ಮಂಗಳೂರು, ಜೂ. 1: ಶಾಲಾ ಮಕ್ಕಳಿಗೆ ಮಧ್ಯಾಹ್ನದ ಊಟದೊಂದಿಗೆ ವಿತರಿಸಲಾಗುತ್ತಿರುವ ಮೊಟ್ಟೆಯ ದರದಲ್ಲಿ ಗಣನೀಯ ಏರಿಕೆ ಕಂಡುಬಂದಿರುವ ಹಿನ್ನೆಲೆಯಲ್ಲಿ, ಸರ್ಕಾರವು ಪ್ರಸ್ತುತ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಹೆಚ್ಚುವರಿ ಅನುದಾನ ನೀಡುವಂತೆ ಹಾಗೂ ಅಗತ್ಯ ಕ್ರಮ ಕೈಗೊಳ್ಳುವಂತೆ ಶಿಕ್ಷಕರ ಸಂಘದ ಪ್ರತಿನಿಧಿಗಳು ಅಕ್ಷರ ದಾಸೋಹ ಇಲಾಖೆಗೆ ಮನವಿ ಸಲ್ಲಿಸಿದರು. ಪ್ರತಿನಿಧಿ ತಂಡವು ಅಕ್ಷರ ದಾಸೋಹ ಇಲಾಖೆಯ ತಾಲೂಕು ಸಹ ನಿರ್ದೇಶಕಿ ಪ್ರವೀಣ ರೈ ಅವರಿಗೆ ಮನವಿ ಸಲ್ಲಿಸಿ, ಮೊಟ್ಟೆಯ ದರ ಗಗನಕ್ಕೇರಿರುವುದರಿಂದ ಪ್ರಸ್ತುತ ಸರ್ಕಾರ ನೀಡುತ್ತಿರುವ ಅನುದಾನದ ಮೊತ್ತದಲ್ಲಿ ಮೊಟ್ಟೆ ಖರೀದಿಸುವುದು ಕಷ್ಟಕರವಾಗಿದೆ ಎಂದು ತಿಳಿಸಿತು. ಈ ಕುರಿತು ಸ್ಪಷ್ಟನೆ ನೀಡಿದ ಶಿಕ್ಷಕರ ಸಂಘದ ಮುಖಂಡರು, “ಸರ್ಕಾರವು ಈಗಿನ ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಹೆಚ್ಚುವರಿ ಅನುದಾನ ನೀಡುವವರೆಗೆ ಅಥವಾ ಸರ್ಕಾರವೇ ನೇರವಾಗಿ ಶಾಲೆಗಳಿಗೆ ಮೊಟ್ಟೆಗಳನ್ನು ಪೂರೈಸುವ ವ್ಯವಸ್ಥೆ ಮಾಡುವವರೆಗೆ ಮಕ್ಕಳಿಗೆ ಮೊಟ್ಟೆಯ ಬದಲಾಗಿ ಬಾಳೆಹಣ್ಣನ್ನು ವಿತರಿಸಲಾಗುವುದು” ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮಂಗಳೂರು ದಕ್ಷಿಣದ ಗೌರವಾಧ್ಯಕ್ಷ ಜಗದೀಶ್…
Author: UllalaVani
ಉಳ್ಳಾಲ: ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರುವ ಸೈಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಹಾಗೂ ಸೈಯದ್ ಮದನಿ ಪ್ರೌಢಶಾಲೆಗಳ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪ್ರಾರಂಭೋತ್ಸವವನ್ನು ಟ್ರಸ್ಟ್ ಅಧ್ಯಕ್ಷ ಜನಾಬ್ ಅಶ್ರಫ್ ಅಹ್ಮದ್ ರೈಟ್ ವೇ ಅವರ ಅಧ್ಯಕ್ಷತೆಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು. “ಉತ್ತಮ ಕಲಿಕೆ – ಉಜ್ವಲ ಭವಿಷ್ಯ” ಎಂಬ ಘೋಷವಾಕ್ಯದೊಂದಿಗೆ ಪ್ರಸಕ್ತ ಶೈಕ್ಷಣಿಕ ವರ್ಷದ ಚಟುವಟಿಕೆಗಳಿಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಂಗಳೂರು ದಕ್ಷಿಣ ವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್. ಈಶ್ವರ ಅವರು, ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಲೆಯೊಂದಿಗೆ ನಿಕಟ ಬಾಂಧವ್ಯ ಬೆಳೆಸಿಕೊಂಡು ಶಿಕ್ಷಣದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ನ ಐದು ಪ್ರೌಢಶಾಲೆಗಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ದಾಖಲಿಸಿರುವುದನ್ನು ಶ್ಲಾಘಿಸಿ ಅಭಿನಂದಿಸಿದರು. ದಕ್ಷಿಣ ಕನ್ನಡ ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಶ್ರೀಮತಿ ಫಾತಿಮಾ ಅವರು ದಾಖಲಾತಿ ಕಾರ್ಯಕ್ಕೆ ಚಾಲನೆ ನೀಡಿದರು. 2026ರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ.100…
ಮಂಜನಾಡಿ: ಕರಾವಳಿಯ ಮೇಲಿರುವ ಭಯವನ್ನು ಹೋಗಲಾಡಿಸಿ ಮತ್ತೆ ೩೦ ವರ್ಷಗಳ ಹಿಂದಿನ ಸೌಹಾರ್ದಯುತ ವಾತಾವರಣವನ್ನು ನಿರ್ಮಿಸಬೇಕಿದೆ. ಈ ನಿಟ್ಟಿನಲ್ಲಿ ಸಾಯಿ ಫ್ರೆಂಡ್ಸ್ ಅಸೈಗೋಳಿ ಹಮ್ಮಿಕೊಳ್ಳುತ್ತಿರುವ ಸೌಹಾರ್ದ ಕಾರ್ಯಕ್ರಮಗಳು ಶಾಂತಿಯುತ ಸಮಾಜಕ್ಕೆ ಪೂರಕವಾದುದು ಎಂದು ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರದ ಮಾಜಿ ಅಧ್ಯಕ್ಷ ಅಬ್ದುಲ್ ಅಝೀಝ್ ಯಾನೆ ಮೈಸೂರ್ ಬಾವಾ ಅಭಿಪ್ರಾಯಪಟ್ಟರು. ಅವರು ಮಂಜನಾಡಿ ತಮ್ಮ ನಿವಾಸದಲ್ಲಿ ಸಾಯಿ ಫ್ರೆಂಡ್ಸ್ ಸರ್ಕಲ್ ಅಸೈಗೋಳಿ ಭಾನುವಾರ ಹಮ್ಮಿಕೊಂಡ ಪ್ರತಿಭಾನ್ವಿತ ವಿದ್ಯಾರ್ಥಿಗೆ ಸನ್ಮಾನ ಹಾಗೂ ಅರ್ಹ ಬಡ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ ಕಾರ್ಯಕ್ರಮಕ್ಕೆ ಸಾಂಕೇತಿಕ ಚಾಲನೆ ನೀಡಿ ಮಾತನಾಡಿದರು.ಸಾಯಿ ಫ್ರೆಂಡ್ಸ್ ಇವರ ಚಟುವಟಿಕೆಗಳನ್ನು ಗಮನಿಸುವಾಗ ಕರಾವಳಿಯ ೩೦ ವರ್ಷಗಳ ಹಿಂದಿನ ಪ್ರೀತಿ ಮತ್ತೆ ಮರುಕಳಿಸುತ್ತಿದೆ ಅನ್ನುವ ಅಭಿಪ್ರಾಯಗಳು ಮೂಡುತ್ತಿದೆ. ಹಿಂದೆ ಉರೂಸ್ ಸಂದರ್ಭದಲ್ಲಿಯೂ ಇದೇ ಸಂಘದ ವತಿಯಿಂದ ಹೊರೆಕಾಣಿಕೆಯನ್ನು ದರ್ಗಾಕ್ಕೆ ಸಲ್ಲಿಸಲಾಗಿತ್ತು. ಇದು ಜಿಲ್ಲೆಯಲ್ಲಿ ಅಷ್ಟು ಮಟ್ಟಿನ ಸುದ್ಧಿಯಾಗದೇ ಇದ್ದರೂ ಮೈಸೂರು, ಬೆಂಗಳೂರಿನಾದ್ಯಂತ ಜಿಲ್ಲೆಯ ಸೌಹಾರ್ದ ವಾತಾವರಣವು ಬಹಳಷ್ಟು ದನಿ ಮಾಡಿತ್ತು. ಮಂಗಳೂರು ಅಂದಲ್ಲಿ ಭಯದ…
ಮಂಜನಾಡಿ : ಕರಾವಳಿ ಜಿಲ್ಲೆಯಲ್ಲಿ ಸೌಹಾರ್ದ, ಸಾಮರಸ್ಯ ಮತ್ತು ಸಹಬಾಳ್ವೆಯ ಸಂದೇಶವನ್ನು ಬಿತ್ತುತ್ತಿರುವ ಸಂಘಟನೆಗಳಲ್ಲಿ ‘ಸಾಯಿ ಫ್ರೆಂಡ್ಸ್ ಅಸೈಗೋಳಿ’ ಪ್ರಮುಖ ಸ್ಥಾನವನ್ನು ಪಡೆದಿದೆ. ಧರ್ಮ, ಜಾತಿ, ರಾಜಕೀಯ ಭಿನ್ನಾಭಿಪ್ರಾಯಗಳನ್ನು ಮೀರಿ ಮಾನವೀಯತೆಯ ನೆಲೆಯಲ್ಲಿ ಸಮಾಜವನ್ನು ಒಗ್ಗೂಡಿಸುವ ಉದ್ದೇಶದಿಂದ ಸ್ಥಾಪನೆಯಾದ ಈ ಸಂಘಟನೆಯು ಇಂದು ಅನೇಕ ಯುವಕರಿಗೆ ಮಾದರಿಯಾಗಿದೆ.ಈ ಸಂಘಟನೆಯ ಸ್ಥಾಪನೆಗೆ ಮುನ್ನುಡಿ ಬರೆದವರು ಸಮಾಜಮುಖಿ ಚಿಂತಕರಾದ ಉದ್ಯಮಿ ಮೈಸೂರು ಬಾವಾ. ಬಾಲ್ಯದ ದಿನಗಳಲ್ಲಿ ಕಂಡಿದ್ದ ಪರಸ್ಪರ ಪ್ರೀತಿ, ವಿಶ್ವಾಸ, ಸ್ನೇಹ ಮತ್ತು ಸಹೋದರತ್ವದ ವಾತಾವರಣ ಮತ್ತೆ ಸಮಾಜದಲ್ಲಿ ನೆಲೆಸಬೇಕು ಎಂಬ ಅವರ ಕನಸು ಇಂದು ಸಾಯಿ ಫ್ರೆಂಡ್ಸ್ ಮೂಲಕ ಸಾಕಾರಗೊಳ್ಳುತ್ತಿದೆ.ಆ ಕನಸನ್ನು ಕಾರ್ಯರೂಪಕ್ಕೆ ತರುವಲ್ಲಿ ಕಳೆದ ನಾಲ್ಕು ವರ್ಷಗಳಿಂದ ಅಹರ್ನಿಶಿ ಶ್ರಮಿಸುತ್ತಿರುವ ವ್ಯಕ್ತಿ ಅಶ್ರಫ್ ನಾಟೆಕಲ್. ಅವರು ಕೇವಲ ಸಂಘಟನೆಯ ಅಧ್ಯಕ್ಷ ಅಥವಾ ಮುಖಂಡರಲ್ಲ; ಎಲ್ಲರನ್ನು ಒಗ್ಗೂಡಿಸುವ, ಸಂಕಷ್ಟದ ಸಂದರ್ಭಗಳಲ್ಲಿ ಶಾಂತಿಯ ಸಂದೇಶ ಸಾರುವ, ಯುವಕರಿಗೆ ಮಾರ್ಗದರ್ಶನ ನೀಡುವ ಒಬ್ಬ ಸಮರ್ಥ ಸಾರಥಿ.ಸೌಹಾರ್ದಕ್ಕೆ ಧಕ್ಕೆಯಾಗುವ ಯಾವುದೇ ಘಟನೆ ಸಂಭವಿಸಿದಾಗ ಹಿಂದೂ, ಮುಸ್ಲಿಂ…
ಉಳ್ಳಾಲ: ಬಿಜೆಪಿಯ ಭದ್ರಕೋಟೆ ಮಾಡೂರಿನ ಅರಸುನಗರಕ್ಕೆ, ಬಿಜೆಪಿ ಸರಕಾರದ ಆಡಳಿತಾವಧಿಯಲ್ಲಿದ್ದ ಉಸ್ತುವಾರಿ ಸಚಿವರು, ಸಂಸದರು, ಸ್ಥಳೀಯಾಡಳಿತ, ಪಕ್ಷದ ರಾಜ್ಯಾಧ್ಯಕ್ಷರ ಸ್ಪಂಧನೆಯಿಂದ ಗ್ರಾಮದ ಜನರ ೧೮ ವರ್ಷಗಳ ಕನಸು ನನಸಾಗಿದೆ ಎಂದು ಕೋಟೆಕಾರು ಪಟ್ಟಣ ಪಂಚಾಯಿತಿ ಸದಸ್ಯ ಸುಜಿತ್ ಮಾಡೂರು ಹೇಳಿದರು.ಅವರು ಕೋಟೆಕಾರು ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಮಾಡೂರು ಶಾಲೆ ಎದುರಿನ ಕಾಂಕ್ರೀಟಿಕರಣಗೊಂಡ ಅರಸುನಗರ ೨ ನೇ ಅಡ್ಡರಸ್ತೆ ಹಾಗೂ ೩ ನೇ ಅಡ್ಡರಸ್ತೆಯ ಉದ್ಘಾಟನೆಯಲ್ಲಿ ಭಾಗವಹಿಸಿ ಮಾತನಾಡಿದರು.ಗ್ರಾಮದ ಹಿರಿಯ ಸುಂದರಿ ಅವರು ರಸ್ತೆಯನ್ನು ಉದ್ಘಾಟಿಸಿದರು. ೧೮ ವರ್ಷಗಳ ಬಹುಬೇಡಿಕೆಯ ರಸ್ತೆಯ ಕಾಂಕ್ರೀಟಿಕರಣಕ್ಕೆ ಶಾಸಕರು ನೀಡಬೇಕಾದಂತಹ ಅನುದಾನವನ್ನು ಕೌನ್ಸಿಲರ್ ಒದಗಿಸಬಹುದೇ ಅನ್ನುವ ಪ್ರಶ್ನೆಯಿತ್ತು. ಆದರೆ ಬಿಜೆಪಿ ಸರಕಾರದ ಅವಧಿಯಲ್ಲಿ ಉಸ್ತುವಾರಿ ಸಚಿವರಾಗಿದ್ದ ಸುನಿಲ್ ಕುಮಾರ್ ನಗರೋತ್ಥಾನ ಅನುದಾನ, ಅಂದಿನ ವಿಧಾನಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿಯವರು ರೂ. ೫ ಲಕ್ಷ ಅನುದಾನ ಇಟ್ಟಿದ್ದರು. ನಳಿನ್ ಕಟೀಲ್ ರಾಜ್ಯಾಧ್ಯಕ್ಷರಾಗಿದ್ದ ಸಂದರ್ಭ ತಹಶೀಲ್ದಾರ್ ಅವರನ್ನು ಸ್ಥಳಕ್ಕೆ ಕರೆಸಿ ಸ್ಥಳಿಯಾಡಳಿತದಿಂದ ಅನುದಾನ ಇರಿಸಲು ಸೂಚಿಸಿದಂತೆ ಸ್ಥಳೀಯಾಡಳಿತ ,…
ಮಂಗಳೂರು: ಸಾಮಾಜಿಕ ಜಾಲತಾಣ ಹಾಗೂ ಯೂಟ್ಯೂಬ್ ವೇದಿಕೆಗಳಲ್ಲಿ ಪ್ರಸಾರವಾದ ವಿಡಿಯೊದಲ್ಲಿನ ಹೇಳಿಕೆಗಳಿಗೆ ಸಂಬಂಧಿಸಿದಂತೆ ಭಾರತೀಯ ನ್ಯಾಯ ಸಂಹಿತೆ (BNS)ಯ ಸೆಕ್ಷನ್ 196 ಮತ್ತು 353ರ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ವಿಡಿಯೊದಲ್ಲಿನ ಕೆಲವು ಹೇಳಿಕೆಗಳು ಧರ್ಮ, ಪ್ರದೇಶ, ಭಾಷೆ ಅಥವಾ ಇತರೆ ಗುರುತುಗಳ ಆಧಾರದ ಮೇಲೆ ದ್ವೇಷ, ವೈಮನಸ್ಸು ಅಥವಾ ಅಸಾಮರಸ್ಯವನ್ನು ಉತ್ತೇಜಿಸುವ ಸಾಧ್ಯತೆಯನ್ನು ಹೊಂದಿವೆ. ಈ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಈ ಸಂಬಂಧ ದೂರು ಇಂದು ಸ್ವೀಕರಿಸಲಾಗಿದ್ದು, ಘಟನೆ ನಡೆದ ದಿನ ಸ್ಥಳದಿಂದ ತೆರಳಿದ್ದ ವ್ಯಕ್ತಿಯೊಬ್ಬರು ಬಳಿಕ ಹಿಂದಿರುಗಿ ಅಧಿಕೃತ ದೂರು ಸಲ್ಲಿಸಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಮಂಗಳೂರು ನಗರ ಪೊಲೀಸ್ ಆಯುಕ್ತರು , ಪತ್ರಕರ್ತರು ಮತ್ತು ವರದಿಗಾರರ ಜವಾಬ್ದಾರಿ ಘಟನೆಗಳು ಹಾಗೂ ಸತ್ಯಾಂಶಗಳನ್ನು ನಿಷ್ಪಕ್ಷಪಾತವಾಗಿ ವರದಿ ಮಾಡುವುದಾಗಿದೆ. ವ್ಯಕ್ತಿಗಳನ್ನು ಗುರಿಯಾಗಿಸಿಕೊಂಡು ವೈಮನಸ್ಸು ಸೃಷ್ಟಿಸುವುದು, ಸಮಾಜದಲ್ಲಿ ವಿಭಜನೆ ಉಂಟುಮಾಡುವುದು ಅಥವಾ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗುವುದು ಯಾವುದೇ ಮಾಧ್ಯಮ…
ಮುಡಿಪು : ಇಲ್ಲಿನ ಪಿ.ಕೆ ಟವರ್ಸ್ ನಲ್ಲಿ ಕಳೆದ ಸುಮಾರು 30 ವರ್ಷಗಳಿಂದ ಭಾರತ್ ಚಿಕನ್ ಸ್ಟಾಲ್ ನಡೆಸುತ್ತಿದ್ದ ಉದ್ಯಮಿ ಇರಾ ಗ್ರಾಮದ ನಿವಾಸಿ ಅಬ್ದುಲ್ ರೆಹಮಾನ್ (55) ಇವರು ಹೃದಯಘಾತಕ್ಕೀಡಾಗಿ ಇಂದು ಸ್ವಗೃಹದಲ್ಲಿ ನಸುಕಿನ ಜಾವ ನಿಧನ ಹೊಂದಿದರು. ಸರಳ ಸ್ವಭಾವದ ಪ್ರಾಮಾಣಿಕ ವ್ಯಕ್ತಿತ್ವದವರಾಗಿದ್ದ ರೆಹಮಾನ್ ಫಜಲ್ ಜುಮಾ ಮಸೀದಿ ಪಂಜಿಕಲ್ಲು ಇರಾ ಮಂಚಿ ಇದರ ಮಾಜಿ ಅಧ್ಯಕ್ಷರಾಗಿದ್ದರು. ಮೃತರು ಪತ್ನಿ ಹಾಗೂ ಮೂವರು ಪುತ್ರರು ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ.
ಇಂದಿನ ಡಿಜಿಟಲ್ ಯುಗದಲ್ಲಿ ವ್ಯಕ್ತಿಯ ಹೆಸರು, ಚಿತ್ರ, ಧ್ವನಿ, ಖಾಸಗಿ ಮಾಹಿತಿ ಮತ್ತು ವ್ಯಕ್ತಿತ್ವವನ್ನು ದುರುಪಯೋಗಪಡಿಸಿಕೊಳ್ಳುವ ಘಟನೆಗಳು ಹೆಚ್ಚಾಗುತ್ತಿವೆ. ಸಾಮಾಜಿಕ ಜಾಲತಾಣಗಳು, ಕೃತಕ ಬುದ್ಧಿಮತ್ತೆ (AI), ಡೀಪ್ಫೇಕ್ ತಂತ್ರಜ್ಞಾನ ಮತ್ತು ಡಿಜಿಟಲ್ ಮಾಧ್ಯಮಗಳ ಬೆಳವಣಿಗೆಯಿಂದ ವ್ಯಕ್ತಿಯ ಅನುಮತಿ ಇಲ್ಲದೆ ಅವರ ಫೋಟೋ, ವಿಡಿಯೊ ಅಥವಾ ಧ್ವನಿಯನ್ನು ಬಳಸಿ ಸುಳ್ಳು ಮಾಹಿತಿ ಹರಡುವುದು, ಮಾನಹಾನಿ ಮಾಡುವುದು ಹಾಗೂ ಆರ್ಥಿಕ ಲಾಭ ಗಳಿಸುವ ಪ್ರಯತ್ನಗಳು ನಡೆಯುತ್ತಿವೆ. ಇಂತಹ ಬೆಳವಣಿಗೆಗಳ ನಡುವೆ ವ್ಯಕ್ತಿತ್ವ ಹಿತ ರಕ್ಷಣೆ ಕಾನೂನಿನ ಅಗತ್ಯತೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಭಾರತದಲ್ಲಿ “ವ್ಯಕ್ತಿತ್ವ ಹಿತ ರಕ್ಷಣೆ ಕಾನೂನು” ಎಂಬ ಹೆಸರಿನ ಪ್ರತ್ಯೇಕ ಕಾಯ್ದೆ ಇಲ್ಲದಿದ್ದರೂ, ಸಂವಿಧಾನದ ವಿಧಿ 21ರ ಅಡಿಯಲ್ಲಿ ದೊರೆಯುವ ಜೀವಿಸುವ ಹಕ್ಕು, ಖಾಸಗಿತನದ ಹಕ್ಕು ಮತ್ತು ಗೌರವದಿಂದ ಬದುಕುವ ಹಕ್ಕಿನ ಮೂಲಕ ವ್ಯಕ್ತಿಯ ವ್ಯಕ್ತಿತ್ವಕ್ಕೆ ರಕ್ಷಣೆ ಒದಗಿಸಲಾಗುತ್ತಿದೆ. ದೇಶದ ವಿವಿಧ ನ್ಯಾಯಾಲಯಗಳು ವ್ಯಕ್ತಿಯ ಹೆಸರು, ಚಿತ್ರ, ಧ್ವನಿ ಮತ್ತು ಖ್ಯಾತಿಯು ಅವರ ವೈಯಕ್ತಿಕ ಹಕ್ಕಿನ ಭಾಗವಾಗಿದೆ ಎಂದು ಅನೇಕ ತೀರ್ಪುಗಳಲ್ಲಿ ಸ್ಪಷ್ಟಪಡಿಸಿವೆ.…
ಬೊಳಂತೂರು, ಮೇ 30: ಕಳೆದ ಸುಮಾರು ಐದು ದಶಕಗಳ ಕಾಲ ಭಾರತೀಯ ಜನತಾ ಪಕ್ಷದ ಸಕ್ರಿಯ ಹಾಗೂ ನಿಷ್ಠಾವಂತ ಕಾರ್ಯಕರ್ತರಾಗಿ ಗುರುತಿಸಿಕೊಂಡಿದ್ದ ಬೊಳಂತೂರಿನ ಹಿರಿಯ ಮುಖಂಡ ಈಶ್ವರ್ ಭಟ್ ರಾಕೋಡಿ ಅವರು ಬಿಜೆಪಿ ತೊರೆದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದು ಸ್ಥಳೀಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಮಾಜಿ ಸಚಿವ ಬಿ. ರಮಾನಾಥ ರೈ ಅವರ ನಿವಾಸದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಈಶ್ವರ್ ಭಟ್ ರಾಕೋಡಿ ಅವರಿಗೆ ಕಾಂಗ್ರೆಸ್ ಪಕ್ಷದ ಶಾಲು ಹೊದಿಸಿ ಆತ್ಮೀಯವಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಲವು ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು. ಸುಮಾರು 50 ವರ್ಷಗಳ ಕಾಲ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದ ಈಶ್ವರ್ ಭಟ್ ರಾಕೋಡಿ ಅವರು ಪಕ್ಷ ತೊರೆಯುವ ನಿರ್ಧಾರಕ್ಕೆ ಕಾರಣವನ್ನು ವಿವರಿಸಿದ್ದು, ದೀರ್ಘಕಾಲ ಪಕ್ಷಕ್ಕಾಗಿ ದುಡಿದ ಸಾಮಾನ್ಯ ಕಾರ್ಯಕರ್ತರಿಗೆ ಸಮರ್ಪಕ ಗೌರವ ಮತ್ತು ಮಾನ್ಯತೆ ಸಿಗುತ್ತಿಲ್ಲ ಎಂಬ ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಪ್ರಾಮಾಣಿಕ ಕಾರ್ಯಕರ್ತರ ಅಭಿಪ್ರಾಯಗಳಿಗೆ ಪಕ್ಷದೊಳಗೆ ಸೂಕ್ತ ಸ್ಪಂದನೆ…
ಮಂಗಳೂರು, ಮೇ. 29 : ಉಡುಪಿಯ ಮಲ್ಪೆ ಬಂದರಿನಿಂದ ಮೀನುಗಾರಿಕೆಗಾಗಿ ಸಮುದ್ರಕ್ಕೆ ತೆರಳಿದ್ದ ‘ಭಾಗೀರಥಿ’ ಹೆಸರಿನ ಮೀನುಗಾರಿಕಾ ದೋಣಿ ಮಂಗಳೂರು ಕರಾವಳಿಯಿಂದ ಸುಮಾರು ಐದು ನಾಟಿಕಲ್ ಮೈಲು ದೂರದಲ್ಲಿ ಮುಳುಗಿದ ಘಟನೆ ನಡೆದಿದೆ. ದೋಣಿಯಲ್ಲಿದ್ದ ಎಲ್ಲಾ ಮೀನುಗಾರರನ್ನು ಹತ್ತಿರದ ದೋಣಿಗಳ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿರುವುದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಈ ದೋಣಿ ಬ್ರಹ್ಮಾವರದ ಮಾಬುಕಲ ನಿವಾಸಿ ಜೈ ಸಾಲಿಯಾನ್ ಅವರಿಗೆ ಸೇರಿದ್ದು, ಮೇ 24ರಂದು ಮೀನುಗಾರಿಕೆಗೆ ಸಮುದ್ರಕ್ಕೆ ತೆರಳಿತ್ತು. ಮೇ 26ರಂದು ಬೆಳಿಗ್ಗೆ ಮಂಗಳೂರಿನಿಂದ ಸುಮಾರು 8 ರಿಂದ 10 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ದೋಣಿಯ ಗೇರ್ಬಾಕ್ಸ್ನಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಬೆಳಿಗ್ಗೆ 9.30ರ ಸುಮಾರಿಗೆ ದೋಣಿ ದುರಸ್ತಿಗಾಗಿ ಮಂಗಳೂರು ಹಳೆಯ ಬಂದರಿಗೆ ಕರೆತರಲಾಗಿತ್ತು. ದುರಸ್ತಿ ಕಾರ್ಯದ ನಂತರ ಅದೇ ದಿನ ರಾತ್ರಿ ಸುಮಾರು 9.30ಕ್ಕೆ ದೋಣಿ ಅಲೈವ್ ಗೇಟ್ ಮೂಲಕ ಮತ್ತೆ ಸಮುದ್ರಕ್ಕೆ ತೆರಳಿ ಮೀನುಗಾರಿಕೆ ಕಾರ್ಯಾಚರಣೆಯನ್ನು ಪುನರಾರಂಭಿಸಿತ್ತು.ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಸಮುದ್ರದ ಅಡಿಯಲ್ಲಿ ಇದ್ದ…

