Author: UllalaVani

Kannada News From Coastal Karnataka

ಪುಣೆ, ಮೇ 18: ದೇಶದ ಪ್ರತಿಷ್ಠಿತ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳಿಗೆ ಬೆಚ್ಚಿಬೀಳಿಸುವ ಮಾಹಿತಿಗಳು ಲಭ್ಯವಾಗಿವೆ. ಪುಣೆಯ 46 ವರ್ಷದ ಬ್ಯೂಟಿಷಿಯನ್ ಒಬ್ಬರು ಈ ಇಡೀ ಜಾಲದ “ಪ್ರಮುಖ ಕೊಂಡಿ”ಯಾಗಿ ಕೆಲಸ ಮಾಡಿರುವುದು ಪತ್ತೆಯಾಗಿದೆ. ಈ  ಮೂಲಕ ಪರೀಕ್ಷಾ ಮಂಡಳಿಯ (NTA) ಉನ್ನತ ಮಟ್ಟದ ಅಧಿಕಾರಿಯೇ ಈ ಸೋರಿಕೆಯ ಮಾಸ್ಟರ್‌ಮೈಂಡ್ ಆಗಿರುವುದು ತನಿಖೆಯಲ್ಲಿ ಬಯಲಾಗಿದೆ. ಎನ್‌ಟಿಎ (NTA) ಸಮಿತಿಯ ತಜ್ಞೆಯೇ ಸೂತ್ರಧಾರಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA)ಯ 2026ನೇ ಸಾಲಿನ ನೀಟ್-ಯುಜಿ ಪ್ರಶ್ನೆ-ನಿಗದಿ ಸಮಿತಿಯ ತಜ್ಞೆಯಾಗಿದ್ದ 57 ವರ್ಷದ ಮನೀಷಾ ಗುರುನಾಥ್ ಮಾಂಧರೆ ಅವರನ್ನು ಸಿಬಿಐ ಬಂಧಿಸಿದೆ. ಈಕೆಗೆ ಸಸ್ಯಶಾಸ್ತ್ರ (Botany) ಮತ್ತು ಪ್ರಾಣಿಶಾಸ್ತ್ರ (Zoology) ಎರಡೂ ವಿಷಯಗಳ ಅಂತಿಮ ಪ್ರಶ್ನೆಪತ್ರಿಕೆಗಳನ್ನು ನೋಡಲು ಅವಕಾಶವಿತ್ತು. ಆರ್ಥಿಕ ಲಾಭಕ್ಕಾಗಿ ಮಾಂಧರೆ ಈ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷೆಗೂ ಮುನ್ನವೇ ಸೋರಿಕೆ ಮಾಡಿದ್ದರು ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. ಇವರನ್ನು 14 ದಿನಗಳ ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿದೆ. ಪುಣೆಯ…

Read More

ಅಹಮದಾಬಾದ್, ಮೇ. 18  ;ಪಾನಿಪುರಿ ಅಂದ್ರೆ ಮಕ್ಕಳಿಂದ ಹಿಡಿದು ದೊಡ್ಡವರಿಗೂ ಅಚ್ಚುಮೆಚ್ಚು. ಆದರೆ ಅಹಮದಾಬಾದ್‌ನ ರಾಣಿಪ್ ಪ್ರದೇಶದಲ್ಲಿ ಪಾನಿಪುರಿ ತಿನ್ನುತ್ತಿದ್ದ ಯುವತಿಯೊಬ್ಬಳಿಗೆ ಪಾನಿಪುರಿಯೊಳಗೆ ಮೂಳೆ ಪತ್ತೆಯಾಗಿದೆ. ಪಾನಿಪುರಿಯಲ್ಲಿ ಮೂಳೆ ಕಂಡ ಯುವತಿಗೆ ಶಾಕ್ ಆಗಿದ್ದು, ಅಂಗಡಿ ಮಾಲೀಕನನ್ನು ಪ್ರಶ್ನಿಸಿದ್ದಾಳೆ. ಅಂಗಡಿಯವನು ಅದು ಮೂಳೆಯಲ್ಲ ಮರದ ತುಂಡು ಎಂದು ವಾದಿಸಿದ್ದಾನೆ. ಕೊನೆಗೆ ಮಾಲೀಕನನ್ನ ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಮೂಳೆ ಎಂದು ಒಪ್ಪಿಕೊಂಡು ಯುವತಿ ಬಳಿ ಕ್ಷಮೆಯಾಚಿಸಿದ್ದಾನೆ.ಈ ಘಟನೆಯನ್ನು ಯುವತಿ ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾಳೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬೀದಿ ಆಹಾರದ ಸ್ವಚ್ಛತೆ ಹಾಗೂ ಗುಣಮಟ್ಟದ ಬಗ್ಗೆ ಆತಂಕ ಸೃಷ್ಟಿಯಾಗಿದೆ.

Read More

ಕಾಸರಗೋಡು, ಮೇ. 18 : ಬ್ಯಾಂಕ್ ಸೆಕ್ಯೂರಿ ಗಾರ್ಡ್ ಗೆ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಕಾಸರಗೋಡಿನ ಬದಿಯಡ್ಕ ಠಾಣಾ ವ್ಯಾಪ್ತಿಯ ಮಾರ್ಪನಡ್ಕದಲ್ಲಿ ನಡೆದಿದೆ. ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಸುರೇಶ್ ( 42) ಕೊಲೆ ಗೀಡಾದವರು. ರವಿವಾರ ರಾತ್ರಿ 9.30 ರ ಸುಮಾರಿಗೆ ಘಟನೆ ನಡೆದಿದೆ. ಘಟನೆ ಬಗ್ಗೆ ಕಿರಣ್ , ಅಖಿಲೇಶ್ ವಿರುದ್ಧ ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ರವಿವಾರ ಸಂಜೆ ಕುಂಬ್ಡಾಜೆ ಗ್ರಾಮ ಪಂಚಾಯತ್ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ವೇಳೆ ನಡೆದ ಮಾತಿನ ಚಕಮಕಿ ಕೊಲೆಗೆ ಕಾರಣ ಎನ್ನಲಾಗಿದೆ.ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಆರೋಪಿಗಳು ಸುರೇಶ್ ಗೆ ಚಾಕುವಿನಿಂದ ಇರಿದಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡ ಸುರೇಶ್ ರನ್ನು ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Read More

ರಾಜ್ಯ ಸರಕಾರವು ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ನಿರ್ಧಾರ ಕೈಗೊಂಡಿರುವುದು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಭವಿಷ್ಯದ ಕುರಿತಾಗಿ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಆರೋಗ್ಯ ಎಂಬುದು ಕೇವಲ ಸೇವೆ ಅಲ್ಲ, ಅದು ಭಾರತದ ಸಂವಿಧಾನ ನೀಡಿರುವ ಬದುಕುವ ಹಕ್ಕಿನ ಒಂದು ಅಂಶ. ಇಂದಿನ ಕಾಲದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಲಕ್ಷಾಂತರ ರೂಪಾಯಿ ಚಿಕಿತ್ಸಾ ವೆಚ್ಚ ಸಾಮಾನ್ಯ ಜನರನ್ನು ಆರ್ಥಿಕವಾಗಿ ಕುಗ್ಗಿಸುತ್ತಿರುವ ಸಂದರ್ಭದಲ್ಲಿ, ಸರಕಾರಿ ಆಸ್ಪತ್ರೆಗಳ ಮಹತ್ವ ಇನ್ನಷ್ಟು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ “ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಮಾರಾಟ ಮಾಡಲು ಬಿಡುವುದಿಲ್ಲ” ಎಂಬ ಧ್ವನಿ ಜನಸಾಮಾನ್ಯರ ಕಳವಳದ ಪ್ರತಿಧ್ವನಿಯಾಗಿದೆ. ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಾಣಗೊಂಡ ಆಸ್ಪತ್ರೆಗಳು ಬಡವರು, ಮಧ್ಯಮ ವರ್ಗದವರು ಮತ್ತು ಗ್ರಾಮೀಣ ಜನರಿಗೆ ಜೀವನಾಡಿಯಾಗಿವೆ. ಅವುಗಳನ್ನು ಹಂತ ಹಂತವಾಗಿ ಖಾಸಗೀಕರಣಗೊಳಿಸುವುದು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲ ಆತ್ಮವನ್ನೇ ದುರ್ಬಲಗೊಳಿಸುವ ಅಪಾಯವನ್ನು ಹೊಂದಿದೆ. ಈ ನಿರ್ಧಾರದ ಕುರಿತು ವೈದ್ಯರುಗಳು ಹಾಗೂ ವೈದ್ಯರ ಸಂಘಟನೆಗಳ ಮೌನವು…

Read More

ತಿರುವನಂತಪುರಂ: ಕೇರಳ ಚುನಾವಣಾ ಫಲಿತಾಂಶ ಪ್ರಕಟವಾದ 10 ದಿನಗಳ ನಂತರ ಪಕ್ಷದಿಂದ ಆಯ್ಕೆಯಾದ ಕಾಂಗ್ರೆಸ್‌ನ ವಿ.ಡಿ.ಸತೀಶನ್  ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು.

Read More

ಉಡುಪಿ ; ಹಿಂದು ವೃದ್ಧ ಮಹಿಳೆಯೊಬ್ಬರನ್ನು ಕರೆದುಕೊಂಡು ಬಂದ ಇಬ್ಬರು ಬುರ್ಖಾಧಾರಿ ಮಹಿಳೆಯರು, ತಾವು ಹಿಂದೂ ಮಹಿಳೆಯ ನೆರೆಮನೆಯವರು, ಬಡ ಮಹಿಳೆಗೆ ಮನೆ ನಿವೇಶನ ನೀಡುವಂತೆ ಉಡುಪಿಗೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ನಿವಾಸಕ್ಕೆ ಬಂದು ಮನವಿ ಮಾಡಿದ್ದು, ಈ ಸಂದರ್ಭದಲ್ಲಿ ಸಚಿವೆ, ಇದು ಹಿಂದು ಮುಸ್ಲಿಂ ಸೌಹಾರ್ದ, ಉಡುಪಿಯ ಬಿಜೆಪಿಯವರು ಇದರಿಂದ ಪಾಠ ಕಲಿಯಬೇಕು ಎಂದು ಹೇಳಿದ್ದರು. ಆದರೆ ಉಸ್ತುವಾರಿ ಸಚಿವರನ್ನು ಭೇಟಿಯಾಗಲು ಬಂದ ಗಿರಿಜಾ ಶೆಟ್ಟಿಗಾರ್ ಅವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರಗೊAಡಿರುವ ಅವರ ಪುತ್ರಿಯೇ ಕರೆತಂದಿದ್ದು, ಸಚಿವರ ಮುಂದೆ ಮಾತ್ರ ತಾನು ಹಿಂದೂ ಮಹಿಳೆಯ ನೆರೆಮನೆಯವರು ಎಂದು ಸುಳ್ಳು ಹೇಳಿ ಉಸ್ತುವಾರಿ ಸಚಿವರನ್ನೇ ಯಾಮಾರಿಸಿದ್ದಾರೆ. ಆದರೆ ಲಕ್ಷಿö್ಮÃ ಹೆಬ್ಬಾಳ್ಳರ್‌ಅವರು ಹಿಂದೆ ಮುಂದೆ ಯೋಚಿಸದೇ ಮಾಧ್ಯಮದ ಮುಂದೆ ಉಡುಪಿ ಬಿಜೆಪಿಗರಿಗೆ ಸೌಹಾರ್ದತೆಯ ಭಾಷಣ ಮಾಡಿ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಉಡುಪಿಯ ಜನತೆ ಸೌಹಾರ್ದತೆಯ ಬಗ್ಗೆ ಬೆಳಗಾವಿಯಿಂದ ಬಂದ ಉಸ್ತುವಾರಿ ಸಚಿವರಿಂದ ಕಲಿಯುವ ಅಗತ್ಯವಿಲ್ಲ ಎಂದು ಉಡುಪಿ ನಗರ…

Read More

ಮಂಗಳೂರು: ಮಂಗಳವಾರ ದುಲ್ಹಜ್ ಪ್ರಥಮ ಚಂದ್ರದರ್ಶನವಾಗಲಿದೆ. ಹಾಗಾಗಿ ಮೇ 28ರಂದು ಈದುಲ್ ಅಝ್‌ಹಾ (ಬಕ್ರೀದ್) ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Read More

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್‌ನ 2025-26 ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಐವರು ಹಿರಿಯ ಪತ್ರಕರ್ತರು ಆಯ್ಕೆಯಾಗಿದ್ದಾರೆ. ಬಾಲಸುಬ್ರಹ್ಮಣ್ಯ ಕಾಯಾರ, ರಾಮಣ್ಣ ವೈ ( ವಿಜಯ ಕರ್ನಾಟಕ), ಹರ್ಷ (ಡೆಕ್ಕನ್ ಹೆರಾಲ್ಡ್, ರೇಮಂಡ್ ಡಿಕೂನಾ ( ಪಿಂಗಾರ) ಮತ್ತು ಆ‌ರ್.ಎಂ. ರಾಜೇಂದ್ರನ್ (ಕಲೈಂಜರ್ ಟಿ.ವಿ) ಇವರು ಗೌರವ ಸನ್ಮಾನಕ್ಕೆ ಆಯ್ಕೆಯಾದವರು. ಗೌರವ ಸನ್ಮಾನ 10 ಸಾವಿರ ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದೆ. ಮೇ 24 ರಂದು ಬೆಳಗ್ಗೆ 11ಕ್ಕೆ ನಗರದ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿರುವ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಂದು ಇವರಿಗೆ ಗೌರವ ಸನ್ಮಾನ ನೀಡಲಾಗುವುದೆಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು, ಮೇ. 18 : ಕುಂಟಿಕಾನದಲ್ಲಿ ಶನಿವಾರ ಸಂಜೆ ಸಂಭವಿಸಿದ ಲಿಫ್ಟ್ ಅವಘಡದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಬೆಳಾಲು ಗ್ರಾಮದ ಪೂಂಜಕೆರೆ ನಿವಾಸಿ ನೌಫಾಲ್ (28) ಮೃತಪಟ್ಟ ಯುವಕ. ಶನಿವಾರ ಸಂಜೆ ನೌಫಾಲ್ ಕೆಲಸದಲ್ಲಿ ನಿರತರಾಗಿದ್ದ ವೇಳೆ ಲಿಫ್ಟ್‌ನಲ್ಲಿ ಅವಘಡ ಸಂಭವಿಸಿದೆ. ತಕ್ಷಣ ಇತರರು ಈತನನ್ನು ಅಪಾಯದಿಂದ ಪಾರು ಮಾಡಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಮೃತ ನೌಫಾಲ್ ಅವಿವಾಹಿತ ಎಂದು ತಿಳಿದುಬಂದಿದೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಕ್ಯಾಂಪಸ್ ನಲ್ಲಿ ಮಂಗಳೂರಿನ ಎನ್ ಎಂ ಪಿ ಎ ಸಂಸ್ಥೆಯ ಸಿಎಸ್ ಆರ್ ಅನುದಾನದಲ್ಲಿ ನವೀಕೃತಗೊಂಡಿರುವ ‘ಮಂಗಳ’ ಕ್ಯಾಂಟೀನ್ ಕಟ್ಟಡದ ಉದ್ಘಾಟನಾ‌ ಸಮಾರಂಭ ಬುಧವಾರ ನಡೆಯಿತು. ನವೀಕೃತ ಕಟ್ಟಡವನ್ನು ಎನ್ ಎಂ ಪಿ ಎ ಸಂಸ್ಥೆಯ ಉಪಾಧ್ಯಕ್ಷರಾದ ಎಸ್ .ಶಾಂತಿ ಅವರು ಉದ್ಘಾಟಿಸಿ, ಉತ್ತಮ ಸೌಲಭ್ಯದೊಂದಿಗೆ ನವೀಕೃತಗೊಂಡಿರುವ ಈ ಕ್ಯಾಂಟೀನ್ ಮೂಲಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ನಮ್ಮ ಸಂಸ್ಥೆಯು ವಿದ್ಯಾರ್ಥಿ ಕೇಂದ್ರಿತ ಕಾರ್ಯಯೋಜನೆಗಳಿಗೆ ಹೆಚ್ಚಿನ ಸಿಎಸ್ ಆರ್ ಅನುದಾನವನ್ನು ನೀಡುತ್ತಾ ಬಂದಿದೆ. ಉತ್ತಮ ಗುಣಮಟ್ಟದ ಆಹಾರ, ಶುಚಿತ್ವ ಮೊದಲಾದ ವ್ಯವಸ್ಥೆಯೊಂದಿಗೆ ಈ ಉಪಹಾರ ಗೃಹವು ಮುನ್ನಡೆಯಲಿ ಎಂದು ಶುಭಹಾರೈಸಿದರು. ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಪ್ರೊ.ಪಿ.ಎಲ್ . ಧರ್ಮ ಅವರು ಮಾತನಾಡಿ, ಈ ನವೀಕೃತ ಕ್ಯಾಂಟಿನ್ ನಲ್ಲಿ ವಿದ್ಯಾರ್ಥಿಗಳಿಗೆ ಕಡಿಮೆ ಖರ್ಚಿನಲ್ಲಿ ಉತ್ತಮ ಗುಣಮಟ್ಟದ ಆಹಾರವನ್ನು ಒದಗಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗುತ್ತದೆ ಎಂದ ಅವರು ಅನುದಾನವನ್ನು ಒದಗಿಸಿದ ಎನ್ ಎಂ ಪಿ ಎ ಸಂಸ್ಥೆಗೆ ಕೃತಜ್ಞತೆಯನ್ನು…

Read More