ಮಂಗಳೂರು, ಮಾ.24: ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಅಕ್ರಮ ಗಾಂಜಾ ವಶಪಡಿಸಿಕೊಂಡ ಘಟನೆ ನಡೆದಿದೆ. ಮಾರ್ಚ್ 23ರಂದು ಬೆಳಿಗ್ಗೆ ಸುಮಾರು 11.56 ಗಂಟೆಯ ವೇಳೆ, ಪಾಲಕ್ಕಾಡ್ ವಿಭಾಗದ ಮಂಗಳೂರು ಸೆಂಟ್ರಲ್ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ IPF ಮನೋಜ್ ಕುಮಾರ್ ಯಾದವ್ ಹಾಗೂ ಸಿಬ್ಬಂದಿ, MAS–MAQ ಎಕ್ಸ್ಪ್ರೆಸ್ (ರೈಲು ಸಂಖ್ಯೆ 12601) ರೈಲು ಪ್ಲಾಟ್ಫಾರ್ಮ್ ಸಂಖ್ಯೆ 1ಕ್ಕೆ ಆಗಮಿಸಿದಾಗ ಸಾಮಾನ್ಯ ಡಬ್ಬಿಯಲ್ಲಿ ಅನಾಥವಾಗಿ ಬಿಟ್ಟಿದ್ದ ಸಂಶಯಾಸ್ಪದ ಚೀಲವನ್ನು ಪರಿಶೀಲಿಸಿದರು. ಪರಿಶೀಲನೆಯ ವೇಳೆ, ಸುಮಾರು 10.129 ಕೆಜಿ ಒಣ ಗಾಂಜಾ ಪತ್ತೆಯಾಗಿದ್ದು, ಇದರ ಅಂದಾಜು ಮೌಲ್ಯ ₹5,06,450/- ಎಂದು ತಿಳಿದುಬಂದಿದೆ. ವಶಪಡಿಸಿಕೊಂಡ ಗಾಂಜಾವನ್ನು ಮಂಗಳೂರು ಅಬಕಾರಿ ಇಲಾಖೆಗೆ ಹಸ್ತಾಂತರಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಗಾಂಜಾ ಸಾಗಾಟದ ಹಿಂದೆ ಇರುವವರನ್ನು ಪತ್ತೆಹಚ್ಚಲು ತನಿಖೆ ಮುಂದುವರಿದಿದೆ.
Author: UllalaVani
ಕಾಸರಗೋಡು, ಮಾ.24: ಶಿರೂರು ಭೂಕುಸಿತದಲ್ಲಿ ನಾಪತ್ತೆಯಾದ ಅರ್ಜುನ್ ಅವರ ತಾಯಿ ಶೀಲಾ ಅವರು ಮಂಜೇಶ್ವರ ಮಂಡಲದ ಯುಡಿಎಫ್ ಅಭ್ಯರ್ಥಿ ಎಕೆಎಂ ಅಶ್ರಫ್ ಅವರಿಗೆ ನಾಮಪತ್ರ ಸಲ್ಲಿಕೆಯೊಂದಿಗೆ ಪಾವತಿಸಬೇಕಾದ ಇಡುಗಂಟನ್ನು ನೀಡಿ ಆಶೀರ್ವದಿಸಿದ್ದಾರೆ. ನಾಮಪತ್ರ ಸಮರ್ಪಣೆಗಿಂತ ಪೂರ್ವಭಾವಿಯಾಗಿ ಎಕೆಎಂ ಅಶ್ರಫ್ ಪಾಣಕ್ಕಾಡ್ ತಂಙಳ್ ಆಶೀರ್ವಾದಕ್ಕೆ ತೆರಳಿದ್ದರು. ಮರಳಿ ಬರುವ ದಾರಿ ಮಧ್ಯೆ ಕೋಝಿಕೋಡ್ ಕನ್ನಾಡಿಕ್ಕಲ್ನಲ್ಲಿ ವಾಸಿಸುವ ಅರ್ಜುನ್ ತಾಯಿಯನ್ನೂ ಭೇಟಿಯಾಗಿದ್ದರು. ಈ ವೇಳೆ ಅರ್ಜುನ್ ಅಮ್ಮ ಅಶ್ರಫ್ ಅವರಿಗೆ ಇಡುಗಂಟು ನೀಡಿದರು. ಉತ್ತರ ಕರ್ನಾಟಕದ ಶಿರೂರಿನಲ್ಲಿ ಭೂಕುಸಿತ ನಡೆದು ಲಾರಿ ಸಹಿತ ಹೊಳೆಯಲ್ಲಿ ನೀರುಪಾಲಾದ ಅರ್ಜುನ್ ಪತ್ತೆಗೆ ಒಂದೂವರೆ ತಿಂಗಳ ಕಾರ್ಯಾಚರಣೆ ನಡೆದಿತ್ತು. ಕೇರಳ ಕರ್ನಾಟಕದ ಮಧ್ಯವರ್ತಿಯಂತೆ ಶಾಸಕ ಎಕೆಎಂ ಅಶ್ರಫ್ ಶಿರೂರಿನಲ್ಲಿದ್ದರು. ಆ ಸಂದರ್ಭವನ್ನು ಕೇರಳದ ದೃಶ್ಯ ಮಾಧ್ಯಮಗಳು ಬಿತ್ತರಿಸಿದ್ದವು. ಸತತ ನಲುವತ್ತಕ್ಕೂ ಅಧಿಕ ದಿನದ ಹುಡುಕಾಟದಿಂದ ಶಿರೂರು ಹೊಳೆಯಲ್ಲಿ ಅರ್ಜುನನ ಅಸ್ಥಿ ಅವಶೇಷಗಳು ಸಿಕ್ಕಿದ್ದುವು. ಅದನ್ನು ಕೇರಳದುದ್ದಕ್ಕೂ ಅರ್ಜುನ್ ಅಂತ್ಯಾಜಲಿ ಪಯಣದ ಮೂಲಕ ಕೊಂಡೊಯ್ದು ಅರ್ಜುನ್ ಅಮ್ಮನಿಗೆ ಒಪ್ಪಿಸಲಾಗಿತ್ತು. ಈ…
ಉಳ್ಳಾಲ: ಇಲ್ಲಿನ ತಾಲೂಕಿನ ಸಜಿಪ ಪಡು ತಲೆಮೊಗರು ಮಸೀದಿ ವಠಾರದಲ್ಲಿ ಇತ್ತಂಡಗಳ ನಡುವೆ ನಡೆದ ಮಾರಾಮಾರಿಗೆ ಸಂಬಂಧಿಸಿದಂತೆ ಇತ್ತಂಡಗಳಿಂದ ದೂರು ಮತ್ತು ಪ್ರತಿದೂರು ದಾಖಲಾಗಿದೆ. ಉಳ್ಳಾಲ ಸಜಿಪ ಪಡು ನಿವಾಸಿ ಅಬ್ದುಲ್ ನವಾಝ್ (42) ಎಂಬವರ ದೂರಿನಂತೆ, ಮಾ.22 ರಂದು ಬೆಳಿಗ್ಗೆ, ಪಿರ್ಯಾದುದಾರರು ಮತ್ತು ಅವರ ಸಂಬಂಧಿ ದಾವೂದ್ ಜೊತೆಯಲ್ಲಿ ತಲೆಮೊಗರು ಮಸೀದಿಗೆ ಹೋಗಿ ವಾಪಾಸ್ಸು ಬರುತ್ತಿರುವಾಗ ಸದ್ರಿ ಮಸೀದಿಗೆ ಸಂಬಂಧಿಸಿದ ಕಟ್ಟಡದಲ್ಲಿರುವ ಶೌಕತ್ ಎಂಬಾತನ ಅಂಗಡಿಯ ಬಳಿ ಆರೋಪಿತರಾದ ಶೌಕತ್, ಇಸಾಕ್, ಸಫಿಕ್, ಯಾಕೂಬ್, ಮಹಮ್ಮದ್ ಮುಸ್ತಫಾ, ನಾಸಿರ್ ಹಾಗೂ ನಿಝಾಲ್ ರವರು ಗುಂಪು ಕಟ್ಟಿಕೊಂಡು ನಿಂತಿದ್ದರು. ಅಬ್ದುಲ್ ನವಾಝ್ ಹಾಗೂ ದಾವೂದ್ ರವರು ಸ್ಥಳಕ್ಕೆ ಬಂದಾಗ ಆರೋಪಿಗಳು ಮಸೀದಿಯ ವಿಚಾರದಲ್ಲಿ ತಕರಾರು ತೆಗೆದು, ಅವ್ಯಾಚವಾಗಿ ನಿಂದಿಸಿ, ಕತ್ತಿ ಹಾಗೂ ದೊಣ್ಣೆಯಿಂದ ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿ ತೆರಳಿದ್ದಾರೆ. ಹಲ್ಲೆಯಿಂದಾದ ಗಾಯಕ್ಕೆ ನವಾಝ್ ಹಾಗೂ ದಾವೂದ್ ರವರು ಉಪಚರಿಸಿ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಈ ಕುರಿತು…
ಉಳ್ಳಾಲ: ಮೀನುಗಾರಿಕೆಗೆ ತೆರಳಿದ್ದ ಗಿಲೆಟ್ ದೋಣಿಯಲ್ಲಿ ಅವಘಡ ಸಂಭವಿಸಿ, ಮೀನುಗಾರಿಕೆಗಾಗಿ ಬಳಸುತ್ತಿದ್ದ ಬಲೆ ಹಾಗೂ ಇತರ ಪರಿಕರಗಳು ಸಮುದ್ರದಲ್ಲಿ ಮುಳುಗಿ ಹಾನಿಯಾದ ಘಟನೆ ನಡೆದಿದೆ. ಸಂಖ್ಯೆಯ ಗಿಲೆಟ್ ದೋಣಿಯಲ್ಲಿ ಕೋಟೆಪುರದಿಂದ ಕ್ಯಾಪ್ಟನ್ ಅಬ್ದುಲ್ ರೆಹಮಾನ್, ಅರುಣ್ ಹಾಗೂ ಚಾಲೋಸ್ ಅವರು ಮಾ.16ರಂದು ಮೀನುಗಾರಿಕೆಗೆ ತೆರಳಿದ್ದರು. ಅಳಿವೆ ಬಾಗಿಲಿನಿಂದ ಪಶ್ಚಿಮಕ್ಕೆ ಸುಮಾರು 8 ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ, ಬಲೆ ಹಾಗೂ ಇತರ ಉಪಕರಣಗಳು ನೀರಿನಲ್ಲಿ ಮುಳುಗಿ ಕಾಣೆಯಾಗಿವೆ. ಈ ಅವಘಡದಿಂದ ಮೀನುಗಾರರಿಗೆ ಅಪಾರ ಆಥಿಕ ನಷ್ಟ ಉಂಟಾಗಿದೆ. ಈ ಸಂಬಂಧ ಅಬ್ದುಲ್ ರೆಹಮಾನ್ ನೀಡಿದ ದೂರಿನ ಮೇರೆಗೆ ಕರಾವಳಿ ಕಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಗಳೂರು: ಮಂಗಳೂರು ನಗರ ಸಿಸಿಬಿ ಪೊಲೀಸರ ಕಾರ್ಯಾಚರಣೆಯಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎAಎ ವಶಪಡಿಸಿಕೊಂಡು ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ತೊಕ್ಕೊಟ್ಟು ನಿವಾಸಿಗಳಾದ ಹೈದರ್ ಅಲಿಯಾಸ್ ಹೈದರ್ ಆಲಿ (53), ಮೊಹಮ್ಮದ್ ಸಜಾದ್ (29) ಹಾಗೂ ಪಂಪ್ವೆಲ್ ನಿವಾಸಿ ಜೈಸನ್ ಮೆನೆಜಸ್ (26) ಅವgನ್ನು ಬಂಧಿಸಲಾಗಿದೆ. ಮಂಗಳೂರು ನಗರಕ್ಕೆ ಎಂಡಿಎoಎ ಮಾದಕ ವಸ್ತುವನ್ನು ತಂದು ಆಟೋ ರಿಕ್ಷಾದಲ್ಲಿ ಪಂಪವೆಲ್ ಎಕ್ಕೂರು ಪರಿಸರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದರು. ಬಂಧಿತರಿAದ ಸುಮಾರು 26 ಗ್ರಾಂ ತೂಕದ ಎಂಡಿಎAಎ ಮಾದಕ ವಸ್ತು, ರೂ.37,000 ನಗದು, 5 ಮೊಬೈಲ್ ಫೋನ್, ತೂಕಮಾಪನ ಯಂತ್ರ ಹಾಗೂKA-19-AC-2245 ಸಂಖ್ಯೆಯ ಆಟೋ ರಿಕ್ಷಾ ಸೇರಿ ಒಟ್ಟು ರೂ.4,37,500 ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ಈ ಕುರಿತು ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪ್ರಮುಖ ಆರೋಪಿ ಹೈದರ್ ಅಲಿ ವಿರುದ್ಧ ಈ ಹಿಂದೆ ಮಾದಕ ವಸ್ತು ಮಾರಾಟ, ಪೊಲೀಸ್…
ಉಡುಪಿ, ಮಾ. 23: ಇರಾನ್, ಅಮೆರಿಕ ಮತ್ತು ಇಸ್ರೇಲ್ ನಡುವೆ ನಡೆಯುತ್ತಿರುವ ಸಂಘರ್ಷವು ಕರ್ನಾಟಕದ ಕರಾವಳಿ ಭಾಗದ ಮೀನುಗಾರರ ಮೇಲೆ ತೀವ್ರ ಪರಿಣಾಮ ಬೀರಿದೆ. ಹೋಟೆಲ್ ಬಂದ್ ಮತ್ತು ರಫ್ತು ಸ್ಥಗಿತದಿಂದಾಗಿ ಮೀನಿನ ದರ ಕುಸಿದಿದ್ದು, ಮೀನುಗಾರಿಕೆ ಉದ್ಯಮವು ಸಂಕಷ್ಟದಲ್ಲಿ ಸಿಲುಕಿದೆ. ಏಷ್ಯಾದ ಅತಿದೊಡ್ಡ ಮೀನುಗಾರಿಕಾ ಬಂದರುಗಳಲ್ಲಿ ಒಂದಾದ ಮಲ್ಪೆಯಲ್ಲಿ ಮೀನುಗಾರಿಕೆ ಉದ್ಯಮವು ತೀವ್ರ ಸಂಕಷ್ಟ ಎದುರಿಸುತ್ತಿದೆ. ಯುದ್ಧದ ಹಿನ್ನೆಲೆಯಲ್ಲಿ ಮೀನು ರಫ್ತು ಸ್ಥಗಿತಗೊಂಡಿರುವುದು ಮತ್ತು ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಕೊರತೆಯಿಂದಾಗಿ ಹೋಟೆಲ್ಗಳು ಮುಚ್ಚಿರುವುದು ಮೀನಿನ ಬೆಲೆ ದಿಢೀರ್ ಕುಸಿಯಲು ಕಾರಣವಾಗಿದೆ. ಮಾರುಕಟ್ಟೆ ಮೂಲಗಳ ಪ್ರಕಾರ, ಮೀನಿನ ತಳಿಗಳಿಗೆ ಅನುಗುಣವಾಗಿ ಪ್ರತಿ ಕೆಜಿಗೆ 50 ರೂ. ನಿಂದ 200 ರೂ. ವರೆಗೆ ಬೆಲೆ ಇಳಿಕೆಯಾಗಿದೆ.ಈ ಬಿಕ್ಕಟ್ಟಿನಿಂದ ಮಹಿಳಾ ಮೀನು ಮಾರಾಟಗಾರರು ತೀವ್ರ ಸಂಕಷ್ಟದಲ್ಲಿ ಸಿಲುಕಿದ್ದಾರೆ. “ಕೇರಳ ಮೂಲದ ವ್ಯವಹಾರಗಳಿಗಾಗಿ ಮಲ್ಪೆಯಿಂದ ಹೆಚ್ಚಿನ ಪ್ರಮಾಣದಲ್ಲಿ ಮೀನು ಖರೀದಿಸುತ್ತಿದ್ದ ಹೋಟೆಲ್ಗಳು ಈಗ ಮುಚ್ಚಲ್ಪಟ್ಟಿವೆ. ಇದರಿಂದ ಮೀನಿನ ಪೂರೈಕೆ ಸಂಪೂರ್ಣ ಸ್ಥಗಿತಗೊಂಡಿದೆ. ‘ಯುದ್ಧದ ಹಿನ್ನೆಲೆಯಲ್ಲಿ ಅಡುಗೆ ಅನಿಲ…
ಪುತ್ತೂರು, ಮಾ. 23 : ಕಳೆದ ಶುಕ್ರವಾರದಂದು ಅರಿಯಡ್ಕ ಗ್ರಾಮದ ಕಟ್ಟತ್ತಾರು ಸಮೀಪದ ಗೋಳ್ತಿಲ ಎಂಬಲ್ಲಿ ತನ್ನ ಪತ್ನಿಯನ್ನು ಕೊಲೆಗೈದು, ಬಳಿಕ ತಾನೂ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ. ಆರೋಪಿ ಎಮೆಟ್ಟಿ ನಿವಾಸಿ ಪುರುಷೋತ್ತಮ ಅಲಿಯಾಸ್ ಬೈರಪ್ಪ ಎಂಬಾತ ಘಟನೆಯ ನಂತರ ಗಂಭೀರ ಸ್ಥಿತಿಯಲ್ಲಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದನು. ಪ್ರಸ್ತುತ ಆತ ಚೇತರಿಸಿಕೊಳ್ಳುತ್ತಿದ್ದು, ಅಪಾಯದಿಂದ ಹೊರಬಂದಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಆರೋಪಿ ಬೈರಪ್ಪ ತನ್ನ ಪತ್ನಿ ಸಾವಿತ್ರಿಯನ್ನು ಚಾಕುವಿನಿಂದ ಬೆನ್ನಟ್ಟಿ ಇರಿದು ಕೊಂದಿದ್ದನು. ನಂತರ ತಾನೂ ಕತ್ತು ಸೀಳಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದನು. ಪ್ರಸ್ತುತ ಆತನ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಪೊಲೀಸರು ಖಚಿತಪಡಿಸಿದ್ದಾರೆ.ಈ ಮಧ್ಯೆ, ಸಾವಿತ್ರಿಯ ತಂದೆ ಕುಮಾರಮಂಗಲದ ಟಿಪ್ಪ ಎಂಬುವವರು ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬೈರಪ್ಪ ತನ್ನ ಪತ್ನಿಯ ನಡತೆಯ ಮೇಲೆ ಶಂಕೆ ವ್ಯಕ್ತಪಡಿಸಿ ಈ ಕೊಲೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ದೂರಿನ ಆಧಾರದ ಮೇಲೆ ಪೊಲೀಸರು ಕೊಲೆ…
ಕೊಣಾಜೆ: ಬೆಳ್ಮ ದೇರಳಕಟ್ಟೆಯ ಖಾಸಗಿ ಮೆಡಿಕಲ್ ಕಾಲೇಜು ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಕೊಣಾಜೆ ಪೊಲೀಸರು ಬಂಧಿಸಿ ಆತನಿಂದ ಸುಮಾರು ಒಂದು ಲಕ್ಷದ ಆರು ಸಾವಿರ ರೂ.ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತ ಆರೋಪಿಯನ್ನು ಕೂಳೂರು ಕಸಬ ಬೆಂಗ್ರೆ ನಿವಾಸಿ ಝಾಕಿರ್ ಹುಸೈನ್ (19) ಎಂದು ಗುರುತಿಸಲಾಗಿದೆ.ಈತ ದೇರಳಕಟ್ಟೆ ಮೆಡಿಕಲ್ ಕಾಲೇಜು ಬಳಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಆತನಿಂದ 10.6 ಗ್ರಾಂ ತೂಕದ ಎಂಡಿಎ0ಎ, ಮೊಬೈಲ್ ಫೋನ್, ಸಿರಿಂಜ್, ಸಿಗರ್ ಲೈಟ್ ಹಾಗೂ ನಂಬರ್ ಪ್ಲೇಟ್ ಇಲ್ಲದ ಬೈಕ್ ಹಾಗು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈತನ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೊಕ್ಕೊಟ್ಟು ; ಪರಿಸರ ಸಮಗ್ರ ಕಸವಿಲೇವಾರಿಗೆ ಸಂಘಟಿತ ಪ್ರಯತ್ನ ಸಾಮೂಹಿಕ ಜಾಗೃತಿ ಅಗತ್ಯ ಎಂದು ಸ್ವಚ್ಛತಾ ರಾಯಭಾರಿ ಶೀನ ಶೆಟ್ಟಿ ಹೇಳಿದ್ದಾರೆ. ಇವರು ಸಿರಿ ತೋಟಗಾರಿಕಾ ಸಂಘ ಇದರ ಆಶ್ರಯದಲ್ಲಿ ತೋಟಗಾರಿಕೆ ಇಲಾಖೆ ಮಂಗಳೂರು ಇದರ ಸಹಯೋಗದೊಂದಿಗೆ ಕಾರ್ಯನಿರತ ಪತ್ರಕರ್ತರ ಸಂಘ ಉಳ್ಳಾಲ, ಫುಡ್ ಚೈನ್ ಕ್ಯಾಂಪೇನ್, ಶಿವಾಜಿ ಫ್ರೆಂಡ್ಸ್ ಸರ್ಕಲ್, ಸ್ವಾಮಿ ಕೊರಗಜ್ಜ ಸೇವಾ ಸಮಿತಿ ತೊಕ್ಕೊಟ್ಟು, ರಿಚಲ್ ಸರ್ವಿಸಸ್ , ಮಂಗಳೂರು ಆಟೋ ರಿಕ್ಷಾ ಮತ್ತು ಕಾರು ಚಾಲಕರ ಸಹಕಾರಿ ಸಂಘ ತೊಕ್ಕೊಟ್ಟು ಇವುಗಳ ಸಂಯುಕ್ತ ಸಹಭಾಗಿತ್ವದಲ್ಲಿ ಕೈತೋಟ, ತಾರಸಿತೋಟ ನಿರ್ಮಾಣದ ಬಗ್ಗೆ ಉಚಿತ ತರಬೇತಿ ಹಾಗೂ ತರಕಾರಿ ಬೀಜ ಮತ್ತು ಸಸಿ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಬಿತ್ತಿದಂತೆ ಬೆಳೆ ಎಂಬoತೆ ಉತ್ತಮ ಬೀಜ ಬಿತ್ತಿದರೆ ಕೃಷಿ ಅಭಿವೃದ್ಧಿಪಡಿಸಲು ಸಾಧ್ಯ. ನಾವು ಉತ್ತಮ ಚಿಂತನೆ ಅಳವಡಿಸಿಕೊಂಡರೆ ಮನಸು ಸ್ವಚ್ಚಗೊಳಿಸಲು ಸಾಧ್ಯ. ನಮಗಿರುವ ಎಲ್ಲಾ ಸೌಲಭ್ಯಗಳನ್ನು ಅನುಭವಿಸಲು ನಮಗೆ ಸಾಧ್ಯವಾಗುತ್ತಿಲ್ಲ. ನಾವು ಮೌನದಿಂದ ಇರುವ ಕಾರಣ ದೇಶದಲ್ಲಿ ಮಹಾ ಮಾಲಿನ್ಯ…
ಯೆನೆಪೋಯ: ಆಟೊ ರಾಜಕನ್ಮಾರ್ ಯೂನಿಯನ್ (ರಿ), ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಕೋಶಾಧಿಕಾರಿ ಹಾಗೂ ಯೆನಪೋಯ ಆಟೊ ಪಾರ್ಕ್ನ ಆಡ್ಮಿನ್ ಆಗಿದ್ದ ಮದನಿನಗರ ನಿವಾಸಿ ಮೊಹಿದಿನ್ (40) ಅವರು ಇಂದು ನಿಧನರಾದರು. ಕೆಲವು ದಿನಗಳ ಹಿಂದೆ ಅಸೌಖ್ಯಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ. ಮೊಹಿದಿನ್ ಅವರು ಆಟೊ ಚಾಲಕರ ಸಂಘಟನೆಗೆ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ನೀಡಿದ ಸೇವೆ ಅನನ್ಯವಾಗಿತ್ತು. ಎಲ್ಲ ಜನಾಂಗದವರೊಂದಿಗೆ ಸ್ನೇಹಪೂರ್ಣ ಸಂಬಂಧ ಹೊಂದಿದ್ದ ಅವರು, ಸಮಾಜದಲ್ಲಿ ಒಬ್ಬ ಉತ್ತಮ ವ್ಯಕ್ತಿಯಾಗಿ ಗುರುತಿಸಿಕೊಂಡಿದ್ದರು. ಅವರ ಅಗಲಿಕೆಯಿಂದ ಆಟೊ ರಾಜಕನ್ಮಾರ್ ಯೂನಿಯನ್ ಹಾಗೂ ಸಮುದಾಯವು ಅಮೂಲ್ಯ ವ್ಯಕ್ತಿಯನ್ನು ಕಳೆದುಕೊಂಡಂತಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ. ಮೃತರು ಪತ್ನಿ, ಮಕ್ಕಳು ಸೇರಿದಂತೆ ಅಪಾರ ಬಂಧುಬಳಗವನ್ನು ಅಗಲಿದ್ದಾರೆ. ಈ ಕುರಿತು ಆಟೊ ರಾಜಕನ್ಮಾರ್ ಯೂನಿಯನ್ (ರಿ), ದಕ್ಷಿಣ ಕನ್ನಡ ಜಿಲ್ಲೆ ತೀವ್ರ ಸಂತಾಪ ಸೂಚಿಸಿದೆ.

