ಉಳ್ಳಾಲ, ಫಲಾಹ್ ಅನುದಾನಿತ ಕನ್ನಡ ಮಾಧ್ಯಮ ಪ್ರೌಢ ಶಾಲೆ ವಿದ್ಯಾನಗರ ತಲಪಾಡಿ ಇದರ ಆಶ್ರಯದಲ್ಲಿ ಪೋಷಕರ ಸಭೆ, ಪ್ರತಿಭಾ ಪುರಸ್ಕಾರ, ರಸ್ತೆ ಸುರಕ್ಷತಾ ನಿಯಮಗಳ ಜಾಗೃತಿ ಕಾರ್ಯಾಗಾರ ಹಾಗೂ ಸನ್ಮಾನ ಕಾರ್ಯಕ್ರಮವು ಫಲಾಹ್ ಹೊರಾಂಗಣ ವೇದಿಕೆಯಲ್ಲಿ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್ ಆರ್ ಈಶ್ವರ್ ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.ಮಂಗಳೂರು ದಕ್ಷಿಣ ಸಂಚಾರ ಪೊಲೀಸ್ ಠಾಣಾ ನಿರೀಕ್ಷಕ ಕೃಷ್ಣಾನಂದ ಜಿ.ನಾಯಕ್ ರಸ್ತೆ ಸುರಕ್ಷತಾ ನಿಯಮಗಳ ಜಾಗೃತಿ ಮೂಡಿಸುವ ಬಗೆ ಮಾಹಿತಿ ನೀಡಿ, ವಿದ್ಯಾರ್ಥಿಗಳಿಗೆ ವಾಹನ ನೀಡದಂತೆ ಪೋಷಕರಿಗೆ ಸೂಚನೆ ನೀಡಿದರು.ಫಲಾಹ್ ವಿದ್ಯಾ ಸಂಸ್ಥೆ ಅಧ್ಯಕ್ಷ ಯು.ಬಿ.ಮೊಹಮ್ಮದ್ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿ ತಲಪಾಡಿ ವಲಯ ಸಿಆರ್ ಪಿ ಸುಜಾತಾ ಮಾತನಾಡಿದರು. ಈ ಸಂದರ್ಭದಲ್ಲಿ ಉಳ್ಳಾಲ ತೋಟ ಯು.ಟಿ. ಅಬ್ದುಲ್ ರಹೀಮ್ ಅವರನ್ನುಸನ್ಮಾನಿಸಲಾಯಿತು. ಅತ್ಯಧಿಕ ಅಂಕಗಳನ್ನು ಪಡೆದ ಹಾಗೂ ಕೃಷಿ ಬೆಳೆಗಳನ್ನು ಶಾಲಾ ವಠಾರದಲ್ಲಿ ಬೆಳೆಸುವಲ್ಲಿ ಉತ್ತೇಜನ ನೀಡಿದ ಫಲಾಹ್ ಶಾಲೆಯ ವಿದ್ಯಾರ್ಥಿಗಳನ್ನು ಪ್ರತಿಭಾ ಪುರಸ್ಕಾರ ನೀಡಿ…
Author: UllalaVani
ಉಳ್ಳಾಲ:ಮಾರುತಿ ಜನಸೇವಾ ಸಂಘದ ಮಾಜಿ ಅಧ್ಯಕ್ಷ ಅಮರ್ ಮತ್ತು ಹರೀಶ್ ಅವರ ತಾಯಿ, ಉಳ್ಳಾಲ ಮೊಗವೀರ ಪಟ್ಣ ನಿವಾಸಿ ದಿ.ಜನಾರ್ದನ ಅವರ ಪತ್ನಿ ವಿಮಲ ಪುತ್ರನ್(88) ಜ. 18ರಂದು ರವಿವಾರ ನಿಧನ ಹೊಂದಿದ್ದಾರೆ. ಮೃತರು ನಾಲ್ವರು ಪುತ್ರಿಯರು, ಮೂವರು ಪುತ್ರರನ್ನು ಅಗಲಿದ್ದಾರೆ. ಮಂಗಳೂರಿನಲ್ಲಿ ಮೀನು ಮಾರಾಟ ವೃತ್ತಿಯಲ್ಲಿ ತೊಡಗಿಸಿಕೊಂಡಿದ್ದ ಅವರು ಸಾಮಾಜಿಕ, ಧಾರ್ಮಿಕವಾಗಿ ತೊಡಗಿಸಿಕೊಂಡಿದ್ದರು.
ಉಳ್ಳಾಲ: ಜ-21:ಕೃಷಿಕರು ಹಾಗೂ ರಿಯಲ್ ಎಸ್ಟೇಟ್ ಉದ್ಯಮಿಯಾಗಿದ್ದ ಸೋಮೇಶ್ವರ ಗ್ರಾಮದ ಪಿಲಾರು ದೇಲಂತ ಬೆಟ್ಟು ನಿವಾಸಿ ರಘುರಾಮ ಶೆಟ್ಟಿ (50)ಯವರು ಮಂಗಳವಾರ ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ಹೃದಯಾಘಾತದಿಂದ ಹಠತ್ತನೆ ಸಾವನ್ನಪ್ಪಿದ್ದಾರೆ. ಮಂಗಳವಾರ ಬೆಳಿಗ್ಗೆ ಲವಲವಿಕೆಯಿಂದಲೇ ಪುತ್ರನನ್ನ ಶಾಲೆಗೆ ಬಿಟ್ಟು ಬಂದು,ತೋಟದ ಕೆಲಸದಲ್ಲಿ ತೊಡಗಿಸಿಕೊಂಡಿದ್ದ ರಘುರಾಮ್ ಅವರು ದಣಿದ ಕಾರಣ ಮನೆಯೊಳಗೆ ನಿದ್ದೆಗೆ ಜಾರಿದ್ದರು.ಮನೆಗೆ ಬಂದಿದ್ದ ಸಹೋದರಿಯು ರಘುರಾಮ್ ಅವರನ್ನ ಎಬ್ಬಿಸಲು ಹೋದಾಗ ರಘು ಅವರ ದೇಹವು ಪ್ರತಿಕ್ರಿಯಿಸದಿದ್ದಾಗ ವೈದ್ಯರನ್ನ ಕರೆಸಿ ಪರಿಶೀಲಿಸಿದ್ದು,ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿರೋದಾಗಿ ಖಚಿತ ಪಡಿಸಿದ್ದಾರೆ. ಕಳೆದ ವಾರ ಜ.12 ರ ಸೋಮವಾರದಂದು ರಘುರಾಮ್ ಶೆಟ್ಟಿಯವರ ಬಾವ (ಸಹೋದರಿಯ ಪತಿ)ಚಂದ್ರಹಾಸ್ ಶೆಟ್ಟಿ ಅವರು ಶಬರಿ ಮಲೆ ಯಾತ್ರೆಗೆ ತೆರಳಿದ್ದ ವೇಳೆ ಎರಿಮಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು.ಮಾರನೇ ದಿನ ಮಂಗಳವಾರದಂದು ಚಂದ್ರಹಾಸ್ ಅವರ ಪಾರ್ಥಿವ ಶರೀರವನ್ನ ತಂದು ಅಂತ್ಯಕ್ರಿಯೆ ನಡೆಸಲಾಗಿತ್ತು.ಇದೀಗ ಚಂದ್ರಹಾಸ್ ಅವರ ಬಾಮೈದ ರಘುರಾಮ್ ಅವರು ಮಂಗಳವಾರದಂದೇ ಅಕಾಲಿಕವಾಗಿ ಸಾವನ್ನಪ್ಪಿದ್ದು,ಪಿಲಾರು ದೇಲಂತ ಬೆಟ್ಟುವಿನ ಮನೆಯಲ್ಲಿ ವಾರದಂತರದಲ್ಲೇ ಎರಡು ಸಾವು ಸಂಭವಿಸಿದ್ದು ಕುಟುಂಬಸ್ಥರನ್ನ…
ಪುತ್ತೂರು, ಜ. 21: ಕಾರು ಮತ್ತು ಅಶೋಕ್ ಲೇಲ್ಯಾಂಡ್ ಸರಕು ಸಾಗಣೆ ವಾಹನದಲ್ಲಿ ಗಾಂಜಾ ಸಾಗಿಸುತ್ತಿರುವ ಬಗ್ಗೆ ಬಂದ ಮಾಹಿತಿಯ ಮೇರೆಗೆ, ಪುತ್ತೂರು ಗ್ರಾಮಾಂತರ ಪೊಲೀಸರು ಜ. 19 ರ ಸೋಮವಾರ ಸಂಜೆ ಕಾರ್ಯಾಚರಣೆ ನಡೆಸಿ 106 ಕೆಜಿ 60 ಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು ಇಬ್ಬರನ್ನ ಬಂಧಿಸಲಾಗಿದೆ. ಬಂಧಿತರು ಬೆಳ್ತಂಗಡಿಯ ಚಾರ್ಮಾಡಿ ಗ್ರಾಮದ ನಿವಾಸಿಗಳಾದ ರಫೀಕ್ ಪಿ (37) , ಅಬ್ದುಲ್ ಸಾದಿಕ್ (37) ಎಂದು ಗುರುತಿಸಲಾಗಿದೆ.ಸುಳಿವು ಆಧರಿಸಿ, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಸಬ್-ಇನ್ಸ್ಪೆಕ್ಟರ್ಗಳು ತಮ್ಮ ಸಿಬ್ಬಂದಿಯೊಂದಿಗೆ ಪುತ್ತೂರು ತಾಲ್ಲೂಕಿನ ಪಡುವನ್ನೂರು ಗ್ರಾಮದ ಸಜನ್ಕಾಡಿಯಲ್ಲಿ ಶಂಕಿತ ಕಾರು ಮತ್ತು ಸರಕು ಸಾಗಣೆ ವಾಹನವನ್ನು ತಡೆದು ತಪಾಸಣೆ ನಡೆಸಿದರು. ವಿಚಾರಣೆ ನಡೆಸಿದಾಗ, ಕಾರಿನ ಚಾಲಕ ಬೆಳ್ತಂಗಡಿಯ ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್ನ ನಡವಳಿಕೆಯನ್ನು ಅನುಮಾನಿಸಿದ ಪೊಲೀಸರು ಕಾರಿನಲ್ಲಿ ಶೋಧ ನಡೆಸಿದಾಗ ಪ್ಲಾಸ್ಟಿಕ್ ಕವರ್ನಲ್ಲಿ ಪ್ಯಾಕ್ ಮಾಡಲಾದ ಸುಮಾರು 100 ಗ್ರಾಂ ತೂಕದ ಗಾಂಜಾ ಎಲೆಗಳು, ಹೂವುಗಳು ಮತ್ತು ಬೀಜಗಳನ್ನು ಹೊಂದಿರುವ ಬಂಡಲ್…
ನವದೆಹಲಿ, ಜ. 21 : ಭಾರತೀಯ ಮೂಲದ ಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್ ನಾಸಾದಿಂದ ಅಧಿಕೃತವಾಗಿ ನಿವೃತ್ತಿ ಹೊಂದಿದ್ದಾರೆ. ಕೇವಲ ಒಂದು ವಾರದ ಕಾರ್ಯನಿಮಿತ್ತ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದ ಅವರು, ತಾಂತ್ರಿಕ ದೋಷಗಳ ಕಾರಣದಿಂದಾಗಿ ನಿರೀಕ್ಷೆಗೂ ಮೀರಿದಂತೆ 9 ತಿಂಗಳುಗಳ ಕಾಲ ಬಾಹ್ಯಾಕಾಶದಲ್ಲೇ ಸಿಲುಕಿದ್ದು, ಈ ಪಯಣ ಇತಿಹಾಸದಲ್ಲೇ ಅಪರೂಪದ ಘಟನೆಯಾಗಿ ದಾಖಲಾಗಿದೆ. ಅವರು ಡಿಸೆಂಬರ್ 31ರಂದು ನಾಸಾದಿಂದ ನಿವೃತ್ತರಾದರು. ಸುನೀತಾ ವಿಲಿಯಮ್ಸ್ ಮತ್ತು ಸಹ ಗಗನಯಾತ್ರಿ ಬುಚ್ ವಿಲ್ಮೋರ್ ಜೂನ್ 5, 2024 ರಂದು ಬೋಯಿಂಗ್ನ ಸ್ಟಾರ್ಲೈನರ್ ಕ್ಯಾಪ್ಸುಲ್ ಮೂಲಕ ISS ಗೆ ತೆರಳಿದ್ದರು. ಆದರೆ ಸ್ಟಾರ್ಲೈನರ್ನಲ್ಲಿ ಹೀಲಿಯಂ ಸೋರಿಕೆ ಮತ್ತು ಪ್ರೊಪಲ್ಷನ್ ವ್ಯವಸ್ಥೆಯ ತಾಂತ್ರಿಕ ದೋಷಗಳು ಕಾಣಿಸಿಕೊಂಡ ಕಾರಣ, ಅವರು ಭೂಮಿಗೆ ವಾಪಸ್ ಬರಲು ಸಾಧ್ಯವಾಗಲಿಲ್ಲ. ಅನೇಕ ಬಾರಿ ಪ್ರಯತ್ನಿಸಿದರೂ ಒಂದಲ್ಲ ಒಂದು ಸಮಸ್ಯೆ ಎದುರಾಗುತ್ತಲೇ ಇದ್ದು, ಅವರ ಭೂಮಿಗೆ ಮರಳುವ ಕನಸು ಮುಂದೂಡಲ್ಪಟ್ಟಿತ್ತು.ಒಟ್ಟು 286 ದಿನಗಳ ಕಾಲ ಬಾಹ್ಯಾಕಾಶದಲ್ಲೇ ಉಳಿದ ಬಳಿಕ, ಮಾರ್ಚ್ 18, 2025 ರಂದು…
ಮಂಗಳೂರು, ಜ. 21 : ನಗರದ ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ನಲ್ಲಿ ಪದೇಪದೇ ಗೂಡ್ಸ್ ರೈಲು ಹಾಗೂ ಖಾಲಿ ಪ್ಯಾಸೆಂಜರ್ ರೈಲು ಹಾದು ಹೋಗುವುದರಿಂದ ಸಾರ್ವಜನಿಕರಿಗೆ ಉಂಟಾಗುವ ತೊಂದರೆ ಹಾಗೂ ಟ್ರಾಫಿಕ್ ಸಮಸ್ಯೆ ತಪ್ಪಿಸಲು ತುರ್ತಾಗಿ ತಾತ್ಕಾಲಿಕ ಪರಿಹಾರ ಕ್ರಮ ಕೈಗೊಳ್ಳಬೇಕೆಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರೈಲ್ವೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮಂಗಳೂರು ವ್ಯಾಪ್ತಿಯ ರೈಲ್ವೆ ಸಮಸ್ಯೆಗಳ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಭೆಯಲ್ಲಿ ಮಾತನಾಡಿದ ಸಂಸದರು, ಪಾಂಡೇಶ್ವರ ಲೆವೆಲ್ ಕ್ರಾಸಿಂಗ್ನಲ್ಲಿ ದಿನನಿತ್ಯ ಹತ್ತಾರು ಬಾರಿ ಗೂಡ್ಸ್ ಹಾಗೂ ಪ್ಯಾಸೆಂಜರ್ ರೈಲುಗಳು ಮಂಗಳೂರು ಸೆಂಟ್ರಲ್ನಿಂದ ಬಂದರ್ ಗೂಡ್ಸ್ ಶೆಡ್ಗೆ ಹಾದು ಹೋಗುವ ವೇಳೆ ರೈಲ್ವೆ ಗೇಟ್ ಹಾಕುವುದರಿಂದ ಜನರು ಹೆಚ್ಚು ಹೊತ್ತು ಕಾಯುವ ಪರಿಸ್ಥಿತಿಯಿದೆ. ಹೀಗಾಗಿ, ಈ ಕೂಡಲೇ ರೈಲ್ವೆಗೇಟ್ ಬಳಿ ರೈಲು ಓಡಾಡುವ ಸಮಯದ ಬಗ್ಗೆ ಎಲ್ಇಡಿ ಡಿಸ್ಪ್ಲೇ ಬೋರ್ಡ್ ಹಾಕಬೇಕು. ಅಲ್ಲದೆ, ಕಚೇರಿ ವೇಳೆಯಲ್ಲಿ ಈ ಮಾರ್ಗದಲ್ಲಿ ರೈಲುಗಳ ಓಡಾಟವನ್ನು ತಡೆ ಹಿಡಿಯುವುದಕ್ಕೆ ಅಗತ್ಯ…
ಮಂಗಳೂರು : ಮಂಗಳೂರಿನ ಪದವಿನಂಗಡಿ ಪ್ರದೇಶದ ಕೊರಗಜ್ಜ ಕಟ್ಟೆ ಮುಂಭಾಗದಲ್ಲಿ ಇಂದು ಆಕಸ್ಮಿಕವಾಗಿ ಬೃಹತ್ ಗಾತ್ರದ ಮರ ನೆಲಕಚ್ಚಿದೆ. ಮರ ಕೆಳಭಾಗದಲ್ಲಿ ನಿಲ್ಲಿಸಿದ್ದ ಸ್ಕೂಟರ್ ಮೇಲೆ ಮರ ಬಿದ್ದ ಪರಿಣಾಮ ಸ್ಕೂಟರ್ಗೆ ಭಾರೀ ಹಾನಿಯಾಗಿದ್ದು, ಮರ ಬಿದ್ದ ರಭಸಕ್ಕೆ ಸಮೀಪದಲ್ಲಿದ್ದ ವಿದ್ಯುತ್ ಕಂಬವೂ ಮುರಿದು ಬಿದ್ದಿದೆ.ಅದೃಷ್ಟವಶಾತ್, ಸ್ಕೂಟರ್ ಬಳಿ ಯಾರೂ ಇರದ ಕಾರಣ ಪ್ರಾಣಾಪಾಯ ತಪ್ಪಿದೆ. ಅಲ್ಲದೆ, ಅದೇ ಸಮಯದಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಟೆಂಪೋ ಚಾಲಕ ಮರ ಬೀಳುವ ಕ್ಷಣದಲ್ಲಿ ತಪ್ಪಿಸಿಕೊಂಡು ಪಾರಾಗಿದ್ದಾರೆ. ಮರ ಕುಸಿತದ ಪರಿಣಾಮವಾಗಿ ಸಮೀಪದ ಕಟ್ಟಡವೊಂದರ ಗಾಜುಗಳು ನುಚ್ಚುನೂರಾಗಿದ್ದು, ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ನಡೆದ ತಕ್ಷಣ ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದ್ದು, ಸ್ಥಳೀಯರ ಸಹಕಾರದೊಂದಿಗೆ ಮರ ತೆರವುಗೊಳಿಸುವ ಕಾರ್ಯಾಚರಣೆ ನಡೆಯಿತು. ಘಟನೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲವೆAದು ತಿಳಿದುಬಂದಿದೆ.
ಉಳ್ಳಾಲ: ಉಳ್ಳಾಲದ ಸೀ ಗ್ರೌಂಡ್ ಕಡಲತೀರದ ಪ್ರದೇಶದಲ್ಲಿ ಮಾರಕ ತ್ಯಾಜ್ಯಗಳ ವಿಲೇವಾರಿ ವಿರುದ್ಧ ಸ್ಥಳೀಯರು ಯುನೈಟೆಡ್ ಎಂಪವರ್ಮೆoಟ್ ಅಸೋಸಿಯೇಷನ್ ನೇತೃತ್ವದಲ್ಲಿ ಸೀ ಗ್ರೌಂಡ್ ಪ್ರದೇಶದಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ. ಭಿತ್ತಿಫಲಕಗಳನ್ನು ಪ್ರದರ್ಶಿಸಿ ಘೋಷಣೆ ಕೂಗಿದ ಪ್ರತಿಭಟನಕಾರರು, ಪರಿಸರದ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಶಾಶ್ವತ ವ್ಯವಸ್ಥೆಯನ್ನು ಕಲ್ಪಿಸುವಂತೆ ಸ್ಥಳೀಯಾಡಳಿತವನ್ನು ಒತ್ತಾಯಿಸಿದ್ದಾರೆ. ಇದೇ ವೇಳೆ ಸಂಘಟನೆಯ ಪ್ರಧಾನ ಕಾರ್ಯದರ್ಶಿ ರಿಯಾಜ್ ಮಂಗಳೂರು ಮಾತನಾಡಿ, ಸೀಗ್ರೌಂಡ್ ಕಡಲತೀರದ ಕಸದ ರಾಶಿಯಿಂದಾಗಿ ಆರೋಗ್ಯಕ್ಕೆ ಮಾರಕವಾಗಿ ಪರಿಣಮಿಸಿದೆ. ಜೊತೆಗೆ ಪರಿಸರ ಮಾಲಿನ್ಯ ಹೆಚ್ಚಾಗಲು ಕಾರಣವಾಗಿದೆ ಎಂದು ಸಮಸ್ಯೆಗಳ ಬಗ್ಗೆ ತಿಳಿಸಿದ್ದಾರೆ. ಅಧ್ಯಕ್ಷತೆ ವಹಿಸಿದ್ದ ಅಬ್ದುಲ್ ರೆಹಮಾನ್ ಹಾಗೂ ಡಿವೈಎಫ್ಐ ಜಿಲ್ಲಾ ಘಟಕದ ಅಧ್ಯಕ್ಷರಾದ ಇಮ್ತಿಯಾಜ್ ಬಿ.ಕೆ ಅವರು, ಸೀ ಗ್ರೌಂಡ್ನ ಇತಿಹಾಸದ ಮಹತ್ವವನ್ನು ಹಾಗೂ ಪರಿಸರ ಸಂರಕ್ಷಣೆಯಲ್ಲಿ ಯುವಕರ ಪಾತ್ರ ಮಹತ್ವವನ್ನು ಸಾರಿದ್ರು. ಇನ್ನು ಪ್ರತಿಭಟನೆಯಲ್ಲಿ ಸ್ಥಳೀಯ ಮಾಜಿ ಕೌನ್ಸಿಲರ್ ಇಬ್ರಾಹೀಂ ಖಲೀಲ್, ಕರ್ನಾಟಕ ರಕ್ಷಣಾ ವೇದಿಕೆ ಉಳ್ಳಾಲ ಘಟಕದ ಅಧ್ಯಕ್ಷರಾಧ ಫೈರೋಜ್ ಕೋಟೆಪುರ, ರಾಜ್ಯ ಘಟಕದ ಸದಸ್ಯರಾದ ಅಶ್ರಫ್…
ಮಂಗಳೂರು: ಕಳೆದ 30 ವರ್ಷಗಳಿಂದ ಪತ್ರಿಕಾ ವಿತರಕನಾಗಿ ಕಾರ್ಯನಿರ್ವಹಿಸುತ್ತಿದ್ದ ಮಂಗಳೂರು ಉರ್ವ ನಿವಾಸಿ ನರೇಶ್ (54) ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಕುದ್ರೋಳಿ ಭಾರತ್ ಪತ್ರಿಕಾಲಯದಲ್ಲಿ ಪತ್ರಿಕಾ ವಿತರಕರಾಗಿ ಸೇವೆ ಸಲ್ಲಿಸುತ್ತಿದ್ದರು. ಮಂಗಳೂರಿನಾದ್ಯಂತ ಎಲ್ಲಾ ಕಚೇರಿಗಳಲ್ಲಿ ಚಿರಪರಿಚತರಾಗಿದ್ದರು. ತೀವ್ರ ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದ ಅವರು ಜ.20 ರಂದು ಉರ್ವ ಮನೆಯಲ್ಲಿ ನಿಧನರಾದರು. ಮೃತರು ಪತ್ನಿಯನ್ನು ಅಗಲಿದ್ದಾರೆ.
ಉಳ್ಳಾಲ;ದ.ಕ ಜಿಲ್ಲಾ ಖಾಸಗಿ ಬಸ್ಸಿಗೆ ಸುಮಾರು ವರ್ಷಗಳ ಇತಿಹಾಸವಿದೆ. ಸಾರ್ವಜನಿಕರು 1950 ರಿಂದ 1970ರ ದಶಕದವರೆಗೂ ಬಸಿಗಾಗಿ ಪರದಾಡುತ್ತಿದ್ದರು. ಆದರೆ ಇಂದು ನಿಮಿಷಕ್ಕೊಂದರ0ತೆ ನಮ್ಮ ಜಿಲ್ಲೆಯ ಮೂಲೆ ಮೂಲೆಗೆ, ಹಳ್ಳಿ ಹಳ್ಳಿಗೆ ಬಸ್ ಸಂಚಾರವನ್ನು ಒದಗಿಸಿ ಜಿಲ್ಲೆಯ ಜನರಿಗೆ ಬಸ್ಸು ಸಂಚಾರದ ಚುರುಕನ್ನು ಮುಟ್ಟಿಸಿದ ಸಂಪೂರ್ಣ ಖ್ಯಾತಿ ಜಿಲ್ಲೆಯ ಖಾಸಗಿ ಬಸ್ ಮಾಲಕರಿಗೆ ಸಲ್ಲತ್ತೆ. ಆದರೆ ಇತ್ತಿಚೇಗೆ ಶಕ್ತಿ ಯೋಜನೆ ಮೂಲಕ ಪ್ರೆöÊವೇಟ್ ಬಸ್ ಮಾಲೀಕರಿಗೆ ಹೊಡೆತ ಬಿದ್ದಿದ್ದು, ಅಲ್ಪಸ್ವಲ್ಪ ಆದಾಯಗಳನ್ನು ಗಳಿಸುತ್ತಿದ್ದಾರೆ. ಇದರ ಮಧ್ಯೆ ಬಸ್ ಸೇವೆ ಚೆನ್ನಾಗಿ ಇರುವ ಕಡೆಗಳಲ್ಲಿ ನಿಮಿಷಕ್ಕೊಂದು ಬಸ್ ಓಡಿಸುವ ಮೂಲಕ ಕೆಎಸ್ಆರ್ಟಿಸಿ ಖಾಸಗಿ ಬಸ್ ಮಾಲೀಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಬಗ್ಗೆ ದಕ್ಷಿಣ ಕನ್ನಡ ಬಸ್ ಮಾಲೀಕರ ಸಂಘದ ಅಧ್ಯಕ್ಷರಾ ಅಝೀಝ್ ಪರ್ತಿಪ್ಪಾಡಿ ಮಾತನಾಡಿ, ಕಳವಳ ವ್ಯಕ್ತಪಡಿಸಿದ್ದಾರೆ. ಅನಾರೋಗ್ಯಕರ ಪೈಪೋಟಿಯಿಂದಾಗಿ ಖಾಸಗಿ ಬಸ್ ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯ ಹಲವು ಭಾಗಗಳಲ್ಲಿ ಬಸ್ ಸೇವೆಗಳು ಸರಿಯಾದ ಸಮಯಕ್ಕಿಲ್ಲ. ಅಂತಹ ಕಡೆಗಳಲ್ಲಿ ಬಸ್ಸ್ ಸೇವೆಗಳನ್ನು…

