ಮುಡಿಪು: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ, ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ದಕ್ಷಿಣ ವಲಯ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಪಾವೂರು ಹರೇಕಳ ಸಂಯುಕ್ತ ಆಶ್ರಯದಲ್ಲಿ ಉಳ್ಳಾಲ ತಾಲೂಕು ಪ್ರಥಮ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನವನ್ನು ಡಿ. 28 ರಂದು ಹರೇಕಳ ಶ್ರೀರಾಮಕೃಷ್ಣ ಪ್ರೌಢಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆಸಮ್ಮೇಳನ ಅಧ್ಯಕ್ಷರಾಗಿ ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಹರೇಕಳ ಕುಮಾರಿ ಫಾತಿಮತ್ ರಫೀದ ಇವರನ್ನು ಆರಿಸಲಾಗಿದೆ.ಬೆಳಗ್ಗೆ 9-30 ಹರೇಕಳ ಗ್ರಾಮ ಪಂಚಾಯತ್ ಆವರಣದಿಂದ ಜಾನಪದ ದಿಬ್ಬಣ ನಡೆಯಲಿದ್ದು ಇದರ ಉದ್ಘಾಟನೆ , ಗುಲಾಬಿ ಅಧ್ಯಕ್ಷರು ಹರೇಕಳ ಗ್ರಾಮ ಪಂಚಾಯತ್ ಇವರು ನೆರವೇರಿಸಲಿದ್ದಾರೆ. ಅಕ್ಷರ ಸಂತ ಹರೇಕಳ ಹಾಜಬ್ಬ , ಪದ್ಮ ಶ್ರೀ ಪುರಸ್ಕೃತರು ಭಾಗವಹಿಸಲಿದ್ದಾರೆ.ಸಮ್ಮೇಳನದಉದ್ಘಾಟಕರಾಗಿ ಯು ಟಿ ಖಾದರ್ ಸಭಾಧ್ಯಕ್ಷರು ಕರ್ನಾಟಕ ವಿಧಾನಸಭೆ ಪ್ರಧಾನ ಅಭ್ಯಾಗತರಾಗಿ, ಡಾ. ಎಂ. ಪಿ. ಶ್ರೀನಾಥಅಧ್ಯಕ್ಷರು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು , ಮುಖ್ಯ…
Author: UllalaVani
This content is password-protected. To view it, please enter the password below. Password:
ಮಂಗಳೂರು: 2019ರಿಂದ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಬುಧವಾರ ಸಂಜೆ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.ಬಳಿಕ ಮಾತಾಡಿದ ಎಂ.ಆರ್.ಜಿ.ಗ್ರೂಪ್ ಚೇರ್ಮನ್ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ನನ್ನ 60ನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಸಮಾಜಕ್ಕೆ ನನ್ನಿಂದ ಕಿಂಚಿತ್ತು ನೆರವು ನೀಡುವ ಉದ್ದೇಶದಿಂದ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅಂದಿನಿಂದ ಸತತವಾಗಿ ಈ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಇಂದು ನನ್ನ ಬಾಳಿನಲ್ಲಿ ಅತ್ಯಂತ ಖುಷಿಯ ದಿನ. ನನ್ನ ಈ ಕಾರ್ಯಕ್ಕೆ ನನ್ನ ಪತ್ನಿ ಮಗ ಸೊಸೆ ಸಹಿತ ಕುಟುಂಬದ ಸದಸ್ಯರು ಸಹಕಾರ ನೀಡುತ್ತಿದ್ದಾರೆ. ಮೊದಲ ವರ್ಷದಲ್ಲಿ 1 ಕೋಟಿ 25 ಲಕ್ಷ ರೂ. ನೆರವು ನೀಡಿದ್ದು ಅದು ಇಂದು 6 ಕೋಟಿ ರೂ. ಗಡಿಯನ್ನು ದಾಟಿದೆ. ಇಂದು ಇಲ್ಲಿ ಸಮಾರಂಭ ನಡೆಸಿ ನೆರವು ನೀಡುವ ಉದ್ದೇಶ ಇಷ್ಟೇ. ಇಂತಹ ಕಾರ್ಯಕ್ರಮ ಇಂದು ಸಹಾಯ ಪಡೆದ ಕೈಗಳಿಗೆ ಸ್ಫೂರ್ತಿಯಾಗಬೇಕು.…
ಉಳ್ಳಾಲ: ಮಂಗಳೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಭಿವೃದ್ಧಿಯ ನಿಟ್ಟಿನಲ್ಲಿ ಮುಂದಿನ 30 ವರ್ಷಗಳ ದೂರದೃಷ್ಟಿಯನ್ನಿಟ್ಟುಕೊಂಡು ನಿರಂತರ ವಿದ್ಯುತ್ ನೀಡುವ ಯೋಜನೆ ರೂಪಿಸುತ್ತಿದ್ದು, ಇತರ ಜಿಲ್ಲೆ, ರಾಜ್ಯದವರು ಯಾವುದೇ ಭಾಗದಲ್ಲೂ ಬಂಡವಾಳ ಹಾಕುವ ಸಂದರ್ಭ ವಿದ್ಯುತ್ನ ಸಮಸ್ಯೆ ಈ ಪ್ರದೇಶದಲ್ಲಿ ಉದ್ಭವಿಸದ ರೀತಿಯಲ್ಲಿ ಅನುದಾನವನ್ನು ತರಲಾಗಿದೆ ಎಂದು ವಿಧಾನಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.ಮೆಸ್ಕಾಂ ವತಿಯಿಂದ ಸುಮಾರು 9 ಕೋಟಿ ರೂ. ವೆಚ್ಚದಲ್ಲಿ ಕೋಟೆಕಾರ್ ಗ್ರಾಮದಲ್ಲಿ ನಿರ್ಮಾಣಗೊಂಡಿರುವ 33/11ಕೆವಿ ಸಾಮರ್ಥ್ಯದ ಉಪಕೇಂದ್ರ ಮಂಗಳವಾರ ಪರೀಕ್ಷಾರ್ಥ ಚಾಲನೆ ನೀಡಿ ಮಾತನಾಡಿದರು.ಮುಂದಕ್ಕೆ ಉಳ್ಳಾಲ ನಗರ, ಕೋಟೆಕಾರ್, ಕೊಣಾಜೆ, ಬೆಲ್ಮ, ಬೋಳಿಯಾರ್, ಕಿನ್ಯದಲ್ಲಿ ಸೆಕ್ಷನ್ ಕಚೇರಿ ನಿರ್ಮಾಣದ ಜೊತೆಗೆ ವಿದ್ಯುತ್ ಸಾಮರ್ಥ್ಯ ಹೆಚ್ಚಿಸುವ ಕಾರ್ಯ ಆಗಲಿದೆ. ಇದರಿಂದಾಗಿ ಉಳ್ಳಾಲ ತಾಲೂಕಿನಾದ್ಯಂತ ವಿದ್ಯುತ್ ಸಮಸ್ಯೆಗೆ ಶಾಶ್ವತ ಪರಿಹಾರ ಸಿಗಲಿದೆ. ಈ ಯೋಜನೆಯಿಂದ ಪ್ರಸ್ತುತ ಕಿನ್ಯಾ, ತಲಪಾಡಿ ಮತ್ತು ಮಾಡೂರು ಪ್ರದೇಶಗಳಿಗೆ 110ಕೆವಿ ವಿದ್ಯುತ್ ಕೊಣಾಜೆ ಉಪಕೇಂದ್ರದಿAದ ಮತ್ತು ಕೋಟೆಕಾರ್, ಸೋಮೇಶ್ವರ ಪುದೇಶಗಳಿಗೆ 33 ಕೆವಿ ವಿದ್ಯುತ್ ತೊಕೊಟ್ಟು ಉಪಕೇಂದ್ರದಿAದ ಸರಬರಾಜು…
ಮಂಗಳೂರು: ಮೂರನೇ ಆವೃತ್ತಿಯ ಮಂಗಳೂರು ಬೀಚ್ ಫೆಸ್ಟಿವಲ್, ಮಂಗಳೂರು ಟ್ರಯಾಥ್ಲನ್-2025 ಇದರ ಉದ್ಘಾಟನಾ ಸಮಾರಂಭ ಶನಿವಾರ ಸಂಜೆ ನಗರದ ಓಷನ್ ಪರ್ಲ್ ಹೋಟೆಲ್ ನಲ್ಲಿ ಜರುಗಿತು.ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಬಳಿಕ ಮಾತಾಡಿದ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು, “ದಕ್ಷಿಣ ಕನ್ನಡ ಎಲ್ಲ ರೀತಿಯಲ್ಲಿ ಮುಂದೆ ಇರುವ ಜಿಲ್ಲೆ. ಇಲ್ಲಿ ಎಲ್ಲ ಜಾತಿ ಭಾಷೆ ಮತದ ಜನರು ಒಗ್ಗಟ್ಟಾಗಿ ಬದುಕುತ್ತಿದ್ದಾರೆ. ಇಲ್ಲಿ ಸಂಸ್ಕೃತಿ ಮತ್ತು ಕ್ರೀಡೆಯ ಬಗ್ಗೆ ಮಹತ್ವವನ್ನು ಸಾರುವ ಇಂತಹ ಕಾರ್ಯಕ್ರಮ ಆಯೋಜನೆ ಮಾಡುತ್ತಿರುವುದು ಸಂತಸದ ವಿಚಾರ. ಒಂದು ಒಳ್ಳೆಯ ಕಾರ್ಯಕ್ಕಾಗಿ ಇಂತಹ ಕಾರ್ಯ ಮಾಡುತ್ತಿರುವ ತಪಸ್ಯ ಫೌಂಡೇಶನ್ ಶ್ರಮ ಶ್ಲಾಘನೀಯವಾದುದು. ಕಾರ್ಯಕ್ರಮ ಯಶಸ್ವಿಗೊಳಿಸಲು ನಾವೆಲ್ಲರೂ ಒಂದಾಗಿ ದುಡಿಯಬೇಕು. ಜಿಲ್ಲಾಡಳಿತ ಇಂತಹ ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಸಹಕಾರ ನೀಡಲಿದೆ” ಎಂದರು.ಬಳಿಕ ಮಾತಾಡಿದ ದಕ್ಷಿಣ ಕನ್ನಡ ಜಿಲ್ಲಾ ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಅವರು, “ಸಾಮಾಜಿಕ ಕಳಕಳಿಯ ಉದ್ದೇಶದಿಂದ ನಡೆಸುತ್ತಿರುವ ಇಂತಹ ಕಾರ್ಯಕ್ರಮ ಯಶಸ್ವಿಯಾಗಲಿ. ಇಂತಹ ಕಾರ್ಯಕ್ರಮದಲ್ಲಿ…
ನಂದಿನಿ ನದಿಯ ಹಿನ್ನೀರಿನ ತಟದಲ್ಲಿ ರೋಹನ್ ಎಸ್ಟೇಟ್ ಮುಕ್ಕ ಬಡಾವಣೆ ನಿರ್ಮಾಣವಾಗಿದೆ. ಪರಿಸರದ ಶ್ರೀಮಂತಿಕೆಯ ಜತೆಗೆ ಅತ್ಯಂತ ಸುರಕ್ಷಿತ ಹಾಗೂ ಆಕರ್ಷಕವಾಗಿ ಬಡಾವಣೆಯು ಮೂಡಿ ಬಂದಿದೆ. ಪ್ರಕೃತಿ ಜತೆಗೆ ಮಿಳಿತವಾದ ಆರಾಮದಾಯಕ ಬದುಕಿಗಾಗಿ ಈ ಬಡಾವಣೆಯನ್ನು ವಿನ್ಯಾಸಗೊಳಿಸಲಾಗಿದೆ. ಇದೊಂದು ಪರಿಪೂರ್ಣವಾದ ರೆಸಾರ್ಟ್ ಮಾದರಿಯ ಬಡಾವಣೆಯಾಗಿ ರೂಪುಗೊಂಡಿದೆ. ರೆಸಾರ್ಟ್ ಮಾದರಿಯ ಐಶಾರಾಮಿ ಬಡಾವಣೆ ರೋಹನ್ ಎಸ್ಟೇಟ್ ಮುಕ್ಕ. ಇದು ರೆಸಾರ್ಟ್ ಅಲ್ಲ. ರೆಸಾರ್ಟ್ ಶೈಲಿಯ ವಸತಿ ಬಡಾವಣೆ. ಶ್ರೀಮಂತಿಕೆ, ಐಶಾರಾಮಿ ಮಾದರಿ ಎಂಬಂತೆ ಪ್ರಕೃತಿಯ ಮಡಿಲಿನಲ್ಲಿ ತಲೆ ಎತ್ತಿ
ಮಂಗಳೂರು: ಪ್ರತೀ ವರ್ಷ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಡಿ. 25ರಂದು ಮಧ್ಯಾಹ್ನ ಗಂಟೆ 3.30ಕ್ಕೆ ಮಂಗಳೂರಿನ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ನಿನ ಅಧ್ಯಕ್ಷರು ಹಾಗು ಸಹ- ಸಂಸ್ಥಾಪಕರೂ ಆಗಿರುವ ಡಾ. ತೇಜಸ್ವಿನಿ ಅನಂತಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ.ಎಂ. ಮೋಹನ ಆಳ್ವ, ಕಾಪು ವಿಧನಾಸಭಾ ಕ್ಷೇತ್ರದ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಎಂ.ಆರ್.ಜಿ.ಗ್ರೂಪ್ ನ ಆಡಳಿತ ನಿರ್ದೇಶಕರಾದ ಗೌರವ್ ಪಿ. ಶೆಟ್ಟಿ ಮತ್ತು ಉಪಸ್ಥಿತರಿರಲಿದ್ದಾರೆ“ ಎಂದು ಎಂ.ಆರ್.ಜಿ.ಗ್ರೂಪ್ ಚೇರ್ಮನ್ ಡಾ. ಕೆ.ಪ್ರಕಾಶ್ ಶೆಟ್ಟಿ ಪತ್ರಿಕಾಗೋಷ್ಟಿಯಲ್ಲಿ ಮಾಹಿತಿ ನೀಡಿದರು.“ಈ ವರ್ಷ ಒಟ್ಟು 3,000 ಕುಟುಂಬಗಳಿಗೆ 6 ಕೋಟಿ ರೂಪಾಯಿಗೂ ಮಿಕ್ಕಿ ನೆರವನ್ನು ವಿತರಿಸಲಾಗುತ್ತಿದೆ. ಇದರಿಂದ ಸುಮಾರು ಹದಿನೈದು ಸಾವಿರ ಮಂದಿಗೆ ಪ್ರಯೋಜನವಾಗಲಿದೆ. ಫಲಾನುಭವಿಗಳ ಆಯ್ಕೆಯಲ್ಲಿ ಒಂದು ನಿಗದಿತ ಮಾನದಂಡವನ್ನು ಅನುಸರಿಸಲಾಗಿದೆ. ಅರ್ಜಿಗಳನ್ನು ಪರಿಶೀಲಿಸಿ, ಅವಶ್ಯ…
ಉಳ್ಳಾಲ: ಯುವಸಮುದಾಯ ಸೆಲ್ಫೀ ತೆಗೆದುಕೊಂಡು ಸ್ವಾರ್ಥಯುತ ಮನೋಭಾವದೊಂದಿಗೆ ಜೀವಿಸುತ್ತಿದ್ದಾರೆ, ಅದನ್ನು ಬದಲಾಯಿಸಲು ಎಳೆಯ ಹರೆಯದಲ್ಲೇ ಸಮಾಜದ ಆಗುಹೋಗುಗಳ ತಿಳುವಳಿಕೆ, ವೆನ್ಲಾಕ್ ಆಸ್ಪತ್ರೆಯಲ್ಲಿರುವ ರೋಗಿಗಳ ದರ್ಶನ ಮಾಡಿಸಿದಾಗ ಉತ್ತಮ ವ್ಯಕ್ತಿತ್ವ ರೂಪಿಸಲು ಸಾಧ್ಯವಾಗುವುದು ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಹೇಳಿದರು.ಅವರು ಉಳ್ಳಾಲ ಅಲೇಕಳದ ಮದನಿ ಎಜ್ಯುಕೇಷನಲ್ ಅಸೋಸಿಯೇಷನ್ ಇದರ 50ನೇ ವರ್ಷದ ಸುವರ್ಣ ಸಂಭ್ರಮಾಚರಣೆ ಪ್ರಯುಕ್ತ ಹಮ್ಮಿಕೊಳ್ಳಲಾದ ನೂತನ ಕಾಲೇಜು ಮತ್ತು ವೈಜ್ಞಾನಿಕ ಪ್ರಯೋಗಾಲಯ ಕಟ್ಟಡದ ಶಿಲನ್ಯಾಸ ನೆರವೇರಿಸಿ ಮಾತನಾಡಿದರು.ಕಷ್ಟಕರ ವಿಚಾರಗಳು ಮನಸ್ಸಿಗೆ ಪರಿಚಯವಾದಾಗ ಮಕ್ಕಳು ಎಂದಿಗೂ ದಾರಿತಪ್ಪಲು ಸಾಧ್ಯವಿಲ್ಲ. ವೆನ್ಲಾಕ್ ಆಸ್ಪತ್ರೆ, ಬಡ ವರ್ಗದವರ ಕಷ್ಟಗಳನ್ನು ಹೇಳಿಕೊಟ್ಟು ಅದನ್ನು ತಿಳಿಸಿದಲ್ಲಿ ಉತ್ತಮ ವ್ಯಕ್ತಿತ್ವ ರೂಪಿಸಲು ಸಾಧ್ಯ. ಮದನಿ ಎಜ್ಯುಕೇಷನಲ್ ಅಸೋಸಿಯೇಷನ್ ಮತ್ತು ಅಲ್ಯುಮ್ನಿ ಅಸೋಸಿಯೇಷನ್ ಮಹತ್ವದ ಸಮಾಜಮುಖಿ ಕಾರ್ಯಕ್ಕೆ ಮುಂದಾಗಿರುವ ಕಾರ್ಯ ಶ್ಲಾಘನೀಯ. ತನ್ನ ಕಡೆಯಿಂದ ರೂ.25 ಲಕ್ಷ ರೂ ವೆಚ್ಚದ ಸಹಾಯವನ್ನು ನಡೆಸುವಲ್ಲಿ ಶ್ರಮವಹಿಸುತ್ತೇನೆ ಎಂದ ಅವರು ಬಡವರು ಬಡವರಾಗಿಯೇ ಸಾಯದೇ, ಸ್ಥಿತಿವಂತರಾಗಿಯೇ ಬಾಳುವವರಾಗಿರಿ ಎಂದರು.ಸುವರ್ಣ ಮಹೋತ್ಸವದ ಲಾಂಛನವನ್ನು ವಿಧಾನಪರಿಷತ್…
ತೊಕ್ಕೊಟ್ಟು : ನಾಗಿಣಿ ಸೀರಿಯಲ್ ಖ್ಯಾತಿಯ ಹಾಗೂ ಬಿಗ್ ಬಾಸ್ ಮಾಜಿ ಸ್ಪರ್ಧಾಳು ದೀಪಿಕಾ ದಾಸ್ ಮಂಗಳೂರು ಹೊರವಲಯದ ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ಉದ್ಭವ ಶಿಲೆಗೆ ಭೇಟಿ ನೀಡಿ ಜನವರಿ ತಿಂಗಳಲ್ಲಿ ತೆರೆಕಾಣಲಿರುವ ತಾನು ನಟಿಸಿದ ಹೊಸ ಚಲನಚಿತ್ರದ ಯಶಸ್ಸಿಗಾಗಿ ಪ್ರಾರ್ಥಿಸಿದರು.ಬಳಿಕ ಮಾತನಾಡಿದ ನಟಿ, ತಾನು ನಟಿಸಿದ ಹ್ಯಾಷ್ ಟ್ಯಾಗ್ ಪಾರು ಪಾರ್ವತಿ ಚಲನಚಿತ್ರ ಜನವರಿ ತಿಂಗಳಲ್ಲಿ ತೆರೆಕಾಣಲಿದೆ. ಚಿತ್ರದ ಯಶಸ್ಸಿಗಾಗಿ ಅಜ್ಜನಲ್ಲಿ ಪ್ರಾರ್ಥಿಸಿರುವೆನು. ಮಂಗಳೂರು ಎಂದರೆ ದೈವ-ದೇವರ ನಾಡು, ಪ್ರತಿಬಾರಿಯೂ ಬಂದಾಗ ವಿಶೇಷವಾದ ಆಶೀರ್ವಾದ ಪಡೆದುಕೊಂಡಂತಾಗುತ್ತದೆ. ಮುಂದಿನ ಚಲನಚಿತ್ರ ʻಚೌಕಟ್ಟುʼ ಮಂಗಳೂರು ಮೂಲದ ಚಿತ್ರವಾಗಿದೆ. ತುಳುನಾಡಿನ ಕಲೆ ಯಕ್ಷಗಾನ, ಕೋಲ ಎಲ್ಲವೂ ಚಿತ್ರದಲ್ಲಿದ್ದು, ಮೂರು ತಿಂಗಳಲ್ಲಿ ಅದು ಕೂಡಾ ಬಿಡುಗಡೆಗೊಳ್ಳುವ ನಿರೀಕ್ಷೆಯಿದೆ. ಅಜ್ಜನ ಹಾಗೂ ದೇವರ ಆಶೀರ್ವಾದದಿಂದ ಎರಡೂ ಚಿತ್ರಗಳಲ್ಲಿ ಕತೆಯೇ ನಾಯಕನಾಗಿದ್ದು, ಮಹಿಳಾ ಪ್ರಧಾನ ಕತೆಯಾಧಾರಿತದ್ದಾಗಿದೆ. ಕುತ್ತಾರು ದೆಕ್ಕಾಡುವಿನ ಕೊರಗಜ್ಜನ ಕ್ಷೇತ್ರಕ್ಕೆ ಈ ಹಿಂದೆ ಭೇಟಿ ಕೊಟ್ಟಿರುವೆ. ಕಲ್ಲಾಪು ಬುರ್ದುಗೋಳಿಗೆ ಪ್ರಥಮ ಭೇಟಿಯಾಗಿದ್ದು ಬಹಳಷ್ಟು ಖುಷಿಯಾಯಿತು ಎಂದರು.ಈ…
ಎಕ್ಕೂರು: ಭಗವಂತ ಕೊಟ್ಟ ದೇಹವನ್ನು ಸಾಧನಾ ಶರೀರವಾಗಿ ಪರಿವರ್ತಿಸಿ ಸಾಧನೆ ಮೂಲಕ ಭಗವಂತನಿಗೆ ವಾಪಸ್ಸು ಕೊಡುಗೆಯನ್ನು ನೀಡುವವರಂತಾಗಬೇಕು. ಅದಕ್ಕಾಗಿ ಆರೋಗ್ಯಯುತ ದೇಹವನ್ನು ಕಾಪಾಡುತ್ತಾ ನಿತ್ಯ ಭಗವಂತನ ಸ್ಮರಣೆಯನ್ನು ಮಾಡಲು ಎಲ್ಲಾ ರೀತಿಯ ಆಲಸ್ಯಗಳನ್ನು ದೂರವಾಗಿಸಬೇಕು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ಪೀಠಾಧಿಪತಿಗಳಾದ ಶ್ರೀ ಶ್ರೀ ವಿದ್ಯಾಪ್ರಸನ್ನ ತೀರ್ಥ ಶ್ರೀ ಪಾದಂಗಳವರು ಹೇಳಿದರು.ಎಕ್ಕೂರು ಸದಾಶಿವನಗರದಲ್ಲಿರುವ ಶ್ರೀ ಅನಂತನಾಗ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಡಿ.೯ ರಿಂದ ೧೫ರವರೆಗೆ ಜರಗಿದ ಶ್ರೀ ಮದ್ಭಾಗವತ ಪ್ರವಚನ ಸಪ್ತಾಹವನ್ನು ಉದ್ಘಾಟಿಸಿ ಮಾತನಾಡಿದರು.ಶ್ರೀ ಮದ್ಭಾಗವತ ಪ್ರವಚನ ಸಪ್ತಾಹವನ್ನು ಕರ್ನಾಟಕ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ ಇವರು ನೆರವೇರಿಸಿ, ನಿರ್ಮಲವಾದ ಹೃದಯಗಳನ್ನು ಯಾವುದೋ ಭಾವನೆಗಳನ್ನು ಇಟ್ಟುಕೊಂಡು ಕಲುಷಿತಗೊಳಿಸುತ್ತಿದ್ದೇವೆ. ಆದರೆ ಕೃಷ್ಣ ಪರಮಾತ್ಮನ ಸಂದೇಶಗಳನ್ನು ಅಂತರAಗದಲ್ಲಿರಿಸಿದಾಗ ನಿರ್ಮಲವಾಗಿಸಲು ಸಾಧ್ಯ. ಸಂಸಾರದಲ್ಲಿ ಬದುಕುವಂತಹ ಚಾಚಕ್ಯತೆಯನ್ನು ಕೃಷ್ಣ ಪರಮಾತ್ಮನಿಂದ ಕಲಿಯಬೇಕಿದೆ ಎಂದರು.ಈ ಸಂದರ್ಭ ವೇ.ಬ್ರ. ಎಂ ಗೋಪಾಲಕೃಷ್ಣ ತಂತ್ರಿವರ್ಯರು, ಪತಂಜಲಿ ಯೋಗ ಶಿಕ್ಷಣ ಸಮಿತಿ ಎಕ್ಕೂರು ಇಲ್ಲಿನ ರಾಮದಾಸ್, ಅನಂತ ಕೃಷ್ಣ ರಾವ್ ಎಕ್ಕೂರು…

