ಬೆಂಗಳೂರು/ರಾಮನಗರ: ಬೆಂಗಳೂರು ಹಾಲು ಒಕ್ಕೂಟವು (ಬಮೂಲ್) ಮಣ್ಣಿನಲ್ಲಿ ಕರಗಬಲ್ಲ ಪ್ಲಾಸ್ಟಿಕ್ನಲ್ಲಿ ಹಾಲಿನ ಉತ್ಪನ್ನಗಳನ್ನು ಗ್ರಾಹಕರಿಗೆ ತಲುಪಿಸುವ ಮೂಲಕ ಪರಿಸರ ಸ್ನೇಹಿ ಹೆಜ್ಜೆ ಇರಿಸಿದೆ. ಸದ್ಯ ಬಳಕೆಯಾಗುತ್ತಿರುವ ಪಾಲಿಥಿನ್ ಪೊಟ್ಟಣಗಳ ಬದಲಿಗೆ ಜೈವಿಕವಾಗಿ ವಿಘಟನೆಯಾಗುವ (ಬಯೋಡಿಗ್ರೇಡೆಬಲ್) ಪ್ಲಾಸ್ಟಿಕ್ ಪೊಟ್ಟಣದಲ್ಲಿ ನಂದಿನಿ ಹಾಲಿನ ಪೂರೈಕೆಯನ್ನು ಬಮೂಲ್ ಆರಂಭಿಸಿದೆ. ಕನಕಪುರ ತಾಲ್ಲೂಕಿನ ಶಿವನಹಳ್ಳಿಯಲ್ಲಿರುವ ಬಮೂಲ್ನ ಮೆಗಾ ಡೇರಿ ಘಟಕವು ಇಂತಹದ್ದೊಂದು ಪ್ರಯೋಗಕ್ಕೆ ಸಾಕ್ಷಿಯಾಗಿದ್ದು, ಇದು ದೇಶದಲ್ಲೇ ಮೊದಲು ಎನಿಸಿದೆ. ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಮಣ್ಣಿನಲ್ಲಿ ಕರಗಲು ಕನಿಷ್ಠ 500 ವರ್ಷ ಬೇಕು. ಆದರೆ, ಬಮೂಲ್ ಬಳಸಲು ಮುಂದಾಗಿರುವ ಬಯೋಡಿಗ್ರೇಡೆಬಲ್ ಪ್ಲಾಸ್ಟಿಕ್ ಕೇವಲ 6 ತಿಂಗಳಲ್ಲಿ ಕರಗಲಿದೆ. ಮಾತ್ರವಲ್ಲ, ಜೈವಿಕ ಗೊಬ್ಬರವಾಗಿ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುತ್ತವೆ ಎಂದು ಬಮೂಲ್ನ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ವಿದೇಶಿ ತಂತ್ರಜ್ಞಾನ : ‘ಪಾಲಿಥಿನ್ ಹಾಲಿನ ಕವರ್ಗಳಿಗೆ ಪರ್ಯಾಯವಾಗಿ ಬಮೂಲ್ ಬಳಸುತ್ತಿರುವ ಬಯೋಡಿಗ್ರೇಡೆಬಲ್ ಪೊಟ್ಟಣಗಳು ವಿದೇಶಿ ತಂತ್ರಜ್ಞಾನ ಆಧರಿಸಿದ್ದು, ಜೋಳದ ಗಂಜಿಯಿಂದ(ಕಾರನ್ ಸ್ಟಾರ್ಚ್) ತಯಾರಾಗಿವೆ. ಸ್ಥಳೀಯ ಕಂಪನಿಯೇ ಕವರ್ಗಳನ್ನು ತಯಾರಿಸಿ ಒದಗಿಸಿದೆ’…
Author: UllalaVani
ಬೆಂಗಳೂರು : ತನ್ನಿಂದ ಅಂತರ ಕಾಪಾಡಿಕೊಳ್ಳಲು ಯತ್ನಿಸಿದ ಗೃಹಿಣಿಯನ್ನು ಯುವಕನೊಬ್ಬ ಹೋಟೆಲ್ಗೆ ಕರೆದೊಯ್ದು 17 ಬಾರಿ ಚಾಕುವಿನಿಂದ ಇರಿದು ಕೊಲೆ ಮಾಡಿದ್ದು, ಆರೋಪಿಯನ್ನು ದಕ್ಷಿಣ ವಿಭಾಗದ ಸುಬ್ರಹ್ಮಣ್ಯಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕೆಂಗೇರಿಯ ಹರಿಣಿ (33) ಕೊಲೆಯಾದ ಮಹಿಳೆ. ಕೃತ್ಯ ಎಸಗಿದ ಆರೋಪದ ಅಡಿ ಟೆಕಿ ಯಶಸ್ (25) ಎಂಬಾತನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಜೂನ್ 7ರಂದು ರಾತ್ರಿ ಠಾಣಾ ವ್ಯಾಪ್ತಿಯ ಪೂರ್ಣಪ್ರಜ್ಞಾ ಲೇಔಟ್ನ ಖಾಸಗಿ ಹೋಟೆಲ್ವೊಂದರಲ್ಲಿ ಆರೋಪಿ ಕೃತ್ಯ ಎಸಗಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದಂತೆ ನಾಟಕವಾಡಿ ಆಸ್ಪತ್ರೆಗೆ ದಾಖಲಾಗಿದ್ದ. ವೈದ್ಯರು ನೀಡಿದ ಮಾಹಿತಿ ಆಧರಿಸಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಗಿದೆ. ‘ಹರಿಣಿ ಅವರು ದಾಸೇಗೌಡ ಎಂಬುವವರನ್ನು 2012ರಲ್ಲಿ ಮದುವೆ ಆಗಿದ್ದರು. ದಂಪತಿ ಕೆಂಗೇರಿಯಲ್ಲಿ ವಾಸವಿದ್ದರು. ದಂಪತಿಗೆ 13 ಹಾಗೂ 10 ವರ್ಷದ ಇಬ್ಬರು ಹೆಣ್ಣು ಮಕ್ಕಳು ಇದ್ದಾರೆ. ಜಾತ್ರೆಯಲ್ಲಿ ಹರಿಣಿ ಅವರು ತಲಘಟ್ಟಪುರದ ನಿವಾಸಿ ಯಶಸ್ಗೆ ಪರಿಚಯವಾಗಿದ್ದರು. ಇಬ್ಬರೂ ಮೊಬೈಲ್ ಸಂಖ್ಯೆಯನ್ನು ಪಡೆದುಕೊಂಡು…
ಪರಿಸರಸ್ನೇಹಿ ಎಂದು ಕರೆಯಲಾಗುತ್ತಿದ್ದ ಅಡಿಕೆ ಹಾಳೆ ತಟ್ಟೆ, ಲೋಟಗಳ ತಯಾರಿಕಾ ಉದ್ಯಮಕ್ಕೆ ಈಗ ಸಂಕಷ್ಟ ಎದುರಾಗಿದೆ. ಅಮೆರಿಕದ ಆಹಾರ ಮತ್ತು ಔಷಧ ಸಂಸ್ಥೆಯು ಅಡಿಕೆ ಹಾಳೆಯಿಂದ ಮಾಡಿದ ತಟ್ಟೆ ಸೇರಿದಂತೆ ಇನ್ನಿತರ ಉತ್ಪನ್ನಗಳ ಆಮದಿಗೆ ನಿರ್ಬಂಧ ವಿಧಿಸಿದೆ. ಇದರಿಂದ ಕರ್ನಾಟಕದ ಕರಾವಳಿ, ಮಲೆನಾಡು ಜಿಲ್ಲೆಗಳ ಸಾವಿರಾರು ರೈತರ ಆದಾಯಕ್ಕೆ ಪೆಟ್ಟು ಬಿದ್ದಿದೆ. ಅಲ್ಲದೇ, ಸಾವಿರಾರು ಸಣ್ಣ ಉದ್ಯಮಿಗಳು, ಕಾರ್ಮಿಕರಿಗೆ ಕೋಟ್ಯಂತರ ರೂಪಾಯಿ ನಷ್ಟ ಉಂಟಾಗುತ್ತಿದೆ. ಇವರೆಲ್ಲರೂ ಈಗ ತಮಗೊದಗಿರುವ ಸಂಕಷ್ಟ ನಿವಾರಣೆಗಾಗಿ ಕೇಂದ್ರ ಸರ್ಕಾರದತ್ತ ನೋಡುತ್ತಿದ್ದಾರೆ. ಏಕಬಳಕೆಯ ಅಡಿಕೆ ಹಾಳೆಯ ತಟ್ಟೆ ಹಾಗೂ ಲೋಟಗಳನ್ನು ಪರಿಸರ ಸಂರಕ್ಷಣೆಯ ದೃಷ್ಟಿಯಿಂದಲೂ, ಜನರ ಆರೋಗ್ಯದ ದೃಷ್ಟಿಯಿಂದಲೂ ಪ್ಲಾಸ್ಟಿಕ್ಗೆ ಅತ್ಯುತ್ತಮ ಪರ್ಯಾಯ ಎಂದೇ ಪರಿಗಣಿಸಲಾಗುತ್ತಿದೆ. ಬಳಸಿ ಬಿಸಾಡಿದ ನಂತರ ಮಣ್ಣಿನಲ್ಲಿ ಕೊಳೆತು ಗೊಬ್ಬರವಾಗುತ್ತಿದ್ದ ಇವುಗಳ ಬಳಕೆ ದೇಶದಲ್ಲಿ ಹೆಚ್ಚುತ್ತಿದ್ದು, ವಿದೇಶಗಳಲ್ಲೂ ಜನಪ್ರಿಯವಾಗಿವೆ. ಕರ್ನಾಟಕದ ದಾವಣಗೆರೆ, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ತುಮಕೂರು ಜಿಲ್ಲೆಗಳ ಸಾವಿರಾರು ಮಂದಿ ಅಡಿಕೆ ಹಾಳೆಗಳಿಂದ ತಟ್ಟೆ, ಲೋಟ, ಬಟ್ಟಲುಗಳನ್ನು ತಯಾರಿಸುವ…
ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಮಡಿಕೇರಿಯ ಲೇಖಕಿ ದೀಪಾ ಭಾಸ್ತಿ ಅವರನ್ನು ಮಂಗಳೂರು ವಿಶ್ವವಿದ್ಯಾನಿಲಯ ಕುಲಪತಿ ಪಿ ಎಲ್ ಧರ್ಮ ಮಡಿಕೇರಿಯ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಿದರು. ಮಡಿಕೇರಿ ನಗರದಲ್ಲಿರುವ ದೀಪಾಭಾಸ್ತಿ ಅವರ ಮನೆಗೆ ಭೇಟಿ ನೀಡಿದ ಕುಲಪತಿ ದೀಪಾ ಭಾಸ್ತಿ ಹಾಗು ಮನೆಯವರೊಡನೆ ಮಾತನಾಡಿ 2004 ರಿಂದ 2006 ರವರೆಗೆ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ವ್ಯಾಸಂಗ ಮಾಡಿದ ದೀಪಾ ಭಾಸ್ತಿ ಅವರು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿರುವುದು ಹೆಮ್ಮೆಯ ವಿಚಾರ. ಕಾಲೇಜಿನ ದಿನಗಳಿಂದಲೂ ಸಾಹಿತ್ಯದ ಆಸಕ್ತಿ ಹೊಂದಿದ್ದ ದೀಪಾ ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡಿದ್ದು ಬಹಳ ವಿಶೇಷವಾದುದು ಎಂದರು. ದೀಪಾ ಭಾಸ್ತಿಯವರ ಸಾಧನೆಗೆ ಸಹಕಾರ ನೀಡಿದ ಪತಿ ಚೆಟ್ಟೀರ ನಾಣಯ್ಯ ಹಾಗೂ ಪೋಷಕರನ್ನು ಇದೇ ಸಂದರ್ಭ ಕುಲಪತಿ ಅಭಿನಂದಿಸಿದರು. ಹಾಗು ಇದೇ ಸಂದರ್ಭದಲ್ಲಿ ದೀಪಾ ಭಾಸ್ತಿಯವರನ್ನು ವಿಶ್ವವಿದ್ಯಾನಿಲಯಕ್ಕೆ ಆಹ್ವಾನಿಸಿದರು. ಫೀಲ್ಡ್ ಮಾರ್ಷಲ್ ಕೆ. ಎಂ. ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ…
ಜಿಲ್ಲಾ ಆರೋಗ್ಯ ಅಧಿಕಾರಿ ದಕ್ಷಿಣ ಕನ್ನಡ (ದ.ಕ.) ಜಿಲ್ಲೆಯಲ್ಲಿ ಮಳೆಗಾಲ ಆರಂಭವಾಗುತ್ತಿದ್ದಂತೆ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಆರೋಗ್ಯ ಅಧಿಕಾರಿಗಳು ಮನವಿ ಮಾಡಿದ್ದಾರೆ. ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಎಚ್.ಆರ್. ತಿಮ್ಮಯ್ಯ ಅವರು ಈ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವಲ್ಲಿ ಸಾರ್ವಜನಿಕ ಜಾಗೃತಿ ಮತ್ತು ಕ್ರಮದ ಮಹತ್ವವನ್ನು ಒತ್ತಿ ಹೇಳಿದರು.ಮೇ ತಿಂಗಳೊಂದರಲ್ಲೇ 10 ದೃಢಪಡಿಸಿದ ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು, ಶಂಕಿತ ಪ್ರಕರಣಗಳು ಹರಡುವ ಲಕ್ಷಣಗಳನ್ನು ತೋರಿಸುತ್ತಿವೆ ಎಂದು ಡಾ. ತಿಮ್ಮಯ್ಯ ವರದಿ ಮಾಡಿದ್ದಾರೆ. ಬೆಳ್ತಂಗಡಿ, ಸುಳ್ಯ ಮತ್ತು ಬಂಟ್ವಾಳದಂತಹ ತಾಲ್ಲೂಕುಗಳಲ್ಲಿ ಪ್ರಸ್ತುತ ಸೋಂಕುಗಳು ಹೆಚ್ಚಾಗುತ್ತಿವೆ ಎಂದು ಅವರು ಗಮನಸೆಳೆದರು.ಈ ವರ್ಷದ ಜನವರಿ ಮತ್ತು ಮೇ ನಡುವೆ, ಜಿಲ್ಲೆಯಲ್ಲಿ 43 ದೃಢಪಡಿಸಿದ ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಹೋಲಿಸಿದರೆ, ಕಳೆದ ವರ್ಷ ಇದೇ ಅವಧಿಯಲ್ಲಿ 534 ಪ್ರಕರಣಗಳು ದಾಖಲಾಗಿವೆ. ಆದಾಗ್ಯೂ, ಇತ್ತೀಚಿನ ನಿರಂತರ ಮಳೆಯಿಂದಾಗಿ ನೀರು ನಿಂತಿದೆ, ಇದು ಡೆಂಗ್ಯೂ ಹರಡುವಿಕೆಯನ್ನು ವೇಗಗೊಳಿಸಿದೆ ಎಂದು ಡಾ. ತಿಮ್ಮಯ್ಯ ಹೇಳಿದರು.…
ಥಾಣೆ: ಮುಂಬೈ: ಮಹಾರಾಷ್ಟ್ರದ ಥಾಣೆ ಬಳಿಯ ದಿವಾದಲ್ಲಿ ಕಿಕ್ಕಿರಿದು ತುಂಬಿದ್ದ ಲೋಕಲ್ ರೈಲಿನಿಂದ ಬಿದ್ದು ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಕಾಲಿಡಲು ಜಾಗವಿಲ್ಲದಷ್ಟು ಕಿಕ್ಕಿರಿದು ತುಂಬಿದ್ದ ರೈಲು ಕಾಸರ ಕಡೆಗೆ ಹೋಗುತ್ತಿದ್ದಾಗ ದಿವಾ ಮತ್ತು ಕೋಪರ್ ರೈಲು ನಿಲ್ದಾಣಗಳ ನಡುವೆ ಈ ಘಟನೆ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ರೈಲಿನ ಬಾಗಿಲಲ್ಲಿ ನಿಂತು ನೇತಾಡುತ್ತಿದ್ದ ಪ್ರಯಾಣಿಕರು: ಪೀಕ್ ಅವರ್ನಲ್ಲಿ ಹೆಚ್ಚಿನ ಪ್ರಯಾಣಿಕರಿಂದ ತುಂಬಿದ ರೈಲಿನಲ್ಲಿ ಅನೇಕ ಜನರು ಬಾಗಿಲುಗಳಲ್ಲಿ ನಿಂತು ನೇತಾಡುತ್ತಿದ್ದರು. ರೈಲು ಚಲಿಸುತ್ತಿದ್ದಂತೆಯೇ 10 ಪ್ರಯಾಣಿಕರು ಕೆಳಗೆ ಬಿದ್ದಿದ್ದಾರೆ. ಈ ಪೈಕಿ ಆರು ಮಂದಿ ಸಾವನ್ನಪ್ಪಿದ್ದು, ಉಳಿದವರು ಗಾಯಗೊಂಡು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಬೆಳಗ್ಗೆ 9.30ರ ಸುಮಾರಿನಲ್ಲಿ ಥಾಣೆಯ ದಿವಾದಲ್ಲಿ ಈ ದುರ್ಘಟನೆ ನಡೆದಿದೆ. ಪ್ರಯಾಣಿಕರು ಸ್ಥಳೀಯ ರೈಲಿನ ಬಾಗಿಲುಗಳ ಮೇಲೆ ನಿಂತಿದ್ದರು. ಮೃತರೆಲ್ಲರೂ 30 ರಿಂದ 35 ವರ್ಷ ವಯಸ್ಸಿನವರು ಎನ್ನಲಾಗಿದೆ. ಪ್ರಯಾಣಿಕರು ತಾವಾಗಿಯೇ ಕೆಳಗೆ ಬಿದ್ದಿದ್ದಾರೆಯೇ ಅಥವಾ ಬ್ಯಾಗ್ಗಳಿಂದಾಗಿ ಅಥವಾ ಯಾರಾದರೂ…
ಕೊಣಾಜೆ: ಯುರೋಪಿಯನ್ ಒಕ್ಕೂಟವು ಭೌಗೋಳಿಕ ಪ್ರದೇಶದಲ್ಲಿ ಚಿಕ್ಕದಾಗಿದ್ದು, ಜಾಗತಿಕ ಜನಸಂಖ್ಯೆಯನ್ನು ಶೇ 5.9% ಹೊಂದಿದ್ದು, ಆರ್ಥಿಕವಾಗಿ ಜಾಗತಿಕ ಮಟ್ಟದಲ್ಲಿ ದ್ವೀತಿಯ ಸ್ಥಾನವನ್ನು ಹೊಂದುವುದರ ಮೂಲಕ ಭಾರತ ಸೇರಿದಂತೆ ಜಾಗತಿಕ ರಾಷ್ಟ್ರಗಳೊಂದಿಗೆ ಉತ್ತಮ ಆರ್ಥಿಕತೆ ಸಹಕಾರ ಮತ್ತು ಸಹಭಾಗಿತ್ವವನ್ನು ಹೊಂದಿದೆ ಎಂದು ಸ್ಪೇನ್ ನ ಮಾಜಿ ಯುರೋಪಿಯನ್ ಪಾರ್ಲಿಮೆಂಟ್ ಸದಸ್ಯರಾದ ಜೋರ್ಡಿ ಸೋಲೆ ಫರ್ನಾಂಡೊ ಅವರು ಹೇಳಿದರು.ಅವರು ಮಂಗಳೂರು ವಿವಿಯ ರಾಜ್ಯಶಾಸ್ತ್ರ ವಿಭಾಗದಲ್ಲಿ “ಭೌಗೋಳಿಕ ರಾಜಕೀಯ ವ್ಯವಸ್ಥೆಯಲ್ಲಿ ಯುರೋಪಿಯನ್ ಒಕ್ಕೂಟದ ಕ್ರಮ, ಸವಾಲುಗಳು, ಕಾರ್ಯತಂತ್ರಗಳು’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಿದರು.ಯುರೋಪಿಯನ್ ಒಕ್ಕೂಟವು ಜಾಗತಿಕ ಮಟ್ಟದಲ್ಲಿ ಶಾಂತಿ ನೆಲೆಸುವಂತೆ ಸಂಘರ್ಷ ನಿವಾರಣೆಗೆ ಸಾಮಾನ್ಯ ವಿದೇಶಾಂಗ ಮತ್ತು ಭದ್ರತಾ ನೀತಿಯನ್ನು ರೂಪಿಸಿಕೊಂಡಿದೆ. ಇದರ ಮೂಲಕ ಯುರೋಪಿಯನ್ ಒಕ್ಕೂಟವು ಜಾಗತಿಕ ಮಟ್ಟದಲ್ಲಾಗುವ ಸಂಘರ್ಷಗಳನ್ನು ತಡೆದು ಶಾಂತಿಯನ್ನು ರೂಪಿಸುವುದರ ಮೂಲಕ ಮಾನವೀಯ ನೆರವನ್ನು ನೀಡುತ್ತಿದೆ. ಪ್ರಸ್ತುತದಲ್ಲಿ ಯುರೋಪಿಯನ್ ಒಕ್ಕೂಟವು 24 ಮಿಲಿಟರಿ ಮತ್ತು ನಾಗರಿಕ ಕಾರ್ಯಚರಣೆಯಲ್ಲಿ ತೊಡಗಿಸಿಕೊಂಡಿದ್ದು ಜಾಗತಿಕ ಮಟ್ಟದಲ್ಲಿ ಒಂದು ಮೌಲ್ಯಧಾರಿತ ಸಂಘಟನೆಯಾಗಿ ಹೊರಹೊಮ್ಮಿದೆ…
ಉಳ್ಳಾಲ ದರ್ಗಾ ದ ನಿಕಟಪೂರ್ವ ಅಧ್ಯಕ್ಷ ಅಬ್ದುಲ್ ರಶೀದ್ ಹಾಜಿಯವರ ಸಹೋದರ ಆಗಿದ್ದ ಅವರು ಮೀನು ವ್ಯಾಪಾರ ಮಾಡುತ್ತಿದ್ದರುಮೃತರು ಪತ್ನಿ ಮತ್ತು ಐದು ಗಂಡು-ಒಬ್ಬಳು ಪುತ್ರಿ ಸಹಿತ ಅಪಾರ ಬಂಧು -ಬಳಗವನ್ನು ಅಗಲಿದ್ದಾರೆ.ಅವರ ನಿಧನಕ್ಕೆ ಕಾಂಗ್ರೆಸ್ ರಾಜ್ಯ ಸಂಯೋಜಕ ಫಾರೂಕ್ ಉಳ್ಳಾಲ್, ಉದ್ಯಮಿಗಳಾದ ಮುಹಮ್ಮದ್ ತ್ವಾಹ ಹಾಜಿ, ಯು.ಕೆ. ಇಲ್ಯಾಸ್, ಕಬೀರ್ ಚಾಯಬ್ಬ ಮುಹಿಯುದ್ದೀನ್ ಹಾಜಿ ಪೇಟೆ ಸಂತಾಪ ಸೂಚಿಸಿದ್ದಾರೆ.
ಮಂಗಳೂರು : ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ)ಗೆ ವಹಿಸಿರುವುದಕ್ಕೆ ದ.ಕ. ಸಂಸದ ಬ್ರಿಜೇಶ್ ಚೌಟ ಸ್ವಾಗತಿಸಿದ್ದಾರೆ. ಸುಹಾಸ್ ಶೆಟ್ಟಿಯನ್ನು ಬಜೆಯಲ್ಲಿ ದುಷ್ಕರ್ಮಿಗಳು ಹತ್ಯೆ ಮಾಡಿದ್ದ ಬೆನ್ನಲ್ಲೇ ಅಂದರೆ ಮೇ 2ರಂದು ಚೌಟ ಅವರು ಈ ಪ್ರಕರಣ ಅತ್ಯಂತ ಗಂಭೀರವಾಗಿದ್ದು ಅದನ್ನು ಎನ್ಐಎ ಸಂಸ್ಥೆಗೆ ವಹಿಸುವಂತೆ ಕೋರಿ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಸುಹಾಸ್ ಶೆಟ್ಟಿ ಹತ್ಯೆಯ ಗಂಭೀರತೆ ಹಾಗೂ ಅದರ ಹಿಂದೆ ನಿಷೇಧಿತ ಪಿಎಫ್ಐ ಸಂಘಟನೆಯ ಕೈವಾಡವಿರುವ ಅನುಮಾನ ಇದೆ ಎಂದು ಹೇಳಿದ್ದರು ಸುಹಾಸ್ ಹತ್ಯೆ ಪ್ರಕರಣವನ್ನು ಎನ್ಐಎಗೆ ವಹಿಸಿರುವುದಕ್ಕೆ ಪ್ರತಿಕ್ರಿಯಿಸಿರುವ ಚೌಟ ಅವರು, ಸುಹಾಸ್ ಶೆಟ್ಟಿ ಹತ್ಯೆಯಾದ ಬೆನ್ನಲ್ಲೇ ಈ ಪ್ರಕರಣವನ್ನು ಎನ್ಐಎ ತನಿಖಾ ಸಂಸ್ಥೆಗೇ ವಹಿಸಬೇಕೆಂದು ನಾನು ಒತ್ತಾಯಿಸಿದ್ದೆ ಆ ಕೂಡಲೇ ಗೃಹ ಸಚಿವರಾದ ಅಮಿತ ಷಾ ಅವರಿಗೂ ಪತ್ರ ಬರೆದು, ಸುಹಾಸ್ ಹತ್ಯೆಯಲ್ಲಿ ಕೇವಲ ಅಪರಾಧಿಗಳು ಮಾತ್ರವಲ್ಲದೆ ಅವರಿಗೆ ಬೆಂಬಲ…
ಬಂಟ್ವಾಳ: ಮೇ 1ರಂದು ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎಗೆ ವಹಿಸಿದ್ದು, ನಮಗೆ ತುಂಬಾ ಸಮಾಧಾನ ತಂದಿದೆ. ಇದಕ್ಕಾಗಿ ಇಡೀ ಮೋದಿ ಸರ್ಕಾರಕ್ಕೆ ಧನ್ಯವಾದ ಹೇಳುತ್ತೇನೆ ಎಂದು ಸುಹಾಸ್ ಶೆಟ್ಟಿ ತಂದೆ ಮೋಹನ್ ಶೆಟ್ಟಿ ತಿಳಿಸಿದ್ದಾರೆ.ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯ ಎನ್ಐಎ ತನಿಖೆಗೆ ವಹಿಸಿರುವುದರ ಕುರಿತು ಮಾತನಾಡಿದ ಅವರು, ಹಿಂದೂ ಸಮಾಜಕ್ಕೆ ತನ್ನ ಇಡೀ ಜೀವನ ಸವೆಸಿದ ಮಗ ಸುಹಾಸ್ ಶೆಟ್ಟಿ ಸಾವಿನ ಬಗ್ಗೆ ಎನ್ಐಎ ತನಿಖೆಯಲ್ಲಿ ನ್ಯಾಯ ಸಿಗಲಿದೆ ಅಂತ ಎನ್ಐಎಗೆ ಕೊಡಲು ಹೋರಾಟ ಮಾಡಿದ್ದೆವು. ಬಿಜೆಪಿ ರಾಜ್ಯಾಧ್ಯಕ್ಷರು, ಸಂಸದರು, ಶಾಸಕರು, ಹಿಂದೂ ಸಂಘಟನೆಗಳು, ಮಾತ್ರವಲ್ಲದೆ ನಮ್ಮ ಗ್ರಾಮದ ಬಿಜೆಪಿನಾಯಕರೂ ನಮಗೆ ಸಹಕಾರ ನೀಡಿದ್ದರು. ಬೆಂಗಳೂರಿಗೆ ಹೋಗಿ ರಾಜ್ಯಪಾಲರಿಗೂ ಮನವಿ ಸಲ್ಲಿಸಿದ್ದೇವೆ, ಕೇಂದ್ರ ಸರ್ಕಾರ ನಮ್ಮ ನಿರೀಕ್ಷೆಯನ್ನು ನಿಜ ಮಾಡಿದೆ. ಇದಕ್ಕಾಗಿ ನಾವು ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸುತ್ತೇವೆ ಎಂದರು.

