ಉಳ್ಳಾಲ: 2024-2025ನೇ ಸಾಲಿನ ‘ವೀರರಾಣಿ ಅಬ್ಬಕ್ಕ ಪ್ರಶಸ್ತಿ’ ಸಾಹಿತ್ಯ ಕ್ಷೇತ್ರದಲ್ಲಿ ಹಿರಿಯ ಲೇಖಕಿ ಕ್ಯಾಥರಿನ್ ರೊಡ್ರಿಗಸ್ ಹಾಗೂ ಸಮಾಜ ಸೇವೆಯಲ್ಲಿ ಹಿರಿಯ ಸಮಾಜ ಸೇವಕಿ – ಸುವಾಸಿನಿ ದಾಮೋದರ್ ಆಯ್ಕೆಗೊಂಡಿದ್ದಾರೆ.ಎಂ.ಎ. ಪದವಿಧರರಾಗಿರುವ ಕ್ಯಾಥರಿನ್ ರೊಡ್ರಿಗಸ್ರವರು ಸಾಹಿತ್ಯ ಕ್ಷೇತ್ರದ ಬಹುಮುಖ ಪ್ರತಿಭೆ ಮತ್ತು ಬಹುಭಾಷಾ ಪ್ರತಿಭೆ. ಕನ್ನಡ, ತುಳು, ಕೊಂಕಣಿಯಲ್ಲಿ ಕಥೆ, ಕವನ, ಕಾದಂಬರಿ, ಪ್ರಬಂಧ, ನಾಟಕಗಳನ್ನು ರಚಿಸುವ ಮೂಲಕ ಕರಾವಳಿಯ ಶ್ರೇಷ್ಠ ಸಾಹಿತಿಗಳಲ್ಲೊಬ್ಬರಾಗಿ ಗುರುತಿಸಿಕೊಂಡಿದ್ದಾರೆ.ಇವರು 56 ತುಳು ನಾಟಕಗಳನ್ನು, 11 ಕೊಂಕಣಿ ನಾಟಕಗಳನ್ನು, 8 ಕನ್ನಡ ನಾಟಕಗಳನ್ನು ರಚಿಸಿದ್ದು ನಾಟಕ ರಂಗದಲ್ಲಿ ಬಹು ಪ್ರಸಿದ್ಧ ನಾಟಕಕಾರರಾಗಿದ್ದಾರೆ. ಇವರ ಜಯ ವಿಜಯ ನಾಟಕವು 48 ಪ್ರದರ್ಶನಗಳನ್ನು, ಬಂಗರ್ದ ದೊಡ್ಡಿ ನಾಟಕವು 12 ಪ್ರದರ್ಶನಗಳನ್ನು ಕಂಡಿರುವುದು ಕ್ಯಾಥರಿನ್ ರೊಡ್ರಿಗಸ್ರವರ ನಾಟಕಗಳ ಸತ್ವವನ್ನು ತಿಳಿಸುತ್ತದೆ. ಅನುವಾದ ಸಾಹಿತ್ಯ ರಚನೆಯಲ್ಲಿಯೂ ಇವರು ಮುಂಚೂಣಿಯಲ್ಲಿದ್ದು ತುಳುವಿನಿಂದ ಕನ್ನಡಕ್ಕೆ, ಕೊಂಕಣಿಗೆ ಅನೇಕ ಕೃತಿಗಳನ್ನು ಅನುವಾದ ಮಾಡಿದ್ದಾರೆ. ಆಕಾಶವಾಣಿಯಲ್ಲಿ ಕನ್ನಡ, ತುಳು, ಕೊಂಕಣಿ ಭಾಷೆಗಳ ನಾಟಕ, ಕಥೆ, ಭಾಷಣ, ಚರ್ಚೆಗಳ…
Author: UllalaVani
ಉಳ್ಳಾಲ: ಇಲ್ಲಿನ ಪೇಟೆ ರಹ್ಮಾನಿಯಾ ಜುಮಾ ಮಸೀದಿ ಮತ್ತು ಯುವ ಸಂಘಟನೆಯಾದ ಮುಸ್ತಾನುಲ್ ಊಲೂಂ ಯೂತ್ ಅಸೋಸಿಯೇಷನ್ ಜಂಟಿ ಆಶ್ರಯದಲ್ಲಿ ಉಪಯೋಗಿಸಿದ ದುಬಾರಿ ಬೆಲೆಗಳ ಮದುವೆ ಸಾಮಗ್ರಿಗಳನ್ನು ಮನೆ ಮನೆಗಳಿಗೆ ತೆರಳಿ ಸಂಗ್ರಹಿಸಿದ ಸೊತ್ತುಗಳನ್ನು ಇಂದು ವಿತರಣೆ ನಡೆಸಲಾಯಿತು. ಎರಡು ದಿನಗಳ ಕಾಲ ಮಾತ್ರ ಇರುವ ಪ್ರಯತ್ನದಲ್ಲಿ ಮೊದಲ ದಿನವೇ ಹೆಚ್ಚಿನ ಸಂಖ್ಯೆಯಲ್ಲಿ ಜನ ಭಾಗಿಯಾಗಿ ವಸ್ತುಗಳನ್ನು ಕೊಂಡೊಯ್ದರು.ರಹ್ಮಾನಿಯಾ ಮಸೀದಿಯ ಮುಂಭಾಗದಲ್ಲಿರುವ ಮದ್ರಸಾದ ನಾಲ್ಕು ಬೃಹತ್ ಕೋಣೆಗಳಲ್ಲಿ ವಸ್ತ್ರಗಳನ್ನು ಜೋಡಿಸಿಡಲಾಗಿತ್ತು. ಬಾಕ್ಸ್ ಗಳಲ್ಲೂ ವಸ್ತ್ರಗಳನ್ನು ಸಂಗ್ರಹಿಸಿಡಲಾಗಿದೆ. ಬಡವರಿಗೆ ವಸ್ತ್ರಗಳನ್ನು ಒದಗಿಸುವ ನಿಟ್ಟಿನಲ್ಲಿ ಸಂಘಟಕರು ಯೋಜನೆ ರೂಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೋ, ಸಂದೇಶವನ್ನು ರವಾನಿಸಿದೆ. ೧೦ ದಿನಗಳ ಅವಧಿಯಲ್ಲಿ ಮನೆಗಳಿಗೆ ಬರುವ ವಾಹನಕ್ಕೆ ಬಟ್ಟೆಗಳನ್ನು ನೀಡುವಂತೆ ಮನವಿ ಮಾಡಲಾಗಿತ್ತು. ಜ.೧೫ರಿಂದ ೧೭ರವರೆಗೆ ಸಮಿತಿ ಮತ್ತು ಸಂಘಟನೆಯ ಸದಸ್ಯರು ವಾಹನದೊಂದಿಗೆ ಮನೆಗಳಿಗೆ ತೆರಳಿದಾಗ ದುಬಾರಿ ಬೆಲೆಯ ವಸ್ತ್ರಗಳು ಕೈಸೇರಿವೆ. ಯುವತಿಯರಿಗೆ ಮದರಂಗಿ, ಮದುವೆಗೆ ಬೇಕಾದ ವಸ್ತ್ರಗಳು ಮಾತ್ರವಲ್ಲದೆ ಪ್ರತಿದಿನ ಬಳಸುವ ವಸ್ತ್ರಗಳು, ಬುರ್ಖಾ,…
ಮಂಗಳೂರು: ಕನ್ನಡ ವೀಕ್ಷಕರ ಮನಸಿಗೆ ಲಗ್ಗೆಯಿಡುವ ಕತೆಗಳನ್ನು ಹೇಳುತ್ತಾ ಬಂದಿರುವ ಕಲರ್ಸ್ ಕನ್ನಡ ಚಾನೆಲ್, ಇದೀಗ ಮತ್ತೆರೆಡು ಹೊಸ ಧಾರಾವಾಹಿಗಳನ್ನು ನಿಮ್ಮ ಮುಂದೆ ತರಲು ಸಜ್ಜಾಗಿದೆ. ‘ವಧು’ ಮತ್ತು ‘ಯಜಮಾನ’ ದೈನಿಕ ಧಾರಾವಾಹಿಗಳು ಜ,27ರಂದು ಜೋಡಿ ಕತೆಗಳಾದ ಡಿವೋರ್ಸ್ ಲಾಯರ್ ಮದುವೆ ಕತೆ ‘ವಧು’ ರಾತ್ರಿ 9.30ಕ್ಕೆ ಪ್ರಸಾರವಾಗಲಿದೆ. ಕಾಂಟ್ರಾಕ್ಟ್ ಮದುವೆಯ ಕತೆ ‘ಯಜಮಾನ’ ರಾತ್ರಿ 10 ಗಂಟೆಗೆ ಪ್ರಸಾರವಾಗಲಿದೆ. ಸಂಬಂಧಗಳನ್ನು ಪ್ರೀತಿಸುವ, ಅಷ್ಟೇ ಗೌರವಿಸುವ ‘ವಧು’ ಒಬ್ಬ ಅವಿವಾಹಿತೆ, ವೃತ್ತಿಯಲ್ಲಿ ಡಿವೋರ್ಸ್ ಲಾಯರ್. ಮನುಷ್ಯ ಸಂಬಂಧಗಳ ಬಗ್ಗೆ ಅವಳಿಗಿರುವ ಗೌರವವೇ ಅವಳನ್ನು ತನ್ನ ವೃತ್ತಿಯಲ್ಲಿ ಹಿಂದುಳಿಯುವಂತೆ ಮಾಡಿದೆ ಅಂದರೂ ತಪ್ಪಾಗದು!. ಗಂಡ ಹೆಂಡತಿ ನಡುವೆ ಬಿರುಕು ಮೂಡಿ ವಿಚ್ಛೇದನ ಕೋರಿ ಬಂದ ಜೋಡಿಗಳ ನಡುವೆ ಸಾಮರಸ್ಯ ಮೂಡಿಸಿ ಅವರನ್ನು ಒಂದು ಮಾಡುವುದರಲ್ಲೇ ಅವಳಿಗೆ ಆಸಕ್ತಿ. ಹೀಗಿರುವಾಗ ಒಂದು ಮಹತ್ವದ ಕೇಸು ಎಲ್ಲವನ್ನೂ ತಲೆಕೆಳಗು ಮಾಡುತ್ತದೆ. ಮೋಸ್ಟ್ ಸಕ್ಸಸ್ ಫುಲ್ ಬ್ಯುಸಿನೆಸ್ ಮ್ಯಾನ್ ಸಾರ್ಥಕ್ ದಾಂಪತ್ಯದಲ್ಲಿ ಬಿರುಕುಂಟಾಗಿ, ಪತ್ನಿ ಪ್ರಿಯಾಂಕಾ ಡಿವೋರ್ಸ್…
ಜನಪ್ರಿಯ ಟಿವಿ ಚಾನೆಲ್ ಕಲರ್ಸ್ ಕನ್ನಡವು ಎರಡು ಹೊಸ ರಿಯಾಲಿಟಿ ಶೋಗಳನ್ನು ಶುರುಮಾಡುತ್ತಿದೆ. ‘ಬಾಯ್ಸ್ ವಿ/ಎಸ್ ಗರ್ಲ್ಸ್’ ಎಂಬ ಗೇಮ್ ಶೋ ಮತ್ತು ಕಚಗುಳಿಯಿಟ್ಟು ನಗಿಸುವ ‘ಮಜಾ ಟಾಕೀಸ್’ ಶೋಗಳು ಫೆ.1ರಿಂದ ಪ್ರಸಾರ ಆರಂಭಿಸಲಿವೆ. ಪ್ರತಿ ಶನಿವಾರ ಮತ್ತು ಭಾನುವಾರ ಏಳೂವರೆಗೆ ‘ಬಾಯ್ಸ್ ವಿ/ಎಸ್ ಗರ್ಲ್ಸ್’ ಹಾಗೂ 9 ಗಂಟೆಗೆ ʼಮಜಾ ಟಾಕೀಸ್ʼ ಕಾರ್ಯಕ್ರಮಗಳು ನಿಮ್ಮನ್ನು ರಂಜಿಸಲಿವೆ. ಹೊಸ ರೀತಿಯ ರಿಯಾಲಿಟಿ ಶೋಗಳಿಗೆ ಹೆಸರಾಗಿರುವ ಕಲರ್ಸ್ ಕನ್ನಡ ಶುರುಮಾಡುತ್ತಿರುವ ‘ಬಾಯ್ಸ್ ವಿ/ಎಸ್ ಗರ್ಲ್ಸ್’ ಒಂದು ರೋಮಾಂಚಕ ಗೇಮ್ ಶೋ. ಹುಡುಗ ಮತ್ತು ಹುಡುಗಿಯರ ಗುಂಪುಗಳು ಜಿದ್ದಾಜಿದ್ದಿಗೆ ಬಿದ್ದು ನೋಡುಗರ ಬಿಸಿ ಏರಿಸುವ ಆಟದ ಶೋ ‘ಬಾಯ್ಸ್ ವರ್ಸಸ್ ಗರ್ಲ್ಸ್’ ಕನ್ನಡ ಕಿರುತೆರೆಗೆ ಹೊಸದೆನಿಸುವ ಥ್ರಿಲ್ ಹೊತ್ತು ತರಲಿದೆ.ಬಾಯ್ಸ್ ತಂಡವನ್ನು ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಮುನ್ನಡೆಸಿದರೆ, ಹುಡುಗಿಯರ ಗುಂಪಿನ ನಾಯಕಿ ನಟಿ ಶುಭಾ ಪೂಂಜಾ. ಇನ್ನು ಸ್ಪರ್ಧಿಗಳ ಪಟ್ಟಿಯೂ ಅಷ್ಟೇ ರೋಚಕವಾಗಿದೆ. ಈಗಷ್ಟೇ ಬಿಗ್ ಬಾಸ್ ಗೆದ್ದಿರುವ ಹನುಮಂತ ಲಮಾಣಿ,…
ಮಂಗಳೂರು: ಮಾರುತಿ ಯುವಕ ಮಂಡಲ ತುಳುನಾಡಿಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಮಾದರಿಯಾದ ಸಂಘವಾಗಿ ಹೊರಹೊಮ್ಮಿದೆ. ನಾಲ್ಕು ದಶಕಗಳ ಸೇವೆಯಿಂದ ಅನೇಕ ಕುಟುಂಬಗಳ ಕಣ್ಣೀರು ಒರೆಸುವ ಕಾರ್ಯವಾಗಿದೆ. ಇದೀಗ ೪೦ ರ ಸಂಭ್ರಮದಲ್ಲಿ ಇನ್ನೂ ಅನೇಕ ಸಮಾಜಸೇವೆಗಳನ್ನು ನಡೆಸುವ ಮುಖೇನ ಎಲ್ಲಾ ವಗರ್ವದವರನ್ನು ಸಮಾಜದ ಮುಖ್ಯ ವಾಹಿನಿಗೆ ಕರೆತರುವ ಪ್ರಯತ್ನ ಪ್ರಾಮಾಣಿಕವಾಗಿ ಮಾಡುತ್ತಾ ಬಂದಿದೆ. ಎಂದು ಮಂಗಳೂರು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.ಅವರು ಮಾರುತಿ ಜನಸೇವಾ ಸಂಘ, ಮಾರುತಿ ಯುವಕ ಮಂಡಲ ೪೦ರ ಸಂಭ್ರಮದಲ್ಲಿ ಆಯೋಜಿಸಿರುವ ಮಾರುತಿ ಮಾಣಿಕ್ಯ ಮಹೋತ್ಸವ -೨೦೨೫ ಸೇವೆಯಲ್ಲಿ ಧನ್ಯತೆ ಕಾರ್ಯಕ್ರಮದ ನಾಲ್ಕು ಬಡ ಕುಟುಂಬಗಳಿಗೆ ಮನೆ ನಿರ್ಮಾಣದ ಯೋಜನೆಯ ಪೈಕಿ ಮೊದಲ ಮನೆಗೆ ಮಂಗಳಾದೇವಿ ಮಂಕಿಸ್ಟ್ಯಾಂಡ್ ಸಮೀಪ ನಡೆದ ಶಿಲನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ನಾಲ್ಕು ದಶಕಗಳ ಸೇವೆಯಿಂದ ಸಂಸ್ಥೆ ಅಭೂತಪೂರ್ವಕವಾಗಿ ಜನಮನ್ನಣೆ ಪಡೆದುಕೊಂಡು ತುಳುನಾಡು ಮಾತ್ರವಲ್ಲ ರಾಜ್ಯದಲ್ಲೇ ಪ್ರಸಿದ್ಧಿಯನ್ನು ಪಡೆದುಕೊಂಡುಪ್ರತಿಷ್ಠಿತ ಸೇವಾ ಸಂಸ್ಥೆಯಾಗಿ ಹೊರಹೊಮ್ಮಿದೆ. ೨ ಕೋಟಿ ರೂ ವೆಚ್ಚದಲ್ಲಿ ಉಳ್ಳಾಲದ ಮೊಗವೀರ ಶಾಲೆ ಅಭಿವೃದ್ಧಿ, ಬೀಚ್…
ಉಳ್ಳಾಲ: ಮುನ್ನೂರು ಗ್ರಾಮ ಪಂಚಾಯತ್ ಗೆ ಮುಂದಿನ ೧೫ ತಿಂಗಳ ಆಡಳಿತಾವಧಿಗೆ ನೂತನ ಅಧ್ಯಕ್ಷೆಯಾಗಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ರೆಹನಾ ಭಾನು ಗೆಲುವು ಸಾಧಿಸಿದ್ದಾರೆ. ಈ ಮೂಲಕ ಚುನಾವಣೆ ನಂತರ ಮೂರನೇ ಬಾರಿ ಅಧ್ಯಕ್ಷರ ಬದಲಾವಣೆ ಪ್ರಕ್ರಿಯೆ ನಡೆದಿದೆ.ಕಾಂಗ್ರೆಸ್ ಬೆಂಬಲಿತ ವಿಶಾಲಾಕ್ಷಿ ಅಧ್ಯಕ್ಷೆ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ಸಲ್ಲಿಸಿದ್ದರು. ಎರಡೂವರೆ ವರ್ಷಗಳ ಕಾಲ ಆಡಳಿತಾವಧಿ ನಡುವೆ 15 ತಿಂಗಳ ಅಗ್ರಿಮೆಂಟ್ ಮಾಡಿದ್ದ ಹಿನ್ನೆಲೆಯಲ್ಲಿ ಚುನಾವಣೆ ನಂತರದ ಅವಧಿಗೆ ಮೂರನೇ ಅಧ್ಯಕ್ಷೆಗೆ ಆಯ್ಕೆ ನಡೆದಿದೆ.ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಚಂದ್ರಕಲಾ 9 ಮತಗಳನ್ನು ಪಡೆದರೆ, ಕಾಂಗ್ರೆಸ್ ಬೆಂಬಲಿತ ರೆಹನಾ ಭಾನು 14 ಮತಗಳನ್ನು ಪಡೆದುಕೊಂಡು ಗೆಲುವು ಸಾಧಿಸಿದ್ದಾರೆ. ಒಟ್ಟು 23 ಸದಸ್ಯರಿರುವ ಗ್ರಾಮ ಪಂಚಾಯತ್ ಆಡಳಿತದಲ್ಲಿ ಕಾಂಗ್ರೆಸ್ ಬೆಂಬಲಿತ -10, ಬಿಜೆಪಿ-9, ಎಸ್ ಡಿಪಿಐ -1, ಸಿಪಿಎಂ-3 ಸದಸ್ಯರಿದ್ದಾರೆ. ಬಿಜೆಪಿಯ ಚಂದ್ರಕಲಾ ಅವರಿಗೆ ಬಿಜೆಪಿ ಸದಸ್ಯರೇ ಬೆಂಬಲಿಸಿದ್ದರೆ, ಕಾಂಗ್ರೆಸ್ ಅಭ್ಯರ್ಥಿಗೆ ಎಸ್ ಡಿಪಿಐ ಮತ್ತು ಸಿಪಿಎಂ ಬೆಂಬಲಿತ ಸದಸ್ಯರು ಬೆಂಬಲಿಸಿದ್ದಾರೆ.…
ಉಳ್ಳಾಲ : ವಿದ್ಯಾರ್ಥಿಗಳು ದೇಶದ ಸಂವಿಧಾನದ ಬಗ್ಗೆ ಗೌರವಭಾವ ಹೊಂದಿರಬೇಕಾದದ್ದು ಅಗತ್ಯ. ಸೈನ್ಯಕ್ಕೆ ಸೇರುವ ಮೂಲಕ ದೇಶಸೇವೆಗೆ ತಯಾರಾಗುವ ಯುವ ಜನಾಂಗದ ಸಂಖ್ಯೆ ಹೆಚ್ಚಾಗಬೇಕಾಗಿದೆ. ಭಾರತದ ಭವಿಷ್ಯ ಇಂದಿನ ವಿದ್ಯಾರ್ಥಿಗಳ ಮೇಲೆ ಅವಲಂಬಿತವಾಗಿದೆ ಎಂದು ನಿವೃತ್ತ ಯೋಧ ರಾಘವೇಂದ್ರ ಭಟ್ ಜಿ ಹೇಳಿದ್ದಾರೆ.ಅವರು ತೊಕ್ಕೊಟ್ಟುವಿನಲ್ಲಿರುವ ಮಂಗಳೂರು ಒನ್ ರಾಷ್ಟ್ರೋತ್ಥಾನ ವಿದ್ಯಾ ಕೇಂದ್ರ ಇಲ್ಲಿ 76ನೇ ಗಣರಾಜ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.ಸಂಸ್ಥೆಯ ಪ್ರಧಾನಾಚಾರ್ಯರಾದ ವಿದ್ಯಾ ಕಾಮತ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಿಂದ ಪಥ ಸಂಚಲನ, ಯೋಗ, ಕರಾಟೆ, ನೃತ್ಯ ನಡೆಯಿತು. ಈ ಸಂದರ್ಭ ಕಾರ್ಯನಿರ್ವಹಣಾಧಿಕಾರಿ ಪ್ರಖ್ಯಾತ್ ರೈ ಉಪಸ್ಥಿತರಿದ್ದರು. ಕೇಂದ್ರದ ಶಿಕ್ಷಕರಾದ ಲಾವಣ್ಯ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ವಂಶಿತ್ ಸ್ವಾಗತಿಸಿದರು. ಗಗನ ವಂದಿಸಿದರು. ಆದ್ಯ ಚೌಟ ಕಾರ್ಯಕ್ರಮವನ್ನು ನಿರೂಪಿಸಿದರು.ಸಾಂಸ್ಕೃತಿಕ ಕಾರ್ಯಕ್ರಮದ ನೇತೃತ್ವವನ್ನು ಸೌಮ್ಯ , ಶ್ರೀದೇವಿ, ಲಾವಣ್ಯ , ದೀಕ್ಷಾ, ಮಾಲಾಶ್ರೀ , ಪ್ರವೀಣ ದಯಾನಂದ್ , ರೇಷ್ಮಾ ನಿರ್ಮಾಲ್ ಭಟ್ , ಮಂಜಪ್ಪ ವಹಿಸಿದ್ದರು.
ಜಾಯ್ ಲ್ಯಾಂಡ್ ಶಾಲೆ ಕೊಲ್ಯ – ಸೋಮೇಶ್ವರ ಇಲ್ಲಿನ 6 ವಿದ್ಯಾರ್ಥಿನಿಯರಾದ ಕೀರ್ತನ, ಧಾನ್ವಿ ಯು ಸುವರ್ಣ, ಮಿತಾಲಿ ಯು, ಕುಷಿ, ಸಮೀಕ್ಷ ಎಮ್. ಕೆ, ಮೇಘನ ಇವರು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ನಡೆಯಲಿರುವ ಎಸ್. ಜಿ. ಎಫ್. ಐ ರಾಷ್ಟ್ರಮಟ್ಟದ ಫುಟ್ಬಾಲ್ ಪಂದ್ಯಾಕೂಟದಲ್ಲಿ ಕರ್ನಾಟಕ ರಾಜ್ಯದ ತಂಡವನ್ನು ಪ್ರತಿನಿಧಿಸಲು ಆಯ್ಕೆಯಾಗಿರುತ್ತಾರೆ. ಈ ಮಕ್ಕಳನ್ನು ವಿಧಾನ ಸಭೆಯ ಸಭಾಪತಿಯವರಾದ ಸನ್ಮಾನ್ಯ ಯು. ಟಿ. ಖಾದರ್ ಅವರು ಉಲ್ಲಾಳದಲ್ಲಿ ನಡೆದ 76ನೇ ಗಣರಾಜ್ಯೋತ್ಸವ ಆಚರಣೆಯ ಸಮಾರಂಭದಲ್ಲಿ ಸನ್ಮಾನಿಸಿದರು.
ಮಂಗಳೂರು : ಸಹಕಾರ ರಂಗದ ಅದ್ವಿತೀಯ ನಾಯಕರು , ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹಾಗೂ ಎಸ್ ಸಿಡಿಸಿಸಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರ ರತ್ನ ಡಾ.ಎಂ.ಎನ್.ರಾಜೇಂದ್ರಕುಮಾರ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿರುವ ದಕ್ಷಿಣ ಕನ್ನಡ ಸಹಕಾರಿ ನೌಕರರ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್ ಸಿಡಿಸಿಸಿ ಬ್ಯಾಂಕಿನ ಬ್ಯಾಂಕ್ ನಿರೀಕ್ಷಕ ಎಸ್. ಜಗದೀಶ್ಚಂದ್ರ ಅಂಚನ್ ಹಾಗೂ ಉಪಾಧ್ಯಕ್ಷರಾಗಿ ಶ್ರೀ ಭಗವತಿ ಸಹಕಾರ ಬ್ಯಾಂಕಿನ ವ್ಯವಸ್ಥಾಪಕ ರಾಘವ ಆರ್.ಉಚ್ಚಿಲ್ ಇವರು ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಶನಿವಾರ ಸಂಘದ ಕಛೇರಿಯಲ್ಲಿ ನಡೆದ ಅಧ್ಯಕ್ಷರ ಹಾಗೂ ಉಪಾಧ್ಯಕ್ಷ ಚುನಾವಣಾ ಪ್ರಕ್ರಿಯೆಯಲ್ಲಿ ಎಸ್. ಜಗದೀಶ್ಚಂದ್ರ ಅಂಚನ್ ಅಧ್ಯಕ್ಷರಾಗಿ ಎರಡನೇ ಅವಧಿಗೆ ಪುನರಾಯ್ಕೆ ಗೊಂಡರೆ, ರಾಘವ ಆರ್. ಉಚ್ಚಿಲ್ ಮೊದಲ ಬಾರಿ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಗೊಂಡರು. ಚುನಾವಣೆಯನ್ನು ದಕ್ಷಿಣ ಕನ್ನಡ ಸಹಕಾರ ಸಂಘಗಳ ಉಪನಿಬಂಧಕರ ಕಛೇರಿಯ ಸಹಕಾರ ಅಭಿವೃದ್ಧಿ ಅಧಿಕಾರಿ ಶಿವಲಿಂಗಯ್ಯ ಎಂ. ನಡೆಸಿಕೊಟ್ಟರು. ಜಗದೀಶ್ಚಂದ್ರ ಅಂಚನ್ ಕಳೆದ ೨೦ ವರ್ಷಗಳಿಂದ ಸಂಘದ ನಿರ್ದೇಶಕರಾಗಿ, ೨೦೦೭ರಲ್ಲಿ ಉಪಾಧ್ಯಕ್ಷರಾಗಿ , ೨೦೨೦-೨೫ನೇ…
ಮಂಗಳೂರು: ಹಿರಿಯ ಪತ್ರಕರ್ತ, ಹೊಸ ದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಎನ್.ಟಿ ಬಾಳೇಪುಣಿ ಅಲ್ಪಕಾಲದ ಅಸೌಖ್ಯದಿಂದ ಬಾಳೆಪುಣಿಯ ಸ್ವಗೃಹದಲ್ಲಿ ಭಾನುವಾರ ನಿಧನರಾಗಿದ್ದಾರೆ.ಅವರಿಗೆ ೬೨ ವರ್ಷ ವಯಸ್ಸಾಗಿತ್ತು. ಬಾಳೇಪುಣಿ ಅವರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಬಾಳೇಪುಣಿ ಅವರು ೩೯ ವರ್ಷಗಳ ಕಾಲ ಪತ್ರಿಕೋದ್ಯಮದಲ್ಲಿ ಕರ್ತವ್ಯ ನಿರ್ವಹಿಸಿದ್ದರು. ಕಳೆದ ೨೭ ವರ್ಷಗಳಿಂದ ಹೊಸದಿಗಂತ ಪತ್ರಿಕೆಯಲ್ಲಿ ವರದಿಗಾರರಾಗಿದ್ದ ಅವರು ೨೦೨೧ರಿಂದ ವಿಶೇಷ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು.*೧೯೮೬ರಲ್ಲಿ ಪತ್ರಿಕೋದ್ಯಮ ಪ್ರವೇಶ೧೯೬೩ರ ಜೂ.೧ರಂದು ಜನಿಸಿದ ಬಾಳೇಪುಣಿ ಅವರು ೧೯೮೬ರ ಸೆಪ್ಟೆಂಬರ್ನಲ್ಲಿ ಪತ್ರಿಕೋದ್ಯಮ ಕ್ಷೇತ್ರ ಪ್ರವೇಶ ಮಾಡಿದ್ದರು. ಆರಂಭದಲ್ಲಿ ಅಮೃತ ವಾರಪತ್ರಿಕೆ, ಚೇತನಾ ವಾರಪತ್ರಿಕೆ, ದಿ ಗೋಲ್ಡ್ ಕನ್ನಡ ವಾರಪತ್ರಿಕೆ, ಸಪ್ತಸಾರ ವಾರಪತ್ರಿಕೆ ಮೊದಲಾದವುಗಳಲ್ಲಿ ಆರು ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದರು. ಬಳಿಕ ಕೆನರಾ ಟೈಮ್ಸ್ ಬಳಗ (ಕರಾವಳಿ ಅಲೆ, ಕನ್ನಡ ಜನ ಅಂತರಂಗ, ಕೆನರಾ ಟೈಮ್ಸ್), ಮಂಗಳೂರು ಮಿತ್ರ ಕನ್ನಡ ಸಂಜೆ…

