Author: UllalaVani

Kannada News From Coastal Karnataka

ಮಂಗಳೂರು: ಕರಾವಳಿಯಲ್ಲಿ ಹೆಸರಿನ ಮೂಲಕವೇ ಸಕತ್ತ್ ಸೌಂಡ್ ಮಾಡ್ತಾಯಿರುವ ಡಿ ಡಿ ಪ್ರೊಡಕ್ಷನ್ ಲಾಂಛನದಲ್ಲಿ ರಂಜಿತ್ ಸಿ ಬಜಾಲ್ ನಿರ್ದೇಶನದಲ್ಲಿ ಡೋಲ್ಪಿ ಡಿ ಸೋಜ ನಿರ್ಮಾಣದಲ್ಲಿ ತಯಾರಾದ “90 ಎಮ್ ಎಲ್” ತುಳು ಚಲನ ಚಿತ್ರ ಶುಕ್ರವಾರ ಭಾರತ್ ಸಿನಿಮಾಸ್ ನಲ್ಲಿ ತೆರೆ ಕಂಡಿತು. ದೀಪ ಬೆಳಗಿಸುವ ಮೂಲಕ ಸಿನಿಮಾ ಉದ್ಘಾಟನೆ ನೆರವೇರಿಸಿ ಮಾತಾಡಿದ ಬೆಂಜನಪದವು ಕೊರಗಜ್ಜ ಕ್ಷೇತ್ರದ ವಿಜಯ ಅವರು “ತುಳುವಿನಲ್ಲಿ ಸದಭಿರುಚಿಯ ಸಿನಿಮಾಗಳು ಬಿಡುಗಡೆಯಾಗುತ್ತಿರುವುದು ಖುಷಿಯ ವಿಚಾರ. ಇಂದು ಬಿಡುಗಡೆಯಾಗುತ್ತಿರುವ 90 ಎಂಎಲ್ ಸಿನಿಮಾ ತುಳು ಪ್ರೇಕ್ಷಕರ ಮನೆ ಮನ ಮುಟ್ಟುವ ಕೆಲಸ ಮಾಡಲಿ. ಇಡೀ ಚಿತ್ರತಂಡಕ್ಕೆ ಶುಭವಾಗಲಿ” ಎಂದರು. ಚಿತ್ರ ನಿರ್ಮಾಪಕ ಪ್ರಕಾಶ್ ಪಾಂಡೇಶ್ವರ್ ಮಾತಾಡಿ, “ಸಿನಿಮಾದ ಟ್ರೈಲರ್ ನೋಡಿದೆ. ಮಲಯಾಳಂ ಚಿತ್ರದಂತೆ ಇದೆ. ಟೈಟಲ್ ಕೂಡ ಸಖತ್ತಾಗಿದೆ ಎಲ್ಲರಿಗೂ ಶುಭವಾಗಲಿ” ಎಂದರು. ಲಾಂಚುಲಾಲ್ ಕೆ.ಎಸ್. ಮಾತಾಡಿ, “90 ಎಂ ಎಲ್ ಸಿನಿಮಾ ಟೈಟಲ್ ಡಿಫರೆಂಟ್ ಆಗಿದೆ. ತುಳುವರು ಸಿನಿಮಾ ನೋಡಿದರೆ ಖಂಡಿತ ಸಿನಿಮಾ ಗೆಲ್ಲಲಿದೆ. ಸಿನಿಮಾಕ್ಕೆ…

Read More

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ದೇರಳಕಟ್ಟೆಯ ಮೇಲ್ತೆನೆ ಸಂಘಟನೆಯ ಸಹಯೋಗದೊಂದಿಗೆ ಮೇ.5ರಂದು ಉಳ್ಳಾಲ ತಾಲೂಕು 3ನೇ ಬ್ಯಾರಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕವಿ, ಹಾಡುಗಾರ ಬಶೀರ್ ಅಹ್ಮದ್ ಕಿನ್ಯಾ ಆಯ್ಕೆಯಾಗಿದ್ದಾರೆ. ಸುಮಾರು 28ವರ್ಷಗಳಿಂದ ಬ್ಯಾರಿ ಗಾಯಕರಾಗಿರುವ ಬಶೀರ್ ಅಹ್ಮದ್ ಕಿನ್ಯಾ ಬಹುಭಾಷಾ ಕವಿಯಾಗಿ, ಪತ್ರಕರ್ತರಾಗಿ ಗುರುತಿಸಿಕೊಂಡಿದ್ದಾರೆ. ಬಶೀರ್ ಕಿನ್ಯರೊ ಪಾಟ್, ಕೊತ್ತಿಪ್ಪು ನಲ್ಮಾಲೆ ಮತ್ತು ಮೀಲಾದ್ ಪಾಟ್ ಇವು ಬಶೀರ್ ಅಹ್ಮದ್ ಕಿನ್ಯಾರ ಪ್ರಕಟಿತ ಬ್ಯಾರಿ ಕೃತಿಗಲಾಗಿವೆ. ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ಹೊರ ತಂದಿರುವ ನೂರು ಕಿವಿಮಾರೊ ಕಾವ್ಯ ಸಂಕಲನ ಕೃತಿಗೆ ಇವರು ಸಂಪಾದಕರಾಗಿದ್ದರು. ಇವರ ಮೊದಲ ಬ್ಯಾರಿ ಹಾಡುಗಳ ಧ್ವನಿಸುರುಳಿ `ಮಸ್ಕತ್ತ್ಗೊರು ಕಲ್ಲಾಸ್ ಕೇವಲ ನಾಲ್ಕೆöÊದು ದಿನಗಳಲ್ಲಿ ಮಾರಾಟಗೊಂಡು ದಾಖಲೆ ನಿರ್ಮಿಸಿತ್ತು. ಆ ಬಳಿಕ ಅಲಿಕಾತ್, ಉರುಮಾಲ್, ಬಂಗಾರ್, ಮಹರ್, ಮರ್ಹಬ, ಸುಲ್ತಾನ ಮುಂತಾದ ಧ್ವನಿಸುರುಳಿಗಳೂ ಭಾರೀ ಮಟ್ಟದಲ್ಲಿ ಮಾರಾಟಗೊಂಡು ಸುದ್ದಿ ಮಾಡಿದ್ದವು. 2002ರಲ್ಲಿ ಹೊರಬಂದ ಇವರ ಬ್ಯಾರಿ ಬೈಲಾ ಧ್ವನಿಸುರುಳಿಯು ಸುಮಾರು 22,000 ಪ್ರತಿಗಳು ಮಾರಾಟವಾಗಿ ದಾಖಲೆಯನ್ನೇ…

Read More

ಜಜೀರಾ ಏರ್‌ವೇಸ್‌ ಎ.9 ರಂದು ಕುವೈಟ್‌ ಮತ್ತು ಮಂಗಳೂರು ನಡುವೆ ದಮ್ಮಾಮ್‌ ಮೂಲಕ ವಿಶೇಷ ವಿಮಾನ ಹಾರಾಟ ನಡೆಸಿದೆ. ವಾರಕ್ಕೆ ಎರಡು ಬಾರಿ ಚಾರ್ಟರ್‌ ವಿಮಾನಗಳ ಸೇವೆ ಇರಲಿದೆ. ಜಿಮ್ಮಿ ಮೌಸಾ ಅವರ ನಾಯಕತ್ವದಲ್ಲಿ 4 ಸದಸ್ಯರ ಸಿಬ್ಬಂದಿಯೊಂದಿಗೆ, ಸಂಜೆ 4.25 ಕ್ಕೆ ಅಗಮಿಸಿದ J9 3417 ದಮ್ಮಾಮ್-ಮಂಗಳೂರು ವಿಮಾನವು 11 ಮಕ್ಕಳು ಸೇರಿದಂತೆ 181 ಪ್ರಯಾಣಿಕರನ್ನು ಹೊತ್ತು ತಂದಿತು. ಬಳಿಕ ಸಂಜೆ 6.10 ಕ್ಕೆ ಹೊರಟ ಜೆ9 3418 ವಿಮಾನವು ಒಂದು ಮಗು ಸೇರಿದಂತೆ 151 ಪ್ರಯಾಣಿಕರು ಇದ್ದರು. ವಿಮಾನವು ಕುವೈತ್‌ನಿಂದ ದಮ್ಮಾಮ್‌ಗೆ ಪ್ರಯಾಣಿಕರನ್ನು ರಸ್ತೆ ಮೂಲಕ ಸಾಗಿಸಿತು.ಜಜೀರಾ ಏರ್‌ವೇಸ್‌ ಈ ಹಿಂದೆ ಕೋವಿಡ್‌ ಸಮಯದಲ್ಲಿ ವಿಶೇಷ ಚಾರ್ಟರ್‌ ವಿಮಾನ ಕಾರ್ಯಚರಣೆಗಳನ್ನು ನಡೆಸಿತ್ತು. ಈ ವಿಮಾನಗಳು ಡಿಜಿಸಿಎ ವಿಶೇಷ ಅನುಮತಿಯ ಅಡಿಯಲ್ಲಿ ಕಾರ್ಯನಿರ್ವಹಸಲಿದ್ದು ಅಧಿಕಾರಿಗಳಿಂದ ಅನುಮೋದನೆ ದೊರೆತಲ್ಲಿ ವಿಮಾನಗಳ ಸಂಖ್ಯೆಯನ್ನು ಎಡರಿಂದ ನಾಲ್ಕಕ್ಕೆ ಹೆಚ್ಚಿಸಲು ವಿಮಾನಯಾನ ಸಂಸ್ಥೆಯು ಚಿಂತನೆ ನಡೆಸುತ್ತಿದೆ ಎಂದು ತಿಳಿದು ಬಂದಿದೆ.

Read More

ಡಾ. ರವೀಂದ್ರ ಶೆಟ್ಟಿ ಬಜಗೋಳಿ ಅವರ ಪುತ್ರ ಶ್ರೇಯಾಂಕ್ ಆರ್. ಶೆಟ್ಟಿ ಅವರು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ಪರೀಕ್ಷೆಯಲ್ಲಿ 597 (98.6%)ಅಂಕಗಳ ಮೂಲಕ ರಾಜ್ಯಕ್ಕೆ 9ನೇ ರ‍್ಯಾಂಕ್ ಪಡೆದು ಸಾಧನೆ ಮಾಡಿದ್ದಾರೆ. ಡಾ. ರವೀಂದ್ರ ಶೆಟ್ಟಿ ಬಜಗೋಳಿ ಮತ್ತು ರೂಪ ಶೆಟ್ಟಿ ದಂಪತಿಗಳ ಪುತ್ರ ಶ್ರೇಯಾಂಕ್ ಆರ್ ಶೆಟ್ಟಿಯವರು ತಮ್ಮ ಪದವಿ ಪೂರ್ವ ವಿದ್ಯಾಭ್ಯಾಸವನ್ನು ಆಳ್ವಾಸ್ ಕಾಲೇಜಿನಲ್ಲಿ ಪಡೆದಿದ್ದಾರೆ. ಶ್ರೇಯಾಂಕ್ ರಾಜ್ಯ ಮಟ್ಟದಲ್ಲಿ ಈಗ ತನ್ನನ್ನು ಗುರುತಿಸಿಕೊಂಡು ತನ್ನ ಹೆತ್ತವರು, ಪೋಷಕರು, ವಿದ್ಯಾಸಂಸ್ಥೆಯ ಹೆಸರನ್ನೂ ಉನ್ನತ ಮಟ್ಟಕ್ಕೆ ತಲುಪಿಸುವಲ್ಲಿ ಸಫಲರಾಗಿದ್ದಾರೆ. ಡಾ. ರವೀಂದ್ರ ಶೆಟ್ಟಿಅವರ ಮೂವರು ಮಕ್ಕಳೂ ವಿದ್ಯಾಭ್ಯಾಸದಲ್ಲಿ ಅತ್ಯುನ್ನತ ಸಾಧನೆ ಮಾಡಿದವರಾಗಿದ್ದಾರೆ. ಇವರ ಪ್ರಥಮ ಪುತ್ರಿ ಸ್ನೇಹ ಆರ್. ಶೆಟ್ಟಿ SSLC ಕನ್ನಡ ಮಾದ್ಯಮದಲ್ಲಿ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನಕ್ಕೆ ಹಾಗೂ ಮಂಗಳೂರು ವಲಯಕ್ಕೆ ಪ್ರಥಮ ಸ್ಥಾನಾರ್ಥಿಯಾಗಿ ಹೊರಹೊಮ್ಮಿದ್ದರು. ದ್ವಿತೀಯ ಪುತ್ರಿ ಶ್ರೇಯ ಆರ್. ಶೆಟ್ಟಿ ಅವರು 625 ಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.…

Read More

ಕೊಣಾಜೆ: ಪ್ಲಾಸ್ಟಿಕ್ ತ್ಯಾಜ್ಯ ಸಮಸ್ಯೆಯ ಬಗ್ಗೆ ಈಗಾಗಲೇ ಸಮಾಜದಲ್ಲಿ ಜಾಗೃತಿ ಮೂಡಿಸುವಂತಹ ಕಾರ್ಯಕ್ರಮ ನಿರಂತರವಾಗಿ ನಡೆಯುತ್ತಿದ್ದರೂ ರಸ್ತೆ ಬದಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಎಸೆಯುವರ ಸಂಖ್ಯೆ ಹೆಚ್ಚುತ್ತಿದ್ದು, ಇದಕ್ಕಾಗಿ ಕೊಣಾಜೆ ಗ್ರಾಮ ಪಂಚಾಯತ್ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದು, ತ್ಯಾಜ್ಯ ಎಸೆಯುವವರ ವಿರುದ್ದ ಎಫ್ಐಆರ್ ಹಾಗೂ ಐದು ಸಾವಿರ ರೂ ದಂಡ ವಿಧಿಸಲಾಗುವುದು ಜೊತೆಗೆ ಪ್ಲಾಸ್ಟಿಕ್ ಎಸೆಯುವರನ್ನು ಪತ್ತೆಹಚ್ಚಿದವರಿಗೆ ಬಹುಮಾನ ಕೊಡುವ ಯೋಜನೆಯನ್ನು ರೂಪಿಸಲಾಗಿದೆ ಎಂದು ಕೊಣಾಜೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಜನಿ ಅವರು ಹೇಳಿದರು. ಅವರು ಗುರುವಾರ ಮುಡಿಪುವಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಎನ್ ಎಸ್ ವಿದ್ಯಾರ್ಥಿಗಳಿಂದ ಕೊಣಾಜೆ ಗ್ರಾಮದ ನಡುಪದವಿನ ಸಸ್ಯೋದ್ಯಾನದ ಬಳಿ ನಡೆದ ಪ್ಲಾಸ್ಟಿಕ್ ತ್ಯಾಜ್ಯ ಸ್ವಚ್ಛತೆ ಹಾಗೂ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಮುಖಂಡರಾದ ನಾಸೀರ್ ಕೆಕೆಎಸ್ ಅವರು ಮಾತನಾಡಿ, ಸ್ವಚ್ಚತಾ ಜಾಗೃತಿ ನಮ್ಮ ಪರಿಸರದಲ್ಲಿ ಮಾತ್ರವಲ್ಲ ಇಡೀ ಜಿಲ್ಲೆಯಲ್ಲಿ ಆಂದೋಲನದ ರೀತಿಯಲ್ಲಿ ಆಗಬೇಕಿದೆ. ಇಂತಹ ಆಂದೋಲನದಲ್ಲಿ ಎನ್ ಎಸ್ ಎಸ್ ವಿದ್ಯಾರ್ಥಿಗಳ ಪಾತ್ರ…

Read More

ಬೆಂಗಳೂರು, ಏ. 09 ; ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಲಿದ್ದಾರೆ.ಈ ವರ್ಷ, ಶೇಕಡಾ 86 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಒಟ್ಟು 7,10,363 ವಿದ್ಯಾರ್ಥಿಗಳಲ್ಲಿ ಸುಮಾರು 6.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರೀ ಉತ್ತೀರ್ಣ ಶೇಕಡಾವಾರು 73.45 ರಷ್ಟಿದ್ದು, ಈ ವರ್ಷ ಏರಿಕೆ ಕಂಡು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾಳೆ.ವಿಜಯನಗರ  ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿನಿಯರು 598 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ. 

Read More

ಬಂಟ್ವಾಳ, ಏ. 09:ಮಾಣಿ ಸಮೀಪದ ನೇರಳಕಟ್ಟೆ ನಿವಾಸಿ ಅಬ್ದುಲ್ಲಾ ಯೂಸುಫ್ ಹಾಜಿ (ಪುತ್ತುಬ್ಬ ಹಾಜಿ) 67 ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕೊಡಾಜೆ ಬದ್ರಿಯಾ ಜುಮಾ ಮಸೀದಿ ಆಡಳಿತ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದ ಪುತ್ತುಬ್ಬ ಹಾಜಿಯವರು ಸೌಮ್ಯ ಸ್ವಭಾವದವರಾಗಿದ್ದು, ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.ಮೃತರು ಪತ್ನಿ, ಓರ್ವ ಪುತ್ರ, ಮೂವರು ಪುತ್ರಿಯರ ಸಹಿತ ಅಪಾರ ಸಂಖ್ಯೆಯ ಬಂಧುಗಳನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆ ಸಂಜೆ 4 ರ ವೇಳೆಗೆ ಕೊಡಾಜೆ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಯಲಿದೆ ಎಂದು ಕುಟುಂಬಿಕರು ತಿಳಿಸಿದ್ದಾರೆ.

Read More

ಕಾಸರಗೋಡು :- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ”ದ ಕಾಮಗಾರಿಗೆ ಗೋ- ಭಕ್ತರು, ಗೋ -ಪೋಷಕರು, ದಾನಿಗಳಿಂದ ಆರ್ಥಿಕ ಸಹಾಯ,ಸಹಕಾರ ಪ್ರೋತ್ಸಾಹವನ್ನು ನೀಡುವಂತೆ ಮನವಿ ಮಾಡಲಾಗಿದೆ. ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಸರಗೋಡು ಗೋ -ಕುಟೀರವನ್ನು ಜಗಜ್ಜನನಿ ಗೋಮಾತೆಯ ಆಶೀರ್ವಾದವನ್ನು ಪಡೆಯುವ ಉದ್ದೇಶದಿಂದ ಒಂದು ಧಾರ್ಮಿಕ ಶ್ರದ್ಧಾ ಕೇಂದ್ರವನ್ನಾಗಿ ರೂಪುಗೊಳಿಸುವುದಕ್ಕಾಗಿ ದೈವಾರ್ಷಿಕ ಕಾರ್ಯ ಯೋಜನೆಯನ್ನು ಕೈಗೊಳ್ಳಲಾಗಿದೆ. ಪ್ರತಿಯೊಬ್ಬರೂ ಕುಟುಂಬ ಸಮೇತರಾಗಿ ಕಾಸರಗೋಡು ಕನ್ನಡ ಗ್ರಾಮಕ್ಕೆ ಆಗಮಿಸಿ ಕಾಸರಗೋಡು ಗೋ-ಕುಟೀರದಲ್ಲಿ ಗೋವುಗಳಿಗೆ ಗೋ-ಗ್ರಾಸ ನೀಡಿ, ಗೋ- ಆರತಿಯನ್ನು ಬೆಳಗಿಸಿ, ಗೋ-ಸಂಕೀರ್ತನೆಯನ್ನು ಹಾಡಿ, ಗೋ-ಕುಟೀರದಲ್ಲಿ ಪ್ರಾರ್ಥನೆಯನ್ನು ಸಲ್ಲಿಸಿ ತಮ್ಮ ಇಷ್ಟಾರ್ಥವನ್ನು ಶ್ರದ್ಧಾ ಭಕ್ತಿಯಿಂದ ಪಡೆಯಲು ಅವಕಾಶ ಕಲ್ಪಿಸಲಾಗುವುದು. ತಮ್ಮ ಮನೆಗಳಲ್ಲಿ ನಡೆಯುವ ಶುಭ ಸಮಾರಂಭಗಳ ನಿಮಿತ್ತ ಕಾಸರಗೋಡು ಗೋ -ಕುಟೀರಕ್ಕೆ ಆಗಮಿಸಿ ಗೋ ಮಾತೆಯ ಸೇವೆ ಸಲ್ಲಿಸಿ ಕುಟುಂಬದವರು ಸಂಭ್ರಮವನ್ನು…

Read More

ಕಾಸರಗೋಡು, ಏ. 09 :ಕೇರಳ ವಿಧಾನಸಭೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಕಾಸರಗೋಡು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಚುರುಕಿನಿಂದ ಸಾಗಿದೆ. ಮಂಜೇಶ್ವರ 39.73 ಶೇಕಡ, ಉದುಮ 43.88, ಕಾಞಂಗಾಡ್ 44.21 ಹಾಗೂ ತ್ರಿಕ್ಕರಿಪುರ ವಿಧಾನಸಭಾ ಕ್ಷೇತ್ರದಲ್ಲಿ 43.35 ಶೇಕಡ ಮತದಾನ ವಾಗಿದೆ. ಕಾಸರಗೋಡು ಜಿಲ್ಲೆಯ ಐದು ಸೇರಿದಂತೆ ಕೇರಳದ 140 ವಿಧಾನಸಭಾ ಕ್ಷೇತ್ರಗಳಿಗೆ ಇಂದು ಚುನಾವಣೆ ನಡೆಯುತ್ತಿದೆ.

Read More

ಮಂಗಳೂರು, ಏ. 09 ;ಎಎಸ್‌ಐ ಐತಪ್ಪ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಸಮೀರ್ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಆರೋಪಿ ಸಮೀರ್ ವಿರುದ್ಧ ಸಾಮೂಹಿಕ ಅತ್ಯಾಚಾರ ಸಹಿತ 14 ಪ್ರಕರಣಗಳು ದಾಖಲಾಗಿವೆ. ಈತನ ಸುಳಿವು ಪತ್ತೆಯಾದಲ್ಲಿ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ.ಈ ಹಿಂದೆ ಆರೋಪಿ ಸಫ್ವಾನ್ ಎಂಬಾತನ ಮೇಲೂ ರೆಡ್ ಕಾರ್ನರ್ ನೋಟಿಸ್ ಜಾರಿಗೊಳಿಸಿ ಕಾನೂನು ಕ್ರಮ ಜರುಗಿಸಲಾಗಿತ್ತು ಎಂದು ಕಮಿಷನರ್ ತಿಳಿಸಿದ್ದಾರೆ.

Read More