ಉಳ್ಳಾಲ, ಮಾ.14: ಡಾ. ರೋವಿನಾ ಶ್ಯಾರನ್ ಸೋನ್ಸ್ ಅವರಿಗೆ ಮಂಗಳೂರು ವಿಶ್ವವಿದ್ಯಾಲಯವು ‘ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿನ ಆಯ್ದ ಐಟಿಇಎಸ್ ಕಂಪನಿಗಳಲ್ಲಿ ಆರೋಗ್ಯ ಮತ್ತು ಕ್ಷೇಮ ಕಾರ್ಯಕ್ರಮಗಳ ಉದ್ಯೋಗಿಗಳ ಉತ್ಪಾದಕತೆಯ ಮೇಲೆ ಇರುವ ಪರಿಣಾಮ: ಒಂದು ಅಧ್ಯಯನ’ ವಿಷಯದ ಮೇಲೆ ಸಲ್ಲಿಸಿದ ಮಹಾಪ್ರಬಂಧಕ್ಕೆ ಡಾಕ್ಟರ್ ಆಫ್ ಫಿಲಾಸಫಿ ಪದವಿಯನ್ನು ಪ್ರದಾನಿಸಿದೆ. ಇತ್ತೀಚೆಗೆ ನಡೆದ ವೈವಾ ವೋಸ್ ಪರೀಕ್ಷೆಯಲ್ಲಿ ಅವರು ತಮ್ಮ ಮಹಾಪ್ರಬಂಧವನ್ನು ಯಶಸ್ವಿಯಾಗಿ ಸಮರ್ಥಿಸಿಕೊಂಡರು. ಈ ಸಂಶೋಧನಾ ಕಾರ್ಯವನ್ನು ವ್ಯವಹಾರ ಆಡಳಿತ ವಿಭಾಗದಲ್ಲಿ ಡಾ| ಶೇಖರ್ ನಾಯ್ಕ್ ಅವರ ಮಾರ್ಗದರ್ಶನದಲ್ಲಿ ನಡೆಸಲಾಗಿತ್ತು. ಡಾ| ರೋವಿನಾ ಸೋನ್ಸ್ ಅವರು ಪ್ರಸ್ತುತ ಯೆನೇಪೊಯಾ ಇನ್ಸ್ಟಿಟ್ಯೂಟ್ ಆಫ್ ಆರ್ಟ್ಸ್, ಸಯನ್ಸ್, ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ಸಂಸ್ಥೆಯಲ್ಲಿ ಸಹಾಯಕ ಪ್ರಾಧ್ಯಾಪಕಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ರೋನಿ ಸೋನ್ಸ್ ಮತ್ತು ರೋಝಿನಾ ಸೋನ್ಸ್ ಅವರ ಸುಪುತ್ರಿ ಆಗಿದ್ದಾರೆ. ಸಂತೋಷ್ ಬಂಗೇರ ಅವರ ಪತ್ನಿಯೂ ಆಗಿದ್ದಾರೆ.
Author: UllalaVani
ಕೊಣಾಜೆ: ವಿವೇಕಾನಂದರು ಕಟ್ಟಿದ ಪ್ರತಿಪಾದನೆಯ ಮೂಲವೇ ಮನುಷ್ಯ, ಮನುಷ್ಯತ್ವ. ಮಾನವಿಯತೆಯಲ್ಲಿ ಸುಪ್ತವಾದ ದೈವೀಕತೆಯೇ ಮನುಷ್ಯತ್ವ ಎಂದು ನಂಬಿದ ಅವರು ಇದರಿಂದಲೇ ಮನುಷ್ಯನ ಆಂತರಿಕ ವಿಕಾಸವನ್ಜು ಅರಿಯುವ ಪ್ರಯತ್ನ ಮಾಡಿ ಏಕತೆಯ ಮೂಲಕ ದೈವೀಕತೆಯನ್ನು ಕಂಡರು ಎಂದು ಸ್ವಾಮೀ ವಿವೇಕಾನಂದ ಶೈಕ್ಷಣಿಕ ಅನುಸಂಧಾನ ಗೊಟ್ಟಿಗೆರೆ ಬೆಂಗಳೂರು ಇದರ ಗೌರವ ಶೈಕ್ಷಣಿಕ ನಿರ್ದೇಶಕ ಡಾ.ಹೆಚ್ .ಎನ್ ಮುರಳೀಧರ ಅವರು ಹೇಳಿದರು. ಅವರು ಮಂಗಳೂರು ವಿಶ್ವವಿದ್ಯಾನಿಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ವತಿಯಿಂದ ಎಸ್ ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಸಹಯೋಗದಲ್ಲಿ ಗುರುವಾರ ಪ್ರೊ.ವಿವೇಕ್ ರೈ ವಿಚಾರವೇದಿಕೆಯಲ್ಲಿ ನಡೆದ ವಿವೇಕವಾಣಿ ‘ ಸ್ವಾಮೀ ವಿವೇಕಾನಂದರ ವಿಶ್ವಧರ್ಮ ಆದರ್ಶ’ ಎಂಬ ವಿಷಯದಲ್ಲಿ ಉಪನ್ಯಾಸ ನೀಡಿದರು.ಪ್ರಪಂಚದಲ್ಲಿ ಧರ್ಮದ ಹೆಸರಿನಲ್ಲಿ ಆದ ರಕ್ತಪಾತ ಬೇರೆ ಯಾವುದೇ ವಿಷಯದಲ್ಲಿ ಆಗಿಲ್ಲ ಎಂದಿದ್ದ ಅವರು ಧರ್ಮದ ಕರಾಳಮುಖವನ್ನು ಮೊತ್ತಮೊದಲ ಬಾರಿಗೆ ಗುರುತಿಸಿದವರು ವಿವೇಕಾನಂದರು. ವೈವಿಧ್ಯತೆಯ ಮೂಲಕವೇ ವಿಶ್ವಮಾನವತೆಯನ್ನು ಕಟ್ಟುವ ಪ್ರಯತ್ನಗಳಾಗಬೇಕು. ವೈವಿದ್ಯತೆಯ ಮೂಲಕವೇ ಏಕಸೂತ್ರತೆಯನ್ನು ಕಂಡುಕೊಳ್ಳಬೇಕಿದೆ ಎಂಬುದು ಅವರ ನಿಲುವಾಗಿತ್ತು ಎಂದರು. ಸಮಾರಂಭದ…
ಮುಲ್ಕಿ: ಮುಲ್ಕಿ ಸುಂದರ ರಾಮ ಶೆಟ್ಟಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಸಹಾಯ ಹಸ್ತ ಪ್ರದಾನ ಸಮಾರಂಭ ಮುಲ್ಕಿ ಸುಂದರ ರಾಮ ಶೆಟ್ಟಿ ಸಭಾಭವನದಲ್ಲಿ ಜರುಗಿತು. ಕಾರ್ಯಕ್ರಮವನ್ನು ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಮಾತಾಡಿದ ಮುಲ್ಕಿ ಸುಂದರ ರಾಮ ಶೆಟ್ಟಿ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಇದರ ಅಧ್ಯಕ್ಷ ಡಾ.ಕೆ.ಪ್ರಕಾಶ್ ಶೆಟ್ಟಿ ಅವರು, “ನಮ್ಮ ಸಮಾಜದ ಓರ್ವ ಕಣ್ಮಣಿ, ಮುಲ್ಕಿ ಕಂಡಂತಹ ಧೀಮಂತ ವ್ಯಕ್ತಿ ಮುಲ್ಕಿ ಸುಂದರ ರಾಮ ಶೆಟ್ಟಿ ಅವರ ಹೆಸರಿನಲ್ಲಿ ಟ್ರಸ್ಟ್ ಅಧ್ಯಕ್ಷನಾಗಿ ಇಂತಹ ಕಾರ್ಯಕ್ರಮ ಆಯೋಜಿಸುತ್ತಿರುವುದು ನನ್ನ ಸೌಭಾಗ್ಯ. ಸುಂದರ ರಾಮ ಶೆಟ್ಟಿಯವರ ಸ್ಮರಣಾರ್ಥ ಭವನವನ್ನು ನಿರ್ಮಿಸಲು ನನ್ನನ್ನು ಸಂಚಾಲಕನನ್ನಾಗಿ ಆಯ್ಕೆ ಮಾಡಿದ್ರು ಆಗ ಅದನ್ನು ಅತ್ಯಂತ ಪ್ರೀತಿಯಿಂದ ಕೈಗೆತ್ತಿಕೊಂಡವನು ನಾನು. ನಂತರ ನಾಲ್ಕು ವರ್ಷಗಳ ಹಿಂದೆ ಮುಲ್ಕಿಯಲ್ಲಿ 34 ಕೋಟಿ ರೂ. ವೆಚ್ಚದಲ್ಲಿ ಭವ್ಯವಾದ ಭವನವನ್ನು ನಿರ್ಮಾಣ ಮಾಡಲಾಯಿತು. ಸುಂದರ ರಾಮ ಶೆಟ್ಟಿಯವರಿಂದ ಇಂದಿಗೂ ಸಮಾಜದ ಅದೆಷ್ಟೋ ಮನೆಗಳಲ್ಲಿ ದೀಪ ಬೆಳಗುತ್ತಿದೆ. ಅವರಿಂದ…
ಬಂಟ್ವಾಳ, ಮಾ. 14 : ಪಾಣೆಮಂಗಳೂರು ಎಂಬಲ್ಲಿ ಎರಡು ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಯುವ ಛಾಯಾಗ್ರಾಹಕ ಸಾವನ್ನಪ್ಪಿದ ಘಟನೆ ನಡೆದಿದೆ. ಶಂಭೂರು ನಿವಾಸಿ ರಕ್ಷಿತ್ ಶೆಟ್ಟಿ (43) ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ರಾತ್ರಿ ಪಾಣೆಮಂಗಳೂರು ಎಂಬಲ್ಲಿ ಎರಡು ಬೈಕ್ ಗಳ ನಡುವೆ ಅಪಘಾತ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟ ಬಗ್ಗೆ ಪೋಲೀಸ್ ಇಲಾಖೆ ಮಾಹಿತಿ ನೀಡಿದೆ. ಛಾಯಾಗ್ರಾಹಕ ಸಂಘದ ಬಂಟ್ವಾಳ ವಲಯದ ಸಕ್ರೀಯ ಸದಸ್ಯನಾಗಿದ್ದ ಇವರು ಅತ್ಯುತ್ತಮ ವಿಡಿಯೋಗ್ರಾಫರ್ ಆಗಿದ್ದರು. ರಕ್ಷಿತ್ ಅವರ ಮಗಳ 10 ನೇ ವರ್ಷದ ಹುಟ್ಟು ಹಬ್ಬದ ಕಾರ್ಯಕ್ರಮ ನಾಳೆ ಮಾ.15 ರಂದು ಮನೆಯಲ್ಲಿ ನಡೆಯಲು ತಯಾರಿಗಳು ಮಾಡಲಾಗಿತ್ತು. ಮಗಳ ಹುಟ್ಟು ಹಬ್ಬದ ಸಂಭ್ರಮದ ಮನೆಯೀಗ ತಂದೆಯ ಸಾವಿನಿಂದ ಮೌನವಾಗಿ ರೋಧಿಸುತ್ತಿದೆ. ರಕ್ಷಿತ್ ಸಹೋದರ ರಂಜಿತ್ ಅವರು ಕೂಡ ಸುಮಾರು ವರ್ಷಗಳ ಹಿಂದೆ ಅಪಘಾತದಲ್ಲಿ ಗಾಯಗೊಂಡು ಮಲಗಿದ ಸ್ಥಿತಿಯಲ್ಲಿ ಮನೆಯಲ್ಲಿದ್ದಾರೆ. ಅತ್ಯಂತ ಬಡ ಕುಟುಂಬ…
ಬೆಂಗಳೂರು, ಮಾರ್ಚ್ 14: ಮ್ಯೂಲ್ ಅಕೌಂಟ್ಗಳ ವಿರುದ್ಧದ ಕಾರ್ಯಾಚರಣೆ ವೇಳೆ ಚೀನಾ ಲಿಂಕ್ ಹೊಂದಿದ್ದ ಮಂಗಳೂರಿನ ಸೈಬರ್ ವಂಚಕರಿಬ್ಬರನ್ನು ರಾಜ್ಯ ಸೈಬರ್ ಕಮಾಂಡ್ ಯೂನಿಟ್ ಬಂಧಿಸಿದೆ. ಡಿಜಿಪಿ ಪ್ರಣವ್ ಮೊಹಂತಿ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಂಗಳೂರು ಮೂಲದ ಮೊಹಮ್ಮದ್ ಅನೀಸ್ ಮತ್ತು ಸಲೀತ್ ಅಹ್ಮದ್ರನ್ನ ಬಂಧಿಸಲಾಗಿದೆ. ಬಂಧಿತ ವಂಚಕರು ಟ್ರೇಡಿಂಗ್ ಬಿಸಿನೆಸ್ ಹೆಸರಲ್ಲಿ ಬ್ಯಾಂಕ್ ಖಾತೆಗಳ ಮಾಹಿತಿ ಪಡೆಯುತ್ತಿದ್ದರು. ಬಳಿಕ ಸೈಬರ್ ವಂಚನೆಗೆ ಬ್ಯಾಂಕ್ ಖಾತೆಗಳ ವಿವರ ಬಳಕೆ ಮಾಡುತ್ತಿದ್ದರು. ನಿಖರ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳಿಂದ 4 ಮೊಬೈಲ್ ಫೋನ್ಗಳು, 18 ಬಿಟ್ ಕಾರ್ಡ್ಗಳು, 17 ಬ್ಯಾಂಕ್ ಪಾಸ್ಬುಕ್ಗಳು, 6 ಚೆಕ್ ಪುಸ್ತಕಗಳು, 1,479.31 USDT (ಕ್ರಿಪ್ಟೋಕರೆನ್ಸಿ) 1 ಕಾರನ್ನು ವಶಕ್ಕೆ ಪಡೆಯಲಾಗಿದೆ. ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ ಹೇಗೆ ನಡೆಯುತ್ತಿತ್ತು? ಚೀನಾ ಲಿಂಕ್ ಮ್ಯೂಲ್ ಅಕೌಂಟ್ ದಂಧೆ ಒಂದು ವ್ಯವಸ್ಥಿತ ರೀತಿಯಲ್ಲಿ ನಡೆಯುತ್ತಿತ್ತು ಎಂಬುದು ತನಿಖೆಯಲ್ಲಿ ಬಯಲಾಗಿದೆ. ಚೀನಾದ ಸೈಬರ್ ವಂಚಕರಿಗೆ ಕಡಿಮೆ ಬೆಲೆಗೆ ಕ್ರಿಪ್ಟೋಕರೆನ್ಸಿ ಬೇಕಾಗಿದ್ದರಿಂದ,…
ಮಂಗಳೂರು, ಮಾರ್ಚ್ 14: ಗಲ್ಫ್ ರಾಷ್ಟ್ರದಲ್ಲಿ ನಡೆಯುತ್ತಿರುವ ಯುದ್ಧ ಭಾರತದಲ್ಲಿ ಹೋಟೆಲ್ ಉದ್ಯಮಕ್ಕೆ ಭಾರೀ ಹೊಡೆತ ನೀಡಿದೆ. ಗ್ಯಾಸ್ ಎಮರ್ಜೆನ್ಸಿ ಗ್ರಾಹಕರ ಉಸಿರುಗಟ್ಟಿಸಿದೆ. ಇತ್ತ ಕರ್ನಾಟಕದ ಜಿಲ್ಲೆ ಜಿಲ್ಲೆಗಳಲ್ಲೂ ಸಿಲಿಂಡರ್ ಕೊರತೆ ಉಂಟಾಗಿದ್ದು, ಸೌದೆ ಒಲೆಯತ್ತ ಮುಖ ಮಾಡುತ್ತಿದ್ದರೆ, ಮತ್ತೆ ಕೆಲ ಹೋಟೆಲ್ಗಳು ಬಂದ್ ಮಾಡಲಾಗುತ್ತಿದೆ. ಈ ಮಧ್ಯೆ ಮಂಗಳೂರಿನ ಹೋಟೆಲ್ ಉದ್ಯಮ ಸಂಸ್ಥೆಯೊಂದು ಸ್ಪೆಷಲ್ ಆಫರ್ ನೀಡಿದೆ. ಅದೆನೇಂದರೆ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊಟ್ಟವರಿಗೆ ಸುಮಾರು 5,500 ರೂ ಮೌಲ್ಯದ ಫುಡ್ ಉಚಿತವಾಗಿ ನೀಡಲಾಗುತ್ತಿದೆ. ಗ್ರಾಹಕರಿಗೆ ಭರ್ಜರಿ ಆಫರ್ ನೀಡಿದ ಹೋಟೆಲ್ ಮಂಗಳೂರಿನ ವೋಕ್ ಆ್ಯಂಡ್ ಫೋರ್ಕ್ ಮತ್ತು ಬಿಗ್ ಫ್ಯಾಟ್ ರೋಲ್ ಸಂಸ್ಥೆಯಿಂದ ಈ ಭರ್ಜರಿ ಆಫರ್ ನೀಡಲಾಗಿದೆ. ಮಂಗಳೂರು, ಬೆಂಗಳೂರು ಸೇರಿದಂತೆ ಹಲವು ಕಡೆ ಸಂಸ್ಥೆ ತನ್ನ ಔಟ್ಲೆಟ್ ಹೊಂದಿದೆ. ಹತ್ತಿರದ ಯಾವುದೇ ಔಟ್ಲೆಟ್ಗೆ ಹೋದರೆ ಈ ಆಫರ್ ಸಿಗುತ್ತದೆ ಎಂದು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಳ್ಳಲಾಗಿದೆ. ಗ್ಯಾಸ್ ಅಭಾವ ಹಿನ್ನೆಲೆ ಮಂಗಳೂರಿನ ವೋಕ್ ಆ್ಯಂಡ್ ಫೋರ್ಕ್ ಮತ್ತು ಬಿಗ್…
ಉಳ್ಳಾಲ; ಇಲ್ಲಿನ ಠಾಣಾ ವ್ಯಾಪ್ತಿಯ ಕೋಟೆಕಾರ್ ಗ್ರಾಮದ ಬಗಂಬಿಲ ಸಮೀಪದ ಗ್ರೌಂಡ್ ಪ್ರದೇಶದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಉಪ್ಪಳದ ಶೇಕ್ ಅರ್ಬಾಜ್ ಮತ್ತು ರಶೀದ್ ಆಲ್ವಿನ್ ಎಂದು ಗುರುತಿಸಲಾಗಿದೆ. ಇವರು ಮಾದಕ ವಸ್ತು ಗಾಂಜಾವನ್ನು ತಂದು ತನ್ನ ಗಿರಾಕಿಗಳಿಗೆ ಮತ್ತು ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಬಂಧಿತ ಆರೋಪಿಗಳಿಂದ 51,500 ರೂ.ಮೌಲ್ಯದ 1.110 ಕೆಜಿ ಗಾಂಜಾ, 520 ರೂ.ನಗದು, ಮೊಬೈಲ್ ಹಾಗೂ ಇತರೆ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ಉಳ್ಳಾಲ ತಾಲ್ಲೂಕಿನ ಇರಾ ಗ್ರಾಮದ ಬಾಳೆಪುಣಿಯ ನುಸ್ರತುಲ್ ಅನಾಮ್ ಗಲ್ಪ್ ಕಮೀಟಿಯಿಂದ ಅರ್ಹರಾದ ಬಡ ಕುಟುಬಗಳಿಗೆ ರಮದಾನ್ ಕಿಟ್ನ ಹಣವನ್ನು ವಿತರಿಸಲಾಯಿತು. ಕಮಿಟಿಯ ಅಧ್ಯಕ್ಷರಾದ ಅಬ್ದುಲ್ ಅಝೀಝ್ ಮುಸ್ಲಿಯಾರ್ ಕಾರ್ಯಕರ್ತರಾದ ಸಿ ಎಚ್ ರಹ್ಮಾನ್ ಮತ್ತು ಹಸ್ಸನ್ ಎಂ ಬಿರವರು ಮನೆ ಮನೆಗೆ ಹೋಗಿ ಕುಟುಂಬದ ಸದಸ್ಯರಿಗೆ ಹಣವನ್ನು ಹಸ್ತಾಂತರಿಸಿದ್ದಾರೆ.
ಮಂಗಳೂರು, ಮಾ. 14 ; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗೃಹಬಳಕೆಯ ಅಡುಗೆ ಅನಿಲ (ಎಲ್ಪಿಜಿ) ಪೂರೈಕೆಯಲ್ಲಿ ಯಾವುದೇ ವ್ಯತ್ಯಯವಾಗಿಲ್ಲ. ಮುಂಬರುವ ದಿನಗಳಲ್ಲಿಯೂ ಯಾವುದೇ ಕೊರತೆಯಾಗುವ ಸಾಧ್ಯತೆಯಿಲ್ಲ ಎಂದು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಸಾರ್ವಜನಿಕರಿಗೆ ಭರವಸೆ ನೀಡಿದ್ದಾರೆ. ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಪ್ರಸ್ತುತ ನಿಯಮದಂತೆ ಪ್ರತಿ 25 ದಿನಗಳಿಗೊಮ್ಮೆ ಒಂದು ಸಿಲಿಂಡರ್ನಂತೆ ಗೃಹಬಳಕೆಯ ಎಲ್ಪಿಜಿ ಪೂರೈಕೆ ಮಾಡಲಾಗುತ್ತಿದೆ. ಸಾರ್ವಜನಿಕರು ಆತಂಕಕ್ಕೊಳಗಾಗುವ ಅಗತ್ಯವಿಲ್ಲ ಅಥವಾ ಏಕಕಾಲಕ್ಕೆ ಹೆಚ್ಚಿನ ಸಿಲಿಂಡರ್ ಕಾಯ್ದಿರಿಸಲು ಪ್ರಯತ್ನಿಸಬೇಡಿ. ಪ್ರಸ್ತುತ ವ್ಯವಸ್ಥೆಯಲ್ಲಿ ಅಂತಹ ಬುಕಿಂಗ್ಗಳಿಗೆ ಅವಕಾಶವಿಲ್ಲ” ಎಂದು ತಿಳಿಸಿದರು. ಎಲ್ಪಿಜಿ ಏಜೆನ್ಸಿಗಳು ಅಕ್ರಮವಾಗಿ ಸಿಲಿಂಡರ್ ದಾಸ್ತಾನು ಮಾಡುವುದನ್ನು ತಡೆಯಲು ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಂಡಿದೆ. ಮಂಗಳೂರು ಪೊಲೀಸ್ ಕಮಿಷನರೇಟ್ ಮತ್ತು ಜಿಲ್ಲಾ ಪೊಲೀಸ್ ವ್ಯಾಪ್ತಿಯ ಅಧಿಕಾರಿಗಳು ಈಗಾಗಲೇ ಹಲವು ಗೋದಾಮುಗಳ ಮೇಲೆ ದಾಳಿ ನಡೆಸಿ ಪರಿಶೀಲಿಸಿದ್ದಾರೆ.ಐಒಸಿಎಲ್ (IOCL), ಬಿಪಿಸಿಎಲ್ (BPCL) ಮತ್ತು ಹೆಚ್ಪಿಸಿಎಲ್ (HPCL) ನಂತಹ ಪ್ರಮುಖ ತೈಲ ಕಂಪನಿಗಳ ಜನರಲ್ ಮ್ಯಾನೇಜರ್ಗಳೊಂದಿಗೆ ಸಭೆ ನಡೆಸಲಾಗಿದ್ದು, ಸುಗಮ ಪೂರೈಕೆಗೆ ಸೂಚಿಸಲಾಗಿದೆ.…
ತಲಪಾಡಿ ಬಿಲಾಲ್ ಜುಮಾ ಮಸ್ಜಿದ್ ಬೆಳಿಗ್ಗೆ 8-30 ಕ್ಕೆ, ಕೆ ಸಿ ರೋಡ್ ಅಲ್ ಮುಬಾರಕ್ ಜುಮಾ ಮಸ್ಜಿದ್ ಬೆಳಿಗ್ಗೆ 8 ಗಂಟೆಗೆ, ಹಿದಾಯತ್ ನಗರ ಅಲ್ ಹಿದಾಯ ಜುಮಾ ಮಸ್ಜಿದ್ ಬೆಳಿಗ್ಗೆ 8 ಗಂಟೆಗೆ, ಕೆ ಸಿ ನಗರ ಅಲ್ ಹುದಾ ಜುಮಾ ಮಸ್ಜಿದ್ ಬೆಳಿಗ್ಗೆ 7 -30, ಅಜ್ಜಿನಡ್ಕ ಬದ್ರಿಯಾ ಜುಮಾ ಮಸ್ಜಿದ್ ಬೆಳಿಗ್ಗೆ 8 ಗಂಟೆಗೆ, ಉಚ್ಚಿಲ 407 ಜುಮಾ ಮಸ್ಜಿದ್ ಬೆಳಿಗ್ಗೆ 8 ಗಂಟೆಗೆ, ಮಸ್ಜಿದ್ ರಹ್ಮಾನ್ ಮೇಗಿನ ಪಂಜಲ ಬೆಳಿಗ್ಗೆ 7-30 ಗಂಟೆಗೆ

