Author: UllalaVani

Kannada News From Coastal Karnataka

ಬೆಂಗಳೂರು, ಜ. 20:  ಡಿಸೆಂಬರ್ 25 ರಂದು ತಡರಾತ್ರಿ ಬೆಂಗಳೂರಿನಿಂದ ಗೋಕರ್ಣಕ್ಕೆ ಹೋಗುತ್ತಿದ್ದ ಖಾಸಗಿ ಬಸ್​​ ಬೆಂಕಿಗೆ ಆಹುತಿಯಾಗಿ 8 ಜನ ಪ್ರಾಣ ಕಳೆದುಕೊಂಡಿದ್ದರು.ಈ ಹಿನ್ನೆಲೆ ಎಚ್ಚೆತ್ತುಕೊಂಡಿರುವ ಕರ್ನಾಟಕ ಸಾರಿಗೆ ಇಲಾಖೆ ಖಾಸಗಿ ಬಸ್​ಗಳಿಗೆ ಕೆಲವೊಂದು ನಿಯಮಗಳನ್ನು ಅನುಸರಿಸುವಂತೆ ಖಡಕ್ ಆಗಿ ಸೂಚನೆ ನೀಡಿದೆ. ವಿಮಾನದಲ್ಲಿ ಟೇಕ್ ಆಫ್​ಗೂ ಮುನ್ನ ಗಗನಸಖ-ಸಖಿಯರು ನೀಡುವ ಸಂದೇಶದಂತೆ, ಖಾಸಗಿ ಬಸ್​​ಗಳಲ್ಲೂ ಸಂದೇಶ ನೀಡಬೇಕು ಎಂದು ನಿರ್ದೇಶನ ನೀಡಲಾಗಿದೆ. ವಿಮಾನದಲ್ಲಿ ಟೇಕ್ ಆಫ್ಫ್​ ಆಗುವುದಕ್ಕೂ ಮುನ್ನ ಪ್ರಯಾಣಿಕರಿಗೆ ತುರ್ತು ದ್ವಾರಗಳ ಬಗ್ಗೆ ಮಾಹಿತಿ ನೀಡುತ್ತಾರೆ. ತುರ್ತು ಸಂದರ್ಭಗಳಲ್ಲಿ ತುರ್ತು ನಿರ್ಗಮನದ ಮೂಲಕ ಹೇಗೆ ನಿರ್ಗಮಿಸಬೇಕೆಂದು ತಿಳಿಸುತ್ತಾರೆ. ಆದೇ ರೀತಿಯಲ್ಲಿ ಬಸ್ ಪ್ರಯಾಣಿಕರಿಗೂ ಸುರಕ್ಷತಾ ಕ್ರಮಗಳ ಬಗ್ಗೆ ಮಾಹಿತಿ ನೀಡಬೇಕು. ಒಂದು ವೇಳೆ ಪ್ರಯಾಣಿಕರಿಗೆ ಈ ಬಗ್ಗೆ ಮಾಹಿತಿ ನೀಡಲಿಲ್ಲ ಅಂದರೆ, ಖಾಸಗಿ ಬಸ್ ಮಾಲೀಕರ ಮೇಲೆ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಲು ಮುಂದಾಗುತ್ತೇವೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.ಬಸ್ ಹೊರಡುವ ಮುನ್ನ ಪ್ರಯಾಣಿಕರಿಗೆ ಕಂಡಕ್ಟರ್…

Read More

ಮಂಗಳೂರು : ಸುಲಿಗೆ ಪ್ರಕರಣದಲ್ಲಿ ಮೂರು ವರ್ಷ ಶಿಕ್ಷೆ ಪ್ರಕಟವಾದ ಬಳಿಕ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ತೊಕ್ಕೊಟ್ಟು ಚಂಬುಗುಡ್ಡೆ, ಪೆರ್ಮನ್ನೂರು ನಿವಾಸಿ ನವೀನ್ ಸಿಕ್ವೇರಾ ( 52) ಎಂದು ತಿಳಿದುಬಂದಿದೆ. ಈತನ ಮೇಲೆ 2011 ಹಾಗೂ 2012ರಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಠಾಣಾ ಅಕ್ರ ನಂಬರ್ 195/2011 ಕಲಂ 392 ಐಪಿಸಿ ರಂತೆ ಪ್ರಕರಣ ದಾಖಲಾಗಿದ್ದು ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಯ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2015 ರಲ್ಲಿ ಮೂರು ವರ್ಷಗಳ ಕಠಿಣ ಕಾರವಾಸ ಶಿಕ್ಷೆ ಹಾಗೂ ರೂಪಾಯಿ 5000 ಜುಲ್ಮಾನೆ ವಿಧಿಸಿ ತೀರ್ಪು ನೀಡಿತ್ತು.ಆರೋಪಿಯು ಮಾನ್ಯ ಜಿಲ್ಲಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಾನ್ಯ ಉಚ್ಚ ನ್ಯಾಯಾಲಯಕ್ಕೆ ಕ್ರಿಮಿನಲ್ ರಿಟ್ ಪೆಟಿಷನ್ ಅರ್ಜಿ ಸಲ್ಲಿಸಿದ್ದು ಅರ್ಜಿ ಪರಿಶೀಲಿಸಿದ ಮಾನ್ಯ ಉಚ್ಚ ನ್ಯಾಯಾಲಯವು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಒಂದು ವರ್ಷ ಸಾಧಾ ಕಾರವಾಸ ಶಿಕ್ಷೆ ಹಾಗೂ ರೂಪಾಯಿ 15000 ದಂಡ ವಿಧಿಸಿ ಈ ಶಿಕ್ಷೆಯನ್ನು 2022ರ…

Read More

ಮಂಗಳೂರು : ಹೊಯಿಗೆ ಬಜಾರ್‌ನ ಬೋಲಾರದಲ್ಲಿರುವ ಅಲ್ಬುಕರ್ಕ್ & ಸನ್ಸ್ ಕಾರ್ಖಾನೆಯಲ್ಲಿ ಮಂಗಳವಾರ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ದಟ್ಟವಾದ ಜ್ವಾಲೆ ಮತ್ತು ಹೊಗೆ ಏರಿದ್ದರಿಂದ ಆತಂಕ ಮನೆಮಾಡಿತ್ತು. ಮಾಹಿತಿ ಪಡೆದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವಾರು ಗಂಟೆಗಳ ಕಾಲ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಯಾವುದೇ ಸಾವುನೋವುಗಳು ಸಂಭವಿಸಿಲ್ಲವೆಂದು ತಿಳಿದುಬಂದಿದೆ.ಬೆಂಕಿಯ ನಿಖರ ಕಾರಣ ಮತ್ತು ಹಾನಿಯ ಪ್ರಮಾಣದ ಬಗ್ಗೆ ಇನ್ನಷ್ಟೇ ಮಾಹಿತಿ ಡೇರೆಯಬೇಕಾಗಿದ್ದು ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಆಗಮಿಸಿದ್ದು ತನಿಖೆ ಆರಂಭಿಸಿದ್ದಾರೆ.

Read More

ಕಾಸರಗೋಡು;ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟಿçÃಯ ಹೆದ್ದಾರಿಯ ಚಟ್ಟಂಚಾಲ್ ತೆಕ್ಕಿಲ್ ಎಂಬಲ್ಲಿ ನಡೆದಿದೆ. ಮೃತರನ್ನು ದ.ಕ.ಜಿಲ್ಲೆಯ ಸಜೀಪ್ ಬೈಲುಗುತ್ತು ನಿವಾಸಿ ಸಿ.ಎಸ್ ಮುಹಮ್ಮದ್ ಎಂಬವರ ಪುತ್ರ ಆಸಿಫ್ ಮುಹಮ್ಮದ್ ಮತ್ತು ನಾಟೆಕಲ್ ನಿವಾಸಿ ಅಬ್ಬಾಸ್ ಹಾಜಿ ಎಂಬವರ ಪುತ್ರ ಮುಹಮ್ಮದ್ ಶಫೀಕ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ವಯನಾಡಿಗೆ ಪ್ರವಾಸ ತೆರಳಿದ್ದ ಈ ಐವರು ಗೆಳೆಯರು ಸೋಮವಾರ ರಾತ್ರಿ ಊರಿಗೆ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಇವರು ಪ್ರಯಾಣಿಸುತ್ತಿದ್ದ ಬಿಎಂಡಬ್ಲೂö್ಯ ಕಾರು ಚಟ್ಟಂಚಾಲ್ ತೆಕ್ಕಿಲ್ ಎಂಬಲ್ಲಿಗೆ ತಲುಪಿದಾಗ ಲಾರಿ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಆಸಿಫ್ ಸ್ಥಳದಲ್ಲೇ ಮೃತಪಟ್ಟಿದ್ದರೆ, ಶಫೀಕ್ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ. ಢಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜಗುಜ್ಜಾಗಿದೆ. ಕಾರಿನಲ್ಲಿ ಸಿಲುಕಿದವರನ್ನು ಕಾಸರಗೋಡಿನಿಂದ ಆಗಮಿಸಿದ ಅಗ್ವಿ ಶಾಮಕ ದಳದ ಸಿಬ್ಬಂದಿ ಹೊರತೆಗೆದು ಕಾಸರಗೋಡಿನ ಆಸ್ಪತ್ರೆಗೆ…

Read More

ಮಂಗಳೂರು: ತಂಡದ ಕೆಲಸ ಮತ್ತು ಸಾಮಾಜಿಕ ಏಕೀಕರಣವನ್ನು ಪ್ರದರ್ಶಿಸುವ ವಿಶಿಷ್ಟ ಕಾರ್ಯಕ್ರಮವೊಂದರಲ್ಲಿ, ಸೈಂಟ್ ಅಲೋಶಿಯಸ್ ಹಿರಿಯ ಪ್ರಾಥಮಿಕ ಶಾಲಾ ಹಳೆಯ ವಿದ್ಯಾರ್ಥಿ ಸಂಘವು, ಸೈಂಟ್ ಅಲೋಶಿಯಸ್ ಕಾಲೇಜು ಹಳೆಯ ವಿದ್ಯಾರ್ಥಿ ಸಂಘದ (SACAA) ಸಹಯೋಗದೊಂದಿಗೆ ಭಾನುವಾರ, ಜನವರಿ 18 ರಂದು ‘ಅಲೋಯ್ ಕ್ವಿಜ್-ವಿಜ್ 2026’ ಅನ್ನು ಯಶಸ್ವಿಯಾಗಿ ಆಯೋಜಿಸಿತು. ಮಂಗಳೂರಿನ ಕೊಡಿಯಾಲ್‌ಬೈಲ್‌ನಲ್ಲಿರುವ ಶಾಲಾ ಆವರಣದಲ್ಲಿ ನಡೆದ ಈ ಕಾರ್ಯಕ್ರಮವು, ವಿವಿಧ ಹಿನ್ನೆಲೆಯ ಮತ್ತು ವಿಭಿನ್ನ ಸಾಮರ್ಥ್ಯದ ವಿದ್ಯಾರ್ಥಿಗಳ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶದಿಂದ ಸಾಂಪ್ರದಾಯಿಕ ರಸಪ್ರಶ್ನೆ ಮಾದರಿಯನ್ನು ಹೊಸ ರೂಪದಲ್ಲಿ ಪ್ರಸ್ತುತಪಡಿಸಿತು. ಬೆಳಿಗ್ಗೆ 9:00 ಗಂಟೆಗೆ ಪ್ರಾರಂಭವಾದ ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರು ಸೇರಿದಂತೆ ಸುಮಾರು 200 ಮಂದಿ ಭಾಗವಹಿಸಿದ್ದರು. ಸಾಮಾನ್ಯ ಶೈಕ್ಷಣಿಕ ಸ್ಪರ್ಧೆಗಳಿಗಿಂತ ಭಿನ್ನವಾಗಿ, ಈ ರಸಪ್ರಶ್ನೆಯು ಸಹಾನುಭೂತಿ ಮತ್ತು ಸಹಕಾರವನ್ನು ಬೆಳೆಸಲು ನವೀನ ತಂಡದ ರಚನೆಯನ್ನು ಹೊಂದಿತ್ತು. ಪ್ರತಿ ತಂಡವು ಸಮಾಜದ ವಿವಿಧ ವರ್ಗಗಳ ಪ್ರತಿನಿಧಿಯಾಗಿತ್ತು; ತಂಡದಲ್ಲಿ ಒಬ್ಬ ದೃಷ್ಟಿ ವಿಕಲಚೇತನ ವಿದ್ಯಾರ್ಥಿ, ಒಬ್ಬ…

Read More

ಉಳ್ಳಾಲ: ಕಳೆದ 20 ವರ್ಷಗಳ ಹಿಂದೆ ಆರ್‌ಎಸ್‌ಎಸ್ ಬೈಠಕ್ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಅಸೌಖ್ಯಕ್ಕೀಡಾಗಿ ಸಾವನ್ನಪ್ಪಿದ ಜನಸಂಘ, ಬಿಜೆಪಿ ಹಾಗೂ ಆರ್ ಎಸ್ ಎಸ್ ಸಕ್ರಿಯ ಸದಸ್ಯರಾಗಿದ್ದ ಕುತ್ತಾರುಗುತ್ತು ಸಮೀಪದ ನಿವಾಸಿ ಮಾಧವ ಆಚಾರ್ಯ ಕುಟುಂಬ ಇಂದು ಆರ್ಥಿಕ ಸ್ಥಿತಿ ಹಾಗೂ ಸಹೋದರನ ಆರೋಗ್ಯ ಸ್ಥಿತಿಯಿಂದ ಕಂಗಾಲಾಗಿದ್ದು, ಮಾಜಿ ಶಾಸಕ ಜಯರಾಮ ಶೆಟ್ಟಿ ಸೇರಿದಂತೆ ಕುತ್ತಾರು ಬಿಜೆಪಿ ಮುಖಂಡರು ಮನೆಗೆ ಭೇಟಿ ನೀಡಿ ರೂ.2 ಲಕ್ಷದ ಚೆಕ್ ಅನ್ನು ಸಹಾಯಹಸ್ತವಾಗಿ ವಿತರಿಸಿದ್ದಾರೆ. ಮಾಜಿ ಶಾಸಕ ಜಯರಾಮ ಶೆಟ್ಟಿ ಅವರು ಮಾತನಾಡಿ, ಸಂಘ, ಬಿಜೆಪಿ, ಜನಸಂಘಕ್ಕೆ ಕೆಲಸ ಮಾಡಿದವರು ಮಾಧವ ಆಚಾರ್ಯರು. ತೊಕ್ಕೊಟ್ಟು ಜ್ಯುವೆಲ್ಲರಿಯನ್ನು ನಡೆಸುತ್ತಾ ಕುಟುಂಬದ ಜೀವನಾಧಾರವಾಗಿದ್ದರು. ಆದರೆ 20 ವರ್ಷಗಳ ಹಿಂದಿನ ಅವರ ಸಾವು ಇಡೀ ಕುಟುಂಬಕ್ಕೆ ಜೀವನಾಧಾರವನ್ನೇ ಕಸಿದಿತ್ತು. ಅವರ ಸಾವಿನ ನಂತರ ಇಬ್ಬರು ಸಹೋದರರೂ ಸಾವನ್ನಪ್ಪಿ, ಸಹೋದರಿಗೂ ವಿವಾಹ ನಡೆಸಲು ಅಸಾಧ್ಯವಾಗಿತ್ತು. ಮರದ ಕೆಲಸ ನಿರ್ವಹಿಸುತ್ತಾ ಸಹೋದರ ಲಕ್ಷ್ಮಣ್ ಆಚಾರ್ಯ ಸಹೋದರಿಯರು, ಅವರ ಪುತ್ರಿಯರ ಜವಾಬ್ದಾರಿಯನ್ನು ನಿಭಾಯಿಸುತ್ತಾ…

Read More

ಉಳ್ಳಾಲ, ಜ. 19 : ದೇಶದೆಲ್ಲೆಡೆ ಸಂಚಲನ ಮೂಡಿಸಿದ್ದ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕಿನ ಕೆ.ಸಿ.ರೋಡ್‌ ಶಾಖೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಒಂದು ವರ್ಷ. ಆದರೆ ಪ್ರಕರಣದಲ್ಲಿ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ತಮಿಳುನಾಡು, ಮಹಾರಾಷ್ಟ್ರ ಪೊಲೀಸರ ಸಹಕಾರದಲ್ಲಿ ಕಾರ್ಯಾ ಚರಣೆ ನಡೆಸಿದ್ದ ಮಂಗಳೂರು ಪೊಲೀಸರು ಪ್ರಕರಣ ನಡೆದು ನಾಲ್ಕು ದಿನದೊಳಗೆ ನಾಲ್ವರು ಆರೋಪಿಗಳ ಸಹಿತ ಎಲ್ಲ 13.50 ಕೋ.ರೂ. ಮೌಲ್ಯದ 18 ಕೆಜಿ 360 ಗ್ರಾಂ ಚಿನ್ನ ಹಾಗೂ ನಗದನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ದರೋಡೆ ಯಾಗಿದ್ದ ಸೊತ್ತುಗಳು ಸಿಕ್ಕಿರುವುದ ರಿಂದ ಬಾಕಿ ಆರೋಪಿಗಳ ಬಂಧನಕ್ಕೆ ಪೊಲೀಸರು ಆಸಕ್ತಿ ತೋರಿಸಿರಲಿಲ್ಲ. ಈಗಾಗಲೇ ಬಂಧಿತರಿಗೂ ಉಳಿದ ಮೂವರಿಗೂ ಯಾವುದೇ ಮಾಹಿತಿ, ಪರಿಚಯವಿಲ್ಲ. ಅವರು ಬೇರೆಯೇ ತಂಡದ ಸದಸ್ಯರು. ಹಾಗಾಗಿ ಅವರ ಬಂಧನ ಪೊಲೀಸರಿಗೂ ಸವಾಲಾಗಿದೆ.ಪ್ರಸ್ತುತ ಕಮಿಷನರ್‌ ಸುಧೀರ್‌ಕುಮಾರ್‌ ರೆಡ್ಡಿ ಮತ್ತು ಪ್ರಕರಣದ ತನಿಖಾಧಿಕಾರಿ ಮಂಗಳೂರು ನಗರ ದಕ್ಷಿಣ ಎಸಿಪಿ ವಿಜಯ ಕ್ರಾಂತಿ ಅವರು ಹೆಚ್ಚಿನ ಆಸಕ್ತಿ ವಹಿಸಿದ್ದಾರೆ. ಜತೆಗೆ ಬಂಧಿತ ಆರೋಪಿಗಳಿಗೆ…

Read More

ಕೋಝಿಕ್ಕೋಡ್ ಜ. 19: ತುಂಬಾ ರಶ್ ಬಸ್ ನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಯುವತಿಯೊಬ್ಬಳು ವಿಡಿಯೋ ಮಾಡಿ ವೈರಲ್ ಮಾಡಿದ್ದು, ಇದೀಗ ವಿಡಿಯೋದಲ್ಲಿದ್ದ ಯುವಕ ಅವಮಾನ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಈ ಘಟನೆ ಇದೀಗ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಆತ್ಮಹತ್ಯೆ ಮಾಡಿಕೊಂಡ ಆರೋಪ ಹೊತ್ತಿದ್ದ ಕೋಝಿಕ್ಕೋಡ್‌ನ ಗೋವಿಂದಪುರಂ ಮೂಲದ ದೀಪಕ್(40) ಎಂದು ಗುರುತಿಸಲಾಗಿದೆ. ಪಯ್ಯನ್ನೂರಿನಲ್ಲಿ ಈ ಘಟನೆ ನಡೆದಿದೆ. ಜನದಟ್ಟಣೆಯ ಬಸ್ಸಿನಲ್ಲಿ ಲೈಂಗಿಕ ಉದ್ದೇಶದಿಂದ ಅವನು ಉದ್ದೇಶಪೂರ್ವಕವಾಗಿ ತನ್ನನ್ನು ಮುಟ್ಟಿದ್ದಾನೆ ಎಂದು ಆರೋಪಿಸಿ ಮಹಿಳೆ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಸುಮಾರು 2 ಮಿಲಿಯನ್‌ಗಿಂತಲೂ ಹೆಚ್ಚು ಜನರು ವೀಡಿಯೊವನ್ನು ವೀಕ್ಷಿಸಿದ್ದಾರೆ ಮತ್ತು ಅನೇಕ ಜನರು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ವಿಡಿಯೋ ವೈರಲ್ ಆದ ನಂತರ ದೀಪಕ್ ತುಂಬಾ ದುಃಖಿತನಾಗಿದ್ದ, ವಿಡಿಯೋ ವೈರಲ್ ಆದ ಮರುದಿನ ಬೆಳಿಗ್ಗೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಘಟನೆಯಲ್ಲಿ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜು ಪೊಲೀಸರು ಅಸ್ವಾಭಾವಿಕ ಸಾವಿನ ಪ್ರಕರಣ…

Read More

ಕುಂಬಳೆ: ಕಣಿಪುರ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಅಂಗವಾಗಿ ನಡೆದ ಬೆಡಿ ಮಹೋತ್ಸವದ ಹಿನ್ನೆಲೆಯಲ್ಲಿ ಸರಿಯಾದ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳದ ಕಾರಣ ಬೆಡಿ ಉತ್ಸವ ಸಮಿತಿ ವಿರುದ್ಧ ಕುಂಬಳೆ ಪೊಲೀಸರು ಕೇಸು ದಾಖಲಿಸಿದ್ದಾರೆ. ಸಮಿತಿ ಅಧ್ಯಕ್ಷ ಸದಾನಂದ ಕಾಮತ್ ಕೆ, ಸದಸ್ಯರುಗಳಾದ ಲಕ್ಷö್ಮಣ ಪ್ರಭು ಕುಂಬ್ಳೆ, ಸುಧಾಕರ ಕಾಮತ್, ದಯಾರಾಜ್ ಎಂಬವರ ವಿರುದ್ಧ ಕೇಸು ದಾಖಲಾಗಿದೆ. ಜಾತ್ರೋತ್ಸವಕ್ಕೆ ಬಂದ ಜನರಿಗೆ ಅಪಾಯಗಳುಂಟಾಗುವoತೆ ನಿರ್ಲಕ್ಷ್ಯ ವಹಿಸಿ, ಅಜಾಗರೂಕತನದಿಂದ ಸಿಡಿಮದ್ದು ಸಿಡಿಸಲಾಗಿದೆ ಎಂದು ಉಲ್ಲೇಖಿಸಿ ಪೊಲೀಸರು ಸ್ವಯಂ ಪ್ರೇರಿತರಾಗಿ ಕೇಸು ದಾಖಲಿಸಿದ್ದಾರೆ. ಕುಂಬಳೆ ಪೊಲೀಸ್ ಠಾಣೆಯ ಮುಂಭಾಗದಲ್ಲಿ ದೇವರ ಬೆಡಿಕಟ್ಟೆ ಸಮೀಪ ಸಿಡಿಮದ್ದು ಪ್ರದರ್ಶನ ನಡೆದಿತ್ತು. ಭಾರೀ ಸಂಖ್ಯೆಯ ಜನರು ನೆರೆದಿದ್ದರು. ಪ್ರಸಿದ್ಧವಾದ ಕುಂಬಳೆ ಬೆಡಿ ಉತ್ಸವಕ್ಕೆ ಸರಿಯಾದ ಮುನ್ನೆಚ್ಚರಿಕಾ ಮಾನದಂಡ ಪಾಲಿಸಲಿಲ್ಲವೆಂದು ಇವರ ವಿರುದ್ಧ ಕೇಸು ದಾಖಲಿಸಲಾಗಿದೆ.

Read More

ಮಂಗಳೂರು: ಅಖಿಲ ಭಾರತ ಬಿಲ್ಲವರ ಯೂನಿಯನ್ ವತಿಯಿಂದ ನಡೆದ ಜಾಗತಿಕ ಬಿಲ್ಲವ ಕ್ರೀಡಾ ಕೂಟದಲ್ಲಿ ಚಾಂಪಿಯನ್ಸ್ ಟ್ರೋಫಿ ಪಡೆದುಕೊಂಡ ಬ್ರಹ್ಮಶ್ರೀ ಉಳ್ಳಾಲ ತಂಡದ ಕ್ರೀಡಾಪಟುಗಳಿಗೆ , ಆಟಗಾರರನ್ನು ಒಗ್ಗೂಡಿಸಲು ಹಗಲು ರಾತ್ರಿ ಸಹಕರಿಸಿದ ನಾಯಕರಿಗೆ ಬ್ರಹ್ಮಶ್ರೀ ಬಿಲ್ಲವ ವೇದಿಕೆ ಉಳ್ಳಾಲ ಅಧ್ಯಕ್ಷ ಕೆ.ಟಿ.ಸುವರ್ಣ ಕೃತಜ್ಞತೆ ಹಾಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಜಾಗತಿಕ ಬಿಲ್ಲವ ಕ್ರೀಡಾಕೂಟದಲ್ಲಿ ಜಾಗತಿಕ ಬಿಲ್ಲವ ಕ್ರೀಡಾ ಚಾಂಪಿಯನ್ಸ್ ಟ್ರೋಫಿಯನ್ನು ಬ್ರಹ್ಮಶ್ರೀ ಉಳ್ಳಾಲ ತಂಡ ಪಡೆದುಕೊಂಡಿದೆ. ಬ್ರಹ್ಮಶ್ರೀ ಉಳ್ಳಾಲ ತಂಡ ವಾಲಿಬಾಲ್ ಪ್ರಥಮ , ಹಗ್ಗ ಜಗ್ಗಾಟ ದ್ವಿತೀಯ , ತ್ರೋಬಾಲ್‌ ನಲ್ಲಿ ತೃತೀಯ ಪಡೆದು ಉಳ್ಳಾಲಕ್ಕೆ ಹೆಚ್ಚಿನ ಅಂಕವನ್ನು ಸಾಧಿಸಿತ್ತು. ಯಶಸ್ಸಿನಲ್ಲಿ ಉಳ್ಳಾಲ ಭಾಗದ ಬಿಲ್ಲವ ಸಂಘಗಳಾದ ಕೊಲ್ಯ ಬಿಲ್ಲವ ಸಂಘ, ಗ್ರಾಮ ಚಾವಡಿ ಬಿಲ್ಲವ ಸಂಘ, ಅಂಬ್ಲಮೊಗರು ಬಿಲ್ಲವ ಸಂಘ , ಬಿಲ್ಲವ ಸಂಘ ಕಿನ್ಯ ಬೆಳರಿಂಗೆ, ಬ್ರಹ್ಮಶ್ರೀ ಬಿಲ್ಲವ ವೇದಿಕೆ ಮುಡಿಪು, ತಲಪಾಡಿ ಬಿಲ್ಲವ ಸಂಘ , ಬೋಳಿಯಾರ್ ಬಿಲ್ಲವ ಸಂಘ , ಬ್ರಹ್ಮಶ್ರೀ ಮಹಿಳಾ ವೇದಿಕೆ…

Read More