ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಮುಲೈ ಮುಗಿಲನ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಬೆಂಗಳೂರು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತ ದರ್ಶನ್ ಎಚ್ ವಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ. ಮುಲೈ ಮುಗಿಲನ್ ಅವರನ್ನು ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಆಂಡ್ ಸ್ಟ್ಯಾಂಪ್ಸ್ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿರುವ ದರ್ಶನ್ ಎಚ್ವಿ ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾಗಿದ್ದರು.
Author: UllalaVani
ಶಿವಮೊಗ್ಗ : ಕಾಂತಾರ ಸಿನಿಮಾದ ಶೂಟಿಂಗ್ ವೇಳೆ ಮತ್ತೊಂದು ಅವಘಡ ಸಂಭವಿಸಿದೆ. ವರಾಹಿ ಹಿನ್ನಿರಿನ ಪ್ರದೇಶದಲ್ಲಿ ನಡೆಯುತ್ತಿದ್ದ ಶೂಟಿಂಗ್ ವೇಳೆ ದೋಣಿ ಮಗುಚಿದ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಯಡೂರು ಸಮೀಪದ ಮಾಣಿ ಜಲಾಶಯದ ವರಾಹಿ ಹಿನ್ನೀರು ಪ್ರದೇಶದಲ್ಲಿ ನಿನ್ನೆ ಶೂಟಿಂಗ್ ನಡೆಯುತ್ತಿತ್ತು. ಮೇಲಿನ ಕೊಪ್ಪ ಎಂಬ ಮುಳುಗಡೆ ಗ್ರಾಮದ ಬಳಿ ಕಾಂತರಾ ಚಾಪ್ಟರ್ ಅಂಡ್ ಶೂಟಿಂಗ್ ನಡೆಯುತ್ತಿದ್ದ ಸಂದರ್ಭ ನಾಯಕ ನಟ ರಿಷಬ್ ಶೆಟ್ಟಿ ಇತರರು ಇದ್ದ ದೋಣಿ ನೀರಿಗೆ ಮಗುಚಿಬಿದ್ದಿದೆ. ಈ ಸಂದರ್ಭ ಕ್ಯಾಮರಕ್ಕೆ ಹಾನಿಯುಂಟಾಗಿದೆ. ಆದರೆ ನಟ ರಿಷಬ್ ಶೆಟ್ಟಿ ಹಾಗೂ ಇತರರು ಈಜಿ ದಡ ಸೇರಿದ್ದಾರೆ.ಮುಳುಗಡೆ ಗ್ರಾಮ ವಾದ ಹಿನ್ನೆಲೆಯಲ್ಲಿ ಹೆಚ್ಚಿನ ನೀರು ಇರಲಿಲ್ಲ . ಯಾವುದೇ ಪ್ರಾಣಪಯವಿಲ್ಲದೆ ಎಲ್ಲರೂ ಪಾರಾಗಿದ್ದಾರೆ. ಘಟನೆಯ ನಂತರ ಚಿತ್ರೀಕರಣ ಮುಗಿಸಿ ಯಡೂರು ಸಮೀಪದ ರೆಸಾರ್ಟ್ ಒಂದರಲ್ಲಿ ಚಿತ್ರತಂಡ ತಂಗಿದೆ.
ಮಂಗಳೂರು: ಬಳ್ಳಾರಿಯಿಂದ 10 ಕಿ.ಮೀ ದೂರದಲ್ಲಿ ರೇಡಿಯೇಟರ್ ಸಮಸ್ಯೆಯಿಂದಾಗಿ ಕೆಟ್ಟುನಿಂತಿದೆ. ದುರಸ್ತಿ ನಡೆಸಿ ಬಸ್ ಈಗ ಹೊರಟಿದೆ ಎಂದು ಉಳ್ಳಾಲವಾಣಿಗೆ ಕೆಎಸ್ ಆರ್ ಟಿಸಿ ದ.ಕ ಜಿಲ್ಲಾ ಡಿ.ಸಿ ರಾಜೇಶ್ ಶೆಟ್ಟಿ ಪ್ರತಿಕ್ರಿಯಿಸಿದ್ದಾರೆ.ಬಸ್ ದುರಸ್ತಿಗೆ ಯಾರೂ ಸ್ಪಂಧಿಸದ ಹಿನ್ನೆಲೆಯಲ್ಲಿ ಪ್ರಯಾಣಿಕರು ಕಂಗಾಲಾಗಿದ್ದರು. ಈ ಕುರಿತು ಉಳ್ಳಾಲವಾಣಿ ವರದಿ ನಡೆಸಿತ್ತು. ತಕ್ಷಣಕ್ಕೆ ಸ್ಪಂಧಿಸಿದ ದ.ಕ ಜಿಲ್ಲಾ ಕೆಎಸ್ ಆರ್ ಟಿಸಿ ಡಿ.ಸಿಯವರು ಡಿಪೋ ಸಂಪರ್ಕಿಸಿ, ನಿರ್ವಾಹಕ, ಚಾಲಕರಲ್ಲಿ ವರದಿ ಕೇಳಿದ್ದಾರೆ. ಅಲ್ಲದೆ ರೇಡಿಯೇಟರ್ ಸಮಸ್ಯೆಯನ್ನು ದುರಸ್ತಿ ನಡೆಸಿ ಮಂಗಳೂರಿನತ್ತ ತೆರಳುವಂತೆ ಸೂಚಿಸಿದ್ದಾರೆ. ತಕ್ಷಣಕ್ಕೆ ಪ್ರಯಾಣಿಕರ ಸಮಸ್ಯೆಗೆ ಪ್ರತಿಕ್ರಿಯಿಸಿದ ಕೆಎಸ್ ಆರ್ ಟಿಸಿ ಡಿ.ಸಿಯವರಿಗೆ ಪ್ರಯಾಣಿಕರು ಅಭಿನಂದಿಸಿದ್ದಾರೆ.
ಮಂಗಳೂರು: ಮಂತ್ರಾಲಯ- ಮಂಗಳೂರು ಬರುವ ಕೆ.ಎ19 ಎಫ್ 3551 ಕೆಎಸ್ ಆರ್ ಟಿಸಿ ಬಸ್ ಬಳ್ಳಾರಿಯಿಂದ 10 ಕಿ.ಮೀ ದೂರದಲ್ಲಿ ಕೆಟ್ಟು ನಿಂತು ಗಂಟೆ ಕಳೆದರೂ, ಇಲಾಖೆಯಿಂದ ಯಾವುದೇ ಸ್ಪಂಧನೆ ಈವರೆಗೆ ಸಿಕ್ಕಿಲ್ಲ ಅನ್ನುವ ಆರೋಪ ಪ್ರಯಾಣಿಕರು ಮಾಡಿದ್ದಾರೆ. ಮಹಿಳೆಯರು, ಮಕ್ಕಳು, ವೃದ್ಧರೆಲ್ಲರೂ ಬಸ್ಸೊಳಗಡೆ ಪ್ರಯಾಣಿಕರಿದ್ದು, ಕಗ್ಗತ್ತಲಲ್ಲಿ ನಿರ್ಜನ ಪ್ರದೇಶದಲ್ಲಿ ಬಸ್ ನಿಂತಿರುವುದರಿಂದ ಎಲ್ಲರೂ ಆತಂಕ ವ್ಯಕ್ತಪಡಿಸುತ್ತಿದ್ದಾರೆ.ನಿರ್ವಾಹಕ-ಚಾಲಕರು ಸಂಬಂಧಪಟ್ಟ ಡಿಪೋ ಅವರಿಗೆ ಮಾಹಿತಿ ನೀಡಿದರೂ ಗಂಟೆ ಕಳೆದರೂ ಸ್ಪಂಧನೆ ಸಿಗುತ್ತಿಲ್ಲ. ಕೆಎಸ್ಆರ್ಟಿಸಿ ಅಲ್ಲಿನ ಕಚೇರಿಗಳಿಗೆ ಫೋನಾಯಿಸಿದರೂ ಸ್ಪಂಧನೆ ಸಿಗುತ್ತಿಲ್ಲ. ಈ ಕೂಡಲೇ ರಾಜ್ಯ ಸಾರಿಗೆ ಸಚಿವರು ತುರ್ತಾಗಿ ಗಮನ ಹರಿಸಬೇಕಿದೆ. ಅಧಿಕಾರಿಗಳಿಗೆ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ನಿದರ್ಶನ ನೀಡಬೇಕೆಂಬ ಆಗ್ರಹವನ್ನು ಮಾಡಿದ್ದಾರೆ.
ಬಗಂಬಿಲ : ಬೆಂಕಿ ಅವಘಢದಿಂದ ಸಂಪೂರ್ಣ ಮನೆ ಹಾಗೂ ವಸ್ತುಗಳನ್ನು ಕಳೆದುಕೊಂಡ ಮನೆಮಂದಿಗೆ ರಜಕ ಯೂತ್ ವತಿಯಿಂದ ನೆರವಿನ ಹಸ್ತ ನೀಡಲಾಯಿತು.ದೇರಳಕಟ್ಟೆಯ ವೈದ್ಯನಾಥನಗರದಲ್ಲಿ ಸುಶೀಲಾ ಮಡಿವಾಳ್ತಿ ಇವರ ಮನೆಯಲ್ಲಿ ಜೂ.6 ರಂದು ಘಟನೆ ಸಂಭವಿಸಿತ್ತು. ಘಟನೆಯಿಂದ ಲಕ್ಷಾಂತರ ನಷ್ಟವೂ ಉಂಟಾಗಿದೆ. ದಿನಗೂಲಿ ನಡೆಸಿ ಸಂಸಾರದ ನೌಕೆಯನ್ನು ಸಾಗಿಸುತ್ತಿರುವ ಕುಟುಂಬಕ್ಕೆ ಘಟನೆ ಗಾಯದ ಮೇಲೆ ಬರೆ ಎಳೆದಂತಾಗಿತ್ತು. ಇದೀಗ ರಜಕ ಯೂತ್ ಮಂಗಳೂರು ತಂಡವು ಭೇಟಿ ನೀಡಿ ರೂ. 40,000 ಆರ್ಥಿಕ ನೆರವು ನೀಡಿ ಸಹಕರಿಸಿದೆ.ಬೆಂಕಿ ದುರಂತದಿಂದ ಜನಾರ್ಧನ ಮಡಿವಾಳರ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಈ ನೆರವು ಅವರಿಗೆ ಸ್ವಲ್ಪಮಟ್ಟಿಗೆ ಆಸರೆಯಾಗಲಿದೆ ಎಂದು ರಜಕ ಯೂತ್ ತಂಡದ ಸದಸ್ಯರು ತಿಳಿಸಿದ್ದಾರೆ.ಜೊತೆಗೆ, ಸರಕಾರ ಹಾಗೂ ಜಿಲ್ಲಾಡಳಿತದಿಂದ ಸಂತ್ರಸ್ತರಿಗೆ ತಕ್ಷಣದ ಸಹಾಯ ಹಸ್ತ ಒದಗಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದರು. ಅಲ್ಲದೆ, ಶಾಸಕರ ಪರಿಹಾರ ನಿಧಿಯಿಂದ ಕೂಡ ಸಹಾಯ ನೀಡುವ ನಿರೀಕ್ಷೆಯಲ್ಲಿ ಕುಟುಂಬ ಇದೆ.ರಜಕ ಯೂತ್ ತಂಡದ ನಾಯಕ ಪ್ರದೀಪ್ , ಮನೆಮಂದಿ ಸುಶೀಲಾ ಮಡಿವಾಳ್ತಿ, ಆಶಾ,…
ಉಳ್ಳಾಲ : ಕಳವುಗೈದ ರಿಕ್ಷಾ ಬ್ಯಾಟರಿಗಳನ್ನು ವಾಪಸ್ಸು ತಂದು ಇಡುವಂತೆ ಹೇಳಿದ್ದಕ್ಕೆ ಆಕ್ರೋಶಗೊಂಡ ರೌಡಿಶೀಟರ್ ಓರ್ವ ರಿಕ್ಷಾ ಗಾಜು ಒಡೆದು, ಯುವಕನೋರ್ವನ ಮೇಲೆ ಕತ್ತಿ ಬೀಸಿ ಕೊಲೆಗೆ ಯತ್ನಿಸಿ, ಮನೆ ಮಹಿಳೆಯರಿಗೆ ಅವಾಚ್ಯವಾಗಿ ನಿಂದಿಸಿ ಕೊಲೆಬೆದರಿಕೆ ಹಾಕಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಹೈದರ್ ಆಲಿ ರಸ್ತೆಯ ಮುಕ್ಕಚ್ಚೇರಿ ಎಂ.ಎಫ್.ಸಿ ಕ್ಲಬ್ ಹತ್ತಿರ ನಡೆದಿದೆ. ಘಟನೆ ಸಂಬಂಧ ಕಾರ್ಯಪ್ರವೃತ್ತರಾದ ಉಳ್ಳಾಲ ಪೊಲೀಸರು ಆರೋಪಿ ರೌಡಿಶೀಟರ್ ಅರ್ಫಾನ್ ನನ್ನು ಬಂಧಿಸಿದ್ದಾರೆ.ಅಬ್ದುಲ್ಲಾ ಹಮೀದ್ ಎಂಬವರ ಮನೆಯಲ್ಲಿ ಕೃತ್ಯ ನಡೆದಿದೆ. ಹಮೀದ್ ಅವರ ರಿಕ್ಷಾದ ಗಾಜನ್ನು ಒಡೆದ ಆರೋಪಿ ಬಳಿಕ ಅಳಿಯ ಮೊಹಮ್ಮದ್ ಇರ್ಷಾದ್ ಅವರ ರಿಕ್ಷಾದ ಗಾಜನ್ನು ಒಡೆಯಲು ಮುಂದಾಗಿದ್ದಾನೆ. ಅಲ್ಲದೆ ಹಮೀದ್ ಅವರ ಪುತ್ರ ಆದಿಲ್ ಅಹಮ್ಮದ್ ಎಂಬವರ ಮೇಲೆ ಕತ್ತಿಯಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದನು. ಜೂ.10 ರಂದು ಮಧ್ಯಾಹ್ನ2 ರ ಹೊತ್ತಿಗೆ ಮನೆಯ ಕಿಟಕಿ ಸಮೀಪ ನಿಲ್ಲಿಸಿದ್ದ ಎರಡು ರಿಕ್ಷಾಗಳ ಬ್ಯಾಟರಿಗಳನ್ನು ಅರ್ಫಾನ್ ಮತ್ತು ಆತನ ಇಬ್ಬರು ಸಹಚರರು ಕಳವು…
Ahamadab : ಭವಿಷ್ಯದ ಬಗ್ಗೆ ಹಲವು ಕನಸುಗಳನ್ನು ಇಟ್ಟುಕೊಂಡು ನೂರಾರು ಮಂದಿ ವಿಮಾನ ದುರಂತದಲ್ಲಿ (Ahmedabad Plane Tragedy) ಸಾವಾನ್ನಪ್ಪಿದ್ದಾರೆ. ಓರ್ವ ವ್ಯಕ್ತಿ ಹೊರತುಪಡಿಸಿ ವಿಮಾನದಲ್ಲಿದ್ದವರೆಲ್ಲರೂ ಸುಟ್ಟು ಕರಕಲಾಗಿದ್ದಾರೆ. ದುರಂತದಲ್ಲಿ ಸಾವನ್ನಪ್ಪಿದವರ ಕಥೆಗಳು ಒಂದೊಂದಾಗಿ ಗೊತ್ತಾಗುತ್ತಿವೆ.ತಮ್ಮ ಪತ್ನಿಯ ಕೊನೆ ಆಸೆ ಈಡೇರಿಸಲು ಆಕೆಯ ಚಿತಾಭಸ್ಮವಿಸರ್ಜನೆಗೆ ಲಂಡನ್ ನಿಂದ ಅಹಮದಾಬಾದ್ ಗೆ(London to Ahamedabad) ಬಂದ ವ್ಯಕ್ತಿಯೋರ್ವರು ತಾವೇ ಸುಟ್ಟು ಬೂದಿಯಾಗಿದ್ದಾರೆ ಎಂಬ ಕಥೆ ಎಂಥವರನ್ನೂ ಭಾವುಕರನ್ನಾಗಿಸುತ್ತೆ. ಗುಜರಾತಿನ (Gujrat) ಅಮೋಲಿ ಜಿಲ್ಲೆಯ ವಾಡಿಯಾ ಗ್ರಾಮದ ಮೂಲದ ಇದೀಗ ಲಂಡನ್ ನಿವಾಸಿಯಾಗಿರುವ ಅರ್ಜುನ್ ಬಾಯ್ ಮನುಭಾಯ್ ಪಟೋಲಿಯಾ ಕೆಲವೇ ದಿನಗಳ ಹಿಂದೆ ಅಹಮದಾಬಾದ ಆಗಮಿಸಿದ್ದರು. ಅವರ ಪತ್ನಿ ಭಾರತಿಬೆನ್ ವಾರದ ಹಿಂದೆ ಲಂಡನ್ನಲ್ಲಿ ನಿಧನರಾಗಿದ್ದರು. ಅವರ ಪೂರ್ವಜರ ಗ್ರಾಮದ ನೀರಿನಲ್ಲಿಯೇ ಅವರ ಚಿತಾಭಸ್ಮವನ್ನು ವಿಸರ್ಜಿಸಬೇಕೆಂಬುದು ಅವರ ಅಂತಿಮ ಆಸೆಯಾಗಿತ್ತು. ಹೀಗಾಗಿ ಅರ್ಜುನ್ ಬಾಯ್ ತಮ್ಮ8 ಮತ್ತು 4 ವರ್ಷದ ಸಣ್ಣ ಹೆಣ್ಣುಮಕ್ಕಳನ್ನು ಲಂಡನ್ನಲ್ಲಿಯೇ ಬಿಟ್ಟು ಅರ್ಜುನ್ ಒಬ್ಬಂಟಿಯಾಗಿ ಭಾರತಕ್ಕೆ ಬಂದಿದ್ದರು. ಹೆಂಡತಿಯ ಅಂತಿಮ…
ಅಸೈಗೋಳಿ : ಮಂಗಳೂರು ತಾಲೂಕಿನ ಕೊಣಾಜೆ ಬಳಿ ಅಸೈಗೋಳಿಯಲ್ಲಿ ಇರುವ ಕ್ಸೇವಿಯರ್ ಐಟಿಐ ಸಂಸ್ಥೆಯಲ್ಲಿ 2025-26 ಶೈಕ್ಷಣಿಕ ಸಾಲಿಗೆ ಪ್ರವೇಶ ಆರಂಭವಾಗಿದೆ. ಹಲವು ಇಂಜಿನಿಯರಿಂಗ್ ತರಬೇತಿ ಹುದ್ದೆಗಳಲ್ಲಿ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳಲಾಗುತ್ತಿದೆ.ಸಂಸ್ಥೆಯಲ್ಲಿ ಕೆಳಕಂಡ ಕೋರ್ಸ್ಗಳನ್ನು ನಡೆಸಲಾಗುತ್ತಿದೆ: ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್, ಮೆಕಾನಿಕ್, ಡೀಸೆಲ್ ಮೆಕಾನಿಕ್, ಎಂ.ಆರ್.ಎ.ಸಿ (ರೆಫ್ರಿಜರೇಷನ್ ಮತ್ತು ಎಸಿ ಮೆಕಾನಿಕ್), ವೆಲ್ಡರ್ ,ಮೆಕಾನಿಕ್ ಮೋಟಾರ್ ವೀಕೆಲ್ (ಎಂ.ಎಂ.ವಿ.) – ಎಸ್ಎಸ್ಎಲ್ಸಿ ಪಾಸ್ ವಿದ್ಯಾರ್ಥಿಗಳಿಗಾಗಿ 2 ವರ್ಷದ ಕೋರ್ಸ್.ಕನಿಷ್ಠ ಅರ್ಹತೆ: ಎಸ್ಎಸ್ಎಲ್ಸಿ ಪಾಸ್ ಅಥವಾ ಪಿಯುಸಿ ಪಾಸ್ / ಫೇಲ್ ಅಭ್ಯರ್ಥಿಗಳು ಅರ್ಹರಾಗಿರುತ್ತಾರೆ.ಹೆಚ್ಚಿನ ಮಾಹಿತಿಗಾಗಿ ಪ್ರಿನ್ಸಿಪಾಲ್ ಅವರನ್ನು ಸಂಪರ್ಕಿಸಬಹುದು. ದೂರವಾಣಿ: 94482 39682
ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ವಾರದ ಹಿಂದಷ್ಟೇ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆ ಎನ್ಐಎ ತನಿಖೆಗೆ ವಹಿಸಿ ಆದೇಶ ಮಾಡಿತ್ತು. ಮಂಗಳೂರು, ಜೂನ್ 14: ಹಿಂದೂ ಸಂಘಟನೆ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗೆ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಮಂಗಳೂರಿಗೆ ಆಗಮಿಸಿದ್ದಾರೆ. ವಾರದ ಹಿಂದಷ್ಟೇ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಇಲಾಖೆ ಎನ್ಐಎ ತನಿಖೆಗೆ ವಹಿಸಿ ಆದೇಶ ಮಾಡಿತ್ತು.ಬೆಂಗಳೂರು ಎನ್ಐಎ ಘಟಕದ ಅಧಿಕಾರಿಗಳು ಮಂಗಳೂರಿಗೆ ಬಂದಿದ್ದು ಹತ್ಯೆ ಪ್ರಕರಣದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಡಿವೈಎಸ್ಪಿ ಪವನ್ ಕುಮಾರ್ ನೇತೃತ್ವದಲ್ಲಿ ಇಬ್ಬರು ಇನ್ಸ್ ಪೆಕ್ಟರ್ ಮತ್ತು ಸಿಬಂದಿಯುಳ್ಳ ಅಧಿಕಾರಿಗಳ ತಂಡ ಮಂಗಳೂರಿಗೆ ಬಂದಿದೆ. ಮಂಗಳೂರು ಸಿಸಿಬಿ ಮತ್ತು ಇತರ ಅಧಿಕಾರಿಗಳಿಂದ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ನಿಷೇಧಿತ ಸಂಘಟನೆ ಪಿಎಫ್ಐ ಕಾರ್ಯಕರ್ತರು ಶಾಮೀಲಾಗಿದ್ದಾರೆಂಬ ಆರೋಪ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಇಲಾಖೆ…
ಕುಂಪಲ : ಇಲ್ಲಿನ ಶ್ರೀ ಬಾಲಕೃಷ್ಣ ಮಂದಿರ 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ 90%ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ್ರತಿಭಾಶಾಲಿ ವಿದ್ಯಾರ್ಥಿಗಳಿಗೆ ‘ಜ್ಞಾನ ದೀವಿಗೆ ಪುರಸ್ಕಾರ’ ನೀಡುವ ಕಾರ್ಯಕ್ರಮ ಜೂನ್ 15, 2025, ಭಾನುವಾರ ಸಂಜೆ 5.30ಕ್ಕೆ ನಡೆಯಲಿದೆ.ಕಾರ್ಯಕ್ರಮವನ್ನು ಶ್ರೀ ಬಾಲಕೃಷ್ಣ ಸಾಂಸ್ಕೃತಿಕ ಭವನದಲ್ಲಿ ನಡೆಸಲಾಗುತ್ತಿದ್ದು, ದೀಪ ಪ್ರಜ್ವಲನೆ ಕಾರ್ಯವನ್ನು ಡಾ. ಕೆ.ಸಿ. ನಾಯ್ಕ (ಆಡಳಿತಾಧಿಕಾರಿಗಳು, ಶಕ್ತಿ ಎಜ್ಯುಕೇಶನ್ ಸೊಸೈಟಿ, ಶಕ್ತಿನಗರ, ಮಂಗಳೂರು) ನೆರವೇರಿಸಲಿದ್ದಾರೆ.ಪ್ರಮುಖ ಅತಿಥಿಯಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಜ್ಞಾನ ದೀವಿಗೆ ಪುರಸ್ಕಾರವನ್ನು ಪ್ರಧಾನ ಮಾಡಲಿದ್ದಾರೆ.ಸಕಾರ್ಯಕ್ರಮದ ಅಧ್ಯಕ್ಷತೆಯನ್ನು ಯಾದವ ಕೋಟ್ಯಾನ್, ಉದ್ಯಮಿ, ಪೆರ್ಮುದೆ, ಮುಖ್ಯ ಅತಿಥಿಗಳಾಗಿ ಜಗದೀಶ್ ಆಳ್ವ, ಅಧ್ಯಕ್ಷರು, ಬಿಜೆಪಿ ಮಂಗಳೂರು ವಿಧಾನಸಭಾ ಕ್ಷೇತ್ರ , ಗಿರೀಶ್ ಉಳ್ಳಾಲ್, ನಿವೃತ್ತ ಬ್ಯಾಂಕ್ ಅಧಿಕಾರಿ, ಕಾಪಿಕಾಡ್,ಚಂದ್ರಶೇಖರ್ ಗಟ್ಟಿ, ಉದ್ಯಮಿ, ಮುಡಿಪು, ರಂಜನ್ ಶೆಟ್ಟಿ, ನಿರ್ದೇಶಕರು, ಕುಡ್ಲ ಚಿಟ್ಸ್ ಪ್ರೈವೇಟ್ ಲಿಮಿಟೆಡ್, ಮಂಗಳೂರು, ಗಂಗಾ ಆನಂದ್, ಅಧ್ಯಕ್ಷರು, ಬ್ರಹ್ಮಶ್ರೀ ಬಿಲ್ಲವ…

