Author: UllalaVani

Kannada News From Coastal Karnataka

ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಅವರ ಆದೇಶದಂತೆ ಮೂಡಬಿದ್ರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಅವರನ್ನು ಅಮಾನತು ಮಾಡಲಾಗಿದೆ. ಮಹಿಳೆಯರೊಂದಿಗೆ ಅನರ್ಹ ವರ್ತನೆ ತೋರಿದ ಆರೋಪದ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.ಎಸಿಪಿ ಸಲ್ಲಿಸಿದ ವರದಿಯ ಪ್ರಕಾರ ತನಿಖೆಯಲ್ಲಿ ಹಲವು ವಿಷಯಗಳು ಬೆಳಕಿಗೆ ಬಂದಿವೆ.ಸುಮತಿ ನಾಯಕ್ ಅವರು ಇನ್ಸ್‌ಪೆಕ್ಟರ್ ವಿರುದ್ಧ ದೂರು ನೀಡುವುದರ ಜೊತೆಗೆ ಮಾಧ್ಯಮಕ್ಕೂ ಹೇಳಿಕೆ ನೀಡಿದ್ದರು. ಅವರ ಹಾಗೂ ಅವರ ಸಹೋದರಿಯ ನಡುವೆ ಕುಟುಂಬ ಸಂಬಂಧಿತ ಸಮಸ್ಯೆಗಳು ಇರುವುದಾಗಿ ತಿಳಿದುಬಂದಿದೆ. ಇಬ್ಬರ ವಿರುದ್ಧವೂ ತಲಾ ಎರಡು ಪ್ರಕರಣಗಳು ದಾಖಲಾಗಿವೆ. ಇವರ ದೂರು ಆಧರಿಸಿ ಇನ್ಸ್‌ಪೆಕ್ಟರ್ ವಿರುದ್ಧವೂ ಒಂದು ಪ್ರಕರಣ ದಾಖಲಾಗಿತ್ತು. ಒಂದು ಪ್ರಕರಣ ತನಿಖೆಯಲ್ಲಿದ್ದು, ಉಳಿದವು ಹೈಕೋರ್ಟ್‌ನಲ್ಲಿ ಸ್ಥಗಿತಗೊಂಡಿದ್ದು ನ್ಯಾಯಾಲಯದಲ್ಲಿ ವಿಚಾರಣೆಗೆ ಬಾಕಿಯಿದೆ.ಇನ್ಸ್‌ಪೆಕ್ಟರ್ ವಿರುದ್ಧ ಮಾಧ್ಯಮಕ್ಕೆ ಹೇಳಿಕೆ ನೀಡಿದ ಇನ್ನೊಬ್ಬ ಮಹಿಳೆ ಅವಿತಾ ಮಿನಾಗೆಸ್. ಅವರ ಪತಿಯ ವಿರುದ್ಧ ನಾಲ್ಕು ಪ್ರಕರಣಗಳು ದಾಖಲಾಗಿದ್ದು, ಅವುಗಳಲ್ಲಿ ಒಂದರಲ್ಲಿ ಅವರು ಬಿಡುಗಡೆಗೊಂಡಿದ್ದಾರೆ. ಒಂದು ಪ್ರಕರಣದಲ್ಲಿ ಬಡ ವ್ಯಕ್ತಿಯ ಮೂತ್ರಪಿಂಡ ಚಿಕಿತ್ಸೆಗೆ ಸಂಗ್ರಹಿಸಿದ…

Read More

ಮಂಗಳೂರು : ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಉಪನಿರ್ದೇಶಕರ ಕಚೇರಿಯ ಮೇಲ್ವಿಚಾರಣೆಯನ್ನು ಜಿಪಂ ಸಿಇಒ ಅವರಿಗೆ ವಹಿಸುವ ಸರಕಾರದ ಪ್ರಸ್ತಾವಿತ ಯೋಜನೆಯನ್ನು ತಕ್ಷಣ ಹಿಂದಕ್ಕೆ ಪಡೆಯಬೇಕು. ಇಲ್ಲದಿದ್ದರೆ ಮಾ.20ರಿಂದ ನಡೆಯಲಿರುವ ದ್ವಿತೀಯ ಪಿಯು ಮೌಲ್ಯಮಾಪನವನ್ನು ಬಹಿಷ್ಕರಿಸಿ ಮಂಗಳೂರು ಮಿನಿ ವಿಧಾನ ಸೌಧದ ಮುಂದೆ ಪ್ರತಿಭಟನೆ ನಡೆಸುವ ಬಗ್ಗೆ ದ.ಕ. ಜಿಲ್ಲೆಯ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರ ವಿವಿಧ ಸಂಘಗಳು ಸೋಮವಾರ ತೀರ್ಮಾನ ಕೈಗೊಂಡಿದೆ. ನಗರದ ರೆಡ್‌ಕ್ರಾಸ್ ಸಭಾಭವನದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ದ.ಕ. ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರ ಸಂಘದ ಅಧ್ಯಕ್ಷ ಡಾ.ನವೀನ್ ಶೆಟ್ಟಿ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಪಿಯು ವಿಭಾಗದ ಮೇಲೆ ಜಿಪಂ ಸಿಇಒ ಅವರು ಮೇಲ್ವಿಚಾರಣೆ ನಡೆಸುವ ಸಂಭವ ಎದುರಾಗಿದೆ. ಇದು ಎಲ್ಲಾ ಜಿಲ್ಲೆಗಳಿಗೂ ವಿಸ್ತರಣೆಗೊಂಡರೆ ಪದವಿಪೂರ್ವ ಶಿಕ್ಷಣದ ಅಸ್ತಿತ್ವವೇ ಕಳೆದುಹೋಗಲಿದೆ. ಇದರ ವಿರುದ್ದ ಸರಕಾರಿ ಅನುದಾನಿತ ಉಪನ್ಯಾಸಕರ ಜತೆಗೆ ಅನುದಾನರಹಿತ ವಿಭಾಗದ ಎಲ್ಲಾ ಶಿಕ್ಷಕರು ಕೂಡ ಒಗ್ಗಟ್ಟಾಗಿ ಹೋರಾಟ ನಡೆಸಬೇಕಿದೆ. ಹೀಗಾಗಿ ಮೌಲ್ಯಮಾಪನ ಬಹಿಷ್ಕರಿಸಲು…

Read More

ಉಳ್ಳಾಲ: ತಾಲೂಕಿನ ಕಾಪಿಕ್ಕಾಡ್‌ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಉಮಾಮಹೇಶ್ವರಿ ಕಬಡ್ಡಿ ಅಕಾಡೆಮಿ (ರಿ.) ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಕಬಡ್ಡಿ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಏಪ್ರಿಲ್ 5ರಿಂದ ಪ್ರಾರಂಭವಾಗುವ ಈ ಶಿಬಿರವು ಪ್ರತಿದಿನ ಸಂಜೆ 4.30ರಿಂದ 6 ಗಂಟೆಯವರೆಗೆ ನಡೆಯಲಿದೆ. ಮಕ್ಕಳಲ್ಲಿ ಮಾನಸಿಕ ಹಾಗೂ ದೈಹಿಕ ಸಾಮರ್ಥ್ಯವನ್ನು ವೃದ್ಧಿಸುವುದರ ಜೊತೆಗೆ ಕ್ರೀಡಾ ಚಟುವಟಿಕೆಗಳತ್ತ ಆಸಕ್ತಿ ಬೆಳೆಸುವ ಉದ್ದೇಶದಿಂದ ಶಿಬಿರವನ್ನು ಆಯೋಜಿಸಲಾಗಿದೆ ಎಂದು ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಯುವ ಪ್ರತಿಭೆಗಳು ವಿದ್ಯಾಭ್ಯಾಸದ ಜೊತೆಗೆ ಕ್ರೀಡೆಯಲ್ಲೂ ಮುಂದುವರೆಯಲು ಅಗತ್ಯವಾದ ತರಬೇತಿಯನ್ನು ನೀಡಲಾಗುತ್ತದೆ. ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳ ಪೋಷಕರು ತರಬೇತಿ ಆರಂಭಕ್ಕೂ ಮೊದಲು ಹೆಸರು ನೋಂದಾಯಿಸಬೇಕು ಎಂದು ಸಂಘಟಕರು ಮನವಿ ಮಾಡಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9035578198 ಸಂಖ್ಯೆಯನ್ನು ಸಂಪರ್ಕಿಸಬಹುದು.

Read More

ಸೋಮೇಶ್ವರ : ಇಲ್ಲಿನ ಮಣ್ಣಲ್ಲಿ ಸಣ್ಣ ಗುಡಿಯೊಂದು ಕೆಲವೇ ವರುಷಗಳಲ್ಲಿ ಪವಾಡ ಸದೃಶವಾಗಿ ಬೆಳೆದು ನಿಂತದನ್ನ ಕಂಡಾಗ ನಿಜಕ್ಕೂ ದಿಗ್ಭ್ರಮೆಯಾಗುತ್ತದೆ.ಭಕ್ತಿ ಶ್ರದ್ಧೆಯ ಆರಾಧನೆ ಮತ್ತು ದಾನ,ಧರ್ಮಗಳ ಆಧಾರದಡಿ ಯಾವುದೇ ಕ್ಷೇತ್ರಗಳ ಶಕ್ತಿ ಬೆಳಗುತ್ತದೆ.ರಕ್ತೇಶ್ವರಿ ಕ್ಷೇತ್ರದ ಅಭಿವೃದ್ಧಿ ಕಾರ್ಯದ ಜೊತೆ ಕಳೆದ ಇಪ್ಪತ್ತೈದು ವರುಷಗಳಲ್ಲಿ ಸಾವಿರಾರು ಜನರಿಗೆ ಉಪಯುಕ್ತಕಾರಿ ಸಾರ್ಥಕ ಕಾರ್ಯಗಳನ್ನ ಮಾಡಿರುವ ಸೋಮೇಶ್ವರದ ರಕ್ತೇಶ್ವರಿ ಬಳಗದವರ ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಮಾದರಿಯಾಗಿದೆಯೆಂದು ನಿವೃತ್ತ ಶಿಕ್ಷಕರಾದ ಕೆ.ಆರ್.ಚಂದ್ರ ಅಭಿಪ್ರಾಯಪಟ್ಟರು. ಸೋಮೇಶ್ವರದ ರಕ್ತೇಶ್ವರಿ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ನಡೆದ ರಕ್ತೇಶ್ವರೀ ಬಳಗದ 26ನೇ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಸೋಮೇಶ್ವರ ರಕ್ತೇಶ್ವರಿ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿದ ಹಿರಿಯ ಪತ್ರಕರ್ತರಾದ ವಿದ್ಯಾಧರ ಶೆಟ್ಟಿ,ಭಜಕರಾದ ನಾಗೇಶ್ ಗಟ್ಟಿ ಕೊಲ್ಯ,ಪ್ರಮುಖರಾದ ಸಂದೀಪ್ ಶೆಣೈ,ರಘುರಾಮ ಸುವರ್ಣ ಅವರನ್ನ ವೇದಿಕೆಯಲ್ಲಿ ಅಭಿನಂದಿಸಲಾಯಿತು. ಸೋಮೇಶ್ವರ ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪುರುಷೋತ್ತಮ ಗಟ್ಟಿ ಪರ್ಯತ್ತೂರು ಅಧ್ಯಕ್ಷತೆ ವಹಿಸಿದ್ದರು.ಹೇಮಲತಾ ಆರ್.ಶೆಟ್ಟಿ,ರಕ್ತೇಶ್ವರಿ ಕ್ಷೇತ್ರದ ಅಧ್ಯಕ್ಷರಾದ ರಾಮದಾಸ್ ಸೋಮೇಶ್ವರ ಉಪಸ್ಥಿತರಿದ್ದರು. ರಕ್ತೇಶ್ವರಿ ಬಳಗದ ಅಧ್ಯಕ್ಷರಾದ…

Read More

ಕೊಣಾಜೆ; ಇಂದಿನ ಆಧುನಿಕತೆಯಲ್ಲೊ ಮಹಿಳೆಗೆ ಸಮಾಜದಲ್ಲಿ ಹಲವಾರು ಅವಕಾಶಗಳು ಇವೆಯಾದರೂ ಅವಳೆದುರು ಅನೇಕ ಸವಾಲುಗಳೂ‌ ಇವೆ. ಮಹಿಳೆಯು ಶಿಕ್ಷಣ,ಜ್ಞಾನ, ಕೌಶಲ್ಯ ಮೊದಲಾವುಗಳ ಮೂಲಕ ಸಮಾಜದ‌‌ ಧ್ವನಿಯಾಗಬೇಕು. ವರ್ತಮಾನ ಕಾಲದ‌ ಬದುಕಿನ ಸಂಗತಿಗಳನ್ನು ಬರವಣಿಗೆಯ ಮೂಲಕ ದಾಖಲಿಸುವ, ವಿಮರ್ಶಿಸುವ ಕಾರ್ಯ ಮಹಿಳೆಯರಿಂದ ಹೆಚ್ಚೆಚ್ಚು ಆಗಬೇಕು. ವೈಚಾರಿಕತೆಯು ನಮ್ಮ ಅಂಧಶ್ರದ್ಧೆಯನ್ನು ದೂರಮಾಡುತ್ತದೆ ಎಂದು ಬರಹಗಾರ್ತಿ, ಕವಿಯತ್ರಿ ಮಮತಾ ಅರಸಿಕೆರೆ ಅವರು ಹೇಳಿದರು. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಮಹಿಳಾ ಅಧ್ಯಯನ ಕೇಂದ್ರದ ವತಿಯಿಂದ ಸೋಮವಾರ ಮಂಗಳ ಸಭಾಂಗಣದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರುಶರಣರ‌ ಕಾಲದಲ್ಲಿ ಕೆಳ‌ಸಮುದಾಯದ ಮಹಿಳೆಯರಿಗೆ ವಚನಗಳು ಹೇಗೆ ಮಾಧ್ಯಮವಾಗಿತ್ತೋ ಹಾಗೆಯೇ ಇಂದಿನ ಆಧುನಿಕ ಕಾಲಘಟ್ಟದಲ್ಲಿ ಸಮಗ್ರ ಬೆಳವಣಿಗೆಗಾಗಿ ಸಾಮಾಜಿಕ ಜಾಲತಾಣವನ್ನು ದುರುಪಯೋಗ ಮಾಡದೆ ವಿವೇಚನಯುಕ್ತವಾಗಿ ಬಳಸಿಕೊಳ್ಳುವ ಚಾಕಚಕ್ಯತೆಯನ್ನು ಮಹಿಳೆ ಬೆಳೆಸಿಕೊಳ್ಳಬೇಕು ಎಂದರು. ಬೆಂಗಳೂರು ವಿವಿಯ ವಿಶ್ರಾಂತ ಪ್ರಾಧ್ಯಾಪಕಿ ಪ್ರೊ.ಸಮತಾ ದೇಶ್ಮನೆ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಇಂದಿನದ್ದು ಎಐ ಯುಗ, ಸಾಮಾಜಿಕ ಜಾಲತಾಣ ಸಕ್ರಿಯವಾಗಿದೆ. ತಂತ್ರಜ್ಞಾನದ…

Read More

ಕೊಣಾಜೆ: ಪ್ರೊ.ಜೋಗನ್ ಶಂಕರ್ ಅವರು ಸಮ ಸಮಾಜದ ನಿರ್ಮಾಣ ಹಾಗೂ ಸಮಾಜದ ನೈಜ ಅಭಿವೃದ್ಧಿಯ ಕನಸಿನೊಂದಿಗೆ ಸಮಾಜಕ್ಕೆ ಕೊಡುಗೆ‌ ನೀಡಿದ ಸಮಾಜಶಾಸ್ತ್ರಜ್ಞರಾಗಿದ್ದಾರೆ ಎಂದು ಬೆಂಗಳೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕರಾದ ಪ್ರೊ.ಸಮತಾ ದೇಶ್ಮನೆ ಅವರು ಹೇಳಿದರು. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸಮಾಜಶಾಸ್ತ್ರ ವಿಭಾಗದಲ್ಲಿ ಮಂಗಳವಾರ ನಡೆದ ಪ್ರೊ.ಜೋಗನ್ ಶಂಕರ್ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಸಮಾಜದಲ್ಲಿ ಗೌರವ ಪ್ರಾಪ್ತಿಯಾಗುವುದು ಶಿಕ್ಷಣದಿಂದ ಮಾತ್ರ ಎಂಬುದು ಅವರ ನಿಲುವುಗಿತ್ತು. ಸಮಾಜದ ಧನಾತ್ಮಕ ಚಿಂತಕರಾಗಿದ್ದ ಪ್ರೊ.ಜೋಗನ್ ಶಂಕರ್ ದೇವದಾಸಿ ಪದ್ದತಿಯ ಬಗ್ಗೆ ನಡೆಸಿದ ಹೋರಾಟ ಅವಿಸ್ಮರಣೀಯವಾದುದು. ದೇವದಾಸಿಯರ ಮಕ್ಕಳಿಗಾಗಿ ವಿಮೋಚನಾ ಶಾಲೆಯನ್ನು ತೆರದು ಶಿಕ್ಷಣ ‌ನೀಡಿದ ಮಹಾನ್ ವ್ಯಕ್ತಿತ್ಚ ಅವರದ್ದು. ಶಿಕ್ಷಣದಿಂದಾಗಿ ಅದೆಷ್ಟೋ ದಲಿತ ಮಹಿಳೆಯರು ಸಮಾಜದ ಮುನ್ನಲೆಗೆ ಬಂದಿದ್ದಾರೆ. ಇಂತಹ ಪ್ರಾಧ್ಯಾಪಕರ ಹೆಸರಿನಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮ ಅರ್ಥಪೂರ್ಣವಾದುದು ಎಂದರು.ಕಾರ್ಯಕ್ರಮದಲ್ಲಿ ಕಲಾ ನಿಕಾಯದ ಡೀನ್ ಪ್ರೊ.ಪರಿಣಿತ, ಇತಿಹಾಸ ವಿಭಾಗದ ಮುಖ್ಯಸ್ಥರಾದ ಡಾ.ತ್ರಿವೇಣಿ, ಪ್ರಾಧ್ಯಾಪಕರಾದ ಡಾ.ನರಸಿಂಹಯ್ಯ ಮೊದಲಾದವರು ಉಪಸ್ಥಿತರಿದ್ದರು. ವಿಭಾಗದ ಅಧ್ಯಕ್ಷರಾದ ಡಾ.ಗೋವಿಂದ ರಾಜು…

Read More

ಉಳ್ಳಾಲ:ಕೋಟೆಕಾರ್ ಹೆಲ್ಪ್ ಪ್ರೆಂಡ್ಸ್ ಹಿದಾಯತ್ ನಗರ ಇದರ ವತಿಯಿಂದ ಅಲ್ ಹಿದಾಯ ಜುಮಾ ಮಸ್ಜಿದ್ ಹಿದಾಯತ್ ನಗರ ಇದರ ವಠಾರದಲ್ಲಿ ಮಾ.16 ಇಫ್ತಾರ್ ಸಂಗಮ ಜರುಗಿತು. ಸಂಘದ ಅಧ್ಯಕ್ಷರೂ ಕಾರ್ಯದರ್ಶಿ ಸದಸ್ಯರು ಉಪಸ್ಥಿತರಿದ್ದರು. ಮಸೀದಿ ಖತೀಬ್ ಅಬ್ದುಲ್ ಅಝೀಝ್ ಸಅದಿ ಅಲ್ ಅಫ್ಳಲಿ ದುವಾ ಮಾಡಿದರು. ಕಾರ್ಯಕ್ರಮದಲ್ಲಿ ನೂರಾರು ಮಂದಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು ಎಂದು ಸಂಘದ ಪ್ರಕಟನೆಯಲ್ಲಿ ತಿಳಿಸಿದ್ದಾರೆ,

Read More

ಮೂಡುಬಿದಿರೆ; ಮೂಡುಬಿದಿರೆ ಪೊಲೀಸ್ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧದ ಸಾಮಾಜಿಕ ಜಾಲತಾಣ ಹಾಗೂ ಕೆಲವು ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ಆರೋಪಗಳ ಬಗ್ಗೆ ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದು, ಇನ್ಸ್ಪೆಕ್ಟರ್ ವಿರುದ್ಧ ನೀಡಲಾಗಿದೆ ಎಂದು ಹೇಳಲಾಗಿರುವ ದೂರಿನ ಕುರಿತು ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಎಸಿಪಿ ಉತ್ತರ ವಲಯಕ್ಕೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ. ಈವರೆಗೆ ಯಾವುದೇ ಮಹಿಳೆಯು ಇನ್ಸ್ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಕುರಿತು ಲಿಖಿತ ದೂರು ನೀಡಿಲ್ಲ ಎಂದು ಕಮಿಷನರ್ ಸ್ಪಷ್ಟಪಡಿಸಿದ್ದಾರೆ. ಸುಮತಿ ನಾಯಕ್ ಮತ್ತು ಅವರ ಸಹೋದರಿಯ ನಡುವೆ ನಡೆಯುತ್ತಿರುವ ಕುಟುಂಬ ವಿವಾದದ ಪ್ರಕರಣದಲ್ಲಿ, ಇನ್ಸ್ಪೆಕ್ಟರ್ ಅವರು ಎದುರುಪಕ್ಷಕ್ಕೆ ಅನುಕೂಲ ಮಾಡಿದ್ದಾರೆ ಎಂಬ ಆರೋಪ ಮಾತ್ರ ಕೇಳಿಬಂದಿದ್ದು, ಈ ಪ್ರಕರಣ ಈಗಾಗಲೇ ನ್ಯಾಯಾಲಯದಲ್ಲಿದೆ. ಈ ಪ್ರಕರಣದ ಸಂಬAಧ ಅಪ್ರಾಪ್ತ ಮಗುವನ್ನು ತಾಯಿಯ ವಶಕ್ಕೆ ಒಪ್ಪಿಸುವ ಕ್ರಮವನ್ನು ಇನ್ಸ್ಪೆಕ್ಟರ್ ಕೈಗೊಂಡಿದ್ದು, ಅದು ಕಾನೂನುಬದ್ಧ ಕ್ರಮವಾಗಿರುವುದರಿಂದ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ತಕ್ಷಣದ ಆಧಾರಗಳಿಲ್ಲ ಎಂದು…

Read More

ಕಾರವಾರ,ಮಾ. 16 : ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಎರಡು ವರ್ಷದ ಬಾಲಕಿಯನ್ನು ವ್ಯಕ್ತಿಯೋರ್ವ ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದ ಕಸ್ತೂರಬಾ ನಗರದಲ್ಲಿ ನಡೆದಿದೆ. ಭುವಿ (2) ಬಾವಿಗೆ ಬಿದ್ದು ಅದೃಷ್ಟವಶಾತ್ ಬದುಕುಳಿದ ಬಾಲಕಿಯಾಗಿದ್ದಾಳೆ. ಮನೆಯಲ್ಲಿ ಮಗು ಕಾಣದಿದ್ದಾಗ ಆತಂಕಗೊಂಡ ಅಜ್ಜಿ ಸುತ್ತಮುತ್ತ ಹುಡುಕಾಡಿದ್ದಾರೆ. ಬಾವಿಯ ಹತ್ತಿರ ಹೋದಾಗ ಮಗುವಿನ ಅಳುವಿನ ಶಬ್ದ ಕೇಳಿಬಂದಿದೆ. ಆತಂಕದೊಂದಿಗೆ ಬಾವಿಯೊಳಗೆ ಇಣುಕಿ ನೋಡಿದಾಗ, ಮಗು ನೀರಿಗೆ ಇಳಿಸಲಾಗಿದ್ದ ಪಂಪ್ ಪೈಪ್‌ನ್ನು ಗಟ್ಟಿಯಾಗಿ ಹಿಡಿದುಕೊಂಡು ಅಳುತ್ತಿರುವುದು ಕಂಡುಬಂದಿದೆ.ಈ ಸುದ್ದಿ ತಿಳಿಯುತ್ತಿದ್ದಂತೆಯೇ ಹತ್ತಿರದಲ್ಲೇ ವಾಸವಿರುವ ಪಯಾಜ್‌ ಚೌಟಿ ಎಂಬವರು ತಕ್ಷಣ ಸ್ಥಳಕ್ಕೆ ಧಾವಿಸಿ ಬಾವಿಗೆ ಹಗ್ಗದ ಸಹಾಯದಿಂದ ಇಳಿದು ರಕ್ಷಣೆ ಮಾಡಿದ್ದಾರೆ.

Read More

ಮೂಡುಬಿದಿರೆ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಸಂದೇಶ್ ಬಿ.ಜಿ. ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿವೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸುವಂತೆ ಕೋರಿ ಮೂವರು ಮಹಿಳೆಯರು ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳು, ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರು (ಡಿಜಿಪಿ), ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ರಾಜ್ಯ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ. ಎರಡು ವರ್ಷಗಳ ಹಿಂದೆ ಮಹಿಳೆಯೋರ್ವರ ಪತಿಯನ್ನು ಒಂದು ಪ್ರಕರಣದಲ್ಲಿ ಬಂಧಿಸಲಾಗಿತ್ತು. ನಿನ್ನ ಪತಿಯನ್ನು ಬಿಡುಗಡೆ ಮಾಡಬೇಕಾದರೆ ನೀನು ಲೈಂಗಿಕವಾಗಿ ಸಹಕರಿಸಬೇಕು ಎಂದು ಇನ್ಸ್‌ಪೆಕ್ಟರ್ ಪೀಡಿಸಿದ್ದರು. ಜೊತೆಗೆ 25 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಪತಿಯ ವಿರುದ್ಧ ‘ರೌಡಿ ಶೀಟ್’ ತೆರೆಯುವುದಾಗಿ ಬೆದರಿಕೆ ಹಾಕಿದ್ದರು ಎಂದು ಓರ್ವ ಮಹಿಳೆ ನೀಡಿರುವ ದೂರಿನಲ್ಲಿ ಉಲ್ಲೇಖಿಸಲಾಗಿದೆ.ಇನ್ಸ್‌ಪೆಕ್ಟರ್ ರಾತ್ರಿ ವೇಳೆ ಕಾಂಪೌಂಡ್ ಗೋಡೆ ಜಿಗಿದು ಮನೆಗೆ ನುಗ್ಗುತ್ತಿದ್ದರು, ಕೈ ಹಿಡಿದು ಎಳೆದಾಡುತ್ತಿದ್ದರು ಮತ್ತು ಬಲವಂತವಾಗಿ ಡ್ಯಾನ್ಸ್ ಮಾಡುವಂತೆ ಪೀಡಿಸುತ್ತಿದ್ದರು. ಈ ಹಿಂದೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿದ್ದಾಗಲೂ ಅವರು ಇದೇ ರೀತಿ ವರ್ತಿಸಿದ್ದರು. ಪಾಸ್‌ಪೋರ್ಟ್ ಪರಿಶೀಲನೆ ಮತ್ತು ಇತರ…

Read More