ಕರಾವಳಿ ಭಾಗದೆಲ್ಲೆಡೆ ಮುಸ್ಲಿಂ ಬಾಂಧವರು ಪವಿತ್ರ ‘ಈದುಲ್ ಫಿತ್ರ್’ ಹಬ್ಬವನ್ನು ಸಂಭ್ರಮ ಹಾಗೂ ಭಕ್ತಿಭಾವದಿಂದ ಆಚರಿಸಿದರು. ಒಂದು ತಿಂಗಳ ರಮಝಾನ್ ಉಪವಾಸದ ನಂತರ ಬಂದ ಈ ಹಬ್ಬದ ಪ್ರಯುಕ್ತ ಮಸೀದಿಗಳಲ್ಲಿ ಬೆಳಗ್ಗಿನ ಜಾವವೇ ವಿಶೇಷ ನಮಾಝ್ ನೆರವೇರಿಸಲಾಯಿತು. ಮಂಗಳೂರು, ಉಳ್ಳಾಲ, ಬಂಟ್ವಾಳ, ಪುತ್ತೂರು ಸೇರಿದಂತೆ ಕರಾವಳಿಯ ವಿವಿಧ ಭಾಗಗಳ ಮಸೀದಿಗಳಲ್ಲಿ ಸಾವಿರಾರು ಭಕ್ತರು ಈದ್ ನಮಾಝ್ ಸಲ್ಲಿಸಿ, ದೇಶದ ಶಾಂತಿ, ಸೌಹಾರ್ದತೆ ಮತ್ತು ಸಮೃದ್ಧಿಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಧಾರ್ಮಿಕ ಗುರುಗಳು ಕುತುಬಾ ಬಾಷಣದಲ್ಲಿ ಮಾನವೀಯತೆ, ಸಹೋದರತ್ವ ಮತ್ತು ಪರಸ್ಪರ ಪ್ರೀತಿ-ವಿಶ್ವಾಸದ ಮಹತ್ವವನ್ನು ಸಾರಿದರು. ನಮಾಝ್ ಬಳಿಕ ಪರಸ್ಪರ ಅಪ್ಪಿಕೊಂಡು “ಈದ್ ಮುಬಾರಕ್” ಎಂದು ಶುಭಾಶಯ ವಿನಿಮಯ ಮಾಡಿಕೊಳ್ಳುವ ದೃಶ್ಯ ಎಲ್ಲೆಡೆ ಕಂಡುಬಂತು. ಮನೆಗಳಲ್ಲಿ ವಿಶೇಷ ಸಿಹಿ ತಿಂಡಿಗಳು, ಶೀರ್ ಖುರ್ಮಾ, ಬಿರಿಯಾನಿ ಸೇರಿದಂತೆ ವಿವಿಧ ಆಹಾರಗಳನ್ನು ತಯಾರಿಸಿ ಆತ್ಮೀಯರು ಹಾಗೂ ಬಂಧುಬಳಗದೊಂದಿಗೆ ಹಬ್ಬವನ್ನು ಆಚರಿಸಲಾಯಿತು. ಹಬ್ಬದ ಪ್ರಯುಕ್ತ ಬಡವರಿಗೆ ಜಕಾತ್ ಹಾಗೂ ಫಿತ್ರಾ ನೀಡುವ ಮೂಲಕ ಸಹಾಯ ಮಾಡುವ ಪರಂಪರೆ…
Author: UllalaVani
ನವದೆಹಲಿ, ಮಾ.20: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಒಂದು ಮುದ್ದಾದ ವಿಡಿಯೋ ಇದೀಗ ನೆಟ್ಟಿಗರ ಮನಸೂರೆಗೊಂಡಿದೆ. ಪುಟಾಣಿ ಮಕ್ಕಳು ಏನು ಮಾಡಿದರೂ ನೋಡಲು ಚೆಂದವೇ ಸರಿ, ಆದರೆ ಅವರ ತೊದಲು ಮಾತುಗಳು ಮತ್ತು ಮುಗ್ಧತನ ಎಲ್ಲರನ್ನೂ ಹೆಚ್ಚು ಆಕರ್ಷಿಸುತ್ತದೆ. ವೈರಲ್ ಆಗಿರುವ ಈ ವಿಡಿಯೋದಲ್ಲಿ, ಒಂದು ಪುಟ್ಟ ಮಗು ಅಮ್ಮ ಬೈದ ಕಾರಣ ಬೇಸರಗೊಂಡು ದೇವರ ಮುಂದೆ ಹೋಗಿ ಅಳುತ್ತಾ ದೂರು ಹೇಳುತ್ತಿರುವುದು ಕಾಣಿಸುತ್ತದೆ. ಅಮ್ಮನತ್ತ ಕೈ ತೋರಿಸಿ ತನ್ನ ನೋವನ್ನು ದೇವರಿಗೆ ಹೇಳಿಕೊಳ್ಳುವ ಈ ದೃಶ್ಯ ತುಂಬಾ ಮನಮೋಹಕವಾಗಿದೆ. ಸಾಮಾನ್ಯವಾಗಿ ಮಕ್ಕಳು ಅಮ್ಮ ಬೈದರೆ ಅಪ್ಪನ ಬಳಿ ದೂರು ಹೇಳುತ್ತಾರೆ. ಆದರೆ ಈ ಪುಟಾಣಿ ಮಾತ್ರ ವಿಭಿನ್ನವಾಗಿ ದೇವರನ್ನೇ ತನ್ನ ನ್ಯಾಯಾಧೀಶನನ್ನಾಗಿ ಮಾಡಿಕೊಂಡಿರುವುದು ನೆಟ್ಟಿಗರ ಮುಖದಲ್ಲಿ ನಗು ಮೂಡಿಸಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಸಾವಿರಾರು ವೀಕ್ಷಣೆಗಳನ್ನು ಪಡೆದುಕೊಂಡಿದೆ.“ಈ ದೂರು ಕೇಳಿ ದೇವ್ರೇ ನಕ್ಕಿರಬಹುದು” ಎಂದು ಒಬ್ಬರು ಕಾಮೆಂಟ್ ಮಾಡಿದರೆ, “ಮುಗ್ಧತೆ ಅಂದ್ರೆ ಇದೇ” ಎಂದು ಇನ್ನೊಬ್ಬರು…
ಮಂಗಳೂರು, ಮಾ. 20 ; ಕುದ್ರೋಳಿ ಕಂಡತ್ಪಳ್ಳಿ ಎಂಬಲ್ಲಿ ಗ್ಯಾಸ್ ಹಂಡೆಯಿಂದ ಇನ್ನೊಂದು ಗ್ಯಾಸ್ ಹಂಡೆಗೆ ಅಕ್ರಮವಾಗಿ ಗ್ಯಾಸ್ ಮರುಪೂರಣ ಮಾಡುತ್ತಿದ್ದ ಆರೋಪದ ಮೇರೆಗೆ ಇಬ್ಬರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ. ದಿನೇಶ್ ಸಾಲಿಯಾನ್ ಮತ್ತು ಸುನೀಲ್ ನಾಯಕ್ ಬಂಧಿತ ಆರೋಪಿಗಳಾಗಿದ್ದಾರೆ. ಮಾ.17ರಂದು ಮಧ್ಯಾಹ್ನ 1:30ಕ್ಕೆ ನಗರದ ನ್ಯೂಚಿತ್ರಾ ಜಂಕ್ಷನ್ ಬಸವನಗುಡಿ ಲಕ್ಷ್ಮೀನಾರಾಯಣ ಟೆಂಪಲ್ ಕಡೆಯಿಂದ ಕಂಡತ್ಪಳ್ಳಿ ಕಡೆಗೆ ಹೋಗುವ ರಸ್ತೆಯಲ್ಲಿರುವ ಗ್ಯಾಸ್ ಪಾಯಿಂಟ್ ವೊಂದರ ಪಕ್ಕದಲ್ಲಿರುವ ಗೋದಾಮಿನಲ್ಲಿ ಈ ಇಬ್ಬರು ಆರೋಪಿಗಳು ಅಕ್ರಮವಾಗಿ ಗ್ಯಾಸ್ ಸಿಲೆಂಡರ್ಗಳನ್ನು ಸಂಗ್ರಹಿಸಿ ದೊಡ್ಡ ಹಂಡೆಯಿಂದ ಸಣ್ಣ ಹಂಡೆಗೆ ಮರುಪೂರಣ ಮಾಡುತ್ತಿದ್ದರು ಎಂದು ಪ್ರಕರಣ ದಾಖಲಿಸಿರುವ ಪೊಲೀಸರು ಮಾಹಿತಿ ನೀಡಿದ್ದಾರೆ. ಆರೋಪಿಗಳನ್ನು ಬಂಧಿಸಿ ಸೊತ್ತುಗಳನ್ನು ವಶಪಡಿಸಲಾಗಿದೆ. ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ ತಾಲ್ಲೂಕಿನ ಇರಾ ಗ್ರಾಮದ ಬಾಳೆಪುಣಿ ಬದ್ರಿಯಾ ಜುಮಾ ಮಸೀದಿಯಲ್ಲಿ ಈದ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಈದ್ ನಮಾಝ್ ಬಳಿಕ ಮಸೀದಿಯ ಗುರುಗಳು ಕುತುಬಾ ಬಾಷಣದಲ್ಲಿ ನಾಡಿನ ಸರ್ವ ಜನಾಂಗದ ಶಾಂತಿ, ಸೌಹಾರ್ದತೆ ಮತ್ತು ಸಹಬಾಳ್ವೆಗಾಗಿ ದುಆ ಮಾಡಿದರು. ಈ ಸಂದರ್ಭದಲ್ಲಿ ಪರಸ್ಪರ ಪ್ರೀತಿ-ವಿಶ್ವಾಸದಿಂದ ಬದುಕಬೇಕು, ಸಮಾಜದಲ್ಲಿ ಐಕ್ಯತೆ ಬೆಳೆಸಬೇಕು ಎಂಬ ಸಂದೇಶವನ್ನು ನೀಡಲಾಯಿತು. ನಮಾಝ್ ಬಳಿಕ ಭಕ್ತರು ಪರಸ್ಪರ ಈದ್ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.
ಕೋಟೆಕಾರ್: ಅಲ್ ಹಿದಾಯ ಜುಮಾ ಮಸ್ಜಿದ್, ಕರ್ನಾಟಕ ಮುಸ್ಲಿಂ ಜಮಾತ್, ಎಸ್ ವೈ ಎಸ್ ಹಾಗೂ ಎಸ್ಸೆಸ್ಸಫ್ ಸಂಘಟನೆಗಳ ವತಿಯಿಂದ ಮಸೀದಿ ವಠಾರದಲ್ಲಿ ಇಫ್ತಾರ್ ಕೂಟ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮಸೀದಿ ಖತೀಬ್ ಅಬ್ದುಲ್ ಅಝೀಝ್ ಸಅದಿ ಅಲ್ ಅಫ್ಳಲಿ ಅವರು ದುವಾ ನೆರವೇರಿಸಿದರು. ಕೆ ಎಮ್ ಜೆ ಅಧ್ಯಕ್ಷ ಅಬ್ದುಲ್ ಕರೀಂ, ಎಸ್ ವೈ ಎಸ್ ಅಧ್ಯಕ್ಷ ಸಬೀರ್ ಅಶ್ ಅರಿ, ಎಸ್ಸೆಸ್ಸಫ್ ಅಧ್ಯಕ್ಷ ಸದಕತುಲ್ಲಾ, ಮಸೀದಿ ಉಪಾಧ್ಯಕ್ಷ ಕೆ ಎಮ್ ಅಬ್ದುಲ್ ಕಾದರ್ ಉಪಸ್ಥಿತರಿದ್ದರು. ಸುನ್ನೀ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಊರಿನ ನಾಗರಿಕರು ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಮಸೀದಿ ಕಾರ್ಯದರ್ಶಿ ಸಿದ್ದೀಕ್ ಟಿ.ಎಚ್ ಕಾರ್ಯಕ್ರಮವನ್ನು ನಿರೂಪಿಸಿದರು.
ಮಂಗಳೂರು: ಸಿರಿ ತೋಟಗಾರಿಕೆ ಸಂಘ (ರಿ.) ಮಂಗಳೂರು ಆಶ್ರಯದಲ್ಲಿ, ತೋಟಗಾರಿಕೆ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಇವರ ಸಂಪೂರ್ಣ ಸಹಕಾರದೊಂದಿಗೆ ಉಚಿತ ಕೈತೋಟ ಹಾಗೂ ತಾರಸಿ ತೋಟ ತರಬೇತಿ, ಜೊತೆಗೆ ತರಕಾರಿ ಬೀಜ ಮತ್ತು ಸಸಿ ವಿತರಣೆ ಕಾರ್ಯಕ್ರಮ ಮಾರ್ಚ್ 22 ರಂದು ನಡೆಯಲಿದೆ. ಈ ಕಾರ್ಯಕ್ರಮವು ತೊಕ್ಕೊಟ್ಟುವಿನ ಸ್ವಾಮಿ ಕೊರಗಜ್ಜ ಶಿವಾಜಿ ಸೇವಾ ಸಮಿತಿ ಸಭಾಂಗಣದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿಧಾನಸಭೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ಘನ ಉಪಸ್ಥಿತಿ ವಹಿಸಲಿದ್ದು, ವಿಧಾನ ಪರಿಷತ್ ಸದಸ್ಯರಾದ ಐವನ್ ಡಿ’ಸೋಜ ಅವರು ಭಾಗವಹಿಸಲಿದ್ದಾರೆ. ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಕಾರ್ಯನಿರ್ವಾಹಕ ಅಧಿಕಾರಿ ನರ್ವಡೆ ವಿನಾಯಕ್ ಕಾರ್ಭಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಸಿರಿ ತೋಟಗಾರಿಕೆ ಸಂಘದ ಉಪಾಧ್ಯಕ್ಷರಾದ ಡಾ. ಭಾರತಿ ನಿರ್ಮಲ ಅವರು ದೀಪ ಪ್ರಜ್ವಲನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಐ.ಕೆ. ದೊಡ್ಡಮನಿ,ಜನ ಶಿಕ್ಷಣ ಟ್ರಸ್ಟ್ ಮುಡಿಪುವಿನ ಶೀನ ಶೆಟ್ಟಿ,…
ಉಳ್ಳಾಲ: ನಮ್ಮ ಧರ್ಮವನ್ನು ಅಚ್ಚುಕಟ್ಟಾಗಿ ಆಚರಿಸಿ, ಇನ್ನೊಂದು ಧರ್ಮದ ಸಂಸ್ಕೃತಿಯನ್ನು ಅರಿತು ಬದುಕಿದಾಗ ಸೌಹಾರ್ದ ಸಮಾಜ ಹಾಗು ಬಲಿಷ್ಠ ಭಾರತ ನಿರ್ಮಾಣ ಸಾಧ್ಯ. ಯಾವುದೇ ಧರ್ಮದ ಸಂದೇಶ ಮನಸ್ಸಿನ ಗಾಯ ಗುಣಪಡಿಸುವ ಔಷಧವಾಗಿರಬೇಕು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಹೇಳಿದರು. ಇವರು ಉಳ್ಳಾಲ ಸೆಂಟ್ರಲ್ ಕಮಿಟಿ ವತಿಯಿಂದ ಮಾಸ್ತಿಕಟ್ಟೆಯಲ್ಲಿ ನಡೆದ ಬೃಹತ್ ಸೌಹಾರ್ದ ಇಫ್ತಾರ್ ಕೂಟದಲ್ಲಿ ಮಾತನಾಡಿದರು. ಯುನಿವೆಫ್ ಕರ್ನಾಟಕ ಸ್ಥಾಪಕಾಧ್ಯಕ್ಷರ ರಫೀವುದ್ದೀನ್ ಕುದ್ರೋಳಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಘಟನಾ ಸ್ಪೂರ್ತಿ ಪ್ರಶಸ್ತಿ ಪುರಸ್ಕೃತ ಹಳೆಕೋಟೆ ಸಯ್ಯಿದ್ ಮದನಿ ಪ್ರೌಢಶಾಲಾ ಮುಖ್ಯಶಿಕ್ಷಕ ಕೆಎಂಕೆ ಮಂಜನಾಡಿ ಅವರನ್ನು ಸನ್ಮಾನಿಸಲಾಯಿತು. ಕೋಡಿಜಾಲ್ ರಿಫಾಯಿ ಜುಮಾ ಮಸೀದಿಯ ಖತೀಬ್ ಉವೈಸ್ ಮದನಿ ಅಲ್ಅಝ್ಹರಿ ತೋಕೆ ದುಆ ನೆರವೇರಿಸಿದರು. ಉಳ್ಳಾಲ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ನವಾಝ್ ಉಳ್ಳಾಲ್ ಅಧ್ಯಕ್ಷತೆ ವಹಿಸಿದ್ದರು. ಎಸ್ಡಿಪಿಐ ರಾಷ್ಟಿçÃಯ ಪ್ರಧಾನ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ, ದೇರಳಕಟ್ಟೆ ವಿದ್ಯಾರತ್ನ ಶಿಕ್ಷಣ ಸಂಸ್ಥೆಯ ನಿರ್ದೇಶಕ ಅರ್ಜುನ್, ತೊಕ್ಕೊಟ್ಟು ರೀಚಲ್ ಸರ್ವಿಸಸ್ ಸ್ಥಾಪಕ ಸಿರಿಲ್ ಡಿ’ಸೋಜ, ಮೂಡ ಅಧ್ಯಕ್ಷ…
ಕಾಸರಗೋಡು: ಚುಟುಕು ಸಾಹಿತ್ಯವನ್ನು ಪುನಶ್ಚೇತನಗೊಳಿಸಿ ಚುಟುಕು ಕವಿ, ಕವಯತ್ರಿಯರು, ಸಾಹಿತಿಗಳಲ್ಲಿ ಹುದುಗಿರುವ ಸಾಹಿತ್ಯ ಪ್ರತಿಭೆಯನ್ನು ಪ್ರೋತ್ಸಾಹಿಸುವುದಕ್ಕಾಗಿ ಚುಟುಕು ಸಾಹಿತ್ಯ ಪರಿಷತ್ ಕೇಂದ್ರ ಸಮಿತಿ,ಮೈಸೂರು ಇದರ ಕೇರಳ ಗಡಿನಾಡ ಘಟಕವಾಗಿ 2000 ದಲ್ಲಿ ಅಸ್ತಿತ್ವಕ್ಕೆ ಬಂದ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಕಳೆದ 26 ವರ್ಷಗಳಿಂದ ರಚನಾತ್ಮಕವಾಗಿ ಚುಟುಕು ಸಾಹಿತ್ಯ ಮತ್ತು ಕನ್ನಡಪರ ಚಟುವಟಿಕೆಗಳನ್ನು ಹಮ್ಮಿಕೊಂಡಿರುತ್ತದೆ. 7 ಬಾರಿ ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ ಹಾಗೂ ಅಖಿಲ ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನವನ್ನು ಗಡಿನಾಡು ಕಾಸರಗೋಡಿನಲ್ಲಿ ಸಂಘಟಿಸಿ ಮಹತ್ತರವಾದ ಸಾಹಿತ್ಯ ಸಂಘಟನೆಯನ್ನು ಯಶಸ್ವಿಯಾಗಿ ಪೂರೈಸಿರುತ್ತದೆ.ಕಾಸರಗೋಡು ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಇದರ ಆಶ್ರಯದಲ್ಲಿ ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ. ),ಕನ್ನಡ ಗ್ರಾಮ, ಕಾಸರಗೋಡು ಇದರ ಸಹಯೋಗದಲ್ಲಿ ಕರ್ನಾಟಕ ಸರಕಾರ,ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಇದರ ಸಹಕಾರದಲ್ಲಿ ಕಾಸರಗೋಡು ಮೀಪುಗುರಿ ಪಾರೆಕಟ್ಟೆಯ ಕನ್ನಡ ಗ್ರಾಮದ ಕಾಸರಗೋಡು ಗೋ – ಕುಟೀರದಲ್ಲಿ 2026 ಮಾರ್ಚ್ 28 ಶನಿವಾರದಂದು ಅಪರಾಹ್ನ ಗಂಟೆ 2.30…
ಬೆಂಗಳೂರು, ಮಾ. 18 : ರಾಜ್ಯದಲ್ಲಿ ಎಲ್ಪಿಜಿ ಗ್ಯಾಸ್ ವಿತರಣೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಹೊಸ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಅಗತ್ಯ ಸೇವಾ ವಲಯಗಳಿಗೆ ಮೊದಲ ಆದ್ಯತೆ ನೀಡಲಾಗಿದ್ದು, ನಾಳೆಯಿಂದಲೇ ಈ ನಿಯಮಗಳು ಜಾರಿಯಾಗಲಿವೆ. ಸರ್ಕಾರ ಹೊರಡಿಸಿರುವ ಗೈಡ್ಲೈನ್ಸ್ ಪ್ರಕಾರ, ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಿಗೆ ಶೇ.100ರಷ್ಟು ಗ್ಯಾಸ್ ವಿತರಣೆ ಮಾಡಲು ಸೂಚಿಸಲಾಗಿದೆ. ಇನ್ನುಳಿದ ಪ್ರಮುಖ ವಲಯಗಳಿಗೂ ನಿರ್ದಿಷ್ಟ ಪ್ರಮಾಣದಲ್ಲಿ ಗ್ಯಾಸ್ ಹಂಚಿಕೆ ಮಾಡುವಂತೆ ಏಜೆನ್ಸಿ ಕಂಪನಿಗಳಿಗೆ ಸೂಚನೆ ನೀಡಲಾಗಿದೆ.ವಲಯವಾರು ಗ್ಯಾಸ್ ವಿತರಣೆಯ ಪ್ರಮಾಣ:ಆಸ್ಪತ್ರೆಗಳು – 100%ಶೈಕ್ಷಣಿಕ ಸಂಸ್ಥೆಗಳು – 100%ಸೀಡ್ ಪ್ರೊಸೆಸಿಂಗ್ ಘಟಕಗಳು – 70%ಆಯಿಲ್ ಉತ್ಪಾದನಾ ಕಂಪನಿಗಳು – 70%ಏರ್ಲೈನ್ಸ್ ಮತ್ತು ರೈಲ್ವೆ – 70%ವೃದ್ಧಾಶ್ರಮಗಳು – 70%ಇಂಡಸ್ಟ್ರಿಯಲ್ ಕ್ಯಾಂಟೀನ್ಗಳು – 10%ಕಾರ್ಪೋರೇಟ್ ಗೆಸ್ಟ್ ಹೌಸ್ಗಳು – 10%ಫುಡ್ ಪ್ರೊಸೆಸಿಂಗ್ ಕಂಪನಿಗಳು – 10%ಹೋಟೆಲ್ಗಳು – 10%ಸರ್ಕಾರವು ಅಗತ್ಯ ಸೇವೆಗಳ ನಿರಂತರ ಕಾರ್ಯಾಚರಣೆಗೆ ಆದ್ಯತೆ ನೀಡಿರುವುದಾಗಿ ತಿಳಿಸಿದೆ. ಅದರಂತೆ, ಆಸ್ಪತ್ರೆಗಳು ಮತ್ತು ಶಿಕ್ಷಣ ಸಂಸ್ಥೆಗಳ ಕಾರ್ಯಾಚರಣೆಗೆ ಯಾವುದೇ ವ್ಯತ್ಯಯ ಉಂಟಾಗದಂತೆ…
ಮಂಗಳೂರು, ಮಾ. 18 : ನಗರದ ಹೊರವಲಯದ ಪಡುಶೆಡ್ಡೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಾವೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಮರಕಡ ಕುಂಜತ್ತಬೈಲು ನಿವಾಸಿ ಪ್ರತೀಕ್ (32) ಮತ್ತು ಯೆಯ್ಯಾಡಿ ದಂಡಕೇರಿ ನಿವಾಸಿ ವೀಕ್ಷಿತ್ (21) ಬಂಧಿತ ಆರೋಪಿಗಳು. ಕಾವೂರು ಪೊಲೀಸರು ಗಸ್ತಿನಲ್ಲಿದ್ದ ವೇಳೆ ಪಡುಶೆಡ್ಡೆ ಬಳಿ ಸಾರ್ವಜನಿಕ ಸ್ಥಳದಲ್ಲಿ ಕಾರು ನಿಲ್ಲಿಸಿ ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದಇಬ್ಬರನ್ನು ವಿಚಾರಣೆ ಒಳಪಡಿಸಿದ್ದಾರೆ. ಈ ವೇಳೆ ಅವರು ಎಂಡಿಎಂಎ ಮಾರಾಟ ಮಾಡಲು ಗ್ರಾಹಕರಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ. ತಪಾಸಣೆ ನಡೆಸಿದಾಗ ಪ್ರತೀಕ್ ಬಳಿ ಸುಮಾರು 30 ಸಾವಿರ ರೂ. ಮೌಲ್ಯದ 2.29 ಗ್ರಾಂ ತೂಕದ ಎಂಡಿಎಂಎ ಮತ್ತು ವೀಕ್ಷಿತ್ ಬಳಿ 40 ಸಾವಿರ ರೂ. ಮೌಲ್ಯದ 4.03 ಗ್ರಾಂ ತೂಕದ ಎಂಡಿಎಂಎ ಪತ್ತೆಯಾಗಿದೆ. ಜತೆಗೆ 20 ಸಾವಿರ ರೂ. ಮೌಲ್ಯದ 2 ಮೊಬೈಲ್ ಫೋನ್, 5 ಲಕ್ಷ ರೂ. ಮೌಲ್ಯದ ಕಾರು, 350 ರೂ. ಮೌಲ್ಯದ ಡಿಜಿಟಲ್…

