ಬೊಗೋಡಿ : ಪಾಣೆ ಮಂಗಳೂರು ಬೊಗೋಡಿ ನೂರುದ್ದೀನ್ ಜುಮ್ಮಾ ಮಸೀದಿ ಅಧ್ಯಕ್ಷರಾಗಿ ಹಾಜಿ ಎಸ್. ಮೊಹಮ್ಮದ್ ಆಯ್ಕೆಗೊಂಡಿದ್ದಾರೆ.ನೂರುದ್ದೀನ್ ಜುಮಾ ಮಸೀದಿ ಬೋಗೋಡಿ ಇದರ 2025-26 ನೇ ಮಹಾಸಭೆಯಲ್ಲಿ ಆಯ್ಕೆ ನಡೆಯಿತು.ಉಪಾದ್ಯಕ್ಷರು ಹನೀಫ್ ಎಸ್.ಎಮ್.ಎನ್, ಪ್ರಧಾನ ಕಾರ್ಯದರ್ಶಿಯಾಗಿ ಅಬೂಬಕ್ಕರ್ ಮೆಲ್ಕಾರ್ ,ಜೊತೆ ಕಾರ್ಯದರ್ಶಿಯಾಗಿ ಮುಹಮ್ಮದ್ ಸಾದಿಕ್, ಅರಾಫತ್, ಖಜಾಂಜಿಯಾಗಿ ಅಬ್ದುಲ್ಲಾ ಜಿ.ಎ, ಲೆಕ್ಕ ಪರಿಶೋಧಕರಾಗಿ ಮುಸ್ತಫಾ ಮೆಲ್ಕಾರ್, ಸಮಿತಿ ಸದಸ್ಯರಾಗಿ ಮಜೀದ್ ದರ್ಖಾಸ್, ಮುಹಮ್ಮದ್ ಷರೀಫ್, ಫಾರೂಖ್ ಎ.ಎಂ, ಮುಹಮ್ಮದ್ ಷರೀಫ್ ಎ ಎಂ, ರಮ್ಲಾನ್, ಮುಹಮ್ಮದ್ ಶಿಹಾಬ್, ಮುಹಮ್ಮದ್ ಬಶೀರ್, ಶರೀಫ್ ಮುಸ್ಲಿಯಾರ್ ಆಯ್ಕೆಗೊಂಡಿದ್ದಾರೆ.
Author: UllalaVani
ಸುಳ್ಯ : ಸಂಪಾಜೆ ಸಮೀಪದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ದೇವರಕೊಲ್ಲಿ ಸಮೀಪ ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾರ ರಾತ್ರಿ ನಡೆದಿದೆ. ಕಾರು ಸುಳ್ಯ ಕಡೆಯಿಂದ ಮೈಸೂರು ಕಡೆ ತೆರಳುತ್ತಿದ್ದರೆ ಬಸ್ ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ ಅಪಘಾತದಲ್ಲಿ ಕಾರ್ ಹಾಗೂ ಬಸ್ ಎರಡೂ ವಾಹನಗಳು ಜಖಂಗೊಂಡಿದೆ.
ಮಂಗಳೂರು: ಸಾಮಾಜಿಕ ಜವಾಬ್ದಾರಿ ಮತ್ತು ಸಮುದಾಯ ಅಭಿವೃದ್ಧಿಯತ್ತ ತನ್ನ ಅಚಲ ಬದ್ಧತೆಯ ಭಾಗವಾಗಿ, ಎಂಸಿಸಿ ಬ್ಯಾಂಕ್ 2025 ಜೂನ್ ತಿಂಗಳಲ್ಲಿ ಮಂಗಳೂರು, ಉಡುಪಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಾದ್ಯಂತ ವಿವಿಧ ಶಾಲೆಗಳು, ಅನಾಥಾಶ್ರಮಗಳು ಮತ್ತು ಸಂಸ್ಥೆಗಳಿಗೆ ನೋಟ್ ಪುಸ್ತಕ, ಕೊಡೆ ಮತು ಸ್ಕೂಲ್ ಬ್ಯಾಗ್ಗಳನ್ನು ವಿತರಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿತು. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಅನಿಲ್ ಲೋಬೊ ಮತ್ತು ನಿರ್ದೇಶಕರ ಮಂಡಳಿಯ ನೇತೃತ್ವದಲ್ಲಿ ನಡೆಯುತ್ತಿರುವ ಈ ಚಟುವಟಿಕೆಗಳು, ಅರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸಲು ಮತ್ತು ಶೈಕ್ಷಣಿಕ ಸಬಲೀಕರಣವನ್ನು ಉತ್ತೇಜಿಸಲು ಬ್ಯಾಂಕಿನ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತವೆ. ಪಡುಕೋಣೆಯ ಸೈಂಟ್ ಆಂಟನಿ ಪ್ರಾಥಮಿಕ ಶಾಲೆ, ಗಂಗೊಳ್ಳಿಯ ಸ್ಟೆಲ್ಲಾ ಮಾರಿಸ್ ಪ್ರೌಢಶಾಲೆ, ಕುಂದಾಪುರದ ಸೈಂಟ್ ಮೇರಿ ಶಾಲೆ, ಕುಂದಾಪುರದ ಸೈಂಟ್ ಜೋಸೆಫ್ ಪ್ರಾಥಮಿಕ ಮತ್ತು ಪ್ರೌಢಶಾಲೆ, ಬ್ರಹ್ಮಾವರದ ನಿರ್ಮಲಾ ಪ್ರೌಢಶಾಲೆ ಮತ್ತು÷ಕೊಸ್ಮೊಪೊಲಿಟನ್ ಹಿರಿಯ ಪ್ರಾಥಮಿಕ ಶಾಲೆ, ಮಂಗಳೂರಿನ ಕೂಳೂರು ಪ್ರೌಢಶಾಲೆ, ಬಿಜೈಯ ಸೈಂಟ್ ಅಂಜೆಲಾ ಹೋಂ, ಡಿ ಮರ್ಸಿಡ್ ಅನಾಥಾಶ್ರಮ, ಪಾನೀರ್, ಪಾಲಡ್ಕದ ಸೈಂಟ್ ಇಗ್ನೇಷಿಯಸ್ ಲೊಯೊಲಾ…
ನರಿಂಗಾನ: ಇಲ್ಲಿನ ಕಲ್ಲರಕೋಡಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಶೇಷ ಚೇತನ ಮಕ್ಕಳ ಜತೆಗೆ ವಿದ್ಯಾರ್ಥಿಗಳು ಯಾವ ರೀತಿ ವರ್ತಿಸಬೇಕು ಅನ್ನುವ ಕುರಿತ ಕರ್ಯಗಾರ ನಡೆಯಿತು. ನಿಟ್ಟೆ ಸ್ಪೆಷಲ್ ಚೈಲ್ಡ್ ಕೇರ್ ಸೆಂಟರ್ ನ ವಿಭಾಗ ಮುಖ್ಯಸ್ಥೆ ಡಾ. ಅಮರಶ್ರೀ ಶೆಟ್ಟಿ ಅವರು ವಿಶೇಷ ಚೇತನ ಮಕ್ಕಳೊಂದಿಗೆ ಹೇಗೆ ವ್ಯವಹರಿಸಬೇಕು, ಅವರ ಶಿಕ್ಷಣಕ್ರಮ, ಊಟೋಪಚಾರ ಹಾಗೂ ಅವರನ್ನು ಹೇಗೆ ಆದರಿಸಬೇಕು ಎಂಬುದನ್ನು ವಿಡಿಯೋ ಮೂಲಕ ತೋರಿಸಿ ವಿವರಿಸಿದರು. ಸ್ಪೆಷಲ್ ಎಜುಕೇಟರ್ ಸಿಂಥಿಯಾ ಡಿಸೋಜ ಉಪಸ್ಥಿತರಿದ್ದರು.ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ನಯನ ಕುಮಾರಿ.ಕೆ ವಹಿಸಿದ್ದರು.ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಪ್ರಭಾಕರ ಜೋಗಿ ಸ್ವಾಗತಿಸಿದರು ಹಾಗೂ ಕಾರ್ಯಕ್ರಮ ನಿರೂಪಿಸಿದರು, ಕನ್ನಡ ಶಿಕ್ಷಕಿ ಜಯಲಕ್ಷ್ಮೀ.ಜಿ. ವಂದಿಸಿದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ (ನಿ.) ಮಂಗಳೂರು ಇದರ ವತಿಯಿಂದ “ಆತ್ಮಶಕ್ತಿ ಸೌಧ”, ಪಡೀಲ್ನಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು.ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಶ್ರೀ ಚಿತ್ತರಂಜನ್ ಬೋಳಾರ್ ಹಾಗೂ ಅತಿಥಿಗಳು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ತದನಂತರ ಮಾತನಾಡಿದ ಸಂಘದ ಅಧ್ಯಕ್ಷರು ಯೋಗ ದಿನಾಚರಣೆಯ ಮಹತ್ವದ ಬಗ್ಗೆ ಸಂಘದ ಸಿಬ್ಬಂದಿಗಳಿಗೆ ಮಾಹಿತಿ ನೀಡಿದರು. ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಇದರ ಶಿಕ್ಷಕಿಯಾದ ಶ್ರೀಮತಿ ಪುಷ್ಪಲತಾ ಸುವರ್ಣ ರವರು ಸಂಘದ ಸಿಬ್ಬಂದಿಗಳಿಗೆ ಯೋಗಾಸನ ಮಾಡಿಸುವ ಮೂಲಕ ಯೋಗ ದಿನಾಚರಣೆಯನ್ನು ನಡೆಸಿಕೊಟ್ಟರು. ಈ ಕಾರ್ಯಕ್ರಮದಲ್ಲಿ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ.) ಇದರ ಶಿಕ್ಷಕಿಯಾದ ಶ್ರೀಮತಿ ಪುಷ್ಪಲತಾ ಸುವರ್ಣ ರವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಉಪಾಧ್ಯಕ್ಷರಾದ ಶ್ರೀ ನೇಮಿರಾಜ್. ಪಿ , ನಿರ್ದೇಶಕರಾದ ಶ್ರೀ ದಿವಾಕರ್ ಬಿ.ಪಿ., ಶ್ರೀ ಗೋಪಾಲ್ ಎಮ್, ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಸೌಮ್ಯ ವಿಜಯ್,…
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಮಣ್ಣಗುಂಡಿಯಲ್ಲಿ ದೊಡ್ಡ ಪ್ರಮಾಣದಲ್ಲಿ ಗುಡ್ಡ ಕುಸಿದು, ಹೆದ್ದಾರಿಯೆಲ್ಲ ಮಣ್ಣು ಹಾಗೂ ಮರಗಳಿಂದ ಮುಚ್ಚಿಹೋಗಿದೆ. ಈ ಪ್ರದೇಶದಲ್ಲಿ ಚತುಷ್ಪಥ ಕಾಮಗಾರಿಯ ಹಿನ್ನೆಲೆಯಲ್ಲಿ ಅತ್ಯಂತ ಎತ್ತರದ ಗುಡ್ಡವನ್ನು ಯಾವುದೇ ಮುನ್ನೆಚ್ಚರಿಕೆಯ ಕ್ರಮವಿಲ್ಲದೆ ಅಗೆಯಲಾಗಿದೆ ಎಂಬ ಆರೋಪ ವ್ಯಕ್ತವಾಗಿದೆ. ಗುಡ್ಡವನ್ನು ನೇರವಾಗಿ ಅಗೆದಿರುವುದರಿಂದ ಮಳೆ ಬರುತ್ತಿದ್ದಂತೆ ಮಣ್ಣು ಸಡಿಲಗೊಂಡು ರಸ್ತೆಗೆ ಜರಿಯುತ್ತಿದೆ. ಪರಿಣಾಮ ಹೆದ್ದಾರಿ ಬಂದ್ ಆಗುವ ಸ್ಥಿತಿ ನಿರ್ಮಾಣವಾಗಿದೆ. ಸದ್ಯ ಈ ಮಾರ್ಗದಲ್ಲಿ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಕೇವಲ ಕಿರಿದಾದ ಜಾಗದಲ್ಲಿ ವಾಹನಗಳು ಸಂಚರಿಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದಾಗಿ ಈ ರಸ್ತೆ ಅವಲಂಬಿಸಿರುವ ಸಾವಿರಾರು ಪ್ರಯಾಣಿಕರು ಹಾಗೂ ವಾಹನ ಸವಾರರು ಆತಂಕದಲ್ಲಿದ್ದಾರೆ. ನೆಲ್ಯಾಡಿ ಹೊರಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸಂಬಂಧಪಟ್ಟವರಿಂದ ಮಣ್ಣನ್ನು ತೆರೆವುಗೊಳಿಸುವ ಕಾರ್ಯ ನಡೆಸುತ್ತಿದ್ದಾರೆ. ಈ ಮಾರ್ಗದಲ್ಲಿ ನಿರಂತರವಾಗಿ ಅನಾಹುತಗಳು ನಡೆಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನವಹಿಸಿದ್ದಾರೆ ಎಂಬ ಆರೋಪ ವ್ಯಾಪಕವಾಗಿದೆ. ಕಾಮಗಾರಿ ಗುಣಮಟ್ಟ, ಸುರಕ್ಷತಾ ಕ್ರಮಗಳ ಅವ್ಯವಸ್ಥೆ, ಹಾಗೂ ಗುತ್ತಿಗೆದಾರರ…
ಉಳ್ಳಾಲ : ವಸತಿಗೃಹದ ಮನೆಯ ರೂಮಿನ ಕಿಟಕಿಗೆ ವಿದ್ಯಾರ್ಥಿನಿಯೋರ್ವಳು ಶಾಲಿನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ಬೆಂದೂರ್ವೆಲ್ ಖಾಸಗಿ ಕಾಲೇಜಿನ ದ್ವಿತೀಯ ವರ್ಷದ ಬಿ.ಎ ವಿದ್ಯಾರ್ಥಿನಿ ಶ್ರೇಯಾ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ತಲಪಾಡಿ ನಾರ್ಲ ನಿವಾಸಿ ಕುಟುಂಬ ಖಾಸಗಿ ಸಂಸ್ಥೆಯ ವಸತಿಗೃಹದಲ್ಲಿ ನೆಲೆಸಿದ್ದರು. ಅಲ್ಲಿಯೇ ಶ್ರೇಯಾ ಮನೆಯ ಬೆಡ್ ರೂಮಿನ ಕಿಟಕಿಗೆ ಶಾಲಿನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಓದಿನಲ್ಲಿ ಒತ್ತಡ, ಒಂದು ವಿಷಯದಲ್ಲಿ ಅನುತ್ತೀರ್ಣಳಾಗಿರುವುದನ್ನು ಡೆತ್ನೋಟಿನಲ್ಲಿ ಉಲ್ಲೇಖಿಸಿರುವುದಾಗಿ ತಿಳಿದುಬಂದಿದೆ.
ತೊಕ್ಕೊಟ್ಟು : ಕಾನೂನು ಪ್ರಕಾರ ಮಾದಕ ವ್ಯಸನಗಳ ಸೇವನೆ ಅಪರಾಧ, ಅದರಲ್ಲಿ ಕಮರ್ಷಿಯಲ್ ಪ್ರಮಾಣದಲ್ಲಿದ್ದರೆ 10 ವರ್ಷಗಳಿಗಿಂತ ಅಧಿಕ ಶಿಕ್ಷೆ ಹಾಗೂ ಮನೆ ಆಸ್ತಿ ಎಲ್ಲವನ್ನೂ ಸೀಝ್ ಮಾಡುವ ಆದೇಶವೂ ನ್ಯಾಯಾಲಯದಿಂದ ಬರುವ ಸಾಧ್ಯತೆಗಳು ಹೆಚ್ಚಿದೆ. ಕಮರ್ಷಿಯಲ್ ಪ್ರಮಾಣಕ್ಕಿಂತ ಕಡಿಮೆಯಿದ್ದಲ್ಲಿಯೂ ಶಿಕ್ಷೆ ಖಚಿತ ಆದರೆ ವರ್ಷಗಳಲ್ಲಿ ಬದಲಾವಣೆಗಳಿರಬಹುದು ಎಂದು ಮಂಗಳೂರು ದಕ್ಷಿಣ ಸಹಾಯಕ ಪೊಲೀಸ್ ಆಯುಕ್ತ ಪ್ರಕಾಶ್ ಹೇಳಿದ್ದಾರೆ.ನಗರ ಪೊಲೀಸ್ ಎಸಿಪಿ ಮಂಗಳೂರು ದಕ್ಷಿಣ ವಿಭಾಗದ ಆಶ್ರಯದಲ್ಲಿ ತೊಕ್ಕೊಟ್ಟುವಿನ ಯುನಿಟಿ ಸಭಾಂಗಣದಲ್ಲಿ ಆಯೋಜಿಸಲಾದ ಮಾದಕ ದ್ರವ್ಯ ಮತ್ತು ಮಾದಕ ವಸ್ತುಗಳ ದುಷ್ಪರಿಣಾಮ ಕುರಿತ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದರು.ಮಾದಕ ವ್ಯಸನಗಳ ಕುರಿತಾಗಿ ಜಾಗೃತಿ ಕಾರ್ಯಗಾರಗಳು ನಿರಂತರವಾಗಿ ಆಗಬೇಕಿದೆ. ಮನೋವೈದ್ಯರನ್ನು ಸೇರಿಸಿಕೊಂಡು ಕೌನ್ಸಿಲಿಂಗ್ ಕೂಡಾ ಪರಿಣಾಮಕಾರಿಯಾಗಿ ಜಾರಿಯಾದಾಗ ಒಂದು ಹಂತದಲ್ಲಿ ನಿಯಂತ್ರಣ ಸಾಧ್ಯ ಎಂದರು.ಉಳ್ಳಾಲ ಠಾಣಾಧಿಕಾರಿ ವಿರೂಪಾಕ್ಷ ಸ್ವಾಮಿ ಮಾತನಾಡಿ, ಮಕ್ಕಳ ಮಾನಸಿಕ ಅಸಮತೋಲನ ಸರಿದೂಗಿಸಲು ಶಿಕ್ಷಕ ವರ್ಗವೂ ಕೈಜೋಡಿಸಬೇಕಿದೆ. ವಿದ್ಯಾರ್ಥಿಗಳು ತಪ್ಪು ಎಸಗುತ್ತಾರೆಂದಲ್ಲಿ ಪೊಲೀಸರು ಮತ್ತು ಉಪನ್ಯಾಸಕ ವರ್ಗವೂ ಹೊಣೆಯಾಗಿರುತ್ತಾರೆ. ಶಾಲೆಗಳು, ಕಾಲೇಜುಗಳು,…
ಹಿಂದು ಧರ್ಮಕ್ಕೂ ಹಿಂದುತ್ವಕ್ಕೂ ಯಾವುದೆ ಸಂಬಂಧ ಇಲ್ಲ. ಹಿಂದುತ್ವವು ಸಂಘಪರಿವಾರದ ಸುಳ್ಳು, ಹಿಂಸೆಗಳನ್ನು ಒಳಗೊಂಡ ರಾಜಕೀಯ ಅಜೆಂಡಾ ಮಾತ್ರ. ತನ್ನ ರಾಜಕೀಯ ಉದ್ದೇಶವನ್ನು ಸಾಧಿಸಲು ಅದು ಮುಸ್ಲಿಮರನ್ನು ಗುರಿಯಾಗಿಸುತ್ತಿದೆ. ಆ ಮೂಲಕ ಹಿಂದುಗಳಲ್ಲಿ ಭಯ ಮೂಡಿಸಿ ತನ್ನ ಹಿಂದುತ್ವದ ಜಾಲದೊಳಗಡೆ ಕೆಡವುವ ಕೆಲಸ ಮಾಡುತ್ತಿದೆ ಎಂದು ಸಿಪಿಐ ಎಂ ರಾಜ್ಯ ಕಾರ್ಯದರ್ಶಿ ಡಾ. ಕೆ ಪ್ರಕಾಶ್ ಆರೋಪಿಸಿದರು. ಅವರು ಸಿಪಿಐಎಂ ದ.ಕ ಜಿಲ್ಲಾ ಸಮಿತಿ, ದ.ಕ. ಜಿಲ್ಲೆಯಲ್ಲಿ ನಡೆಯುತ್ತಿರುವ ಮತೀಯ ದ್ವೇಷದ ಕೊಲೆ, ಪ್ರತಿಕೊಲೆಗಳ ಸಮಗ್ರ ತನಿಖೆಗೆ ಒತ್ತಾಯಿಸಿ, ಮೂರು ದಶಕದ ಅವಧಿಯಲ್ಲಿ ನಡೆದಿರುವ ಕೋಮುವಾದಿ ಕೊಲೆಗಳನ್ನು ಹಾಲಿ ನ್ಯಾಯಾಧೀಶರಿಂದ ನ್ಯಾಯಾಂಗ ತನಿಖೆಗೆ ಒಳಪಡಿಸಲು ಒತ್ತಾಯಿಸಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಮುಂದುವರಿದು ಅವರು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ದ್ವೇಷದ ಸರಣಿ ಕೊಲೆಗಳು ನಡೆಯಲು ಪೊಲೀಸ್ ಅಧಿಕಾರಿಗಳ ಬೇಜವಾಬ್ದಾರಿತನ, ಕೋಮುವಾದಿ ಶಕ್ತಿಗಳ ಜೊತೆಗಿನ ಒಡನಾಟವೇ ನೇರ ಕಾರಣ. ಸಿಪಿಐಎಂ ಪಕ್ಷದ ಸತತ ಎಚ್ಚರಿಕೆಯನ್ನು ಜಿಲ್ಲೆಯ ಕಾಂಗ್ರೆಸ್ ನಾಯಕತ್ವ ಅಂದು…
ಪೋಷಕರು ಮತ್ತು ಶಿಕ್ಷಕರ ನಡುವಿನ ಉತ್ತಮ ಸಂಬಂಧವು ಮಗುವಿನ ಶಾಲಾ ಕಾರ್ಯಕ್ಷಮತೆಯನ್ನು ಸುಧಾರಿಸುತ್ತದೆ. ಮಕ್ಕಳನ್ನು ಕೇವಲ ನಾಲ್ಕು ಗೋಡೆಯ ಮಧ್ಯೆ ಕಲಿಯುತ್ತಿರುವ ಪಠ್ಯಕ್ಕೆ ಸೀಮಿತ ಗೊಳಿಸದೇ, ಮಕ್ಕಳ ಉತ್ತಮ ವ್ಯಕ್ತಿತ್ವ ರೂಪುಗೊಳ್ಳ ಬೇಕಾದರೆ ಶಿಕ್ಷಕರೊಂದಿಗೆ ಪೋಷಕರು ಉತ್ತಮ ಬಾಂಧವ್ಯ ವನ್ನು ಇಟ್ಟುಕೊಳ್ಳಬೇಕು ಅದರಿಂದ ನಿಮ್ಮ ಮಕ್ಕಳು ಉತ್ತಮ ವಿದ್ಯಾರ್ಥಿಗಳಾಗಿ ಮೂಡಿ ಬರಲು ಸಾಧ್ಯ. ಎಂದು ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಕೋಶಾಧಿಕಾರಿ ಪೋಡಾರು ಜಯರಾಮ ಆಳ್ವ ಅಭಿಪ್ರಾಯ ಪಟ್ಟರು. ಇವರು ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಹರೇಕಳ ಮತ್ತು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪಾವೂರು ಹರೇಕಳ ವತಿಯಿಂದ ನಡೆದ ಶಾಲಾ ಪೋಷಕರು ಸಭೆಯನ್ನು ಉದ್ಘಾಟನೆ ಮಾಡಿ ಮಾತನಾಡಿದರು. ಪೋಷಕರ ಸಭೆಯ ಅಧ್ಯಕ್ಷತೆಯನ್ನು ಕಡೆಂಜ ಸೋಮಶೇಖರ ಚೌಟ ವಹಿಸಿದ್ದರು. ಇದೇ ಸಂದರ್ಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 605 ಅಂಕಗಳನ್ನು ಪಡೆದ ಪ್ರಜನ್ಯ ಮತ್ತು ಡಿಸ್ಟಿಂಕ್ಷನ್ ಪಡೆದ ಲಾವಣ್ಯ, ಜಯರಾಜ, ದೀಕ್ಷಿತ, ಅನುಷಾ ಮುಂತಾದವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.ಹಾಗು…

