ಕೊಣಾಜೆ: ಯಾವುದೇ ಕಲೆಯು ಸಿದ್ಧಿಯಾಗಬೇಕಾದರೆ ಪರಿಶ್ರಮದೊಂದಿಗೆ ಕಲಾಸಕ್ತಿಯೂ ಮುಖ್ಯ. ಭರತನಾಟ್ಯ ಕಲೆ ಶ್ರೇಷ್ಠ ಕಲೆಯಾಗಿದ್ದು ಇದರ ಶಾಸ್ತ್ರೀಯತೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಜವಬ್ಧಾರಿ ನಮ್ಮೆಲ್ಲರಿಗೂ ಇದೆ ಎಂದು ಕರ್ನಾಟಕ ರಾಜ್ಯೋತ್ಸವ ಪುರಸ್ಕೃತ, ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್ ಅವರು ಹೇಳಿದರು. ಅವರು ಅಸೈಗೋಳಿಯಲ್ಲಿ ಗುರುವಾರದಂದು ನಡೆದ ಅಸೈಗೋಳಿಯ ಶ್ರೀ ದುರ್ಗಾ ಸ್ವಾತಿ ನೃತ್ಯಾಲಯದ ‘ಸಾಧನಾ -2026’ 12 ನೇ ವರ್ಷದ ವಾರ್ಷಿಕೋತ್ಸವವನ್ನು ಉದ್ಘಾಟಿಸಿ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ಅವರು ವಹಿಸಿ ಮಾತನಾಡಿ, ಭಾರತೀಯ ಸಂಸ್ಕೃತಿಯು ಅತ್ಯಂತ ಶ್ರೀಮಂತವಾದ ಸಂಸ್ಕೃತಿಯಾಗಿದೆ. ಭರತನಾಟ್ಯ, ಯಕ್ಷಗಾನದಂತಹ ಕಲೆಗಳು ನಮ್ಮ ನಾಡಿನ ಶ್ರೇಷ್ಠತೆಗೆ ಕಾರಣೀಭೂತವಾಗಿದೆ. ದುರ್ಗಾಸ್ವಾತಿ ನೃತ್ಯಾಲಯವು ಯಶಸ್ವಿಯಾಗಿ ಮುನ್ನಡೆಯಲಿ ಎಂದರು.ಕಾರ್ಯಕ್ರಮದಲ್ಲಿ ನಾಟ್ಯಾಚಾರ್ಯ ಉಳ್ಳಾಲ ಮೋಹನ್ ಕುಮಾರ್, ವಿದುಷಿ ರಾಜಶ್ರೀ ಉಳ್ಳಾಲವಿದ್ವಾನ್ ಪ್ರಮೋದ್ ಉಳ್ಳಾಲ್ ಅವರಿಗೆ ಗೌರವಾಭಿವಂದನೆ ಸಲ್ಲಿಸಲಾಯಿತು.ಕಾರ್ಯಕ್ರಮದಲ್ಲಿ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆಯ ಸಂಚಾಲಕರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಪುಣ್ಯಕೋಟಿ ಶ್ರೀ ಶಾರದಾ ಗಣಪತಿ ವಿದ್ಯಾ ಸಂಸ್ಥೆಯ ಸಂಚಾಲಕರಾದ ಟಿ.ಜಿ.ರಾಜಾರಾಂ…
Author: UllalaVani
ಬಾಳೆಪುಣಿ: ನೂರುಲ್ ಇಸ್ಲಾಂ ಹೈಯರ್ ಸೆಕೆಂಡರಿ ಮದ್ರಸದಲ್ಲಿ SBS ವಾರ್ಷಿಕ ಸಭೆಯನ್ನು ಉಸ್ತಾದ್ ಹಾರಿಸ್ ಹನೀಫಿಯವರ ನೇತೃತ್ವದಲ್ಲಿ ನಡೆಸಲಾಯಿತು. ಈ ಸಂದರ್ಭದಲ್ಲಿ SBS ನ ನೂತನ ಸಾರಥಿಗಳನ್ನು ಆಯ್ಕೆ ಮಾಡಲಾಯಿತು. ಮುಹ್ಯುದ್ದೀನ್ ಹಾಶಿಂ ಅಧ್ಯಕ್ಷರಾಗಿ, ಮುಹಮ್ಮದ್ ಜಂಶೀರ್ ಕಾರ್ಯದರ್ಶಿಯಾಗಿ ಮತ್ತು ಮಹಮ್ಮದ್ ತಫ್ರೀಹ್ ಖಜಾಂಜಿಯಾಗಿ ಆಯ್ಕೆಯಾದರು.ಸಲಹಾ ಮಂಡಳಿ ಸದಸ್ಯರಾಗಿ ಹಾರಿಸ್ ಹನೀಫಿ, ಮುಹಮ್ಮದ್ ಮದನಿ ಅಕ್ಬರ್ ಸ್ವಾದಿಕ್ ಸಖಾಫಿ, ಮುದಬ್ಬಿರ್ ಅಬೂಬಕ್ಕರ್ ಸಿದ್ದೀಕ್ ಸಅದಿ ಅಲ್ ಹಾದಿ, ಸಹ ಮುದಬ್ಬಿರ್ ಸಫ್ವಾನ್ ಸಲ್ತಾನಿ ಅಲ್ ಪುರ್ಖಾನಿ ಹಾಗೂ ಹದಿನೈದು ಸದಸ್ಯರನ್ನು ಈ ಸಂದರ್ಭದಲ್ಲಿ ಆಯ್ಕೆ ಮಾಡಲಾಯಿತು.
ಮುಹಮ್ಮದ್ ತೋಹಾ ಸುವರ್ಣಮಹೋತ್ಸವ ಸಮಾರಂಭದ ಅಧ್ಯಕ್ಷರಾಗಿ ಆಯ್ಕೆ ತೊಕ್ಕೊಟ್ಟು ಶಿವಾಜಿ ಫ್ರೆಂಡ್ಸ್ ಸರ್ಕಲ್ (ರಿ) ಭಟ್ನಗರ ಸಂಸ್ಥೆಯ ಸುವರ್ಣ ಸಂಭ್ರಮ ಮಿಲನದ ಅಂಗವಾಗಿ ಪೂರ್ವಭಾವಿ ಸಭೆ ಸಂಸ್ಥೆಯ ಕಚೇರಿಯಲ್ಲಿ ನಡೆಯಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷರಾದ ನವೀನ್ ಪೂಜಾರಿ ಭಟ್ನಗರ ವಹಿಸಿದರು. ಸಭೆಯಲ್ಲಿ ಪ್ರಧಾನ ಸಂಚಾಲಕರಾದ ಸಿರಿಲ್ ರಾಬರ್ಟ್ ಡಿ ಸೋಜ ಅವರು ಸಂಸ್ಥೆಯ ಸಂಕ್ಷಿಪ್ತ ವರದಿಯನ್ನು ಮಂಡಿಸಿದರು. 1977ರಲ್ಲಿ ಸ್ಥಾಪನೆಯಾದ ಈ ಸಂಸ್ಥೆಯ ಎಲ್ಲಾ ಸದಸ್ಯರನ್ನು ಭೇಟಿ ಮಾಡುವುದರ ಜೊತೆಗೆ, ಈ ಅವಧಿಯಲ್ಲಿ ನಿಧನರಾದ ಸದಸ್ಯರ ಕುಟುಂಬ ಸದಸ್ಯರನ್ನು ಭೇಟಿ ಮಾಡಿ, ಸಂಸ್ಥೆಯ ಹಿತೈಷಿಗಳು ಹಾಗೂ ಅಭಿಮಾನಿಗಳನ್ನು ಒಳಗೊಂಡಂತೆ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯಲ್ಲಿ 2027ರಲ್ಲಿ ನಡೆಯಲಿರುವ ಸುವರ್ಣ ಮಹೋತ್ಸವವನ್ನು ಯಶಸ್ವಿಯಾಗಿ ಆಚರಿಸುವ ಕುರಿತು ಸದಸ್ಯರು ವಿವಿಧ ಸಲಹೆ-ಸೂಚನೆಗಳನ್ನು ನೀಡಿದರು. ಕಾರ್ಯಕ್ರಮದ ಯಶಸ್ಸಿಗಾಗಿ ಕೆಳಕಂಡ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಆಯ್ಕೆಯಾದ ಪದಾಧಿಕಾರಿಗಳು: ಸುವರ್ಣ ಮಹೋತ್ಸವ ಸಂಭ್ರಮ ಸಮಿತಿಯ ಅಧ್ಯಕ್ಷರು:ಮುಹಮ್ಮದ್ ತೋಹಾ ಕಾರ್ಯಾಧ್ಯಕ್ಷರು: ರಘುರಾಮ ಶೆಟ್ಟಿ ಕಾಪಿಕಾಡ್, ಪ್ರಕಾಶ್ ಪಿಂಟೊ ಕೆರೆಬೈಲ್,ಹರೀಶ್ ಆಳ್ವ…
ಬೋಳಿಯಾರ್: ಬೋಳಿಯಾರ್ನ ಅಮರ್ದೀಪ್ ಕಾಂಪ್ಲೆಕ್ಸ್ನ ವರ್ಕಸ್ ಹಾಗೂ ಕೆನರಾ ಬ್ಯಾಂಕ್ ಶಾಖೆಯ ಸಿಬ್ಬಂದಿ ವರ್ಗದವರ ವತಿಯಿಂದ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿದ್ದ ಮುರಳಿ ಅವರಿಗೆ ಇತ್ತೀಚೆಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಿತು. ಕಳೆದ ಮೂರು ವರ್ಷಗಳಿಂದ ಬೋಳಿಯಾರ್ ಕೆನರಾ ಬ್ಯಾಂಕ್ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿದ್ದ ಮುರಳಿ ಅವರು ತಮ್ಮ ದಕ್ಷತೆ, ಸೌಜನ್ಯ ಹಾಗೂ ಜನಸ್ನೇಹಿ ಕಾರ್ಯವೈಖರಿಯಿಂದ ಸಾರ್ವಜನಿಕರ ಅಪಾರ ಮೆಚ್ಚುಗೆಗೆ ಪಾತ್ರರಾಗಿದ್ದರು. ಇದೀಗ ಅವರು ಬೆಂಗಳೂರು ಶಾಖೆಗೆ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಈ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮದಲ್ಲಿ ಮುರಳಿ ಅವರಿಗೆ ಶಾಲು ಹೊದಿಸಿ, ಮೈಸೂರು ಪೇಟ ತೊಡಿಸಿ, ಫಲಪುಷ್ಪ ನೀಡಿ ಗೌರವಪೂರ್ವಕವಾಗಿ ಸನ್ಮಾನಿಸಲಾಯಿತು. ಈ ವೇಳೆ ಉಪಸ್ಥಿತರಿದ್ದ ವರ್ಕಸ್ ಹಾಗೂ ಬ್ಯಾಂಕ್ ಸಿಬ್ಬಂದಿ ಮಿತ್ರರು ಅವರ ಮುಂದಿನ ವೃತ್ತಿಜೀವನ ಮತ್ತಷ್ಟು ಉನ್ನತ ಮಟ್ಟಕ್ಕೆ ಏರಲಿ ಎಂದು ಶುಭ ಹಾರೈಸಿದರು. ಅಮರ್ದೀಪ್ ಕಾಂಪ್ಲೆಕ್ಸ್ನ ವರ್ಕಸ್ರು, ಬ್ಯಾಂಕ್ ಸಿಬ್ಬಂದಿ ಹಾಗೂ ಹಿತೈಷಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ನೀಡಿದರು.
ಉಳ್ಳಾಲ, ಮೇ 19: ಉಳ್ಳಾಲ ಸಮುದ್ರ ತೀರ ಪ್ರದೇಶದಲ್ಲಿ ಅಪರಿಚಿತ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಮೃತದೇಹವನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ. ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಮೃತದೇಹವನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ವಾರಿಸುದಾರರ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ. ಈ ವ್ಯಕ್ತಿಯನ್ನು ಯಾರಾದರೂ ಗುರುತಿಸಿದಲ್ಲಿ ಸಮೀಪದ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಮಾಸಿಕ ಸಭೆಯು ಜಿಲ್ಲಾಧ್ಯಕ್ಷರಾದ ಇಬ್ರಾಹಿಂ ನವಾಝ್ ರವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಪ್ರಸ್ತುತ ದೇಶದಲ್ಲಿ ನಡೆಯುತ್ತಿರುವ ಪ್ರಮುಖ ವಿದ್ಯಮಾನಗಳ ಬಗ್ಗೆ ಸುದೀರ್ಘ ಚರ್ಚೆ ನಡೆಸಿ, ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಯಿತು. ದೇಶಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯದೊಂದಿಗೆ ಚೆಲ್ಲಾಟವಾಡುತ್ತಿರುವ ನೀಟ್ (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಹಗರಣವನ್ನು ಸಮಿತಿ ತೀವ್ರವಾಗಿ ಖಂಡಿಸಿದೆ. ಇದರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಹಂತ-ಹಂತವಾಗಿ ಬೃಹತ್ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲು ತೀರ್ಮಾನಿಸಲಾಗಿದೆ. ಭಾರತೀಯ ರೈತರ ಹಿತಾಸಕ್ತಿಗೆ ಧಕ್ಕೆ ತರಲಿರುವ ಅಮೇರಿಕಾ ಕೃಷಿ ಒಪ್ಪಂದದ ನೀತಿಗಳ ವಿರುದ್ಧ ಧ್ವನಿ ಎತ್ತಲು ಸಭೆಯಲ್ಲಿ ನಿರ್ಧರಿಸಲಾಗಿದೆ. ದೇಶದ ಬೆನ್ನೆಲುಬಾದ ರೈತರ ರಕ್ಷಣೆಗಾಗಿ ಈ ಒಪ್ಪಂದದ ವಿರುದ್ಧವೂ ವ್ಯಾಪಕ ಜನಾಂದೋಲನ ಮತ್ತು ಸತ್ಯಾಗ್ರಹ ರೂಪಿಸಲು ಯುವ ಕಾಂಗ್ರೆಸ್ ಮುಂದಾಗಿದೆ. “ಕೇಂದ್ರ ಸರ್ಕಾರದ ತಪ್ಪು ನೀತಿಗಳು ಮತ್ತು ಪರೀಕ್ಷಾ ಮಂಡಳಿಗಳ ಬೇಜವಾಬ್ದಾರಿತನದಿಂದಾಗಿ ಇಂದು ಯುವಜನತೆ ಮತ್ತು ರೈತರು ಬೀದಿಗೆ ಬೀಳುವಂತಾಗಿದೆ. ಅಹಿಂಸಾತ್ಮಕ…
ಬೆಂಗಳೂರು, ಮೇ 18: ಯೂತ್ ಕಾಂಗ್ರೆಸ್ ಕಾರ್ಯಕರ್ತರ ನಡುವೆಯೇ ಮಾರಾಮಾರಿ ನಡೆದಿರುವ ಘಟನೆ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದಿದೆ. ರಾಷ್ಟ್ರೀಯ ಯುವ ಕಾಂಗ್ರೆಸ್ ನಿನ್ನೆ ಹಲವು ಮಂದಿ ಪದಾಧಿಕಾರಿಗಳನ್ನು ಸ್ಥಾನದಿಂದ ಕಿತ್ತು ಹಾಕಿತ್ತು. ಇಂದು ಅದೇ ವಿಚಾರಕ್ಕೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ನಡುವೆ ಗಲಾಟೆ ನಡೆದಿದ್ದು, ಅದು ಕೈ ಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ. NEET ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಪ್ರತಿಭಟನೆ ಸಂಬಂಧ ಕರೆಯಲಾಗಿದ್ದ ಪೂರ್ವಭಾವಿ ಸಭೆಯಲ್ಲಿ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ ಮತ್ತು ಅಧ್ಯಕ್ಷ ಮಂಜುನಾಥ್ ಗೌಡ ಬೆಂಬಲಿಗರು ಪರಸ್ಪರ ಬಡಿದಾಡಿಕೊಂಡಿದ್ದಾರೆ.
ಮಂಗಳೂರು, ಮೇ. 18 : ಸರ್ಫಿಂಗ್ ಫೆಡರೇಶನ್ ಆಫ್ ಇಂಡಿಯಾ (ಎಸ್ಎಫ್ಐ) ವತಿಯಿಂದ ಆಯೋಜಿಸಲಾಗುತ್ತಿರುವ ಏಳನೇ ಆವೃತ್ತಿಯ “ಎನ್ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ 2026” ಸ್ಪರ್ಧೆಗಳು ಮೇ 29ರಿಂದ 31ರವರೆಗೆ ಮಂಗಳೂರಿನ ತಣ್ಣೀರುಭಾವಿಯ ಬ್ಲೂ ಬೇ ಎಕೋ ಬೀಚ್ನಲ್ಲಿ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ. ತಿಳಿಸಿದ್ದಾರೆ. ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕರ್ನಾಟಕವು ಸರ್ಫಿಂಗ್ ಹಾಗೂ ಕರಾವಳಿ ಕ್ರೀಡೆಗಳ ಕ್ಷೇತ್ರದಲ್ಲಿ ದೇಶದ ಪ್ರಮುಖ ತಾಣವಾಗಿ ನಿರಂತರವಾಗಿ ಹೊರಹೊಮ್ಮುತ್ತಿದೆ. ಎನ್ಎಂಪಿಎ ಇಂಡಿಯನ್ ಓಪನ್ ಆಫ್ ಸರ್ಫಿಂಗ್ ಸ್ಪರ್ಧೆ ಕ್ರೀಡೆ ಹಾಗೂ ಪ್ರವಾಸೋದ್ಯಮವನ್ನು ಉತ್ತೇಜಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ,” ಎಂದು ಹೇಳಿದರು.“ನಮ್ಮ ಕರಾವಳಿಯ ಸೌಂದರ್ಯವನ್ನು ರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವುದರ ಜೊತೆಗೆ, ಯುವ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ಇಂತಹ ಪ್ರತಿಷ್ಠಿತ ಸ್ಪರ್ಧೆಗೆ ಜಿಲ್ಲಾಡಳಿತದಿಂದ ಸಂಪೂರ್ಣ ಬೆಂಬಲ ನೀಡುತ್ತಿರುವುದು ಸಂತಸದ ಸಂಗತಿ,” ಎಂದು ಅವರು ತಿಳಿಸಿದರು.ಐಚಿ-ನಗೋಯಾ ಏಷ್ಯನ್ ಗೇಮ್ಸ್ ಗುರಿಯಾಗಿಸಿಕೊಂಡಿರುವ ದೇಶದ ವಿವಿಧ ಭಾಗಗಳ ಸರ್ಫಿಂಗ್ ಕ್ರೀಡಾಪಟುಗಳು ಈ…
ಇಡಾಹೊ, ಮೇ. 18: ಪಶ್ಚಿಮ ಇಡಾಹೊದ ಮೌಂಟೇನ್ ಹೋಮ್ ವಾಯುಪಡೆ ನೆಲೆಯಲ್ಲಿ ನಡೆದ ವೈಮಾನಿಕ ಪ್ರದರ್ಶನದ ವೇಳೆ ಯುಎಸ್ ನೌಕಾಪಡೆಯ ಎರಡು ಯುದ್ಧ ವಿಮಾನಗಳು ಗಾಳಿಯಲ್ಲೇ ಭೀಕರವಾಗಿ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅಪಘಾತಕ್ಕೀಡಾದ ವಿಮಾನಗಳನ್ನು ನೌಕಾಪಡೆಯ ಅತ್ಯಾಧುನಿಕ ‘ಇಎ-18ಜಿ ಗ್ರೋಲರ್ಸ್’ ಎಂದು ಗುರುತಿಸಲಾಗಿದೆ. ಅತಿ ವೇಗದಲ್ಲಿ ಹಾರಾಟ ನಡೆಸುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಭೀಕರ ಡಿಕ್ಕಿಯ ನಡುವೆಯೂ ಎರಡೂ ಜೆಟ್ಗಳಲ್ಲಿದ್ದ ನಾಲ್ವರು ಸಿಬ್ಬಂದಿ ತಕ್ಷಣವೇ ಸುರಕ್ಷಿತವಾಗಿ ಹೊರಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಪ್ರಸ್ತುತ ಗಾಯಾಳು ಸಿಬ್ಬಂದಿಯ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಅವರಿಗೆ ಅಗತ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವಾಯುನೆಲೆ ಅಧಿಕಾರಿಗಳು ತಿಳಿಸಿದ್ದಾರೆ. ಅದೃಷ್ಟವಶಾತ್, ಮಿಲಿಟರಿ ನೆಲೆಯಲ್ಲಿದ್ದ ಇತರ ಯಾರಿಗೂ ಯಾವುದೇ ಗಾಯಗಳಾಗಿಲ್ಲ. ಸದ್ಯ ಘಟನೆಗೆ ಕಾರಣವೇನು ಎಂಬುದರ ಕುರಿತು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.
ಮಂಗಳೂರು, ಮೇ. 18 : ಈ ಭಾಗದಲ್ಲಿ ಇರೋದು ಬಾವಿಗಳಾ ಅಥವಾ ಡೀಸೆಲ್ ಗುಂಡಿಗಳಾ ಅನ್ನೋ ಅನುಮಾನ ಈಗ ಶುರುವಾಗಿದೆ. ಯಾಕಂದ್ರೆ ಬಾವಿಯಿಂದ ನೀರು ಸೇದಿದರೆ ನೀರಿನ ಬದಲು ಡೀಸೆಲ್ ವಾಸನೆ ಮೂಗಿಗೆ ಅಪ್ಪಳಿಸುತ್ತದೆ. ಅಧಿಕಾರಿಗಳು ಮಾತ್ರ ನಮಗೂ ಇದಕ್ಕೂ ಸಂಬಂಧವೇ ಇಲ್ಲ ಅನ್ನೋ ಹಾಗೆ ಕುಳಿತಿದ್ದಾರೆ. ಇಂತಹ ಸಮಸ್ಯೆ ಎದುರಾಗಿರೋದು ಎಲ್ಲಿ ಅಂತಿರಾ ಇಲ್ಲಿದೆ ಈ ಬಗ್ಗೆ ವರದಿ. ಇದು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಾವೂರು ಬಲಿಪಗುರಿ ರಸ್ತೆಯ ನಿವಾಸಿಗಳಿಗೆ ಈಗ ಕುಡಿಯುವ ನೀರಿನದ್ದೇ ದೊಡ್ಡ ಚಿಂತೆಯಾಗಿದೆ. ಕಳೆದ ನವೆಂಬರ್ ತಿಂಗಳಿನಲ್ಲಿ ಇಲ್ಲಿನ ಕೆಲವು ಮನೆಗಳ ಬಾವಿ ನೀರಲ್ಲಿ ಮೊದಲ ಬಾರಿಗೆ ಡೀಸೆಲ್ ನಂತಹ ಅಂಶ ಪತ್ತೆಯಾಗಿತ್ತು. ಆದರೆ ಆರಂಭದಲ್ಲಿ ನಿವಾಸಿಗಳು ಬಾವಿಗಳನ್ನು ಸ್ವಚ್ಛಗೊಳಿಸಿ ಸಮಸ್ಯೆ ಪರಿಹರಿಸಲು ಯತ್ನಿಸಿದ್ದರು. ದಿನ ಕಳೆದಂತೆ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತ , ಸದ್ಯ ಮೂರರಿಂದ ನಾಲ್ಕು ಬಾವಿಗಳ ನೀರು ಸಂಪೂರ್ಣ ಡೀಸೆಲ್ ನಂತಹ ದ್ರವ ಮಿಶ್ರಣಗೊಂಡು ಕಲುಷಿತಗೊಂಡಿದೆ. ಇದೀಗ ನೀರು ಕಲುಷಿತ ಗೊಂಡಿದ್ದು ಸ್ಥಳೀಯ…

