Author: UllalaVani

Kannada News From Coastal Karnataka

ಉಡುಪಿ ; ಹಿಂದು ವೃದ್ಧ ಮಹಿಳೆಯೊಬ್ಬರನ್ನು ಕರೆದುಕೊಂಡು ಬಂದ ಇಬ್ಬರು ಬುರ್ಖಾಧಾರಿ ಮಹಿಳೆಯರು, ತಾವು ಹಿಂದೂ ಮಹಿಳೆಯ ನೆರೆಮನೆಯವರು, ಬಡ ಮಹಿಳೆಗೆ ಮನೆ ನಿವೇಶನ ನೀಡುವಂತೆ ಉಡುಪಿಗೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರ ನಿವಾಸಕ್ಕೆ ಬಂದು ಮನವಿ ಮಾಡಿದ್ದು, ಈ ಸಂದರ್ಭದಲ್ಲಿ ಸಚಿವೆ, ಇದು ಹಿಂದು ಮುಸ್ಲಿಂ ಸೌಹಾರ್ದ, ಉಡುಪಿಯ ಬಿಜೆಪಿಯವರು ಇದರಿಂದ ಪಾಠ ಕಲಿಯಬೇಕು ಎಂದು ಹೇಳಿದ್ದರು. ಆದರೆ ಉಸ್ತುವಾರಿ ಸಚಿವರನ್ನು ಭೇಟಿಯಾಗಲು ಬಂದ ಗಿರಿಜಾ ಶೆಟ್ಟಿಗಾರ್ ಅವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರಗೊAಡಿರುವ ಅವರ ಪುತ್ರಿಯೇ ಕರೆತಂದಿದ್ದು, ಸಚಿವರ ಮುಂದೆ ಮಾತ್ರ ತಾನು ಹಿಂದೂ ಮಹಿಳೆಯ ನೆರೆಮನೆಯವರು ಎಂದು ಸುಳ್ಳು ಹೇಳಿ ಉಸ್ತುವಾರಿ ಸಚಿವರನ್ನೇ ಯಾಮಾರಿಸಿದ್ದಾರೆ. ಆದರೆ ಲಕ್ಷಿö್ಮÃ ಹೆಬ್ಬಾಳ್ಳರ್‌ಅವರು ಹಿಂದೆ ಮುಂದೆ ಯೋಚಿಸದೇ ಮಾಧ್ಯಮದ ಮುಂದೆ ಉಡುಪಿ ಬಿಜೆಪಿಗರಿಗೆ ಸೌಹಾರ್ದತೆಯ ಭಾಷಣ ಮಾಡಿ ಅಪಹಾಸ್ಯಕ್ಕೆ ಗುರಿಯಾಗಿದ್ದಾರೆ. ಉಡುಪಿಯ ಜನತೆ ಸೌಹಾರ್ದತೆಯ ಬಗ್ಗೆ ಬೆಳಗಾವಿಯಿಂದ ಬಂದ ಉಸ್ತುವಾರಿ ಸಚಿವರಿಂದ ಕಲಿಯುವ ಅಗತ್ಯವಿಲ್ಲ ಎಂದು ಉಡುಪಿ ನಗರ…

Read More

ಮಂಗಳೂರು: ಮಂಗಳವಾರ ದುಲ್ಹಜ್ ಪ್ರಥಮ ಚಂದ್ರದರ್ಶನವಾಗಲಿದೆ. ಹಾಗಾಗಿ ಮೇ 28ರಂದು ಈದುಲ್ ಅಝ್‌ಹಾ (ಬಕ್ರೀದ್) ಆಚರಿಸಲು ದ.ಕ.ಜಿಲ್ಲಾ ಖಾಝಿ ಅಲ್‌ಹಾಜ್ ತ್ವಾಕಾ ಅಹ್ಮದ್ ಮುಸ್ಲಿಯಾರ್ ಕರೆನೀಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

Read More

ಮಂಗಳೂರು: ಮಂಗಳೂರು ಪ್ರೆಸ್ ಕ್ಲಬ್‌ನ 2025-26 ಸಾಲಿನ ಮಂಗಳೂರು ಪ್ರೆಸ್ ಕ್ಲಬ್ ಗೌರವ ಸನ್ಮಾನಕ್ಕೆ ಐವರು ಹಿರಿಯ ಪತ್ರಕರ್ತರು ಆಯ್ಕೆಯಾಗಿದ್ದಾರೆ. ಬಾಲಸುಬ್ರಹ್ಮಣ್ಯ ಕಾಯಾರ, ರಾಮಣ್ಣ ವೈ ( ವಿಜಯ ಕರ್ನಾಟಕ), ಹರ್ಷ (ಡೆಕ್ಕನ್ ಹೆರಾಲ್ಡ್, ರೇಮಂಡ್ ಡಿಕೂನಾ ( ಪಿಂಗಾರ) ಮತ್ತು ಆ‌ರ್.ಎಂ. ರಾಜೇಂದ್ರನ್ (ಕಲೈಂಜರ್ ಟಿ.ವಿ) ಇವರು ಗೌರವ ಸನ್ಮಾನಕ್ಕೆ ಆಯ್ಕೆಯಾದವರು. ಗೌರವ ಸನ್ಮಾನ 10 ಸಾವಿರ ರೂ. ನಗದು, ಪ್ರಶಸ್ತಿ ಫಲಕ, ಸ್ಮರಣಿಕೆ ಒಳಗೊಂಡಿದೆ. ಮೇ 24 ರಂದು ಬೆಳಗ್ಗೆ 11ಕ್ಕೆ ನಗರದ ರೆಡ್ ಕ್ರಾಸ್ ಶತಮಾನೋತ್ಸವ ಭವನದ ಪ್ರೇರಣಾ ಸಭಾಂಗಣದಲ್ಲಿ ನಡೆಯಲಿರುವ ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆಯಂದು ಇವರಿಗೆ ಗೌರವ ಸನ್ಮಾನ ನೀಡಲಾಗುವುದೆಂದು ಮಂಗಳೂರು ಪ್ರೆಸ್ ಕ್ಲಬ್‌ನ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Read More

ಮಂಗಳೂರು, ಮೇ. 18 : ಕುಂಟಿಕಾನದಲ್ಲಿ ಶನಿವಾರ ಸಂಜೆ ಸಂಭವಿಸಿದ ಲಿಫ್ಟ್ ಅವಘಡದಲ್ಲಿ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಬೆಳಾಲು ಗ್ರಾಮದ ಪೂಂಜಕೆರೆ ನಿವಾಸಿ ನೌಫಾಲ್ (28) ಮೃತಪಟ್ಟ ಯುವಕ. ಶನಿವಾರ ಸಂಜೆ ನೌಫಾಲ್ ಕೆಲಸದಲ್ಲಿ ನಿರತರಾಗಿದ್ದ ವೇಳೆ ಲಿಫ್ಟ್‌ನಲ್ಲಿ ಅವಘಡ ಸಂಭವಿಸಿದೆ. ತಕ್ಷಣ ಇತರರು ಈತನನ್ನು ಅಪಾಯದಿಂದ ಪಾರು ಮಾಡಲು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ ಎನ್ನಲಾಗಿದೆ. ಮೃತ ನೌಫಾಲ್ ಅವಿವಾಹಿತ ಎಂದು ತಿಳಿದುಬಂದಿದೆ. ಈ ಬಗ್ಗೆ ಉರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯದ ಕ್ಯಾಂಪಸ್ ನಲ್ಲಿ ಮಂಗಳೂರಿನ ಎನ್ ಎಂ ಪಿ ಎ ಸಂಸ್ಥೆಯ ಸಿಎಸ್ ಆರ್ ಅನುದಾನದಲ್ಲಿ ನವೀಕೃತಗೊಂಡಿರುವ ‘ಮಂಗಳ’ ಕ್ಯಾಂಟೀನ್ ಕಟ್ಟಡದ ಉದ್ಘಾಟನಾ‌ ಸಮಾರಂಭ ಬುಧವಾರ ನಡೆಯಿತು. ನವೀಕೃತ ಕಟ್ಟಡವನ್ನು ಎನ್ ಎಂ ಪಿ ಎ ಸಂಸ್ಥೆಯ ಉಪಾಧ್ಯಕ್ಷರಾದ ಎಸ್ .ಶಾಂತಿ ಅವರು ಉದ್ಘಾಟಿಸಿ, ಉತ್ತಮ ಸೌಲಭ್ಯದೊಂದಿಗೆ ನವೀಕೃತಗೊಂಡಿರುವ ಈ ಕ್ಯಾಂಟೀನ್ ಮೂಲಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ನಮ್ಮ ಸಂಸ್ಥೆಯು ವಿದ್ಯಾರ್ಥಿ ಕೇಂದ್ರಿತ ಕಾರ್ಯಯೋಜನೆಗಳಿಗೆ ಹೆಚ್ಚಿನ ಸಿಎಸ್ ಆರ್ ಅನುದಾನವನ್ನು ನೀಡುತ್ತಾ ಬಂದಿದೆ. ಉತ್ತಮ ಗುಣಮಟ್ಟದ ಆಹಾರ, ಶುಚಿತ್ವ ಮೊದಲಾದ ವ್ಯವಸ್ಥೆಯೊಂದಿಗೆ ಈ ಉಪಹಾರ ಗೃಹವು ಮುನ್ನಡೆಯಲಿ ಎಂದು ಶುಭಹಾರೈಸಿದರು. ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ಪ್ರೊ.ಪಿ.ಎಲ್ . ಧರ್ಮ ಅವರು ಮಾತನಾಡಿ, ಈ ನವೀಕೃತ ಕ್ಯಾಂಟಿನ್ ನಲ್ಲಿ ವಿದ್ಯಾರ್ಥಿಗಳಿಗೆ ಕಡಿಮೆ ಖರ್ಚಿನಲ್ಲಿ ಉತ್ತಮ ಗುಣಮಟ್ಟದ ಆಹಾರವನ್ನು ಒದಗಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗುತ್ತದೆ ಎಂದ ಅವರು ಅನುದಾನವನ್ನು ಒದಗಿಸಿದ ಎನ್ ಎಂ ಪಿ ಎ ಸಂಸ್ಥೆಗೆ ಕೃತಜ್ಞತೆಯನ್ನು…

Read More

ಕಾರ್ಕಳ, ಮೇ. 16 : ಸಾರ್ವಜನಿಕ ಸ್ಥಳಗಳಲ್ಲಿ ಸ್ವಚ್ಛತೆ ಕಾಪಾಡುವ ಉದ್ದೇಶದಿಂದ ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆದು ಗಲೀಜು ಮಾಡಿದ ಪ್ರವಾಸಿಗರ ವಿರುದ್ಧ ಸಾಣೂರು ಗ್ರಾಮ ಪಂಚಾಯತ್ ಆಡಳಿತವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಶುಕ್ರವಾರ ಮಧ್ಯಾಹ್ನ ಸುಮಾರು 3 ಗಂಟೆಯ ವೇಳೆಗೆ ಕೊಪ್ಪಳದಿಂದ ಎರಡು ವಾಹನಗಳಲ್ಲಿ ಬಂದ ಪ್ರವಾಸಿಗರು ಸಾಣೂರು ಹೆದ್ದಾರಿಯ ಅವಿನಾಶ ನಿವಾಸದ ಸಮೀಪ ಊಟ ಮಾಡಿ, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ರಸ್ತೆ ಬದಿಯಲ್ಲಿ ಬಿಸಾಡಿ ತೆರಳಲು ಯತ್ನಿಸಿದ್ದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ಪಂಚಾಯತ್ ಅಭಿವೃದ್ಧಿ ಅಧಿಕಾರಿ ವಿಶ್ವನಾಥ್ ಅವರು ಪ್ರವಾಸಿಗರನ್ನು ತಡೆದು ದಂಡ ವಿಧಿಸಲು ಮುಂದಾಗಿದ್ದಾರೆ.ನಮ್ಮ ಊರಲ್ಲಿ ಈ ರೀತಿಯ ಪದ್ಧತಿ ಇಲ್ಲ, ಪಂಚಾಯತ್ ಬೋರ್ಡ್ ಹಾಕಿದ್ದೀರಾ? ಎಂದು ಹೇಳಿ ಪ್ರವಾಸಿಗರು ಆರಂಭದಲ್ಲಿ ದಂಡ ಪಾವತಿಸಲು ನಿರಾಕರಿಸಿದರೆಂದು ತಿಳಿದುಬಂದಿದೆ. ಬಳಿಕ ಅಧಿಕಾರಿಗಳು ಪೊಲೀಸ್ ಸಹಾಯವಾಣಿ 112ಕ್ಕೆ ಕರೆ ಮಾಡಿ ಕಾರ್ಕಳ ನಗರ ಠಾಣೆಯ ಸಹಕಾರ ಪಡೆಯಲು ಮುಂದಾದರು.ಈ ಸಂದರ್ಭ ಸ್ಥಳೀಯ ಸಾಮಾಜಿಕ ಮುಖಂಡ ಏರ್ನಡ್ಕ ವಿಶ್ವನಾಥ್ ಶೆಟ್ಟಿ ಸೇರಿದಂತೆ…

Read More

ಮಂಗಳೂರು, ಮೇ. 16; ಹಾವೇರಿಯಿಂದ ಮಲಪ್ಪುರಂಗೆ ಲಾರಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 27 ಜಾನುವಾರುಗಳನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಕೇರಳಕ್ಕೆ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸುತ್ತಿರುವ ಶಂಕೆ ವ್ಯಕ್ತಪಡಿಸಿ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಕಾರ್ಯಕರ್ತರು ನೀಡಿದ ಮಾಹಿತಿ ಮೇರೆಗೆ ಕಂಕನಾಡಿ ನಗರ ಠಾಣೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.ಮಾಹಿತಿ ಆಧಾರದ ಮೇಲೆ ಪೊಲೀಸರು ಜೆಪ್ಪಿನಮೊಗರು ಬಳಿ ಲಾರಿಯನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಲಾರಿಯನ್ನು ತಪಾಸಣೆ ನಡೆಸಿದಾಗ, ಯಾವುದೇ ಸೂಕ್ತ ಪರವಾನಗಿ ಇಲ್ಲದೆ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ 27 ಜಾನುವಾರುಗಳು ಪತ್ತೆಯಾಗಿವೆ.ಸದ್ಯ ಜಾನುವಾರು ಸಾಗಿಸುತ್ತಿದ್ದ ಲಾರಿಯನ್ನು ಜಪ್ತಿ ಮಾಡಲಾಗಿದ್ದು, ಇಬ್ಬರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ವಶಕ್ಕೆ ಪಡೆಯಲಾಗಿದೆ. ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.ಕರಾವಳಿಯಲ್ಲಿ ಈ ಘಟನೆ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಅಕ್ರಮ ಜಾನುವಾರು ಸಾಗಾಟದ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಸಂಘಟನೆಗಳು ಒತ್ತಾಯಿಸಿವೆ.

Read More

ನವದೆಹಲಿ, ಮೇ 16: ಮೇ ಮೊದಲ ವಾರದಲ್ಲಿ ನಡೆದಿದ್ದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಈ ಪರೀಕ್ಷೆಯನ್ನು ರದ್ದುಗೊಳಿಸಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಆದೇಶ ಹೊರಡಿಸಿದೆ. ಮೇ 3ರಂದು ನಡೆದ ನೀಟ್-ಯುಜಿ ಪರೀಕ್ಷೆಯನ್ನು ರದ್ದುಗೊಳಿಸಿದ ಬೆನ್ನಲ್ಲೇ ಶುಕ್ರವಾರ ರಾಜಸ್ಥಾನದ ಸಿಕಾರ್‌ನಲ್ಲಿ 22 ವರ್ಷದ ನೀಟ್ ಆಕಾಂಕ್ಷಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯ ಬಗ್ಗೆ ಸಿಬಿಐ ತನಿಖೆ ಮುಂದುವರಿದಿದೆ. ಈಗಾಗಲೇ ಈ ಪ್ರಕರಣದ ಮುಖ್ಯ ಆರೋಪಿಯಾದ ಪ್ರೊಫೆಸರ್ ಪಿವಿ ಕುಲಕರ್ಣಿ ಸೇರಿದಂತೆ ಹಲವು ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ. ಮೃತ ವಿದ್ಯಾರ್ಥಿಯ ಕುಟುಂಬಸ್ಥರು ಆತನ ಸಾವಿಗೆ ಪರೀಕ್ಷೆ ರದ್ದತಿಯಿಂದ ಉಂಟಾದ ಖಿನ್ನತೆಯೇ ಕಾರಣ ಎಂದು ಹೇಳಿದ್ದು, ಅದರಲ್ಲಿ ಆತ ಉತ್ತಮ ಅಂಕಗಳನ್ನು ಗಳಿಸುವ ನಿರೀಕ್ಷೆ ಇಟ್ಟುಕೊಂಡಿದ್ದ ಎಂದು ಹೇಳಿದ್ದಾರೆ. ರಾಜಸ್ಥಾನದ ಜುನ್ಜುನು ಜಿಲ್ಲೆಯ ನಿವಾಸಿ ಪ್ರದೀಪ್ ಮೇಘವಾಲ್ ಎಂಬ 22 ವರ್ಷದ ಯುವಕನೇ ಮೃತ ವಿದ್ಯಾರ್ಥಿ. ಪ್ರದೀಪ್ ತನ್ನ ಸಹೋದರಿಯರೊಂದಿಗೆ ಸಿಕಾರ್‌ನ ಬಾಡಿಗೆ ರೂಂನಲ್ಲಿ ವಾಸಿಸುತ್ತಿದ್ದರು.…

Read More

ದೇರಳಕಟ್ಟೆ: ಯೂತ್ ಸ್ಪೋರ್ಟ್ಸ್ ಅಕಾಡೆಮಿ(ರಿ) ಉಳ್ಳಾಲ ವತಿಯಿಂದ ಆಯೋಜಿಸಲಾಗಿದ್ದ 20ನೇ ವರ್ಷದ ಉಚಿತ ಬೇಸಿಗೆ ಫುಟ್ಬಾಲ್ ತರಬೇತಿ ಶಿಬಿರವು ಯಶಸ್ವಿಯಾಗಿ ಸಮಾಪ್ತಿಗೊಂಡಿತು. ಸೃಷ್ಟಿಕರ್ತನ ಅಪಾರ ಅನುಗ್ರಹದಿಂದ ನಡೆದ ಈ ಶಿಬಿರದಲ್ಲಿ ಸುಮಾರು 40 ರಿಂದ 60ರವರೆಗೆ ಶಿಬಿರಾರ್ಥಿಗಳು ಭಾಗವಹಿಸಿ ಫುಟ್ಬಾಲ್‌ನ ಮೂಲಭೂತ ಕೌಶಲ್ಯಗಳ ಜೊತೆಗೆ ದೈಹಿಕ ಸಾಮರ್ಥ್ಯ ಮತ್ತು ಕ್ರೀಡಾಸ್ಫೂರ್ತಿಯನ್ನು ಬೆಳೆಸಿಕೊಂಡರು. ಶಿಬಿರದ ಸಮಾರೋಪ ಸಮಾರಂಭದಲ್ಲಿ ಎಲ್ಲಾ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಈ ಉಚಿತ ತರಬೇತಿ ಶಿಬಿರವನ್ನು ಯಶಸ್ವಿಯಾಗಿ ನಡೆಸಲು ಸುಂದರವಾದ ಮೈದಾನವನ್ನು ಒದಗಿಸಿ ಸಹಕರಿಸಿದ ಸಿಟಿ ಗ್ರೌಂಡ್ ಹಾಗೂ ಗ್ರೀನ್ ಗ್ರೌಂಡ್ ಮಾಲಕರಿಗೆ, ಜೊತೆಗೆ ಮೈದಾನ ಲಭ್ಯವಾಗಲು ನೆರವಾದ ರಾಜಕೀಯ ಯುವ ನಾಯಕ ಸಿಎಂ ರೌಫ್, ಪರಿಸರದ ಅಸಿಫ್ ಹಾಗೂ ಇತರ ಸಹಕರಿಸಿದವರಿಗೆ ಯೂತ್ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅಕಾಡೆಮಿಯ ಸ್ಥಾಪಕರು ಹಾಗೂ ಅಧ್ಯಕ್ಷರಾದ ಸಾಜಿದ್ ಉಳ್ಳಾಲ್, “ಯುವ ಪ್ರತಿಭೆಗಳನ್ನು ಗುರುತಿಸಿ ಕ್ರೀಡಾ ಕ್ಷೇತ್ರದಲ್ಲಿ ಉತ್ತೇಜಿಸುವ ಉದ್ದೇಶದಿಂದ ಕಳೆದ ಇಪ್ಪತ್ತು…

Read More

ಉಡುಪಿ, ಮೇ. 16 : ಕಳೆದ ಆರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ರೌಡಿಶೀಟರ್ ಹಾಗೂ ವಾರಂಟ್ ಆರೋಪಿಯನ್ನು ಕಾಪು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಅಭಿಜಿತ್ (34) ಎಂದು ಗುರುತಿಸಲಾಗಿದ್ದು, ಈತನನ್ನು ಪುಂಜಾಲಕಟ್ಟೆಯಲ್ಲಿ ಪತ್ತೆ ಹಚ್ಚಿ ವಶಕ್ಕೆ ಪಡೆಯಲಾಗಿದೆ.ಆರೋಪಿಯು 2016ರಲ್ಲಿ ಮಲ್ಲಾರು ಪಕೀರಣಕಟ್ಟೆಯ ಬಳಿ ಮಹಿಳೆಯೊಬ್ಬರ ಮಾನಭಂಗಕ್ಕೆ ಯತ್ನಿಸಿದ್ದ. ಈ ಪ್ರಕರಣದ ವಿಚಾರಣೆ ಹಂತದಲ್ಲಿರುವಾಗ ಆತ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದನು. ಕಳೆದ ಆರು ವರ್ಷಗಳಿಂದ ಕಾಪು ಪೊಲೀಸರು ಈತನಿಗಾಗಿ ಹುಡುಕಾಟ ನಡೆಸುತ್ತಿದ್ದರು.ಸದ್ಯ ಆರೋಪಿಯನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಮೇ 25ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಪ್ರಸ್ತುತ ಆತನನ್ನು ಉಡುಪಿ ಜಿಲ್ಲಾ ಕಾರಾಗೃಹದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಆರೋಪಿಯ ವಿರುದ್ಧ ಮೈಸೂರಿನ ನರಸಿಂಹರಾಜಪುರ ಮತ್ತು ಬಜಪೆ ಪೊಲೀಸ್ ಠಾಣೆಗಳಲ್ಲೂ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಆ ಪ್ರಕರಣಗಳಲ್ಲೂ ಈತ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.ಕಾರ್ಕಳ ಉಪವಿಭಾಗದ ಡಿವೈಎಸ್ಪಿ ವಿಜಯ್ ಪ್ರಸಾದ್ ಮತ್ತು ಕಾಪು ವೃತ್ತ ನಿರೀಕ್ಷಕ ಅಜ್ಮತ್ ಅಲಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ…

Read More