Author: UllalaVani

Kannada News From Coastal Karnataka

ಕೊಣಾಜೆ: ನಾವು ಕರಾವಳಿಯಲ್ಲಿ ದ್ವೇಷ ಬಿತ್ತುವುದು ಬೇಡ. ಬೆಂಕಿ ಹಚ್ಚೋದೂ ಬೇಡ. ಮನುಷ್ಯ ಪ್ರೀತಿಯ ದೀಪ ಹಚ್ಚೋಣ. ಬಹುತ್ವದ ಈ ಮಣ್ಣಿನಲ್ಲಿ ನಾಡಿಗೆ ಹೊಸ ಸಂವೇದನೆಯನ್ನು ದಾಟಿಸಬಲ್ಲ ಶಕ್ತಿಯಿದೆ. ಪರಸ್ಪರ ಗೌರವ ಪ್ರೀತಿಗೆ ಬದ್ಧವಾದ ಸಮಾಜವನ್ನು ಕಟ್ಟೋಣ ಎಂದು ಪಂಪ ಪ್ರಶಸ್ತಿ ಪುರಸ್ಕೃತ ವಿದ್ವಾಂಸ ಪ್ರೊ. ಬಿ.ಎ. ವಿವೇಕ ರೈ ಹೇಳಿದರು. ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ, ವಿಭಾಗದ ಅಧ್ಯಕ್ಷರಾಗಿ ಬಳಿಕ ಹಂಪಿ ಕನ್ನಡ ವಿಶ್ವವಿದ್ಯಾಲಯ ಹಾಗೂ ಮೈಸೂರಿನ ಕರ್ನಾಟಕ ಮುಕ್ತ ವಿಶ್ವವಿದ್ಯಾನಿಲಯಗಳ ಕುಲಪತಿಗಳಾಗಿ ಸೇವೆ ಸಲ್ಲಿಸಿದ ವಿದ್ವಾಂಸ ಪ್ರೊ. ಬಿ.ಎ ವಿವೇಕ ರೈ ಅವರಿಗೆ ಕರ್ನಾಟಕ ಸರಕಾರ ನೀಡುವ ಪ್ರತಿಷ್ಠಿತ ಪಂಪ ಪ್ರಶಸ್ತಿ ದೊರಕಿದ ಪ್ರಯುಕ್ತ ಬುಧವಾರ ಮಂಗಳೂರು ವಿವಿಯಲ್ಲಿ ನಡೆದ ಅಭಿವಂದನ ಸಮಾರಂಭದಲ್ಲಿ ಗೌರವ ಸ್ವೀಕರಿಸಿ ಅವರು ಮಾತನಾಡಿದರು. ವಿಶ್ವವಿದ್ಯಾನಿಲಯಗಳನ್ನು ಕಟ್ಟಡ, ಹಣದಿಂದ ಕಟ್ಟಲು ಸಾಧ್ಯವಿಲ್ಲ. ಶೈಕ್ಷಣಿಕ ಕಾಳಜಿ, ಜ್ಞಾನದ ಬಗೆಗಿನ ಹಸಿವು ಮತ್ತು ಮಾನವೀಯ ಸಂಬಂಧಗಳ ಸಂಘಟಿತ ಪ್ರಯತ್ನದ ಮೂಲಕ ಕಟ್ಟಬೇಕು ಎಂದು ಹೇಳಿದರು.ಕುವೆಂಪು ಮತ್ತು…

Read More

ಉಳ್ಳಾಲ : ಯು.ಟಿ.ಎಂ ಚಾರಿಟೇಬಲ್ ಟ್ರಸ್ಟ್ ಉಳ್ಳಾಲ ಇದರ ವತಿಯಿಂದ ಯತೀಮ್, ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಪುಸ್ತಕ ವಿತರಣಾ ಸಮಾರಂಭ ಇತ್ತೀಚೆಗೆ ಉಳ್ಳಾಲದ ಟ್ರಸ್ಟ್ ನ ಕಛೇರಿಯಲ್ಲಿ ನಡೆಯಿತು. ಟ್ರಸ್ಟಿನ ಅಧ್ಯಕ್ಷ ಹಾಜಿ ಫಾರೂಕ್ ಅಬ್ಬಾಸ್ ಉಳ್ಳಾಲ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ ಸದಸ್ಯರಾದ ಅಬ್ದುಲ್ ಖಾದರ್ ಸಾದಾತ್ ಉಳ್ಳಾಲ ಉದ್ಘಾಟಿಸಿದರು. ಹಾಜಿ ಫಾರೂಕ್ ಅಬ್ಬಾಸ್ ಮಾತನಾಡಿ ಶುಭ ಹಾರೈಸಿದರು.ಈ ಕಾರ್ಯಕ್ರಮದಲ್ಲಿ ಕೋಶಾಧಿಕಾರಿ ಬಶೀರ್ ಉಳ್ಳಾಲ, ಸದಸ್ಯರಾದ ಆರಿಫ್ ಡಿ.ಎಂ, ಉಪಸ್ಥಿತರಿದ್ದರು. ಕಾರ್ಯದರ್ಶಿ ಮೊಯ್ದಿನ್ ಹಾಜಿ ಮೊಂಟೆಪದವು ಸ್ವಾಗತಿಸಿದರು. ಶರೀಫ್ ಕೋಟಪುರ ವಂದಿಸಿದರು

Read More

ಮಂಗಳೂರು: ದೇಶದ ಪ್ರತಿಷ್ಠಿತ IIT, IIST, IISc ನಂತಹ ಸಂಸ್ಥೆಗಳಲ್ಲಿ ಬಿ.ಟೆಕ್ (B.Tech) ಪದವಿ ಪ್ರವೇಶಕ್ಕೆ ನಡೆಯುವ ರಾಷ್ಟ್ರಮಟ್ಟದ ಅತೀ ಕಠಿಣವಾದ ಜೆ.ಇ.ಇ (JEE) ಅಡ್ವಾನ್ಸ್ಡ್‌ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್‌ನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಸಾಧಿಸಿದ್ದಾರೆ.ವಿದ್ಯಾರ್ಥಿಗಳಾದ ಚೇತನ್ ಗೌಡ ಎನ್ ಎಸ್ ಸಾಮಾನ್ಯ ವಿಭಾಗದಲ್ಲಿ 3420 (OBC ವರ್ಗದಲ್ಲಿ 639)ನೇ ರ‍್ಯಾಂಕ್‌ , ತೇಜಸ್ ವಿ ನಾಯಕ್ ಸಾಮಾನ್ಯ ವಿಭಾಗದಲ್ಲಿ 7773(OBC ವರ್ಗದಲ್ಲಿ 1661)ನೇ ರ‍್ಯಾಂಕ್‌, ಸಾನಿಕ ಕೆ ಎನ್ ಸಾಮಾನ್ಯ ವಿಭಾಗದಲ್ಲಿ 9701, ಮೋಹಿತ್ ಎಂ ಸಾಮಾನ್ಯ ವಿಭಾಗದಲ್ಲಿ 17504 (ST ವರ್ಗದಲ್ಲಿ 143)ನೇ ರ‍್ಯಾಂಕ್‌, ಎಂ ಮಂಜುನಾಥ್ ಸಾಮಾನ್ಯ ವಿಭಾಗದಲ್ಲಿ 20743ನೇ ರ‍್ಯಾಂಕ್‌ . ಸಾಚಿ ಶಿವಕುಮಾರ್ ಕಡಿ 24728ನೇ ರ‍್ಯಾಂಕ್‌ , ಶ್ರೀರಕ್ಷಾ 28163ನೇ ರ‍್ಯಾಂಕ್‌ , ಯೋಗೇಶ್ ದೀಪಕ್ ನಾಯಕ್ ಸಾಮಾನ್ಯ ವಿಭಾಗದಲ್ಲಿ 31133 (OBC ವರ್ಗದಲ್ಲಿ 8989)ನೇ ರ‍್ಯಾಂಕ್‌ , ಹರ್ಷಿತ್ ರಾಜು ಹೆಚ್ ಎಂ ಸಾಮಾನ್ಯ ವಿಭಾಗದಲ್ಲಿ 31140ನೇ ರ‍್ಯಾಂಕ್‌ , ಪ್ರೀತಿ…

Read More

ಉಳ್ಳಾಲ ವಲಯ ಬಂಟರ ಸಂಘ ಬೆಳ್ಮ ಗ್ರಾಮದ ನೂತನ ಅಧ್ಯಕ್ಷರಾಗಿ ವಿಶ್ವನಾಥ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಸಂಘದ ಗೌರವಾಧ್ಯಕ್ಷರಾಗಿ ಅಶೋಕ್ ರೈ ಬರಿಕೆ ಹಾಗೂ ಪ್ರಧಾನ ಕರ‍್ಯರ‍್ಶಿಯಾಗಿ ಅನಿಲ್ ಪ್ರಸಾದ್ ಬೆಳ್ಮ ಹೊಸಮನೆ ಆಯ್ಕೆಯಾಗಿದ್ದಾರೆ.

Read More

ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನೀರುಮಾರ್ಗ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ನೀರುಮಾರ್ಗ ಶಾಖೆಯಲ್ಲಿ ಜರುಗಿತು. ಕಾರ್ಯಕ್ರಮವನ್ನು ಸಂಘದ ಸದಸ್ಯರುಗಳಾದ ಪುಟ್ಟಸ್ವಾಮಿ ಎಚ್, ಸತೀಶ್ ಕಂಪ, ಲಕ್ಷಣ ಪೂಜಾರಿ, ಲವೀನ ಪಿರೇರ ಹಾಗೂ ಶಶಿಪ್ರಭ ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ರವರು ಮಾತನಾಡಿ “ಠೇವಣಿ ಸಂಗ್ರಹಣೆಯೊಂದಿಗೆ ಸಾಲ ವಸೂಲಾತಿ ಕ್ರಮವು ಸರಿಯಾದ ಪ್ರಮಾಣದಲ್ಲಿ ಆದಾಗ ಮಾತ್ರ ಸಂಘದ ಬೆಳವಣಿಗೆ ಸಾಧ್ಯ , ಸಿಬ್ಬಂದಿ ವರ್ಗ, ಗ್ರಾಹಕರ ಸಹಕಾರದೊಂದಿಗೆ ಪ್ರತಿ ವರ್ಷದಂತೆ ಈ ವರ್ಷವೂ ಸಂಘವು ಹೆಚ್ಚಿನ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗಿದೆ. ಅಗತ್ಯ ಸಂದರ್ಭಗಳಲ್ಲಿ ಹಿರಿಯ ನಾಗರಿಕ ಸದಸ್ಯರ ಮನೆಗೆ ಭೇಟಿ ನೀಡಿ ಸೇವೆ ನೀಡುತ್ತಿದ್ದೇವೆ. ಈಗಾಗಲೇ ಸಂಘದ ಸದಸ್ಯರಿಗೆ ಹಬ್ಬದ ಕೊಡುಗೆಯಾಗಿ 1000 ದಿನಗಳ ಠೇವಣಿಗಳಿಗೆ ವಿಶೇಷ ಬಡ್ಡಿ ದರ ಶೇ. 10.50…

Read More

ತೊಕೊಟ್ಟು: “Unfolding Minds” ಎಂಬ ಧ್ಯೇಯವಾಕ್ಯದಡಿ ಕಾರ್ಯನಿರ್ವಹಿಸುತ್ತಿರುವ ಪ್ಲೇ ಎನ್ ಲರ್ನ್ ಪ್ರಿ-ಸ್ಕೂಲ್ 2025–26ನೇ ಶೈಕ್ಷಣಿಕ ಸಾಲಿನ ಪ್ರವೇಶ ಪ್ರಕ್ರಿಯೆ ಆರಂಭಿಸಿದೆ. ಆಟದ ಮೂಲಕ ಕಲಿಕೆಗೆ ಒತ್ತು ನೀಡುವ ಈ ಸಂಸ್ಥೆಯಲ್ಲಿ ನರ್ಸರಿ, ಎಲ್‌ಕೆಜಿ, ಯುಕೆಜಿ ಹಾಗೂ ಪ್ರಥಮ ತರಗತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕಾರ್ಯನಿರತ ಪೋಷಕರಿಗಾಗಿ ಡೇ ಕೇರ್ ಸೌಲಭ್ಯವೂ ಲಭ್ಯವಿದೆ.ನಿಯಮಿತ ಪಠ್ಯಕ್ರಮದ ಜೊತೆಗೆ ಅರೇಬಿಕ್ ಹಾಗೂ ಮೌಲ್ಯ ಶಿಕ್ಷಣ ತರಗತಿಗಳೂ ಇಲ್ಲಿ ಕಲಿಸಲಾಗುತ್ತವೆ. ಡಿಜಿಟಲ್ ಪಾಠಶಾಲೆಯ ಭಾಗವಾಗಿ “ ಆನ್‌ಲೈನ್ ಕ್ಲಾಸ್” ಇಲ್ಲಿ ಆರಂಭಿಸಲಾಗಿದೆ.ಈ ಶಾಲೆಯ ಸಾರಿಗೆ ವ್ಯವಸ್ಥೆ ತೊಕ್ಕೊಟ್ಟು, ಕಲ್ಲಾಪು, ಕುತ್ತಾರ್, ದೇರಳಕಟ್ಟೆ, ಉಳ್ಳಾಲ, ಕಾಪಿಕಾಡು, ಕುಂಪಲ ಹಾಗೂ ಕೆ.ಸಿ.ರೋಡ್ ಸೇರಿದಂತೆ ಪ್ರಮುಖ ಪ್ರದೇಶಗಳನ್ನು ಒಳಗೊಂಡಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 74117 26770 | 98451 75743 ತೊಕ್ಕೊಟ್ಟು, ಗಾರ್ಡನ್ ಸಿಟಿಯ ಗ್ರೌಂಡ್ ಫ್ಲೋರ್ Admissions Open at Play ‘N’ Learn Pre-School for 2025–26 Thokkottu: Play ‘N’ Learn Pre-School, operating under the motto “Unfolding Minds,” has announced that…

Read More

ಕೋಟೆಕಾರು, : ಜಿಲ್ಲೆಯ ಪಶ್ಚಿಮ ಭಾಗದ ಪ್ರಸಿದ್ಧ ದೈವಸ್ಥಾನ ಶ್ರೀ ಕೊಂಡಾಣ ಪಿಲಿಚಾಮುಂಡಿ ಬಂಟ ವೈದ್ಯನಾಥ ದೈವಸ್ಥಾನದಲ್ಲಿ, ಮೇ 22 ಮತ್ತು 23ರಂದು ಆಯೋಜಿತವಾದ ವರ್ಷಾವಧಿ ಕಡೇಯ ಬಂಡಿ ಜಾತ್ರಾ ಮಹೋತ್ಸವ ವಿಜೃಂಭಣೆಯಿಂದ ನೆರವೇರಿತು. ನೂತನ ಆಡಳಿತ ಸಮಿತಿಯ ಮುಂಚೂಣಿಯಲ್ಲಿ ನಡೆದ ಈ ಬಾರಿಯ ಜಾತ್ರೆ, ಭಕ್ತರ ಭರವಸೆಗೂ, ನೂತನ ಸಮಿತಿಯ ನಿರ್ವಹಣಾ ಶೈಲಿಗೂ ಉತ್ತಮ ಮಾದರಿಯಾಯಿತು. ವ್ಯವಸ್ಥಾಪನಾ ಸಮಿತಿಯ ನೂತನ ಅಧ್ಯಕ್ಷ ಹರ್ಷರಾಜ್ ಮುದ್ಯ ಅವರ ನೇತೃತ್ವದಲ್ಲಿ ದೈವದ ಕಾರಣೀಕದಂತೆ ದಕ್ಷಿಣ ಕನ್ನಡ ಜಿಲ್ಲೆಯ ಕಡೇಯ ಬಂಡಿ ಅದ್ಧೂರಿಯಿಂದ ಜರಗಿತು. ಸಮಿತಿಯ ಸದಸ್ಯರಾದ ರಾಜೇಶ್ ರೈ ಕೋಟೆಕಾರುಗುತ್ತು, ಪ್ರಸಾದ್ ರೈ ಮಡ್ಯಾರ್, ವಿಶ್ವನಾಥ್ ಕುಲಾಲ್ ನಡಾರ್, ನಾರಾಯಣ ಪೂಜಾರಿ ಭೂತಹಿತ್ಲು, ಸುಭಾಷ್ ಶೆಟ್ಟಿ ಕೋಟೆಕಾರು, ಮೀರಾ ಸುಕುಮಾರ್ ಗಟ್ಟಿ ಮಾಡೂರು, ಚಾಂದಿನಿ ಮಾಡೂರು ಹಾಗೂ ಕೃಷ್ಣ ನಡಾರ್ ಅವರೂ ತಮ್ಮ ಕೈಜೋಡಿಸಿ, ಅತ್ಯಂತ ಜವಾಬ್ದಾರಿಯುತವಾಗಿ ಭಕ್ತಾಧಿಗಳನ್ನು ನಿರ್ವಹಿಸಿದರು. ಜಾತ್ರಾ ದಿನಗಳಲ್ಲಿ ಸತತವಾಗಿ ಸುರಿದ ಮಳೆಯ ನಡುವೆಯೂ ಭಕ್ತರ ದಂಡೇ ಆಗಮಿಸಿದ್ದು,…

Read More

ಉಳ್ಳಾಲ ವಲಯ ಬಂಟರ ಸಂಘ ಕೋಟೆಕಾರು ಗ್ರಾಮದ ನೂತನ ಅಧ್ಯಕ್ಷರಾಗಿ ಪ್ರವೀಣ್ ಕುಮಾರ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಸಂಘದ ಗೌರವಾಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಕೆಳಗಿನ ಕೋಟೆಕಾರು ಹಾಗೂಕಾರ್ಯದರ್ಶಿಯಾಗಿ ಪ್ರಕಾಶ್ ಭಂಡಾರಿಯವರು ಆಯ್ಕೆಯಾಗಿದ್ದಾರೆ.

Read More

ಉಳ್ಳಾಲ : ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಮೋಟೆಪದವು ಸಮೀಪ ಮಹಿಳೆಯೊಬ್ಬರ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೇಯಾಗಿದ್ದು,. ಸೊಂಟಕ್ಕೆ ಕಲ್ಲು ಕಟ್ಟಿರುವ ಸ್ಥಿತಿಯಲ್ಲಿ ಶವ ಸಿಕ್ಕಿರುವುದರಿಂದ ಕೊಲೆ ಶಂಕೆ ವ್ಯಕ್ತವಾಗಿದೆ.ಸಕಲೇಶಪುರ ಮೂಲದ ಸುಂದರಿ (35) ಎಂಬವರ ಮೃತದೇಹ ಪತ್ತೆ ಯಾಗಿದೆ. ಕಳೆದ ಒಂದೂವರೇ ವರ್ಷಗಳಿಂದ ಮನೆ ಮನೆ ಕೆಲಸಕಕ್ಕೆ ತೆರಳಿ ಜೀವನ ನಿರ್ವಹಿಸುತ್ತಿದ್ದ ಈಕೆ ಮನೆ ಯಲ್ಲಿ ಒಂಟಿಯಾಗಿದ್ದರು. ಇದೀಗ ಆಕೆಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ವಾರದ ಹಿಂದೆ ಕೊಲೆ ನಡೆಸಿರುವ ಸಾಧ್ಯತೆ ಇದ್ದು,. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸೊಂಟಕ್ಕೆ ಕೆಂಪು ಕಲ್ಲನ್ನು ಕಟ್ಟಲಾಗಿದ್ದು ಕಿರುಕುಳ ನೀಡಿ ಕೊಲೆ ನಡೆಸಿರುವ ಸಾಧ್ಯತೆಗಳಿವೆ. ಕೊಣಾಜೆ ಪೋಲೀಸರು ಸ್ಥಳದಲ್ಲಿ ತನಿಖೆ ಆರಂಭಿಸಿದ್ದಾರೆ.

Read More

ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ಜೂ. 1 ರಂದು ಭಾನುವಾರ ಅಡ್ಯಾರ್ ಗಾರ್ಡನ್ ಯಕ್ಷಧ್ರುವ ಪಟ್ಲ ಸಂಭ್ರಮ -೨೦೨೫ ರಾಷ್ಟ್ರೀಯ ಕಲಾ ಸಮ್ಮೇಳನ ನಡೆಯಲಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲಗುತ್ತು ಸತೀಶ್ ಶೆಟ್ಟಿ ಹೇಳಿದ್ದಾರೆ.ಬೆಳಿಗ್ಗೆ 9.30 ರಿಂದ ರಾತ್ರಿ 11 ರ ವರೆಗೆ ಸಮ್ಮೇಳನ ನಡೆಯಲಿದ್ದು, ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದರು ಆಶೀರ್ವವಚನ ನೀಡಲಿದ್ದಾರೆ. ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಭಾಧ್ಯಕ್ಷತೆಯನ್ನು ಶಶಿ ಕೇಟರರ್ಸ್ ಹೊಟೇಲ್ ಕಾಶಿ ಪ್ಯಾಲೇಸ್ ನ ಮಾಲಕ, ಉದ್ಯಮಿ ಶಶಿಧರ ಬಿ ಶೆಟ್ಟಿ ವಹಿಸಲಿದ್ದಾರೆ.ಬೆಳಿಗ್ಗೆ 11 ಗಂಟೆಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ ಎಂ ಮೋಹನ್ ಆಳ್ವರವರ ಉಪಸ್ಥಿತಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ರಾಷ್ಟ್ರೀಯ ಕಲಾ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.ಡಾ. ಮೋಹನ್ ಆಳ್ವರವರ ನಿರ್ದೇಶನ ಮತ್ತು ಸಂಯೋಜನೆಯಲ್ಲಿ ಭಾರತದ 8 ಶಾಸ್ತ್ರೀಯ ಕಲೆಗಳ…

Read More