ಬಂಟ್ವಾಳ,ಜ.12: ಗಡಿನಾಡ ಕಾಸರಗೋಡು ಜಿಲ್ಲೆಯ ಕನ್ನಡ ಶಾಲೆಗಳಲ್ಲಿ ಮಲಯಾಳ ಕಡ್ಡಾಯ ಮಸೂದೆಗೆ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ತೀವ್ರವಾಗಿ ಖಂಡಿಸಿದೆ. ಕೇರಳ ವಿಧಾನಸಭೆ ಅಂಗೀಕರಿಸಿರುವ ಮಲಯಾಳ ಭಾಷಾ ಮದೂದೆಯಿಂದಾಗಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳ ಕಲಿಕೆ ಕಡ್ಡಾಯಗೊಳಿಸುವ ಮಸೂದೆಯಿಂದ ಕನ್ನಡಕ್ಕೆ ಕುತ್ತು ಬರಲಿದೆ ಎಂಬ ಆತಂಕ ಮೂಡಿದೆ. ಇದನ್ನು ನಿವಾರಿಸುವ ಕಾರ್ಯವಾಗಬೇಕು. ಕಾಸರಗೋಡಿನಲ್ಲಿ ಸುಮಾರು ಏಳೂವರೆ ಲಕ್ಷ ಕನ್ನಡಿಗರಿದ್ದು, 210ಕನ್ನಡ ಮಾಧ್ಯಮ ಶಾಲೆಗಳಿವೆ. ಕನ್ನಡ ಕಲಿಯುವ ಹಕ್ಕನ್ನು ಮೊಟಕುಗೊಳಿಸುವ ಕಾರ್ಯ ಕೇರಳ ಸರಕಾರದಿಂದ ಆಗುತ್ತಿರುವುದು ಖೇದನೀಯ. ಬಂಟ್ವಾಳದಲ್ಲಿ ನಡೆದ ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಎಂ.ಪಿ.ಶ್ರೀನಾಥ್ ಹೇಳಿದ್ದಾರೆ. ಸಭೆ ಸರ್ವಾನುಮತದಿಂದ ಕೇರಳದ ಕನ್ನಡ ಶಾಲೆಗಳಲ್ಲಿ ಮಲಯಾಳ ಹೇರಿಕೆಯನ್ನು ಖಂಡಿಸಿತು.
Author: UllalaVani
ಬೆಂಗಳೂರು, ಜ. 12 : ಕೇರಳ ಸರ್ಕಾರದ ವಿರುದ್ಧ ಕನ್ನಡ ಪರ ಹೋರಾಟಗಾರರು ಪ್ರತಿಭಟನೆಗೆ ಮುಂದಾಗಿದ್ದಾರೆ. ಕೇರಳ ಮಸೂದೆ ವಿರೋಧಿಸಿ ವಾಟಾಳ್ ನಾಗರಾಜ್ ರಾಜಭವನ ಮುತ್ತಿಗೆಗೆ ಯತ್ನಿಸಿದ್ದಾರೆ. ರಾಜ್ಯದ ಗಡಿಯಲ್ಲಿರುವ ಕಾಸರಗೋಡು ಪ್ರದೇಶದಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಕೇರಳ ಸರ್ಕಾರದ ಮಸೂದೆಗೆ ಕರ್ನಾಟಕದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಕೇರಳ ಸರ್ಕಾರದ ಕ್ರಮವನ್ನು ಖಂಡಿಸಿದ್ದು, ಕನ್ನಡ ಪರ ಸಂಘಟನೆಗಳು ಹೋರಾಟಕ್ಕೆ ಇಳಿದಿವೆ.ಕೇರಳ ಸರ್ಕಾರದ ಮಸೂದೆ ವಿರೋಧಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ರಾಜಭವನ ಮುತ್ತಿಗೆಗೆ ಯತ್ನ ನಡೆದಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. ರಾಜಭವನದ ಬಳಿ ಬೆಂಬಲಿಗರೊಂದಿಗೆ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್, ಭಾಷಾ ಸ್ವಾತಂತ್ರ್ಯದ ಮೇಲೆ ನಡೆಯುತ್ತಿರುವ ದಾಳಿ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, ಕಾಸರಗೋಡಿನಲ್ಲಿ ಮಲಯಾಳಂ ಭಾಷೆಯನ್ನು ಕಡ್ಡಾಯಗೊಳಿಸುವ ಮಸೂದೆ ಹಿಂಪಡೆಯದಿದ್ದರೆ ಕರ್ನಾಟಕ ಬಂದ್ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಮಂಗಳೂರಿನಲ್ಲಿ ಬೃಹತ್ ಚಳವಳಿ ರೂಪಿಸಲಾಗುವುದು. ರಾಷ್ಟ್ರೀಯ…
ಕುಂಬಳೆ, ಜ. 12 : ರಾಷ್ಟ್ರೀಯ ಹೆದ್ದಾರಿ ಕಾಸರಗೋಡಿನ ಕುಂಬಳೆ ಆರಿಕ್ಕಾಡಿಯಲ್ಲಿ ಹೊಸ ಟೋಲ್ ಗೇಟ್ ವಿರುದ್ಧ ಹೋರಾಟ ಸಮಿತಿ ಪ್ರತಿಭಟನೆ ನಡೆಸುತ್ತಿದೆ. ಟೋಲ್ ಶುಲ್ಕ ವಸೂಲಾತಿ ವಿರುದ್ಧದ ಪ್ರತಿಭಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಸೋಮವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ನೂರಾರು ಪ್ರತಿಭಟನಾಕಾರರು ಅರಿಕ್ಕಾಡಿ ಟೋಲ್ ಪ್ಲಾಜಾ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದರಿಂದ ಕುಂಬಳೆಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ವಾಹನ ಸಂಚಾರ ಅಸ್ತವ್ಯಸ್ಥ ಉಂಟಾಗಿತ್ತು. ಇದರಿಂದಾಗಿ ಕಚೇರಿಗೆ ಹೋಗುವ ಸಿಬ್ಬಂದಿ ಮತ್ತು ಶಾಲೆಗೆ ತೆರಳುವ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಯಿತು. ಕೇರಳ-ಕರ್ನಾಟಕ ಗಡಿಯಲ್ಲಿರುವ ತಲಪಾಡಿ ಟೋಲ್ ಗೇಟ್ ನಿಂದ ಕೇವಲ 20 ಕಿ.ಮೀ ದೂರದಲ್ಲಿರುವ ತಾತ್ಕಾಲಿಕ ಪ್ಲಾಜಾದಲ್ಲಿ ಭಾರತೀಯ ಹೆದ್ದಾರಿ ಪ್ರಾಧಿಕಾರ ಟೋಲ್ ಸಂಗ್ರಹವನ್ನು ಪ್ರಾರಂಭಿಸಲು ಯೋಜಿಸಿದ ಮೊದಲ ದಿನವೇ ಜನರ ಆಕ್ರೋಶಕ್ಕೆ ಕಾರಣವಾಗಿದೆ ಎನ್ನಲಾಗಿದೆ.ಮಂಜೇಶ್ವರ ಶಾಸಕ ಎಕೆಎಂ ಅಶ್ರಫ್ ನೇತೃತ್ವದ ಹೋರಾಟ ಸಮಿತಿ ಪ್ರತಿಭಟನೆಯ ನೇತೃತ್ವ ವಹಿಸಿದ್ದು, ಟೋಲ್ ಪ್ಲಾಜಾಗಳ ನಡುವೆ 60 ಕಿ.ಮೀ ಕಡ್ಡಾಯ ನಿಯಮವನ್ನು NHAI ಪಾಲಿಸಬೇಕೆಂದು…
ಕತಾರ್,ಜ. 12:ಕರ್ನಾಟಕದ ತುಳುನಾಡು ಪ್ರದೇಶದ ಅಪರ್ಣಾ ಶರತ್ ಅವರು ಕೇಂದ್ರ ಸರ್ಕಾರದ “ನಾರಿ ಶಕ್ತಿ ಸಮ್ಮಾನ್” ಪ್ರಶಸ್ತಿಯನ್ನು ಕತಾರ್ನಲ್ಲಿರುವ ಭಾರತೀಯ ರಾಯಭಾರ ಕಚೇರಿಯಿಂದ ಗೌರವಿಸಲ್ಪಟ್ಟ ಮೊದಲ ಮಹಿಳೆಯಾಗಿದ್ದಾರೆ. ರಾಯಭಾರ ಕಚೇರಿ ಆಯೋಜಿಸಿದ್ದ ಪ್ರವಾಸಿ ಭಾರತೀಯ ದಿನಾಚರಣೆ ಸಂದರ್ಭದಲ್ಲಿ, ಸಮುದಾಯ ಸೇವೆ ಹಾಗೂ ನಾಯಕತ್ವದಲ್ಲಿ ನೀಡಿದ ವಿಶಿಷ್ಟ ಕೊಡುಗೆಗಾಗಿ ಆಯ್ಕೆಯಾದ ಕೇವಲ 12 ಭಾರತೀಯ ಮಹಿಳೆಯರಲ್ಲಿ ಒಬ್ಬರಾಗಿ ಅವರನ್ನು ಸನ್ಮಾನಿಸಲಾಯಿತು.ಈ ಗೌರವವು ಭಾರತೀಯ ವಲಸಿಗ ಸಮುದಾಯದ ಸಬಲೀಕರಣ ಹಾಗೂ ಭಾರತ–ಕತಾರ್ ಸಂಬಂಧಗಳನ್ನು ಬಲಪಡಿಸುವಲ್ಲಿ ಅವರ ಮಹತ್ವದ ಪಾತ್ರವನ್ನು ಗುರುತಿಸುತ್ತದೆ. ಈ ಸಾಧನೆ ತುಳುನಾಡು ಹಾಗೂ ವಿದೇಶದಲ್ಲಿರುವ ಭಾರತೀಯ ಸಮುದಾಯಕ್ಕೆ ಅಪಾರ ಹೆಮ್ಮೆಯ ವಿಷಯವಾಗಿದೆ.
ಮಂಗಳೂರು, ಜ. 12 : ಪ್ರಾರಂಭದಿಂದಲೂ ನಿಧಾನಗತಿಯಲ್ಲಿ ಸಾಗುತ್ತಿರುವ ಕೂಳೂರು ಆರು ಪಥದ ಸೇತುವೆ ನಿರ್ಮಾಣ ಕಾರ್ಯವು ಈ ವರ್ಷದ ಮುಂಗಾರು ಆರಂಭಕ್ಕೂ ಮುನ್ನ ಪೂರ್ಣಗೊಳ್ಳಲಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಭರವಸೆ ನೀಡಿದೆ. ಆದರೆ, ಈ ಭರವಸೆ ನಿಜವಾಗಬೇಕಾದರೆ ಕಾಮಗಾರಿಗೆ ತಕ್ಷಣವೇ ವೇಗ ನೀಡಬೇಕಾಗಿದೆ. ಒಂದು ವೇಳೆ ಜೂನ್ ವೇಳೆಗೆ ಯೋಜನೆ ಪೂರ್ಣಗೊಳ್ಳದಿದ್ದರೆ, ಕಾಮಗಾರಿ ಮತ್ತೊಂದು ವರ್ಷ ವಿಳಂಬವಾಗುವ ಸಾಧ್ಯತೆಯಿದೆ. ರಾಷ್ಟ್ರೀಯ ಹೆದ್ದಾರಿ 66ರ ಕೂಳೂರಿನಲ್ಲಿರುವ ಫಲ್ಗುಣಿ ನದಿಗೆ ಅಡ್ಡಲಾಗಿ, ಈಗಿರುವ ಹಳೆಯ ಎರಡು ಸೇತುವೆಗಳ ಮಧ್ಯೆ ಈ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿದೆ. ಪುಣೆ ಮೂಲದ ಶಿಂಧೆ ಡೆವಲಪರ್ಸ್ ಸಂಸ್ಥೆಗೆ ಇದರ ಗುತ್ತಿಗೆ ನೀಡಲಾಗಿದೆ. ಏಪ್ರಿಲ್ 2021 ರಲ್ಲಿ ಕೆಲಸದ ಆದೇಶ ನೀಡಲಾಗಿದ್ದು, ಅಕ್ಟೋಬರ್ 2022 ರ ವೇಳೆಗೆ ಪೂರ್ಣಗೊಳ್ಳಬೇಕಿತ್ತು. ಆದರೆ, ಈಗ ಯೋಜನೆ ಸುಮಾರು ಮೂರು ವರ್ಷಗಳಷ್ಟು ವಿಳಂಬವಾಗಿದೆ. ಈ ಹಿಂದೆ ಆರ್ಥಿಕ ಸಂಕಷ್ಟ ಎದುರಿಸಿದ್ದ ಶಿಂಧೆ ಡೆವಲಪರ್ಸ್, ಇದೀಗ ಆರ್ಥಿಕ ಸ್ಥಿತಿ ಸುಧಾರಿಸಿಕೊಂಡು ಕೆಲಸವನ್ನು ಪುನರಾರಂಭಿಸಿದೆ. ಆದರೆ ಕಾಮಗಾರಿ…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಯುವತಿ ಟೆಕ್ಕಿ ಉಸಿರುಗಟ್ಟಿ ಸಾವನ್ನಪ್ಪಿದ ಪ್ರಕರಣಕ್ಕೆ ಇದೀಗ ಸ್ಪೋಟಕ ತಿರುವು ಸಿಕ್ಕಿದೆ. ಪ್ರೀತಿ ನಿರಾಕರಿಸಿದ್ದಕ್ಕೆ ಯುವಕನೊಬ್ಬ ಆಕೆಯನ್ನು ಹತ್ಯೆ ಮಾಡಿರುವುದು ತನಿಖೆ ವೇಳೆ ಬಹಿರಂಗವಾಗಿದೆ. ಮೃತಳನ್ನು ಶರ್ಮಿಳಾ (34) ಎಂದು ಗುರುತಿಸಲಾಗಿದ್ದು, ಅವರು ಮೂಲತಃ ಮಂಗಳೂರಿನವರಾಗಿದ್ದಾರೆ. ಒಂದು ವರ್ಷ ಹಿಂದೆ ಬೆಂಗಳೂರಿಗೆ ಬಂದು ಅಕ್ಸೆಂಚರ್ ಸಾಫ್ಟ್ವೇರ್ ಕಂಪನಿಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಘಟನೆ ಜನವರಿ 3ರ ರಾತ್ರಿ ನಡೆದಿದ್ದು, ಜನವರಿ 5ರಂದು ಬೆಳಕಿಗೆ ಬಂದಿದೆ. ಜನವರಿ 3ರಂದು ರಾತ್ರಿ ಸುಮಾರು 10.30ರ ವೇಳೆಗೆ ಶರ್ಮಿಳಾ ವಾಸಿಸುತ್ತಿದ್ದ ಫ್ಲಾಟ್ನ ಒಂದು ರೂಮ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಮನೆ ಮಾಲೀಕ ವಿಜಯೇಂದ್ರ ಅವರು ರಾಮಮೂರ್ತಿ ನಗರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದು, ಬೆಂಕಿ ಹೊತ್ತಿಕೊಂಡ ಪರಿಣಾಮ ರೂಮ್ನಿಂದ ಹೊರಬರಲಾಗದೆ ಶರ್ಮಿಳಾ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂಬ ಶಂಕೆ…
ಉಳ್ಳಾಲ, ಜ. 12: ಕರಾವಳಿ ಅಭಿವೃದ್ದಿಗೆ ಸರ್ಕಾರದ ಜೊತೆಗೆ ನಾಗರಿಕರ ನೆರವು ಕೂಡ ಅಗತ್ಯವಾಗಿದೆ. ಕರಾವಳಿಯಲ್ಲಿ ಶಾಂತಿ ಪುನರ್ ಸ್ಥಾಪನೆಯಾಗಿದೆ. ಶಾಂತಿ ಪುನರ್ ಸ್ಠಾಪಿಸುವಲ್ಲಿ ಸಿಎಂ ಅವರ ವಿಶೇಷ ಮಾರ್ಗದರ್ಶನ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವರ ಪ್ರಯತ್ನ ಬಹುದೊಡ್ಡದಾಗಿದೆ ಎಂದು ರಾಜ್ಯ ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ತಿಳಿಸಿದ್ದಾರೆ. ಕರಾವಳಿ ಪ್ರವಾಸೋದ್ಯಮ ಸಮಾವೇಶದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಮಂಗಳೂರು, ಜ. 12 : ಸರಕು ಸಾಗಣೆ ಲಾರಿಯೊಂದು ಜೀಪಿಗೆ ಡಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 73ರ ಅಡ್ಯಾರ್ ಸೋಮನಾಥ ಕಟ್ಟೆ ಬಳಿ ಜನವರಿ 10ರಂದು ಸಂಭವಿಸಿದೆ. ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣ ಎಂದು ತಿಳಿದುಬಂದಿದೆ. ಹೆದ್ದಾರಿಯ ತೆರೆದ ಡಿವೈಡರ್ ಬಳಿ ಈ ಘಟನೆ ನಡೆದಿದೆ. ಡಿಕ್ಕಿಯ ರಭಸಕ್ಕೆ ಜೀಪಿನ ಮುಂಭಾಗವು ಡಿವೈಡರ್ ಮೇಲೆ ಏರಿದ್ದು, ವಾಹನದ ಚಕ್ರಗಳು ಕಿತ್ತುಬಂದಿವೆ. ಅಲ್ಲದೆ ಜೀಪಿನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡಿದೆ.ಅದೃಷ್ಟವಶಾತ್, ಈ ಅಪಘಾತದಲ್ಲಿ ಜೀಪಿನ ಚಾಲಕ ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮಂಗಳೂರು, ಜ. 12 :ಲಾರಿ ಮೆಕ್ಯಾನಿಕ್ ಮತ್ತು ಸೂಪರ್ವೈಸರ್ ಆಗಿ ಕೆಲಸ ಮಾಡುತ್ತಿದ್ದ ಕಂಕನಾಡಿಯ ಜಪ್ಪುಕುದ್ದಾಡಿ ನಿವಾಸಿ ಚಂದ್ರಹಾಸ (50) ಕಳೆದ ಸುಮಾರು ಐದು ತಿಂಗಳಿನಿಂದ ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೂರಿನ ಪ್ರಕಾರ, ಚಂದ್ರಹಾಸ ಆಗಸ್ಟ್ 13 ರಂದು ಕೆಲಸಕ್ಕೆ ಹೋಗುವುದಾಗಿ ಹೇಳಿ ಮನೆಯಿಂದ ಹೊರಟು ಹೋದರು, ಆದರೆ ನಂತರ ಹಿಂತಿರುಗಲಿಲ್ಲ. ಅವರ ಕೆಲಸದ ನಿಮಿತ್ತ ಅವರು ದೀರ್ಘಕಾಲದವರೆಗೆ ಮನೆಯಿಂದ ದೂರ ಉಳಿಯಬೇಕಾಗಿದ್ದರಿಂದ ಅವರು ಸಾಮಾನ್ಯವಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ಮನೆಗೆ ಹಿಂತಿರುಗುತ್ತಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.ಆದರೆ, ಐದು ತಿಂಗಳ ನಂತರವೂ ಅವನು ಹಿಂತಿರುಗದಿದ್ದಾಗ, ಕುಟುಂಬವು ಹಲವಾರು ಸ್ಥಳಗಳಲ್ಲಿ ಹುಡುಕಾಟ ನಡೆಸಿತು ಆದರೆ ಅವರನ್ನು ಪತ್ತೆಹಚ್ಚಲು ಸಾಧ್ಯವಾಗಲಿಲ್ಲ. ನಂತರ, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಕಾಣೆಯಾದ ವ್ಯಕ್ತಿಯ ಬಗ್ಗೆ ದೂರು ದಾಖಲಾಗಿದ್ದು, ಪ್ರಕರಣ ದಾಖಲಾಗಿದೆ.ಚಂದ್ರಹಾಸ ಸುಮಾರು 5.4 ಅಡಿ ಎತ್ತರ, ಗೋಧಿ ಮೈಬಣ್ಣ, ತೆಳ್ಳಗಿನ ಮುಖ ಮತ್ತು ಮಧ್ಯಮ ಮೈಕಟ್ಟು ಹೊಂದಿದ್ದಾರೆ. ಅವರು ತುಳು, ಕನ್ನಡ ಮತ್ತು ಹಿಂದಿ ಭಾಷೆಗಳನ್ನು…
ನರಿಂಗಾನ : ಈ ಕಂಬಳ ನಮ್ಮ ದೇಶದ ಆಸ್ತಿ, ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ. ಕಂಬಳ ಸಂಸ್ಕೃತಿಯನ್ನ ಕಾಪಾಡಿ ಕೊಂಡು ಬಂದಿರುವವರಿಂದ ಕಂಬಳದ ಪೋಷಣೆ ಬಹಳ ಕಷ್ಟ ಸಾಧ್ಯ. ಇದರ ಪೋಷಣೆ ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದು ಕರ್ನಾಟಕ ರಾಜ್ಯ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಅವರು ಶನಿವಾರ ನರಿಂಗಾನದಲ್ಲಿ 4 ನೇ ವರ್ಷದ ಹೊನಲು ಬೆಳಕಿನ ಲವ- ಕುಶ ಕಂಬಳೋತ್ಸವದಲ್ಲಿ ಭಾಗವಹಿಸಿ ಮಾತನಾಡಿದರು. ಜಾತಿ ಧರ್ಮ ಮತ ಎಲ್ಲವನ್ನೂ ಮರೆತು ಈ ನಾಡಿನ ಸಂಪತ್ತನ್ನು ಕಾಪಾಡಿಕೊಂಡು ಬರುತ್ತಾ ಇದ್ದೀರಿ. ಹಗಲು ರಾತ್ರಿ ನಡೆಯುವ ಕಂಬಳವನ್ನು ವೀಕ್ಷಿಸಿ, ಪ್ರೋತ್ಸಾಹಿಸುವ ಮೂಲಕ ಉಳಿಸಿ ಬೆಳೆಸಿಕೊಂಡು ಬಂದಿದ್ದೀರಿ ಇದಕ್ಕೆ ನಿಮಗೆಲ್ಲರಿಗೂ ಅಭಿನಂದನೆಗಳು ಸಲ್ಲಬೇಕು ಎಂದರು. ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಕಂಬಳ ಓಟ ಕೇವಲ ಮನರಂಜನೆ ಮಾತ್ರವಲ್ಲ ನಮ್ಮ ಕರಾವಳಿಯ ಜಾನಪದೀಯ ಹಾಗೂ ಈ ಮಣ್ಣಿನ ಸೌಹಾರ್ದತೆಯ ಕ್ರೀಡೆಯಾಗಿದೆ.ಈ ಕಂಬಳ ಪರಂಪರೆಯನ್ನು ಉಳಿಸಿ ಮುಂದುವರಿಸಿಕೊಂಡು ಹೋಗಬೇಕಾಗಿದೆ. ಸರಕಾರ ವತಿಯಿಂದಲೂ ಕೂಡಾ ಕಂಬಳಕ್ಕೆ ಅನುದಾನ…

