ಸೈಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೆಕೋಟೆಯಲ್ಲಿ ನಡೆಸಲ್ಪಡುತ್ತಿರು ಸೈಯದ್ ಮದನಿ ವಿದ್ಯಾಸಂಸ್ಥೆಗಳ ಮುಖ್ಯ ಶಿಕ್ಷಕರಾದ ಕೆ ಎಂ ಕೆ ಮಂಜುನಾಡಿಯವರು ಕಳೆದ 35 ವರ್ಷಗಳಿಂದ ಶಿಕ್ಷಕರ ಸಂಘಟನೆ ಸಮೇತ ತಾಲೂಕು ಜಿಲ್ಲೆ ರಾಜ್ಯದ ವಿವಿಧ ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದು, ಇವರ ಸಂಘಟನಾ ಚಾತುರ್ಯವನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಬೆಂಗಳೂರು ಇವರು ಸಂಘಟನಾ ಸ್ಪೂರ್ತಿ 2026 ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘದ ಮಹಾಸಮ್ಮೇಳನ ಮತ್ತು ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಕರ್ನಾಟಕ ರಾಜ್ಯ ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಉಪಸ್ಥಿತಿಯಲ್ಲಿ ಕರ್ನಾಟಕ ರಾಜ್ಯ ವಿಧಾನ ಸಭಾಧ್ಯಕ್ಷರಾದ ಡಾಕ್ಟರ್ ಯು ಟಿ ಖಾದರ್ ಫರೀದ್ ಹಾಜಿಯವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಶಾಸಕರುಗಳು ಹಾಗೂ ರಾಜ್ಯದ ವಿವಿಧ ಶಿಕ್ಷಣ ಸಂಘಟನೆಗಳ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.
Author: UllalaVani
ಬೆಂಗಳೂರು, ಮಾರ್ಚ್ 16: ವಿಧಾನ ಸಭೆ ಅಧಿವೇಶನದ ವೇಳೆ ಶಾಸಕರ ಪ್ರಶ್ನೆಗಳಿಗೆ ಸಚಿವರು ಸರಿಯಾಗಿ ಉತ್ತರ ನೀಡದ ಕಾರಣ ಗರಂ ಆಗಿ ಸದನ ಮುಂದೂಡಿದ್ದಲ್ಲದೆ ಪೀಠದಿಂದಲೇ ಎದ್ದು ಹೊರ ನಡೆದ ಯು.ಟಿ.ಖಾದರ್ ಅವರನ್ನು ಸಿಎಂ ಸಿದ್ದರಾಮಯ್ಯ ಅಂತಿಮವಾಗಿ ಮನವೊಲಿಸಿದ್ದಾರೆ. ಸ್ಪೀಕರ್ ಸಿಟ್ಟಿಗೆ ಕಂದಾಯ, ಅಲ್ಪಸಂಖ್ಯಾತ ಹಾಗೂ ಪಿಡಬ್ಲ್ಯುಡಿ ಇಲಾಖೆಗಳ ಒಟ್ಟು ಮೂವರು ಅಧಿಕಾರಿಗಳ ತಲೆದಂಡವಾಗಿದೆ. ಜೊತೆಗೆ ಸಮರ್ಪಕ ಉತ್ತರ ಕೊಡದ 3-4 ಇಲಾಖೆ ಕಾರ್ಯದರ್ಶಿಗಳಿಗೆ ನೋಟಿಸ್ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಉತ್ತರ ಒದಗಿಸದ ಪಿಡಬ್ಲ್ಯುಡಿ, ಪಶುಸಂಗೋಪನೆ, ಸಾರಿಗೆ, ಐಟಿ-ಬಿಟಿ, ಡಿಪಿಎಆರ್ ಮತ್ತು ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ನೀಡಲು ಸಿಎಂಗೆ ಸ್ಪೀಕರ್ ತಿಳಿಸಿರುವ ಹಿನ್ನೆಲೆ, ಹಿರಿಯ ಐಎಎಸ್ ಅಧಿಕಾರಿಗಳೂ ಆದ ಇಲಾಖಾ ಪ್ರಧಾನ ಕಾರ್ಯದರ್ಶಿಗಳಿಗೆ ಬಿಸಿ ಮುಟ್ಟಿದೆ. ಮತ್ತೊಂದೆಡೆ ಸಿಎಂ ಸೂಚನೆ ಹಿನ್ನೆಲೆ ಮಧ್ಯಾಹ್ನ ಸಿಎಸ್ ಶಾಲಿನಿ ರಜನೀಶ್ ಪ್ರಧಾನ ಕಾರ್ಯದರ್ಶಿಗಳ ಸಭೆ ಕರೆದಿದ್ದಾರೆ. ಅಂತಿಮವಾಗಿ ಸ್ವೀಕರ್ ಸಂಧಾನ ಯಶಸ್ವಿ ಹಿನ್ನೆಲೆ ವಿಧಾನಸಭೆ ಕಲಾಪ ಪುನಾರಂಭವಾಗಿದೆ. ಸಭೆಯಲ್ಲಿ ಲಿಖಿತ ರೂಪದ…
ಮಂಗಳೂರಿನಿoದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಗ್ಯಾಸ್ ಟ್ಯಾಂಕರ್ವೊAದು ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಕಟಪಾಡಿ ಬಳಿ ನಡೆದಿದೆ. ಟ್ಯಾಂಕರ್ನಿ0ದ ಅನಿಲ ಸೋರಿಕೆಯಾಗುತ್ತಿದೆ ಎಂಬ ವರದಿಯಾದ ಹಿನ್ನೆಲೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ. ಕೆಲ ಮೂಲಗಳ ಪ್ರಕಾರ ಮಂಗಳೂರಿನಿAದ ಅನಿಲ ಸೋರಿಕೆಯಾಗುತ್ತಿರುವುದು ತಿಳಿದುಬಂದಿದ್ದು, ಈ ಹಿನ್ನಲೆ ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕ ಸೃಷ್ಟಿಸಿದೆ. ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿಗಳು ತಕ್ಷಣವೇ ಸ್ಥಳಕ್ಕೆ ಧಾಮಿಸಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು, ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಕಾರ್ಯಾಚರಣೆ ಆರಂಭಿಸಿದ್ದಾರೆ. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ತಜ್ಞರ ತಂಡವು ಟ್ಯಾಂಕರ್ ಅನ್ನು ಸುರಕ್ಷಿತವಾಗಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದೆ. ಸಾರ್ವಜನಿಕರು ಈ ಮಾರ್ಗದಲ್ಲಿ ಸಂಚರಿಸುವಾಗ ಪರ್ಯಾಯ ರಸ್ತೆ ಬಳಸುವಂತೆ ಸೂಚಿಸಲಾಗಿದೆ.
ನವದೆಹಲಿ, ಮಾ. 16; 13 ವರ್ಷಗಳಿಂದ ಕೋಮಾದಲ್ಲಿದ್ದ ಹರೀಶ್ ರಾಣಾ (31)ಅವರಿಗೆ ಕುಟುಂಬಸ್ಥರು ಭಾವನಾತ್ಮಕ ವಿದಾಯ ಹೇಳಿದ್ದಾರೆ. ಏಮ್ಸ್ ಆಸ್ಪತ್ರೆಯಲ್ಲಿ ಮಲಗಿದ್ದ ಅವರ ಬೆಡ್ ಸುತ್ತ ನಿಂತ ಕುಟುಂಬಸ್ಥರು ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼಎಂದು ಮನವಿ ಮಾಡಿಕೊಂಡಿದ್ದಾರೆ. ರಾಣಾ ಅವರ ಕುಟುಂಬವು ಅವರೊಂದಿಗೆ ತಮ್ಮ ಕೊನೆಯ ಕ್ಷಣಗಳನ್ನು ಕಳೆಯುತ್ತಿರುವ 22 ಸೆಕೆಂಡ್ಗಳ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.ವೀಡಿಯೋದಲ್ಲಿ ರಾಣಾ ಅವರ ತಾಯಿ ಪಕ್ಕದಲ್ಲಿ ಭಾವುಕರಾಗಿ ಕುಳಿತಿದ್ದರು. ಬ್ರಹ್ಮ ಕುಮಾರಿ ಸಹೋದರಿಯೊಬ್ಬರು ಅವರ ಹಣೆಯ ಮೇಲೆ ತಿಲಕ ಹಚ್ಚಿ, ಎಲ್ಲರನ್ನೂ ಕ್ಷಮಿಸಿ, ಈಗ ಹೊರಡುವ ಸಮಯ ಎಂದು ತಲೆಯನ್ನು ಸವರುತ್ತಾ ಹೇಳಿರುವುದು ಸೆರೆಯಾಗಿದೆಕುಟುಂಬಸ್ಥರ ಅಂತಿಮ ವಿದಾಯದ ಬಳಿಕ ವೈದ್ಯರು ಕ್ರಮೇಣ ಅವರ ಜೀವರಕ್ಷಕ ಸಾಧನಗಳನ್ನು ಹಿಂತೆಗೆದುಕೊಂಡಿದ್ದಾರೆ. ಮಾ. 11 ರಂದು 2013ರಿಂದ ಕೋಮಾದಲ್ಲಿದ್ದ ರಾಣಾ ಅವರ ದಯಾಮರಣಕ್ಕೆ ಸುಪ್ರೀಂ ಕೋರ್ಟ್ಒಪ್ಪಿಗೆ ಸೂಚಿಸಿತ್ತು. ಇದು ದೇಶದಲ್ಲಿ ಮೊದಲನೆಯ ದಯಾಮರಣ ಪ್ರಕರಣವಾಗಿದೆ.2013 ರಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದ ನಂತರ ರಾಣಾ ಅವರ ಮೆದುಳಿಗೆ ಹಾನಿಯಾಗಿತ್ತು.…
ಕೊಣಾಜೆ ;ಬೋಳಿಯಾರು ಮಾಗಂಧಡಿಯಲ್ಲಿ ವಾಸವಿದ್ದ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕು ಮಲ್ಲಾಪುರದ ಮೂಲದ ಶೋಭಾ ಹನುಮಂತಪ್ಪ ಭಜಂತ್ರಿ (33) ಎಂಬವರು ನಾಪತ್ತೆಯಾಗಿದ್ದಾರೆ. ಮಾ.7ರoದು ಬೆಳಗ್ಗೆ ಮಕ್ಕಳನ್ನು ಬೋಳಿಯಾರು ಶಾಲೆಗೆ ಕರೆದುಕೊಂಡು ಹೋದವರು, ಅಲ್ಲಿಂದ ವಾಪಾಸು ಬಾರದೆ ನಾಪತ್ತೆಯಾಗಿದ್ದಾರೆ. ನಾಪತ್ತೆಯಾಗಿರುವ ಮಹಿಳೆ 5.5ಅಡಿ ಎತ್ತರ, ಸಾಧಾರಣ ಶರೀರ, ದುಂಡು ಮುಖ, ಎಣ್ಣೆ ಕಪ್ಪು ಮೈ ಬಣ್ಣ, ಮೆಳ್ಳೆಗಣ್ಣು ಇದೆ. ಕನ್ನಡ, ಹಿಂದಿ ಭಾಷೆಯನ್ನು ಬಲ್ಲವರಾಗಿದ್ದಾರೆ. ಈ ಚಹರೆಯ ಮಹಿಳೆ ಪತ್ತೆಯಾದರೆ ಕೊಣಾಜೆ ಠಾಣೆಯನ್ನು ಸಂಪರ್ಕಿಸಬೇಕಾಗಿ ಪೊಲೀಸರು ತಿಳಿಸಿದ್ದಾರೆ.
ಮಂಗಳೂರು, ಮಾ,16: ಮಂಗಳೂರು ತಾಲ್ಲೂಕಿನ ಮಿನಿ ವಿಧಾನಸೌಧದ ಮೊದಲ ಮಹಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನೊಂದಾವಣೆ ಕಚೇರಿಯಲ್ಲಿ ಕಳೆದ ಹದಿನೈದು ದಿನಗಳಿಂದ ಗಂಭೀರ ಸಮಸ್ಯೆ ಉಂಟಾಗಿದೆ. ಹಿರಿಯ ಉಪ ನೊಂದಣಾಧಿಕಾರಿ ಶಶಿಧರ್ ಅವರು ರಜೆ ಮೇಲೆ ಇರುವುದರಿಂದ ಕಚೇರಿಯ ಕೆಲಸಗಳು ವಿಳಂಬವಾಗುತ್ತಿವೆ. ಇದರಿಂದ ಸಾರ್ವಜನಿಕರು, ವಿಶೇಷವಾಗಿ ವೃದ್ಧರು ಹಾಗೂ ಮಹಿಳೆಯರು ಹೆಚ್ಚಿನ ತೊಂದರೆ ಅನುಭವಿಸುತ್ತಿದ್ದಾರೆ. ಸಾಮಾನ್ಯವಾಗಿ ಈ ಕಚೇರಿಯಲ್ಲಿ ಇಬ್ಬರು ಉಪ ನೊಂದಣಾಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಾರೆ. ಆದರೆ ಈಗ ಕವಿತಾ ಎಂಬ ಅಧಿಕಾರಿಯೊಬ್ಬರೇ ಕೆಲಸ ನಿರ್ವಹಿಸುತ್ತಿದ್ದು, ಎಲ್ಲಾ ಜವಾಬ್ದಾರಿಗಳು ಒಬ್ಬರ ಮೇಲೇ ಬಿದ್ದಿವೆ. ಪ್ರತಿದಿನ ನೂರಾರು ಜನರು ದಸ್ತಾವೇಜುಗಳ ನೋಂದಣಿಗಾಗಿ ಕಚೇರಿಗೆ ಬರುತ್ತಿದ್ದಾರೆ. ಆದರೆ ಸಿಬ್ಬಂದಿ ಕೊರತೆಯಿಂದ ದಿನಕ್ಕೆ ನೂರು ಕೆಲಸ ಆಗಬೇಕಾದಲ್ಲಿ ಈಗ ಇಪ್ಪತ್ತು ನೋಂದಣಿಯೂ ಸರಿಯಾಗಿ ಆಗುತ್ತಿಲ್ಲ ಎಂಬ ಆರೋಪ ಕೇಳಿಬರುತ್ತಿದೆ. ಇದರ ಪರಿಣಾಮವಾಗಿ ಜನರು ದಿನಗಟ್ಟಲೆ ಕಚೇರಿಗೆ ಓಡಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಈ ಸಮಸ್ಯೆಯಿಂದ ಮಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ವಿಶೇಷವಾಗಿ ವಿಧಾನಸಭಾಧ್ಯಕ್ಷ ಯು.ಟಿ.…
ಉಳ್ಳಾಲ ತಾಲ್ಲೂಕಿನ ಇರಾ ಗ್ರಾಮದ ಬಾಳೆಪುಣಿ ಎಸ್ ಎಸ್ ಎಫ್ ಶಾಖಾ ವತಿಯಿಂದ ಬದ್ರಿಯಾ ಜುಮಾ ಮಸೀದಿಯಲ್ಲಿ ಅಸರ್ ನಮಾಝ್ ಬಳಿಕ ಮಾಸಿಕ ಬುರ್ಧಾ ಮಜ್ಲಿಸ್ ಶೈಖುನಾ ಅಲಿ ಫೈಝಿ ಬಾಳೆಪುಣಿ ಉಸ್ತಾದ್ ಅವರ ನೇತೃತ್ವದಲ್ಲಿ ನಡೆಯಿತು. ಬಳಿಕ ಮಸೀದಿ ವಠಾರದಲ್ಲಿ ಬೃಹತ್ ಇಫ್ತಾರ್ ಕೂಟವನ್ನು ಆಯೋಜಿಸಿದರು, ಊರಿನ ಹಿರಿಯರು,ಕಿರಿಯರು ಮತ್ತು ಸಂಘಟಣೆಯ ಕಾರ್ಯಕರ್ತರು ಈ ಒಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿದರು.
ಮಂಗಳೂರು: ರಸ್ತೆ ಬದಿಯಲ್ಲಿ ಶೇಖರಣೆಯಾದ ಜಲ್ಲಿಕಲ್ಲುಗಳ ಮಧ್ಯೆ ಕಾಲಿನ ಬೆರಳುಗಳು ಸಿಲುಕಿ ಇಬ್ಬರು ಮಕ್ಕಳ ಜತೆಗಿದ್ದ ತಾಯಿ ಕೆಳಗೆ ಬಿದ್ದು, ಬೆರಳಿಗೆ ಗಾಯಗೊಂಡಿದ್ದು, ಆಕೆಯ ಶುಶ್ರೂಷೆ ನಡೆಸಿ ಪಂಪ್ವೆಲ್ ರಿಕ್ಷಾ ಪಾರ್ಕಿನ ರಿಕ್ಷಾ ಚಾಲಕರು ಹಾಗೂ ಟೈಂ ಕೀಪರ್ ಮಾನವೀಯತೆ ಮೆರೆದಿರುವ ಪ್ರಸಂಗ ಪಂಪ್ವೆಲ್ ನಲ್ಲಿ ಮಾ.೧೪ರ ೭.೩೦ರ ಸುಮಾರಿಗೆ ಸಂಭವಿಸಿದೆ. ತಾಯಿ ತನ್ನಿಬ್ಬರು ಮಕ್ಕಳನ್ನು ತೋಳಿನಲ್ಲಿ ಮತ್ತು ಕೈಯಲ್ಲಿ ಹಿಡಿದುಕೊಂಡು ಬರುವಾಗ ಪಂಪ್ವೆಲ್ ರಸ್ತೆಬದಿಯಲ್ಲಿ ಸೇರಿರುವ ಜಲ್ಲಿಕಲ್ಲಿಗೆ ಕಾಲ ಬೆರಳುಗಳು ಸಿಲುಕಿ ಮಗು ಸಹಿತ ಕೆಳಗೆಬಿದ್ದಿದ್ದಾರೆ. ತೊಕ್ಕೊಟ್ಟು ಕಡೆಗೆ ಸಂಚರಿಸುವ ಬಸ್ಸುಗಳು ನಿಲ್ಲುವ ಸ್ಥಳದಲ್ಲೇ ಮಹಿಳೆ ರಸ್ತೆಗೆ ಬಿದ್ದಿದ್ದಾರೆ. ತಕ್ಷಣವೇ ಸ್ಥಳದಲ್ಲಿದ್ದ ರಿಕ್ಷಾ ಚಾಲಕರು ತಾಯಿ ಮಗು ಇಬ್ಬರನ್ನು ಮೇಲಕ್ಕೆತ್ತಿದ್ದಾರೆ. ಬಳಿಕ ತಾಯಿಯ ಕಾಲು ಬೆರಳಿಗೆ ಆದ ಗಂಭೀರ ಗಾಯಕ್ಕೆ ಪ್ರಾಥಮಿಕ ಚಿಕಿತ್ಸೆ ಮಾಡಿ, ರಿಕ್ಷಾದಲ್ಲೇ ಕುಳ್ಳಿರಿಸಿ ಬ್ಯಾಂಡೇಜ್ ಸುತ್ತಿ ಮಾನವೀಯತೆಯನ್ನು ಎತ್ತಿ ಹಿಡಿದಿದ್ದಾರೆ. ರಾತ್ರಿ ೯ ಗಂಟೆಯಾಗುತ್ತಿರುವಂತೆ ಒನ್ ಆಂಡ್ ಹಾಫ್ ಹೆಸರಿನಲ್ಲಿ ಅಧಿಕ ಬಾಡಿಗೆ ಪಡೆಯುವ ನಗರದ…
ಮಂಗಳೂರು, ಮಾ. 14 : ಮಧ್ಯಪ್ರಾಚ್ಯ ಯುದ್ಧ ಕಾರ್ಮೋಡದಿಂದ ಕರಾವಳಿ ಭಾಗದಿಂದ ವಿದೇಶಕ್ಕೆ ರಫ್ತಾಗುತ್ತಿದ್ದ ಮಲ್ಲಿಗೆ ಹೂವುಗಳ ಬೇಡಿಕೆ ಕಮರಿದರೆ, ಮೀನುಗಳ ರಫ್ತು ಬಹುತೇಕ ಸ್ಥಗಿತಗೊಂಡಿದೆ. ಇದು ಕರಾವಳಿಯ ಆರ್ಥಿಕ ವ್ಯವಸ್ಥೆಯ ಮೇಲೆ ಭಾರಿ ಪರಿಣಾಮ ಬೀರಲಿದ್ದು, ವಿಶೇಷವಾಗಿ ಕಸ್ಟಮ್ಸ್ ಇಲಾಖೆಯ ಆದಾಯಕ್ಕೆ ಹೊಡೆತ ಬೀಳಲಿದೆ. ದುಬೈ, ಅಬುಧಾಬಿ, ಕುವೈಟ್, ಸೌದಿ, ಕತಾರ್ ಸೇರಿದಂತೆ ಕೊಲ್ಲಿ ರಾಷ್ಟ್ರಗಳಲ್ಲಿ ಕನ್ನಡಿಗರ ಸಂಖ್ಯೆ 8 ಲಕ್ಷಕ್ಕೂ ಅಧಿಕವಿದೆ. ಅವರ ಬೇಡಿಕೆಯ ಮೇರೆಗೆ ಮಂಗಳೂರಿನಿಂದ ಹೂ, ಮೀನು, ತರಕಾರಿ, ಹಣ್ಣುಹಂಪಲು, ಬಿಡಿಭಾಗಗಳು ಕಾರ್ಗೋ ಮುಖಾಂತರ ಸಾಗಾಟ ಮಾಡಲಾಗುತ್ತಿತ್ತು. ಮುಂಬಯಿ ಏಜೆಂಟರು, ಮಂಗಳೂರು ಮತ್ತು ಉಡುಪಿಯಿಂದ ತಮಗೆ ಬೇಕಾದಷ್ಟು ಮಲ್ಲಿಗೆ ಹೂ ಆರ್ಡರ್ ಮಾಡುತ್ತಾರೆ. ದಿನಕ್ಕೆ 250-300 ಅಟ್ಟೆ ಮಲ್ಲಿಗೆ ಮುಂಬಯಿಗೆ ಕಳುಹಿಸಿದರೆ ಅದರಲ್ಲಿ 150-200 ಆಟ್ಟೆ ಮಲ್ಲಿಗೆ ಕೊಲ್ಲಿ ರಾಷ್ಟ್ರಕ್ಕೆ ಕಳುಹಿಸಿಕೊಡುತ್ತಾರೆ ಎಂದು ರಖಂ ಮಲ್ಲಿಗೆ ವ್ಯಾಪಾರಿ ವಿನ್ಸೆಂಟ್ ..ವಿಮಾನ ಮೂಲಕ ಅಂಚೆ, ಬಯೋ ಸ್ಯಾಂಪಲ್, ಚಿನ್ನಾಭರಣ, ಏಡಿಗಳು, ಮೀನು, ಕನ್ಸಲ್ ಕಾರ್ಗೊ, ಮುದ್ರಿತ ಸಾಮಗ್ರಿ, ದಾಖಲೆಗಳು,…
ಪುತ್ತೂರು,ಮಾ. 14 : ಬೆಳ್ತಂಗಡಿ ತಾಲೂಕಿನ ಕರಾಯ ಗ್ರಾಮದ ಶೆಟ್ಟಿಕೋಡಿ ಎಂಬಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕೋಳಿ ಅಂಕಕ್ಕೆ ದಾಳಿ ನಡೆಸಿದ ಪೊಲೀಸರು ಐವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ನಾಲ್ಕು ಹುಂಜಗಳನ್ನು ವಶಕ್ಕೆ ಪಡೆದಿದ್ದಾರೆ. ಕೊಡಂಬೆಟ್ಟು ಗ್ರಾಮದ ಮುಗೇರ ಮನೆಯ ಅಂಕಿತ್, ಉರುಡಾಯಿ ನಿವಾಸಿ ಯಶೋಧರ, ಮುಗೇರ ಮನೆಯ ಶಿವಪ್ಪ, ತಣ್ಣೀರುಪಂಥ ಗ್ರಾಮದ ಮುಂದಿ ಮನೆಯ ಕರುಣಾಕರ ಪೂಜಾರಿ, ಮಚ್ಚಿನ ಗ್ರಾಮದ ಮಡಕ್ಕಿಲ ಮನೆಯ ಉಮೇಶ ಅವರ ಮೇಲೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ಥಳದಿಂದ ನಾಲ್ಕು ಅಂಕದ ಹುಂಜ, ಜೂಜಾಟಕ್ಕೆ ಬಳಸಿದ 2,500 ರೂ. ನಗದು, ಎರಡು ಕೋಳಿ ಬಾಳು, ಒಂದು ಅಟೋ ರಿಕ್ಷಾವನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.ಶೆಟ್ಟಿಕೋಡಿ ಎಂಬಲ್ಲಿ ಮೈದಾನವೊಂದರಲ್ಲಿ ಮಾ.13ರಂದು ಕೋಳಿ ಅಂಕ ನಡೆಯುತ್ತಿದ್ದ ವೇಳೆ ಉಪ್ಪಿನಂಗಡಿ ಪೊಲೀಸ್ ಠಾಣೆಯ ಪ್ರೊಬೆಷನರಿ ಐಪಿಎಸ್ ಅನನ್ಯ ಶ್ರೀವತ್ಸವ್ ಅವರ ನೇತೃತ್ವದಲ್ಲಿ ದಾಳಿ ನಡೆದಿದೆ.

