Author: UllalaVani

Kannada News From Coastal Karnataka

ಏಡಿಯ ಕೈಗೆ ಕೊಂಬು ಬಂತೇ ?!ಏನಿದು ಕಲಿಗಾಲ ಅಂತೀರಾ? ಮಾಂಸಹಾರಿಗಳಲ್ಲಿ ಏಡಿ ಪ್ರಿಯರು ಈ ಮಾಹಿತಿ ಓದಿದ ಬಳಿಕ ಇನ್ನಾದರೂ ತಾವು ಪದಾರ್ಥ ಮಾಡಲು ತಂದ ಏಡಿ (ತುಳುವಿನಲ್ಲಿ ಡೆಂಜಿ ಅಥವಾ ಜೆಂಜಿ) ಯ ಕೈಕಾಲು ಮುರಿಯುವ ಮೊದಲು ಕೊಂಬು ಗಮನಿಸಲು ಪ್ರಾರಂಭಿಸಬಹುದು. ಕಥೆ ಏನಪ್ಪಾ ಅಂದ್ರೆ, ಕಳೆದ ವಾರ ತೊಕ್ಕೊಟ್ಟು ಬಳಿಯ ಕಲ್ಲಪುವಿನ ಗಂಡಿ ನಿವಾಸಿ ವನಿತಾ ಗಿರೀಶ್ ಪದಾರ್ಥಕ್ಕೆಂದು ಏಡಿ ಖರೀದಿಸಿದ್ದರು. ಮೀನು ತುಂಡರಿಸಿ ಶುಚಿಗೊಳಿಸುವುದು ಸುಲಭ. ಆದರೆ ಏಡಿಯನ್ನು ಪದಾರ್ಥಕ್ಕೆ ತಯಾರು ಮಾಡುವುದು ಸ್ವಲ್ಪ ಕಷ್ಟ. ತಿನ್ನುವುದು ಇನ್ನೂ ಕಷ್ಟ. ಆದರೆ ಅದರ ರುಚಿಯಾದ ಮಾಂಸವು ಈ ಎಲ್ಲಾ ಕಷ್ಟಗಳನ್ನು ಮರೆಸುತ್ತದೆ ಎನ್ನುವುದು ಏಡಿ ಪ್ರಿಯರ ಅಂಬೋಣ.ವನಿತಾ ಅವರು ಏಡಿಗಳನ್ನು ತುಂಡರಿಸುತ್ತಿದ್ದಂತೆ ಒಂದು ಏಡಿಯ ಕಾಲಿನ ಮೇಲೆ ಒಂದು ವಿಶೇಷ ಬೆಳವಣಿಗೆ ಕಂಡು ಆಶ್ಚರ್ಯ ಚಕಿತರಾದರು. ಸಾಮಾನ್ಯವಾಗಿ ಏಡಿಯ ಕೈಕಾಲುಗಳ ತುದಿಯ ಮೇಲೆ ಮತ್ತೊಂದು ಬೆಳವಣಿಗೆ ಇರುವುದಿಲ್ಲ. (ಚಿತ್ರ ನೋಡಿ) ಏಡಿಯನ್ನು ಸ್ವಚ್ಛ ಮಾಡುತ್ತಿದ್ದ ಅವರು ಈ…

Read More

ಕರಾವಳಿ ಭಾಗದ ಪ್ರವಾಸೋದ್ಯಮವನ್ನು ಕೇರಳ ಮತ್ತು ಗೋವಾ ಮಾದರಿಯಲ್ಲಿ ಅಭಿವೃದ್ಧಿಪಡಿಸಬೇಕು. ಇದಕ್ಕಾಗಿ ಪ್ರದೇಶಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿಯನ್ನು ರೂಪಿಸಲಾಗುವುದು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇವರು ಕರಾವಳಿ ಕರ್ನಾಟಕ ಪ್ರವಾಸೋದ್ಯಮ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಲುವಾಗಿ ಮಂಗಳೂರಿಗೆ ಆಗಮಿಸಿದ್ದು, ಮಂಗಳೂರು ಅಂತರಾಷ್ಟಿçÃಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ್ರು. “ಈ ಭಾಗದ ಪ್ರವಾಸೋದ್ಯಮವನ್ನು ಉತ್ತೇಜಿಸಲು ನಾವು ಹೊಸ ಯೋಜನೆಗಳನ್ನು ರೂಪಿಸಲು ನಿರ್ಧರಿಸಿದ್ದೇವೆ. ರಾಜ್ಯದ ಕರಾವಳಿ ಭಾಗವನ್ನು ಹತ್ತಿರದ ಕೇರಳ ಮತ್ತು ಗೋವಾ ರಾಜ್ಯಗಳ ಮಾದರಿಯಲ್ಲಿ ಮುನ್ನಡೆಯಿಸಲು ಸರ್ಕಾರ ಕೆಲಸಮಾಡುತ್ತಿದೆ ಎಂದ್ರು. ಇದೇ ವೇಳೆ ಅವರು ಸ್ಥಳೀಯ ಉದ್ಯೋಗ ಸೃಷ್ಟಿ ಕುರಿತಂತೆ ಮಾತನಾಡಿದ್ರು.

Read More

ಮಾಡೂರು ; ಶಿರ್ಡಿ ಸಾಯಿ ಬಾಬಾ ಮಂದಿರದಲ್ಲಿ “ಹೇ ಸಾಯಿನಾಥ” ಎಂಬ ಕನ್ನಡ ಭಕ್ತಿಪ್ರಧಾನ ಗೀತೆ ಬಿಡುಗಡೆಗೊಂಡಿದೆ. ತೃಪ್ತಿ ಉಚ್ಚಿಲ ಅವರ ಕಂಠಸಿರಿಯಲ್ಲಿ ಹಾಡು ಮೂಡಿ ಬಂದಿದ್ದು, ಸತ್ಯನಾರಾಯಣ್ ಐಲ್ ಸಂಗೀತ ಸಂಯೋಜನೆ ಮಾಡಿದ್ದಾರೆ. ನವೀನ್ ಬೆಲ್ಚಡ ಅಡ್ಕ ಅವರ ಸಾಹಿತ್ಯವಿದ್ದು, ಬತು ಕುಳಾಲ್ ಅವರ ಕೈಚಳಕದಲ್ಲಿ ಸುಮಧುರ ಗೀತೆ ನಿರ್ಮಾಣಗೊಂಡಿದೆ. ಮಂದಿರದ ಅರ್ಚಕರಾದ ಎನ್ ವಿಶ್ವನಾಥ ಶಾಂತಿ ಭಟ್ ಅವರು ಭಕ್ತಿಗೀತೆ ರಚನೆಯ ಬಗ್ಗೆ ಮತನಾಡಿದ್ದಾರೆ. ಇದೇ ವೇಳೆ ಕೆ ಟಿ ಸುವರ್ಣ ಅವರು ಮಾತನಾಡಿ, ಒಂದೊಳ್ಳೆಯ ಸಾಹಿತ್ಯ, ಸಂಗೀತದ ಜೊತೆ ಸಾಯಿನಾಥರ ಭಕ್ತಿಗೀತೆ ಚೆನ್ನಾಗಿ ಮೂಡಿಬಂದಿದೆ. ಇಂತಹ ಹಲವು ಹಾಡುಗಳನ್ನು ರಚಿಸುವಂತಾಗಲಿ ಎಂದು ಹಾರೈಸಿದ್ರು. ಇನ್ನು ಈ ಭಕ್ತಿಗೀತೆ ತೃಪ್ತಿ ಉಚ್ಚಿಲ್ ಯೂಟ್ಯುಬ್ ಚಾನಲ್‌ನಲ್ಲಿ ಲಭ್ಯವಿದೆ. ಇದೇ ಸಂದರ್ಭ ಗಾಯಕಿ ತೃಪ್ತಿ ಉಚ್ಚಿಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭ ಮಂದಿರದ ಸಮಿತಿ ಪದಾಧಿಕಾರಿಗಳು, ಸದಸ್ಯರು ಸೇರಿದಂತೆ ಹಲವರು ಉಪಸ್ಥಿತರಿದ್ರು.

Read More

ಉಳ್ಳಾಲ: ಸೌತ್ ಕರ್ನಾಟಕ ಸಲಫಿ ಮೂವ್ ಮೆಂಟ್ ತಲಪಾಡಿ, ಮಸ್ಜುದುಲ್ ಅಬ್ರಾರ್ ಇದರ ಆಶ್ರಯದಲ್ಲಿ ಏಕದಿನ ಸಲಫಿ ಸಮ್ಮೇಳನ ಮತ್ತು ಎರಡನೇ ಸನದು ದಾನ ಕಾರ್ಯಕ್ರಮ ಜ.11 ರಂದು ಅಬ್ರಾರ್ ನಗರ ತಲಪಾಡಿ ಯಲ್ಲಿ ನಡೆಯಲಿದ್ದು ,ಭಾನುವಾರ ಬೆಳಿಗ್ಗೆ 9:30 ರಿಂದ ರಾತ್ರಿ 10:00 ರವರೆಗೆ ಈ ಕಾರ್ಯಕ್ರಮ ನಡೆಯಲಿದೆ ಎಂದು ಎಸ್.ಕೆ.ಎಸ್.ಎಂ.ಯೂತ್.ಕಾರ್ಯದರ್ಶಿಶಿಹಾಬ್ ತಲಪಾಡಿ ಹೇಳಿದರು. ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮ ಪ್ರಯುಕ್ತ ಭಾನುವಾರ ಬೆಳಿಗ್ಗೆ 9.30 ಕ್ಕೆ ಸೌತ್ ಕರ್ನಾಟಕ ಸಲಫಿ ಮೂವ್ ಮೆಂಟ್ ತಲಪಾಡಿ ಘಟಕದ ಅಧೀನದ ದಾರುಲ್ ಉಲೂಮ್ ಮಹಿಳಾ ಕಾಲೇಜು ವಿದ್ಯಾರ್ಥಿಗಳ ಮಹಿಳಾ ಸಮಾವೇಶ,ಎರಡನೇ ಸನದುದಾನ, ಅಸರ್ ನಮಾಝ್ ಬಳಿಕ ದ ಅವಾ ಸಮಾವೇಶ, ಸಂಜೆ ಸಮಾರೋಪ ಸಮಾರಂಭ ನಡೆಯಲಿದೆ.ಶೇಖ್ ಸುಲ್ತಾನ್ ಸಯೀದ್ ಬಿಲಾಲ್,ಮೌಲವಿ ಅನ್ಸಾರ್ ನನ್ಮಂಡ , ಮೌಲವಿ ಮುನೀರ್ ಮದನಿ ಸಹಿತ ಹಲವು ಗಣ್ಯರು ಭಾಗವಹಿಸಲಿದ್ದಾರೆ ಎಂದರು. ಸುದ್ದಿ ಗೋಷ್ಠಿಯಲ್ಲಿ ಅಬ್ರಾರ್ ಮಸೀದಿ ಉಪಾಧ್ಯಕ್ಷ ಹಮ್ಮದ್ ಕೆ.ಸಿ ರೋಡ್, ಕಾರ್ಯದರ್ಶಿ…

Read More

ಮಂಗಳೂರು: ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ ನಿಟ್ಟೆ ವಿನಯ ಹೆಗ್ಡೆ ಅವರ ಜೀವನ ಶೈಲಿ ಎಲ್ಲರಿಗೂ ಆದರ್ಶ, ಅವರ ಕೊಡುಗೆ ಸಮಾಜಕ್ಕೆ ದೊಡ್ಡದು. ಅವರ ನೆನಪು ಶಾಶ್ವತ. ಸರಳ ಸಜ್ಜನಿಕೆಯ ವ್ಯಕ್ತಿತ್ವದ ವಿನಯ ಹೆಗ್ಡೆ ಅವರು ನಮ್ಮೆಲ್ಲರ ಮನಸ್ಸಿನಲ್ಲಿ ಚಿರಕಾಲ ಉಳಿಯುತ್ತದೆ ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾದ ಕೆ ಅಜಿತ್ ಕುಮಾರ್ ರೈ ಮಾಲಾಡಿ ತಿಳಿಸಿದರು. ಬಂಟ್ಸ್ ಹಾಸ್ಟೇಲ್ ಶ್ರೀ‌ರಾಮಕೃಷ್ಣ ಕಾಲೇಜ್ ಬಳಿ ಇರುವ ಶ್ರೀಮತಿ ಗೀತಾ ಎಸ್ ಎಂ ಶೆಟ್ಟಿ ಸಭಾಂಗಣದಲ್ಲಿ ಇತ್ತೀಚೆಗೆ ಅಗಲಿದ ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ವಿನಯ ಹೆಗ್ಡೆಯವರಿಗೆ ಸಲ್ಲಿಸಿದ ಶ್ರದ್ದಾಂಜಲಿ ನುಡಿನಮನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ವಿನಯ ಹೆಗ್ಡೆಯವರ ಜೀವನ ಶೈಲಿ ನಮಗೆಲ್ಲರಿಗೂ ಮಾದರಿ. ಅವರಂತೆ ಇನ್ನೋರ್ವ ಬಂಟ ಇಲ್ಲ. ವಿನಯ ಹೆಗ್ಡೆಯವರ ನೆನಪು ನಮ್ಮ ಮನಸ್ಸಿನಲ್ಲಿ ಚಿರಕಾಲ ಉಳಿಯುತ್ತದೆ. ಅವರು ನಡೆದ ಹಾದಿಯಲ್ಲಿ ನಾವು ಮುನ್ನಡೆಯೋಣ ಎಂದರು. ಕರ್ನಲ್ ಶರಶ್ಚಂದ್ರ ಭಂಡಾರಿ ಮಾತನಾಡಿ…

Read More

ಜನವರಿ 10: ಶಬರಿಮಲೆ ಅಯ್ಯಪ್ಪನ ದರ್ಶನ ಮುಗಿಸಿ ಬರುವ ವೇಳೆ ನಿಂತಿದ್ದ ಲಾರಿಗೆ ಅಯ್ಯಪ್ಪ ಭಕ್ತರಿದ್ದ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನಪ್ಪಿದ ಘಟನೆ ತುಮಕೂರು ಜಿಲ್ಲೆಯ ಕೋರಾ ಸಮೀಪದ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಬಳಿ ಸಂಭವಿಸಿದೆ. ಮೃತರನ್ನು ವೆಂಕಟೇಶ್ (30), ಮಾರುತಪ್ಪ (44) ಮತ್ತು ಸಾಕ್ಷಿ (7) ಎಂದು ಗುರುತಿಸಲಾಗಿದೆ. 11 ಜನರು ಅಯ್ಯಪ್ಪ ಸ್ವಾಮಿ ದರ್ಶನ ಪಡೆದು ಕ್ರೂಜರ್ ವಾಹನದಲ್ಲಿ ವಾಪಸ್ ಊರಿಗೆ ತೆಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಇವರೆಲ್ಲರೂ ಕೊಪ್ಪಳ ಜಿಲ್ಲೆಯ ಕುಕ್ಕನೂರು ಗ್ರಾಮದವರು ಎಂದು ಗುರುತಿಸಲಾಗಿದೆ.ಶಬರಿಮಲೆ ಅಯ್ಯಪ್ಪ ದರ್ಶನ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕ್ರೂಸರ್​​ನಲ್ಲಿ ಒಟ್ಟು 12 ಮಂದಿ ಪ್ರಯಾಣ ಮಾಡುತಿದ್ದ ಬಗ್ಗೆ ಮಾಹಿತಿ ಲಭ್ಯವಾಗಿದೆ. ಅಪಘಾತದಲ್ಲಿ ಗಾಯಗೊಂಡ ಇಬ್ಬರ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಮಗಳನ್ನು ಕಳೆದುಕೊಂಡು ಆಕೆಯ ತಂದೆ ಉಲಗಪ್ಪ ಕಣ್ಣೀರು ಹಾಕುತ್ತಿದ್ದಾರೆ. ಸಾಕ್ಷಿ…

Read More

ಬಂಟ್ವಾಳ, ಜ. 10 : ಮನೆಗೆ ಹೋಗಲು ರಸ್ತೆ ಮಾಡಿಕೊಡಿ ಎಂದು ಕುಟುಂಬವೊಂದು ಬಂಟ್ವಾಳ ತಹಶಿಲ್ದಾರ್ ಕಚೇರಿಯ ಮೆಟ್ಟಿಲ ಮೇಲೆ ಧರಣಿ ಕುಳಿತಕೊಂಡ ಘಟನೆ ನಡೆದಿದ್ದು, ಇವರ ಹೋರಾಟಕ್ಕೆ ಅಂಬೇಡ್ಕರ್ ತತ್ವ ಹಿತರಕ್ಷಣಾ ವೇದಿಕೆ ಕೈ ಜೋಡಿಸಿದೆ. ಪುಣಚ ಗ್ರಾಮದ ಸುಣ್ಣಂಗಳ ರಾಮಣ್ಣ ನಾಯ್ಕ ಹಾಗೂ ಅವರ ಪತ್ನಿ ಸುನಂದಾ ಮತ್ತು ಮಕ್ಕಳು ರಸ್ತೆಗಾಗಿ ತಹಶಿಲ್ದಾರ್ ಕಚೇರಿಯ ಮುಂಭಾಗದಲ್ಲಿ ಧರಣಿ ಕುಳಿತಕೊಂಡಿದ್ದಾರೆ. ಕಳೆದ 75 ವರ್ಷಗಳಿಂದ ಕಾಲುದಾರಿ ಮಾತ್ರ ಇದ್ದು ರಸ್ತೆಗಾಗಿ ನಿರಂತರವಾಗಿ ಹೋರಾಟ ಮಾಡುತ್ತಲೇ ಬಂದಿದ್ದು, ಹೊರತು ಲಾಭವಾಗಿಲ್ಲ ಎಂದು ಪ್ರತಿಭಟನೆ ನಿರತ ಕುಟುಂಬ ಹೇಳಿದೆ. ಇನ್ನು ತಿಂಗಳ ಹಿಂದೆ ರಾಮಣ್ಣ ಅವರ ಪತ್ನಿ ಸುನಂದಾ ಅವರಿಗೆ ಆರೋಗ್ಯ ಸಮಸ್ಯೆಯಾದಾಗ ರಸ್ತೆಯಿಲ್ಲದ ಕಾರಣ ಆಸ್ಪತ್ರೆಗೆ ಹೋಗಲು ಸಾಕಷ್ಟು ಕಷ್ಟ ಪಡಬೇಕಾಯಿತು. ಇಂತಹ ಸಂದರ್ಭಗಳಲ್ಲಿ ರಸ್ತೆ ಬಹಳ ಪ್ರಾಮುಖ್ಯತೆ ಪಡೆಯುತ್ತದೆ. ಈ ಬಗ್ಗೆ SC ST ಸಭೆಯಲ್ಲಿ ಕೂಡ ಅಧಿಕಾರಿಗಳ ಗಮನಕೆ ತಂದಿದ್ದೇವೆ. ಇನ್ನು ತಾಲೂಕು ಕಚೇರಿಗೆ ಬೀಗ ಹಾಕಿ ಪ್ರತಿಭಟನೆ…

Read More

ಬಂಟ್ವಾಳ, ಜ. 10: ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಸಮೀಪದ ಉಜಿರಾಡಿಯಲ್ಲಿ ಆಟೋ ರಿಕ್ಷಾವೊಂದು ಚಾಲಕ‌ನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ಹೊಂಡಕ್ಕೆ ಉರುಳಿದ ಘಟನೆ ನಡೆದಿದೆ. ಘಟನೆಯಲ್ಲಿ ಆಟೋ ರಿಕ್ಷಾ ಚಾಲಕ, ಪೆರಿಯಪಾದೆ ನಿವಾಸಿ ಸಂಶುದ್ದೀನ್ ಹಾಗೂ ಇತರ ನಾಲ್ಕೈದು ಮಂದಿ ವಿದ್ಯಾರ್ಥಿಗಳು ಗಾಯಗೊಂಡು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ತೆರಳಿದ್ದಾರೆ. ಅವರು ಶಾಲೆಯಿಂದ ವಿದ್ಯಾರ್ಥಿಗಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದಾಗ ಘಟನೆ ನಡೆದಿದ್ದು, ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

Read More

ಬೆಳ್ತಂಗಡಿ, ಜ. 10 : ಚಾರ್ಮಾಡಿ ಘಾಟ್ ರಸ್ತೆಯ ಎರಡು ಮತ್ತು ಮೂರನೇ ತಿರುವಿನ ಮಧ್ಯೆ ಶುಕ್ರವಾರ ರಾತ್ರಿ ಕಾಡಾನೆಯೊಂದು ಪ್ರತ್ಯಕ್ಷವಾಗಿದ್ದು, ಪರಿಣಾಮ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಯಿತು. ರಾತ್ರಿ ಸುಮಾರು 9.45ರ ಸುಮಾರಿಗೆ ಮರವೊಂದನ್ನು ಮುರಿದು ರಸ್ತೆಯ ಮಧ್ಯದಲ್ಲೇ ನಿಂತ ಆನೆಯು ಅದರ ಎಲೆಗಳನ್ನು ತಿನ್ನುತ್ತಾ ನಿಂತಿತ್ತು. ಈ ಸಂದರ್ಭದಲ್ಲಿ ವಾಹನ ಸವಾರರು ಆನೆಯನ್ನು ಕಾಡಿನೊಳಗೆ ಅಟ್ಟಲು ಪ್ರಯತ್ನಿಸಿದರು. ಆದರೆ ಆನೆಯು ಸ್ಥಳದಿಂದ ಕದಲದ ಕಾರಣ ವಾಹನಗಳು ರಸ್ತೆಯಲ್ಲೇ ಸಾಲುಗಟ್ಟಿ ನಿಲ್ಲುವಂತಾಯಿತು.ಈ ಪ್ರದೇಶದಲ್ಲಿ ಮೊಬೈಲ್ ನೆಟ್‌ವರ್ಕ್ ಸಂಪರ್ಕ ಇಲ್ಲದ ಕಾರಣ, ಆನೆಯ ಉಪಸ್ಥಿತಿಯ ಬಗ್ಗೆ ಮಾಹಿತಿ ನೀಡಲು ಪ್ರಯಾಣಿಕರು ಹರಸಾಹಸ ಪಡಬೇಕಾಯಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

Read More

ದಕ್ಷಿಣಕನ್ನಡ: ಚಾರ್ಮಾಡಿ ಘಾಟಿಯ ಎರಡನೆಯ ತಿರುವಿನಲ್ಲಿ ಮೆಕ್ಕೆ ಜೋಳ ಸಾಗಾಟದ ಲಾರಿಯೊಂದು ಬೆಂಕಿಗೆ ಆಹುತಿಯಾದ ಘಟನೆ ಶನಿವಾರ ಬೆಳಗ್ಗಿನ ಜಾವ ಸಂಭವಿಸಿದೆ. ಸ್ಥಳಕ್ಕೆ ಆಗಮಿಸಿದ ಸ್ಥಳೀಯರು ಹಾಗು ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಲಾರಿ ಸಂಪೂರ್ಣ ಸುಟ್ಟು ಕರಕಲಾಗಿದೆ ಎಂದು ತಿಳಿದು ಬಂದಿದೆ. ಅದೃಷ್ಟವಶಾತ್‌ ಮೂವರು ಪ್ರಾಣಾಪಯಾದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟ್‌ನಲ್ಲಿ ಜಾವಗಲ್‌ನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಮೆಕ್ಕೆಜೋಳ ಸಾಗಾಟದ ಲಾರಿಗೆ ತಾಂತ್ರಿಕ ಅಡಚಣೆಯಿಂದ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗಿದೆ. ಲಾರಿಯ ಟಯರ್ ನ ಭಾಗದಿಂದ ಆರಂಭವಾದ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಲಾರಿಗೆ ವ್ಯಾಪಿಸಿ ಲಾರಿಯಲ್ಲಿದ್ದ ಮೆಕ್ಕೆಜೋಳ ಸಹಿತ ಲಾರಿಯೂ ಸಂಪೂರ್ಣವಾಗಿ ಸುಟ್ಟು ಹೋಗಿದೆ.ಬೆಂಕಿಯ ತೀವ್ರತೆಯಿಂದ ಘಾಟ್‌ನ ಅರಣ್ಯ ಪ್ರದೇಶಕ್ಕೂ ಅಗ್ನಿ ವ್ಯಾಪಿಸಿದ್ದು ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಘಟನೆ ವೇಳೆ ಲಾರಿಯಲ್ಲಿದ್ದ ಚಾಲಕ ಸೇರಿದಂತೆ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದು, ಹೆಚ್ಚಿನ…

Read More