ಮಂಗಳೂರು: ನೇತ್ರಾವತಿ ಮತ್ತು ಫಲ್ಗುಣಿ ನದಿ ತೀರದ CRZ-I ಹಾಗೂ CRZ-II ಪ್ರದೇಶಗಳಲ್ಲಿ ನಡೆದಿರುವ ಕರಾವಳಿ ನಿಯಂತ್ರಣ ವಲಯ (CRZ) ಉಲ್ಲಂಘನೆ ಕುರಿತು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ (ರಿ.) ಕಾರ್ಯದರ್ಶಿಗಳು 21/11/2025 ರಂದು ಕೇಂದ್ರ ಸರ್ಕಾರಕ್ಕೆ ದೂರು ಸಲ್ಲಿಸಿದ್ದ ಹಿನ್ನೆಲೆ ಇದೀಗ ಪ್ರಕರಣಕ್ಕೆ ಮಹತ್ವದ ತಿರುವು ದೊರೆತಿದೆ. ಸಚಿವಾಲಯವು 30/09/2022 ರಂದು ಹೊರಡಿಸಿದ್ದ ಅಧಿಸೂಚನೆಯ ಮೂಲಕ, ಪರಿಸರ (ಸಂರಕ್ಷಣೆ) ಕಾಯ್ದೆ 1986ರ ಕಲಂ 5, 10 ಮತ್ತು 19ರಡಿ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಕರಾವಳಿ ವಲಯ ನಿರ್ವಹಣಾ ಪ್ರಾಧಿಕಾರಗಳಿಗೆ (CZMA) CRZ ಅಧಿಸೂಚನೆಯ ನಿಯಮಗಳನ್ನು ಜಾರಿಗೆ ತರುವುದು ಮತ್ತು ಅದರ ಅನುಸರಣೆ ಮೇಲ್ವಿಚಾರಣೆ ಮಾಡುವ ಅಧಿಕಾರವನ್ನು ಈಗಾಗಲೇ ನೀಡಲಾಗಿದೆ ಅದರೂ CRZ ಕಾನೂನನ್ನು ಉಲ್ಲಂಘಿಸಿದ ಘಟನೆ ಮಂಗಳೂರು ನಲ್ಲಿ ನಡೆದಿದೆ ಇದಕ್ಕೆ ಹೊಣೆ ಯಾರೂ ಎಂದು ಲಿಖಿತ ಪತ್ರದ ಮೂಲಕ ಎಂದು ರಾಷ್ಟ್ರೀಯ ಪರಿಸರ ಸಂರಕ್ಷಣಾ ಒಕ್ಕೂಟ ತನ್ನ ದೂರಿನಲ್ಲಿ ಉಲ್ಲೇಖಿಸಿತ್ತು. ಈ ಸಂಬಂಧ ರಾಜ್ಯ ಸರ್ಕಾರ ಹಾಗೂ…
Author: UllalaVani
ಸಂವಿಧಾನದ ಪರಿಚ್ಛೇದ 21ರಡಿಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ “ಬದುಕುವ ಹಕ್ಕು”ವನ್ನು ಭಾರತ ಸಂವಿಧಾನ ಖಾತ್ರಿ ಪಡಿಸಿದೆ. ಬದುಕುವ ಹಕ್ಕಿನ ಅರ್ಥ ಕೇವಲ ಜೀವಂತವಾಗಿರುವುದಲ್ಲ; ಮಾನವೀಯ ಗೌರವದೊಂದಿಗೆ ಆರೋಗ್ಯಕರ ಜೀವನ ನಡೆಸುವ ಹಕ್ಕು ಕೂಡ ಅದರ ಅವಿಭಾಜ್ಯ ಅಂಗವಾಗಿದೆ. ಈ ಹಿನ್ನೆಲೆಯಲ್ಲಿ ಬಡವರಿಗೆ ಉಚಿತ ಚಿಕಿತ್ಸೆ ಒದಗಿಸುವ ಕುರಿತು ಸುಪ್ರೀಂ ಕೋರ್ಟ್ ನೀಡಿರುವ ಇತ್ತೀಚಿನ ಕಠಿಣ ನಿರ್ದೇಶನ ದೇಶಾದ್ಯಂತ ಮಹತ್ವದ ಚರ್ಚೆಗೆ ಕಾರಣವಾಗಿದೆ. ಸರ್ಕಾರದಿಂದ ಕಡಿಮೆ ಬೆಲೆಗೆ ಜಾಗ, ಭೂಮಿ ಅಥವಾ ಇತರೆ ಸೌಲಭ್ಯಗಳನ್ನು ಪಡೆದುಕೊಂಡು ಕಾರ್ಯನಿರ್ವಹಿಸುತ್ತಿರುವ ಖಾಸಗಿ ಮತ್ತು ಕಾರ್ಪೊರೇಟ್ ಆಸ್ಪತ್ರೆಗಳು ಬಡ ಹಾಗೂ ಆರ್ಥಿಕವಾಗಿ ಹಿಂದುಳಿದ ಜನರಿಗೆ ಉಚಿತ ಚಿಕಿತ್ಸೆ ನೀಡುವುದು ಕಡ್ಡಾಯ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. “ದುಡ್ಡಿಲ್ಲ ಎಂಬ ಕಾರಣಕ್ಕೆ ಚಿಕಿತ್ಸೆ ನಿರಾಕರಿಸುವುದು ಮಾನವೀಯತೆಯ ವಿರುದ್ಧವೂ, ಸಂವಿಧಾನದ ಆತ್ಮಕ್ಕೆ ವಿರುದ್ಧವೂ ಆಗಿದೆ” ಎಂಬ ತೀವ್ರ ಸಂದೇಶವನ್ನು ನ್ಯಾಯಾಲಯ ನೀಡಿದೆ. ಸುಪ್ರೀಂ ಕೋರ್ಟ್ ಸೂಚಿಸಿರುವ ನಿಯಮಗಳ ಪ್ರಕಾರ, ಸರ್ಕಾರದ ಸಬ್ಸಿಡಿ ದರದಲ್ಲಿ ಜಾಗ ಪಡೆದ ಆಸ್ಪತ್ರೆಗಳು ಹೊರರೋಗಿ ವಿಭಾಗದಲ್ಲಿ (OPD)…
ಮಂಗಳೂರು: ಕರಾವಳಿ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಮಂಗಳೂರಿನ ನಾಲ್ಕು ಪ್ರಮುಖ ಸ್ಥಳಗಳಲ್ಲಿ ಏಕಕಾಲಕ್ಕೆ ನಾಲ್ಕು ಅತ್ಯಾಧುನಿಕ ಅದ್ದೂರಿ ಸಭಾಭವನಗಳ ಲೋಕಾರ್ಪಣೆ ಗೊಳ್ಳಲಿದೆ ಎಂದು ಮಾಜಿ ಸಚಿವ ಹಾಗೂ ವಿಕಾಸ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಕೃಷ್ಣ ಜೆ ಪಾಲೆಮಾರ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಲ್ಯಾಂಡ್ ಲಿಂಕ್ಸ್ ಸಂಸ್ಥೆಯ 45 ವರ್ಷಗಳ ಯಶಸ್ವಿ ಹಾದಿಯ ಸವಿನೆನಪಿಗಾಗಿ ಕರಾವಳಿ ಜನತೆಗೆ ಸಂದ ವಿಶಿಷ್ಟ ಕೊಡುಗೆ ಮಂಗಳೂರಿನ ನಾಲ್ಕು ಕಡೆಗಳಲ್ಲಿ ನಾಲ್ಕು ಅತ್ಯಾಧುನಿಕ ಸಭಾಂಗಣಗಳು ಉದ್ಘಾಟನೆ ಗೊಳ್ಳಲಿದೆ ಎಂದು ಪಾಲೆಮಾರ್ ತಿಳಿಸಿದ್ದಾರೆ.ಕರಾವಳಿಯ ಹೆಮ್ಮೆಯ ಹಾಗೂ ಅತ್ಯಂತ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಯಾದ ಲ್ಯಾಂಡ್ ಲಿಂಕ್ಸ್, ಕರಾವಳಿ ಭಾಗದಲ್ಲಿ ಕಳೆದ 45 ವರ್ಷಗಳಿಂದ ತನ್ನ ಪ್ರಾಮಾಣಿಕ ಮತ್ತು ಯಶಸ್ವಿ ಉದ್ಯಮದ ಮೂಲಕ ಲಕ್ಷಾಂತರ ಜನರ ನಂಬಿಕೆಯನ್ನು ಗಳಿಸಿದೆ. ಈ ಸುದೀರ್ಘ ಯಶಸ್ವಿ ಹಾದಿಯ ಸವಿನೆನಪಿಗಾಗಿ ಸಂಸ್ಥೆಯು ಮಂಗಳೂರಿನ ಪ್ರಮುಖ ನಾಲ್ಕು ಸ್ಥಳಗಳಲ್ಲಿ ಪ್ರಪ್ರಥಮ ಬಾರಿಗೆ ಅತ್ಯಾಧುನಿಕ ಸೌಲಭ್ಯಗಳನ್ನೊಳಗೊಂಡ, ನಾಡಿನ ಜನತೆಗೆ ಯೋಗ್ಯವಾದ ನಾಲ್ಕು ಭವ್ಯ ಸಭಾಭವನಗಳನ್ನು ಏಕಕಾಲದಲ್ಲಿ ಲೋಕಾರ್ಪಣೆ…
ಉಳ್ಳಾಲ: ಖಾಸಗಿ ಬಸ್ ನೌಕರರು ಮತ್ತು ಮಾಲಕರು ಎರಡೂ ವರ್ಗಗಳು ಈಗಾಗಲೇ ಹಲವು ಒತ್ತಡಗಳ ನಡುವೆ ಕೆಲಸ ನಿರ್ವಹಿಸುತ್ತಿದ್ದಾರೆ. ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವತ್ತ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘ, ಮಂಗಳೂರು ಇದರ ಅಧ್ಯಕ್ಷ ಉಸ್ಮಾನ್ ಅಲ್ತಾಫ್ ಒತ್ತಾಯಿಸಿದ್ದಾರೆ. ಡೀಸೆಲ್ ದರ ಈಗಾಗಲೇ ₹4 ರಷ್ಟು ಏರಿಕೆಯಾಗಿದೆ. ಒಂದು ಕಡೆ ಇಂಧನ ವೆಚ್ಚ, ವಾಹನಗಳ ಬಿಡಿಭಾಗಗಳ ವೆಚ್ಚ, ನಿರ್ವಹಣಾ ವೆಚ್ಚ ಹಾಗೂ ಇತರ ಖರ್ಚುಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿವೆ. ಇಂತಹ ಸಂದರ್ಭದಲ್ಲಿ ಖಾಸಗಿ ಬಸ್ ಕ್ಷೇತ್ರವು ಹಲವಾರು ಆರ್ಥಿಕ ಸವಾಲುಗಳನ್ನು ಎದುರಿಸುತ್ತಿದೆ. ಆದರೂ ದಕ್ಷಿಣ ಕನ್ನಡ ಖಾಸಗಿ ಬಸ್ ಮಾಲಕರ ಸಂಘದ ಸಭೆಯಲ್ಲಿ ಸದ್ಯಕ್ಕೆ ಬಸ್ ಪ್ರಯಾಣ ದರ ಹೆಚ್ಚಿಸುವ ಯಾವುದೇ ನಿರ್ಧಾರ ಇಲ್ಲ ಎಂದು ತಿಳಿಸಲಾಗಿದೆ. ಸಾರ್ವಜನಿಕರ ಮೇಲಿನ ಹೊರೆ ಹೆಚ್ಚಾಗಬಾರದು ಎಂಬ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ಸರ್ಕಾರವು ಖಾಸಗಿ ಸಾರಿಗೆ ಕ್ಷೇತ್ರವನ್ನು ಕೇವಲ ಸೇವಾ ಕ್ಷೇತ್ರವಾಗಿ ಮಾತ್ರ…
ತೊಕ್ಕೊಟ್ಟು: ಮಂಗಳೂರು-ಬಿ.ಸಿ.ರೋಡ್ ನಡುವೆ ಚಲಿಸುವ ಶಾರದಾ ಬಸ್ಸಿನ ಅವ್ಯವಸ್ಥೆ ಕುರಿತು ಉಳ್ಳಾಲವಾಣಿ ನಡೆಸಿದ ವರದಿಯನ್ನು ಗಮನಿಸಿದ ಮಾಲೀಕರು ತಕ್ಷಣವೇ ಸ್ಪಂಧಿಸಿ ಬಸ್ಸನ್ನು ದುರಸ್ತಿಗೊಳಿಸಿದ್ದು, ಹೊಸ ಪೈಂಟ್ ಆಗಿ ಮತ್ತೆ ಬಸ್ಸು ರಸ್ತೆಗಿಳಿದಿದ್ದು, ಈ ಬಗ್ಗೆ ಪ್ರಯಾಣಿಕರು ಉಳ್ಳಾಲವಾಣಿ ಹಾಗೂ ಮಾಲೀಕರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಬಸ್ಸು ಒಳಗಡೆ ಲಿಂಕ್ ರಾಡ್ ಸಂಪೂರ್ಣ ಎದ್ದುಬಂದು, ಕೆಳಗಿನ ರಸೆ ಕಾಣುತಿತ್ತು. ಈ ಕುರಿತು ಉಳ್ಳಾಲವಾಣಿ ಛಾನೆಲ್ ಹಾಗೂ ಇನ್ಸ್ಟಾ ಪೋಸ್ಟ್ ಮೂಲಕ ವರದಿ ನಡೆಸಿ, ಪ್ರಯಾಣಿಕರ ಸುರಕ್ಷತೆಯನ್ನು ಕಾಪಾಡುವಂತೆ ವರದಿಯಲ್ಲಿ ಉಲ್ಲೇಖಿಸಿತ್ತು. ವರದಿ ಪ್ರಕಟವಾದ ಕೆಲವೇ ದಿನಗಳಲ್ಲಿ ಬಸ್ಸನ್ನು ಮಾಲೀಕರು ರಿ ಪೈಂಟಿಂಗ್ ಮತ್ತು ದುರಸ್ತಿಗೊಳಿಸಿದ್ದಾರೆ. ವರದಿಯಿಂದ ಬಸ್ಸು ಸಿಬ್ಬಂದಿಗೆ ಹಾಗೂ ಗುತ್ತಿಗೆದಾರರಿಗೆ ನೋವಾಗಿತ್ತು ಎಂಬುದು ಪ್ರಯಾಣಿಕರಿಂದಲೇ ತಿಳಿದುಬಂದಿತ್ತು. ಆದರೆ ಸುರಕ್ಷತಾ ದೃಷ್ಟಿಯಿಂದ ಪ್ರಯಾಣಿಕರೇ ಬಸ್ಸಿನ ದುರಸ್ತಿಗೆ ಒತ್ತಾಯಿಸಿದ್ದಾಗ ಪ್ರತಿಕ್ರಿಯಿಸದೇ ಇದ್ದಾಗ , ನೊಂದ ಪ್ರಯಾಣಿಕರು ಉಳ್ಳಾಲವಾಣಿಯನ್ನು ಸಂಪರ್ಕಿಸಿದ್ದರು.
ಉಳ್ಳಾಲ ತಾಲೂಕಿನ ಕೋಣಾಜೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ Mangalore University ಆವರಣದಲ್ಲಿ ಸ್ವಚ್ಛತೆ ಮತ್ತು ತ್ಯಾಜ್ಯ ನಿರ್ವಹಣೆಯಲ್ಲಿ ಗಂಭೀರ ನಿರ್ಲಕ್ಷ್ಯ ಕಂಡುಬಂದಿದೆ ಎಂಬ ಆರೋಪ ಇದೀಗ ಸಾರ್ವಜನಿಕ ಚರ್ಚೆಗೆ ಕಾರಣವಾಗಿದೆ. ಕೋಣಾಜೆ ಗ್ರಾಮ ಪಂಚಾಯತ್ ಆಡಳಿತವು ಈ ಹಿನ್ನೆಲೆಯಲ್ಲಿ ವಿಶ್ವವಿದ್ಯಾಲಯಕ್ಕೆ ₹25,000 ದಂಡ ವಿಧಿಸಿ ನೋಟಿಸ್ ಜಾರಿಗೊಳಿಸಿದ್ದು, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಜನಿ ಅವರು ಕೋಣಾಜೆ ಪೊಲೀಸ್ ಠಾಣೆಗೆ ಅಧಿಕೃತ ದೂರು ಸಹ ನೀಡಿದ್ದಾರೆ. ಆದರೆ ಹಲವು ದಿನಗಳು ಕಳೆದರೂ FIR ದಾಖಲಾಗದಿರುವುದು ಸ್ಥಳೀಯ ಜನರಲ್ಲಿ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಸಾಮಾನ್ಯವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕಸ ವಿಲೇವಾರಿ ಸರಿಯಾಗಿ ನಡೆಯದಿದ್ದರೆ, ಕೊಳೆತ ತ್ಯಾಜ್ಯದಿಂದ ದುರ್ವಾಸನೆ ಹರಡಿದರೆ ಅಥವಾ ಪರಿಸರ ಮತ್ತು ಆರೋಗ್ಯಕ್ಕೆ ಅಪಾಯ ಉಂಟಾದರೆ ಅದನ್ನು ಕೇವಲ ಆಡಳಿತಾತ್ಮಕ ತಪ್ಪು ಎಂದು ಮಾತ್ರ ನೋಡಲಾಗುವುದಿಲ್ಲ. ಅದು ಸಾರ್ವಜನಿಕ ಆರೋಗ್ಯಕ್ಕೆ ಅಪಾಯ ಉಂಟುಮಾಡುವ ಗಂಭೀರ ವಿಷಯವಾಗುತ್ತದೆ. ಮಂಗಳೂರು ವಿಶ್ವವಿದ್ಯಾಲಯದಂತಹ ದೊಡ್ಡ ಶಿಕ್ಷಣ ಸಂಸ್ಥೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು, ಸಿಬ್ಬಂದಿ ಮತ್ತು ಸಾರ್ವಜನಿಕರು ಸಂಚರಿಸುತ್ತಾರೆ. ಇಂತಹ…
ಮಂಗಳೂರಿನ ಕುಂಟಿಕಾನದಲ್ಲಿರುವ ಮಾರ್ಟ್ವೊಂದರಲ್ಲಿ ಸಂಭವಿಸಿದ ಲಿಫ್ಟ್ ಅವಘಡದಲ್ಲಿ ಬೆಳಾಲು ಗ್ರಾಮದ ಪೂಂಜಕೆರೆ ನಿವಾಸಿ ನೌಫಾಲ್ (28) ಮೃತಪಟ್ಟ ಘಟನೆ ಜಿಲ್ಲೆಯ ಜನತೆಯನ್ನು ಬೆಚ್ಚಿಬೀಳಿಸಿದೆ. ಕೆಲಸದಲ್ಲಿ ನಿರತರಾಗಿದ್ದ ಯುವಕನೊಬ್ಬ ಲಿಫ್ಟ್ ಅವಘಡದಲ್ಲಿ ಪ್ರಾಣ ಕಳೆದುಕೊಳ್ಳುವುದು ಕೇವಲ ಅಪಘಾತವಲ್ಲ, ಇದು ಸಾರ್ವಜನಿಕ ಸುರಕ್ಷತೆ ವ್ಯವಸ್ಥೆಯ ವೈಫಲ್ಯ ಎನ್ನುವ ಪ್ರಶ್ನೆ ಈಗ ಜನರ ಮನಸ್ಸಿನಲ್ಲಿ ಮೂಡುತ್ತಿದೆ. ಘಟನೆ ನಡೆದಿದ್ದು ಶನಿವಾರ ಸಂಜೆ. ಸಹೋದ್ಯೋಗಿಗಳು ನೌಫಾಲ್ ಅವರನ್ನು ರಕ್ಷಿಸಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಪ್ರಕರಣ ಉರ್ವ ಠಾಣೆಯಲ್ಲಿ ದಾಖಲಾಗಿದ್ದರೂ, ಮೂರು ದಿನ ಕಳೆದರೂ ತನಿಖೆಯ ಪ್ರಗತಿ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ಸಾರ್ವಜನಿಕರಿಗೆ ಲಭ್ಯವಾಗಿಲ್ಲ. ಲಿಫ್ಟ್ಗೆ ಮಾನ್ಯ ಸುರಕ್ಷತಾ ಪ್ರಮಾಣಪತ್ರ ಇದೆಯೇ? ನಿಯಮಿತ ತಪಾಸಣೆ ನಡೆದಿತ್ತೇ? ಕಟ್ಟಡಕ್ಕೆ ಅಗ್ನಿಶಾಮಕ ಮತ್ತು ಸುರಕ್ಷತಾ ಅನುಮತಿಗಳು ಸರಿಯಾಗಿದ್ದವೆಯೇ? ಈ ಪ್ರಶ್ನೆಗಳಿಗೆ ಇನ್ನೂ ಉತ್ತರ ಸಿಕ್ಕಿಲ್ಲ. ಒಬ್ಬ ಯುವಕ ಪ್ರಾಣ ಕಳೆದುಕೊಂಡಿದ್ದರೂ ಜಿಲ್ಲಾಡಳಿತದ ಮೌನ ಜನರಲ್ಲಿ ಅನುಮಾನ ಹುಟ್ಟಿಸುತ್ತಿದೆ. ಜಿಲ್ಲಾಧಿಕಾರಿಗಳು ಯಾಕೆ ಸಾರ್ವಜನಿಕವಾಗಿ ಮಾಹಿತಿ ನೀಡುತ್ತಿಲ್ಲ? ಮಹಾನಗರ ಪಾಲಿಕೆಯ ಕಟ್ಟಡ ಮತ್ತು ಸುರಕ್ಷತಾ…
ಆನ್ಲೈನ್ ಮೂಲಕ ಔಷಧ ಮಾರಾಟಕ್ಕೆ ವಿರೋಧ ವ್ಯಕ್ತಪಡಿಸಿ ದೇಶದಾದ್ಯಂತ ಮೆಡಿಕಲ್ ಅಂಗಡಿಗಳ ಸಂಘಟನೆಗಳು ನಡೆಸಿದ ಪ್ರತಿಭಟನೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕರ್ನಾಟಕದ ಅನೇಕ ಭಾಗಗಳಲ್ಲಿ ಮೆಡಿಕಲ್ ಶಾಪ್ಗಳು ಸಾಮಾನ್ಯವಾಗಿ ಕಾರ್ಯನಿರ್ವಹಿಸಿದ್ದರೂ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುಮಾರು 1100ಕ್ಕೂ ಹೆಚ್ಚು ಮೆಡಿಕಲ್ ಅಂಗಡಿಗಳು ಸಂಪೂರ್ಣ ಬಂದ್ ಆಗಿ ಹೋರಾಟಕ್ಕೆ ಬೆಂಬಲ ಸೂಚಿಸಿವೆ. ಔಷಧವೆಂದರೆ ಸಾಮಾನ್ಯ ವಾಣಿಜ್ಯ ವಸ್ತುವಲ್ಲ. ವೈದ್ಯರ ಸಲಹೆ, ರೋಗಿಯ ಆರೋಗ್ಯ ಸ್ಥಿತಿ, ಔಷಧದ ಪ್ರಮಾಣ, ಗುಣಮಟ್ಟ ಮತ್ತು ಸುರಕ್ಷತೆ — ಇವೆಲ್ಲವೂ ಜೀವದ ಜೊತೆ ಸಂಬಂಧ ಹೊಂದಿರುವ ವಿಷಯಗಳು. ಆದರೆ ಇಂದು ಆನ್ಲೈನ್ ವ್ಯಾಪಾರ ವೇದಿಕೆಗಳ ಮೂಲಕ ಔಷಧ ಮಾರಾಟ ಹೆಚ್ಚಾಗುತ್ತಿರುವುದು ಸಾಂಪ್ರದಾಯಿಕ ಮೆಡಿಕಲ್ ಅಂಗಡಿಗಳ ಬದುಕಿನ ಮೇಲಷ್ಟೇ ಅಲ್ಲ, ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತಿದೆ ಎಂಬ ಆತಂಕ ವ್ಯಕ್ತವಾಗುತ್ತಿದೆ. ಹಲವು ಮೆಡಿಕಲ್ ಅಂಗಡಿ ಮಾಲೀಕರು ಮತ್ತು ಫಾರ್ಮಸಿಸ್ಟ್ಗಳು, “ಆನ್ಲೈನ್ ಪ್ಲಾಟ್ಫಾರ್ಮ್ಗಳಲ್ಲಿ ವೈದ್ಯರ ಚೀಟಿ ಪರಿಶೀಲನೆ, ನಕಲಿ ಔಷಧ ನಿಯಂತ್ರಣ, ಅವಧಿ ಮೀರಿದ…
ಬಂಟ್ವಾಳ, ಮೇ. :ಪುಣಚ ಗ್ರಾಮದ 3 ನೇ ವಾರ್ಡ್ ನ ದೇವಿನಗರದಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಪಂಗಡದ ಕುಟುಂಬಗಳಿಗೆ ಕಳೆದ ಹಲವು ವರ್ಷದಿಂದ ವಾಸದ ಮನೆಗೆ ಹಕ್ಕುಪತ್ರ ನೀಡದೆ ಅಲೆದಾಡಿಸಲಾಗುತ್ತಿದೆ ಎಂದು ಆರೋಪಿಸಿ ಮೂರು ಮನೆಯ ಸದಸ್ಯರು ಹಾಗೂ ಸಂಬಂಧಿಕರು ಬಂಟ್ವಾಳ ತಾಲೂಕು ಕಚೇರಿ ಎದುರುಗಡೆ ಸೋಮವಾರ ಬೆಳಗ್ಗಿನಿಂದ ಅಹೋರಾತ್ರಿ ಮೌನ ಪ್ರತಿಭಟನೆ ಆರಂಭಿಸಿದ್ದಾರೆ. ಹಕ್ಕುಪತ್ರಕ್ಕಾಗಿ ಮನವಿ ಸಲ್ಲಿಸಿದ್ದ ಬೇಬು ಕುಮಾರಿ, ವಿಜಯಲಕ್ಷ್ಮಿ, ಪ್ರೇಮ ಅವರು ಹಾಗೂ ಮನೆ ಮಂದಿ ಸೇರಿ ಸುಮಾರು 15 ಮಂದಿ ಅಹೋರಾತ್ರಿ ಪ್ರತಿಭಟನೆ ಆರಂಭಿಸಿದ್ದಾರೆ. ನ್ಯಾಯ ಸಿಗುವವರೆಗೂ ಪ್ರತಿಭಟನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.ಸುದ್ದಿಗಾರರ ಜತೆಗೆ ಮಾತನಾಡಿದ ಪ್ರತಿಭಟನೆ ನೇತೃತ್ವ ವಹಿಸಿದ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಗಿರಿಧರ್ ನಾಯ್ಕ ಅವರು ಪುಣಚ ಗ್ರಾಮದ ದೇವಿನಗರ ಎಂಬಲ್ಲಿ ಸರಕಾರಿ ಜಮೀನಿನಲ್ಲಿ ಪರಿಶಿಷ್ಟ ಪಂಗಡದವರಿಗೆ ಸೇರಿದ 13 ವಾಸದ ಮನೆಗಳಿದ್ದು, ಈ ಪೈಕಿ 5 ಮನೆಯವರಿಗೆ ಮನೆ ಕಟ್ಟಿ 8 ವರ್ಷವಾದರೂ ಈವರೆಗೆ ಹಕ್ಕು ಪತ್ರ ದೊರೆತಿರುವುದಿಲ್ಲ.…
ಮಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಸ್ವಚ್ಛತೆ ಮತ್ತು ತ್ಯಾಜ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿರುವ ಹಿನ್ನೆಲೆಯಲ್ಲಿ ಕೊಣಾಜೆ ಗ್ರಾಮ ಪಂಚಾಯತ್ ವಿಶ್ವವಿದ್ಯಾಲಯಕ್ಕೆ ದಂಡ ವಿಧಿಸಿ ನೋಟಿಸ್ ಜಾರಿಗೊಳಿಸಿರುವ ಘಟನೆ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹತ್ತು ದಿನಗಳೊಳಗೆ ₹25,000 ದಂಡ ಪಾವತಿಸುವಂತೆ ನೀಡಿರುವ ಸೂಚನೆ, ವಿಶ್ವವಿದ್ಯಾಲಯದ ಆಡಳಿತದ ಕಾರ್ಯವೈಖರಿಯ ಮೇಲೆಯೇ ಪ್ರಶ್ನೆ ಎಬ್ಬಿಸಿದೆ. ಸಾವಿರಾರು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿರುವ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಮಂಗಳೂರು ವಿಶ್ವವಿದ್ಯಾಲಯವೇ ಸ್ವಚ್ಛತೆ ಕಾಪಾಡುವಲ್ಲಿ ವಿಫಲವಾಗಿರುವುದು ವಿಷಾದನೀಯ. ವಿದ್ಯಾರ್ಥಿಗಳ ಆರೋಗ್ಯ, ಪರಿಸರ ಸಂರಕ್ಷಣೆ ಹಾಗೂ ಮೂಲಭೂತ ಸೌಕರ್ಯಗಳ ಬಗ್ಗೆ ಗಮನ ಹರಿಸಬೇಕಾದ ಆಡಳಿತ ಮಂಡಳಿ ಮತ್ತು ಸಿಂಡಿಕೇಟ್ ಸದಸ್ಯರು ಮೌನವಾಗಿರುವುದು ಇನ್ನಷ್ಟು ಆತಂಕಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳ ಹಿತಾಸಕ್ತಿ ಕುರಿತು ಸದಾ ಮಾತನಾಡುವ ಸಂಘಟನೆಗಳು ಈ ವಿಚಾರದಲ್ಲಿ ಯಾಕೆ ಧ್ವನಿ ಎತ್ತುತ್ತಿಲ್ಲ ಎಂಬ ಪ್ರಶ್ನೆಯೂ ಸಾರ್ವಜನಿಕರಲ್ಲಿ ಮೂಡಿದೆ. ವಿದ್ಯಾರ್ಥಿಗಳು ಅಸ್ವಸ್ಥರಾದರೆ ಅಥವಾ ಪರಿಸರ ಸಮಸ್ಯೆಯಿಂದ ತೊಂದರೆ ಅನುಭವಿಸಿದರೆ ಅದರ ಹೊಣೆ ಯಾರು ಹೊರುತ್ತಾರೆ? ಒಂದು ವಿಶ್ವವಿದ್ಯಾಲಯ ಕೇವಲ ಕಟ್ಟಡಗಳ ಸಮೂಹವಲ್ಲ;…

