ಉಳ್ಳಾಲ: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಮಹಿಳೆಯ ಮೇಲಿನ ಹಲ್ಲೆ ಹಾಗೂ ಅವಮಾನಕಾರಿ ವರ್ತನೆ ಪ್ರಕರಣವನ್ನು ಉಳ್ಳಾಲ ಬ್ಲಾಕ್ ಮಹಿಳಾ ಕಾಂಗ್ರೆಸ್ ಸಮಿತಿ ತೀವ್ರವಾಗಿ ಖಂಡಿಸಿದೆ. ಪ್ರಕರಣದ ಸಂಬಂಧಿಸಿದಂತೆ ಜ. 06ರ ಮಂಗಳವಾರ ದಂದು ರಾತ್ರಿ ಸುಮಾರು 8 ಗಂಟೆಗೆ ಸುನೀತಾ ಲೋಬೋ ಅವರು ತಮ್ಮ ಪತಿ ವಿಲೈನ್ ಲೋಬೋ ಹಾಗೂ ಮಕ್ಕಳಾದ ವಿಶಾಲ್ ಲೋಬೋ ಮತ್ತು ವಿನೂಶ್ ಲೋಬೋರೊಂದಿಗೆ ಪಜೀರು ಗ್ರಾಮದ ಲೇಡಿ ಆಫ್ ಮರ್ಸಿ ಹಾಲ್ನಲ್ಲಿ ನಡೆದ ಮದುವೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ರೋಜ್ ಕಾರ್ಯಕ್ರಮಕ್ಕೆ ತೆರಳಿದ್ದರು. ರೋಜ್ ಕಾರ್ಯಕ್ರಮ ಮುಗಿಸಿ ಊಟ ಮಾಡಿದ ಬಳಿಕ, ರಾತ್ರಿ ಸುಮಾರು 10.45ರ ವೇಳೆಗೆ ಹಾಲ್ ಒಳಗೆ ನಿಂತಿದ್ದಾಗ ವಲೆರಿನ್ ಡಿಸೋಜ ಎಂಬ ಆರೋಪಿಯು ಸುನೀತಾ ಲೋಬೋ ಅವರನ್ನು ದುರುದ್ದೇಶದಿಂದ ನೋಡಿ ಮೈಗೆ ಕೈತಾಗಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪ್ರಶ್ನಿಸಿದಾಗ, “ನಾನು ಏನು ಬೇಕಾದರೂ ಮಾಡುತ್ತೇನೆ” ಎಂದು ಬೆದರಿಕೆ ಹಾಕಿ ಆರೋಪಿತನು ಅಲ್ಲಿಂದ ತೆರಳಿದ್ದು, ಸ್ವಲ್ಪ ಸಮಯದ…
Author: UllalaVani
ಉಳ್ಳಾಲ: ಮೇಯಲು ಹೋಗಿದ್ದ ಗಣೇಶ ರೈ ಹಾಗೂ ನಾರಾಯಣ ನಾಯ್ಕ ಎಂಬುವವರ ಒಟ್ಟು 04ದನಗಳು ಕಳ್ಳತನವಾಗಿದ್ದ ಪ್ರಕರಣಕ್ಕೆ ಸಂಬoಧಿಸಿದoತೆ ಇದೀಗ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮದ ಸೊಸೈಟಿ ಆವರಣದಿಂದ ಹುಲ್ಲು ಮೇಯುತ್ತಿದ್ದಾಗ 4 ದನಗಳನ್ನು ಉಳ್ಳಾಲ ತಾಲೂಕಿನ ಝುಲ್ಫಾನ್ ಮಾಲಿಕ್ ಕಳ್ಳತನ ಮಾಡಿದ್ದಾನೆ. ದನಗಳು ಮರಳಿ ಮನೆಗೆ ಬಾರದ ಹಿನ್ನಲೆ ದನದ ಮಾಲೀಕರು ಠಾಣೆಗೆ ದೂರು ನೀಡಿದ್ದರು. ಇದೀಗ ಆರೋಪಿಯನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ.
ಉಳ್ಳಾಲ;ಮಂಜನಾಡಿ ಶ್ರೀ ವಿಷ್ಣುಮೂರ್ತಿ ಜನಾರ್ದನ ದೇವಸ್ಥಾನದಲ್ಲಿ ವರ್ಷಾವಧಿ ಉತ್ಸವ ಹಾಗೂ ರಥೋತ್ಸವ ಇದೇ ಜ.11ರಿಂದ 18ರವರೆಗೆ ನಡೆಯಲಿದೆ ಎಂದು ನೂತನ ರಥ ನಿರ್ಮಾಣ ಸಮಿತಿಯ ಗೌರವಾಧ್ಯಕ್ಷರಾದ ತಿರುಮಲೇಶ್ವರ ಭಟ್ ಪೆರಡೆ ಹೇಳಿದ್ದಾರೆ. ಇವರು ಉಳ್ಳಾಲದಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಜ.15ರಂದು ನೂತನ ಮಹಾರಥ, ಪುಷ್ಪರಥ ಹಾಗೂ ಪಲ್ಲಕ್ಕಿ ಸಮರ್ಪಣೆ ನಡೆಯಲಿದ್ದು, ಜಾತ್ರೋತ್ಸವದ ಪ್ರಯುಕ್ತ ಜ.11ರಂದು ಕುತ್ತಾರು ರಾಜರಾಜೇಶ್ವರಿ ಸಾನಿಧ್ಯದಿಂದ ಮಧ್ಯಾಹ್ನ 2:30ಕ್ಕೆ ಹಸಿರು ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ. ಜನವರಿ 12ರಂದು ಬೆಳಗ್ಗೆ 8ರಿಂದ ಸಾಮೂಹಿಕ ರುದ್ರಯಾಗ, ಜನವರಿ 14ರಂದು ಧ್ವಜಾರೋಹಣ, ಜ.15ರಂದು ಬಲಿವಾಡು ಸೇವೆ, ಸಂಜೆ 6:30ಕ್ಕೆ ದೊಡ್ಡರಂಗ ಪೂಜೆ, ರಾತ್ರಿ 7ಕ್ಕೆ ಮಹಾರಥ, ಪುಷ್ಪರಥ, ಪಲ್ಲಕ್ಕಿ ಸಮರ್ಪಣೆ, ಸಂಜೆ 7:30ಕ್ಕೆ ಧಾರ್ಮಿಕ ಸಭಾ ಕಾರ್ಯಕ್ರಮ ರಾತ್ರಿ 8:30ಕ್ಕೆ ಬಲಿ ಉತ್ಸವ ಪುಷ್ಪ ರಥೋತ್ಸವ ನೆರವೇರಲಿದೆ ಎಂದರು. ಜ.15ರಂದು ನಡೆಯಲಿರುವ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಪಲಿಮಾರು ಮಠದ ವಿದ್ಯಾಧೀಶ…
ಬಿಕರ್ನಕಟ್ಟೆ, ಜ. 8; ಬಾಲ ಯೇಸುವಿನ ವಾರ್ಷಿಕ ಮಹೋತ್ಸವದ ಸಿದ್ಧತೆಯ ನೋವೆನಾದ ಮೂರನೇ ದಿನದಂದು, ಬಿಕರ್ನಕಟ್ಟೆಯ ಬಾಲ ಯೇಸುವಿನ ಪುಣ್ಯಕ್ಷೇತ್ರದಲ್ಲಿ ವಿಶ್ವ ಪರಿಸರ ದಿನವನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ದಿನವನ್ನು ಭಕ್ತಿ ಮತ್ತು ಆಧ್ಯಾತ್ಮಿಕ ಉತ್ಸಾಹದೊಂದಿಗೆ ಆಚರಿಸಲಾಗಿದ್ದು, ಹೆಚ್ಚಿನ ಸಂಖ್ಯೆಯ ಭಕ್ತಾದಿಗಳು ಪ್ರಾರ್ಥನೆ ಮತ್ತು ಚಿಂತನೆಯಲ್ಲಿ ಪಾಲ್ಗೊಂಡಿದ್ದರು. “ನಿನ್ನ ಶಿಲುಬೆಯನ್ನು ಹೊತ್ತು ನನ್ನನ್ನು ಅನುಸರಿಸು” ಎಂಬುದು ಈ ದಿನದ ಶೀರ್ಷಿಕೆಯಾಗಿದ್ದು, ಭಕ್ತಾದಿಗಳು ಕ್ರಿಸ್ತನನ್ನು ಅನುಸರಿಸುವಲ್ಲಿ ಎದುರಾಗುವ ಸವಾಲುಗಳು ಮತ್ತು ಅಡೆತಡೆಗಳನ್ನು ನಂಬಿಕೆ ಹಾಗೂ ತಾಳ್ಮೆಯಿಂದ ಸ್ವೀಕರಿಸುವ ಸತ್ಯ ಶಿಷ್ಯತ್ವದ ಬಗ್ಗೆ ಪ್ರತಿಬಿಂಬಿಸಲು ಆಹ್ವಾನ ನೀಡಲಾಯಿತು. ಆರೋಗ್ಯಕರ ಪರಿಸರ ಮತ್ತು ಪ್ರಕೃತಿಯ ಸೌಂದರ್ಯವೆಂಬ ದೇವರ ಕೊಡುಗೆಗಾಗಿ ಕೃತಜ್ಞತಾ ಪ್ರಾರ್ಥನೆಗಳನ್ನು ಸಲ್ಲಿಸಲಾಯಿತು, ಜೊತೆಗೆ ಅದರ ರಕ್ಷಣೆ ಮತ್ತು ಸಂರಕ್ಷಣೆಗಾಗಿ ವಿಶೇಷ ಬಿನ್ನಹಗಳನ್ನು ಅರ್ಪಿಸಲಾಯಿತು. ದಿನದ ಕಾರ್ಯಕ್ರಮಗಳು ಬೆಳಿಗ್ಗೆ 6:00 ಗಂಟೆಗೆ ಉಡುಪಿ ಧರ್ಮಪ್ರಾಂತ್ಯದ ಪತ್ರಿಕೆ ‘ಉಜ್ವಾಡ್’ನ ಸಂಪಾದಕರಾದ ವಂ| ಆಲ್ವಿನ್ ಸಿಕ್ವೇರಾ, ಒಸಿಡಿ ಇವರಿಂದ ಬಲಿಪೂಜೆಯೊಂದಿಗೆ ಪ್ರಾರಂಭವಾಯಿತು. ಬೆಳಿಗ್ಗೆ 7:30ರ ಪ್ರಾರ್ಥನಾ ವಿಧಿಯನ್ನು…
ಉಳ್ಳಾಲ: ಮಂಗಳೂರು ಪೊಲೀಸ್ ಕಮೀಷನರ್ ಹಾಗೂ ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಜಿಲ್ಲೆಯಾದ್ಯಂತ ಜೂಜು ಸಹಿತ ಕೋಳಿ ಅಂಕಕ್ಕೆ ತಡೆ ಹಾಕಿರುವ ಬೆನ್ನಲ್ಲೇ ಪೊಲೀಸ್ ಸರಹದ್ದಿನಲ್ಲಿ ಜೂಜು ರಹಿತ ಕೋಳಿ ಅಂಕ ಹರೇಕಳದ ಕುತ್ತಿಮುಗೇರು ಜಾತ್ರೆ ಸಂದರ್ಭ ಸಾಂಪ್ರದಾಯಿಕವಾಗಿ ಜರಗಿದ್ದು, ಈ ಕುರಿತ ಜವಾಬ್ದಾರಿಯನ್ನು ಬಿಜೆಪಿ ಮುಖಂಡ, ಅರೆ ಅಲೆಮಾರಿ ನಿಗಮದ ನಿಕಟಪೂರ್ವ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ವಹಿಸಿ ತನ್ನೂರಿನ ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕರಾವಳಿಗರ ಕೋಳಿ ಅಂಕವನ್ನು ಸಾಂಪ್ರಾದಾಯಿಕ ಹಿನ್ನಲೆಯಲ್ಲಿ ನೋಡುತ್ತಾರೆ. ತುಳುನಾಡಿನಲ್ಲಿ ಆರಾಧಿಸಲಾಗುವ ಪ್ರತಿಯೊಂದು ದೈವಕ್ಕೆ ಸಂಬAಧಪಟ್ಟ ದೈವಸ್ಥಾನದಲ್ಲೂ ಕೋಳಿ ಅಂಕ ಮಾಡೋದು ಕಡ್ಡಾಯ ಎನ್ನುವ ಅಲಿಖಿತ ನಂಬಿಕೆ ಇದೆ. ಆದರೆ ರಾಜ್ಯಸರಕಾದ ಕಾನೂನಿಂದ ಸಾಂಪ್ರಾದಾಯಕ್ಕೆ ಕುತ್ತು ಬಂದಿದೆ. ಇದರಿಂದ ಆಕ್ರೋಶ ವ್ಯಕ್ತವಾದ ಹಿನ್ನಲೆ ಕೇವಲ ಗಂಟೆಗಳ ಸಮಯದಲ್ಲಿ ಸಾಂಪ್ರಾದಾಯಿಕ ಕೋಳಿ ಅಂಕಕ್ಕೆ ಮಾತ್ರ ಅವಕಾಶವನ್ನು ನೀಡಲಾಗುತ್ತಿದೆ. ಅಂತೆಯೇ ನಿಗದಿತ ಸಮಯದಲ್ಲಿ ಕುತ್ತಿಮುಗೇರು ಜಾತ್ರೆಯ ಹಿನ್ನಲೆ ಕೋಳಿ ಅಂಕ ನಡೆಯಿತು. ಪೊಲೀಸ್ ಆಯುಕ್ತರು ನೀಡಿದ ಗಡುವಿನೊಳಗೆ ಕೋಳಿ…
ಮಂಗಳೂರು: ಹೊಸವರ್ಷದ ಶುಭಾರಂಭದಂದು ‘ಸಾಂಗ್ಸ್ ಪ್ರೀಮಿಯರ್’ ಎನ್ನುವ ವರ್ಣರಂಜಿತ ಕಾರ್ಯಕ್ರಮದಲ್ಲಿ ತ್ರಿವಿಕ್ರಮ ಸಿನೆಮಾಸ್ ಮತ್ತು ಸಕ್ಸಸ್ ಫಿಲಂಸ್ ಬ್ಯಾನರ್ ಅಡಿಯ “ಕೊರಗಜ್ಜ” ಚಿತ್ರದ ಎಲ್ಲಾ ಹಾಡುಗಳನ್ನು ನಮ್ಮ ಚಿತ್ರತಂಡ ಸುಮಾರು ಮುನ್ನೂರಕ್ಕೂ ಹೆಚ್ಚು ಆಡಿಯೋ ಪ್ಲಾಟ್ ಫಾರ್ಮ್ ಗಳಲ್ಲಿ ಝೀ ಮ್ಯೂಜಿಕ್ ಮುಖೇನ ಹರಿಯಬಿಟ್ಟಿತ್ತು. ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯ ಹಾಲಿಡೇ ಇನ್ ನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನಾವು ಚಿತ್ರದ ಹಾಡುಗಳಿಗೆ ರೀಲ್ಸ್ ಸ್ಪರ್ಧೆಯನ್ನು ಘೋಷಿಸಿದ್ದೆವೆಯೇ ಹೊರತು, ತ್ರಿವಿಕ್ರಮ ಸಪಲ್ಯ ನಿರ್ಮಾಣ ದಲ್ಲಿರುವ “ಕೊರಗಜ್ಜ” ಚಿತ್ರದ ದೈವದ ಬಗ್ಗೆ ರೀಲ್ಸ್ ಮಾಡಿ ಎಂದು ಹೇಳಿಲ್ಲ. ನಮ್ಮ ಮಾತನ್ನು ಕರ್ನಾಟಕದ ಕೆಲ ಭಾಗಗಳಲ್ಲಿ ತಪ್ಪಾಗಿ ಅರ್ಥೈಸಲಾಗಿದೆ ಎಂದು ಸಿನಿಮಾದ ನಿರ್ದೇಶಕ ಸುಧೀರ್ ಅತ್ತಾವರ ತಿಳಿಸಿದ್ದಾರೆ.ರೀಲ್ಸ್ ಎಂದರೆ ವೀಡಿಯೋ ತುಣುಕುಗಳು. ಈಗಾಗಲೇ ದೈವಗಳ ಬಗ್ಗೆ ಮತ್ತು ದೈವದ ಆರಾಧನಾ ಕ್ರಮಗಳಾದ ಕೋಲ, ನೇಮ, ತಂಬಿಲ, ಅಗೆಲು…ಹೀಗೆ ದೈವದ ವಿಚಾರವಾಗಿ ಸಹಸ್ರಾರು ರೀಲ್ಸ್ ಗಳು ಸೋಷಿಯಲ್ ಮೇಡಿಯಾಗಳಲ್ಲಿ ಹರಿದಾಡುತ್ತಿದೆ. ಹಾಗಿರುವಾಗ ಚಿತ್ರದ ಹಾಡುಗಳಿಗೆ ರೀಲ್ಸ್…
ತೊಕ್ಕೊಟ್ಟು; ಉಳ್ಳಾಲ ತಾಲೂಕಿನಲ್ಲಿ ಆರೋಗ್ಯ ಮತ್ತು ಶೈಕ್ಷಣಿಕ ಕ್ರಾಂತಿಯನ್ನು ನಡೆಸಿರುವ ಸೇವಾ ಮಾಣಿಕ್ಯ ನಿಟ್ಟೆ ಸಮೂಹ ಸಂಸ್ಥೆಯ ಅಧ್ಯಕ್ಷರು ಡಾ.ಎನ್ ವಿನಯ ಹೆಗ್ಡೆಯವರಿಗೆ ಶ್ರದ್ಧಾಂಜಲಿ ಸಭೆ ಮತ್ತು ನುಡಿನಮನವನ್ನು ಭಾರತೀಯ ಜನತಾ ಪಾರ್ಟಿ ಮಂಗಳೂರು ವಿಧಾನಸಭಾ ಕ್ಷೇತ್ರದ ವತಿಯಿಂದ ತೊಕ್ಕೊಟು ವಿನಂಬ್ರಾ ಸಭಾಂಗಣದಲ್ಲಿ ನಡೆಯಿತು. ಸರಳ, ಸಜ್ಜನಿಕೆಯ ನಿಸ್ವಾರ್ಥ ಗುಣದ ಡಾ.ವಿನಯ ಹೆಗ್ಡೆ ಅವರ ಭಾವಚಿತ್ರಕ್ಕೆ ಪುರ್ಷ್ಪಾಚನೆ ಮಾಡುವ ಮೂಲಕ ಗಣ್ಯರು ಗೌರವದ ನಮನ ಸಲ್ಲಿಸಿದ್ದಾರೆ. ಸಹಕಾರಿ ಪ್ರಕೊಷ್ಠ ಜಿಲ್ಲಾ ಸಂಚಾಲಕರಾದ ಟಿ ರಾಜಾರಾಮ್ ಭಟ್ ಅವರು ಮಾತನಾಡಿ, ಹುಟ್ಟು ಮತ್ತು ಸಾವುಗಳ ನಡುವಿನ ಸಾಧನೆ ಆದರ್ಶಮಯ ಅನ್ನುವ ಮಾತಿದೆ. ಇದಕ್ಕೆ ಶಿಕ್ಷಣದಲ್ಲಿ ಕ್ರಾಂತಿಯನ್ನು ಮಾಡಿದ ಡಾ.ವಿನಯ ಹೆಗ್ಡೆ ಅವರ ಬದುಕು ಸಾಕ್ಷಿಯಾಗತ್ತೆ. ಡಾ.ವಿನಯ ಹೆಗ್ಡೆಯವರ ಜೀವನ ಮುಂದಿನ ಪೀಳಿಗೆಗೆ ದಾರಿ ದೀಪವಾಗಲಿ ಎಂದು ಹಾರೈಸಿದ್ರು. ಈ ವೇಳೆ ಅರೆಅಲೆಮಾರಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ, ವಿನಯ ಹೆಗ್ಡೆ ಅವರು ದೇರಳಕಟ್ಟೆಯನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸುವಲ್ಲಿ…
ಉಡುಪಿ, ಜ.07: ಶಿರೂರು ಮಠದ ಪರ್ಯಾಯ ಮಹೋತ್ಸವದ ಕುರಿತು ಅಕ್ಷೇಪಾರ್ಹ ಪೋಸ್ಟ್ ಹಾಕಿದ ಆರೋಪಿಯೋರ್ವನನ್ನು ಬಂಧಿಸಲಾಗಿದೆ. ಈ ಬಾರಿಯ ಶಿರೂರು ಮಠದ ಪರ್ಯಾಯ ಮಹೋತ್ಸವದ ಪ್ರಯುಕ್ತ ಹೊರೆಕಾಣಿಕೆ ಅರ್ಪಿಸುವ ಸಂಬAಧ ರಚಿಸಲಾದ ಉಡುಪಿ ಜಿಲ್ಲಾ ಮುಸ್ಲಿಮ್ ಸೌಹಾರ್ದ ಪರ್ಯಾಯ ಸಮಿತಿ ಬಗ್ಗೆ ಧರ್ಮ, ಜನಾಂಗಗಳ ಮಧ್ಯೆ ದ್ವೇಷವನ್ನು ಉತ್ತೇಜಿಸುವ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ತೊಂದರೆ ಮಾಡುವ ರೀತಿ ಆಕ್ಷೇಪಾರ್ಹ ಬರಹ ಬರೆದು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದ ಎರಡು ಪ್ರತ್ಯೇಕ ಆರೋಪ ಪ್ರಕರಣಗಳಿಗೆ ಸಂಬAಧಿಸಿ ಓರ್ವನನ್ನು ಬಂಧಿಸಲಾಗಿದೆ.ಕಾರ್ಕಳ ತಾಲೂಕಿನ ನಿಟ್ಟೆ ಅಂಬಡೆಕಲ್ಲು ನಿವಾಸಿ ಸುಧಾಕರ (37) ಬಂಧಿತ ಆರೋಪಿ. ಈತನನ್ನು ಕಾರ್ಕಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಲಯವು ಆರೋಪಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಇನ್ನೊಂದು ಪ್ರಕರಣದ ಆರೋಪಿ ನಿಟ್ಟೆಯ ಸುದೀಪ್ ಶೆಟ್ಟಿ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ತಲಪಾಡಿ,ಜ.7: ಮೀನು ಅಂದರೆ ಯಾರಿಗೆ ತಾನೆ ಇಷ್ಟವಿಲ್ಲ. ಅದರಲ್ಲೂ ಕರಾವಳಿಗರಿಗಂತೂ ದಿನನಿತ್ಯದ ಊಟದಲ್ಲಿ ಮೀನು ಇರಲೇ ಬೇಕು. ಹೆಚ್ಚಾಗಿ ಫ್ರೆಶ್ ಮೀನನ್ನು ಜನರು ಮುಗಿಬಿದ್ದು ಖರೀದಿಸುತ್ತಾರೆ. ಅದರಲ್ಲೂ ತಲಪಾಡಿ ಮೀನು ಮಾರುಕಟ್ಟೆ ಎಲ್ಲ ಬಗೆಯ ವೆರೈಟಿ ಮೀನುಗಳ ಗೂಡು. ಹೌದು, ತಲಪಾಡಿ ಮೀನು ಮಾರುಕಟ್ಟೆಗೆ ಕಾಸರಗೋಡಿನಿಂದ ಉಳ್ಳಾಲದವರೆಗಿನ ಜನರು ಹೋಗಿ ರುಚಿ-ಶುಚಿಯಾದ ಮೀನುಗಳನ್ನು ಖರೀದಿಸುತ್ತಾರೆ. ಸಂಜೆಯಾಗಿತ್ತಿದ್ದAತೆ ಮಾರುಕಟ್ಟೆಯಲ್ಲಿ ಜನಜಂಗುಳಿ ಜಾಸ್ತಿಯಾಗುತ್ತದೆ. ಇಲ್ಲಿ ಸಿಗುವಂತಹ ಫ್ರೆಶ್ ವೆರೈಟಿ ಮೀನುಗಳು ಇತರ ಕಡೆ ಸಿಗುವುದಿಲ್ಲ. ಇದು ಮಾರುಕಟ್ಟೆಯ ಅಭಿವೃದ್ಧಿಗೆ ಕಾರಣವಾಗಿದೆ ಎಂದರೆ ತಪ್ಪಗಲಾರದು. ಮಾರುಕಟ್ಟೆಗೆ ಬರುವ ಗ್ರಾಹಕರು ನಿರಾಶರಾಗಿ ವಾಪಾಸ್ ಹೋಗುವುದಿಲ್ಲ ಎಂಬುವುದೇ ಇಲ್ಲಿನ ಮಾರುಕಟ್ಟೆಯ ವಿಶೇಷವಾಗಿದೆ. ಬೂತಾಯಿ, ಬಂಗುಡೆ, ಅಂಜಲ್, ಸಿಗಡಿ, ಏಡಿ, ಸೇರಿದಂತೆ ಸಣ್ಣ ಮೀನಿನಿಂದ ಹಿಡಿದು ದೊಡ್ಡ ಮೀನಿನವರೆಗಿನ ಎಲ್ಲ ವೈವಿಧ್ಯಮಯ ಮೀನುಗಳು ಲಭ್ಯ.
ಕರ್ನಾಟಕ; ಅಡಿಕೆ ಬೆಳೆಗಳನ್ನು ಇತರೆ ಬೆಳೆಗಳಿಗೆ ಹೋಲಿಸಿದರೆ ಬೆಳೆಯುವುದು ಸುಲಭ. ಒಮ್ಮೆ ಗಿಡ ನೆಟ್ಟರೆ ಮುಗೀತು. ಉಳಿದ ಬೆಳೆಗಳಷ್ಟು ಪಾಲನೆ ಇವಕ್ಕೆ ಬೇಕಿಲ್ಲ. ಆದಾಯವೂ ಭರ್ಜರಿಯಾಗಿ ಬರುತ್ತೆ ಎಂಬ ತಪ್ಪು ಕಲ್ಪನೆ ಹಲವರಲ್ಲಿದೆ. ಆದ್ರೆ ವಾಸ್ತವದಲ್ಲಿ ಅಡಿಕೆ ಬೆಳಗಾರರ ಗೋಳು ಒಂದೆರಡಲ್ಲ. ಸುಳಿ ರೋಗ, ಕೊಳೆ ರೋಗ ಹೀಗೆ ನಾನಾ ಸಂಕಷ್ಟಗಳನ್ನು ಇವರು ಎದುರಿಸುತ್ತಿದ್ದಾರೆ. ಇವುಗಳ ಪಟ್ಟಿಗೆ ಈಗ ಎಲೆಚುಕ್ಕಿ ರೋಗವೂ ಸೇರ್ಪಡೆಯಾಗಿರೋದು, ಅಡಿಕೆಯನ್ನೇ ನಂಬಿ ಜೀವನ ನಡೆಸುತ್ತಿರುವವರ ಆತ್ಮಸ್ಥೈರ್ಯವನ್ನೇ ಕುಗ್ಗಿಸಿದೆ. ಈ ನಡುವೆ ಕೇಂದ್ರ ಸರ್ಕಾರ ವಿದೇಶಗಳಿಂದ ಅಡಿಕೆ ಆಮದು ಮಾಡಿಕೊಳ್ಳುತ್ತಿರುವ ಕಾರಣ ಬೆಳೆಗೆ ಉತ್ತಮ ಬೆಲೆಯ ನಿರೀಕ್ಷೆಯೂ ಹುಸಿಯಾಗಿದೆ.ಕರ್ನಾಟಕ ರಾಜ್ಯದಲ್ಲಿ ಹೆಚ್ಚಿರುವ ಕೊಳೆ ಮತ್ತು ಎಲೆ ಚುಕ್ಕಿ ರೋಗಕ್ಕೆ ರೈತರು ಅಕ್ಷರಶಃ ನಲುಗಿದ್ದಾರೆ. ಕೊಳೆ ರೋಗದ ಕಾರಣ ಅಡಿಕೆ ಉದುರಿ ಹಾಳಾದರೆ, ಹಿಡಿಮುಂಡಿ ರೋಗದಿಂದ ಮೇಲ್ಭಾಗ ಸಂಪೂರ್ಣ ಒಣಗಿ ಅಡಿಕೆ ಗಿಡಗಳು ಸಾಯುತ್ತಿವೆ. ಇದು ಸಾಲದಕ್ಕೆ ಎಲೆಚುಕ್ಕಿ ರೋಗವೂ ಗಿಡಗಳನ್ನು ಬಾಧಿಸುತ್ತಿರುವ ಕಾರಣ ಬೆಳೆ ಹಾಗಿರಲಿ, ಅಡಿಕೆ ಗಿಡಗಳನ್ನ…

