Author: UllalaVani

Kannada News From Coastal Karnataka

ಮಂಗಳೂರು:ಕೋಟೆಕಾರ್ ಬೀರಿ ಕೆವಿಎಸ್ಎಸ್ ಕನ್ವೆನ್ಶನ್ ಹಾಲ್ ನಲ್ಲಿ ಆಗಸ್ಟ್ 1 ಶುಕ್ರವಾರದಿಂದ 3 ಭಾನುವಾರವರೆಗೆ ನಡೆಯುವ ಉಳ್ಳಾಲ ತಾಲೂಕು ಮಟ್ಟದ ಹಲಸು ಮೇಳ, ಗ್ರಾಮ ಸಂಪರ್ಕ ಅಭಿಯಾನ ಕಾರ್ಯಕ್ರಮದಲ್ಲಿ ಜೇನು ಕೃಷಿ ತರಬೇತಿ, ಲಾಭದಾಯಕ ಬೆಳೆ ಮಾಹಿತಿ, ಹಲಸು ಮೌಲ್ಯವರ್ಧನೆ ‌ಮಾಹಿತಿ, ತೋಟಗಾರಿಕೆ ಇಲಾಖೆ‌ ಸೌಲಭ್ಯ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿದೆ.ಆ.1ರಂದು ಬೆಳಗ್ಗೆ 11ಕ್ಕೆ ತೋಟಗಾರಿಕೆ ಇಲಾಖೆ ಸೌಲಭ್ಯ ಮಾಹಿತಿ, ಆಗಸ್ಟ್ 2ರಂದು ಬೆಳಗ್ಗೆ 11ಕ್ಕೆ ಲಾಭದಾಯಕ ಬೆಳೆ (ಮಲ್ಲಿಗೆ, ಬೆಂಡೆ, ಅಲಸಂಡೆ) ಮಾಹಿತಿ, ಮಧ್ಯಾಹ್ನ 1.30ಕ್ಕೆ ಜೇನು ಕೃಷಿ ಮಾಹಿತಿ, ಆಗಸ್ಟ್ 3ರಂದು ಬೆಳಗ್ಗೆ10 ಗಂಟೆಗೆ ಹಲಸು ಮೌಲ್ಯವರ್ಧನೆ ಕುರಿತು ಕಾರ್ಯಾಗಾರ ನಡೆಯಲಿದೆ. ಭಾಗವಹಿಸಲಿಚ್ಛಿಸುವ ರೈತರು, ಸ್ವೋದ್ಯೋಗಿ ಮಹಿಳೆಯರು 86181 40100 | 90353 18553 ಈ ಸಂಖ್ಯೆ ಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು ಎಂದು ಕೋಟೆಕಾರ್ ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಪ್ರಕಟಣೆ ತಿಳಿಸಿದೆ.

Read More

ಮಂಗಳೂರು : ಭಾರತೀಯ ಹವಾಮಾನ ಇಲಾಖೆ, ತಿರುವನಂತಪುರಂ ಶಾಖೆಯ ಮುನ್ಸೂಚನೆಯಂತೆ ಜುಲೈ 23ರಿಂದ ಜುಲೈ 26ರ ವರೆಗೆ ಅರಬ್ಬಿ ಸಮುದ್ರದಲ್ಲಿ ಭಾರೀ ಮಳೆ ಹಾಗೂ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ಸಮುದ್ರ ಪ್ರಕ್ಷುಬ್ಧವಾಗಿರುವ ಹಿನ್ನೆಲೆಯಲ್ಲಿ ಮೀನುಗಾರಿಕೆ ನಡೆಸುವುದು ಅಪಾಯಕಾರಿಯಾಗಿದೆ ಎಂದು ಹವಾಮಾನ ಇಲಾಖೆ ನೀಡಿರುವ ಎಚ್ಚರಿಕೆಯಂತೆ ಮಂಗಳೂರಿನ ಮೀನುಗಾರಿಕೆ ಜಂಟಿ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ. ಅನಾಹುತಗಳನ್ನು ತಪ್ಪಿಸಲು ಮತ್ತು ಜೀವಭದ್ರತೆಗೆ ಪ್ರಾಮುಖ್ಯತೆ ನೀಡುವ ನಿಟ್ಟಿನಲ್ಲಿ, ನಾಡದೋಣಿ ಮೀನುಗಾರರು ಸೇರಿದಂತೆ ಎಲ್ಲ ಮೀನುಗಾರರೂ ಈ ಅವಧಿಯಲ್ಲಿ ಸಮುದ್ರಕ್ಕೆ ತೆರಳಬಾರದು ಎಂಬಂತೆ ಮುನ್ನೆಚ್ಚರಿಕೆ ಸೂಚನೆ ನೀಡಲಾಗಿದೆ. ಈ ಕುರಿತಂತೆ ಮೀನುಗಾರಿಕೆ ಜಂಟಿ ನಿರ್ದೇಶಕರು, ಮಂಗಳೂರು ಅವರು ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದು, ಎಲ್ಲ ಮೀನುಗಾರರು ಮತ್ತು ಸಂಬಂಧಿತ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.

Read More

ಉಳ್ಳಾಲ : ಪ್ರಾಕೃತಿಕ ವಿಕೋಪದಿಂದ ಪಿಲಾರು ಬಳಿ ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕುಂಪಲ ಆಶ್ರಯ ಕಾಲನಿ ನಿವಾಸಿ ಕೇಶವ ಶೆಟ್ಟಿ ಅವರ ಮನೆಗೆ ಭೇಟಿ ನೀಡಿ ಐದು ಲಕ್ಷ ರೂ ಪರಿಹಾರ ಧನ ಚೆಕ್‌ ಅನ್ನು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್‌ ವಿತರಿಸಿದರು. ಬಳಿಕ ಮಾತನಾಡಿದ ಅವರು ಈ ಬಾರಿಯ ಮಳೆಯಲ್ಲಿ ಉಳ್ಳಾಲ ತಾಲೂಕಿನಾದ್ಯಂತ ಕೃತಕ ನೆರೆಯಿಂದ ಅನೇಕ ಮನೆಗಳಿಗೆ ನೀರು ನುಗ್ಗಿ ಅಪಾರ ಹಾನಿಯಾಗಿದ್ದು, ಹಾನಿಗೆ ನೀಡುವ ಪರಿಹಾರ ಮೊತ್ತವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರಕ್ಕೆ ಪತ್ರ ಬರೆದಿದ್ದೇನೆ . ಮನೆಗೆ ನೀರು ನುಗ್ಗಿದರೆ ಕಂದಾಯ ಇಲಾಖೆ ಆರು ಸಾವಿರ ಪರಿಹಾರ ನೀಡುತ್ತದೆ. ಆದರೆ ಮನೆಯೊಳಗಿನ ಗೃಹೋಪಯೋಗಿ ವಸ್ತುಗಳ ನಷ್ಟ ಅಂದಾಜಿಸಿದರೆ ಈ ಪರಿಹಾರ ಸಾಕಾಗುವುದಿಲ್ಲ. ಈ ನಿಟ್ಟಿನಲ್ಲಿ ಕೃತಕ ನೆರೆಯಿಂದ ಜಲಾವೃತಗೊಂಡ ಮನೆಗಳಿಗೆ ನೀಡುವ ಪರಿಹಾರ ಹೆಚ್ಚಿಸುವ ನಿಟ್ಟಿನಲ್ಲಿ ಸರಕಾರಕ್ಕೆ ಮತ್ತು ಸಂಬಂಧಪಟ್ಟ ಇಲಾಖೆಗೆ ಹೆಚ್ಚಿಸುವಂತೆ ಪತ್ರ ಬರೆದಿದ್ದೇನೆ. ಪ್ರಾಕೃತಿಕ ವಿಕೋಪದಿಂದ ಜಿವಹಾನಿಗೆ ರಾಜ್ಯ ಸರಕಾರ…

Read More

ಕಿನ್ಯ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಕೆ.ಸಿ. ರೋಡ್ ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಹಕರ ಸಭೆಯು ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಅಧ್ಯಕ್ಷತೆಯಲ್ಲಿ ಸಂಘದ ಕೆ.ಸಿ. ರೋಡ್ ಶಾಖೆಯಲ್ಲಿ ಜರುಗಿತು.ಕಾರ್ಯಕ್ರಮವನ್ನು ಸಂಘದ ಗ್ರಾಹಕರಾದ ಸಿಸ್ಟರ್ ಐಲಿನ್ ಮಥಾಯಿಸ್, ಕೆ. ಶಿವಪ್ರಸಾದ್ ಆಚಾರ್ಯ ಹಾಗೂ ಅಬ್ಬಾಸ್ ಉಚ್ಚಿಲ ರವರು ದೀಪ ಪ್ರಜ್ವಲನೆ ಮಾಡಿ ಉದ್ಘಾಟಿಸಿದರು.ಸಂಘದ ಗ್ರಾಹಕರಾದ ಸಿಸ್ಟರ್ ಐಲಿನ್ ಮಥಾಯೀಸ್ ರವರು ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ತನ್ನ ಗ್ರಾಹಕ ಸ್ನೇಹಿ ಸೇವೆಯೊಂದಿಗೆ ಉತ್ತಮ ಬೆಳವಣಿಗೆಯನ್ನು ಸಾಧಿಸಿದೆ. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡುತ್ತಿರುವುದು ಶ್ಲಾಘನೀಯ. ಈ ಭಾಗದಲ್ಲಿ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜನೆ ಮಾಡಿದ್ದಲ್ಲಿ ಸ್ಥಳಾವಕಾಶವನ್ನು ಮಾಡಿಕೊಡುವುದಾಗಿ ತಿಳಿಸಿದರು.ಕೆ. ಶಿವಪ್ರಸಾದ್ ಆಚಾರ್ಯ ರವರು ಮಾತನಾಡಿ ಕೆ.ಸಿ. ರೋಡ್ ಶಾಖೆಯಲ್ಲಿ ಸಿಬ್ಬಂದಿಗಳ ಗ್ರಾಹಕ ಸ್ನೇಹಿ ಸೇವೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಅಬ್ಬಾಸ್ ಉಚ್ಚಿಲ ರವರು…

Read More

ಮಂಗಳೂರು: ಆಟಿ ತಿಂಗಳಲ್ಲಿ ತುಳು ಜನರು ಆಚರಣೆ ಮಾಡುವ ಆಟಿಡೊಂಜಿ ದಿನವನ್ನು “ಆಟಿದ ಪೊಲಬು” ಎಂಬ ಹೆಸರಿನಿಂದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘ ಮಂಗಳೂರು ಇದರ ಪ್ರಧಾನ ಕಛೇರಿ “ಆತ್ಮಶಕ್ತಿ ಸೌಧ” ಪಡೀಲ್‌ನಲ್ಲಿ ಆಚರಿಸಲಾಯಿತು.ದೈವರಾಧಕರಾದ ಪೂವಪ್ಪ ಪೂಜಾರಿಯವರು ಹಿಂಗಾರವನ್ನು ಅರಳಿಸುವ ಮೂಲಕ ಸಾಂಪ್ರದಾಯಿಕ ಶೈಲಿಯಲ್ಲಿ ಈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ದೈವರಾಧಕರಾದ ಪೂವಪ್ಪ ಪೂಜಾರಿ, ನಾಟಿ ವೈದ್ಯರಾದ ತಿಲಕ್‌ರಾಜ್ ಹಾಗೂ ಕಾಸರಗೋಡಿನ ಪೆರಿಯದ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಚೇತನ್ ಮುಂಡಾಜೆ ಯವರನ್ನು ಸಂಘದ ವತಿಯಿಂದ ಸನ್ಮಾನಿಸುವ ಮೂಲಕ ಗೌರವಿಸಲಾಯಿತು.ಕಾಸರಗೋಡಿನ ಪೆರಿಯದ ಕೇರಳ ಕೇಂದ್ರ ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಚೇತನ್ ಮುಂಡಾಜೆ ಯವರು ಮಾತನಾಡಿ “ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘವು ಇವತ್ತಿನ “ಆಟಿದ ಪೊಲಬು” ಕಾರ್ಯಕ್ರಮದಲ್ಲಿ ದೈವರಾಧಕರು ಹಾಗೂ ನಾಟಿ ವೈದ್ಯರನ್ನು ಸನ್ಮಾನಿಸುವ ಮೂಲಕ ತುಳುನಾಡಿನ ಸಂಸ್ಕöತಿ ಹಾಗೂ ಭಾಷೆಯನ್ನು ಬೆಳೆಸುವ ಕೆಲಸಗಳನ್ನು ಮಾಡುತ್ತಿದೆ. ಇವರುಗಳ ಜೊತೆಯಲ್ಲಿ ನನ್ನನ್ನು ಗುರುತಿಸಿ ಸನ್ಮಾನಿಸಿರುವುದು ತುಂಬಾ ಸಂತೋಷವಾಗುತ್ತಿದೆ. ಸಂಘದ ಅಧ್ಯಕ್ಷರಾದ ಸಹಕಾರ ರತ್ನ ಚಿತ್ತರಂಜನ್…

Read More

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯವು ಜೂನ್ ಜುಲೈ 2025 ರಲ್ಲಿ ಎಲ್ಲಾ ಪದವಿ ಕಾರ್ಯಕ್ರಮಗಳ ದ್ವಿತೀಯ ಚತುರ್ಥ ಮತ್ತು ಆರನೇ ಸೆಮಿಸ್ಟರ್ ನ ಪರೀಕ್ಷೆಗಳು ಇತ್ತೀಚೆಗೆ ಮುಗಿದಿದ್ದು, ಈ ಪರೀಕ್ಷೆಗಳ ವಿವಿದ ವಿಷಯಗಳ ಮೌಲ್ಯಮಾಪನ ಕಾರ್ಯವು ಜು.2 ರಂದು ಆರಂಭಗೊಂಡು ನಾಲ್ಕು ಮೌಲ್ಯಮಾಪನ ಕೇಂದ್ರಗಳಲ್ಲಿ ಮೌಲ್ಯ ಮಾಪನ ಕಾರ್ಯವು ನಡೆಯುತ್ತಿದೆ. ಪದವಿಯ ಆರನೇ ಸೆಮಿಸ್ಟರ್ ನ ಮೌಲ್ಯಮಾಪನ ಕಾರ್ಯವು ಜು.19 ರಂದು ಪೂರ್ಣಗೊಂಡಿದ್ದು‌ ವಿದ್ಯಾರ್ಥಿಗಳಿಗೆ ಮುಂದಿನ ಉನ್ನತ ವ್ಯಾಸಾಂಗಕ್ಕಾಗಿ ಹಾಗೂ ಉದ್ಯೋಗದ ಹಿತದೃಷ್ಟಿಯಿಂದ ಮೌಲ್ಯಮಾಪನ ನಡೆದ ಮೂರೇ ದಿನಗಳಲ್ಲಿ 15, 534 ವಿದ್ಯಾರ್ಥಿಗಳ ಫಲಿತಾಂಶವನ್ನು ಜು.22 ರಂದು ಗುರುವಾರ ಮಂಗಳೂರು ವಿವಿಯ UUCMS (ಯುಯುಸಿಎಮ್ ಎಸ್ ) ನ ಅಧಿಕೃತ ವೆಬ್ಸೈಟ್ www.uucms.karnataka.gov.in ನಲ್ಲಿ ಪ್ರಕಟಿಸಿದೆ.ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್ .ಧರ್ಮ ಅವರು ಮಂಗಳೂರು ವಿವಿ ಸಿಂಡಿಕೇಟ್ ಸಭಾಂಗಣದಲ್ಲಿ ಫಲಿತಾಂಶದ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದರು.ಈ ಸಂದರ್ಭದಲ್ಲಿ ಮಂಗಳೂರು ವಿವಿ ಕುಲಸಚಿವ ಕೆ‌.ರಾಜು ಮೊಗವೀರ, ಪರೀಕ್ಷಾಂಗ ಕುಲಸಚಿವ ಪ್ರೊ.ದೇವೇಂದ್ರಪ್ಪ ಹೆಚ್, ಹಣಕಾಸು ಅಧಿಕಾರಿ ಪ್ರೊ.ವೈ.ಸಂಗಪ್ಪ…

Read More

ಬೆಂಗಳೂರು : ಬೆಂಗಳೂರು ತಾಯಿಬೇರು ಸಾಮಾಜಿಕ ಮತ್ತು ಸಾಂಸ್ಕೃತಿಕ ಯುವ ವೇದಿಕೆಯು ಕೊಡಮಾಡುವ ಪ್ರತಿಷ್ಠಿತ “ಗಡಿನಾಡ ಸಾಹಿತ್ಯ ಭೂಷಣ ಪ್ರಶಸ್ತಿ”ಗೆ ಕಾಸರಗೋಡಿನ ಪತ್ರಕರ್ತ, ಜಯಕಿರಣ, ಕೆಸಿಎನ್‌ ಛಾನೆಲ್‌ ವರದಿಗಾರ, ನಿರೂಪಕ, ಲೇಖಕ, ಸಂಘಟಕ ರವಿ ನಾಯ್ಕಾಪು ಅವರನ್ನು ಆಯ್ಕೆ ಮಾಡಲಾಗಿದೆ.ತಾಯಿಬೇರು ಸಾಮಾಜಿಕ ಮತ್ತು ಸಾಂಸ್ಕೃತಿಕ ಯುವ ವೇದಿಕೆ ಹಾಗೂ ಅಖಿಲ ಕರ್ನಾಟಕ ಸಾಹಿತಿ ಕಲಾವಿದರ ಒಕ್ಕೂಟಗಳ ನೇತೃತ್ವದಲ್ಲಿ ಈ ತಿಂಗಳ 27 ರಂದು ಬೆಂಗಳೂರಿನ ಗೆಜ್ಜೆನಾದ ಸ್ಟುಡಿಯೋ ಸಭಾಂಗಣದಲ್ಲಿ ನಡೆಯಲಿರುವ ಕನ್ನಡ ಸಂಸ್ಕೃತಿ ಸಮಾರಂಭದಲ್ಲಿ ಪ್ರಶಸ್ತಿ ವಿತರಣೆ ನಡೆಯಲಿದೆಯೆಂದು ವೇದಿಕೆಯು ಪತ್ರಿಕಾ ಹೇಳಿಕೆಯಲ್ಲಿ ಘೋಷಿಸಿದೆ. ಪ್ರಶಸ್ತಿಯು 10 ಸಾವಿರ ರೂ. ನಗದು ಹಾಗೂ ಪ್ರಶಸ್ತಿ ಫಲಕವನ್ನೊಳಗೊಂಡಿದೆ.ಕಳೆದ 25 ವರ್ಷಗಳಿಂದ ಕಾಸರಗೋಡಿನಲ್ಲಿ ಪತ್ರಿಕಾ ರಂಗದಲ್ಲಿ ಸಕ್ರಿಯರಾಗಿರುವ ರವಿ ನಾಯ್ಕಾಪು ಅವರ ಸಾಹಿತ್ಯ ವಲಯದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ದಾನಗಂಗೆ, ಸ್ನೇಹಗಂಗೆ, ಗಾನಗಂಗೆ, ಸಾವಿರದ ಸಾಧಕ, ಸಮಾಜ ಸಂಪದ ಎಂಬೀ ಕೃತಿಗಳನ್ನು ರಚಿಸಿರುವ ರವಿ ಅವರ “ಸ್ನೇಹಗಂಗೆ” ಕೃತಿಯ ಸಂಕ್ಷಿಪ್ತ…

Read More

ಬೆಂಗಳೂರು, ಜುಲೈ 22: ಭಾರತ ಸರ್ಕಾರದ ಭೂವಿಜ್ಞಾನ ಮಂತ್ರಾಲಯದ ಅಧೀನದ ಭಾರತೀಯ ಹವಾಮಾನ ಇಲಾಖೆ ಇಂದು ಮಧ್ಯಾಹ್ನ 1 ಗಂಟೆಗೆ ನೀಡಿರುವ ತುರ್ತು ಮುನ್ಸೂಚನೆಯ ಪ್ರಕಾರ, ಮುಂದಿನ 3 ಗಂಟೆಗಳ ಅವಧಿಯಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮಳೆಯ ಜತೆಗೆ ಗಂಟೆಗೆ 40 ರಿಂದ 50 ಕಿಮೀ ವೇಗದ ಬಿರುಗಾಳಿಯೂ ಬೀಸಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಹವಾಮಾನ ಪರಿಸ್ಥಿತಿಯಿಂದಾಗಿ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಸಂಭವಿಸುವ ಸಾಧ್ಯತೆ ಇದೆ. ಉರುಳುವ ಅಥವಾ ಕೊಚ್ಚಿಹೋಗುವ ಅಪಾಯದಲ್ಲಿರುವ ಮರಗಳ ಕೊಂಬೆಗಳು ಬೀಳಬಹುದಾದ ಕಾರಣ ಸಂಚಾರ ದಟ್ಟಣೆ ಎದುರಾಗಬಹುದೆಂದು ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು ಭದ್ರತೆಯ ದೃಷ್ಟಿಯಿಂದ ಮನೆ ಒಳಗೆ ಉಳಿಯಬೇಕು, ಕಿಟಕಿಗಳು ಮತ್ತು ಬಾಗಿಲುಗಳನ್ನು ಮುಚ್ಚಿಕೊಳ್ಳಬೇಕು ಹಾಗೂ ತುರ್ತು ಅವಶ್ಯಕತೆ ಇಲ್ಲದ ಹೊರತು ಹೊರಗಡೆ ಪ್ರಯಾಣಿಸುವುದನ್ನು ತಪ್ಪಿಸಿಕೊಳ್ಳಬೇಕು.ಮರಗಳ ಕೆಳಗೆ ನಿಲ್ಲುವುದು ಅಪಾಯಕಾರಿಯಾದ್ದರಿಂದ ಸಾರ್ವಜನಿಕರು ಅದನ್ನು…

Read More

ಕುತ್ತಾರ್ :  ತಾಲೂಕು ಪಂಚಾಯತ್ ಮಾಜಿ ಸದಸ್ಯೆ ದಯಾವತಿ ಎಂಬವರ ಪುತ್ರ ಕುತ್ತಾರು ನಿವಾಸಿ ಸಚಿನ್ ಕುತ್ತಾರ್ (39)  ಅನಾರೋಗ್ಯದಿಂದಾಗಿ  ಇತ್ತೀಚೆಗೆ ಮನೆಯಲ್ಲಿ ನಿಧನ ಹೊಂದಿದರು.  ಬಜಾಜ್ ಅಲಾಯನ್ಸ್ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಚಿನ್ ವಿವಾಹಿತರಾಗಿದ್ದರು. ಕುತ್ತಾರು ಭಾಗದ ಹಲವು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದವರು ಒಂದು ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿ ನಿಧನ ಹೊಂದಿದ್ದಾರೆ.ನಾರಾಯಣ ಸಪಲ್ಯ- ದಯಾವತಿ  ದಂಪತಿ ಪುತ್ರರಾಗಿರುವ ಸಚಿನ್  ಪತ್ನಿ, ಮಗಳು, ತಂದೆ, ತಾಯಿ ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ. ತಾಯಿ ದಯಾವತಿ ಅವರು ತಾಲೂಕು ಪಂಚಾಯತ್  ಮಾಜಿ ಸದಸ್ಯೆಯಾಗಿದ್ದರು. 

Read More

ಕುಂಪಲ : ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದ  ಶ್ರೀ ದುರ್ಗಾಪರಮೇಶ್ವರ ಮಹಿಳಾ ಸೇವಾ ಸಮಿತಿಯ ಆಶ್ರಯದಲ್ಲಿ ನಡೆಯುವ ಶ್ರೀ ವರ ಮಹಾಲಕ್ಷ್ಮಿ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಇಂದು ಕ್ಷೇತ್ರದಲ್ಲಿ ನಡೆಯಿತು. ಕ್ಷೇತ್ರದಲ್ಲಿ ಜರಗಿದ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದ ಬಳಿಕ ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಸೇವಾ ಸಮಿತಿ, ಮಹಿಳಾ ಸೇವಾ ಸಮಿತಿಯ ಸದಸ್ಯೆಯರು ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.

Read More