Author: UllalaVani

Kannada News From Coastal Karnataka

ಉಳ್ಳಾಲ‌: ಹಜ್ ಯಾತ್ರೆ ದೇವನ ಮೇಲೆ ವಿಶ್ವಾಸದಿಂದ ಕೂಡಿರಬೇಕಿದ್ದು ಅದರ ಹೊರತು ತೋರ್ಪಡಿಕೆಗೆ ಸೀಮಿತವಾದರೆ ಅದರಿಂದ ಯಾವುದೇ ಪ್ರಯೋಜನ ಇಲ್ಲ.‌ ಯಾತ್ರಿಕರನ್ನು ಬೀಳ್ಕೊಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹಳೆಕೋಟೆ ಜುಮಾ ಮಸೀದಿಯ ಖತೀಬ್ ಸಿರಾಜುದ್ದೀನ್ ಹಿಮಮಿ ಉಸ್ತಾದ್ ಹೇಳಿದರು. ಕುಟುಂಬ ಸಮೇತ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ದರ್ಗಾ ಅಧ್ಯಕ್ಷ ಬಿ.ಜಿ.ಹನೀಫ್ ಹಾಗೂ ಶಾಲಾ ಸಂಚಾಲಕ ಇಸ್ಮಾಯಿಲ್ ಹಾಜಬ್ಬ ಅವರಿಗೆ ಸಯ್ಯದ್ ಮದನಿ ವಿದ್ಯಾ ಸಂಸ್ಥೆಗಳ ವತಿಯಿಂದ ಹಳೆಕೋಟೆ ಸಯ್ಯದ್ ಮದನಿ ಶಾಲಾ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸನ್ಮಾನ ಸ್ವೀಕರಿಸಿದ ದರ್ಗಾ ಅಧ್ಯಕ್ಷ ಬಿ.ಜಿ.ಹನೀಫ್ ಮಾತನಾಡಿ, ಯಾವುದೇ ಫಲಾಪೇಕ್ಷೆ ಇಲ್ಲದೆ ಕೇವಲ ದೇವಭಯದಿಂದ ಹಜ್ ನಿರ್ವಹಿಸಿದರೆ ಆಗತಾನೇ ಹುಟ್ಟಿದ ಮಗುವಿನಂತೆ ಆಗುತ್ತಾನೆ ಎಂದು ಇಸ್ಲಾಮಿನಲ್ಲಿ ತಿಳಿಸಲಾಗಿದೆ ಎಂದರು.ದರ್ಗಾ ಉಪಾಧ್ಯಕ್ಷ ಅಶ್ರಫ್ ಅಹ್ಮದ್ ರೈಟ್ ವೇ ಮಾತನಾಡಿ, ಹಜ್ ಯಾತ್ರೆ ಅಥವಾ ಯಾವುದೇ ಕಾರ್ಯ ಕೈಗೊಳ್ಳುವ ಸಂದರ್ಭ ಸನ್ಮಾನ ಕಾರ್ಯಕ್ರಮ ನಡೆಸುವಾಗ ಅಹಂಕಾರ ಬಂದರೆ ಆತನ ಎಲ್ಲ ಕರ್ಮಗಳೂ ನಿಷ್ಪ್ರಯೋಜಕ…

Read More

ಉಳ್ಳಾಲ: ಉಳ್ಳಾಲ ಪುರಸಭೆಗೆ ಎರಡು ಬಾರಿ ಕಾಪಿಕಾಡು ವಾರ್ಡಿನಿಂದ ಸ್ಪರ್ಧಿಸಿ ಕೌನ್ಸಿಲರ್ ಆಗಿದ್ದ ಭವಾನಿ (70) ಇವರು ಅಲ್ಪಕಾಲದ ಅಸೌಖ್ಯದಿಂದ ನಗರದ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿವಾಸಿಯಾದ ಭವಾನಿ ಇವರು ಅವಿವಾಹಿತರಾಗಿದ್ದು , ಬಿಜೆಪಿ ಸಕ್ರಿಯ ಮಹಿಳಾ ಸದಸ್ಯೆಯಾಗಿದ್ದರು. ಪುಲ್ಕೆದಡಿ ಆದಿ ಕ್ಷೇತ್ರ ಬಂಡಿಕೊಟ್ಯ ಕೋರ್ದಬ್ಬು ದೈವಸ್ಥಾನದ ಸಮಿತಿಯಲ್ಲಿ ಸಕ್ರಿಯ ಸದಸ್ಯೆಯಾಗಿದ್ದರು. ಉಳ್ಳಾಲ ಪುರಸಭೆ ಗೆ ಎರಡು ಬಾರಿ ಕೌನ್ಸಿಲರ್ ಆಗಿ ಆಯ್ಕೆಗೊಂಡು ಒಂದು ಬಾರಿ ಉಪಾಧ್ಯಕ್ಷೆಯಾಗಿ ಆಯ್ಕೆಗೊಂಡಿದ್ದರು.

Read More

ಮಂಗಳೂರು, ಮೇ. 06 : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಹಾಗೂ ಶಾಸಕರ ಪ್ರಮಾಣವಚನ ಸ್ವೀಕಾರ ವಿಳಂಬವಾಗುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜಾಪ್ರಭುತ್ವ ಮತ್ತು ಸಂಸದೀಯ ವ್ಯವಸ್ಥೆಯು ವಿಶ್ವಾಸದ ಮೇಲೆ ನಡೆಯಬೇಕು, ವಿಶ್ವಾಸವಿಲ್ಲದಿದ್ದರೆ ವ್ಯವಸ್ಥೆ ಬಲಿಷ್ಠವಾಗಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು. ಪ್ರಮಾಣವಚನಕ್ಕೆ ಸಂಬಂಧಿಸಿದಂತೆ ತಾವು ಯಾವುದೇ ವಿಳಂಬ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ನಾನು ಬೆಂಗಳೂರಿನಲ್ಲಿದ್ದ ಅವಧಿಯಲ್ಲಿ ಯಾರೂ ನನ್ನನ್ನು ಭೇಟಿ ಮಾಡಿಲ್ಲ. ನಿನ್ನೆಯಷ್ಟೇ ಸಮಯ ಕೋರಿ ಅರ್ಜಿ ಸಲ್ಲಿಕೆಯಾಗಿದೆ. ಇದೊಂದು ವಿಶಿಷ್ಟ ಸನ್ನಿವೇಶವಾಗಿದ್ದು, ತಾಂತ್ರಿಕ ವಿಚಾರಗಳ ಬಗ್ಗೆ ತಜ್ಞರ ಅಭಿಪ್ರಾಯ ಪಡೆಯುವುದು ಅಗತ್ಯವಾಗಿದೆ” ಎಂದರು.ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲೇ ಕಾರ್ಯನಿರ್ವಹಿಸಬೇಕಾದ ಜವಾಬ್ದಾರಿ ನನ್ನ ಮೇಲಿದೆ. ಸರ್ಕಾರದ ಕಾನೂನು ಹೋರಾಟಕ್ಕೂ ನನಗೂ ಸಂಬಂಧವಿಲ್ಲ. ಈ ವಿಚಾರದಲ್ಲಿ ಆತುರಪಡುವುದು ಅಥವಾ ಸಂಶಯ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಖಾದರ್ ಕಿವಿಮಾತು ಹೇಳಿದರು. ಇದೇ ವೇಳೆ ರಾಜ್ಯಪಾಲರು ತಮಗೆ ಕರೆ…

Read More

ಕೋಟೆಕಾರ್, ಮೇ 6:ಬದ್ರಿಯಾ ವೆಲ್ಫೇರ್ ಸೊಸೈಟಿ (ರಿ), ಅಜ್ಜಿನಡ್ಕ ಇದರ 40ನೇ ವರ್ಷದ ಅಂಗವಾಗಿ ಬೃಹತ್ ರಕ್ತದಾನ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಫಾದರ್ ಮಲ್ಲರ್ ಆಸ್ಪತ್ರೆ, ಕಂಕನಾಡಿ ಹಾಗೂ ಏನಫೋಯ ಮೆಡಿಕಲ್ ಕಾಲೇಜ್ ಮತ್ತು ಬ್ಲಡ್ ಡೋನರ್ಸ್ (ರಿ), ಮಂಗಳೂರು ಇವರ ಸಹಯೋಗದಲ್ಲಿ ನಡೆಯುವ ಈ ಶಿಬಿರವು ಮೇ 10 ರ ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಅಜ್ಜಿನಡ್ಕದಲ್ಲಿ ನಡೆಯಲಿದೆ. ಶಿಬಿರದಲ್ಲಿ ರಕ್ತದಾನಕ್ಕೆ ಅವಕಾಶವಿರುವುದರ ಜೊತೆಗೆ ಎಲುಬು ಮತ್ತು ನೇತ್ರ ತಪಾಸಣೆ ಸೇವೆಗಳು ಲಭ್ಯವಿದ್ದು, ಅಗತ್ಯವಿರುವವರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವುದರ ಜೊತೆಗೆ ಉಚಿತ ವೈದ್ಯಕೀಯ ಶಿಬಿರದ ಪ್ರಯೋಜನ ಪಡೆಯುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉಳ್ಳಾಲ; ಹಿರಾ ಮಹಿಳಾ ಕಾಲೇಜು ವತಿಯಿಂದ ಕಾಲೇಜಿನ ಯೂತ್ ರೆಡ್ ಕ್ರಾಸ್ ಯುನಿಟ್ ಮತ್ತು ಎನ್.ಎಸ್.ಎಸ್.ಜಂಟಿ ಆಶ್ರಯದಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಬಬ್ಬುಕಟ್ಟೆ ಹಿರಾ ಕ್ಯಾಂಪಸ್ ಎಂ.ಎಸ್.ಎಸ್.ಎಚ್.ಎo ಸಭಾಂಗಣದಲ್ಲಿ ನಡೆಯಿತು. ಜಮಾತೆ ಇಸ್ಲಾಮಿ ಹಿಂದ್ ಮಂಗಳೂರು ಉತ್ತರ ಅಧ್ಯಕ್ಷ ಇಸಾಕ್ ಪುತ್ತೂರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಕ್ತದ ಕೊರತೆ ಬಹಳಷ್ಠಿದೆ. ಆದ್ದರಿಂದ ಇಂತಹ ಶಿಬಿರಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ರಕ್ತದಾನದ ಮೂಲಕ ಒಂದು ಜೀವ ಉಳಿಸಿದರೆ ಇಡೀ ಮನುಕುಲವನ್ನು ರಕ್ಷಿಸಿದಂತಾಗುತ್ತದೆ ಎಂದರು. ಶಾಂತಿ ಎಜುಕೇಷನಲ್ ಟ್ರಸ್ಟ್ ಕಾರ್ಯದರ್ಶಿ ಅಬ್ದುಲ್ ಕರೀಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.ಕೆ.ಎಂ.ಸಿ. ರಕ್ತ ಮೆಡಿಕಲ್ ಆಫೀಸರ್ ಡಾ.ಲಕ್ಷಿö್ಮ ಶಿಬಿರ ಸಂಯೋಜಕಿ ದುರ್ಗಾ ದಾಮೋದರ್, ಹಿರಾ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಝಾಕೀರ್, ಸಂಚಾಲಕ ರಾಹ್ಮತುಲ್ಲ, ಹಿರಾ ಮಹಿಳಾ ಕಾಲೇಜು ಪ್ರಾಂಶುಪಾಲ ಆಯಿಷಾ ಅಸ್ಮೀನ್, ಹಿರಾ ಪ್ರೌಢ ಶಾಲಾ ಮುಖ್ಯೋಪದ್ಯಾಯಿನಿ ಆಯಿಶಾ ಆಫ್ರೀನ್, ಹಿರಾ ಶಾಲೆಯ ಮುಖ್ಯೋಪದ್ಯಾಯಿನಿ ರೀನಾ ವೇಗಸ್, ಹಿರಾ ಕಾಲೇಜಿನ ಶಿಬಿರ ಸಂಯೋಜಕಿ…

Read More

ಉಡುಪಿ, ಮೇ. 06: ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆಯ ಜೊತೆಗೆ, ಇದೀಗ ಅನಿಲ ಪೂರೈಕೆಯ ಕೊರತೆಯು ಹೋಟೆಲ್ ಉದ್ಯಮವನ್ನು ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿಸಿದೆ. ವಾಣಿಜ್ಯ ಅನಿಲದ ಪೂರೈಕೆಯು ಬೇಡಿಕೆಗೆ ತಕ್ಕಂತೆ ಇಲ್ಲದಿರುವುದರಿಂದ, ಹೋಟೆಲ್ ಮಾಲೀಕರು ಪರ್ಯಾಯ ಮಾರ್ಗಗಳನ್ನು ಹುಡುಕುತ್ತಿದ್ದಾರೆ. ಕೆಲವು ಹೋಟೆಲ್‌ಗಳು ಸಾಂಪ್ರದಾಯಿಕ ಕಟ್ಟಿಗೆ ಒಲೆಗಳ ಮೊರೆ ಹೋಗಿದ್ದರೆ, ಇನ್ನು ಕೆಲವರು ತಮ್ಮ ಮೆನುವಿನಲ್ಲಿ ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಕೆಲವು ಹೊಟೇಲ್‌ಗಳು ಪಾಳಿ ಪದ್ಧತಿಯನ್ನು ಅಳವಡಿಸಿಕೊಂಡಿದ್ದು, ಬೆಳಿಗ್ಗೆ ಚಹಾ, ಕಾಫಿಯೊಂದಿಗೆ ಸೀಮಿತ ಉಪಹಾರಗಳನ್ನು ನೀಡುತ್ತಿವೆ. ಮಧ್ಯಾಹ್ನ ಸರಳ ಭೋಜನವನ್ನು ಒದಗಿಸುತ್ತಿವೆ ಮತ್ತು ಸಂಜೆ ಹಾಗೂ ರಾತ್ರಿಯ ಸಮಯದಲ್ಲಿ ಹೋಟೆಲ್‌ಗಳನ್ನು ಮುಚ್ಚುತ್ತಿವೆ.ಗ್ಯಾಸ್ ಸಿಲಿಂಡರ್‌ಗಳ ಲಭ್ಯತೆಯ ಆಧಾರದ ಮೇಲೆ ಹೋಟೆಲ್‌ಗಳು ತಮ್ಮ ದೈನಂದಿನ ವಹಿವಾಟನ್ನು ನಿರ್ವಹಿಸುತ್ತಿವೆ. ಕೆಲವು ಹೋಟೆಲ್‌ಗಳು ಸೀಮಿತ ಮೆನುವಿನೊಂದಿಗೆ ಮಧ್ಯಾಹ್ನ ಮತ್ತು ರಾತ್ರಿಯ ಭೋಜನವನ್ನು ನೀಡುತ್ತಿದ್ದರೆ, ಮತ್ತೆ ಕೆಲವು ಹೋಟೆಲ್‌ಗಳು ಕೇವಲ ಬೆಳಗಿನ ಉಪಹಾರ ಮತ್ತು ಸಂಜೆಯ ತಿಂಡಿಗಳಿಗೆ ಮಾತ್ರ ತಮ್ಮ ಸೇವೆಯನ್ನು ಸೀಮಿತಗೊಳಿಸಿವೆ.

Read More

ಬೆಳ್ತಂಗಡಿ, ಮೇ. 06: ಕ್ರೇನ್ ವಾಹನವೊಂದು ಬೈಕ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಬೆಳ್ತಂಗಡಿಯ ಬೆಳಾಲು ಪೇಟೆಯಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಬಳಂಜ ಗ್ರಾಮದ ನಿವಾಸಿ ಜಯ ಮೇಸ್ತ್ರಿ (49) ಎಂದು ಗುರುತಿಸಲಾಗಿದೆ.ಇವರು ಬೆಳಾಲು ಗ್ರಾಮದ ಬಳಿಯ ಬಾಡಿಗೆ ಮನೆಯಲ್ಲಿ ವಾಸವಿದ್ದು, ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿದ್ದರು.ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.ಈ ಸಂಬಂಧ ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಪತ್ತನಂತಿಟ್ಟ, ಮೇ. 06: ಮಲಯಾಳಂ ಚಿತ್ರರಂಗದ ಹಿರಿಯ ನಟ ಸಂತೋಷ್ ಕೆ ನಾಯರ್ ಅವರು ಮಂಗಳವಾರ ಬೆಳಿಗ್ಗೆ ಕೇರಳದ ಪತ್ತನಂತಿಟ್ಟದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮಂಗಳವಾರ ಮುಂಜಾನೆ ನಟ ಪ್ರಯಾಣಿಸುತ್ತಿದ್ದ ಕಾರು ಎದುರಿಗೆ ಬಂದ ವ್ಯಾನ್‌ ಗೆ ಢಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ನಟ ಸಂತೋಷ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವರ ಪತ್ನಿಗೆ ಗಂಭೀರವಾಗಿ ಗಾಯಗಳಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.1982ರಲ್ಲಿ ಬಿಡುಗಡೆಯಾದ ‘ಇದ್ ಞಂಙಳುಡೆ ಕಥಾ’ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಸಂತೋಷ್ ಕೆ ನಾಯರ್ ಅವರು ಬಳಿಕ 100ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ಖಳನಾಯಕ ಹಾಗೂ ಹಾಸ್ಯಪಾತ್ರಗಳ ಮೂಲಕ ಅವರು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರರಾಗಿದ್ದರು.

Read More

ಮಂಗಳೂರು: ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾದ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)’ ತುಳು ಚಲನಚಿತ್ರವು ಮೇ 22 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆಕಾಣಲಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆಟಗಾರರ ಬದುಕಿನ ಹಿನ್ನಲೆ ಆಧಾರಿತ ಕತೆ ಹೊಂದಿದೆ. ಚಿತ್ರದಲ್ಲಿ ಹಾಸ್ಯ, ಪ್ರೇಮಪೂರಿತ ಭಾವನೆಗಳು ಮತ್ತು ಸಮಾಜಮುಖಿ ಸಂದೇಶವಿರುವ ಬಿಗು ಕತೆ ಒಳಗೊಂಡಿದೆ. ಕೀರ್ತನ್ ಭಂಡಾರಿ ಅವರು ಕಥೆ, ಚಿತ್ರಕಥೆ ಬರೆದು ಮೊದಲ ಬಾರಿಗೆ ನಿರ್ದೇಶನ ಮಾಡಿದ್ದಾರೆ. ಮಂಗಳೂರು ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಚಿತ್ರೀಕರಣ ನಡೆದಿದೆ. ಈ ಚಿತ್ರದಲ್ಲಿ ನಿರ್ಮಾಪಕರಾದ ಪ್ರಜ್ವಲ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.ಚಿತ್ರದ ತಾರಾಗಣದಲ್ಲಿ ವಿನೀತ್ ಕುಮಾರ್, ನವೀನ್ ಡಿ. ಪಡೀಲ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರು, ದೀಪಕ್ ರೈ ಪಾಣಾಜೆ, ಪ್ರಕಾಶ್ ತುಮಿನಾಡು, ಉಮೇಶ್ ಮಿಜಾರು, ಸಮತಾ ಅಮೀನ್, ಅನ್ವಿತಾ ಸಾಗರ್, ಸರ್ವೋತ್ತಮ ಶೆಟ್ಟಿ, ವಾಲ್ಟರ್ ನಂದಳಿಕೆ, ರೂಪಾ ವರ್ಕಾಡಿ,…

Read More

ಉಳ್ಳಾಲ: ಅವಿವಾಹಿತ ಯುವಕನೋರ್ವ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದುಃಖದ ಘಟನೆ ಉಳ್ಳಾಲದ ಸುಂದರಿಬಾಗ್‌ನಲ್ಲಿ ನಡೆದಿದೆ. ಶಿಲ್ಪಾ ವುಡ್ ಇಂಡಸ್ಟ್ರೀಸ್ ಮಾಲಕರಾದ ಸುರೇಶ್ ಅವರ ಪುತ್ರ ಯಜ್ಞೇಶ್ ಉಳ್ಳಾಲ (30) ಆತ್ಮಹತ್ಯೆ ಮಾಡಿಕೊಂಡವರು. ಅವಿವಾಹಿತರಾಗಿದ್ದ ಯಜ್ಞೇಶ್ ಅವರು ನಿನ್ನೆ ಮನೆಯಲ್ಲಿ ತಮ್ಮ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಫ್ಯಾಷನ್ ಹಾಗೂ ಸಿನಿಮಾ ಮೇಕಪ್ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ಅವರು ತುಳು ಚಲನಚಿತ್ರರಂಗದ ಕೆಲ ನಟರ ಆಪ್ತರಾಗಿದ್ದರು ಎನ್ನಲಾಗಿದೆ.ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

Read More