ಮಡಿಕೇರಿ, ಮೇ 18: ಸಾಕಾನೆಗಳ ಕಾದಾಟದ ವೇಳೆ ಅವುಗಳ ನಡುವೆ ಸಿಲುಕಿ ಮಹಿಳೆಯೋರ್ವರು ದಾರುಣವಾಗಿ ಮೃತಪಟ್ಟಿರುವ ಘಟನೆ ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ದುಬಾರೆ ಶಿಬಿರದಲ್ಲಿ ನಡೆದಿದೆ. ಒಂದು ಆನೆ ದಂತದಿಂದ ತಿವಿದ ಪರಿಣಾಮ ಮತ್ತೊಂದು ಆನೆ ನೆಲಕ್ಕುರಿಳಿದೆ. ಈ ವೇಳೆ ಅಲ್ಲೇ ಇದ್ದ ಮಹಿಳೆ ಆನೆಯಡಿ ಸಿಲುಕಿದ್ದಾರೆ. ಗಂಭೀರ ಗಾಯಗೊಂಡಿದ್ದ ಆಕೆಯನ್ನು ಕುಶಾಲನಗರ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ. ಮೃತರನ್ನು ಚೆನ್ನೈ ಮೂಲದ ಜಿನ್ಶು(33) ಎಂದು ಗುರುತಿಸಲಾಗಿದೆ. ಚೆನ್ನೈ ಮೂಲದ ಜಿನ್ಶು ಎಂಬ ಮಹಿಳೆ ಕುಟುಂಬ ಸಮೇತ ನಂಜರಾಯಪಟ್ಟಣದ ದುಬಾರೆ ಆನೆ ಶಿಬಿರಕ್ಕೆ ಪ್ರವಾಸಕ್ಕೆ ಬಂದಿದ್ದರು. ಅವರು ಕಾವೇರಿ ನೀರಲ್ಲಿ ಆಟವಾಡುತ್ತಿರುವ ಸಂದರ್ಭ ಮಾವುತರು ಆನೆಗಳನ್ನು ಸ್ನಾನಕ್ಕೆಂದು ಕರೆತಂದಿದ್ದರು. ಈ ವೇಳೆ ಆನೆಗಳ ನಡುವೆ ಕಾದಾಟ ಶುರುವಾಗಿದೆ. ದುರ್ದೈವ ಎಂಬಂತೆ ಅಲ್ಲೇ ಇದ್ದ ಪ್ರವಾಸಿ ಮಹಿಳೆಯ ಮೇಲೆ ಆನೆ ಬಿದ್ದಿದ್ದು, ನೆಲಕ್ಕೆ ಅಪ್ಪಳಿಸಿದ ಜಿನ್ಶು ಅವರ ತಲೆಗೆ ಗಂಭೀರ ಗಾಯವಾದ ಪರಿಣಾಮ ಅವರು ಮೃತಪಟ್ಟಿದ್ದಾರೆ.ಆನೆಗಳ ಕಾದಾಟದ ವೇಳೆ ಅವುಗಳ ಕಾಲಿನ…
Author: UllalaVani
ಇರಾ ಗ್ರಾಮದ ಬಾಳೆಪುಣಿ ನಿವಾಸಿ ಸಿ.ಎಚ್. ಮಹಮ್ಮದ್ ಅವರಿಗೆ ಮರ್ಹೂಂ ಹಾಜಿ ಅಬ್ದುಲ್ ರಹಿಮಾನ್ ಹಾಗೂ ಅಳಕೆ ಮಜಲ್ ಕುಟುಂಬದ ವತಿಯಿಂದ ಗೌರವ ಸನ್ಮಾನ ಕಾರ್ಯಕ್ರಮ ನಡೆಯಿತು. ಸಿದ್ದೀಕ್ ಅವರ ಮನೆಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಸಮಾಜಮುಖಿ ಸೇವೆ ಹಾಗೂ ಸಮುದಾಯದ ಅಭಿವೃದ್ಧಿಗೆ ನೀಡಿದ ಕೊಡುಗೆಯನ್ನು ಪರಿಗಣಿಸಿ ಸಿ.ಎಚ್. ಮಹಮ್ಮದ್ ಅವರನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕುಟುಂಬ ಸದಸ್ಯರು, ಬಂಧುಬಳಗ ಹಾಗೂ ಗಣ್ಯರು ಉಪಸ್ಥಿತರಿದ್ದು ಶುಭ ಹಾರೈಸಿದರು.
ನವದೆಹಲಿ; ಪ್ರಧಾನಿ ನರೇಂದ್ರ ಮೋದಿ ಅವರು ಆರು ದಿನಗಳ ಐದು ರಾಷ್ಟ್ರಗಳ ಪ್ರವಾಸದಲ್ಲಿದ್ದು, ಯುಎಇ ಸೇರಿದಂತೆ ಐದು ದೇಶಗಳ ರಾಜತಾಂತ್ರಿಕ ಪ್ರವಾಸ ಕೈಗೊಂಡಿದ್ದಾರೆ. ಪಶ್ಚಿಮ ಏಷ್ಯಾದ ಯುದ್ಧದ ಭೀತಿಯ ನಡುವೆ ಇಂಧನ ಭದ್ರತೆ ಹಾಗೂ ಯುರೋಪ್ ರಾಷ್ಟ್ರಗಳೊಂದಿಗೆ ರಕ್ಷಣೆ ಮತ್ತು ವ್ಯಾಪಾರ ಒಪ್ಪಂದಗಳನ್ನು ಬಲಪಡಿಸುವುದು ಈ ಭೇಟಿಯ ಮುಖ್ಯ ಗುರಿಯಾಗಿದೆ. ಯುಎಇ ಹಾಗೂ ನೆದರ್ಲ್ಯಾಂಡ್ ಭೇಟಿ ಬಳಿಕ ಸ್ವೀಡನ್ ಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವೀಡನ್ನ ಪ್ರಧಾನಿ ಉಲ್ಫ್ ಕ್ರಿಸ್ಟರ್ಸನ್ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಇದೇ ವೇಳೆ ಮೋದಿಗೆ ಸ್ವೀಡನ್ನ ಅತ್ಯುನ್ನತ ನಾಗರಿಕ ಗೌರವವಾದ ‘ರಾಯಲ್ ಆರ್ಡರ್ ಆಫ್ ಪೋಲಾರ್ ಸ್ಟಾರ್, ಕಮಾಂಡರ್ ಗ್ರಾಂಡ್ ಕ್ರಾಸ್’ ಪ್ರಶಸ್ತಿ ನೀಡಿ ಗೌರವಿಸಲಾಯ್ತು. ಮೋದಿ ಅವರಿಗೆ ದೊರೆತ 31ನೇ ಜಾಗತಿಕ ಗೌರವ ಎರಡು ದಿನಗಳ ಭೇಟಿಗಾಗಿ ಭಾನುವಾರ ಸ್ವೀಡನ್ಗೆ ಆಗಮಿಸಿದ ಮೋದಿ ಅವರನ್ನ ಸ್ವೀಡನ್ನ ಪ್ರಧಾನಿ ಉಲ್ಫ್ ಕ್ರಿಸ್ಟರ್ಸನ್ ಅವರು ಗೋಥೆನ್ಬರ್ಗ್ ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಂಡಿದ್ದು, ಬಳಿಕ ಉಭಯ ನಾಯಕರು ವ್ಯಾಪಾರ, ತಂತ್ರಜ್ಞಾನ,…
ಉಳ್ಳಾಲ: ಜಲಸಿರಿ ಯೋಜನೆಯಡಿ ಕುಡಿಯುವ ನೀರು ಪೂರೈಕೆ ಒಂದೇ ವಾರದಲ್ಲಿ ಮಾಡುತ್ತೇವೆ ಎಂದು ಭರವಸೆ ನೀಡಿದ ಕುಡಿಯುವ ನೀರು ಇಲಾಖೆ ಅಧಿಕಾರಿಗಳು ಸಭೆಗೆ ಗೈರು ಹಾಜರಾದ ಬಗ್ಗೆ ವ್ಯಾಪಕ ಚರ್ಚೆ ಸೋಮೇಶ್ವರ ಪುರಸಭೆ ಸಾಮಾನ್ಯ ಸಭೆಯಲ್ಲಿ ನಡೆಯಿತು. ಪುರಸಭೆ ಅಧ್ಯಕ್ಷ ಕಮಲ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಪುರಸಭೆ ವಿರೋಧ ಪಕ್ಷದ ನಾಯಕ ಪುರುಷೋತ್ತಮ ಶೆಟ್ಟಿ ಅವರು, ಪುರಸಭೆ ವ್ಯಾಪ್ತಿಯ ಕೆಲವು ಪ್ರದೇಶಗಳಲ್ಲಿ ಅಮೃತ್ 2.0 ಕುಡಿಯುವ ನೀರಿನ ಸಂಪರ್ಕ ಆಗಿಲ್ಲ. ಇದರಿಂದ ಬಹಳಷ್ಟು ಮಂದಿ ಗೆ ತೊಂದರೆ ಆಗಿದೆ.ಈ ಬಗ್ಗೆ ಯಾರಲ್ಲಿ ಪ್ರಶ್ನಿಸಬೇಕು ಎಂದು ಅವರು ಅಧ್ಯಕ್ಷರನ್ನು ತರಾಟೆ ಗೈದರು. ಜಲಸಿರಿ ಕುಡಿಯುವ ನೀರಿನ ಯೋಜನೆ ಅಧಿಕಾರಿಗಳು ಮುಂದಿನ ವಾರದಲ್ಲಿ ವಿಶೇಷ ಸಭೆ ನಡೆಸಿ ಸಮಸ್ಯೆ ಇತ್ಯರ್ಥ ಮಾಡಲಿದ್ದಾರೆ ಎಂದು ಉಪಾಧ್ಯಕ್ಷ ರವಿಶಂಕರ್ ಸಭೆಗೆ ತಿಳಿಸಿದರು. ಪುರಸಭೆ ವ್ಯಾಪ್ತಿಯಲ್ಲಿ ಅನಧಿಕೃತ ಕಟ್ಟಡ, ಬಡಾವಣೆ ನಿರ್ಮಾಣ ಆಗುತ್ತದೆ. ಪರವಾನಿಗೆ ಇಲ್ಲದ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡಬಾರದು ಎಂದು ಹರೀಶ್…
ಬೆಂಗಳೂರು: ಮಧ್ಯಪ್ರಾಚ್ಯ ಯುದ್ಧದ ಕಿಚ್ಚು ಮತ್ತು ಪೆಟೋಲ್, ಡೀಸೆಲ್ ದರ ಏರಿಕೆ ಈಗ ನಿಮ್ಮ ಮನೆಯ ಔಷಧದ ಡಬ್ಬಿಗೂ ತಟ್ಟಿದ್ದು, ಅಗತ್ಯ ಮಾತ್ರೆಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಿದೆ. ಹೌದು.. ಔಷಧಗಳ ಮಾತ್ರೆಗಳ ತಯಾರಿಕೆಗೆ ಪೆಟ್ರೋಕೆಮಿಕಲ್ಸ್ ಅತ್ಯಗತ್ಯ. ಯುದ್ಧದ ಪರಿಣಾಮ ಸಪ್ಲೈ ಚೈನ್ ಮೇಲೆ ಬಿದ್ದ ಕಾರಣ ಔಷಧಗಳ ದರ ಸರಾಸರಿ 15 ರಷ್ಟು ಔಷಧ ದರಗಳು ಹೆಚ್ಚಳವಾಗಿದೆ. ಬಿಪಿ, ಸಕ್ಕರೆ ಕಾಯಿಲೆಯಿಂದ ಹಿಡಿದು ಸಾಮಾನ್ಯ ಜ್ವರದ ಮಾತ್ರೆಗಳ ಬೆಲೆ ಹೆಚ್ಚಳ ಬಡವರ ಬದುಕನ್ನು ಇನ್ನಷ್ಟು ಹೈರಾಣಾಗಿಸಿದೆ. ಪ್ಯಾರಸಿಟಮಲ್, ಕಾರ್ಡಿಯಾಕ್ ಡ್ರಗ್ಸ್, ಡಯಾಬಿಟಿಸ್ ಡ್ರಗ್ಸ್, ಗ್ಯಾಸ್ಟ್ರಿಕ್ ಟ್ಯಾಬ್ಲೆಟ್, ಕಾಫ್ ಸಿರಪ್, ಐರನ್ ಟಾನಿಕ್ಸ್ ಸೇರಿ 600ಕ್ಕೂ ಹೆಚ್ಚು ಔಷಧಗಳ ಬೆಲೆ ಹೆಚ್ಚಳವಾಗುತ್ತಿದೆ. ಹಂತ ಹಂತವಾಗಿ ಬ್ಯಾಚ್ ಮಾದರಿಯಲ್ಲಿ ಒಂದೊಂದೇ ಮಾತ್ರೆಗಳ ಬೆಲೆ ಏರಿಕೆಯತ್ತ ಸಾಗಿದೆ.ಯುದ್ಧದ ಎಫೆಕ್ಟ್ ಕಾರಣದಿಂದ ಔಷಧಗಳ ಬೆಲೆ 15 % ರಷ್ಟು ಏರಿಕೆ ಕಾಣುತ್ತಿದೆ. ಕೇವಲ ಔಷಧಗಳ ಬೆಲೆ ಮಾತ್ರವಲ್ಲ ಕಾಸ್ಮೆಟಿಕ್ , ಬೇಬಿ ಪ್ರಾಡಕ್ಟ್ ಗಳ ಬೆಲೆಯೂ ಏರಿಕೆ ಕಾಣುತ್ತಿದೆ. ಹಳೆಯ ಬೆಲೆಯ…
ಪುಣೆ, ಮೇ 18: ದೇಶದ ಪ್ರತಿಷ್ಠಿತ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳಿಗೆ ಬೆಚ್ಚಿಬೀಳಿಸುವ ಮಾಹಿತಿಗಳು ಲಭ್ಯವಾಗಿವೆ. ಪುಣೆಯ 46 ವರ್ಷದ ಬ್ಯೂಟಿಷಿಯನ್ ಒಬ್ಬರು ಈ ಇಡೀ ಜಾಲದ “ಪ್ರಮುಖ ಕೊಂಡಿ”ಯಾಗಿ ಕೆಲಸ ಮಾಡಿರುವುದು ಪತ್ತೆಯಾಗಿದೆ. ಈ ಮೂಲಕ ಪರೀಕ್ಷಾ ಮಂಡಳಿಯ (NTA) ಉನ್ನತ ಮಟ್ಟದ ಅಧಿಕಾರಿಯೇ ಈ ಸೋರಿಕೆಯ ಮಾಸ್ಟರ್ಮೈಂಡ್ ಆಗಿರುವುದು ತನಿಖೆಯಲ್ಲಿ ಬಯಲಾಗಿದೆ. ಎನ್ಟಿಎ (NTA) ಸಮಿತಿಯ ತಜ್ಞೆಯೇ ಸೂತ್ರಧಾರಿ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA)ಯ 2026ನೇ ಸಾಲಿನ ನೀಟ್-ಯುಜಿ ಪ್ರಶ್ನೆ-ನಿಗದಿ ಸಮಿತಿಯ ತಜ್ಞೆಯಾಗಿದ್ದ 57 ವರ್ಷದ ಮನೀಷಾ ಗುರುನಾಥ್ ಮಾಂಧರೆ ಅವರನ್ನು ಸಿಬಿಐ ಬಂಧಿಸಿದೆ. ಈಕೆಗೆ ಸಸ್ಯಶಾಸ್ತ್ರ (Botany) ಮತ್ತು ಪ್ರಾಣಿಶಾಸ್ತ್ರ (Zoology) ಎರಡೂ ವಿಷಯಗಳ ಅಂತಿಮ ಪ್ರಶ್ನೆಪತ್ರಿಕೆಗಳನ್ನು ನೋಡಲು ಅವಕಾಶವಿತ್ತು. ಆರ್ಥಿಕ ಲಾಭಕ್ಕಾಗಿ ಮಾಂಧರೆ ಈ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷೆಗೂ ಮುನ್ನವೇ ಸೋರಿಕೆ ಮಾಡಿದ್ದರು ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ. ಇವರನ್ನು 14 ದಿನಗಳ ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿದೆ. ಪುಣೆಯ…
ಅಹಮದಾಬಾದ್, ಮೇ. 18 ;ಪಾನಿಪುರಿ ಅಂದ್ರೆ ಮಕ್ಕಳಿಂದ ಹಿಡಿದು ದೊಡ್ಡವರಿಗೂ ಅಚ್ಚುಮೆಚ್ಚು. ಆದರೆ ಅಹಮದಾಬಾದ್ನ ರಾಣಿಪ್ ಪ್ರದೇಶದಲ್ಲಿ ಪಾನಿಪುರಿ ತಿನ್ನುತ್ತಿದ್ದ ಯುವತಿಯೊಬ್ಬಳಿಗೆ ಪಾನಿಪುರಿಯೊಳಗೆ ಮೂಳೆ ಪತ್ತೆಯಾಗಿದೆ. ಪಾನಿಪುರಿಯಲ್ಲಿ ಮೂಳೆ ಕಂಡ ಯುವತಿಗೆ ಶಾಕ್ ಆಗಿದ್ದು, ಅಂಗಡಿ ಮಾಲೀಕನನ್ನು ಪ್ರಶ್ನಿಸಿದ್ದಾಳೆ. ಅಂಗಡಿಯವನು ಅದು ಮೂಳೆಯಲ್ಲ ಮರದ ತುಂಡು ಎಂದು ವಾದಿಸಿದ್ದಾನೆ. ಕೊನೆಗೆ ಮಾಲೀಕನನ್ನ ತರಾಟೆಗೆ ತೆಗೆದುಕೊಳ್ಳುತ್ತಿದ್ದಂತೆ ಮೂಳೆ ಎಂದು ಒಪ್ಪಿಕೊಂಡು ಯುವತಿ ಬಳಿ ಕ್ಷಮೆಯಾಚಿಸಿದ್ದಾನೆ.ಈ ಘಟನೆಯನ್ನು ಯುವತಿ ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾಳೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬೀದಿ ಆಹಾರದ ಸ್ವಚ್ಛತೆ ಹಾಗೂ ಗುಣಮಟ್ಟದ ಬಗ್ಗೆ ಆತಂಕ ಸೃಷ್ಟಿಯಾಗಿದೆ.
ಕಾಸರಗೋಡು, ಮೇ. 18 : ಬ್ಯಾಂಕ್ ಸೆಕ್ಯೂರಿ ಗಾರ್ಡ್ ಗೆ ಚಾಕುವಿನಿಂದ ಇರಿದು ಕೊಲೆಗೈದ ಘಟನೆ ಕಾಸರಗೋಡಿನ ಬದಿಯಡ್ಕ ಠಾಣಾ ವ್ಯಾಪ್ತಿಯ ಮಾರ್ಪನಡ್ಕದಲ್ಲಿ ನಡೆದಿದೆ. ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್ ಸೆಕ್ಯೂರಿಟಿ ಗಾರ್ಡ್ ಸುರೇಶ್ ( 42) ಕೊಲೆ ಗೀಡಾದವರು. ರವಿವಾರ ರಾತ್ರಿ 9.30 ರ ಸುಮಾರಿಗೆ ಘಟನೆ ನಡೆದಿದೆ. ಘಟನೆ ಬಗ್ಗೆ ಕಿರಣ್ , ಅಖಿಲೇಶ್ ವಿರುದ್ಧ ಬದಿಯಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ರವಿವಾರ ಸಂಜೆ ಕುಂಬ್ಡಾಜೆ ಗ್ರಾಮ ಪಂಚಾಯತ್ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾಟ ವೇಳೆ ನಡೆದ ಮಾತಿನ ಚಕಮಕಿ ಕೊಲೆಗೆ ಕಾರಣ ಎನ್ನಲಾಗಿದೆ.ಮಾತಿನ ಚಕಮಕಿ ವಿಕೋಪಕ್ಕೆ ತಿರುಗಿ ಆರೋಪಿಗಳು ಸುರೇಶ್ ಗೆ ಚಾಕುವಿನಿಂದ ಇರಿದಿದ್ದಾರೆ. ಪರಿಣಾಮ ಗಂಭೀರ ಗಾಯಗೊಂಡ ಸುರೇಶ್ ರನ್ನು ಆಸ್ಪತ್ರೆಗೆ ತಲುಪಿಸಿದರೂ ಜೀವ ಉಳಿಸಲಾಗಲಿಲ್ಲ. ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ರಾಜ್ಯ ಸರಕಾರವು ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ಹಸ್ತಾಂತರಿಸುವ ನಿರ್ಧಾರ ಕೈಗೊಂಡಿರುವುದು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಭವಿಷ್ಯದ ಕುರಿತಾಗಿ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿದೆ. ಆರೋಗ್ಯ ಎಂಬುದು ಕೇವಲ ಸೇವೆ ಅಲ್ಲ, ಅದು ಭಾರತದ ಸಂವಿಧಾನ ನೀಡಿರುವ ಬದುಕುವ ಹಕ್ಕಿನ ಒಂದು ಅಂಶ. ಇಂದಿನ ಕಾಲದಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಲಕ್ಷಾಂತರ ರೂಪಾಯಿ ಚಿಕಿತ್ಸಾ ವೆಚ್ಚ ಸಾಮಾನ್ಯ ಜನರನ್ನು ಆರ್ಥಿಕವಾಗಿ ಕುಗ್ಗಿಸುತ್ತಿರುವ ಸಂದರ್ಭದಲ್ಲಿ, ಸರಕಾರಿ ಆಸ್ಪತ್ರೆಗಳ ಮಹತ್ವ ಇನ್ನಷ್ಟು ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ “ಸರಕಾರಿ ಆಸ್ಪತ್ರೆಗಳನ್ನು ಖಾಸಗಿ ಮೆಡಿಕಲ್ ಕಾಲೇಜುಗಳಿಗೆ ಮಾರಾಟ ಮಾಡಲು ಬಿಡುವುದಿಲ್ಲ” ಎಂಬ ಧ್ವನಿ ಜನಸಾಮಾನ್ಯರ ಕಳವಳದ ಪ್ರತಿಧ್ವನಿಯಾಗಿದೆ. ಸಾರ್ವಜನಿಕರ ತೆರಿಗೆ ಹಣದಿಂದ ನಿರ್ಮಾಣಗೊಂಡ ಆಸ್ಪತ್ರೆಗಳು ಬಡವರು, ಮಧ್ಯಮ ವರ್ಗದವರು ಮತ್ತು ಗ್ರಾಮೀಣ ಜನರಿಗೆ ಜೀವನಾಡಿಯಾಗಿವೆ. ಅವುಗಳನ್ನು ಹಂತ ಹಂತವಾಗಿ ಖಾಸಗೀಕರಣಗೊಳಿಸುವುದು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲ ಆತ್ಮವನ್ನೇ ದುರ್ಬಲಗೊಳಿಸುವ ಅಪಾಯವನ್ನು ಹೊಂದಿದೆ. ಈ ನಿರ್ಧಾರದ ಕುರಿತು ವೈದ್ಯರುಗಳು ಹಾಗೂ ವೈದ್ಯರ ಸಂಘಟನೆಗಳ ಮೌನವು…
ತಿರುವನಂತಪುರಂ: ಕೇರಳ ಚುನಾವಣಾ ಫಲಿತಾಂಶ ಪ್ರಕಟವಾದ 10 ದಿನಗಳ ನಂತರ ಪಕ್ಷದಿಂದ ಆಯ್ಕೆಯಾದ ಕಾಂಗ್ರೆಸ್ನ ವಿ.ಡಿ.ಸತೀಶನ್ ಕೇರಳಂ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಆರ್.ವಿ. ಅರ್ಲೇಕರ್ ಅವರು ಪ್ರಮಾಣ ವಚನ ಬೋಧಿಸಿದರು.

