ಉಳ್ಳಾಲ: ಉಳ್ಳಾಲ ತಾಲ್ಲೂಕಿನ ಪ್ರಥಮ ಪೈಲಟ್ ಎಂಬ ಹೆಗ್ಗಳಿಕೆಗೆ ಪಾತ್ರರಾದ ಚರಣ್ ರಾಜ್ ಕೆ. ಶೆಟ್ಟಿ ಹಾಗೂ ಪ್ರಕೃತಿ ಸಿ. ಶೆಟ್ಟಿ ದಂಪತಿಗೆ ಗುರುವಾರ ನಡೆದ ಸಮಾರಂಭದಲ್ಲಿ “ಅಬ್ಬಕ್ಕ ಸಾಧನಾ ಪ್ರಶಸ್ತಿ” ಪ್ರದಾನಿಸಲಾಯಿತು. ಈ ವೇಳೆ ಮಾತನಾಡಿದ ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ “ನಾನು ಒಂದು ಸಲ ವಿಮಾನ ಪ್ರಯಾಣಿಸುವ ಸಂದರ್ಭ ಅಲ್ಲಿನ ಸಿಬ್ಬಂದಿಗಳು ನನ್ನನ್ನು ಗುರುತಿಸಿ ಎಲ್ಲರಿಗೂ ಪರಿಚಯಿಸಿದ ಕ್ಷಣ ಮತ್ತು ದೊರೆತ ಚಪ್ಪಾಳೆಗಳು ನನ್ನ ಜೀವನದ ಅತ್ಯಂತ ಸಂತಸದ ಕ್ಷಣಗಳಾಗಿವೆ. ಜೀವನದಲ್ಲಿ ಸಾಧನೆ ಮಾಡಿದ ಇಬ್ಬರು ಪೈಲಟ್ ಗಳನ್ನು ಸನ್ಮಾನಿಸಲ್ಪಟ್ಟಿರುವುದು ನಿಜಕ್ಕೂ ಹೆಮ್ಮೆಯ ಸಂಗತಿ” ಎಂದು ಸಂತಸ ವ್ಯಕ್ತಪಡಿಸಿದರು.ಪ್ರಕೃತಿ ಸಿ. ಶೆಟ್ಟಿ ಮಾತನಾಡಿ, “ಆರಂಭದಲ್ಲಿ ವಿಮಾನ ಹಾರಾಟದ ವೇಳೆ ನನಗೆ ಯಾವುದೇ ಭಯ ಅನ್ನಿಸಲಿಲ್ಲ . ಜೀವನದಲ್ಲಿ ಶ್ರದ್ಧೆ ಇದ್ದರೆ ಏನನ್ನೂ ಸಾಧಿಸಬಹುದು.ಯುಎಇಯಲ್ಲಿ ನನ್ನ ಎಲ್ಲ ಶಿಕ್ಷಣವನ್ನು ಮುಗಿಸಿದ್ದೇನೆ. 6000 ಗಂಟೆಗಳ ಹಾರಾಟದ ಅನುಭವ ನನ್ನ ಜೀವನದ ದೊಡ್ಡ ಸಾಧನೆ. ನನ್ನ ತಂದೆ-ತಾಯಿಯ ಪ್ರೇರಣೆಯೇ ಇಂದು ನನ್ನನ್ನು ಈ…
Author: UllalaVani
ನವದೆಹಲಿ: ದೇಶದ ಅತ್ಯಂತ ಪ್ರಮುಖ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ದಿನದಿಂದ ದಿನಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಸಿಬಿಐ ತನಿಖೆಯಲ್ಲಿ ಆತಂಕಕಾರಿ ಮಾಹಿತಿಗಳು ಹೊರಬರುತ್ತಿವೆ. ರಾಜಸ್ಥಾನದ ಒಂದೇ ಕುಟುಂಬದ ಐವರು ವೈದ್ಯಕೀಯ ಸೀಟು ಪಡೆದಿರುವುದು ಇದೀಗ ದೊಡ್ಡ ಅನುಮಾನಕ್ಕೆ ಕಾರಣವಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆ ಜಾಲದ ಸಂಪರ್ಕ ಇದೆಯೇ ಎಂಬ ನಿಟ್ಟಿನಲ್ಲಿ ತನಿಖೆ ಮುಂದುವರಿದಿದೆ. ಸಿಬಿಐ ಮಾಹಿತಿ ಪ್ರಕಾರ, ಜೈಪುರ ಗ್ರಾಮೀಣ ಪ್ರದೇಶದ ಜಮ್ಮರಾಮಗಢದ ಒಂದೇ ಕುಟುಂಬದ ಐವರು ವಿವಿಧ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆದಿದ್ದಾರೆ. ದಿನೇಶ್ ಅವರ ಮಗಳು ಗುಂಜನ್ ಬನಾರಸ್ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಪಡೆದಿದ್ದರೆ, ಕುಟುಂಬದ ಇತರ ಸದಸ್ಯರಾದ ಸೋನಿಯಾ, ಪ್ರಕೃತಿ ಮತ್ತು ವಿಕಾಸ್ ಕೂಡ ವೈದ್ಯಕೀಯ ಶಿಕ್ಷಣ ಪಡೆಯುತ್ತಿರುವ ಮಾಹಿತಿ ಲಭ್ಯವಾಗಿದೆ. ತನಿಖೆಯಲ್ಲಿ ಮಹಾರಾಷ್ಟ್ರ, ಹರಿಯಾಣ ಮತ್ತು ರಾಜಸ್ಥಾನವನ್ನು ಸಂಪರ್ಕಿಸುವ ದೊಡ್ಡ ಮಟ್ಟದ ಪ್ರಶ್ನೆಪತ್ರಿಕೆ ಸೋರಿಕೆ ಜಾಲ ಕಾರ್ಯನಿರ್ವಹಿಸುತ್ತಿದ್ದ ಸುಳಿವು ಸಿಕ್ಕಿದೆ. ಪರೀಕ್ಷೆಗೆ ಮುನ್ನವೇ ಪ್ರಶ್ನೆಪತ್ರಿಕೆ ದೊರೆಯುತ್ತದೆ ಎಂದು ಭರವಸೆ ನೀಡಿ…
ಮಂಗಳೂರು, ಮೇ 15: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಹಿಜಬ್ ಧರಿಸಲು ಅವಕಾಶ ನೀಡುವ ಸರ್ಕಾರದ ನಿರ್ಧಾರವನ್ನು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಸ್ವಾಗತಿಸಿದ್ದಾರೆ. ಈ ಕ್ರಮವು ಕೇವಲ ಒಂದು ಧರ್ಮಕ್ಕೆ ಸೀಮಿತವಾದುದಲ್ಲ, ಸಂವಿಧಾನ ರಕ್ಷಣೆಯ ದಿಸೆಯಲ್ಲಿ ಇಟ್ಟ ಮಹತ್ವದ ಹೆಜ್ಜೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. “ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ತನ್ನ ಧಾರ್ಮಿಕ ನಂಬಿಕೆಗಳನ್ನು ಪಾಲಿಸುವ ಹಾಗೂ ಸಮಾನ ಶಿಕ್ಷಣ ಪಡೆಯುವ ಹಕ್ಕನ್ನು ನೀಡಿದೆ. ಕಳೆದ ಸರ್ಕಾರದ ಅವಧಿಯಲ್ಲಿ ಸೃಷ್ಟಿಯಾಗಿದ್ದ ಹಿಜಬ್ ವಿವಾದದಿಂದ ಅನೇಕ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದರು. ಈಗಿನ ಸರ್ಕಾರವು ಆ ತಾರತಮ್ಯವನ್ನು ತೊಡೆದುಹಾಕಿ ಸಂವಿಧಾನದ ಆಶಯಗಳನ್ನು ಎತ್ತಿಹಿಡಿದಿದೆ,” ಎಂದು ತಿಳಿಸಿದ್ದಾರೆ. “ವಿದ್ಯಾರ್ಥಿಗಳ ಬೌದ್ಧಿಕ ಬೆಳವಣಿಗೆಗೆ ಶಾಲಾ-ಕಾಲೇಜುಗಳು ಪೂರಕವಾಗಿರಬೇಕು. ‘ಸಂವಿಧಾನ ರಕ್ಷಣೆಯೇ ಪ್ರಮುಖ ಗುರಿ’ ಎಂಬ ಧ್ಯೇಯದೊಂದಿಗೆ ಸರ್ಕಾರ ಕೈಗೊಂಡಿರುವ ಈ ನಿರ್ಧಾರದಿಂದ ಕರಾವಳಿ ಸೇರಿದಂತೆ ರಾಜ್ಯದ ಸಾವಿರಾರು ವಿದ್ಯಾರ್ಥಿನಿಯರು ಮತ್ತೆ ಶಿಕ್ಷಣದ ಮುಖ್ಯವಾಹಿನಿಗೆ ಬರಲು ಸಾಧ್ಯವಾಗಿದೆ,” ಎಂದು ಅವರು ಹೇಳಿದ್ದಾರೆ. ಹಿಜಬ್ ವಿಚಾರವನ್ನು ರಾಜಕೀಯವಾಗಿ…
ಮಂಗಳೂರು, ಮೇ 15: ಇತ್ತೀಚೆಗೆ ಮತ್ತೆ ಡೀಸೆಲ್ ದರ ಏರಿಕೆಯಾಗಿರುವುದು ಖಾಸಗಿ ಬಸ್ ಕ್ಷೇತ್ರಕ್ಕೆ ದೊಡ್ಡ ಹೊಡೆತ ನೀಡಿದೆ. ಈಗಾಗಲೇ ವಾಹನಗಳ ನಿರ್ವಹಣಾ ವೆಚ್ಚ, ಸ್ಪೇರ್ ಪಾರ್ಟ್ಸ್, ಇನ್ಶೂರೆನ್ಸ್, ತೆರಿಗೆ, ಫಿಟ್ನೆಸ್ ಹಾಗೂ ದೈನಂದಿನ ಖರ್ಚುಗಳಿಂದ ಸಂಕಷ್ಟದಲ್ಲಿರುವ ಖಾಸಗಿ ಬಸ್ ವ್ಯವಸ್ಥೆಗೆ ಈ ದರ ಏರಿಕೆ ಮತ್ತಷ್ಟು ಆರ್ಥಿಕ ಒತ್ತಡ ಉಂಟುಮಾಡಲಿದೆ ಎಂದು ರಾಣಿ ಅಬ್ಬಕ್ಕ ಖಾಸಗಿ ಬಸ್ ನೌಕರರ ಸಂಘ ಆತಂಕ ವ್ಯಕ್ತಪಡಿಸಿದೆ. ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ಸಾವಿರಾರು ವಿದ್ಯಾರ್ಥಿಗಳು, ಕಾರ್ಮಿಕರು, ಉದ್ಯೋಗಿಗಳು ಹಾಗೂ ವ್ಯಾಪಾರಸ್ಥರು ಪ್ರತಿದಿನ ಖಾಸಗಿ ಬಸ್ಗಳನ್ನೇ ಅವಲಂಬಿಸಿಕೊಂಡಿದ್ದಾರೆ. ಡೀಸೆಲ್ ದರ ಏರಿಕೆಯಿಂದ ಬಸ್ ಮಾಲೀಕರು ಮಾತ್ರವಲ್ಲದೆ ಚಾಲಕರು, ನಿರ್ವಾಹಕರು ಹಾಗೂ ಇತರ ನೌಕರರ ಮೇಲೂ ನೇರ ಪರಿಣಾಮ ಬೀಳಲಿದೆ ಎಂದು ಸಂಘ ತಿಳಿಸಿದೆ. ಈಗಾಗಲೇ ಕಡಿಮೆ ವೇತನ ಮತ್ತು ಅನಿಶ್ಚಿತ ಪರಿಸ್ಥಿತಿಯಲ್ಲಿ ದುಡಿಯುತ್ತಿರುವ ನೌಕರರ ಜೀವನ ಇನ್ನಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಕೆಲವೊಮ್ಮೆ ಮಾರ್ಗ ಕಡಿತ, ಬಸ್ ಸಂಚಾರ ನಿಲುಗಡೆ ಹಾಗೂ ನೌಕರರ ಕೆಲಸದ…
ದೆಹಲಿ, ಮೇ.15: ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವು ದೇಶಾದ್ಯಂತ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಗುರುವಾರ (ಮೇ,14) ತಡರಾತ್ರಿ ತಮ್ಮ ನಿವಾಸದಲ್ಲಿ ಉನ್ನತ ಮಟ್ಟದ ತುರ್ತು ಸಭೆ ನಡೆಸಿದರು. ಸಿಬಿಐ (CBI) ತನಿಖೆಯು ಚುರುಕುಗೊಂಡಿದ್ದು, ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA) ಒಳಗಿನವರ ಕೈವಾಡದ ಬಗ್ಗೆಯೂ ತನಿಖೆ ನಡೆಯುತ್ತಿದೆ. ಇದೀಗ ಇದರ ಜತೆಗೆ ಮಹತ್ವದ ಘೋಷಣೆಯನ್ನು ಕೂಡ ಮಾಡಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ನೀಟ್-ಯುಜಿಗೆ ಹೊಸ ಪರೀಕ್ಷಾ ದಿನಾಂಕಗಳನ್ನು ಘೋಷಿಸಲಾಗಿದೆ. ಜೂನ್ 21 ರಂದು ನಡೆಯಲಿದೆ. ನಿನ್ನೆ (ಮೇ.14) ರಾತ್ರಿ ನೀಟ್ ಪರೀಕ್ಷೆ ನಡೆಸುವ ಸಂಬಂಧ ನಡೆದ ಉನ್ನತ ಮಟ್ಟದ ಸಭೆಯು ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಸುದೀರ್ಘವಾಗಿ ಚರ್ಚಿಸಿತು. ಈ ಸಭೆಯಲ್ಲಿ ಶಿಕ್ಷಣ ಇಲಾಖೆಯ ಕಾರ್ಯದರ್ಶಿಗಳು, ಎನ್ಟಿಎ ಮಹಾನಿರ್ದೇಶಕರು ಮತ್ತು ಸಿಬಿಎಸ್ಇ ಅಧ್ಯಕ್ಷರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು.ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಈಗಾಗಲೇ ಐವರು ಆರೋಪಿಗಳನ್ನು ಕಸ್ಟಡಿಗೆ ಪಡೆದಿದ್ದು, ಇನ್ನೂ ಇಬ್ಬರು ಶಂಕಿತರನ್ನು ಬಂಧಿಸಿದೆ.…
ನವದೆಹಲಿ, ಮೇ 15: ಪ್ರಧಾನಿ ನರೇಂದ್ರ ಮೋದಿ ಇಂದಿನಿಂದ ಐದು ದೇಶಗಳ ಐತಿಹಾಸಿಕ ರಾಜತಾಂತ್ರಿಕ ಪ್ರವಾಸವನ್ನು ಆರಂಭಿಸಲಿದ್ದಾರೆ. ಪಶ್ಚಿಮ ಏಷ್ಯಾದಲ್ಲಿ ಯುದ್ಧದ ಭೀತಿ ಎದುರಾಗಿರುವ ಈ ಸಂದರ್ಭದಲ್ಲಿ ಮೋದಿಯ ಈ ಭೇಟಿ ಜಾಗತಿಕ ಮಟ್ಟದಲ್ಲಿ ಭಾರಿ ಕುತೂಹಲ ಮೂಡಿಸಿದೆ. ಪ್ರವಾಸದ ಮೊದಲ ಹಂತವಾಗಿ ಇಂದು ಯುಎಇಗೆ (UAE) ಭೇಟಿ ನೀಡಲಿರುವ ಅವರು, ನಂತರ ನೆದರ್ಲ್ಯಾಂಡ್ಸ್, ಸ್ವೀಡನ್, ನಾರ್ವೆ ಮತ್ತು ಇಟಲಿ ದೇಶಗಳಿಗೆ ತೆರಳಲಿದ್ದಾರೆ. ಇಂದು ಯುಎಇ ತಲುಪಲಿರುವ ಮೋದಿ, ಯುಎಇಯ ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ಭೇಟಿ ಮಾಡಲಿದ್ದಾರೆ. ಇತ್ತೀಚೆಗೆ ಫುಜೈರಾದ ಪೆಟ್ರೋಲಿಯಂ ಸಂಕೀರ್ಣದ ಮೇಲೆ ನಡೆದ ದಾಳಿಯಲ್ಲಿ ಮೂವರು ಭಾರತೀಯರು ಗಾಯಗೊಂಡಿರುವ ಬೆನ್ನಲ್ಲೇ ಈ ಭೇಟಿ ಮಹತ್ವ ಪಡೆದಿದೆ. ಯುಎಇ ಒಪೆಕ್ನಿಂದ (OPEC) ಹೊರಬಂದಿರುವ ಹಿನ್ನೆಲೆಯಲ್ಲಿ, ಭಾರತಕ್ಕೆ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲದ ಸ್ಥಿರ ಪೂರೈಕೆಯನ್ನು ಖಚಿತಪಡಿಸಿಕೊಳ್ಳುವ ಬಗ್ಗೆ ಉಭಯ ನಾಯಕರು ಚರ್ಚಿಸಲಿದ್ದಾರೆ. ನೆದರ್ಲ್ಯಾಂಡ್ಸ್ (ಮೇ 15-17): ಪ್ರಧಾನಿ ರಾಬ್ ಜೆಟ್ಟನ್ ಅವರ ಆಹ್ವಾನದ ಮೇರೆಗೆ ಮೋದಿ…
ಬೆಂಗಳೂರು, ಮೇ 15: ರಾಜ್ಯದ ಮದ್ಯಪ್ರಿಯರಿಗೆ ಅಬಕಾರಿ ಇಲಾಖೆಯು ಸಿಹಿ ಸುದ್ದಿ ಕೊಟ್ಟಿದೆ. ರಾಜ್ಯ ಸರ್ಕಾರವು ಮೇ 11 ರಿಂದ ನೂತನ ‘ಆಲ್ಕೋಹಾಲ್ ಇನ್ ಬೆವರೇಜ್’ ನೀತಿಯನ್ನು ಜಾರಿಗೊಳಿಸಿದ್ದು, ಇದರಿಂದ ಪ್ರೀಮಿಯಂ ಬಿಯರ್ ಹಾಗೂ ಸ್ಕಾಚ್ ವಿಸ್ಕಿಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. ಆದರೆ ಸಾಮಾನ್ಯ ಜನರು ಬಳಸುವ ಕಡಿಮೆ ದರದ ಮದ್ಯದ ಬೆಲೆ ಏರಿಕೆಯಾಗಿದೆ. ಮುಖ್ಯಾಂಶಗಳು ಬಿಯರ್ ದರದಲ್ಲಿ 20-25% ಇಳಿಕೆ ಹೊಸ ನೀತಿಯನ್ವಯ ಶೇ 5ರಷ್ಟು ಆಲ್ಕೋಹಾಲ್ ಹೊಂದಿರುವ ಮೈಲ್ಡ್ ಮತ್ತು ಲಾಗರ್ ಬಿಯರ್ಗಳ ಬೆಲೆ ಶೇ 20 ರಿಂದ 25 ರಷ್ಟು ಇಳಿಕೆಯಾಗಿದೆ. ಕಿಂಗ್ಫಿಶರ್ ಪ್ರೀಮಿಯಂ ಮತ್ತು ಅಲ್ಟ್ರಾ 650 ಎಂಎಲ್ ಬಾಟಲಿಗಳ ಮೇಲೆ ಸುಮಾರು 75 ರೂ. ಇಳಿಕೆಯಾಗಿದ್ದರೆ, ಹೈನೆಕೆನ್ ಮೇಲೆ 70 ರೂ., ಯುಬಿ ಎಕ್ಸ್ಪೋರ್ಟ್ ಮೇಲೆ 25 ರೂ. ಹಾಗೂ ಬಡ್ವೈಸರ್ ಪ್ರೀಮಿಯಂ ಮೇಲೆ 20 ರೂ.ಗಳವರೆಗೆ ರಿಯಾಯಿತಿ ಸಿಗಲಿದೆ. ಪ್ರೀಮಿಯಂ ಸ್ಕಾಚ್ ಮತ್ತು ವಿಸ್ಕಿ ಅಗ್ಗ ಬಿಯರ್ ಮಾತ್ರವಲ್ಲದೆ, ವಿದೇಶಿ ಬ್ರಾಂಡ್ನ ಸ್ಕಾಚ್ ವಿಸ್ಕಿಗಳ ಬೆಲೆಯೂ…
ಮಂಗಳೂರು, ಮೇ. 14 ಬೇರೊಬ್ಬರ ಗುರುತಿನ ದಾಖಲೆ ಪತ್ರಗಳನ್ನು ದುರುಪಯೋಗಪಡಿಸಿ ನಕಲಿ ಪಾಸ್ ಫೋರ್ಟ್ ರಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಉಳ್ಳಾಲ ನಿವಾಸಿ ಪ್ರೀತಾ ಡಿ.ಸೋಜಾ, ಪ್ರೇಮ್ ಡಿ.ಸೋಜಾ ಹಾಗೂ ಯಶೋಧ ಕೇಶವ ಸೇರಿದಂತೆ ಹಲವರ ವಿರುದ್ಧ ಗಂಭೀರ ಆರೋಪಗಳಡಿ ಕ್ರಿಮಿನಲ್ ಪ್ರಕೆಣ ದಾಖಲಿಸಿದ ಸಿಎಸ್ಬಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.ಉಳ್ಳಾಲ ನಿವಾಸಿ ಯಶೋಧ ಕೇಶವ ಎಂಬ ಮಹಿಳೆಯ ಹೆಸರಿನಲ್ಲಿ ಅನ್ಯ ಮಹಿಳೆಯೊಬ್ಬರು ಪಾಸ್ಪೋರ್ಟ್ ಪಡೆದು ವಿದೇಶಕ್ಕೆ ಪ್ರಯಾಣಿಸಿರುವ ಬಗ್ಗೆ ಪೋಲೀಸರಿಗೆ ಗೌಪ್ಯ ಮಾಹಿತಿ ಲಭಿಸಿತ್ತು. ಈ ಮಾಹಿತಿ ಆಧರಿಸಿ ಸಿ. ಎಸ್ ಬಿ ಪೊಲೀಸರು ತನಿಖೆ ಆರಂಭಿಸಿದಾಗ ಅಚ್ಚರಿಯ ಸಂಗತಿ ಬೆಳಕಿಗೆ ಬಂದಿದೆ. ಪೊಲೀಸರ ಪರಿಶೀಲನೆಯ ವೇಳೆ ಪಾಸ್ಫೋರ್ಟ್ ನಲ್ಲಿ ಹೆಸರು ಹಾಗೂ ವಿಳಾಸ ಯಶೋಧ ಕೇಶವ ಅವರದ್ದಾಗಿದ್ದರೂ, ಅದರಲ್ಲಿ ಬಳಸಲಾಗಿದ್ದ ಭಾವಚಿತ್ರ ಮಾತ್ರ ಪ್ರೀತಾ ಡಿ. ಸೋಜಾ ಎಂಬಾಕೆಯದ್ದು ಎಂಬುವುದು ತಿಳಿದು ಬಂದಿದೆ.ಪ್ರೀತಾ ಡಿಸೋಜಾ ಅವರನ್ನು ಅಕ್ರಮವಾಗಿ ಇಸ್ರೇಲ್ಗೆ ಕಳುಹಿಸುವ ಉದ್ದೇಶದಿಂದ ಈ ಸಂಪೂರ್ಣ ಸಂಚು ರೂಪಿಸಲಾಗಿತ್ತು ಎನ್ನಲಾಗಿದೆ. ಈ…
ಬೆಂಗಳೂರು, ಮೇ. 14 : ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾದ ಶಾಸಕರು ಗುರುವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ನೂತನ ಶಾಸಕರು ಅಧಿಕೃತವಾಗಿ ಪದಗ್ರಹಣ ಮಾಡಿದರು. ಬಾಗಲಕೋಟೆ ಕ್ಷೇತ್ರದ ಶಾಸಕ ಉಮೇಶ್ ಮೇಟಿ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರಿಗೆ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದರು.ಸಂವಿಧಾನದ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ನೂತನ ಶಾಸಕರಿಗೆ ಸಭಾಧ್ಯಕ್ಷರು ಶುಭ ಕೋರಿದರು. ಪ್ರಮಾಣ ವಚನ ಸ್ವೀಕರಿಸಿದ ಬಳಿಕ ನೂತನ ಶಾಸಕರು ಸದನದ ಕಾರ್ಯಕಲಾಪಗಳಲ್ಲಿ ಭಾಗವಹಿಸಲು ಅಧಿಕೃತವಾಗಿ ಅರ್ಹತೆ ಪಡೆದರು.
ಮಂಗಳೂರು ;ಸುಪ್ರಸಿದ್ಧ ಶ್ರೀ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ವಿಚಾರಕ್ಕೆ ಸಂಬಂಧಿಸಿದ ಗೊಂದಲ ಇದೀಗ ನ್ಯಾಯಾಲಯದ ಮೆಟ್ಟಿಲೇರಿದೆ. ಅಧ್ಯಕ್ಷರ ಅನುಮತಿ ಪಡೆಯದೇ ಮೂವರು ಆಡಳಿತ ಸಮಿತಿ ಸದಸ್ಯರು ಸಭೆ ನಡೆಸಿ, ಎಂಟು ಸದಸ್ಯರ ಪೈಕಿ ಐವರು ಗೈರಾಗಿದ್ದ ಸಂದರ್ಭದಲ್ಲೇ ಕೆಲವೇ ಸದಸ್ಯರ ಮೂಲಕ ಅಸಂವಿಧಾನಿಕವಾಗಿ ಹೊಸ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಹಿಂದಿನ ಪದಾಧಿಕಾರಿಗಳ ಸಮಿತಿ ಆರೋಪಿಸಿದೆ. ಈ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಸಮಗ್ರ ಪರಿಶೀಲನೆಯ ಬಳಿಕ ನ್ಯಾಯಾಲಯವು ಹಿಂದಿನ ಸಮಿತಿಯ ಪರವಾಗಿ ಆದೇಶ ನೀಡಿದೆ ಎಂದು ಸಮಿತಿಯ ಕಾರ್ಯದರ್ಶಿ ರವಿಶಂಕರ್ ಮಿಜಾರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ನ್ಯಾಯಾಲಯದ ಆದೇಶದಂತೆ 16-02-2026ರಂದು ಕ್ಷೇತ್ರದ ಸಮೀಪದ ನಾರಾಯಣ ಗುರು ಕಾಲೇಜು ಸಭಾಂಗಣದಲ್ಲಿ ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ) ವಾರ್ಷಿಕ ಪ್ರತಿನಿಧಿ ಸಭೆ ನಡೆಯಿತು. ಸಭೆಯಲ್ಲಿ ಕೈಗೊಂಡ ನಿರ್ಣಯದ ಅನ್ವಯ 50 ಸದಸ್ಯರ ಹೊಸ ಸಮಿತಿಯನ್ನು ರಚಿಸಿ, 2026-27ನೇ ಸಾಲಿನ ಆಡಳಿತ ಸಮಿತಿಗೆ ಅಧಿಕೃತವಾಗಿ 9 ಮಂದಿ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು…

