ಮಂಗಳೂರು: ನಿಟ್ಟೆ ವಿದ್ಯಾಸಂಸ್ಥೆಯ ಅಧೀನದಲ್ಲಿ ಕಾರ್ಯಚರಿಸುತ್ತಿರುವ ನಂತೂರಿನ ಡಾ. ಎನ್.ಎಸ್.ಎ.ಎಂ. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಪೋಷಕರಿಗಾಗಿ 2026ರ ಸಾಲಿನ ಓರಿಯೆಂಟೆಸನ್ ಕಾರ್ಯಕ್ರಮ ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಡಿಟೋರಿಯಂನಲ್ಲಿ ನಡೆಯಿತು. ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಕುಲಸಚಿವ ಡಾ. ಹರ್ಷ ಹಾಲಹಳ್ಳಿ ಓರಿಯೆಂಟೆಸನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು ಪದವಿ ಪೂರ್ವ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯದ ಬದುಕಿಗೆ ಅತ್ಯಂತ ನಿರ್ಣಾಯಕವಾದ ಘಟ್ಟವಾಗಿದೆ. ವಿದ್ಯಾರ್ಥಿಗಳು ಕೇವಲ ಅಂಕಗಳಿಕೆಗೆ ಸೀಮಿತವಾಗದೆ, ಉತ್ತಮ ಸಂಸ್ಕಾರ ಮತ್ತು ನೈತಿಕ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಬೇಕು. ನಿಟ್ಟೆ ಸಂಸ್ಥೆಯು ಗುಣಮಟ್ಟದ ಶಿಕ್ಷಣದೊಂದಿಗೆ ವಿದ್ಯಾರ್ಥಿಗಳ ಸರ್ವಾಂಗೀಣ ಬೆಳವಣಿಗೆಗೆ ಸದಾ ಪೂರಕ ವಾತಾವರಣವನ್ನು ಕಲ್ಪಿಸುತ್ತಾ ಬಂದಿದೆ. ಹೊಸ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಸಿಗುವ ಪ್ರತಿಯೊಂದು ಅವಕಾಶವನ್ನು ಸದುಪಯೋಗಪಡಿಸಿಕೊಂಡು ಉನ್ನತ ಗುರಿ ತಲುಪಬೇಕು ಎಂದು ಹೇಳಿದರು. ದೇರಳಕಟ್ಟೆ ಕೆ.ಎಸ್. ಹೆಗ್ಡೆ ವೈದ್ಯಕೀಯ ಅಕಾಡೆಮಿಯ ಡೀನ್ ಡಾ. ಸಂದೀಪ್ ರೈ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ಶಿಕ್ಷಣ ರಂಗದಲ್ಲಿ ಪೋಷಕರ ಮತ್ತು ಶಿಕ್ಷಕರ ಪಾತ್ರ…
Author: UllalaVani
ಮಂಗಳೂರು ಬಂದರು ಪ್ರದೇಶದಲ್ಲಿ ವರ್ಷಗಳಿಂದ ನಡೆಯುತ್ತಿರುವ ಪರಿಸರ ಮಾಲಿನ್ಯ, ಧೂಳು ಹಾಗೂ CRZ ಉಲ್ಲಂಘನೆಗಳ ಕುರಿತು ಸಾರ್ವಜನಿಕರಿಂದ ಅನೇಕ ಬಾರಿ ಆಕ್ಷೇಪಗಳು ವ್ಯಕ್ತವಾಗಿದ್ದರೂ, ಸಂಬಂಧಿತ ಇಲಾಖೆಗಳು ಹಾಗೂ ಜನಪ್ರತಿನಿಧಿಗಳಿಂದ ಸಮರ್ಪಕ ಕ್ರಮಗಳು ಕಂಡುಬರಲಿಲ್ಲ ಎಂಬ ಟೀಕೆಗಳು ಮತ್ತೆ ಕೇಳಿಬರುತ್ತಿವೆ. ಇದೀಗ ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟದ ನಿರಂತರ ಹೋರಾಟ, ದೂರುಗಳು ಹಾಗೂ ದಾಖಲೆ ಸಮೇತ ಮನವಿಗಳ ಪರಿಣಾಮವಾಗಿ ಮಂಗಳೂರು ಬಂದರು ಇಲಾಖೆ ಎಚ್ಚೆತ್ತುಕೊಂಡಿರುವುದು ಗಮನಾರ್ಹ ಬೆಳವಣಿಗೆಯಾಗಿದೆ. ಸಾರ್ವಜನಿಕರ ದೂರುಗಳ ಆಧಾರದಲ್ಲಿ ಬಂದರು ಇಲಾಖೆ ಪತ್ರ ವ್ಯವಹಾರ ಆರಂಭಿಸಿರುವುದು ಪರಿಸರ ಹೋರಾಟಗಾರರ ಒತ್ತಡದ ಫಲವೆಂದು ಹೇಳಲಾಗುತ್ತಿದೆ. ಆಶ್ಚರ್ಯದ ವಿಷಯವೆಂದರೆ, ಮಂಗಳೂರು ಜಲಸಾರಿಗೆ ಮತ್ತು ಬಂದರು ಇಲಾಖೆಗೆ ಹಲವು ವರ್ಷಗಳಿಂದ ಅನೇಕ ಸಚಿವರು ಹೊಣೆ ಹೊತ್ತಿದ್ದರೂ, ತಮ್ಮದೇ ಇಲಾಖೆಯ ಜಾಗಗಳ ಸರ್ವೆ ಹಾಗೂ ಪರಿಸರ ಸ್ಥಿತಿಗತಿ ಕುರಿತು ಗಂಭೀರ ಗಮನ ಹರಿಸದಿರುವ ಆರೋಪ ಕೇಳಿಬರುತ್ತಿದೆ. ರಮಾನಾಥ ರೈ, ಎಸ್. ಅಂಗಾರ, ಕೋಟ ಶ್ರೀನಿವಾಸ ಪೂಜಾರಿ, ಕೃಷ್ಣ ಪಾಲೇಮಾರ್, ವಿ. ಸೋಮಣ್ಣ ಸೇರಿದಂತೆ ಹಲವು ನಾಯಕರು…
ಮಂಗಳೂರು, ಮೇ. 23: ಹದಿನಾರು ( ಮೇ 22 2010ರ) ವರ್ಷಗಳ ಹಿಂದೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸಂಭವಿಸಿದ ಭೀಕರ ವಿಮಾನ ದುರಂತಲ್ಲಿ ಮಡಿದವರಿಗೆ ಸಾಮರಸ್ಯ ಮಂಗಳೂರು ಪದಾಧಿಕಾರಿಗಳು ತಣ್ಣೀರುಭಾವಿ ಬಳಿ ನಿರ್ಮಿಸಿರುವ ಸ್ಮಾರಕಕ್ಕೆ ತೆರಳಿ , ಶ್ರದ್ಧಾಂಜಲಿ ಸಲ್ಲಿಸಿದರು. ಈ ಸಂಧರ್ಭದಲ್ಲಿ ಸಾಮರಸ್ಯ ಮಂಗಳೂರು ಅಧ್ಯಕ್ಷೆ ಶ್ರೀಮತಿ ಮಂಜುಳಾ ನಾಯಕ್ ,ರೇಣುಕಾ ಶೆಟ್ಟಿ , ಪ್ರತಿಭಾ ಶೆಟ್ಟಿ , ಚಿತ್ರ ಕಿಣಿ , ವಿದ್ಯಾ ಶೆಣೈ , ಮಮತಾ ಕುಡ್ವ ಮತ್ತಿತರು ಉಪಸ್ಥಿತರಿದ್ದರು. ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.ಮಂಗಳೂರು ವಿಮಾನ ದುರಂತವು ಭಾರತದ ವಿಮಾನಯಾನ ಇತಿಹಾಸದಲ್ಲಿ ಒಂದು ಕರಾಳ ಘಟನೆಯಾಗಿ ಉಳಿದಿದೆ. ಈ ದುರಂತವು ವಿಮಾನಯಾನ ಸುರಕ್ಷತೆಯ ಮೇಲೆ ಗಮನ ಹರಿಸಲು ಒಂದು ಎಚ್ಚರಿಕೆಯ ಕರೆಯಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಜೋಕಟ್ಟೆ ಪ್ರದೇಶದಲ್ಲಿ ಕೈಗಾರಿಕಾ ಮಾಲಿನ್ಯ ವಿರುದ್ಧ ಕಳೆದ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಿರುವ ಸ್ಥಳೀಯ ಸಂತ್ರಸ್ತರ ಧರಣಿಗೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡುರಾವ್ ಭೇಟಿ ನೀಡಿ ಮನವಿ ಸ್ವೀಕರಿಸಿದರು. MRPL ಕೈಗಾರಿಕಾ ಮಾಲಿನ್ಯದಿಂದ ಸಂಕಷ್ಟ ಅನುಭವಿಸುತ್ತಿರುವ ಜನರು ಕಳೆದ 12 ವರ್ಷಗಳಿಂದ ನರಕ ಸದೃಶ ಜೀವನ ನಡೆಸುತ್ತಿದ್ದಾರೆ ಎಂದು ಧರಣಿ ನಿರತರು ಆಕ್ರೋಶ ವ್ಯಕ್ತಪಡಿಸಿದರು. ವಿಶೇಷವಾಗಿ ಹೊಗೆ ಮಾಲಿನ್ಯವು ಮಕ್ಕಳ ಆರೋಗ್ಯದ ಮೇಲೆ ನೇರ ಪರಿಣಾಮ ಬೀರುತ್ತಿದ್ದು, ಉಸಿರಾಟ ಸಮಸ್ಯೆ, ಅಲರ್ಜಿ ಹಾಗೂ ಇತರೆ ಆರೋಗ್ಯ ತೊಂದರೆಗಳು ಹೆಚ್ಚುತ್ತಿವೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. “ಜನರ ಉಸಿರು ಹಸಿರಿನಲ್ಲಿ ಇದೆ” ಎಂಬ ಸಂದೇಶದೊಂದಿಗೆ ಹೋರಾಟಗಾರರು ಹೋರಾಟ ನಡೆಸುತ್ತಿದ್ದರು. ಹಸಿರು ವಲಯ ನಿರ್ಮಾಣಕ್ಕೆ ಆಗಲೇ ನೀಡಲಾಗಿದ್ದ ಆದೇಶವನ್ನು ತಕ್ಷಣ ಜಾರಿಗೊಳಿಸುವಂತೆ ಆಗ್ರಹಿಸಿದರು. ಹಸಿರು ವಲಯ ನಿರ್ಮಾಣದ ಆದೇಶಕ್ಕೆ ಹತ್ತು ವರ್ಷಕ್ಕೂ ಹೆಚ್ಚು ಕಾಲ ಕಳೆದಿದ್ದರೂ MRPL ಸಂಸ್ಥೆ ಅದನ್ನು ಪೂರ್ಣ ಪ್ರಮಾಣದಲ್ಲಿ ಕಾರ್ಯಗತಗೊಳಿಸಿಲ್ಲ ಎಂಬ ಆರೋಪ ಕೇಳಿಬಂದಿದೆ.…
ನವದೆಹಲಿ, ಮೇ. 23 : ಜಾಗತಿಕ ಕಚ್ಚಾ ತೈಲ ಬೆಲೆ ಏರಿಕೆ ಹಾಗೂ ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನ ಪರಿಸ್ಥಿತಿಯ ನಡುವೆಯೇ ದೇಶಾದ್ಯಂತ ಶನಿವಾರ ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಹೆಚ್ಚಿಸಲಾಗಿದೆ. ಕಳೆದ 10 ದಿನಗಳಲ್ಲಿ ಇದು ಮೂರನೇ ಬಾರಿ ಇಂಧನ ದರ ಏರಿಕೆಯಾಗಿದ್ದು, ವಾಹನ ಸವಾರರಿಗೆ ಮತ್ತೊಂದು ಹೊರೆ ತಂದಿದೆ. ಸರ್ಕಾರಿ ಸ್ವಾಮ್ಯದ ತೈಲ ಮಾರುಕಟ್ಟೆ ಕಂಪನಿಗಳು ಪೆಟ್ರೋಲ್ ದರವನ್ನು ಲೀಟರ್ಗೆ 87 ಪೈಸೆ ಮತ್ತು ಡೀಸೆಲ್ ದರವನ್ನು 91 ಪೈಸೆ ಹೆಚ್ಚಿಸಿವೆ. ಇದರೊಂದಿಗೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಲೀಟರ್ಗೆ ರೂ. 99.51ಕ್ಕೆ ಏರಿಕೆಯಾದರೆ, ಡೀಸೆಲ್ ದರ ರೂ. 92.49ಕ್ಕೆ ತಲುಪಿದೆ.ಇತ್ತೀಚಿನ ದಿನಗಳಲ್ಲಿ ಕೆಲವು ಭಾಗಗಳಲ್ಲಿ ಇಂಧನ ಕೊರತೆಯ ಆತಂಕ ವ್ಯಕ್ತವಾಗಿದ್ದರೂ, ದೇಶಾದ್ಯಂತ ಇಂಧನ ಸರಬರಾಜು ಸ್ಥಿರವಾಗಿಯೇ ಮುಂದುವರಿಯಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸಾರ್ವಜನಿಕರಿಗೆ ಭರವಸೆ ನೀಡಿದೆ. ಭಯಭೀತರಾಗಿ ಅಗತ್ಯಕ್ಕಿಂತ ಹೆಚ್ಚು ಇಂಧನ ಖರೀದಿಸಬಾರದು ಎಂದು ಸಚಿವಾಲಯ ಮನವಿ ಮಾಡಿದೆ.ಕೆಲವು ಪೆಟ್ರೋಲ್ ಬಂಕ್ಗಳಲ್ಲಿ…
ಉಳ್ಳಾಲ ತಾಲೂಕಿನ ಕುರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆಗಳು, ಹೋಟೆಲ್ಗಳು ಹಾಗೂ ವಾಣಿಜ್ಯ ಕಟ್ಟಡಗಳಿಂದ ಹೊರಬರುವ ಕಸ ಮತ್ತು ತ್ಯಾಜ್ಯವನ್ನು ಸರಿಯಾಗಿ ವಿಲೇವಾರಿ ಮಾಡಲಾಗುತ್ತಿಲ್ಲ ಎಂಬ ಆರೋಪಗಳು ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿವೆ. ಕೆಲ ಪ್ರದೇಶಗಳಲ್ಲಿ ಕಸದ ರಾಶಿಗಳು ಕೊಳೆಯುತ್ತಿದ್ದು, ದುರ್ವಾಸನೆ ವ್ಯಾಪಿಸಿ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ವಿದ್ಯಾರ್ಥಿಗಳು, ವಾಹನ ಸವಾರರು ಹಾಗೂ ಸ್ಥಳೀಯ ನಿವಾಸಿಗಳು ಪ್ರತಿದಿನ ಈ ಸಮಸ್ಯೆಯಿಂದ ಸಂಕಷ್ಟ ಅನುಭವಿಸುತ್ತಿದ್ದಾರೆ. ಮಳೆಗಾಲದಲ್ಲಿ ಪರಿಸ್ಥಿತಿ ಇನ್ನಷ್ಟು ಗಂಭೀರವಾಗುವ ಸಾಧ್ಯತೆ ಇದ್ದು, ಸಾಂಕ್ರಾಮಿಕ ರೋಗಗಳ ಭೀತಿ ಕೂಡ ವ್ಯಕ್ತವಾಗಿದೆ. ಜನರ ಮೇಲೆ ದಂಡ (Penalty) ವಿಧಿಸುವ ಅವಕಾಶ ಇದ್ದರೂ ಈ ಕುರಿತು ಪಂಚಾಯತ್ ಮೌನ ವಹಿಸಿದೆ ಎಂಬ ಆರೋಪವೂ ಕೇಳಿಬರುತ್ತಿದೆ. ಪಂಚಾಯತ್ ಪ್ರತಿ ಮನೆಯಿಂದ ನಿಯಮಿತವಾಗಿ ಕಸ ಸಂಗ್ರಹಿಸದೇ ಇರುವುದೇ ಈ ದುಸ್ಥಿತಿಗೆ ಪ್ರಮುಖ ಕಾರಣವಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರ ಪರಿಣಾಮವಾಗಿ ಮನೆಗಳಲ್ಲಿ ಉತ್ಪತ್ತಿಯಾಗುವ ಹಸಿ ಹಾಗೂ ಒಣ ಕಸವನ್ನು ಜನರು ರಸ್ತೆ ಇಕ್ಕೆಲಗಳಲ್ಲಿ ಎಸೆಯುತ್ತಿರುವುದು ಸಾಮಾನ್ಯ ದೃಶ್ಯವಾಗಿದೆ. ಇನ್ನೊಂದೆಡೆ,…
ಮಂಗಳೂರಿನ ಕುಂಟಿಕಾನದಲ್ಲಿರುವ ಮಾರ್ಟ್ವೊಂದರಲ್ಲಿ ಸಂಭವಿಸಿದ ಲಿಫ್ಟ್ ಅವಘಡದಲ್ಲಿ ಬೆಳಾಲು ಗ್ರಾಮದ ಪೂಂಜಕೆರೆ ನಿವಾಸಿ ನೌಫಾಲ್ (28) ಮೃತಪಟ್ಟ ಘಟನೆ ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಕೆಲಸದಲ್ಲಿ ನಿರತರಾಗಿದ್ದ ಯುವಕನೊಬ್ಬ ಲಿಫ್ಟ್ ಅವಘಡದಲ್ಲಿ ಪ್ರಾಣ ಕಳೆದುಕೊಳ್ಳುವುದು ಕೇವಲ ಅಪಘಾತವಲ್ಲ, ಇದು ಸಾರ್ವಜನಿಕ ಸುರಕ್ಷತೆ ವ್ಯವಸ್ಥೆಯ ವೈಫಲ್ಯ ಎನ್ನುವ ಪ್ರಶ್ನೆ ಈಗ ಜನರ ಮನಸ್ಸಿನಲ್ಲಿ ಮೂಡುತ್ತಿದೆ. ಘಟನೆ ನಡೆದಿದ್ದು ಶನಿವಾರ ಸಂಜೆ. ಸಹೋದ್ಯೋಗಿಗಳು ನೌಫಾಲ್ ಅವರನ್ನು ರಕ್ಷಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಪ್ರಕರಣ ಉರ್ವ ಠಾಣೆಯಲ್ಲಿ ದಾಖಲಾಗಿದ್ದರೂ, ಮೂರು ದಿನ ಕಳೆದರೂ ತನಿಖೆಯ ಪ್ರಗತಿ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾಗಿಲ್ಲ. ಲಿಫ್ಟ್ಕ್ಕೆ ಮಾನ್ಯ ಸುರಕ್ಷತಾ ಪ್ರಮಾಣಪತ್ರ ಇದೆಯೇ? ನಿಯಮಿತ ತಪಾಸಣೆ ನಡೆದಿತ್ತೇ? ಕಟ್ಟಡಕ್ಕೆ ಅಗ್ನಿಶಾಮಕ ಮತ್ತು ಸುರಕ್ಷತಾ ಅನುಮತಿಗಳು ಸರಿಯಾಗಿದ್ದವೆಯೇ? ಈ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಒಬ್ಬ ಯುವಕ ಪ್ರಾಣ ಕಳೆದುಕೊಂಡಿದ್ದರೂ ಜಿಲ್ಲಾಡಳಿತದ ಮೌನ ಜನರಲ್ಲಿ ಅನುಮಾನ ಹುಟ್ಟಿಸುತ್ತಿದೆ. ಜಿಲ್ಲಾಧಿಕಾರಿಗಳು ಯಾಕೆ ಸಾರ್ವಜನಿಕವಾಗಿ ಮಾಹಿತಿ ನೀಡುತ್ತಿಲ್ಲ? ಮಹಾನಗರ ಪಾಲಿಕೆಯ ಕಟ್ಟಡ ಮತ್ತು ಸುರಕ್ಷತಾ…
ಉಳ್ಳಾಲ ತಾಲೂಕಿನ ಕುರ್ನಾಡು ಗ್ರಾಮದ ಮುಡಿಪು ಜಂಕ್ಷನ್ ಹತ್ತಿರ, ಮುಡಿಪು ಕಾಲೇಜಿನ ದ್ವಾರದ ಬಳಿ ದಿನೇ ದಿನೇ ಹೆಚ್ಚುತ್ತಿರುವ ಕಸದ ರಾಶಿಯಿಂದ ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಾಹನ ಸವಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಶಿಕ್ಷಣ ಸಂಸ್ಥೆಯ ಪ್ರವೇಶ ದ್ವಾರವೇ ದುರ್ವಾಸನೆ ಮತ್ತು ಅಸ್ವಚ್ಛತೆಯ ಕೇಂದ್ರವಾಗಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಪ್ರತಿ ದಿನ ನೂರಾರು ವಿದ್ಯಾರ್ಥಿಗಳು ಇದೇ ಮಾರ್ಗದಲ್ಲಿ ಕಾಲೇಜಿಗೆ ತೆರಳುತ್ತಿದ್ದು, ಕಸದ ರಾಶಿಯಿಂದ ಹರಡುವ ದುರ್ವಾಸನೆ, ಕೀಟಗಳು ಹಾಗೂ ಆರೋಗ್ಯ ಸಮಸ್ಯೆಗಳ ಭೀತಿ ಮಕ್ಕಳಿಗೆ ನರಕ ಯಾತನೆಯಂತಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. “ಉಳ್ಳಾಲ ತಾಲೂಕಿನ ಸ್ವಚ್ಚತಾ ಅಭಿಯಾನ ಕೇವಲ ಬ್ಯಾನರ್ ಮತ್ತು ಭಾಷಣಗಳಿಗೆ ಮಾತ್ರ ಸೀಮಿತವಾಗಿದೆಯೇ?” ಎಂದು ಗ್ರಾಮಸ್ಥರು ಪ್ರಶ್ನಿಸಿದ್ದಾರೆ. ಲಕ್ಷಾಂತರ ರೂಪಾಯಿ ಸರ್ಕಾರಿ ಸಂಬಳ ಪಡೆಯುವ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಸಿಬ್ಬಂದಿ ಸಮಸ್ಯೆ ಬಗ್ಗೆ ಗಮನ ಹರಿಸದಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಕಸದ ತೆರವು, ಶಾಶ್ವತ ತ್ಯಾಜ್ಯ ನಿರ್ವಹಣೆ ಹಾಗೂ ಸ್ವಚ್ಛತಾ ಕ್ರಮಗಳ ಬಗ್ಗೆ ಹಲವು ಬಾರಿ…
ಬದ್ರಿಯಾ ವೆಲ್ಫೇರ್ ಸೊಸೈಟಿ (ರಿ) ಅಜ್ಜಿನಡ್ಕ ಕೋಟೆಕಾರ್ ಇದರ 40 ನೇ ವಾರ್ಷಿಕೋತ್ಸವದ ಸಮಾರೋಪ ಸಮಾರಂಭ 2026 ಮೇ 24 ನೇ ರವಿವಾರ ಸಂಜೆ 7 ಗಂಟೆಗೆ ಮಜಲ್ ರೆಸಿಡೆನ್ಸಿ ಅಜ್ಜಿನಡ್ಕ ಇಲ್ಲಿ ನಡೆಯಲಿರುದು ಕಾರ್ಯಕ್ರಮದ ಅಂಗವಾಗಿ ಮಾದಕ ವ್ಯಸನದ ವಿರುದ್ಧ ಜನ ಜಾಗೃತಿ ,2025/26 ನೇ ಸಾಲಿನ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಪಡೆದ ವಿಧ್ಯಾರ್ಥಿ ಗಳಿಗೆ ಬದ್ರಿಯಾ ವೆಲ್ಫೇರ್ ಸ್ಕಾಲರ್ ಶಿಪ್ ವಿತರಣೆ,ಸಂಘಟನೆಯ ಲ್ಲಿ ಸೇವೆಗೈದ ಹಾಗೂ ಊರಿನ ಹಿರಿಯ 40 ವ್ಯಕ್ತಿಗಳಿಗೆ ಸನ್ಮಾನ ಕಾರ್ಯಕ್ರಮ ಶಾಲಾ ಕ್ರೀಡಾಕೂಟದಲ್ಲಿ ವಿಜಗಳಿಸಿದ ವಿಧ್ಯಾರ್ಥಿ ಗಳಿಗೆ ಬಹುಮಾನ ವಿತರಣೆ ಮುಂತಾದ ಕಾರ್ಯಕ್ರಮಗಳು ನಡೆಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ,
ಮಂಗಳೂರು ಕರಾವಳಿಯಲ್ಲಿ ಅರಬ್ಬಿ ಸಮುದ್ರದಲ್ಲಿ ವಿಶಿಷ್ಟ ಪ್ರಭೇದದ ಅಪರೂಪದ ಕ್ಯಾಟ್ ಶಾರ್ಕ್ಮೀನನ್ನು ಮೀನುಗಾರರ ಬಲೆಗೆ ಬಿದ್ದ ಮೀನನ್ನು ಸಮುದ್ರಕ್ಕೆ ಬಿಟ್ಟಿದ್ದಾರೆ. ಈ ವೀಡಿಯೊ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಆಳ ಸಮುದ್ರದ ನಿಯಮಿತ ಮೀನುಗಾರಿಕೆ ಕಾರ್ಯಾಚರಣೆಗಳ ಸಮಯದಲ್ಲಿ, ಅಸಾಮಾನ್ಯ ಮತ್ತು ದೊಡ್ಡ ಮೀನುಗಳು ಬಲೆಗಳಲ್ಲಿ ಸಿಕ್ಕಿಹಾಕಿಕೊಂಡಿರುವುದು ಅಚ್ಚರಿ ಮೂಡಿಸಿದೆ.ಅದನ್ನು ಅಪರೂಪದ ಜಾತಿ ಎಂದು ಗುರುತಿಸಲಾಗಿದ್ದು, . ಅದನ್ನು ಕೊಲ್ಲುವ ಅಥವಾ ಮಾರಾಟ ಮಾಡುವ ಬದಲು, ಮೀನನ್ನು ಬಲೆಯಿಂದ ಎಚ್ಚರಿಕೆಯಿಂದ ಹೊರತೆಗೆದು, ಕ್ರೇನ್ ಬಳಸಿ, ನಿಧಾನವಾಗಿ ಸಮುದ್ರಕ್ಕೆ ಬಿಟ್ಟರು.ಮೀನು ಸುರಕ್ಷಿತವಾಗಿ ಈಜಿಕೊಂಡು ಹೋದ ಕ್ಷಣವನ್ನು ಆನ್ಲೈನ್ನಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದ್ದು, ಕುತೂಹಲ ಮತ್ತು ಮೆಚ್ಚುಗೆಯನ್ನು ಗಳಿಸಿದೆ.ಮಂಗಳೂರಿನ ಮೀನುಗಾರ ಸಮುದಾಯದ ಮುಖಂಡರು ಈ ಘಟನೆ ಮಂಗಳೂರು ಜೆಟ್ಟಿಯಲ್ಲಿಯೇ ನಡೆದಿರುವುದಲ್ಲ. ತಮಿಳುನಾಡಿನ ಮೀನುಗಾರರು ಸಮುದ್ರದಲ್ಲಿ ಮೀನುಗಾರಿಕೆ ನಡೆಸುವ ವೇಳೆ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.ಈ ಕ್ಯಾಟ್ ಶಾರ್ಕ್ ಅಪರೂಪದ ಪ್ರಭೇದವೆಂದು ಪರಿಗಣಿಸಲಾಗುತ್ತದೆ. ಮತ್ತು ಇದನ್ನು ಯಾರು ತಿನ್ನುವುದಿಲ್ಲ, ವೈರಲ್ ಪೋಸ್ಟ್ಗಳು ಮೀನಿನ ತೂಕ ಸುಮಾರು…

