UN networks ಮಂಗಳೂರು: ರಾಜ್ಯ ಪೊಲೀಸ್ ತಂಡದಿಂದ ಮೂವರು ಪಿ.ಎಫ್.ಐ ನಾಯಕರ ವಶಕ್ಕೆ ಪಡೆದ ಪ್ರಕರಣ ಪೊಲೀಸ್ ಬಿಗಿ ಭದ್ರತೆಯಲ್ಲಿ ನಾಯಕರನ್ನು ಬೆಂಗಳೂರಿಗೆ ಉಳ್ಳಾಲ ಪೊಲೀಸ್ ಇನ್ಸ್ಪೆಕ್ಟರ್ ಸಂದೀಪ್ ನೇತೃತ್ವದಲ್ಲಿ ಕರದೊಯ್ಯಲಾಗುತ್ತಿದೆ.ಪಿಎಫ್ಐ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್, ಮೋಹಿದೀನ್ ಹಳೆಯಂಗಡಿ, ನವಾಜ್ ಕಾವೂರು ಎಂಬವರನ್ನು ಬೆಂಗಳೂರಿಗೆ ಕರೆದೊಯ್ಯಲಾಗುತ್ತಿದೆ.ಹೆಚ್ಚಿನ ವಿಚಾರಣೆಗೆ ಎಲ್ಲರನ್ನು ಡಿಸಿಪಿ ಶರಣಪ್ಪ ನೇತೃತ್ವದಲ್ಲಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ.
Author: UllalaVani
UN networks ಮಂಗಳೂರು: ಜಿಲ್ಲೆಯಲ್ಲಿ ಎನ್.ಐ.ಎ ಮತ್ತು ರಾಜ್ಯ ಪೊಲೀಸ್ ದಾಳಿ ನಡೆಸಿ ಮತ್ತೆ ಇಬ್ಬರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಪುತ್ತೂರು ಮತ್ತು ಬಂಟ್ವಾಳದ ಇಬ್ಬರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಪಿಎಫ್ ಐ ರಾಜ್ಯ ನಾಯಕರಾದ ತಫ್ಸೀರ್ ಮತ್ತು ಅಬ್ದುಲ್ ಖಾದರ್ ಸಾಮೆತ್ತಡ್ಕ ವಶಕ್ಕೆ ಪಡೆದುಕೊಂಡವರು. ಕಲ್ಲಡ್ಕ ದ ಬೋಳಂತೂರು ನಿವಾಸಕ್ಕೆ ದಾಳಿ ನಡೆಸಿ ತಫ್ಸಿರ್ ನನ್ನು ವಶಕ್ಕೆ ಪಡೆದುಕೊಂಡರೆ, ಪುತ್ತೂರು ತಾಲೂಕಿನ ಸಾಮೆತ್ತಡ್ಕ ನಿವಾಸಕ್ಕೆ ದಾಳಿ ನಡೆಸಿ ಅಬ್ದುಲ್ ಖಾದರ್ ಸಾಮೆತ್ತಡ್ಕ ವಶಕ್ಕೆ ಪಡೆಯಲಾಗಿದೆ.ದ.ಕ ಜಿಲ್ಲಾ ಪೊಲೀಸರ ಸಹಕಾರದೊಂದಿಗೆ ಬೆಂಗಳೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಇಬ್ಬರನ್ನೂ ಪೊಲೀಸರು ಬೆಂಗಳೂರಿಗೆ ಕರೆದೊಯ್ಯುತ್ತಿದ್ದಾರೆ. ಈಗಾಗಲೇ ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೂವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪಿಎಫ್ ಐ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್, ಮೊಯಿದ್ದೀನ್ ಹಳೆಯಂಗಡಿ ಮತ್ತು ಪಿಎಫ್ ಐ ಗ್ರಾಮಾಂತರ ಜಿಲ್ಲಾಧ್ಯಕ್ಷ ನವಾಜ್ ಕಾವೂರು ಎಂಬಾತನನ್ನು ವಶಕ್ಕೆ ಪಡೆದುಕೊಳ್ಳಾಗಿದೆ.
UN networks ಉಳ್ಳಾಲ: ಮಾಡೂರು ಸೈಟ್ ನಲ್ಲಿ ತಲವಾರು ದೊಣ್ಣೆ ತೋರಿಸಿ ಜೀವಬೆದರಿಕೆಯೊಡ್ಡಿ ಜಾನುವಾರು ಕಳವುಗೈದ ಮೂವರು ಆರೋಪಿಗಳನ್ನು ಎಸಿಪಿ ದಿನಕರ್ ಶೆಟ್ಟಿ ಮಾರ್ಗದರ್ಶನದಲ್ಲಿ ಠಾಣಾಧಿಕಾರಿ ಸಂದೀಪ್ ಜಿ.ಎಸ್ ನೇತೃತ್ವದ ಪೊಲೀಸ್ ತಂಡ ಬಂಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ. ಬಂಟ್ವಾಳ ಕಸಬಾ ಗ್ರಾಮದ ಟಿಪ್ಪುನಗರ ದ ಜಾಬೀರ್ (24), ಫರಂಗಿಪೇಟೆ ಅಮ್ಮೆಮ್ಮಾರ್ ಮಸೀದಿ ಬಳಿಯ ಹೈದರಾಲಿ(24), ಬಂಟ್ವಾಳ ಸಿದ್ದಕಟ್ಟೆಯ ಸಂಗಬೆಟ್ಟುವಿನ ಮುಹಮ್ಮದ್ ಆರೀಫ್(30) ಬಂಧಿತರು. ಮಾಡೂರು ಸೈಟ್ ನಿವಾಸಿ ಸತೀಶ್ ಎಂಬವರಿಗೆ ಸೇರಿದ ರೂ. 30,000 ಬೆಲೆಬಾಳುವ 4 ವರ್ಷ ಪ್ರಾಯದ ಹೋರಿ ಎತ್ತನ್ನು ಆರೋಪಿಗಳು ಕಳವು ನಡೆಸಿದ್ದರು.ಆ.22. ರಂದು ಮಾಡೂರು ವನದುರ್ಗ ಅಯ್ಯಪ್ಪ ಮಂದಿರದ ಅಶ್ವತ್ಥಕಟ್ಟೆಯ ಬಳಿ ಕಟ್ಟಿ ಹಾಕಲಾಗಿದ್ದ ಹೋರಿಯನ್ನು ನಸುಕಿನ 4.25 ಕ್ಕೆ ಇಬ್ಬರು ಆರೋಪಿಗಳು ಬಲಾತ್ಕಾರವಾಗಿ ಹಿಂಸಾತ್ಮಕವಾಗಿ ಎಳೆದೊಯ್ಯುವಾಗ ಜೋರಾಗಿ ಕೂಗುವುದನ್ನು ಗಮನಿಸಿ ಮಾಲೀಕ ಸತೀಶ್ ಅವರು ಓಡಿಬಂದಿದ್ದರು. ಈ ವೇಳೆ ತಲವಾರು ಮತ್ತು ದೊಣ್ಣೆ ತೋರಿಸಿದ ದುಷ್ಕರ್ಮಿಗಳು , ಅಡ್ಡಿಪಡಿಸಿದರೆ ಕೊಲ್ಲುವುದಾಗಿ…
UN NEWS NETWORKS ಉಳ್ಳಾಲದ ಮಾರುತಿ ಯುವಕ ಮಂಡಲ ಜನಪರ ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ನಡೆಸುತ್ತಿದ್ದು, ಜನರ ಪ್ರೀತಿ ವಿಶ್ವಾಸಕ್ಕೆ ಪಾತ್ರವಾಗಿದೆ.ವೃತ್ತಿ ಜೀವನದಲ್ಲಿ ಕೂಡಿಟ್ಟ ಭಾಗವನ್ನು ಸಮಾಜಕ್ಕೆ ಸಮರ್ಪಣೆ ನಡೆಸುತ್ತಿರುವ ಕಾರ್ಯ ಶ್ಲಾಘನಾರ್ಹ.ರಾಜ್ಯ ಪ್ರಶಸ್ತಿಯನ್ನು ಪಡೆಯಲು ಅರ್ಹರಿರುವ ಸಂಸ್ಥೆ, ಎಂದು ಮಾಜಿ ಮೇಯರ್ ಪ್ರೇಮಾನಂದ ಶೆಟ್ಟಿ ಅಭಿಪ್ರಾಯಪಟ್ಟರು. ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಉಳ್ಳಾಲ ಮೊಗವೀರಪಟ್ಣದ ಮಾರುತಿ ಯುವಕ ಮಂಡಲ ಮತ್ತು ಮಾರುತಿ ಕ್ರಿಕೆಟರ್ಸ್ ಇದರ ಆಶ್ರಯದಲ್ಲಿ ಮೊಗವೀರ ಹಿರಿಯ ಪ್ರಾಥಮಿಕ ಶಾಲೆಯ ಮಾರುತಿ ವೇದಿಕೆಯಲ್ಲಿ ನಡೆದ ಪ್ರತಿಭಾ ಪುರಸ್ಕಾರ, ಸನ್ಮಾನ , ಮಾರುತಿ ಸಾಧಕ ಪ್ರಶಸ್ತಿ ಪ್ರದಾನ ಹಾಗೂ ಗೌರವ ಧನ ಪ್ರದಾನ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನವಮಂಗಳೂರು ಬಂದರಿನ ಟ್ರಸ್ಟಿ ಭರತ್ ಕುಮಾರ್ ಎರ್ಮಾಳ್, ಟ್ರಾಲ್ಬೋಟ್ ಯೂನಿಯನ್ ಅಧ್ಯಕ್ಷ ಚೇತನ್ ಬೆಂಗ್ರೆ, ಶ್ರೀ ವ್ಯಾಘ್ರಚಾಮುಂಡೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ವಸಂತ್ ಅಮೀನ್ ಗುರಿಕಾರ, ಉಳ್ಳಾಲ ನಗರಸಭಾ ಉಪಾಧ್ಯಕ್ಷ ಆಯ್ಯೂಬ್ ಮಂಚಿಲ, ಉಳ್ಳಾ ಮೊಗವಿಒರ ಸಂಘದ ಮಾಜಿ ಅಧ್ಯಕ್ಷ…
UN networks ಮಂಗಳೂರು: ಮಂಗಳೂರಿನಲ್ಲಿ ಎಸ್ ಡಿ ಪಿ ಐ ಮತ್ತು ಪಿಎಫ್ ಐ ನಾಯಕರ ಮನೆ ಮತ್ತು ಕಚೇರಿಗಳ ಮೇಲೆ ಎನ್ ಐ ಎ ದಾಳಿ ನಡೆಸಿದೆ. ಮಂಗಳೂರಿನ ನೆಲ್ಲಿಕಾಯಿ ರಸ್ತೆಯ ಪಿಎಫ್ ಐ ಮತ್ತು ಎಸ್ ಡಿಪಿಐ ಜಿಲ್ಲಾ ಕಚೇರಿ, ಕುಳಾಯಿ, ಕಾವೂರು, ಜೋಕಟ್ಟೆ, ಬಜಪೆಯ ಪಿಎಫ್ ಐ ಮತ್ತು ಎಸ್ ಡಿಪಿಐ ನಾಯಕರ ಮನೆಗಳ ಮೇಲೂ ದಾಳಿ ನಡೆಸಿದೆ.ಎನ್ಐಎ ದಾಳಿ ನಡೆಸುತ್ತಿದ್ದಂತೆ ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದು ಎನ್ ಐಎ ಗೋ ಬ್ಯಾಕ್ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳದಲ್ಲಿ ಸಿಆರ್ ಪಿಎಫ್ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ. ಕುಳಾಯಿ ಬಳಿಯ ಎಸ್ ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಸಹೋದರನ ಮನೆ ಮೇಲೂ ದಾಳಿ ನಡೆಸಿದ್ದು ಎನ್ ಐಎ ದಾಳಿ ನಡೆಸಿದ ನೆಲ್ಲಿಕಾಯಿ ರಸ್ತೆಗೆ ಮಂಗಳೂರು ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ. ಎಸ್ ಡಿಪಿಐ ಮತ್ತು ಪಿಎಫ್ ಐ ಜಿಲ್ಲಾ ಕಚೇರಿ ಇರೋ ನೆಲ್ಲಿಕಾಯಿ ರಸ್ತೆಯಲ್ಲಿ ಭಾರೀ…
UN networks ಬಂಟ್ವಾಳ: ದೇಶದಾದ್ಯಂತ ಏಕಕಾಲಕ್ಕೆ ಎನ್ ಐ ಎ ತಂಡ ದಾಳಿ ನಡೆಸಿದ್ದು ಮಂಗಳೂರಿನ ಪಿಎಫ್ ಐ ರಾಜ್ಯ ನಾಯಕ ಮೇಲೆ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿದೆ. ಉಪ್ಪಿನಂಗಡಿಯ ಲಕ್ಷ್ಮಿ ನಗರದಲ್ಲಿನ ಪಿಎಫ್ ಐ ರಾಜ್ಯ ನಾಯಕ ತಪ್ಸೀರ್ ಬೋಳಂತೂರು ಮನೆಗೆ ಎನ್ ಐಎ ಅಧಿಕಾರಿಗಳ ದಾಳಿ ಬಿಗಿ ಭದ್ರತೆಯೊಂದಿಗೆ ನಡೆದಿದೆದೇಶದ್ಯಾಂತ ಏಕಕಾಲಕ್ಕೆ ಎನ್ ಐ ಎ ತಂಡ ದಾಳಿ ನಡೆಸಿದ್ದು ಪಿಎಫ್ ಐ, ಎಸ್ ಡಿಪಿಐ ಜಿಲ್ಲಾ ಕಚೇರಿ ಸೇರಿ ಹಲವೆಡೆ ಪಿಎಫ್ ಐ ನಾಯಕರ ಮನೆ ಮೇಲೆ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ ಹಲವು ಪೊಲೀಸರನ್ನು ಸ್ಥಳದಲ್ಲಿ ಭದ್ರತೆಗೆ ನಿಯೋಜಿಸಲಾಗಿದೆ.ಎನ್ ಐಎ ದಾಳಿ ಖಂಡಿಸಿ ಎಸ್ ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಗೋಬ್ಯಾಕ್ ಘೋಷಣೆ ಕೂಗಿದ್ದಾರೆ.
BlogsForm of Mobile IncentivesMay i Rating A no deposit Promo For the Mobile?Space Wins Local casino: 50 Totally free Spins No depositRed dog Gambling establishment No-deposit Added bonus Code $50 Totally free Processor This is the way you will put away plenty of your time and gain benefit from the best betting feel. 100% incentive to your very first deposit around £ instructional article fifty & one hundred Added bonus Spins to have Guide away from Inactive position merely. Jazzy Revolves flies the brand new banner out of in control betting and you will embraces the newest prices of GambleAware.…
AiséComment Avoir Tonalité BonusMon Pourboire À l’exclusion de Annales L’idéal CotéJouer Í tous les Slots Sans Intimidation 2022Ma Martingale De Blackjack: 1000 Jeu Pour Machines De jeu 2022 Vous allez pouvoir confirmer des informations de branchant mien représentation scannée de la salle d’identité. Dans les salle de jeu quelque peu fonctionnelles, cet jeux de casino gratuits sans téléchargement procédé pour vérification non absorbe qu’un petit nombre de moment. Nous toi-même conseillons pleinement d’entrer en moyen de remarquer les options personnelles de la publicité.
UN networks ಉಳ್ಳಾಲ: ಇಲ್ಲಿನ ತಾಲೂಕಿನ ವಿವಿದೆಡೆ ಬೆಳೆ ಸಮೀಕ್ಷೆ ಕಾರ್ಯದಲ್ಲಿ ಶೇ.100% ಪ್ರಗತಿ ಸಾಧಿಸಿದ ಖಾಸಗಿ ಪ್ರತಿನಿಧಿ(ಪಿ.ಆರ್) ಅವರನ್ನು ಕಂದಾಯ ಇಲಾಖೆ ವತಿಯಿಂದ ತಾಲೂಕು ತಹಶೀಲ್ದಾರ್ ಡಿ.ಎ ಪುಟ್ಟರಾಜು ನಾಟೆಕಲ್ ತಾಲೂಕು ಕಚೇರಿಯಲ್ಲಿ ಸನ್ಮಾನಿಸಿದರು.ಕೊಣಾಜೆ ಗ್ರಾಮದ ಜಿತೇಂದ್ರ, ಕೈರಂಗಳ ಗ್ರಾಮದ ಮಹಮ್ಮದ್ ಮುನೀರ್ ಹಾಗೂ ಹೈದರ್ ಇಸ್ಮಾಯಿಲ್ ಇವರನ್ನು ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಉಪತಹಶೀಲ್ದಾರರಾದ ನವನೀತ್ ಮಾಳವ, ವಿನಯ ಎಸ್ ರಾವ್, ಕಂದಾಯ ನಿರೀಕ್ಷಕರಾದ ಮಂಜುನಾಥ್ ಕೆ ಹೆಚ್, ಪ್ರಥಮ ದರ್ಜೆ ಸಹಾಯಕರಾದ ಕಿರಣ್ ಕುಮಾರ್, ಗ್ರಾಮಕರಣಿಕರಾದ ತೌಫಿಕ್ ಹಾಗೂ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.
UN networks ಮಂಗಳೂರು: ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಫ್ಲ್ಯಾಟ್ ಒಂದಕ್ಕೆ ಶಿವಮೊಗ್ಗ ಪೊಲೀಸರು ದಾಳಿ ನಡೆಸಿ ತನಿಖೆ ಆರಂಭಿಸಿದ್ದಾರೆ.ಆರೋಪಿ ಮಾಜ್ ಮುನೀರ್ ಅಹ್ಮದ್ ವಾಸವಿದ್ದ ಮಂಗಳೂರು ನಗರದ ಆರ್ಯ ಸಮಾಜ ರಸ್ತೆಯಲ್ಲಿರುವ ಪ್ರೆಸಿಡೆನ್ಸಿ ಅವೆನ್ಯೂ ಫ್ಲ್ಯಾಟ್ ಪೊಲೀಸರು ದಾಳಿ ನಡೆಸಿ ತನಿಖೆ ನಡೆಸುತ್ತಿದ್ದಾರೆ.ಟೆಂಪೋ ಟ್ರಾವೆಲ್ ನಲ್ಲಿ ಬಂದಿರುವ ಪೊಲೀಸರ ತಂಡ ಆರೋಪಿ ತಂಗಿದ್ದ ರೂಂ ನಲ್ಲಿ ಮಹಜರು ನಡೆಸುತ್ತಿದ್ದಾರೆ.

