UN NEWS NETWORKS ಉಳ್ಳಾಲ : ರಾಷ್ಟ್ರೀಯ ಸೇವಾ ಯೋಜನೆ ಕೇಂದ್ರ ಪ್ರಾದೇಶಿಕ ಕಛೇರಿ, ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾಯೋಜನೆಯ ಸಹಬಾಗಿತ್ವದಲ್ಲಿ ಕಡಲ ತೀರ ಸ್ವಚ್ಚತಾ ಅಭಿಯಾನ ಕಾರ್ಯಕ್ರಮ ಉಳ್ಳಾಲ ಸೋಮೇಶ್ವರ ಕಡಲ ಕಿನಾರೆಯಲ್ಲಿ ಶನಿವಾರ ನಡೆಯಿತು. ಮಂಗಳೂರು ಸಂಚಾರ ವಿಭಾಗದ ಎಸಿಪಿ ಗೀತಾ ಡಿ.ಕುಲಕರ್ಣಿ ಚಾಲನೆ ನೀಡಿದರು.ಸ್ವತಃ ತಾವೇ ಕಸ ಹೆಕ್ಕುವ ಮೂಲಕ ವಿದ್ಯಾರ್ಥಿಗಳಿಗೆ ಸ್ವಚ್ಛತಾ ಕಾರ್ಯದ ಬಗ್ಗೆ ಹುಮ್ಮಸ್ಸು ತುಂಬಿದರು.ಸ್ವಯಂ ಸೇವಕರಿಗೆ ಸಮುದ್ರ ಥಟದಲ್ಲಿ ಜಾಗೃತರಾಗಿರುವಂತೆ ಕರೆ ನೀಡಿದರು. ಅಭಿಯಾನದಲ್ಲಿ ಸಂತ ಅಲೋಶಿಯಸ್ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ಯೋಜನಾಧಿಕಾರಿಗಳಾದ ಆಲ್ವಿನ್, ಕ್ಯಾರೆಲ್ ಪಿರೇರಾ ,ಮಂಗಳ ಕಾಲೇಜಿನ ರಾಷ್ಟ್ರೀಯ ಸೇವಾಯೋಜನೆಯ ಲಾಲು ಕೃಷ್ಣ, ಸ್ಥಳೀಯ ಮುಖಂಡ ದಿನೇಶ್ ಕಾಜವ ಮತ್ತಿರರು ಉಪಸ್ಥಿತರಿದ್ದರು.ಸುಮಾರು 120 ಸ್ವಯಂ ಸೇವಕರು ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡಿದ್ದರು. ಮಂಗಳೂರು ವಿಶ್ವ ವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ ಕಾರ್ಯಕ್ರಮ ಆಯೋಜಕರಾಗಿದ್ದರು.
Author: UllalaVani
UN NEWS NETWORKS ಉಳ್ಳಾಲ:ಕುಂಪಲ ಶಿವಪುರದ ಶ್ರೀ ದುರ್ಗಾಪರಮೇಶ್ವರ ಕ್ಷೇತ್ರದಲ್ಲಿ ಸೆ.26 ರಿಂದ ಅ.4ರವರೆಗೆ ನವರಾತ್ರಿ ಮಹೋತ್ಸವ ಜರುಗಲಿದೆ.ಪ್ರತಿ ದಿನ ಸಂಜೆ 5.30ಕ್ಕೆ ದೀಪ ಪ್ರಜ್ವಲನೆ 5.30ಕ್ಕೆ ವಿವಿಧ ಭಜನ ಮಂಡಳಿಯಿಂದ ಭಜನಾ ಸಂಕೀರ್ತನೆ ಹಾಗೂ ರಾತ್ರಿ 7.30 ಕ್ಕೆ ಮಹಾಪೂಜೆ ಅನ್ನಸಂತರ್ಪಣೆ ನಡೆಯಲಿದೆ.ಅ.4. ಮಂಗಳವಾರ ಬೆಳಿಗ್ಗೆ 10.೦೦ಗಂಟೆಗೆ ಮಾಹಾ ಚಂಡಿಕಾಯಾಗ 12 ಗಂಟೆಗೆ ಪೂರ್ಣಾಹುತಿ 12.30ಕ್ಕೆ ಮಾಹಾಪೂಜೆ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.
UN networks ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ಕೆ.ಸಿ ರೋಡ್ ಅಜ್ಜಿನಡ್ಕ ಎಂಬಲ್ಲಿ ಮೀನಿನ ವ್ಯಾಪಾರಿ ರೌಡಿಶೀಟರ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಖತರ್ ನಾಕ್ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಒಟ್ಟು ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ.ಫೈಸಲ್ ನಗರ ನಿವಾಸಿ ತಲ್ಲತ್ ಯಾನೆ ಫೈಸಲ್ ನಗರ ತಲ್ಲಾತ್ (35) ಬಂಧಿತ. ಈ ಹಿಂದೆ ಆಚಿ ,ನೌಫಾಲ್,ಅಶ್ಫಾಕ್,ನಿಸಾಕ್,ರಿಫತ್ ಆಲಿ,ರಹೀಮ್ ಎಂಬವರನ್ನು ಬಂಧಿಸಲಾಗಿತ್ತು. ಪ್ರಕರಣ: ಮೇ.26 ರಂದು ಮೂಲತ: ಕುದ್ರೋಳಿ ನಿವಾಸಿ ಸದ್ಯ ಕೆ.ಸಿ ರೋಡ್ ಅಜ್ಜಿನಡ್ಕ ಬಳಿ ನೆಲೆಸಿದ್ದ ಆರೀಫ್ ಎಂಬಾತನನ್ನು , ಮಂಗಳೂರು ಮೀನಿನ ಧಕ್ಕೆಗೆ ಕೆಲಸಕ್ಕೆಂದು ತೆರಳುವ ಸಂದರ್ಭ ಬಂಧಿತ ತಲ್ಲಾತ್ ನೇತೃತ್ವದ ಏಳು ಮಂದಿಯ ತಂಡ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿತ್ತು. ತಲವಾರು ದಾಳಿಗೊಳಗಾದ ಆರೀಫ್ ವಿರುದ್ಧ ಮಂಗಳೂರಿನ ಕಂಕನಾಡಿ, ಬಂದರು ಪೊಲೀಸ್ ಠಾಣೆಗಳಲ್ಲಿ 11 ಪ್ರಕರಣಗಳಿದ್ದು, ರೌಡಿಶೀಟರ್ ಆಗಿದ್ದಾನೆ. ಆದರೆ ಅಂದು ನಡೆದ ದಾಳಿ ಮೀನಿನ ವ್ಯಾಪಾರ ಸಂಬಂಧಿಸಿದ ಹಣದ ವಿಚಾರಕ್ಕಾಗಿತ್ತು…
UN networks ಬೆಳ್ಳಾರೆ: ಪ್ರವೀಣ್ ಹತ್ಯೆ ಆರೋಪಿಗಳಿಗೆ ಬೇಲ್ ಕೊಟ್ಟರೆ ಹಿಂದೂ ಸಮಾಜ ಬಿಡಲ್ಲ. ಅವರ ಮೇಲೆ ಕೋಕಾ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸುವ ಕೆಲಸ ಸರ್ಕಾರ ಮಾಡಲಿ ಎಂದು ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ದ.ಕ ಜಿಲ್ಲಾ ಪ್ರವೇಶ ನಿರ್ಬಂಧ ತೆರವಾದ ಹಿನ್ನೆಲೆಯಲ್ಲಿಬೆಳ್ಳಾರೆಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಯಾದ ಪ್ರವೀಣ್ ನೆಟ್ಟಾರು ನಿವಾಸಕ್ಕೆ ಹಾಗೂ ಪ್ರವೀಣ್ ಸಮಾಧಿ ಸ್ಥಳಕ್ಕೆ ಸೋಮವಾರ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ನೀಡಿ ಬಳಿಕ ಮಾತನಾಡಿದ್ದಾರೆ. ಪ್ರವೀಣ್ ಸಾವನ್ನು ಕಾರ್ಯಕರ್ತರಾದ ನಾವು ವ್ಯರ್ಥವಾಗಲು ಬಿಡಲ್ಲ. ಸರ್ಕಾರ ಏನು ಮಾಡುತ್ತೋ ಬಿಡುತ್ತೋ ನಮಗೆ ಗೊತ್ತಿಲ್ಲ ಆದರೆ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗೋವರೆಗೆ ನಾವು ವಿರಮಿಸಲ್ಲ. ಇಂಥ ಇಸ್ಲಾಮಿಕ್ ಗೂಂಡಾಗಳಿಗೆ ಭಾರತದ ನೆಲದಲ್ಲಿ ಅವಕಾಶ ಮಾಡಿ ಕೊಡಲ್ಲ. ಆರೋಪಿಗಳಿಗೆ ಬೇಲ್ ಕೊಟ್ಟರೆ ಹಿಂದೂ ಸಮಾಜ ಬಿಡಲ್ಲ. ಅವರ ಮೇಲೆ ಕೋಕಾ ಕಾಯಿದೆ ಹೇರುವ ಕೆಲಸ ಸರ್ಕಾರ ಮಾಡಲಿ. ಪ್ರವೀಣ್ ಕುಟುಂಬಕ್ಕೆ ಸಿಎಂ ಕೆಲಸ ಕೊಡುವ ಭರವಸೆ ಕೊಟ್ಟಿದ್ದಾರೆ. ಆದರೆ ಇದು ಭರವಸೆ ಆಗಬಾರದು. ಹಿಂದೆಯೂ…
PostsNo deposit Bonuses For Mobile ProfessionalsGreatest Mobile Gambling enterprises In the usAndroid os Cell phone Apps In fact, you could gamble live specialist online game on the portable. Using your portable, you might enjoy antique online game for example baccarat an internet-based roulette in the live gambling enterprises. You can always score a gambling establishment added bonus out of various other online casinos including PartyCasino and you may LeoVegas and you can get more income playing having.
UN NEWS NETWORKSಮುಡಿಪು : ಮೊಂಟೆಪದವು ಮರಿಕ್ಕಳ ಜುಮಾ ಮಸೀದಿ ಇಲ್ಲಿ ಶೈಖುನಾ ತಾಜುಲ್ ಫುಖಹಾಅ್ ಬೇಕಲ್ ಉಸ್ತಾದರ ಎರಡನೇ ಆಂಡ್ ನೇರ್ಚೆ ಹಾಗೂ ಸ್ವಲಾತ್ ವಾರ್ಷಿಕೋತ್ಸವ ಸೆ.21 ರಿಂದ 25 ರ ವರೆಗೆ ಮರಿಕ್ಕಳ ಜುಮಾ ಮಸೀದಿಯಲ್ಲಿ ಜರಗಲಿದೆ ಎಂದು ಜುಮಾ ಮಾ್ಜಿದ್ ಮರಿಕ್ಕಳ ದ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಹೇಳಿದರು.ಅವರು ಮರಿಕ್ಕಳ ಜುಮಾ ಮಸೀದಿ ವಠಾರದಲ್ಲಿ ಇಂದು ನಡೆಸಿದ ಸುದ್ಧಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು. ಸೆ. 21 ರಂದು ಮರಿಕ್ಕಳ ಜುಮಾ ಮಸ್ಜಿದ್ ಅಧ್ಯಕ್ಷರಾದ ಅಬ್ಬಾಸ್ ಕೊಡಂಚಿಲ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಂಜೆ 7 ಕ್ಕೆ ಉದ್ಘಾಟನಾ ಸಮಾರಂಭ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಜರಗಲಿದೆ.8 ಕ್ಕೆ ಸಯ್ಯದ್ ತ್ವಾಹಾ ತಂಞಳ್ ಪೂಕೋಟೂರು ನೇತೃತ್ವದಲ್ಲಿ ಬುರ್ದಾ ಮಜ್ಲಿಸ್ ನಡೆಯಲಿದೆ.ಸೆ. 22 ರಂದು ಪೆರೋಡ್ ಅಬ್ದುರ್ರಹ್ಮಾನ್ ಸಖಾಫಿ ಮುಖ್ಯ ಪ್ರಭಾಷಣಗೈಯ್ಯಲಿದ್ದಾರೆ. ಕಾಸರಗೋಡು ಸಅದಿಯ್ಯ ಜಾಮಿಅ: ಪ್ರೊಫೆಸರ್ ಹುಸೈನ್ ಸ ಅದಿ ಕೆ.ಸಿ ರೋಡ್ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಪ್ರಭಾಷಣಗೈಯ್ಯಲಿದ್ದಾರೆ.ಸೆ. 23 ರಂದು ಶೈಖುನಾ…
Un News networksಮುಡಿಪು: ವಿದ್ಯಾರ್ಥಿಗಳಿಗೆ ಪ್ರತಿ ಹಂತದಲ್ಲೂ ಶಿಸ್ತು, ಸಕಾರಾತ್ಮಕ, ಧನಾತ್ಮಕ ಚಿಂತನೆ ಬೆಳೆಸಿಕೊಳ್ಳುವುದು ಮುಖ್ಯ. ಸ್ಪರ್ಧೆಯಲ್ಲಿ ಗೆದ್ದರೆ ಖುಷಿ ಸಿಗುತ್ತದೆ, ಸೋತರೆ ಎದೆಗುಂದದೆ ಸೋಲು ಸ್ವೀಕರಿಸಿ ಮುಂದಿನ ಸ್ಪರ್ಧೆಯಲ್ಲಿ ಗೆಲುವು ಪಡೆಯುವ ಸಲುವಾಗಿ ಆಗಿನಿಂದಲೇ ಹೆಚ್ಚಿನ ಶ್ರಮ ಪಡಬೇಕು. ಮಕ್ಕಳಲ್ಲಿ ಶಿಸ್ತು ಎನ್ನುವುದು ಕೇವಲ ಪಾಠದ ಸಂದರ್ಭಕ್ಕೆ ಸೀಮಿತವಲ್ಲ ಎಂದು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಅಭಿಪ್ರಾಯಪಟ್ಟರು.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ ಬಂಟ್ವಾಳ ಮತ್ತು ಮುಡಿಪು ಜ್ಞಾನದೀಪ ಆಂಗ್ಲಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ಮಂಚಿ ವಲಯ ಮಟ್ಟದ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವವನ್ನು ಸೋಮವಾರ ಉದ್ಘಾಟಿಸಿ ಅವರು ಮಾತನಾಡಿದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಪಿ. ಜ್ಞಾನೇಶ್ ಮಾತನಾಡಿ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸುವವರು ತಮ್ಮನ್ನು ತಾವು ಮರೆತಾಗ ಮನಸ್ಸಿಗೆ ತೃಪ್ತಿ ಸಿಗುತ್ತದೆ. ಇನ್ನೊಬ್ಬರನ್ನು ಹೋಲಿಕೆ ಮಾಡಿಕೊಳ್ಳಲು ಮುಂದಾದರೆ ಕೀಳರಿಮೆ ಉಂಟಾಗುತ್ತದೆ ಎಂದು…
UN networks ಉಳ್ಳಾಲ: ಬಸ್ ನಿಂದ ಬಿದ್ದು ಮೆದುಳು ನಿಷ್ಕ್ರಿಯಗೊಂಡು ಸಾವನ್ನಪ್ಪಿದ ಉಳ್ಳಾಲಬೈಲ್ ನಿವಾಸಿ ವಿದ್ಯಾರ್ಥಿ ಯಶ್ ರಾಜ್ (16) ಅಪಘಾತಕ್ಕೆ ಸಂಬಂಧಿಸಿ ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ಕಲಂ 279,336,304 ಐಪಿಸಿಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಉಳ್ಳಾಲದಿಂದ ಸ್ಟೇಟ್ ಬ್ಯಾಂಕ್ ಕಡೆಗೆ ತೆರಳುವಶಾರ್ಲಿ ಬಸ್ ಚಾಲಕ ಕುಪ್ಪೆಪದವು ನಿವಾಸಿ ಕಾರ್ತಿಕ್ ಶೆಟ್ಟಿ ಹಾಗೂ ನಿರ್ವಾಹಕ ಅಂಬ್ಲಮೊಗರು ಎಲ್ಯಾರ್ ಸೈಟ್ ನ ಸಂಶೀರ್ (30) ಎಂಬವರನ್ನು ಬಂಧಿಸಲಾಗಿದೆ.ಸೆ.7 ರಂದು ವಿದ್ಯಾರ್ಥಿ ಯಶರಾಜ್ ಬಸ್ಸಿನಲ್ಲಿ ಮುಂದಿನ ಬಾಗಿಲಲ್ಲಿ ನಿಂತು ಪ್ರಯಾಣಿಸುತ್ತಿದ್ದಾಗ ಬಸ್ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯ ತನದಿಂದ ಚಲಾಯಿಸಿದ ಪರಿಣಾಮ ವಿದ್ಯಾರ್ಥಿ ಯಶ್ ರಾಜ್ ರಸ್ತೆಗೆ ಎಸೆಯಲ್ಪಟ್ಟಿದ್ದ. ತಲೆಗೆ ಗಂಭೀರ ಗಾಯವಾದ ಹಿನ್ನೆಲೆಯಲ್ಲಿ ಇಂಡಿಯಾನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಸೆ.12 ರಂದು ಮಿದುಳು ನಿಷ್ಕ್ರಿಯ ಗೊಂಡ ಹಿನ್ನೆಲೆಯಲ್ಲಿ ಮನೆಮಂದಿ ಅಂಗಾಂಗ ದಾನಕ್ಕೆ ನಿರ್ಧರಿಸಿ ಬಾಲಕನ ಸಾವಿನಲ್ಲಿ ಸಾರ್ಥಕತೆ ಮೆರೆದಿದ್ದಾರೆ. ಬಾಲಕ ಯಶ್ ರಾಜ್ ಸಾವನ್ನಪ್ಪುತ್ತಿದ್ದಂತೆ ತಾಯಿ ಮಮತಾ ಎಂಬವರು ಮಂಗಳೂರು…
BlogsPanen77: Situs Daftar Judi Position Gacor On line Gampang MenangWhich Casino Is actually Blacklisted!Newest No-deposit Gambling establishment IncentivesO Slotter_biggest On-line casino Organizations_o Slotter The menu of video game in addition to their particular weighting to the wagering specifications is available right here. Which give isn’t available to people remaining in Norway, Finland, Canada, Germany or even the United kingdom. So it incentive provides a wagering element 30x(deposit+bonus) on the put added bonus. Slotter Gambling enterprise cannot keep an excellent UKGC permit and therefore i don’t publish a customer to check on their website.
UN NEWS NETWORKS ಉಳ್ಳಾಲ: ಕೃಷಿಯನ್ನು ಉತ್ತೇಜನ ಮಾಡುವ ನಿಟ್ಟಿನಲ್ಲಿ ಭತ್ತದ ಕೃಷಿಗೆ ಪ್ರೋತ್ಸಾಹ ನೀಡುವ ಕೋಟೆಕಾರು ಸೇವಾ ಸಹಕಾರಿ ಬ್ಯಾಂಕ್ನ ಕೆಲಸ ಪುಣ್ಯದ ಕಾರ್ಯ. ಪ್ರಾಥಮಿಕ ಕೃಷಿಪತ್ತಿನ ಸಂಘದ ಕಾರ್ಯ ಉಭಯ ಜಿಲ್ಲೆಗಳಲ್ಲಿ ಪ್ರಥಮವಾಗಿದೆ ಎಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ಹಾಗೂ ಚಲನಚಿತ್ರ ನಟ ಗೋಪಿನಾಥ್ ಭಟ್ ಅಭಿಪ್ರಾಯಪಟ್ಟರು. ಅವರು ಕೋಟೆಕಾರು ವ್ಯವಸಾಯ ಸೇವಾ ಸಹಕಾರ ಬ್ಯಾಂಕ್ ನಿಯಮಿತ ಆಶ್ರಯದಲ್ಲಿ ಭಾನುವಾರ ಕೋಟೆಕಾರಿನ ಬ್ಯಾಂಕ್ ಸಭಾಂಗಣದಲ್ಲಿ ಭತ್ತ ಕೃಷಿಗೆ ಪ್ರೋತ್ಸಾಹ ಧನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ನವೋದಯ ಸಂಘದ ಸದಸ್ಯರಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ದರು.ಅನ್ನದಾತ ಕೃಷಿಕನಿಗೆ ಎಷ್ಟು ಸೌಲಭ್ಯ ಕೊಟ್ಟರೂ ಕಡಿಮೆಯೇ. ಜಗತ್ತಿನಲ್ಲಿ ಶೇ.46 ಯುವಪೀಳಿಗೆ ಇರುವ ದೇಶ ಭಾರತ, ಮುಂದಿನ ಭವ್ಯ ಭಾರತಕ್ಕೆ ಇದು ಭದ್ರ ಬುನಾದಿಯಾಗಲಿದೆ. ಮಹಿಳಾ ಸಬಲೀಕರಣ ಹಿನ್ನೆಲೆಯಲ್ಲಿ ಆರಂಭಗೊಂಡ ನವೋದಯ ಸಂಘದ ಸದಸ್ಯರನ್ನು ಪ್ರೋತ್ಸಾಹಿಸುವ ಜೊತೆಗೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವ ಕಾರ್ಯ ಉತ್ತಮವಾದುದು…

