ಕುತ್ತಾರು;ಕೊರಗಜ್ಜನ ಆದಿಸ್ಥಳ ಕುತ್ತಾರು ಕ್ಷೇತ್ರಕ್ಕೆ ಬಾಲಿವುಡ್ ಸ್ಟಾರ್ ಸುನೀಲ್ ಶೆಟ್ಟಿ ಭೇಟಿ, ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ಬಳಿಕ ಮಾತನಾಡಿದ ಇವರು, ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡುವ ತಮ್ಮ ಆಶಯ ಈಡೇರಿದೆ. ಕರಾವಳಿಯ ಸಂಸ್ಕೃತಿಯನ್ನು ಜಗತ್ತಿಗೆ ಪಸರಿಸುವ ಉದ್ದೇಶದಿಂದ ತುಳು ಸಿನಿಮಾದಲ್ಲೂ ನಟಿಸಿರುವುದಾಗಿ ತಿಳಿಸಿದ್ರು. ಇನ್ನು ಪುತ್ರ ಅಹಾನ್ ಶೆಟ್ಟಿ ನಟಿಸಿರುವ ‘ಬಾರ್ಡರ್-೨’ ಚಿತ್ರದ ಯಶಸ್ಸಿಗೆ ಆಶೀರ್ವಾದ ಕೋರಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಕುತ್ತಾರು ಕ್ಷೇತ್ರದ ಆಡಳಿತ ಸಮಿತಿಯಿಂದ ಅವರನ್ನು ಶಾಲುಹೊದಿಸಿ ಗೌರವಿಸಲಾಯಿತು.
Author: UllalaVani
ಉಳ್ಳಾಲ: ದೇರಳಕಟ್ಟೆ ಭಾಗದ ವಿವಿಧ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮೇಲೆ ಮಾದಕ ವಸ್ತು ದುರುಪಯೋಗ ತಡೆಗಟ್ಟುವ ಉದ್ದೇಶದಿಂದ ಉಳ್ಳಾಲ ಮತ್ತು ಕೊಣಾಜೆ ಪೊಲೀಸರು ಕೇರಳ ತೆರಳುವ ಕಾಲೇಜು ಬಸ್ಸುಗಳನ್ನು ತಡೆದು ಬೀರಿ ಕೋಟೆಕಾರು ಮತ್ತು ಅಸೈಗೋಳಿಯಲ್ಲಿ ಜಂಟಿಯಾಗಿ ದಿಢೀರ್ ಮಾದಕ ವಸ್ತು ಪರೀಕ್ಷಾ ಕಾರ್ಯಾಚರಣೆಯನ್ನು ನಡೆಸಿದರು. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಿ.ಎ. ಕಾಲೇಜಿನ ಎರಡು ಬಸ್ಗಳನ್ನು ತಡೆದು 87 ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿದ್ದು, ಎಲ್ಲರ ಫಲಿತಾಂಶವೂ ನೆಗೆಟಿವ್ ಆಗಿದೆ. ಇದು ಅತ್ಯಂತ ಸಕಾರಾತ್ಮಕ ಬೆಳವಣಿಗೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದೇರೀತಿ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಖಾಸಗಿ ಬಸ್ಗಳು ಹಾಗೂ ಕಾಲೇಜು ಬಸ್ಗಳಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸಲಾಯಿತು. ನಿಟ್ಟೆ ವಿಶ್ವವಿದ್ಯಾಲಯ (ಕೆ.ಎಸ್. ಹೆಗ್ಡೆ), ಕನಚೂರು ಇನ್ಸ್ಟಿಟ್ಯೂಟ್, ಪಿ.ಎ. ಕಾಲೇಜು, ಸೇಂಟ್ ಅಲೋಶಿಯಸ್ ಕಾಲೇಜು ಹಾಗೂ ಎಕ್ಕೂರು ಮೀನುಗಾರಿಕಾ ಕಾಲೇಜಿನ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಒಳಪಟ್ಟಿದ್ದರು. ಇಲ್ಲಿವರೆಗೆ ಒಟ್ಟು 103 ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗಿದ್ದು, ಅವರಲ್ಲಿ 101 ಮಂದಿಯ…
ಮಂಗಳೂರು; ಕಾಪಿಕಾಡು ಶ್ರೀ ಉಮಾಮಹೇಶ್ವರಿಯ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ತಾಯಿ ಭದ್ರಕಾಳಿ ದೇವಿಯ ಪ್ರತಿಷ್ಠೆಯ ಎಲ್ಲಾ ದೇವತಾ ಕಾರ್ಯಕ್ರಮಗಳ ಸಮಾಲೋಚನೆ ಸಭೆಯು ಬ್ರಹ್ಮಕಲೋಶೋತ್ಸವ ಸಮಿತಿಯ ಅಧ್ಯಕ್ಷರಾದ ಸತೀಶ್ ಕುಂಪಲ ನೇತೃತ್ವದಲ್ಲಿ ಮಂಗಳೂರು ಶರವು ಮಹಾಗಣಪತಿ ದೇವಸ್ಥಾನದಲ್ಲಿ ಕ್ಷೇತ್ರದ ಪ್ರಧಾನ ಅರ್ಚಕರಾದ ರಾಘವೇಂದ್ರ ಶಾಸ್ತಿçಗಳ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮೋನಪ್ಪ ಭಂಡಾರಿಯವರನ್ನು ಮಂಗಳೂರು ವಿಭಾಗದ ಹೊರೆಕಾಣಿಕೆಯ ಪ್ರಮುಖರನ್ನಾಗಿ ನೇಮಿಲಾಯಿತು. ಅವರ ಮಾರ್ಗದರ್ಶನದಂತೆ ಹೊರೆಕಾಣಿಕೆ ಸಮಿತಿ ಕಾರ್ಯ ನಿರ್ವಹಿಸುವುದಾಗಿ ತೀರ್ಮಾನಿಸಿ ಒಂದು ಹೊಸ ತಂಡವನ್ನು ಕೂಡ ರಚಿಸಲಾಯಿತು. ಸಭೆಯಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್ ಮಾತಾಡಿ, ಶರವು ದೇವಳದಿಂದ ಶುರುವಾದ ಕಾರ್ಯ ಯಾವುದೇ ವಿಘ್ನವಿಲ್ಲದೇ ನಡೆಯುತ್ತದೆ ಎಂಬ ನಂಬಿಕೆ ಬಲವಾಗಿದೆ. ಈ ನಿಟ್ಟಿನಲ್ಲಿ ಇಂದು ಸಭೆ ನಡೆಯುತ್ತಿದ್ದು, ಹಸಿರು ಹೊರೆಕಾಣಿಕೆಗೆ ಹೆಚ್ಚಾಗಿ ಹಾಳಾಗದಂತಹ ಹೆಚ್ಚು ದಿನ ಬರುವಂತಹ ತರಕಾರಿ, ದಿನಸಿಗಳನ್ನು ನೀಡಿದ್ರೆ ಉತ್ತಮ ಎನ್ನುತ್ತಾ ಕ್ಷೇತ್ರದ ಕಾರ್ಯಕ್ರಮದ ಬಗ್ಗೆ ಮಾತನಾಡಿದ್ದಾರೆ. ಇದೇ ವೇಳೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಮಾತನಾಡಿ, ಎಲ್ಲರೂ ಒಟ್ಟಾಗಿ ನಿಂತು ಧಾರ್ಮಿಕ ಕಾರ್ಯಕ್ರಮವನ್ನು…
ಕ್ಯಾಪ್ಸ್ ಫೌಂಡೇಶನ್ ವತಿಯಿಂದ ಕೃಷ್ಣ ಎಸ್ಎಂಯುಕೆ ಸೈನ್ಸ್ ಪಾರ್ಕ್ 4.0ರ ಇದರ ಉದ್ಘಾಟನಾ ಸಮಾರಂಭ ಜನವರಿ 19 ರ ಸೋಮವಾರ ಬೆಳಿಗ್ಗೆ 9.30ಕ್ಕೆ ಎಸ್ ಎಂ ವಿ ಕೆ, ಕುಂಜತ್ತೂರು ನಲ್ಲಿ ನಡೆಯಲಿದೆ. ರಾಷ್ಟ್ರ ನಿರ್ಮಾಣದ ದೃಷ್ಟಿಕೋನ ಹೊಂದಿರುವ ಈ ಯೋಜನೆ, ಹೊರಾಂಗಣ ಪ್ರಯೋಗಗಳು ಹಾಗೂ ವೈಜ್ಞಾನಿಕ ಉಪಕರಣಗಳ ಮೂಲಕ ಪ್ರಾಯೋಗಿಕ ಅಧ್ಯಯನಕ್ಕೆ ಉತ್ತೇಜನ ನೀಡುವ ಉದ್ದೇಶ ಹೊಂದಿದೆ ಎಂದು ಕ್ಯಾಪ್ಸ್ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷರಾದ ಸಿಎ ಚಂದ್ರಶೇಖರ ಶೆಟ್ಟಿ ಮುಂಡ್ಕೂರು ತಿಳಿಸಿದ್ದಾರೆ. ತೊಕ್ಕೊಟ್ಟು ಸೇವಾಸೌಧದಲ್ಲಿನ ಉಳ್ಳಾಲ ತಾಲೂಕು ಪತ್ರಕರ್ತರ ಸಂಘದಲ್ಲಿ ಆಯೋಜಿಸಲಾದ ಸುದ್ಧಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ಪ್ಲಾಸ್ಟಿಕ್ ಮುಕ್ತ ಭಾರತ ನಿರ್ಮಾಣದ ಗುರಿಯೊಂದಿಗೆ ವಿಜ್ಞಾನವನ್ನು ಆಟದ ಮೂಲಕ ಕಲಿಸುವ ಉದ್ದೇಶದಿಂದ ಕಟೀಲು, ಕೋಟ, ರಾಮಕುಂಜದಲ್ಲಿ ಭಾಗಗಳಲ್ಲಿ ಯಶಸ್ಸಿನ ಕಾರ್ಯಕ್ರಮವನ್ನು ನಡೆಸಿದೆ. 75 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲಾದ ವಿಜ್ಞಾನ ವನ ಸೈನ್ಸ್ ಪಾರ್ಕ್ ಅಪಾರ ಜನಪ್ರತಿಕ್ರಿಯೆ ಪಡೆದುಕೊಂಡಿದೆ. ವಿಜ್ಞಾನವನ್ನು ಮನರಂಜನೆಯೊಂದಿಗೆ ಮಕ್ಕಳಿಗೆ ಪರಿಚಯಿಸುವ ಈ ಪಾರ್ಕ್ ಕಳೆದ ಒಂದೂವರೆ ವರ್ಷಗಳಲ್ಲಿ ಸುಮಾರು…
ಕಾರ್ಕಳ, ಜ. 16 : ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಮನೆಯ ಗೋಡೆ ಸಹಿತ ಹಲವು ಸೊತ್ತುಗಳು ಹಾನಿಗೀಡಾಗಿ ಸುಮಾರು 3 ಲಕ್ಷ ರೂ. ನಷ್ಟ ಸಂಭವಿಸಿರುವ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರ ಎಂಬಲ್ಲಿ ಗುರುವಾರ ತಡರಾತ್ರಿ 1:30ರ ಸುಮಾರಿಗೆ ನಡೆದಿದೆ. ಮುದ್ದಣ್ಣ ನಗರದ ವಾರಿಜಾ ಎಂಬುವವರ ಮನೆಯಲ್ಲಿ ಈ ಅವಘಡ ಸಂಭವಿಸಿದೆ. ಅಡುಗೆ ಕೋಣೆಯ ಹೊರಭಾಗದ ಕೊಠಡಿಯಲ್ಲಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಮನೆಯ ಗೋಡೆ, ಫರ್ನಿಚರ್, ವಾಷಿಂಗ್ ಮಷೀನ್, ಪಾತ್ರೆ ಪಗಡಿ ಹಾಗೂ ವಿದ್ಯುತ್ ಉಪಕರಣಗಳು ಸಂಪೂರ್ಣ ಹಾನಿಗೊಳಗಾಗಿದೆ.ಮನೆಯ ಹೊರಪಾರ್ಶ್ವದಲ್ಲಿ ಸ್ಫೋಟ ಸಂಭವಿಸಿದ ಹಿನ್ನೆಲೆ ಅದೃಷ್ಟವಶಾತ್ ಯಾರಿಗೂ ಗಾಯಗಳಾಗಿಲ್ಲ. ಸಿಲಿಂಡರ್ ಸ್ಫೋಟಕ್ಕೆ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಸುಮಾರು 3 ಲಕ್ಷ ರೂ. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಉಳ್ಳಾಲ : ಹಿಂದೂ ಸಂಗಮ ಆಯೋಜನಾ ಸಮಿತಿ ಉಳ್ಳಾಲ ತಾಲೂಕು ಇದರ ಯೋಜನೆಯಂತೆ 2026ರ ಜ.18 ರಿಂದ ಫೆ.1 ರವರೆಗೆ ತಾಲೂಕಿನ 10 ಕಡೆಗಳಲ್ಲಿ ಹಿಂದೂ ಸಂಗಮ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಜ.18, ಮದ್ಯಾಹ್ನ 3ಕ್ಕೆ ಗೋವನಿತಾಶ್ರಯ ಪಾವೂರು, ಜ.25 ರಂದು ಮಧ್ಯಾಹ್ನ 3 ಕ್ಕೆ ಕೈರಂಗಳ ಹೂಹಾಕುವಕಲ್ಲು ಮೈದಾನ, ಮಧ್ಯಾಹ್ನ 3 ಕ್ಕೆ ಕುತ್ತಾರು ದೇವಸ್ಥಾನ, ಫೆ. 1 ಮಧ್ಯಾಹ್ನ 3 ಕ್ಕೆ ಸೋಮೇಶ್ವರ ವ್ಯಾಪ್ತಿಯ ಶಾರದಾ ಮೈದಾನ ಕೊಲ್ಯ, ಕೋಟೆಕಾರು-ಮಾಡೂರು ನೀರಿನ ಟ್ಯಾಂಕ್ ಬಳಿ, ತಲಪಾಡಿ- ದೇವಿಪುರ ದೇವಸ್ಥಾನ, ಕೊಣಾಜೆ ಅಸೈಗೋಳಿ ಮೈದಾನ, ಕುರ್ನಾಡು ಕಾಯರ್ ಗೋಳಿ ಮೈದಾನ , ಅಂಬ್ಲಮೊಗರು ಆಡು ಬಾಕಿಮಾರ್ ಗದ್ದೆ, ಉಳ್ಳಾಲ ಐಸ್ ಫ್ಯಾಕ್ಟರಿ ಛೋಟಾ ಮಂಗಳೂರು ಪ್ರದೇಶಗಳಲ್ಲಿ ನಡೆಯಲಿದೆ. ಸಮಿತಿ ಗೌರವಾಧ್ಯಕ್ಷರಾಗಿ ಸುದೇಶ್ ಮರೋಳಿ, ಅಧ್ಯಕ್ಷರಾಗಿ ಚಂದ್ರಹಾಸ್ ಪೂಂಜಾ, ಉಪಾಧ್ಯಕ್ಷರಾಗಿ ರಾಜೇಶ್ ಬಂಗೇರ, ಸಂಯೋಜಕರಾಗಿ ಪ್ರೇಮ್ ರಾಜ್ ಪೂಜಾರಿ ಹಾಗೂ ಉಪಾಧ್ಯಕ್ಷರಾಗಿ ಪದ್ಮನಾಭ ಪಾಣಾರ ಸೋಮೇಶ್ವರ, ರಾಜೇಶ್ ಬಂಗೇರ ಉಳ್ಳಾಲ, ಶ್ರೀಧರ್ ಪೆರಡೆ…
ಕೊಣಾಜೆ: ಹಿಂದು ಸಂಗಮ ಆಯೋಜನಾ ಸಮಿತಿ, ಉಳ್ಳಾಲ ತಾಲೂಕು ಇದರ ವತಿಯಿಂದ ತಾಲೂಕಿನ ಹತ್ತು ಮಂಡಲಗಳಲ್ಲಿ “ಹಿಂದು ಸಂಗಮ” ಕಾರ್ಯಕ್ರಮವು ಜ.18 ರಿಂದ ಫೆ.1 ವರೆಗೆ ನಡೆಯಲಿದೆ. ಜ.18 ರಂದು ಮದ್ಯಾಹ್ನ 3 ಗಂಟೆಗೆ ಪಾವೂರು ಮಂಡಲದ ಗೋವನಿತಾಶ್ರಮ ಬೀಜಗುರಿ, ಜ.25 ರಂದು ಮಧ್ಯಾಹ್ನ 3 ಗಂಟೆಗೆ ಕೈರಂಗಳ ಹೂ ಹಾಕುವ ಕಲ್ಲು ಮೈದಾನದಲ್ಲಿ ಪೆರ್ಮನ್ನೂರು ಮಂಡಲ ಕುತ್ತಾರು ರಾಜರಾಜೇಶ್ವರಿ ದೇವಸ್ಥಾನ ದಲ್ಲಿ ನಡೆಯಲಿದೆ.ಫೆ.1ರಂದು ಮದ್ಯಾಹ್ನ 3 ಕ್ಕೆ.ತಲಪಾಡಿ ಮಂಡಲದ ದೇವಿಪುರ ದೇವಸ್ಥಾನ., ಉಳ್ಳಾಲ ಮಂಡಲದ ಐಸ್ ಫ್ಯಾಕ್ಟರಿ. ಛೋಟಾ ಮಂಗಳೂರು. ಬಳಿ , ಕೋಟೆಕಾರು ಮಂಡಲದ ಮಾಡೂರು. ನೀರಿನ ಟ್ಯಾಂಕ್ ಬಳಿ, ಕುರ್ನಾಡ್ ಮಂಡಲದ ಮುಡಿಪು ಕಾಯರ್ ಗೋಳಿ ಮೈದಾನ, ಕೊಣಾಜೆ ಮಂಡಲದ ಅಸೈಗೋಳಿ ಮೈದಾನದಲ್ಲಿ, ಅಂಬ್ಲಮೊಗರು ಮಂಡಲದ ಅಡು ಬಾಕಿಮಾರ್ ಗದ್ದೆಯಲ್ಲಿ, ಸೋಮೇಶ್ವರ ಮಂಡಲದ ಕೊಲ್ಯದಲ್ಲಿ ನಡೆಯಲಿದೆ.ಸಾಮಾಜಿಕ ಸೇವಾ, ಸಹಕಾರ, ಸ್ವಾವಲಂಬನೆ ವೃದ್ಧಿಸುವ ಸಲುವಾಗಿ ಸಮಾಜದ ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ, ಸೇವಾ, ಕ್ರೀಡಾ, ಕಲಾ, ಸಹಕಾರಿ ಇತ್ಯಾದಿ ಎಲ್ಲಾ…
ಮಂಗಳೂರು: ಮಂಗಳೂರಿನ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಯಾದ ರೋಹನ್ ಕಾರ್ಪೊರೇಷನ್ ತನ್ನ ಯಶಸ್ವಿ ಸೇವೆಯ 32 ವರ್ಷಗಳನ್ನು ಪೂರ್ಣಗೊಳಿಸಿದೆ. 1994ರಲ್ಲಿ ರೋಹನ್ ಮೊಂತೆರೊ ಅವರು ಸ್ಥಾಪಿಸಿದ ಈ ಸಂಸ್ಥೆ, ಇಂದು ಮಂಗಳೂರಿನ ಅತ್ಯಂತ ವಿಶ್ವಾಸಾರ್ಹ ಮತ್ತು ಗೌರವಾನ್ವಿತ ರಿಯಲ್ ಎಸ್ಟೇಟ್ ಕಂಪನಿಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಕಳೆದ ಮೂರು ದಶಕಗಳಲ್ಲಿ ರೋಹನ್ ಕಾರ್ಪೊರೇಷನ್ ಒಟ್ಟು 25 ಯೋಜನೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದು, ಪ್ರಸ್ತುತ 12 ಯೋಜನೆಗಳು ವಿವಿಧ ಹಂತಗಳಲ್ಲಿ ನಿರ್ಮಾಣದಲ್ಲಿವೆ. ಅಲ್ಲದೆ, 16 ಹೊಸ ಯೋಜನೆಗಳು ಪ್ರಸ್ತುತ ನಿರ್ಮಾಣದ ಹಂತದಲ್ಲಿವೆ. ವಸತಿ ಹಾಗೂ ವಾಣಿಜ್ಯ ಕ್ಷೇತ್ರಗಳನ್ನು ಒಳಗೊಂಡ ಈ ಯೋಜನೆಗಳು ಮಂಗಳೂರಿನ ನಗರಾಭಿವೃದ್ಧಿಗೆ ಮಹತ್ವದ ಕೊಡುಗೆ ನೀಡಿವೆ. ಈ ಸಂದರ್ಭದಲ್ಲಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕ ರೋಹನ್ ಮೊಂತೆರೊ ರವರು,“ಮಂಗಳೂರಿನ ಬೆಳವಣಿಗೆಯಲ್ಲಿ ಸಾಧ್ಯವಾದಷ್ಟು ಕೊಡುಗೆ ನೀಡಲು ನಮಗೆ ಅವಕಾಶ ದೊರೆತಿರುವುದು ಅಪಾರ ಹೆಮ್ಮೆಯ ವಿಷಯ. ಈ 32 ವರ್ಷದ ಪಯಣ ಅತ್ಯಂತ ತೃಪ್ತಿದಾಯಕವಾಗಿದೆ. ವರ್ಷಗಳ ಕಾಲ ನಮ್ಮೊಂದಿಗೆ ನಿಂತು ಬೆಂಬಲಿಸಿದ ಗ್ರಾಹಕರು, ಪಾಲುದಾರರು ಮತ್ತು ಸಿಬ್ಬಂದಿಗೆ…
ಮಂಗಳೂರು, ಜ. 15: ಆರು ಪೆಡ್ಲರ್ಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಉಗಾಂಡ ಮೂಲದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಜಿಗಣಿ ಬಳಿ ಉಗಾಂಡದ ಮಹಿಳೆ ಜಲಿಯಾ ಝಲ್ವಾಂಗೋ ಅರೆಸ್ಟ್ ಮಾಡಲಾಗಿದ್ದು, ಆಕೆ ಬಳಿ ಇದ್ದ 4 ಕೋಟಿ ರೂ. ಮೌಲ್ಯದ MDMAಯನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಸಿಸಿಬಿ ಎಸಿಪಿ ಮನೋಜ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಕುಂದಾಪುರದ ಮೊಹಮ್ಮದ್ ಶಿಯಾಬ್ ಅಲಿಯಾಸ್ ಶಿಯಾಬ್, ಉಳ್ಳಾಲ ಕಳ್ಳರ ಕೋಡಿ ನಿವಾಸಿ ಮೊಹಮ್ಮದ್ ನೌಷದ್ , ಬೆಂಗ್ರೆ ನಿವಾಸಿ ಇಮ್ರಾನ್ ಅಲಿಯಾಸ್ ಇಂಬ, ಬಂಟ್ವಾಳದ ನಿಸಾರ್ ಅಹಮ್ಮದ್, ಕಾಪು ನಿವಾಸಿ ಮೊಹಮ್ಮದ್ ಇಕ್ಬಾಲ್ ಮತ್ತು ಪಡುಬಿದ್ರೆ ನಿವಾಸಿ ಶೆಹರಾಜ್ ಶಾರೂಕ್ ಎಂಬ ಡ್ರಗ್ ಪೆಡ್ಲರ್ಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದರು. ಆರೋಪಿಗಳು ಜಲಿಯಾಳಿಂದ ಡ್ರಗ್ಸ್ ಪಡೆದು ಮಂಗಳೂರಲ್ಲಿ ಮಾರುತ್ತಿದ್ದ ವಿಚಾರ ತನಿಖೆ ವೇಳೆ ಗೊತ್ತಾಗಿತ್ತು. ಆರೋಪಿಗಳು ನೀಡಿದ ಮಾಹಿತಿ ಮೇರೆಗೆ ಬೆಂಗಳೂರಲ್ಲಿ ಸಿಸಿಬಿ ರೇಡ್ ನಡೆಸಿದೆ ಎನ್ನಲಾಗಿದೆ. ಉಗಾಂಡದ ಜಲಿಯಾ ಯಾರಿಗೂ ಅನುಮಾನ ಬಾರದಂತೆ ಎಂಡಿಎಂ…
ಕಾಸರಗೋಡು, ಜ. 15 : ರಾಷ್ಟ್ರೀಯ ಹೆದ್ದಾರಿ 66 ರ ಕುಂಬಳೆ ಆರಿಕ್ಕಾಡಿಯಲ್ಲಿ ಟೋಲ್ ಶುಲ್ಕ ವಸೂಲು ಹೋರಾಟ ಹಿಂಸಾತ್ಮಕ ರೂಪ ಪಡೆದಿದ್ದು, ಪ್ರತಿಭಟನಾಕಾರರು ಟೋಲ್ ಗೇಟ್ ನ ಕ್ಯಾಮರಾ ಹಾಗೂ ಗಾಜುಗಳನ್ನು ಪುಡಿ ಗೈದ ಘಟನೆ ಬುಧವಾರ ರಾತ್ರಿ ನಡೆದಿದೆ. ಹೋರಾಟಕ್ಕೆ ಬೆಂಬಲವಾಗಿ ಕುಂಬಳೆ ಪೇಟೆಯಿಂದ ಬಂದ ಸಾವಿರಕ್ಕೂ ಅಧಿಕ ಮಂದಿ ಪ್ರತಿಭಟನಾಕಾರರು ಟೋಲ್ ಗೇಟ್ ನ ಕ್ಯಾಮರಾಗಳನ್ನು ಧ್ವಂಸ ಗೊಳಿಸಿದ್ದು, ಕಚೇರಿ ಗಾಜುಗಳನ್ನು ಹಾನಿ ಗೊಳಿಸಿದ್ದಾರೆ. ವಾಹನಗಳನ್ನು ತಡೆಯುವ ಟೋಲ್ ಬೂತ್ ನ ಹ್ಯಾಂಡಲ್ ಗಳನ್ನು ಪ್ರತಿಭಟನಾಕಾರರು ಕಿತ್ತೆಸೆದಿದ್ದಾರೆ. ಸ್ಕ್ಯಾನರ್ ಗಳಿಗೆ ಕಪ್ಪು ಸ್ಟಿಕ್ಕರ್ ಲಗತ್ತಿಸಿದ್ದಾರೆ.ಪರಿಸ್ಥಿತಿ ವಿಕೋಪಕ್ಕೆ ತೆರಳದಂತೆ ತಡೆಯಲು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ವಿವಿಧ ಯುವಜನ ಸಂಘಟನೆಗಳು ಪ್ರತಿಭಟನಾ ಮೆರವಣಿಗೆ ನಡೆಸಿದವು. ಕಚೇರಿಯೊಳಗೆ ನುಗ್ಗಲು ಯತ್ನಿಸಿದವರನ್ನು ಪೊಲೀಸರು ತಡೆದರು. ಪ್ರತಿಭಟನೆ ಹಿನ್ನಲೆಯಲ್ಲಿ ಸ್ಥಳದಲ್ಲಿ ಸೋಮವಾರದಿಂದ ಟೋಲ್ ಗೇಟ್ ಗೆ ಪೊಲೀಸರು ಭದ್ರತೆ ಕಲ್ಪಿಸಿದ್ದು, ಈ ನಡುವೆ ಬುಧವಾರ ರಾತ್ರಿ ನಡೆದ ಪ್ರತಿಭಟನಾ ಜಾಥಾದಲ್ಲಿ ಸಾವಿರಕ್ಕೂ ಅಧಿಕ…

