ಮಂಗಳೂರು : ಬಿಜೆಪಿಯ ರಾಜ್ಯ ಮುಖಂಡರು ದ.ಕ.ಜಿಲ್ಲೆಯ ಪೊಲೀಸ್ ಇಲಾಖೆಯ ನೈತಿಕ ಸ್ಥೈರ್ಯ ಕುಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕ ಐವನ್ ಡಿಸೋಜ ಆರೋಪಿಸಿದ್ದಾರೆ. ದ.ಕ.ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರತಿಪಕ್ಷ ನಾಯಕರು, ಬಿಜೆಪಿ ರಾಜ್ಯಾಧ್ಯಕ್ಷರ ಸಹಿತ ಹಲವು ಮುಖಂಡರು ಸೋಮವಾರ ದ.ಕ.ಜಿಲ್ಲೆಗೆ ಆಗಮಿಸಿ ಪೊಲೀಸ್ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ದಾಟಿಯಲ್ಲಿ ಮಾತನಾಡಿದ್ದಾರೆ. ಕಾನೂನು ಪ್ರಕಾರ ಕಾರ್ಯಾಚರಿಸಲು ಪೊಲೀಸರಿಗೆ ಅವಕಾಶ ಕಲ್ಪಿಸುವ ಬದಲು ಬೆದರಿಕೆ ದಾಟಿಯಲ್ಲಿ ಮಾತನಾಡಿರವುದು ಸರಿಯಲ್ಲ ರಾಜ್ಯದಲ್ಲಿ ಸರಕಾರ ಬಿಜೆಪಿ ಇರಲಿ, ಕಾಂಗ್ರೆಸ್ ಇರಲಿ ಪೊಲೀಸ್ ಇಲಾಖೆ ಅವರ ಕೆಲಸ ಮಾಡುತ್ತಾರೆ. ತಮಗೆ ಬೇಕಾದ ಹಾಗೆ ಮಾಡಿಲ್ಲ ಅಂತ ಬಿಜೆಪಿಗರು ತಕರಾರು ತೆಗೆಯುವುದರಲ್ಲಿ ಅರ್ಥವಿಲ್ಲ ಎಂದರು.
Author: UllalaVani
ಚೆನ್ನ ತಮಿಳುನಾಡಿನ ಕೊಡೈಕೆನಾಲ್ ನಲ್ಲಿ ನಿರ್ಜನ ಪ್ರದೇಶದಲ್ಲಿ ನಿಲ್ಲಿಸಿದ್ದ ಕಾರಿನೊಳಗೆ ಯುವ ವೈದ್ಯನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಶರಣಾಗಿರುವ ವೈದ್ಯನನ್ನು ದಿಂಡಿಗಲ್ ಜಿಲ್ಲೆಯ ವೇದಚಂದೂರಿನ ಡಾ. ಜೋಶುವಾ ಸಾಮ್ರಾಜ್ ಎಂದು ಗುರುತಿಸಲಾಗಿದೆ. ಜೋಶುವಾ ಅವರು ವೈದ್ಯಕೀಯ ಪದವಿ ಪೂರ್ಣಗೊಳಿಸಿ ತಮಿಳುನಾಡಿನಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ ಕೆಲಸ ಮಾಡಿದ್ದರು. ಸದ್ಯ ಡಾ. ಜೋಶುವಾ ಸಾಮ್ರಾಜ್ ಸೇಲಂನಲ್ಲಿ ಎಂಡಿ ವ್ಯಾಸಂಗ ಮಾಡುತ್ತಿದ್ದು, ಮಧುರೈನ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ನಾಲ್ಕು ದಿನಗಳ ಹಿಂದೆ ಜೋಶುವಾ ನಾಪತ್ತೆಯಾಗಿದ್ದರು ಎಂದು ಹೇಳಲಾಗಿದೆ. ಈ ಕುರಿತು ಸಂಬಂಧಿಕರು ವೇದಚಂದೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ನಾಪತ್ತೆಯಾದ ವೈದ್ಯನ ವತ್ತೆಗೆ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ನಡೆಸಿದ್ದರು ಆದರೆ ಎಲ್ಲೂ ನಾಪತ್ತೆಯಾದ ವೈದ್ಯನ ಮಾಹಿತಿ ಲಭ್ಯವಾಗಿರಲಿಲ್ಲ ಎಂದು ವರದಿಯಾಗಿದೆ. ಕೊಡೈಕೆನಾಲ್ ನ ಪೊಂಬಕ್ಕೆ ಅರಣ್ಯ ಪ್ರದೇಶದ ಬಳಿ ಕಾರೊಂದು ಮೂರೂ ನಾಲ್ಕು ದಿನಗಳಿಂದ ನಿಂತಿರುವುದು ಕಂಡು ಬಂದಿದ್ದು…
ಮಂಗಳೂರು: ದ.ಕ.ಜಿಲ್ಲೆಯಲ್ಲಿ ಅರಾಜಕತೆ ಸೃಷ್ಟಿಸಲು ಬಿಜೆಪಿ ರಾಜ್ಯ ನಾಯಕರು ಹುನ್ನಾರ ನಡೆಸುತ್ತಿದ್ದು ಇದಕ್ಕೆ ಅಧಿಕಾರಿಗಳ ಸಭೆಯಲ್ಲಿ ಬಿಜೆಪಿಗರು ನಡೆದುಕೊಂಡ ರೀತಿಯೇ ಸಾಕ್ಷಿಯಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಹೇಳಿದ್ದಾರೆ.ದ.ಕ ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಅಶೋಕ್ ನೇತೃತ್ವದ ನಿಯೋಗ ದ.ಕ. ಜಿಲ್ಲೆಗೆ ಆಗಮಿಸಿ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿ ದುಂಡಾವರ್ತನೆ ತೋರಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಜಿಲ್ಲೆಯಲ್ಲಿ ಶಾಂತಿ ನೆಲೆಸುವುದು ಬಿಜೆಪಿಯ ರಾಜ್ಯ ನಾಯಕರಿಗೆ ಬೇಕಾಗಿಲ್ಲ. ಕರಾವಳಿ ಮೂಲಕ ತಮ್ಮ ಓಟ್ ಬ್ಯಾಂಕ್ ಭದ್ರಪಡಿಸಲು ಹೊರಟ ಬಿಜೆಪಿ ರಾಜ್ಯನಾಯಕರು ಕರಾವಳಿಯನ್ನು ಬಲಿಪಶು ಮಾಡುತ್ತಿದ್ದಾರೆ. ಕರಾವಳಿ ಭಾಗದಲ್ಲಿ ಅಶಾಂತಿ ಸೃಷ್ಟಿಸಿ ರಾಜ್ಯದಲ್ಲಿ ಅಧಿಕಾರ ಪಡೆಯಲು ಬಿಜೆಪಿಗರು ಹುನ್ನಾರ ಮಾಡುತ್ತಿದ್ದಾರೆ ಎಂದು ಭಂಡಾರಿ ಆರೋಪಿಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮತ್ತು ಜಿಲ್ಲಾ ಎಸ್ಪಿಡಾ ಅರುಣ್ ಜಿಲ್ಲೆಯ ಕಾನೂನು ಸುವ್ಯವಸ್ಥೆ ನಿಟ್ಟಿನಲ್ಲಿ ತನ್ನದೇ ಶೈಲಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ ಬಿಜೆಪಿ ನಾಯಕರಿಗೆ ಈ…
ಉಪ್ಪಿನಂಗಡಿ: ಕೊಯಿಲದ ನಿವಾಸಿ ಝಮೀರ್ ಕರ್ನಾಟಕ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದು 2 ದಿನಗಳ ಹಿಂದೆ ಆಂಧ್ರಪ್ರದೇಶದ ಮಚಲೀಪಟ್ಟಣದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಬೀಚ್ ಕಬಡ್ಡಿಯಲ್ಲಿ ಆಟವಾಡಿ ಉತ್ತಮ ಪ್ರದರ್ಶನ ತೋರಿದ ಜುಮೀರ್ ಅವರು ಉಪರೆಯ ಎಸ್.ಡಿ.ಎಂ. ಕಾಲೇಜಿನ ದ್ವಿತೀಯ ವರ್ಷದ ಬಿ.ಎ. ತರಗತಿ ವಿದ್ಯಾರ್ಥಿಯಾಗಿದ್ದಾರೆ. ಝಮೀರ್ ಪ್ರಾಥಮಿಕ ಶಿಕ್ಷಣವನ್ನು ಅತೂರು ಬದ್ರಿಯಾ ಸ್ಕೂಲ್, ಪ್ರೌಢ ಶಿಕ್ಷಣವನ್ನು ಕಡಬದ ಜೋಕಿಂ ಪ್ರೌಢ ಶಾಲೆಯಲ್ಲಿ ದ್ವಿತೀಯ ಪಿಯುಸಿಯನ್ನು ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಮಾಡಿದ್ದರು. ಝಮೀರ್ ಕೊಲ ನಿವಾಸಿ ಝಕರಿಯಾ ನೇರೆಂಕಿ ಮತ್ತು ತಾಹಿರಾ ಬಾನು ದಂಪತಿಯ ಪುತ್ರರಾಗಿದ್ದಾರೆ.
ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿರುವ 60 ವಾರ್ಡ್ಗಳ ಎಲ್ಲಾ ಉದ್ದಿಮೆದಾರರು ಕಡ್ಡಾಯವಾಗಿ ಉದ್ದಿಮೆ ಪರವಾನಿಗೆಯನ್ನು ಪಡೆದುಕೊಳ್ಳಬೇಕಾಗಿದೆ. ಆನ್ಲೈನ್ ತಂತ್ರಾಶದ ಮುಖಾಂತರ ಹೊಸ ಉದ್ದಿಮೆದಾರರು ಅರ್ಜಿಯನ್ನು ಸಲ್ಲಿಸಿ ಉದ್ದಿಮೆ ಪರವಾನಿಗೆ ಪಡೆಯುವುದು ಅವಶ್ಯಕವಾಗಿದೆ. ಹಾಗಾಗಿ ಉದ್ದಿಮೆದಾರರು ಈ ಹಿಂದಿನ ಆರ್ಥಿಕ ವಷರ್ದಲ್ಲಿ ಪಡೆದುಕೊಂಡಿರುವ ಉದ್ದಿಮೆ ಪರವಾನಿಗೆ ನವೀಕರಿಸದೆ ಇದ್ದಲ್ಲಿ ಹಿಂದಿನ ಬಾಕಿಯನ್ನು ಹಾಗೂ ನವೀಕರಣ ಶುಲ್ಕವನ್ನು ಆನ್ಲೈನ್ನಲ್ಲಿ ಪಾವತಿಸು ವಂತೆ ಸೂಚಿಸಲಾಗಿದೆ. ತಪ್ಪಿದ್ದಲ್ಲಿ ಪಾಲಿಕೆಯ ಆರೋಗ್ಯ ನಿರೀಕ್ಷಕರು ಸ್ಥಳ ತನಿಖೆ ನಡೆಸಿ ಉದ್ದಿಮೆ ಪರವಾನಿಗೆ ಇಲ್ಲದ ಹಾಗೂ ಈವರೆಗೂ ನವೀಕರಣ ಮಾಡದ ಉದ್ದಿಮೆದಾರರಿಗೆ ನಿಯಾಮಾನುಸಾರ ಹೆಚ್ಚುವರಿ ದಂಡ ವಿಧಿಸಲಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ: 6364016555 ಸಂಪರ್ಕಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಉಳ್ಳಾಲ: ತರಗತಿಯಲ್ಲಿ ಕುಳಿತು ಅಧ್ಯಾಪಕರು ಹೇಳುವ ಪಾಠ ಕೇಳಿದರೆ ಸಾಲದು, ಪ್ರಶ್ನಿಸುವ ಗುಣವೂ ಅಗತ್ಯ. ಸಕಾರಾತ್ಮಕ ಯೋಚನೆಗಳು, ಶಿಕ್ಷಣದ ಜೊತೆ ಆಟೋಟ ಸ್ಪರ್ಧೆಗಳಲ್ಲಿ ತೊಡಗಿಸಿಕೊಂಡಾಗ ಬುದ್ಧಿಮತ್ತೆ ಹೆಚ್ಚಾಗುತ್ತದೆ ಎಂದು ಮಂಗಳೂರು ಮ್ಯಾಪ್ಸ್ ಕಾಲೇಜಿನ ಅಧ್ಯಕ್ಷ ದಿನೇಶ್ ಕುಮಾರ್ ಆಳ್ವ ಅಭಿಪ್ರಾಯಪಟ್ಟರು.ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಅಧೀನದಲ್ಲಿ ಶ್ರೀ ವಿವೇಕಾನಂದ ಆಂಗ್ಲಮಾಧ್ಯಮ ಶಾಲೆಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿದರು.ಮಂಗಳೂರು ತಾ.ಪಂ.ಮಾಜಿ ಸದಸ್ಯ ಮುಹಮ್ಮದ್ ಮುಸ್ತಫಾ ಹರೇಕಳ ಮಾತನಾಡಿ, ಹರೇಕಳ ಅನುದಾನಿತ ಶಾಲೆ ಆರಂಭಗೊಂಡು ನೂರು ವರ್ಷ ದಾಟಿದ್ದರೂ ಪ್ರಸ್ತುತ ದಿನಗಳಲ್ಲಿ ಕನ್ನಡ ಶಾಲೆ ಉಳಿಸಲು ಅನಿವಾರ್ಯ ಎನಿಸಿದ್ದ ಆಂಗ್ಲಮಾಧ್ಯಮ ಆರಂಭ ಶ್ಲಾಘನೀಯ ಎಂದರು.ಅಧ್ಯಕ್ಷತೆ ವಹಿಸಿದ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೆ.ಎನ್.ಆಳ್ವ ಮಾತನಾಡಿ, ಆಂಗ್ಲಭಾಷೆ ಕಲಿಕೆಯಿಂದ ಅಂತಾರಾಷ್ಟ್ರೀಯ ಮಟ್ಟದ ಜ್ಞಾನ ಲಭಿಸಿದರೂ ಈ ಭಾಷೆ ಕಲಿಕೆಗೆ ಮಾತ್ರ ಸೀಮಿತವಾಗಿರಲಿ, ಆದರೆ ಸಂಸ್ಕೃತಿ, ಸಂಸ್ಕಾರ ಕನ್ನಡದ್ದೇ ಇರಲಿ ಎಂದರು.ಕೈಗಾರಿಕೋದ್ಯಮಿ ಅಜಿತ್ ಚೌಟ ದೇವಸ್ಯ ಮತ್ತು ಉದ್ಯಮಿ ಸುರೇಂದ್ರ ಕಂಬಳಿ ಕ್ರೀಡಾ ಕೊಠಡಿ ಉದ್ಘಾಟಿಸಿದರು. ಮಂಗಳೂರು…
ಉಳ್ಳಾಲ : ಮಕ್ಕಳು ಪರೀಕ್ಷೆಗಳಿಗಾಗಿ ಓದದೇ ಬದುಕಿನ ಮೌಲ್ಯಗಳನ್ನು ತಿಳಿದುಕೊಳ್ಳುವ ಮತ್ತು ಜೀವನದಲ್ಲಿ ಅಳವಡಿಸಿಕೊಳ್ಳಲು ನಿರಂತರವಾಗಿ ಅಧ್ಯಯನಶೀಲರಾಗಬೇಕು. ಶಿಕ್ಷಕರು ಕೂಡ ಮಕ್ಕಳಿಗೆ ಮಾನವೀಯ ಮೌಲ್ಯಗಳನ್ನು ಕಲಿಸಲು ಹೆಚ್ಚಿನ ಒತ್ತನ್ನು ಕೊಡಬೇಕಾಗಿದೆ. ಇದರಿಂದ ಮುಂದೆ ಮಕ್ಕಳು ಸಮಾಜದಲ್ಲಿ ಅತ್ಯುತ್ತಮ ಪ್ರಜೆಯಾಗಿ ಮೂಡಿಬರಲು ಸಾಧ್ಯ.ಹಾಗಾಗಿ ಇಂದು ವಿಶ್ವ ವಿದ್ಯಾನಿಲಯ ಸರಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿ, ಮೌಲ್ಯಾಧರಿತ ಶಿಕ್ಷಣವನ್ನು ನೀಡಲು ಪ್ರಯತ್ನಿಸುತ್ತಿದೆ. ಈ ದೃಷ್ಟಿಯಲ್ಲಿ ‘ ಬಾಲವಿಕಾಸ ‘ ಎನ್ನುವ ತರಬೇತಿ ಕಾರ್ಯಾಗಾರ ಒಂದು ಅರ್ಥಪೂರ್ಣವಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವರಾದ ಕೆ.ರಾಜು ಮೊಗವೀರ ಕೆ ಎ ಎಸ್ ಅವರು ಅಭಿಪ್ರಾಯ ಪಟ್ಟರು. ಇವರು ಹರೇಕಳ ಶ್ರೀ ರಾಮಕೃಷ್ಣ ಪ್ರೌಢಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ, ನೆಹರು ಚಿಂತನ ಕೇಂದ್ರದ ವತಿಯಿಂದ ಸರಕಾರಿ ಶಾಲೆಗಳ ದತ್ತು ಸ್ವೀಕೃತ ಯೋಜನೆಗೆ ಒಳಪಡುವ ಶಾಲೆಗಳಿಗೆ ಹತ್ತು ದಿನಗಳ ಕಾಲ ನಡೆಯಲಿರುವ ವಿಷಯಾಧರಿತ ತರಬೇತಿ ಕಾರ್ಯಗಾರ ಬಾಲವಿಕಾಸ 2025ನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ಸಂಚಾಲಕರಾದ ಕಡೆಂಜ ಸೋಮಶೇಖರ್…
ವಿದ್ಯಾರ್ಥಿಗಳು ವೇದಿಕೆಯಲ್ಲಿ ನಿಂತು ಮಾತನಾಡಲು, ಭಾಷಾ ಉಚ್ಛಾರ ಸರಿಪಡಿಸಲು ನಿವೃತ್ತ ಶಿಕ್ಷಕಿಯರ ಪರಿಶ್ರಮ, ನಿರಂತರ ಪ್ರೋತ್ಸಾಹ ಕಾರಣ ಎಂದು ಉಳ್ಳಾಲ ತಾಲೂಕು ಪ್ರಥಮ ಮಕ್ಕಳ ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಫಾತಿಮತ್ ರಫೀದಾ ಹೇಳಿದರು.ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ವತಿಯಿಂದ ಹರೇಕಳ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಿವೃತ್ತ ಶಿಕ್ಷಕರಿಗೆ ನಡೆದ ವಿದಾಯ ಸಮಾರಂಭದಲ್ಲಿ ಮಾತನಾಡಿದರು.ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್ ಮಾತನಾಡಿ, ಶಿಕ್ಷಕಿಯರು ವೃತ್ತಿಯಿಂದ ನಿವೃತ್ತರಾದ ಬಳಿಕ ಮನೆಗೇ ಸೀಮಿತರಾದರೆ ಆರೋಗ್ಯ ಹದಗೆಡುತ್ತದೆ, ಪ್ರತಿದಿನ ಯಾವುದೇ ಸಮಯದಲ್ಲೂ ಶಾಲೆಗೆ ಬಂದು ಕನಿಷ್ಟ ಒಂದು ಗಂಟೆ ಪಾಠ ಮಾಡಿದರೆ ಆರೋಗ್ಯವೂ ಚೆನ್ನಾಗಿರುತ್ತದೆ ಎಂದರು.ಈ ಸಂದರ್ಭ ನಿವೃತ್ತ ಶಿಕ್ಷಕಿಯರಾದ ಸುಮಲತಾ ಸುರೇಂದ್ರ ಕಂಬಳಿ ಮತ್ತು ಲಕ್ಷ್ಮೀ ಶ್ರೀನಿವಾಸ ಮೂರ್ತಿ ಇವರಿಗೆ ಸನ್ಮಾನಿಸಿ ವಿದಾಯ ಕೋರಲಾಯಿತು.ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕೆ.ಎನ್.ಆಳ್ವ ಅಧ್ಯಕ್ಷತೆ ವಹಿಸಿದ್ದರು. ಜಂಟಿ ಶಾಲೆಗಳ ಸಂಚಾಲಕ ಕಡೆಂಜ ಸೋಮಶೇಖರ್ ಚೌಟ, ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಸುರೇಂದ್ರ ಕಂಬಳಿ, ಅನುದಾನಿತ…
ಮಂಗಳೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ) ತನ್ನ ವಿದ್ಯುತ್ ಬಿಲ್ಗಳಲ್ಲಿ ಸೇರಿಸಿರುವ ಹೆಚ್ಚುವರಿ ಭದ್ರತಾ ಠೇವಣಿ (ASD – Additional Security Deposit) ಬಗ್ಗೆ ಗ್ರಾಹಕರಲ್ಲಿ ತೀವ್ರ ಅಕ್ರೋಶ ವ್ಯಕ್ತವಾಗಿದೆ. ಉಳ್ಳಾಲ ತಾಲೂಕಿನ ನಾಟೆಕಲ್ ನಿವಾಸಿ ಇಬ್ರಾಹಿಂ ನಾಟೆಕಲ್ ಸೇರಿದಂತೆ ಹಲವು ಗ್ರಾಹಕರು ಈ ಕ್ರಮವನ್ನು ಖಂಡಿಸಿದ್ದಾರೆ. ಇಬ್ರಾಹಿಂ ನಾಟೆಕಲ್ ತಮ್ಮ ಕೋಪವನ್ನು ವ್ಯಕ್ತಪಡಿಸುತ್ತಾ, “ಗೃಹ ಜ್ಯೋತಿ ಯೋಜನೆಯಂತಹ ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಗ್ರಾಹಕರಿಂದ ಹೆಚ್ಚುವರಿ ಹಣವನ್ನು ಪಡೆಯುವುದು ಅಕ್ಷಮ್ಯ ಅಪರಾಧ. ಇದರಿಂದ ಗ್ರಾಹಕರು ತೀವ್ರ ತೊಂದರೆಗೆ ಸಿಲುಕಿದ್ದಾರೆ,” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಉಳ್ಳಾಲವಾಣಿಯು ಮೆಸ್ಕಾಂನ ಕೇಂದ್ರ ಕಛೇರಿಯನ್ನು ಸಂಪರ್ಕಿಸಿದಾಗ, ಅಧಿಕಾರಿಗಳು ಈ ಕ್ರಮವು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ನಿರ್ದೇಶನದಂತೆ ಜಾರಿಗೆ ತರಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. “ಹಳೆಯ ಭದ್ರತಾ ಠೇವಣಿಯು ಆ ಸಮಯದ ಕಿಲೋವ್ಯಾಟ್ ಶುಲ್ಕಕ್ಕೆ ಸಂಬಂಧಿಸಿದ್ದಾಗಿದೆ. ಆದರೆ, ಈಗಿನ ಹೊಸ ಶುಲ್ಕ ದರದ ಅನುಗುಣವಾಗಿ ಆಯೋಗದ ನಿರ್ದೇಶನದಂತೆ ASDಯನ್ನು ಬಿಲ್ನಲ್ಲಿ ಸೇರಿಸಲಾಗಿದೆ,” ಎಂದು…
ಮಂಗಳೂರು : ಕೇರಳದ ಕೋಯಿಕ್ಕೋಡ್ ಬೇಪೂರ್ ಸಮೀಪ ಸಿಂಗಾಪುರದ ಕಂಟೈನರ್ ಹಡಗು ಎಂ.ವಿ ವಾನ್ ಹಾಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಇನ್ನುಳಿದ 18 ಮಂದಿಯನ್ನು ರಕ್ಷಿಸಿಸಲಾಗಿದ್ದು, ಅವರನ್ನು ಹೊತ್ತ ಭಾರತೀಯ ನೌಕಾಪಡೆಯ ಐಎನ್ಎಸ್ ಸೂರತ್ ಹಡಗು ಸೋಮವಾರ ರಾತ್ರಿ 10:45 ಕ್ಕೆ ಪಣಂಬೂರಿನ ನವಮಂಗಳೂರು ಬಂದರು ಪ್ರಾಧಿಕಾರಕ್ಕೆ (ಎನ್ಎಂಪಿಎ) ಆಗಮಿಸಿದೆ. ಎಂ.ವಿ. ವಾನ್ ಹಾಯ್ 503 ಹಡಗು ಕೊಲೊಂಬೋದಿಂದ ಮುಂಬೈಯ ನ್ಹಾವಾ ಶೇವಾ ಕಂಟೈನರ್ ಟರ್ಮಿನಲ್ಗೆ ಪ್ರಯಾಣಿಸುತ್ತಿತ್ತು. ಆದರೆ ಜೂನ್ 9 ರಂದು ಕೇರಳದ ಬೇಪೂರ್ ಕರಾವಳಿಯಿಂದ ಸುಮಾರು 78 ನಾಟಿಕಲ್ ಮೈಲುಗಳ ದೂರದಲ್ಲಿ ಈ ಹಡಗು ಸಾಗುವ ವೇಳೆ ಸ್ಫೋಟ ಉಂಟಾಗಿತ್ತು. ತಕ್ಷಣ ಭಾರತೀಯ ನೌಕಾಪಡೆಗೆ ಮಾಹಿತಿಯನ್ನು ರವಾನಿಸಲಾಯಿತು. ಕೂಡಲೇ ರಕ್ಷಣಾ ಕಾರ್ಯಾಚರಣೆ ಪ್ರಾರಂಭಿಸಿದ ಭಾರತೀಯ ನೌಕಾಪಡೆಯ ಐಎನ್ಎಸ್ ಸೂರತ್ ಹಡಗು ಹಾಗೂ ಕೋಸ್ಟ್ ಗಾರ್ಡ್ ನ ಮೂರು ನೌಕೆಗಳು ಹಡಗಿನಲ್ಲಿದ್ದ 22 ಸಿಬ್ಬಂದಿಯಲ್ಲಿ 18 ಜನರನ್ನು ರಕ್ಷಣೆ ಮಾಡಿದೆ. ಲೂಯನ್ಲಿ ಮತ್ತು ಸೋನಿಟೂರ್ ಹೆನಿ ಎಂಬ…

