲ್ಲಿಮಾರ್‌ ಅವರು ಈ ಬಾರಿ ಸರ್ವಾನುಮತದಿಂದ ಪ್ರತಿಷ್ಠಿತ ಉಳ್ಳಾಲ ಬಂಟರ ಸಂಘದ ಅಧ್ಯಕ್ಷ ಹುದ್ದೆಯನ್ನು ಅಲಂಕರಿಸಲಿದ್ದಾರೆ.೩೪ ವರ್ಷಗಳ ಕಾಲ ಶಿಕ್ಷಕರಾಗಿ ಸೇವೆ ಸಲ್ಲಿಸಿ ಉಡುಪಿಯಿಂದ ಇತ್ತೀಚೆಗಷ್ಟೇ ವರ್ಗಾವಣೆ ಹೊಂದಿದ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಸೇರಿದಂತೆ ಅನೇಕ ಕಲಾವಿದರು ಹಾಗೂ ಶ್ರೇಷ್ಟ ಸಾಧಕರನ್ನು ಸಮಾಜಕ್ಕೆ ಒಪ್ಪಿಸಿದಂತಹ ಅಚ್ಚುಮೆಚ್ಚಿನ ಶಿಕ್ಷಕನಾಗಿರುವ ರವೀಂದ್ರ ರೈ ಅವರಿಗೆ ಸಮುದಾಯದ ಸಂಘದ ಗಾದಿ ಒಲಿದಿದೆ.ಕೇವಲ ಶಿಕ್ಷಕರಾಗಿ ಸೇವೆಯನ್ನು ಸಲ್ಲಿಸದೇ ಹರೇಕಳ ಶ್ರೀ ರಾಮಕೃಷ್ಣ ಶಾಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸಿದವರು. ಶಾಲೆಗೆ ಬೇಕಾದ ಅಗತ್ಯತೆ ಪೂರೈಸುವ ಮಹತ್ತರ ಜವಾಬ್ದಾರಿಯನ್ನು ನಿಭಾಯಿಸಿದವರು. ಹಾಗಾಗಿ ಖಾಸಗಿ ಶಾಲೆಯನ್ನು ಮೀರುವ ರೀತಿಯಲ್ಲಿ ಹರೇಕಳ ಶಾಲೆ ನಿರ್ಮಾಣಗೊಂಡಿದೆ.ಕೊಳ್ನಾಡು ಗ್ರಾಮದ ಸಾಲೆತ್ತೂರು ಕುಳಾಲು ಬಂಟ ಮನೆತನದವರಾಗಿರುವ ಕುಳಾಲು ದಿ. ವಿಠಲ್‌ ರೈ , ತಾಯಿ ದಿ.ಸುಂದರಿ ರೈ ದಂಪತಿಯ ಹಿರಿಯ ಪುತ್ರನಾಗಿರುವ ರವೀಂದ್ರ ರೈ ಇವರು…

Read More

ಜನವಾದಿ ಮಹಿಳಾ ಸಂಘಟನೆಯ ದ.ಕ.ಜಿಲ್ಲಾ ಸಮ್ಮೇಳನವು ಜುಲೈ 27ರಂದು ಮಂಗಳೂರಿನಲ್ಲಿ ಜರುಗಲಿದ್ದು , ಇದರ ಯಶಸ್ವಿಗಾಗಿ ರಚಿಸಲ್ಪಟ್ಟ ಸ್ವಾಗತ ಸಮಿತಿಯ ಗೌರವಾಧ್ಯಕ್ಷರಾಗಿ ಖ್ಯಾತ ಚಿತ್ರನಟಿ, ರಂಗನಟಿ, ಸ್ತ್ರೀವಾದಿ ಚಿಂತಕಿ ಗೀತಾ ಸುರತ್ಕಲ್ ರವರನ್ನು ಆಯ್ಕೆ ಮಾಡಲಾಗಿದೆ. ಗೀತಾ ಸುರತ್ಕಲ್ ಅವರು ಸ್ತ್ರೀವಾದಿ ಚಿಂತನೆಯ ಪ್ರಗತಿಪರ ಸಾಹಿತಿಗಳಾಗಿದ್ದು, ಅವರು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮತ್ತು ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಆಯೋಜಿಸಿದ್ದ ಮಂಗಳೂರು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ – 2018 ಇದರ ಉದ್ಘಾಟಕರಾಗಿದ್ದರು. ನಾಟಕ ರಂಗ ಗೀತಾ ಸುರತ್ಕಲ್ ಅವರಾಸಕ್ತಿಯ ಕ್ಷೇತ್ರ. ಸಮಾಜ ಬದಲಾವಣೆಯಲ್ಲಿ ನಾಟಕಗಳ ಪಾತ್ರ ಅಪಾರವಾಗಿರುವುದರಿಂದ ರಂಗ ಕ್ಷೇತ್ರವನ್ನು ನೆಚ್ಚಿಕೊಂಡಿದ್ದರು. ನಾಟಕದಲ್ಲಿ ಇವರ ಪಾತ್ರಗಳು ರಾಜ್ಯಾಧ್ಯಂತ ಮೆಚ್ಚುಗೆ ಗಳಿಸಿದ್ದವು. ಸಿನೇಮಾದಲ್ಲೂ ಗುರುತರ ಪಾತ್ರಗಳನ್ನು ನಿರ್ವಹಿಸಿರುವ ಗೀತಾ ಸುರತ್ಕಲ್ ಅವರು ಆ ಮೂಲಕ ಸಮಾಜಕ್ಕೆ ವಿಶಿಷ್ಠ ಸಂದೇಶ ನೀಡಿದ್ದಾರೆ. ಬೋಳುವಾರು ಮಹಮ್ಮದ್‌ ಕುಂಞಿ ಅವರ ಪ್ರಸಿದ್ಧ ಕತೆಯನ್ನು ಅನನ್ಯ ಕಾಸರವಳ್ಳಿ ಅವರು ‘ಕಪ್ಪು…

Read More