Author: UllalaVani

Kannada News From Coastal Karnataka

ತಲಪಾಡಿ ; ನಿಷೇಧಿತ ಇ-ಸಿಗರೇಟ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿರುವ ಘಟನೆ ತಲಪಾಡಿಯಲ್ಲಿ ನಡೆದಿದೆ. ಉಳ್ಳಾಲ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸಿದ್ದಪ್ಪ ನರನೂರ ಅವರ ನೇತೃತ್ವದಲ್ಲಿ,ರಾತ್ರಿ ವೇಳೆ ದಾಳಿ ನಡೆಸಿದ್ದಾರೆ. ತಲಪಾಡಿ ಗ್ರಾಮದ ಮೇಲಿನ ತಲಪಾಡಿ ಪ್ರದೇಶದಲ್ಲಿರುವ ನಮ್ಮತ್ ಮಂಝಿಲ್ ಎಂಬ ಮನೆಯ ಮುಂಭಾಗದಲ್ಲಿ ಬಿಳಿ ಗೋಣಿ ಚೀಲದಲ್ಲಿ ಇ-ಸಿಗರೇಟ್‌ಗಳನ್ನು ಅಕ್ರಮವಾಗಿ ಸಂಗ್ರಹಿಸಿರುವ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಆರೋಪಿ ನವಾಝ್ ವಶದಲ್ಲಿದ್ದ ವಿವಿಧ ಕಂಪನಿಗಳ ನಿಷೇಧಿತ ಇ-ಸಿಗರೇಟ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಸುಮಾರು ೩೭,೦೦೦ ಮೌಲ್ಯದ ಇ-ಸಿಗರೇಟ್‌ಗಳನ್ನು ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಂಗ್ರಹಿಸಿ ಮಾರಾಟ ಮಾಡಲು ಯತ್ನಿಸುತ್ತಿದ್ದುದಾಗಿ ಪೊಲೀಸರು ತಿಳಿಸಿದ್ದಾರೆ. ಈ ವಸ್ತುಗಳು ಕೇಂದ್ರ ಸರ್ಕಾರದ ನಿಯಮಗಳಾದ Cigarettes and Other Tobacco Products Act, 2003 ºÁUÀÆ Packing and Labelling Rules, 2020 ಅಡಿಯಲ್ಲಿ ನಿಷೇಧಿತವಾಗಿವೆ. ಆರೋಪಿಯ ವಿರುದ್ಧ ಸಂಬAಧಿತ ಕಾಯಿದೆಗಳಡಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಮುಂದುವರಿದಿದೆ.

Read More

ಉಳ್ಳಾಲ: ತೊಕ್ಕೊಟ್ಟು ಕಾಪಿಕಾಡುವಿನ ಉಮಾಪುರಿಯ ಶ್ರೀ ಉಮಾಮಹೇಶ್ವರಿ ದೇವಸ್ಥಾನದಲ್ಲಿ ಬುಧವಾರದಂದು ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿವರ್ಯರ ನೇತೃತ್ವದಲ್ಲಿ ಉಮಾಮಹೇಶ್ವರಿ ಅಮ್ಮನವರಿಗೆ ಧೃಢ ಕಲಶಾಭಿಷೇಕ ನಡೆಯಿತು. ಮಧ್ಯಾಹ್ನ ಮಹಾಪೂಜೆ ನೆರವೇರಿ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಉಮಾಮಹೇಶ್ವರಿ ಕ್ಷೇತ್ರದ ಪ್ರಧಾನ ಅರ್ಚಕರಾದ ಪರಮೇಶ್ವರ ಜೋಷಿ,ಆಡಳಿತ ಮೊಕ್ತೇಸರರಾದ ಎ.ಜೆ.ಶೇಖರ್‌ ಮತ್ತು ಪೂರ್ಣಿಮಾ ಶೇಖರ್ ದಂಪತಿ,ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ.ಅತ್ತಾವರ,ಕೋಶಾಧಿಕಾರಿ ಟಿ.ರಘುರಾಮ ಶೆಟ್ಟಿ,ಮೊಕ್ತೇಸರರುಗಳಾದ ಈಶ್ವರ್ ಉಳ್ಳಾಲ್,ನಿರ್ಮಲ ಕುಂಞಬು,ಮಹಾಲಿಂಗ,ಡಾ.ರಾಮಕೃಷ್ಣ ಶೆಟ್ಟಿ,ಕೂಸಪ್ಪ ಗಟ್ಟಿ,ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯಾಧ್ಯಕ್ಷರಾದ ಸುರೇಶ್ ಭಟ್ನಗರ,ಪ್ರಧಾನ ಕಾರ್ಯದರ್ಶಿ ಗೋಪಿನಾಥ್ ಕಾಪಿಕಾಡು,ಉಮಾಮಹೇಶ್ವರಿ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಸುರೇಂದ್ರ ನಾಯಕ್,ಅಧ್ಯಕ್ಷರಾದ ದಿನೇಶ್ ರೈ ಕಳ್ಳಿಗೆ,ಪ್ರಧಾನ ಕಾರ್ಯದರ್ಶಿ ಗಣೇಶ್ ಕಾಪಿಕಾಡ್,ಪ್ರಮುಖರಾದ ಆನಂದ ಶೆಟ್ಟಿ ಭಟ್ನಗರ,ಸಂಜೀವ ಶೆಟ್ಟಿ ಪಿಲಾರ್,ಮೋಹನ್ ದಾಸ್ ಕಾಪಿಕಾಡ್,ಶಿವರಾಮ್ ಕಾಪಿಕಾಡು,ಚರಣ್ ಮೊದಲಾದವರು ಉಪಸ್ಥಿತರಿದ್ದರು.

Read More

ಉಳ್ಳಾಲ:ಸಾಮಾಜಿಕ ಕಳಕಳಿಯ ಉದ್ದೇಶದಿಂದ ಎಲ್ಲಾ ಹಣಕಾಸು ಸಂಸ್ಥೆಗಳು,ಖಾಸಗಿ ಸಂಸ್ಥೆಗಳು ಸಹ ಸಿಎಸ್ ಆರ್ ಕಾನೂನಿನಡಿ ತಮ್ಮ ವ್ಯವಹಾರದ ಲಾಭಾಂಶದ ಒಂದಂಶವನ್ನು ಸಮಾಜಕ್ಕೆ ನೀಡುವುದು ಕಡ್ಡಾಯ ಜವಬ್ದಾರಿಯಾಗಿದೆ.ಕರ್ನಾಟಕ ಬ್ಯಾಂಕ್ ಸ್ಥಾಪನೆಗೊಂಡು 102 ವರುಷಗಳಾಗಿದ್ದು, ಸಿಎಸ್ ಆರ್ ಕಾನೂನು ಜಾರಿಯಾಗುವ ಮೊದಲೇ ಪ್ರತೀ ವರುಷವೂ ತನ್ನ ಲಾಭಾಂಶದ ಸ್ವಲ್ಪ ಭಾಗವನ್ನ ಸಮಾಜಕ್ಕೆ ವಿನಿಯೋಗಿಸುತ್ತಾ ಬಂದಿದೆಯೆಂದು ಕರ್ನಾಟಕ ಬ್ಯಾಂಕ್ ತೊಕ್ಕೊಟ್ಟು ಶಾಖಾ ಪ್ರಬಂಧಕರಾದ ದೀಪಕ್ ಎಸ್.ಜಿ ಹೇಳಿದರು. ತೊಕ್ಕೊಟ್ಟು ಕಾಪಿಕಾಡುವಿನ ಉಮಾಪುರಿ ಶ್ರೀ ಉಮಾಮಹೇಶ್ವರಿ ಕ್ಷೇತ್ರಕ್ಕೆ ಕರ್ನಾಟಕ ಬ್ಯಾಂಕಿನ ಸಿಎಸ್ ಆರ್ ನಿಧಿಯಡಿ ನೀಡಲಾದ ವಾಟರ್ ಡಿಸ್ಪೆನ್ಸರನ್ನು(ನೀರಿನ ವಿತರಕ ಯಂತ್ರ)ಬುಧವಾರದಂದು ಉಮಾಮಹೇಶ್ವರಿ ದೇವಸ್ಥಾನದಲ್ಲಿ ನಡೆದ ಧೃಢ ಕಲಶೋತ್ಸವ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಎ.ಜೆ.ಶೇಖರ್ ಅವರಿಗೆ ಹಸ್ತಾಂತರಿಸಿ ಅವರು ಮಾತನಾಡಿದರು. ವಿಶೇಷವಾಗಿ ಶಿಕ್ಷಣ,ಸಂಸ್ಕೃತಿ,ಕುಡಿಯುವ ನೀರಿನ ವ್ಯವಸ್ಥೆಗಾಗಿ ಕರ್ನಾಟಕ ಬ್ಯಾಂಕ್ ನಿರಂತರವಾಗಿ ಸಹಾಯ ಹಸ್ತ ನೀಡುವ ಮೂಲಕ ಕೆರೆಯ ನೀರನ್ನ ಕೆರೆಗೆ ಚೆಲ್ಲುವ ಕಾರ್ಯ ನಡೆಸಿದೆ.ಉಮಾಮಹೇಶ್ವರಿ ಕ್ಷೇತ್ರದವರು ನಮ್ಮನ್ನು ಸಂಪರ್ಕಿಸಿದಾಗ ಅಮೃತ ಸಮಾನವಾದ ಶುದ್ಧ ನೀರನ್ನ ಭಕ್ತಾಧಿಗಳಿಗೆ…

Read More

ಸಿಂಧನೂರು : ಕರ್ನಾಟಕ ಸರ್ಕಾರವು ರೈತರಿಗೆ ಅನುಕೂಲವಾಗುವಂತೆ ಬೆಂಬಲ ಬೆಲೆ (MSP) ಯೋಜನೆಯಡಿ ಮುಂಗಾರು ಮತ್ತು ಹಿಂಗಾರು ಜೋಳ/ಮೆಕ್ಕೆಜೋಳವನ್ನು ಖರೀದಿಸಲು ರಾಜ್ಯದ ವಿವಿಧ ಎಪಿಎಂಸಿ (APMC) ಮಾರುಕಟ್ಟೆಗಳಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಿದೆ. ಕೆಎಂಎಫ್ (KMF) ಮೂಲಕ ರೈತರಿಂದ ನೇರವಾಗಿ ಪ್ರತಿ ಕ್ವಿಂಟಾಲ್‌ಗೆ ನಿಗದಿತ ಬೆಂಬಲ ಬೆಲೆಯಲ್ಲಿ (ಸುಮಾರು ₹2,400 ರಿಂದ ₹3,000 ವರೆಗೆ) ಜೋಳ ಖರೀದಿ ಮಾಡಲಾಗುತ್ತಿದ್ದು, ಒಬ್ಬ ರೈತನಿಂದ ಗರಿಷ್ಠ 20 ರಿಂದ 25 ಕ್ವಿಂಟಾಲ್ ವರೆಗೆ ಖರೀದಿ ಮಾಡುವ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಸಿಂಧನೂರು ತಾಲೂಕಿನ ಹಂಚಿನಾಳ ಕ್ಯಾಂಪ್‌ನ ಸಹಕಾರ ಸಂಘದ ವತಿಯಿಂದ ಇಂದು ಶುಕ್ರವಾರ ನೂತನ ಜೋಳ ಖರೀದಿ ಕೇಂದ್ರವನ್ನು ಪ್ರಾರಂಭಿಸಲಾಯಿತು. ಜೋಳದ ರಾಶಿಗೆ ಪೂಜೆ ಸಲ್ಲಿಸಿ ಕೇಂದ್ರಕ್ಕೆ ಅಧಿಕೃತ ಚಾಲನೆ ನೀಡಲಾಯಿತು. ಗದಗ, ಲಕ್ಷ್ಮೇಶ್ವರ, ಮುಂಡರಗಿ, ನರಗುಂದ, ರೋಣ ಸೇರಿದಂತೆ ರಾಜ್ಯದ ಹಲವು ಎಪಿಎಂಸಿ ಪ್ರಾಂಗಣಗಳಲ್ಲಿ ಕೂಡ ಖರೀದಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ನೋಂದಣಿ ಪ್ರಕ್ರಿಯೆ:ರೈತರು ತಮ್ಮ ಜಿಲ್ಲೆಯ ಎಪಿಎಂಸಿ ಮಾರುಕಟ್ಟೆ ಅಥವಾ ಕೃಷಿ ಇಲಾಖೆಯ…

Read More

ಕೋಟಿಪದವು ಗ್ರಾಮದ ಶ್ರೀರಾಮ ಭಜನಾ ಮಂದಿರ (ರಿ.) ಇದರ ವತಿಯಿಂದ ನಡೆಯುವ ಶ್ರೀ ರಾಮನವಮಿ ಉತ್ಸವದ ಅಂಗವಾಗಿ, ದಕ್ಷ ಯುವ ಬಳಗ (ರಿ.) ಗ್ರಾಮಚಾವಡಿ ಇವರ ಸಹಯೋಗದಲ್ಲಿ ವಿಶೇಷ ಸಮಾಜಸೇವೆ ಹಾಗೂ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾ.27 ರಾಮನವಮಿ ಹಬ್ಬದಂದು ಬೆಳಿಗ್ಗೆ 6.20 ಗಂಟೆಗೆ ಏಕಹ ಭಜನೆಯ ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಈ ಸಂದರ್ಭದಲ್ಲಿ ಗ್ರಾಮದ ಅಶಕ್ತ ಮತ್ತು ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ ನಡೆಯಲಿದ್ದು, ಭಜನಾ ಪರಂಪರೆಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ “ಕೀರ್ತನ ಸಂಪುಟ – ಜನಜನಿತ ಭಜನೆಗಳ ಉಪಯುಕ್ತ ಸಂಗ್ರಹ” ಎಂಬ ಪುಸ್ತಕವನ್ನು ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಗುತ್ತದೆ. ಕಾರ್ಯಕ್ರಮದಲ್ಲಿ ಧಾರ್ಮಿಕ ಮುಖಂಡರು, ಗಣ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಭಕ್ತರು ಭಾಗವಹಿಸಲಿದ್ದಾರೆ. ಆದ್ದರಿಂದ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ, ಶ್ರೀರಾಮದೇವರ ಕೃಪೆಗೆ ಪಾತ್ರರಾಗುವಂತೆ ಆಯೋಜಕರು ವಿನಂತಿಸಿದ್ದಾರೆ.

Read More

ಮಂಗಳೂರು, ಮಾ. 25 : ದ.ಕ. ಜಿಲ್ಲೆಯಲ್ಲಿ ಉಷ್ಣಾಂಶ ಏರಿಕೆಯಾಗುತ್ತಿದೆ. ಮಂಗಳವಾರ ಬೆಳಗ್ಗೆ 8:30ರಿಂದ ಸಂಜೆ 5:30ರವರೆಗೆ ದ.ಕ.ಜಿಲ್ಲೆಯಲ್ಲಿ 39 ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಹಾಗಾಗಿ ಜನರು ಸೂಕ್ತ ಮುಂಜಾಗ್ರತೆ ವಹಿಸಬೇಕು ಎಂದು ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್. ತಿಮ್ಮಯ್ಯ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಡಿಲವಾದ ಉಡುಪುಗಳನ್ನು ಧರಿಸಬೇಕು. ಮಧ್ಯಾಹ್ನ 12ರಿಂದ ಅಪರಾಹ್ನ 3 ಗಂಟೆಯೊಳಗೆ ನೇರ ಬಿಸಿಲಿಗೆ ತೆರೆದುಕೊಳ್ಳುವುದರಿಂದ ತಪ್ಪಿಸಬೇಕು. ಹೊರ ಹೋಗುವಾಗ ಸಾಕಷ್ಟು ನೀರು ಕೊಂಡೊಯ್ಯಬೇಕು. ಕಾರ್ಬೊನೇಟೆಡ್ ಪಾನೀಯಗಳನ್ನು ತ್ಯಜಿಸಿ ನೀರು, ಎಳನೀರು, ಮನೆಯಲ್ಲೇ ಪಾನೀಯಗಳನ್ನು ಮಾಡಿ ಕುಡಿಯಬಹುದು ಎಂದು ಡಾ.ಎಚ್.ಆರ್. ತಿಮ್ಮಯ್ಯ ಸಲಹೆ ನೀಡಿದರು.

Read More

ಮಂಗಳೂರು, ಮಾ.24: ಪ್ರವಾಸಿ ವಾಹನಗಳಲ್ಲಿ ಕಡ್ಡಾಯಗೊಳಿಸಿರುವ ಪ್ಯಾನಿಕ್ ಬಟನ್ ಅಳವಡಿಕೆ ಕುರಿತು ರಾಜ್ಯದ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕ-ಮಾಲಕರಿಂದ ಆರೋಪಗಳು ಕೇಳಿಬಂದಿವೆ. ಸರ್ಕಾರದ ಆದೇಶದಿಂದ ತಮ್ಮ ಮೇಲೆ ಅನ್ಯಾಯವಾಗಿದ್ದು, ಇದು ಉದ್ಯೋಗಕ್ಕೆ ಹೊಡೆತ ನೀಡಿದಂತಾಗಿದೆ ಎಂದು ದ.ಕ. ಜಿಲ್ಲಾ ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಅಸೋಸಿಯೇಷನ್‌ನ ಅಧ್ಯಕ್ಷರಾದ ಆನಂದ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ ವರ್ಷ ರಾಜ್ಯ ಸರ್ಕಾರ ತುರ್ತಾಗಿ ಪ್ಯಾನಿಕ್ ಬಟನ್ ಅಳವಡಿಕೆಯನ್ನು ಕಡ್ಡಾಯಗೊಳಿಸಿತ್ತು. ಈಗಾಗಲೇ ಹಲವು ನಿಯಮಗಳನ್ನು ಪಾಲಿಸಿಕೊಂಡು ಬಂದಿರುವ ಚಾಲಕರಿಗೆ ಈ ಹೊಸ ನಿಯಮ ಹೆಚ್ಚುವರಿ ಆರ್ಥಿಕ ಹೊರೆ ತಂದಿದೆ ಎಂದರು.ಚಾಲಕರ ಮಾಹಿತಿಯಂತೆ ಪ್ಯಾನಿಕ್ ಬಟನ್ ಸಾಧನದ ಮೂಲ ಬೆಲೆ ರೂ.3000ದಿಂದ 4000ರೊಳಗೆ ಇದ್ದು, ಪಕ್ಕದ ಕೇರಳ ರಾಜ್ಯದಲ್ಲಿ ಇದೇ ದರಕ್ಕೆ ಲಭ್ಯವಿದೆ. ಆದರೆ ರಾಜ್ಯದ ಸಾರಿಗೆ ಇಲಾಖೆ ಉಚ್ಚ ನ್ಯಾಯಾಲಯಕ್ಕೆ 8250ರವರೆಗೆ ಮಾರಾಟ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದು, ಈ ಯೋಜನೆಗಾಗಿ 12 ಕಂಪನಿಗಳನ್ನು ಆಯ್ಕೆ ಮಾಡಲಾಗಿದೆ. ಆದರೆ ವಾಸ್ತವದಲ್ಲಿ ಈ ಕಂಪನಿಗಳು ಸಾಧನವನ್ನು…

Read More

ಮಂಗಳೂರು: ರೋಟರಿ ಕ್ಲಬ್ ಆಫ್ ಮಂಗಳೂರು ಸೆಂಟ್ರಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಗ್ಲೋಬಲ್ ಗ್ರೀನ್ ಇಕೋ ಫೌಂಡೇಶನ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 26ರಂದು ಬೆಳಿಗ್ಗೆ 10.00 ಗಂಟೆಗೆ ಬಿಜೈ (ಮೆಸ್ಕಾಂ ಕಛೇರಿ ಬಳಿ) ಇರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಂಗವಾಗಿ ಮಹಿಳಾ ಉದ್ಯಮಿಗಳು ತಯಾರಿಸಿದ ವಸ್ತುಗಳ ಪ್ರದರ್ಶನ ಮತ್ತು ಮಾರಾಟ ನಡೆಯಲಿದೆ. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಜಯಲಕ್ಷ್ಮಿ ರಾಯ್ಕೋಡ್ ಉದ್ಘಾಟಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಉಸ್ಮಾನ್ ಎ. ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಶಕುಂತಳ ಉಪಸ್ಥಿತರಿರುವರು.ಪೂರ್ವಾಹ್ನ 11.00 ಗಂಟೆಗೆ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರನ್ನು ಸನ್ಮಾನಿಸಲಾಗುತ್ತದೆ. ಕಾರ್ಯಕ್ರಮಕ್ಕೆ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶ್ರೀಮತಿ ಮಮತಾ ಗಟ್ಟಿ ಅಧ್ಯಕ್ಷತೆ ವಹಿಸಲಿದ್ದು, ಸಂಚಾರ…

Read More

ತೊಕ್ಕೊಟ್ಟು: ಇರಾನ್ ಮೇಲೆ ಇಸ್ರೇಲ್ ಮತ್ತು ಅಮೇರಿಕಾ ನಡೆಸುತ್ತಿರುವ ಜಂಟಿ ದಾಳಿ ನಡೆಸುತ್ತಿರುವುದನ್ನು ಖಂಡಿಸಿ ಜನಪರ ಸಂಘಟನೆಗಳ ನೇತೃತ್ವದಲ್ಲಿ ತೊಕ್ಕೊಟ್ಟು ಜಂಕ್ಷನ್ ನಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಜಿಲ್ಲಾ ಉಪಾಧ್ಯಕ್ಷ ಸುಕುಮಾರ್ ತೊಕ್ಕೊಟ್ಟು , ಕೆಲವು ತಿಂಗಳ ಹಿಂದೆ ಅಮೇರಿಕಾ ದೇಶದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಗತ್ತಿನಲ್ಲಿಯೇ ಅತೀ ಹೆಚ್ಚು ತೈಲ ಸಂಪತ್ತು ಹೊಂದಿರುವಂತಹ ವೆನಿಝುವೆಲಾ ದೇಶದ ಅಧ್ಯಕ್ಷ ಹಾಗೂ ಅವರ ಪತ್ನಿಯನ್ನು ಅಪಹರಣ ಮಾಡಿ ಆ ದೇಶವನ್ನು ತನ್ನ ಕಪಿ ಮುಷ್ಟಿಯಲ್ಲಿ ಇಡಲು ಪ್ರಯತ್ನಿಸುತ್ತಾರೆ. ಇದೀಗ ಇರಾನ್ ಮೇಲೆ ಹಿಡಿತ ಸಾಧಿಸಲು ಇಸ್ರೇಲ್ ನೊಂದಿಗೆ ಕೈಜೋಡಿಸಿ ಇರಾನ್ ಮೇಲೆ ಯುದ್ಧ ಸಾರಿದ್ದಾರೆ.ಜಗತ್ತಿನ ತೈಲ ಸಂಪತ್ತು ತನ್ನ ನಿಯಂತ್ರಣದಲ್ಲಿ ಇರಬೇಕು ಎಂಬ ದುರಾಸೆ ಅಮೇರಿಕಾ ದೇಶಕ್ಕಿದೆ.. ಈ ಯುದ್ಧವು ಜಾಗತಿಕವಾಗಿ ಮೂರನೇ ಮಹಾಯುದ್ಧಕ್ಕೆ ನಾಂದಿ ಹಾಡುವಂತಿದೆ. ಇರಾನಿನ ಸರ್ವೋಚ್ಚ ನಾಯಕ ಆಯತೋಲ್ಲಾಹ್ ಖಾಮಿನಿ ಯನ್ನು ಹತ್ಯೆಗೈದರೆ ಇರಾನ್ ದೇಶ ಸುಮ್ಮನಾಗುತ್ತದೆ ಎಂಬ ಭ್ರಮೆಯೊಂದಿಗೆ ಯುದ್ಧ ಸಾರಿದ ಅಮೇರಿಕಾ…

Read More

ಮಂಗಳೂರು, ಮಾ.24: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಅಕ್ರಮ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ. ಮಾರ್ಚ್ 23ರಂದು ಬೆಳಿಗ್ಗೆ ಸುಮಾರು 11.56 ಗಂಟೆಯ ವೇಳೆ, ಪಾಲಕ್ಕಾಡ್ ವಿಭಾಗದ ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ IPF ಮನೋಜ್ ಕುಮಾರ್ ಯಾದವ್ ಹಾಗೂ ಸಿಬ್ಬಂದಿ, MAS–MAQ ಎಕ್ಸ್‌ಪ್ರೆಸ್ (ರೈಲು ಸಂಖ್ಯೆ 12601) ರೈಲು ಪ್ಲಾಟ್‌ಫಾರ್ಮ್ ಸಂಖ್ಯೆ 1ಕ್ಕೆ ಆಗಮಿಸಿದಾಗ ಸಾಮಾನ್ಯ ಡಬ್ಬಿಯಲ್ಲಿ ಅನಾಥವಾಗಿ ಬಿಟ್ಟಿದ್ದ ಸಂಶಯಾಸ್ಪದ ಚೀಲವನ್ನು ಪರಿಶೀಲಿಸಿದರು. ಪರಿಶೀಲನೆಯ ವೇಳೆ, ಸುಮಾರು 10.129 ಕೆಜಿ ಒಣ ಗಾಂಜಾ ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ ₹5,06,450/- ಎಂದು ತಿಳಿದುಬಂದಿದೆ. ವಶಪಡಿಸಿಕೊಂಡ ಗಾಂಜಾವನ್ನು ಮಂಗಳೂರು ಅಬಕಾರಿ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಗಾಂಜಾ ಸಾಗಾಟದ ಹಿಂದೆ ಇರುವವರನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.

Read More