Author: UllalaVani

Kannada News From Coastal Karnataka

ಉಳ್ಳಾಲ, ಜ:4: ಕಲ್ಲಾಪು ಬುರ್ದುಗೋಳಿ ಗುಳಿಗ ಕೊರಗಜ್ಜ ದೈವಗಳ ಉದ್ಭವಶಿಲೆಯ ಪ್ರಧಾನ ಆದಿಸ್ಥಳದ ಕುರಿತಾದ ʻಸಿಂಗಾರ ಸುಗಿಪುʼ ತುಳು ಭಕ್ತಿಗೀತೆ ವಿಡಿಯೋ ಹಾಡುಗಳ ಬಿಡುಗಡೆಯನ್ನು ವಾರಣಾಸಿ ಕಾಶಿ ಮಠದ ಶ್ರೀ ಶ್ರೀ ಶ್ರೀ ವಿದ್ಯಾಶಂಕರಾನಂದ ಸರಸ್ವತಿ ಸ್ವಾಮೀಜಿ ಕ್ಷೇತ್ರದಲ್ಲಿ ಶನಿವಾರ ಜರಗಿದ ವರ್ಷಾವಧಿ ಕೋಲ ಸಂದರ್ಭ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಅಜ್ಜನ ಕ್ಷೇತ್ರದ ಕುರಿತ ವೀಡಿಯೋ ಭಕ್ತಿಗೀತೆಯನ್ನು ಬಿಡುಗಡೆ ಮಾಡಲಾಗಿದೆ. ಮನೆಮನೆಗಳಲ್ಲಿ ಈ ಭಕ್ತಿಗೀತೆಗಳು ನಾದಿಸುತ್ತಾ, ಕ್ಷೇತ್ರಕ್ಕೂ ತಂಡಕ್ಕೂ ಉತ್ತಮ ಹೆಸರು ಮತ್ತು ಗೌರವ ದೊರಕಲಿ. ದೈವವನ್ನು ನಂಬುವ ಎಲ್ಲ ಭಕ್ತರೂ ಇದನ್ನು ನೋಡಬೇಕು, ಆಲಿಸಬೇಕು. ಈ ಪ್ರಯತ್ನ ಸುಗ್ಗಿಯಂತೆ ಸಮೃದ್ಧ ಫಲ ನೀಡಲಿ, ದೈವ ಕೃಪೆ ಸದಾ ಇರಲಿ ಎಂದು ಹಾರೈಸಿದರು.ಮಾ. ಅಭಿಷೇಕ್‌ ಕಲ್ಲಾಪು ಹಾಗೂ ಕು.ಸಾನ್ವಿ ಕೊಟ್ಟಾರಿ ಗಾಯನದಲ್ಲಿ ಮೂಡಿಬಂದಿರುವ ಹಾಡುಗಳಿಗೆ ತೋನ್ಸೆ ಪುಷ್ಕಳ್‌ ಕುಮಾರ್‌ ಸಾಹಿತ್ಯ ನೀಡಿದ್ದಾರೆ. ಸಮೀರ್‌ ಮುಡಿಪು ಧ್ವನಿ ಮುದ್ರಣ, ಸಂದೀಪ್‌ ಕಲ್ಲಾಪು ಛಾಯಗ್ರಹಣ, ಸಂಕಲನ, ಪ್ರಚಾರಕಲೆಯನ್ನು ಎಸ್ಎನ್.ಸಿ ಹಾಗೂ ಪುರುಷೋತ್ತಮ್‌ ಕಲ್ಲಾಪು,…

Read More

 ಉಡುಪಿ,ಜ.3: ಹೆಜಮಾಡಿ ಕಡಲ ತೀರದಲ್ಲಿ ಅಪರೂಪದ ದೃಶ್ಯವೊಂದು ಕಂಡುಬಂದಿದ್ದು, ರಾಶಿ ರಾಶಿಯಾಗಿ ಬೂತಾಯಿ ಮೀನುಗಳು ಕಡಲ ತೀರಕ್ಕೆ ಜಿಗಿದು ಬಂದ ಪರಿಣಾಮ ಸ್ಥಳೀಯ ನಿವಾಸಿಗಳಿಗೆ ಮೀನಿನ ಮಹಾ ಸುಗ್ಗಿ ದೊರೆತಿದೆ. ಕೈರಂಪಣಿ ಬಲೆ ಬೀಸುವ ವೇಳೆ ಸಮುದ್ರದ ತೀರ ಪ್ರದೇಶಕ್ಕೆ ಲಕ್ಷಾಂತರ ಸಂಖ್ಯೆಯಲ್ಲಿ ಬೂತಾಯಿ ಮೀನುಗಳು ಜಿಗಿದು ಬಂದಿವೆ. ಅಚ್ಚರಿಯ ಈ ದೃಶ್ಯವನ್ನು ಕಂಡ ಸ್ಥಳೀಯರು ಹಾಗೂ ತೀರ ಪ್ರದೇಶದ ನಿವಾಸಿಗಳು ಕೈಗೆ ಸಿಕ್ಕಿದಷ್ಟು ಮೀನುಗಳನ್ನು ಹೆಕ್ಕಿಕೊಂಡು ಹೋಗಿದ್ದಾರೆ.ಕಡಲ ತೀರದಲ್ಲಿ ಬೂತಾಯಿ ಮೀನುಗಳು ಜಿಗಿಯುತ್ತಿರುವುದು ಹಾಗೂ ಜನರು ಅವುಗಳನ್ನು ಹಿಡಿದುಕೊಂಡು ಹೋಗುತ್ತಿರುವ ದೃಶ್ಯಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ಅಪರೂಪದ ಘಟನೆ ದೃಶ್ಯ ರಮಣೀಯವೆನಸಿದರೂ ಮಾನವ ಆಹಾರ ಶೃಂಖಲೆಯನ್ನು ಒಂದೊಮ್ಮೆ ನೆನಪಿಸುತ್ತದೆ. ಆದರೂ ಇಂತಹ ಮೀನಿನ ಅಪ್ರತೀಕ್ಷಿತ ಸುಗ್ಗಿ ಕಂಡು ತೀರ ಪ್ರದೇಶದ ನಿವಾಸಿಗಳು ಸಂತಸ ವ್ಯಕ್ತಪಡಿಸಿದ್ದು, ಸಮುದ್ರ ನೀಡಿದ ಈ ಪ್ರಕೃತಿ ವರವನ್ನು ಸಂಭ್ರಮದಿಂದ ಸ್ವೀಕರಿಸಿದ್ದಾರೆ.

Read More

ಮಂಗಳೂರು,ಜ.03: ಬೋಂದೆಲ್‌ನ ಸೇಂಟ್ ಲಾರೆನ್ಸ್ ದೇಗುಲ ಮತ್ತು ಚರ್ಚ್‌ನ ಪ್ಯಾರಿಷ್ ಧರ್ಮಗುರು ಫಾದರ್ ಆಂಡ್ರ್ಯೂ ಲಿಯೋ ಡಿ’ಸೋಜಾ ಅವರು ಜನವರಿ 1 ರಂದು ಕಾರು ಅಪಘಾತಕ್ಕೀಡಾಗಿದ್ದರೂ ಪವಾಡ ಸದೃಶವಾಗಿ ಪಾರಾಗಿದ್ದಾರೆ. ಫಾದರ್ ಡಿ’ಸೋಜಾ ಅವರು ತಮ್ಮ ನಿವಾಸದಲ್ಲಿ ನಡೆದ ಹೊಸ ವರ್ಷದ ಕೂಟದಲ್ಲಿ ಭಾಗವಹಿಸಿದ ನಂತರ ತಮ್ಮ ಹುಟ್ಟೂರು ನೀರುಡೆಯಿಂದ ಬೊಂದೆಲ್ ಚರ್ಚ್‌ಗೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮರಕಡ ಮೂಲಕ ಹಾದುಹೋಗುವಾಗ ಅವರ ಕಾರಿನ ಒಂದು ಟೈರ್ ಸ್ಫೋಟಗೊಂಡು ವಾಹನ ನಿಯಂತ್ರಣ ತಪ್ಪಿದೆ ಎಂದು ವರದಿಯಾಗಿದೆ.ಘಟನೆಯ ಸಿಸಿಟಿವಿ ದೃಶ್ಯಾವಳಿಯಲ್ಲಿ ಕಾರು ರಸ್ತೆಯಿಂದ ಹೊರಟು ರಸ್ತೆಯ ಪಕ್ಕದಲ್ಲಿರುವ ಮನೆಯ ಅಂಗಳದಲ್ಲಿ ಪಕ್ಕಕ್ಕೆ ಬಿದ್ದಿದೆ. ಅಪಘಾತದಲ್ಲಿ ಫಾದರ್ ಡಿ’ಸೋಜಾ ಗಂಭೀರ ಗಾಯಗಳಿಲ್ಲದೆ ಪಾರಾಗಿದ್ದಾರೆ.ಅಪಘಾತವನ್ನು ಕಂಡ ಅನೇಕ ಪ್ರೇಕ್ಷಕರು ತಕ್ಷಣ ಸ್ಥಳಕ್ಕೆ ಧಾವಿಸಿ ಕಾರನ್ನು ಮೇಲೆತ್ತಲು ಮತ್ತು ಫಾದರ್ ಡಿಸೋಜಾ ಅವರನ್ನು ವಾಹನದಿಂದ ಸುರಕ್ಷಿತವಾಗಿ ಹೊರಬರಲು ಸಹಾಯ ಮಾಡಿದರು. ಘಟನೆಯ ನಂತರ ಮಾತನಾಡಿದ ಫಾದರ್ ಡಿ’ಸೋಜಾ, ದೇವರ ದಯೆಯಿಂದ ಇಂತಹ ಭೀಕರ ಅಪಘಾತದಿಂದ ಪಾರಾಗಿದ್ದಾನೆ…

Read More

ಕೊಲ್ಯ: ಜಗದ್ಗುರು ಶ್ರೀ ಶ್ರೀ ರಮಾನಂದ ಸ್ವಾಮೀಜಿಯವರು ಸ್ಥಾಪಿಸಿದ, “ದಕ್ಷಿಣದ ಕೊಲ್ಲೂರು” ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಶ್ರೀ ಕ್ಷೇತ್ರ ಕೊಲ್ಯ ಶ್ರೀ ಮೂಕಾಂಬಿಕ ದೇವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷರಾಗಿ, ಕೊಲ್ಲೂರು ಶ್ರೀ ಮೂಕಾಂಬಿಕೆಯ ಅನನ್ಯ ಆರಾಧಕರು ಹಾಗೂ ಶ್ರೀ ಮೂಕಾಂಬಿಕ ಬಿಲ್ಡರ್ಸ್ ಸಂಸ್ಥೆಯ ಆಡಳಿತ ನಿರ್ದೇಶಕರಾದ ಚಂದ್ರಹಾಸ್ ಪಂಡಿತ್ ಹೌಸ್ ಅವರನ್ನು ಆಯ್ಕೆ ಮಾಡಲಾಗಿದೆ. ಧಾರ್ಮಿಕ ಶ್ರದ್ಧೆ, ಸಾಮಾಜಿಕ ಬದ್ಧತೆ ಹಾಗೂ ಸಂಘಟನಾ ಸಾಮರ್ಥ್ಯದಿಂದ ಗುರುತಿಸಿಕೊಂಡಿರುವ ಚಂದ್ರಹಾಸ್ ಪಂಡಿತ್ ಹೌಸ್ ಅವರ ಆಯ್ಕೆ ದೇವಸ್ಥಾನದ ದೈನಂದಿನ ಆಡಳಿತ, ಧಾರ್ಮಿಕ ಆಚರಣೆಗಳ ಸುವ್ಯವಸ್ಥೆ, ಭಕ್ತರಿಗೆ ಅನುಕೂಲವಾಗುವ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಕ್ಷೇತ್ರದ ಸಮಗ್ರ ಪ್ರಗತಿಗೆ ಅವರು ಮಹತ್ವದ ಕೊಡುಗೆ ನೀಡುವ ವಿಶ್ವಾಸ ವ್ಯಕ್ತವಾಗಿದೆ.ಪೌರಾಣಿಕ ಹಿನ್ನೆಲೆಯಂತೆ ಕೋಲ ಮಹರ್ಷಿಗಳು ತಪಸ್ಸು ಮಾಡಿದ ಪವಿತ್ರ ಸ್ಥಳವೇ “ಕೊಲ್ಯ” ಎಂದು ನಾಮಾಂಕಿತವಾಗಿದ್ದು, ತಾಯಿ ಶ್ರೀ ಮೂಕಾಂಬಿಕೆಯ ಕೃಪೆಯಿಂದ ಈ ಕ್ಷೇತ್ರವು ಆಧ್ಯಾತ್ಮಿಕ ಕೇಂದ್ರವಾಗಿ ಬೆಳೆಯುತ್ತಿದೆ. ನೂತನ ಅಧ್ಯಕ್ಷರ ನೇತೃತ್ವದಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿ, ಧಾರ್ಮಿಕ ಪ್ರವಾಸೋದ್ಯಮದ ಉತ್ತೇಜನ…

Read More

ಮುಲ್ಕಿ,ಜ.2: ಎಮ್ಮೆ ಹಾಗೂ ಹಸುಗಳನ್ನು ಹೊಂದಿದ್ದ ವ್ಯಕ್ತಿಯೋರ್ವರ ಸುಲಿಗೆಗೆ ಯತ್ನಿಸಿದ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಾರಗುಡ್ಡೆ ಎಂಬಲ್ಲಿ ನಡೆದಿದೆ. ಪ್ರಕರಣಕ್ಕೆ ಸಂಬAಧಿಸಿದ0ತೆ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, ಮತ್ತೊಬ್ಬ ತಲೆಮರೆಸಿಕೊಂಡಿದ್ದಾನೆ. ಅಂಗಾರಗುಡ್ಡೆಯ ನಿವಾಸಿ ಅಬೂಬಕ್ಕರ್ ಎಂಬುವವರನ್ನು ಗುರಿಯಾಗಿಸಿಕೊಂಡು ಈ ಕೃತ್ಯ ಎಸಗಲಾಗಿದೆ. ಅಬೂಬಕ್ಕರ್ ಅವರ ಬಳಿ ಮೂವರು ಜೋಡಿ ಎಮ್ಮೆ, ಹಾಲು ನೀಡುವ ಐದು ಹಸುಗಳು ಹಾಗೂ ಇನ್ನಿತರ ಎತ್ತು-ಎಮ್ಮೆಗಳನ್ನು ಸಾಕುತ್ತಿದ್ದರು. ಇತ್ತೀಚೆಗೆ ಅವರ ಎಮ್ಮೆಗಳು ಕಂಬಳ ಕೂಟದಲ್ಲಿ ಬಹುಮಾನ ಗೆದ್ದಿದ್ದವು. ಪಕ್ಕದ ಗ್ರಾಮದಿಂದ ಬಂದಿದ್ದ ಮೂವರು ಆರೋಪಿಗಳು ಅಬೂಬಕ್ಕರ್ ಅವರಿಂದ ಹಣ ಸುಲಿಗೆ ಮಾಡಲು ಯತ್ನಿಸಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಅಬೂಬಕ್ಕರ್ ಅವರ ತಂದೆ ಶಂಶುದ್ದೀನ್ ಅವರ ಮೇಲೆ ಹಲ್ಲೆ ನಡೆಸಲಾಗಿದ್ದು, ಅಬೂಬಕ್ಕರ್ ಅವರು ಮಧ್ಯಪ್ರವೇಶಿಸಿ ತಂದೆಯನ್ನು ರಕ್ಷಿಸಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಗ್ರಾಮದ ಹಿಂದೂ ಮತ್ತು ಮುಸ್ಲಿಂ ಸಮುದಾಯದ ಜನರು ಅಬೂಬಕ್ಕರ್ ಕುಟುಂಬಕ್ಕೆ ಬೆಂಬಲವಾಗಿ ನಿಂತಿದ್ದಾರೆ. ಸೌಹಾರ್ದತೆಯಿಂದ ಜೀವನ ನಡೆಸುತ್ತಿರುವ…

Read More

ಬಳ್ಳಾರಿ, ಜನವರಿ 02: ಬ್ಯಾನರ್​ ವಿಚಾರವಾಗಿ ನಡೆದ ಗಲಾಟೆಯಲ್ಲಿ ಓರ್ವ ಯುವಕ ಮೃತಪಟ್ಟಿರುವ ವಿಚಾರವೀಗ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಮತ್ತು ಬಳ್ಳಾರಿ ಎಂಎಲ್​​ಎ ನಾರಾ ಭರತ್​​ ರೆಡ್ಡಿ ವಿರುದ್ಧ ಸಮರಕ್ಕೆ ಕಾರಣವಾಗಿದೆ. ಉಭಯ ನಾಯಕರು ಒಬ್ಬರ ಮೇಲೊಬ್ಬರು ಆರೋಪಗಳ ಸುರಿಮಳೆಯನ್ನೇ ಗೈಯುತ್ತಿದ್ದಾರೆ. ಇದು ನನ್ನ ಕೊಲೆಗೆ ನಡೆದ ಸಂಚು ಎಂದು ಆರೋಪಿಸಿದ್ದರೆ, ಅಕ್ರಮ ಗಣಿಗಾರಿಕೆ ವಿಷಯ ಡೈವರ್ಟ್​ ಮಾಡಲು ಇಂತಹ ನೀಜ ಕೃತ್ಯಕ್ಕೆ ಜನಾರ್ದನ ರೆಡ್ಡಿ ಇಳಿದಿದ್ದಾನೆ ಎಂದು ಏಕವಚನದಲ್ಲೇ ಭರತ್​​ ರೆಡ್ಡಿ ಕಿಡಿಕಾರಿದ್ದಾರೆ. ಇದೆಲ್ಲದರ ನಡುವೆ ಯುವಕ ರಾಜಶೇಖರ್​​ ಸಾವಿಗೆ ಕಾರಣವಾದ ಬುಲೆಟ್ ಫೈರ್​​ ಮಾಡಿದ್ದು ಯಾರು ಎಂಬ ಪ್ರಶ್ನೆ ಉದ್ಭವಿಸಿದೆ. ಬ್ಯಾನರ್ ವಿಚಾರವಾಗಿ ಗಲಾಟೆ ವಿಕೋಪಕ್ಕೆ ಹೋಗುತ್ತಿದ್ದಂತೆ ಪರಿಸ್ಥಿತಿ ನಿಯಂತ್ರಣಕ್ಕೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಜೊತೆಗೆ ಶಾಸಕ ಭರತ್ ರೆಡ್ಡಿ ಆಪ್ತನ ಬಾಡಿಗಾರ್ಡ್ಗಳು ಕೂಡ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದ್ದು, ಪ್ರಕರಣ ಸಂಬ0ಧ ಖಾಸಗಿ ಗನ್‌ಮ್ಯಾನ್‌ಗಳ ೩ಗನ್ ಸೀಜ್ ಮಾಡಿದ್ದಾರೆ. ಅವುಗಳನ್ನು…

Read More

ಫೆಬ್ರವರಿ 1 ರಿಂದ ತಂಬಾಕು ಉತ್ಪನ್ನಗಳ ಮೇಲೆ ಹೆಚ್ಚುವರಿ ಅಬಕಾರಿ ಸುಂಕ ಮತ್ತು ಪಾನ್ ಮಸಾಲಾ ಮೇಲೆ ಹೊಸ ಸೆಸ್ ವಿಧಿಸಲಾಗುವುದು ಎಂದು ಸರ್ಕಾರ ಅಧಿಸೂಚನೆ ಹೊರಡಿಸಿದೆ. ತಂಬಾಕು ಮತ್ತು ಪಾನ್ ಮಸಾಲಾ ಮೇಲಿನ ಹೊಸ ಸುಂಕಗಳು ಜಿಎಸ್‌ಟಿ ದರಕ್ಕಿಂತ ಹೆಚ್ಚಿರುತ್ತವೆ. ಸರಕುಗಳ ಮೇಲೆ ಪ್ರಸ್ತುತ ವಿಧಿಸಲಾಗುತ್ತಿರುವ ಪರಿಹಾರ ಸೆಸ್ ಅನ್ನು ಬದಲಾಯಿಸುತ್ತವೆ.ಫೆ.1 ರಿಂದ ಪಾನ್ ಮಸಾಲಾ, ಸಿಗರೇಟ್, ತಂಬಾಕು ಮತ್ತು ಅಂತಹುದೇ ಉತ್ಪನ್ನಗಳಿಗೆ ಶೇ. 40 ರಷ್ಟು ಜಿಎಸ್‌ಟಿ ದರ ಇರಲಿದೆ. ಬೀಡಿಗಳಿಗೆ ಶೇ. 18 ರಷ್ಟು ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಬೀಳಲಿದೆ ಎಂದು ಸರ್ಕಾರಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.ಪಾನ್ ಮಸಾಲಾ ಮೇಲೆ ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತಾ ಸೆಸ್ ವಿಧಿಸಲಾಗುವುದು, ಆದರೆ ತಂಬಾಕು ಮತ್ತು ಸಂಬಂಧಿತ ಉತ್ಪನ್ನಗಳು ಹೆಚ್ಚುವರಿ ಅಬಕಾರಿ ಸುಂಕವನ್ನು ವಿಧಿಸುತ್ತವೆ. ಬುಧವಾರ ಹಣಕಾಸು ಸಚಿವಾಲಯವು ಚೂಯಿಂಗ್ ತಂಬಾಕು, ಜರ್ದಾ ಸುಗಂಧಿತ ತಂಬಾಕು ಮತ್ತು ಗುಟ್ಕಾ ಪ್ಯಾಕಿಂಗ್ ಯಂತ್ರಗಳ (ಸಾಮರ್ಥ್ಯ ನಿರ್ಣಯ ಮತ್ತು ಸುಂಕ ಸಂಗ್ರಹ)…

Read More

ಉಳ್ಳಾಲ: ಶಿಕ್ಷಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಣಬೇಕು, ಮಾನವೀಯ ಮೌಲ್ಯಗಳು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಕೇರಳ ಯಾತ್ರೆ ಆರಂಭಿಸಲಾಗಿದೆ. ಮನುಷ್ಯರೊಂದಿಗ ಎಂಬ ಧ್ಯೇಯ ವಾಕ್ಯದೊಂದಿಗೆ ಈ ಯಾತ್ರೆ ನಡೆಯಲಿದೆ. ತಾಜುಲ್ ಉಲಮಾ ಉಳ್ಳಾಲ ತಂಙಳ್ ಶಿಕ್ಷಣಕ್ಕೆ ಒತ್ತು ನೀಡಿದ್ದರು. ಅದನ್ನು ಉಳಿಸುವ ಕಾರ್ಯ ನಮ್ಮಿಂದ ಆಗಬೇಕು ಎಂದು ಉಳ್ಳಾಲ ಸಂಯುಕ್ತ ಖಾಝಿ ಸುಲ್ತಾನುಲ್ ಉಲಮಾ, ಇಂಡಿಯನ್ ಗ್ರಾö್ಯಂಡ್ ಮುಫ್ತಿ ಎ.ಪಿ.ಅಬೂಬಕರ್ ಮುಸ್ಲಿಯಾರ್ ಹೇಳಿದರು. ಅವರು ಮನುಷ್ಯರೊಂದಿಗೆ ಎಂಬ ಧ್ಯೇಯವಾಕ್ಯದಲ್ಲಿ ಕೇರಳ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿ ಆಯೋಜಿಸಿರುವ ಕೇರಳ ಯಾತ್ರೆಗೆ ಉಳ್ಳಾಲ ದರ್ಗಾ ಝಿಯಾರತ್‌ನೊಂದಿಗೆ ಚಾಲನೆ ನೀಡಿದ ಬಳಿಕ ನಡೆದ ಸಭೆಯಲ್ಲಿ ಮಾತನಾಡಿದರು. ದೇಶದಲ್ಲಿ ಮನುಷ್ಯತ್ವ ಉಳಿಯಬೇಕು. ಅರಾಜಕತೆ, ಅಧರ್ಮ ನಮಗೆ ಬೇಡ. ಇದನ್ನು ಅಳಿಸಿ ಜನರು ಸನ್ಮಾರ್ಗದಲ್ಲಿ ನಡೆಯಬೇಕು. ಐಕ್ಯತೆ ಬೆಳೆಯಬೇಕು ಎಂದು ಕರೆ ನೀಡಿದರು. ಅಸಯ್ಯಿದ್ ಇಬ್ರಾಹೀಮ್ ಖಲೀಲ್ ತಂಙಳ್ ಕಡಲುಂಡಿ ಮಾತನಾಡಿ, ಎ.ಪಿ. ಉಸ್ತಾದ್ ಅವರ ನೇತೃತ್ವದಲ್ಲಿ ಇಂದು ನಡೆಯುವುದು ಮೂರನೇ ಯಾತ್ರೆ ಆಗಿದೆ. ಮನುಷ್ಯರೊಂದಿಗೆ ಎಂಬ…

Read More

ತೊಕ್ಕೊಟ್ಟು: ಭಾರತೀಯ ಗುರುಕುಲ ಮಾದರಿಯ ಪಂಚಮುಖಿ ಶಿಕ್ಷಣಕ್ಕೆ ಜಿಲ್ಲೆಯಲ್ಲೇ ಉನ್ನತ ಹೆಸರಿರುವ ಮಂಗಳೂರು ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ಈ ಬಾರಿಯ `ರಾಷ್ಟ್ರೋತ್ಸವ’ ಜನವರಿ 3ರಂದು ಸಂಜೆ 5;30ಕ್ಕೆ ತೊಕ್ಕೊಟ್ಟು ಚೆಂಬುಗುಡ್ಡೆಯ ರಾಷ್ಟ್ರೋತ್ಥಾನ ವಿದ್ಯಾಕೇಂದ್ರದ ರಾಣಿ ಅಬ್ಬಕ್ಕ ಚಾವಡಿಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಯಾಗಿ ನಿಟ್ಟೆ ಪರಿಗಣಿತ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಡಾ.ಎಂ,ಎಸ್ ಮೂಡಿತ್ತಾಯ ಆಗಮಿಸಲಿದ್ದಾರೆ. ರಾಷ್ಟೋತ್ಥಾನ ಪರಿಷತ್ ಬೆಂಗಳೂರು ಇದರ ಪ್ರಧಾನ ಕಾರ್ಯದರ್ಶಿಗಳಾದ ನಾ.ದಿನೇಶ್ ಹೆಗ್ಡೆ ಅವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

Read More

ಮಂಗಳೂರು,ಜ.6: ದಕ್ಷಿಣ ಕನ್ನಡ ಪ್ರಾದೇಶಿಕ ಸಾರಿಗೆ ಪ್ರಾಧಿಕಾರವು ಮಂಗಳೂರು ನಗರ ವ್ಯಾಪ್ತಿಯಲ್ಲಿ ಇ-ಆಟೋಗಳನ್ನು ನಿರ್ವಹಿಸಲು ಪರವಾನಗಿ ನೀಡಲು ನಿರ್ದಿಷ್ಟ ಷರತ್ತುಗಳನ್ನು ವಿಧಿಸಲು ನಿರ್ಧರಿಸಿದೆ. ಇ-ಆಟೋ ಪರವಾನಗಿಯನ್ನು ಬಯಸುವ ಅರ್ಜಿದಾರರು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕನಿಷ್ಠ ಐದು ವರ್ಷಗಳ ಕಾಲ ವಾಸಿಸುತ್ತಿದ್ದಾರೆ ಎಂದು ಸಾಬೀತುಪಡಿಸುವ ನಿವಾಸ ಪ್ರಮಾಣಪತ್ರವನ್ನು ಸಲ್ಲಿಸಬೇಕು. ನಗರ ವ್ಯಾಪ್ತಿಯಲ್ಲಿ ಈಗಾಗಲೇ ಆಟೋರಿಕ್ಷಾ ಪರವಾನಗಿಗಳನ್ನು ಹೊಂದಿರುವವರು ಇ-ಆಟೋರಿಕ್ಷಾ ಪರವಾನಗಿಗೆ ಅರ್ಹರಾಗಿರುವುದಿಲ್ಲ. ಒಬ್ಬ ವ್ಯಕ್ತಿಗೆ ಒಂದೇ ಇ-ಆಟೋರಿಕ್ಷಾ ಪರ್ಮಿಟ್ ನೀಡಲಾಗುವುದು. ಇ-ಆಟೋ ಪರ್ಮಿಟ್ ಹೊಂದಿರುವವರು ಮಾನ್ಯ ಚಾಲನಾ ಪರವಾನಗಿ ಮತ್ತು ಬ್ಯಾಡ್ಜ್ ಹೊಂದಿರುವುದು ಕಡ್ಡಾಯವಾಗಿದೆ. ಇದಲ್ಲದೆ, ಪರ್ಮಿಟ್ ಹೊಂದಿರುವವರು ಸ್ವತಃ ಇ-ಆಟೋರಿಕ್ಷಾವನ್ನು ಕಡ್ಡಾಯವಾಗಿ ಚಾಲನೆ ಮಾಡಬೇಕು ಎಂದು ಪ್ರಾಧಿಕಾರವು ಷರತ್ತು ವಿಧಿಸಿದೆ. ನಗರದಲ್ಲಿ ಇ-ಆಟೋಗಳ ಕಾರ್ಯಾಚರಣೆಯನ್ನು ನಿಯಂತ್ರಿಸಲು ಮತ್ತು ಸಾರಿಗೆ ನಿಯಮಗಳ ಸರಿಯಾದ ಅನುಸರಣೆಯನ್ನು ಖಚಿತಪಡಿಸಿಕೊಳ್ಳಲು ನಿರ್ಧಾರ ತೆಗೆದುಕೊಳ್ಳಲಾಗಿದೆ

Read More