Author: UllalaVani

Kannada News From Coastal Karnataka

ಮಂಗಳೂರು, ಜೂ. 24: ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ವಾಹನ ದಟ್ಟಣೆಗೆ ಅನುಗುಣವಾಗಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದು ಸಮಸ್ಯೆಯಾಗಿ ಪರಿಣಮಿಸಿದೆ. ಇದರಿಂದಾಗಿ ಪಾರ್ಕಿಂಗ್ ನಿಯಮ ಉಲ್ಲಂಘನೆ ಪ್ರಕರಣಗಳು ಹೆಚ್ಚುತ್ತಿದ್ದು, ಅನಧಿಕೃತವಾಗಿ ವಿವಿಧೆಡೆ ಪಾರ್ಕಿಂಗ್ ಮಾಡಿದ ಪ್ರಕರಣಗಳಿಗೆ ವಾಹನಗಳ ಮಾಲೀಕರಿಗೆ ಕಳೆದ ಐದು ತಿಂಗಳ ಅವಧಿಯಲ್ಲಿ 12.4 ಲಕ್ಷ ರೂ. ದಂಡ ವಿಧಿಸಲಾಗಿದೆ. ಸಂಚಾರ ಪೊಲೀಸರ ಅಂಕಿ ಅಂಶಗಳ ಪ್ರಕಾರ, 2025ರಲ್ಲಿ ನಗರದಲ್ಲಿ ಒಟ್ಟು 8,885 ಪಾರ್ಕಿಂಗ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿದ್ದು 47.2 ಲಕ್ಷ ರೂ. ದಂಡ ಸಂಗ್ರಹಿಸಲಾಗಿತ್ತು. 2026ರಲ್ಲಿ ಇದುವರೆಗೆ 2,294 ಪ್ರಕರಣಗಳು ದಾಖಲಾಗಿವೆ. ಇವುಗಳಿಂದ ಸಂಗ್ರಹವಾದ ದಂಡದ ಮೊತ್ತವೂ ಹೆಚ್ಚಾಗಿದೆ. ನಗರದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ರಸ್ತೆಗಳು ಅಗಲಗೊಂಡಿರುವ ಕೆಲವು ಕಡೆಗಳಲ್ಲಿ ರಸ್ತೆ ಬದಿಗಳಲ್ಲಿ ಪಾರ್ಕಿಂಗ್ ಅವಕಾಶ ಕೊಡಲಾಗಿದೆ. ಆದರೆ ಬಹುತೇಕ ಕಡೆಗಳಲ್ಲಿ ರಸ್ತೆಗಳು ಕಿರಿದಾಗಿದ್ದು ವಾಹನ ನಿಲ್ಲಿಸಿದರೆ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಸಮಸ್ಯೆಯಾಗುತ್ತಿದೆ.ಕೆಲವು ಸಭಾಂಗಣಗಳಲ್ಲಿ ಕಾರ್ಯಕ್ರಮಗಳು ಆಯೋಜನೆಗೊಂಡಾಗ ವಾಹನಗಳನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ವಾಹನ ದಟ್ಟಣೆಗೂ ಕಾರಣವಾಗುತ್ತಿದೆ.…

Read More

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಒಂದು ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಫಾರ್ಮಸಿ ಅಧಿಕಾರಿ ಚಂದ್ರಶೇಖರ್ ಅವರ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವುದಾಗಿ ದೂರು ನೀಡಿದ ಹಿನ್ನೆಲೆಯಲ್ಲಿ, ಅವರನ್ನು ಸರ್ಕಾರಿ ಸೇವೆಯಿಂದ ಅಮಾನತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶನಾಲಯ ಆದೇಶ ಹೊರಡಿಸಿದೆ. ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ, ಕಾರ್ಯಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ಕಿರುಕುಳ ತಡೆಗೆ ಸಂಬಂಧಿಸಿದ ವಿಶಾಖಾ ಮಾರ್ಗಸೂಚಿಗಳ ಅನ್ವಯ ರಚಿಸಲಾದ ಆಂತರಿಕ ದೂರು ಸಮಿತಿಗೆ ತನಿಖೆ ವಹಿಸಲಾಗಿತ್ತು. ಇದೇ ವೇಳೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ಕೂಡ ದಾಖಲಾಗಿತ್ತು. ಜಿಲ್ಲಾ ಆರೋಗ್ಯಾಧಿಕಾರಿಗಳು ಪ್ರಕರಣದ ಕುರಿತು ಸಮಗ್ರ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನಿರ್ದೇಶನಾಲಯಕ್ಕೆ ಸಲ್ಲಿಸಿದ್ದರು. ಆಂತರಿಕ ಸಮಿತಿಯ ವರದಿ, ಲಭ್ಯ ಸಾಕ್ಷ್ಯಾಧಾರಗಳು ಹಾಗೂ ಪೊಲೀಸ್ ಎಫ್‌ಐಆರ್ ವಿವರಗಳನ್ನು ಪರಿಗಣಿಸಿದ ಆರೋಗ್ಯ ಇಲಾಖೆಯ ನಿರ್ದೇಶಕಿ ಡಾ. ರಜನಿ ಎಂ ಅವರು ಆರೋಪಿತ ಅಧಿಕಾರಿಯನ್ನು ಅಮಾನತುಗೊಳಿಸಿ ಸರ್ಕಾರಿ ಆದೇಶ ಹೊರಡಿಸಿದ್ದಾರೆ.…

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಂಪು ಬಾಕ್ಸೈಟ್ ಸೇರಿದಂತೆ ಖನಿಜ ಸಂಪತ್ತಿನ ಅತಿಯಾದ ಶೋಷಣೆ ಹಾಗೂ ಹೊರ ರಾಜ್ಯಗಳಿಗೆ ಭಾರಿ ಪ್ರಮಾಣದಲ್ಲಿ ಸಾಗಾಟ ನಡೆಯುತ್ತಿರುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಗಂಭೀರ ಆತಂಕ ವ್ಯಕ್ತವಾಗುತ್ತಿದೆ. ಈಗಾಗಲೇ ಪರಿಸರ ಸೂಕ್ಷ್ಮ ಪ್ರದೇಶಗಳಾಗಿರುವ ಬೆಟ್ಟಗುಡ್ಡಗಳು, ಕೃಷಿಭೂಮಿಗಳು, ಜಲಮೂಲಗಳು ಮತ್ತು ಜೀವ ವೈವಿಧ್ಯತೆ ನಾಶದ ಅಂಚಿನಲ್ಲಿದ್ದು, ಜಿಲ್ಲೆಯ ಭೌಗೋಳಿಕ ಸಮತೋಲನಕ್ಕೆ ಧಕ್ಕೆಯಾಗುತ್ತಿರುವ ಬಗ್ಗೆ ಪರಿಸರ ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ. ಖಾಸಗಿ ಭೂಮಿ ಹೊಂದಿರುವುದೇ ಖನಿಜ ಸಂಪತ್ತನ್ನು ಹೊರತೆಗೆಯುವ ಹಕ್ಕು ನೀಡುವುದಿಲ್ಲ. ರಾಜ್ಯದ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಪರಿಸರ ಇಲಾಖೆ, ಅರಣ್ಯ ಇಲಾಖೆ, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸೇರಿದಂತೆ ವಿವಿಧ ಇಲಾಖೆಗಳ ಪೂರ್ವಾನುಮತಿ ಕಡ್ಡಾಯವಾಗಿದೆ. ಖನಿಜ ಮತ್ತು ಗಣಿಗಳ ಅಭಿವೃದ್ಧಿ ಹಾಗೂ ನಿಯಂತ್ರಣ ಕಾಯ್ದೆ, ಪರಿಸರ ಸಂರಕ್ಷಣಾ ಕಾಯ್ದೆ, ಅರಣ್ಯ ಸಂರಕ್ಷಣಾ ಕಾಯ್ದೆ, ಹಾಗೂ ಇತರೆ ಕಾನೂನುಗಳು ಇಂತಹ ಚಟುವಟಿಕೆಗಳನ್ನು ಕಟ್ಟುನಿಟ್ಟಾಗಿ ನಿಯಂತ್ರಿಸುತ್ತವೆ. ಆದರೆ ಜಿಲ್ಲಾಡಳಿತ ಜಿಲ್ಲಾಧಿಕಾರಿ ಗಳು ಮೌನಿಗಳಾಗಿದ್ದಾರೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

Read More

ಸಾರ್ವಜನಿಕ ಹುದ್ದೆಗೆ ಆಯ್ಕೆಯಾದ ಪ್ರತಿನಿಧಿಗಳು ಸಂವಿಧಾನ ಮತ್ತು ಕಾನೂನಿನ ಪ್ರಕಾರ ನಿಗದಿಪಡಿಸಲಾದ ವಿಧಾನದಲ್ಲಿಯೇ ಪ್ರಮಾಣವಚನ ಸ್ವೀಕರಿಸಬೇಕು ಎಂಬ ಮಹತ್ವದ ತೀರ್ಪನ್ನು ಕೇರಳ ಹೈಕೋರ್ಟ್ ನೀಡಿದೆ. ತಿರುವನಂತಪುರಂ ಮಹಾನಗರ ಪಾಲಿಕೆಯ ಉಪ ಮೇಯರ್ ಸೇರಿದಂತೆ 20 ಬಿಜೆಪಿ ಕೌನ್ಸಿಲರ್‌ಗಳು ದೇವತೆಗಳು, “ಭಾರತ ಮಾತೆ”, “ಭಾರತಾಂಬೆ”, ಹುತಾತ್ಮರು ಮತ್ತು ಇತರ ವ್ಯಕ್ತಿಗಳ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ್ದನ್ನು ನ್ಯಾಯಾಲಯ ಅಮಾನ್ಯ ಎಂದು ಘೋಷಿಸಿ, ನಾಲ್ಕು ವಾರಗಳೊಳಗೆ ಸಂವಿಧಾನಬದ್ಧವಾಗಿ ಮರು ಪ್ರಮಾಣವಚನ ಸ್ವೀಕರಿಸಲು ಆದೇಶಿಸಿದೆ. ನ್ಯಾಯಮೂರ್ತಿ ಪಿ.ವಿ. ಕುನ್ಹಿಕೃಷ್ಣನ್ ಅವರ ಏಕಸದಸ್ಯ ಪೀಠವು, ಕೇರಳ ಮುನ್ಸಿಪಾಲಿಟಿ ಕಾಯಿದೆ ಮತ್ತು ಕೇರಳ ಪಂಚಾಯತ್ ರಾಜ್ ಕಾಯಿದೆಯ ಪ್ರಕಾರ ಆಯ್ಕೆಯಾದ ಪ್ರತಿನಿಧಿಗಳು ಕೇವಲ ಎರಡು ವಿಧಾನಗಳಲ್ಲಿ ಮಾತ್ರ ಪ್ರಮಾಣವಚನ ಸ್ವೀಕರಿಸಬಹುದು ಎಂದು ಸ್ಪಷ್ಟಪಡಿಸಿದೆ. ಅವುಗಳೆಂದರೆ, “ದೇವರ ಹೆಸರಿನಲ್ಲಿ” ಪ್ರಮಾಣವಚನ ಮಾಡುವುದು ಅಥವಾ ಯಾವುದೇ ಧಾರ್ಮಿಕ ಅಥವಾ ಇತರ ಉಲ್ಲೇಖವಿಲ್ಲದೆ ವಿಧಿವತ್ತಾದ ದೃಢೀಕರಣ (Solemn Affirmation) ಮಾಡುವುದು. ಇದರ ಹೊರತಾಗಿ ಯಾವುದೇ ದೇವತೆ, ಧಾರ್ಮಿಕ ಸಂಕೇತ, ರಾಜಕೀಯ ಚಳವಳಿ, ಹುತಾತ್ಮರು ಅಥವಾ…

Read More

ಟಿ. ನರಸೀಪುರ : ತಾಲೂಕಿನ ಕೆಂಪಯ್ಯನಹುಂಡಿಯಲ್ಲಿ ನಿಶ್ಚಿತಾರ್ಥವಾಗಿದ್ದ ಯುವತಿ ಹಾಗೂ ಆಕೆಯ ತಂದೆ-ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಇಡೀ ಸಮಾಜವನ್ನು ಬೆಚ್ಚಿಬೀಳಿಸಿದೆ. ಯುವಕನಿಂದ ನಿರಂತರ ಕಿರುಕುಳ ಮತ್ತು ಮಾನಸಿಕ ಹಿಂಸೆಗೆ ಒಳಗಾಗಿದ್ದ ಯುವತಿ ಹಾಗೂ ಆಕೆಯ ಕುಟುಂಬ ಈ ದುರ್ಘಟನೆಯ ದಾರಿಯನ್ನು ಹಿಡಿದಿರುವ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳನ್ನು ಓದಿ ಮನಸ್ಸಿಗೆ ತೀವ್ರ ನೋವುಂಟಾಗಿದೆ ಎಂದು ಮಹಿಳಾ ಅಯೋಗದ ಅಧ್ಯಕರು ಅಕ್ರೋಶ ವ್ಯಕ್ತಪಡಿಸಿ ಈ ಪ್ರಕರಣವನ್ನು ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಗಂಭೀರವಾಗಿ ಪರಿಗಣಿಸಿದ್ದು, ಪ್ರಸ್ತುತ ಅಧ್ಯಕ್ಷರಾಗಿರುವ ಡಾ. ನಾಗಲಕ್ಷ್ಮೀ ಚೌಧರಿ ಅವರು ದಿನಾಂಕ 22.06.2026 ರಂದು ಮೈಸೂರು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಪತ್ರ ಬರೆದು ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ, ಸಂಬಂಧಪಟ್ಟವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆ. ಇಂತಹ ಸಂದರ್ಭದಲ್ಲಿ ಸಂತ್ರಸ್ತ ಯುವತಿ ಹಾಗೂ ಆಕೆಯ ಕುಟುಂಬ ಆತ್ಮಹತ್ಯೆಯಂತಹ ದುಡುಕಿನ ನಿರ್ಧಾರ ಕೈಗೊಳ್ಳುವ ಬದಲು ಧೈರ್ಯದಿಂದ ಕಾನೂನು ಸಹಾಯ ಮತ್ತು…

Read More

ಮಂಗಳೂರು, ಜೂ. 24   ;114 ವರ್ಷಗಳ ಇತಿಹಾಸ ಹೊಂದಿರುವ ಎಂಸಿಸಿ ಬ್ಯಾಂಕ್ ಲಿಮಿಟೆಡ್ 2025-26ನೇ ಹಣಕಾಸು ವರ್ಷದಲ್ಲಿ ಗಮನಾರ್ಹ ಸಾಧನೆ ಮಾಡಿದ್ದು, ಒಟ್ಟು ವ್ಯವಹಾರ ವಹಿವಾಟು 22.89 ಶೇಕಡಾ ಏರಿಕೆಯೊಂದಿಗೆ 1,535 ಕೋಟಿ ರೂ. ಮೈಲಿಗಲ್ಲು ತಲುಪಿದೆ ಎಂದು ಬ್ಯಾಂಕ್ ಅಧ್ಯಕ್ಷ ಅನಿಲ್ ಲೋಬೊ ತಿಳಿಸಿದ್ದಾರೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕಿನ ನಿವ್ವಳ ಮೌಲ್ಯ 83.76 ಕೋಟಿ ರೂ.ಗಳಿಂದ 91.80 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಎನ್‌ಆರ್‌ಐ ಗ್ರಾಹಕರ ಬೆಂಬಲ ಬ್ಯಾಂಕಿನ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ಹೇಳಿದರು.2018ರಲ್ಲಿ ಪ್ರಸ್ತುತ ಆಡಳಿತ ಮಂಡಳಿ ಅಧಿಕಾರ ವಹಿಸಿಕೊಂಡ ಬಳಿಕ ಬ್ಯಾಂಕ್ ವೇಗದ ಬೆಳವಣಿಗೆ ಸಾಧಿಸಿದೆ. ಠೇವಣಿಗಳು 304 ಕೋಟಿ ರೂ.ಗಳಿಂದ 876 ಕೋಟಿ ರೂ.ಗಳಿಗೆ, ಸಾಲ ಮತ್ತು ಮುಂಗಡಗಳು 191 ಕೋಟಿ ರೂ.ಗಳಿಂದ 657 ಕೋಟಿ ರೂ.ಗಳಿಗೆ ಹಾಗೂ ಷೇರು ಬಂಡವಾಳ 13 ಕೋಟಿ ರೂ.ಗಳಿಂದ 34 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಒಟ್ಟು ವ್ಯವಹಾರ ವಹಿವಾಟು 496 ಕೋಟಿ ರೂ.ಗಳಿಂದ 1,535…

Read More

ಉಳ್ಳಾಲ: ಬಿಜೆಪಿ ಉಳ್ಳಾಲ 4ನೇ ಬೂತ್ ಅಧ್ಯಕ್ಷರಾದ ಗುಣವತಿ ರೋಹಿದಾಸ್ ಬಂಗೇರ ಅವರ ಮನೆಗೆ ಪಕ್ಷದ ಮುಖಂಡರು ಭೇಟಿ ನೀಡಿ ಕುಶಲೋಪರಿ ವಿಚಾರಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು , ಬಿಜೆಪಿ ಜಿಲ್ಲಾ ಅಧ್ಯಕ್ಷ ಸತೀಶ್ ಕುಂಪಾಲ , ಮಂಡಲ ಅಧ್ಯಕ್ಷ ಜಗದೀಶ್ ಕುವತ್ತಬೈಲ್, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ದಯಾನಂದ ತೊಕ್ಕೊಟ್ಟು ಹಾಗೂ ಮೋಹನ್ ರಾಜ್ ಕೆ.ಆರ್., ಯುವ ಮೋರ್ಚಾ ಅಧ್ಯಕ್ಷ ಮುರಳಿ ಕೊಣಾಜೆ ಮತ್ತು ರೈತ ಮೋರ್ಚಾ ಅಧ್ಯಕ್ಷ ಪದ್ಮನಾಭ ಶೆಟ್ಟಿ ಉಪಸ್ಥಿತರಿದ್ದರು.

Read More

ಮಂಗಳೂರು, ಜೂ. 24 : ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಹೊಸ ಪಡಿತರ ಚೀಟಿ (ರೇಷನ್ ಕಾರ್ಡ್) ವಿತರಣೆಯ ಪ್ರಕ್ರಿಯೆ ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ಗಂಭೀರ ಸಮಸ್ಯೆಗಳ ಬಗ್ಗೆ ಜನತಾದಳ (ಜಾತ್ಯತೀತ) ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನಿಯೋಗವು ಜಿಲ್ಲಾಧಿಕಾರಿಗಳ ಮೂಲಕ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರಿಗೆ ಮನವಿ ಸಲ್ಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಮನವಿಯಲ್ಲಿ, ರಾಜ್ಯದಾದ್ಯಂತ ಸಾವಿರಾರು ಅರ್ಹ ಕುಟುಂಬಗಳು ಹೊಸ ಪಡಿತರ ಚೀಟಿ ಪಡೆಯಲು ಎರಡು ವರ್ಷಗಳಿಂದ ಕಾಯುತ್ತಿರುವುದರಿಂದ ಸರ್ಕಾರದ ವಿವಿಧ ಜನಪರ ಯೋಜನೆಗಳು ಹಾಗೂ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗುತ್ತಿರುವ ವಿಚಾರವನ್ನು ಗಂಭೀರವಾಗಿ ಪ್ರಸ್ತಾಪಿಸಲಾಯಿತು. ಹೊಸದಾಗಿ ವಿವಾಹವಾದ ದಂಪತಿಗಳು, ಪ್ರತ್ಯೇಕ ಕುಟುಂಬವಾಗಿ ಜೀವನ ಆರಂಭಿಸಿರುವವರು, ಬಾಡಿಗೆ ಮನೆಗಳಲ್ಲಿ ವಾಸಿಸುವವರು, ಆರ್ಥಿಕವಾಗಿ ಹಿಂದುಳಿದ ಕುಟುಂಬಗಳು ಸೇರಿದಂತೆ ಅನೇಕ ನಾಗರಿಕರು ಪಡಿತರ ಚೀಟಿ ಇಲ್ಲದೆ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು.ಪಡಿತರ ಚೀಟಿ ಕೇವಲ ಆಹಾರ ಧಾನ್ಯಗಳ ವಿತರಣೆಗೆ ಮಾತ್ರ ಸೀಮಿತವಾಗಿಲ್ಲ. ಆರೋಗ್ಯ ಸೇವೆಗಳು, ವಿದ್ಯಾರ್ಥಿವೇತನ,…

Read More

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರತಿದಿನ ಸಾವಿರಾರು ಜನರು ಸರ್ಕಾರಿ ಬಸ್‌ಗಳಲ್ಲಿ ಪ್ರಯಾಣಿಸುತ್ತಿದ್ದಾರೆ. ಆದರೆ ಬಸ್‌ಗಳಲ್ಲಿ ಪ್ರಯಾಣಿಕರ ಸುರಕ್ಷತೆ, ಅನುಮತಿತ ಸಾಮರ್ಥ್ಯ, ಮಿತಿಮೀರಿದ ಜನದಟ್ಟಣೆ ಮತ್ತು ಪ್ರಯಾಣಿಕರ ಹಕ್ಕುಗಳ ಬಗ್ಗೆ ಸಾರಿಗೆ ಇಲಾಖೆ ಎಷ್ಟು ಕಾಳಜಿ ವಹಿಸುತ್ತಿದೆ ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ. ಅನೇಕ ಸಂದರ್ಭಗಳಲ್ಲಿ ಬಸ್‌ಗಳಲ್ಲಿ ಕಾಲಿಡಲು ಜಾಗವಿಲ್ಲದಷ್ಟು ಜನರನ್ನು ತುಂಬಿಕೊಂಡು ಸಂಚರಿಸಲಾಗುತ್ತಿದೆ. ಮಹಿಳೆಯರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಮಕ್ಕಳು ತೀವ್ರ ತೊಂದರೆ ಅನುಭವಿಸುತ್ತಿದ್ದರೂ, ಇದನ್ನು ತಡೆಯುವ ಹೊಣೆ ಹೊತ್ತಿರುವ ಅಧಿಕಾರಿಗಳು ಮೌನ ವಹಿಸಿರುವುದು ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಮಾಹಿತಿ ಹಕ್ಕು ಕಾಯ್ದೆಯಡಿ ಲಭ್ಯವಾಗಿರುವ ಅಧಿಕೃತ ದಾಖಲೆಗಳ ಪ್ರಕಾರ, ಬಸ್‌ನ ಆಸನ ಸಾಮರ್ಥ್ಯಕ್ಕಿಂತ ಕೇವಲ ಹತ್ತು ಮಂದಿ ವಯಸ್ಕರಿಗೆ ಮಾತ್ರ ನಿಂತುಕೊಂಡು ಪ್ರಯಾಣಿಸಲು ಅವಕಾಶವಿದೆ. ಆದರೆ ವಾಸ್ತವದಲ್ಲಿ ಅನೇಕ ಬಸ್‌ಗಳಲ್ಲಿ ಈ ಮಿತಿಯನ್ನು ಬಹಳಷ್ಟು ಮೀರಿಸಲಾಗುತ್ತಿದೆ. ವಾಹನಗಳ ಪರವಾನಗಿ ಷರತ್ತುಗಳು, ಮೋಟಾರು ವಾಹನ ಕಾಯ್ದೆ ಮತ್ತು ಪ್ರಯಾಣಿಕರ ಸುರಕ್ಷತಾ ನಿಯಮಗಳ ಪಾಲನೆಯನ್ನು ಖಚಿತಪಡಿಸುವುದು ಸಾರಿಗೆ ಇಲಾಖೆಯ ಜವಾಬ್ದಾರಿಯಾಗಿದೆ. ಆದರೂ…

Read More

ಜೂನ್ 25ರಂದು ಮಂಗಳೂರಿಗೆ ಬಾಲಿವುಡ್ ಬಾದ್‌ಶಾ ಶಾರುಖ್ ಖಾನ್; ರೋಹನ್ ಕಾರ್ಪೊರೇಷನ್‌ನ ‘ಅನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಕಾರ್ಯಕ್ರಮ ಮಂಗಳೂರು: ಕರಾವಳಿ ಕರ್ನಾಟಕದ ಪ್ರಮುಖ ಮತ್ತು ವಿಶ್ವಾಸಾರ್ಹ ರಿಯಲ್ ಎಸ್ಟೇಟ್ ಸಂಸ್ಥೆ ರೋಹನ್ ಕಾರ್ಪೊರೇಷನ್ ವತಿಯಿಂದ ಜೂನ್ 25ರಂದು ಮಂಗಳೂರಿನಲ್ಲಿ ಬಾಲಿವುಡ್ ಸೂಪರ್‌ಸ್ಟಾರ್ ಹಾಗೂ ಜಾಗತಿಕ ಮನರಂಜನಾ ಕ್ಷೇತ್ರದ ಐಕಾನ್ ಶಾರುಖ್ ಖಾನ್ ಭಾಗವಹಿಸಲಿರುವ ವಿಶೇಷ ಕಾರ್ಯಕ್ರಮ ‘ಅನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಆಯೋಜಿಸಲಾಗಿದೆ. ಮಂಗಳೂರಿನ ಅಡ್ಯಾರ್ ಗಾರ್ಡನ್‌ನಲ್ಲಿ ನಡೆಯಲಿರುವ ಈ ಭವ್ಯ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದೆ. ಉದ್ಯಮಿಗಳು, ಗಣ್ಯರು, ಆಹ್ವಾನಿತ ಅತಿಥಿಗಳು ಹಾಗೂ ನೋಂದಾಯಿತ ಸಾರ್ವಜನಿಕರನ್ನು ಒಂದೇ ವೇದಿಕೆಯಲ್ಲಿ ಸೇರಿಸುವ ಈ ಕಾರ್ಯಕ್ರಮವು ಕರಾವಳಿ ಭಾಗದಲ್ಲಿ ಇದುವರೆಗೆ ನಡೆದ ಅತ್ಯಂತ ಮಹತ್ವದ ಕಾರ್ಪೊರೇಟ್ ಹಾಗೂ ಮನರಂಜನಾ ಕಾರ್ಯಕ್ರಮಗಳಲ್ಲಿ ಒಂದಾಗಲಿದೆ. ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದ ರೋಹನ್ ಕಾರ್ಪೊರೇಷನ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ. ರೋಹನ್ ಮೊಂತೇರೊ, “ಶಾರುಖ್ ಖಾನ್ ಅವರನ್ನು ಮಂಗಳೂರಿಗೆ…

Read More