ಮಂಜನಾಡಿ: ಒಬ್ಬ ವ್ಯಕ್ತಿ ತನ್ನ ಸ್ವಾರ್ಥಕ್ಕೆ ನಮ್ಮನ್ನು ಬಳಕೆ ಮಾಡಲು ನಾವು ಅವಕಾಶ ನೀಡಬಾರದು. ನಾವು ಶಾಂತಿ ಸೌಹಾರ್ದತೆ ಯಿಂದ ಬದುಕಿದರೆ ಮಾತ್ರ ಸಮಾಜ ಉಳಿಯಲು ಸಾಧ್ಯ ಎಂದು ಮಂಗಳೂರು ವಿವಿ ಉಪಕುಲಪತಿ ಪಿ.ಎಲ್ ಧರ್ಮ ಹೇಳಿದರು. ಅವರು ಮಂಜನಾಡಿ ಉರೂಸ್ ಸಮಾರೋಪ ಹಾಗೂ ಭಾವೈಕ್ಯತಾ ಸಂಗಮ ದಲ್ಲಿ ಭಾಗವಹಿಸಿ ಮಾತನಾಡಿದರು.ಧರ್ಮ ಹಲವು ಇದ್ದರೂ ಸಮಾಜದಲ್ಲಿ ಯಾವುದೇ ಭಿನ್ನತೆ ಇಲ್ಲ. ಧಾರ್ಮಿಕ ಕಾರ್ಯಕ್ರಮಗಳು ಸೌಹಾರ್ದತೆಯಿಂದ ನಡೆಸಿ ಕೊಂಡು ಬರುವುದು ನಮ್ಮ ಜವಾಬ್ದಾರಿ. ಇದಕ್ಕೆ ನಾವು ಒತ್ತು ನೀಡಬೇಕು ಎಂದು ದುರ್ಗಾ ಪರಮೇಶ್ವರಿ ದೇವಸ್ಥಾನದ ಪ್ರಧಾನ ಅರ್ಚಕ ಗಣೇಶ್ ಭಟ್ ಪಂಜಳ ಹೇಳಿದರು. ಅಸಯ್ಯಿದ್ ಇಬ್ರಾಹೀಮ್ ಖಲೀಲ್ ತಂಙಳ್ ಕಡಲುಂಡಿ ದುಆ ಆಶೀರ್ವಚನ ನೀಡಿದರು.ಪೇರೋಡ್ ಅಬ್ದುಲ್ ರಹ್ಮಾನ್ ಸಖಾಫಿ ಧಾರ್ಮಿಕ ಉಪನ್ಯಾಸ ನೀಡಿದರು.ಮಂಜನಾಡಿ ಕೇಂದ್ರ ಜುಮ್ಮಾ ಮಸೀದಿ ಮುದರ್ರಿಸ್ ಅಹ್ಮದ್ ಬಾಖವಿ ಸಮಾರೋಪ ಉಪನ್ಯಾಸ ನೀಡಿದರು.ಸಂತ ಲಾರೆನ್ಸ್ ಚರ್ಚ್ ಧರ್ಮಗುರು ಜಾಯ್ ಸೆಬಸ್ಟ್ಯಾನ್ ಮಾತನಾಡಿದರು.ಮಸೀದಿ ಅಧ್ಯಕ್ಷ ಅಬ್ದುಲ್ ಅಝೀಝ್ ಮೈಸೂರು ಬಾವ ಕಾರ್ಯಕ್ರಮ…
Author: UllalaVani
ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಕೇಸರಿ ಸಭಾ ಭವನದಲ್ಲಿ, ಕೇಸರಿ ಮಿತ್ರ ವೃಂದ ಸೇವಾ ಟ್ರಸ್ಟ್ ನ ಅಧ್ಯಕ್ಷರಾದ ಸುಧಾಕರ ಕುಂಪಲ ( EX Army) ಇವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಮಾತೃಮಂಡಳಿ ಸದಸ್ಯೆ ಶ್ರೀಮತಿ ಕುಸುಮ ಭರತ್, ಆರೋಗ್ಯ ಇಲಾಖೆ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದು. ಪಲ್ಸ್ ಪೋಲಿಯೊ ಕಾರ್ಯ ನಿರ್ವಹಿಸಲು ಸಕಲ ಸಿದ್ದತೆ ಮಾಡಿಕೊಂಡಿದ್ದರು.
ಕಾಸರಗೋಡು, ಡಿ. 27 : ರೈಲು ಬಡಿದು ಕೊಡಗು ನಿವಾಸಿಯೋರ್ವ ಮೃತಪಟ್ಟ ಘಟನೆ ಕಾಸರಗೋಡು ನಿಲ್ದಾಣದಲ್ಲಿ ನಡೆದಿದೆ. ಕೊಡಗು ನಿವಾಸಿ ರಾಜೇಶ್ (35) ಮೃತಪಟ್ಟವರು. ರೈಲಿನಿಂದಿಳಿದು ಹಳಿಯ ಮೂಲಕ ಅಡ್ಡದಾಟಿ ಫ್ಲಾಟ್ ಫೋರ್ಮ್ ಹತ್ತಲು ಯತ್ನಿಸುತ್ತಿದ್ದಾಗ ಗೂಡ್ಸ್ ರೈಲು ಬಡಿದು ಘಟನೆ ನಡೆದಿದೆ. ಅಫಘಾತಕ್ಕೀಡಾದ ವ್ಯಕ್ತಿಯ ತಲೆ ಸಂಪೂರ್ಣ ಜಜ್ಜಿ ಹೋಗಿದೆ. ಮೃತದೇಹ ಧರಿಸಿದ್ದ ಅಂಗಿಯ ಜೇಬಿನಿಂದ ದೊರೆತ ಆಧಾರ್ ಕಾರ್ಡಿನಲ್ಲಿ ಮಾಹಿತಿಯಂತೆ ಮೃತ ವ್ಯಕ್ತಿಯನ್ನು ಗುರುತಿಸಲಾಗಿದೆ. ಮೃತ ಶರೀರದ ಅವಶೇಷಗಳನ್ನು ಸಂಗ್ರಹಿಸಿ ಕಾಸರಗೋಡು ಜನರಲ್ ಆಸ್ಪತ್ರೆಯಲ್ಲಿ ಇರಿಸಲಾಗಿದೆ.ರೖಲು ದುರಂತದಲ್ಲಿ ಮೃತಪಟ್ಟ ಮಾಹಿತಿಯನ್ನು ಮೃತರ ಸಂಬಂಧಿಕರಿಗೆ ರೖಲ್ವೇ ಪೊಲೀಸರು ತಿಳಿಸಿದ್ದಾರೆ. ಮೃತರು ಕರ್ನಾಟಕ ಕೊಡಗು ಜಿಲ್ಲೆಯ ಗೋಣಿಮಾಗೂರು ಸೋಮವಾರಪುರದ ಚೆನ್ನಯ್ಯ ಎಂಬವರ ಪುತ್ರನೆಂದು ಆಧಾರ್ ಕಾರ್ಡ್ ಮಾಹಿತಿಯಿಂದ ತಿಳಿದುಬಂದಿದೆ. ರೈಲು ಇಳಿದು ಅಜಾಗೂರುಕತೆಯಿಂದ ಹಳಿ ಅಡ್ಡದಾಟಿ ರೖಲು ನಿಲ್ದಾಣದ ಫ್ಲಾಟ್ ಫೋಮ್ ಏರಲು ಪ್ರಯತ್ನಿಸಿರುವುದೇ ಅಪಘಾತ ಮತ್ತು ದುರ್ಮರಣಕ್ಕೆ ಕಾರಣವೆಂದು ಪೊಲೀಸರು ತಿಳಿಸಿದ್ದಾರೆ.
ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಶಾಸಕ ಬೈರತಿ ಬಸವರಾಜ್ಗೆ ಹೈಕೋರ್ಟ್ನಿಂದ ದೊಡ್ಡ ರಿಲೀಫ್ ಸಿಕ್ಕಿದೆ. ಪ್ರಕರಣ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠವು ಷರತ್ತುಬದ್ಧ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ನ್ಯಾ. ಬಿ. ಬಸವರಾಜ ಅವರಿದ್ದ ಪೀಠ, ಶಾಸಕ ಬೈರತಿ ಬಸವರಾಜ್ ಪರ ವಾದ ಮಂಡಿಸಿದ ವಕೀಲ ಸಂದೇಶ್ ಚೌಟ ಅವರ ವಾದವನ್ನು ಪರಿಗಣಿಸಿ, ಬಂಧನವಾದರೆ ತಕ್ಷಣವೇ ಬಿಡುಗಡೆ ಮಾಡುವಂತೆ ಮಧ್ಯಂತರ ಆದೇಶ ನೀಡಿದೆ. ವಕೀಲ ಸಂದೇಶ್ ಚೌಟ ಅವರು ವಾದ ಮಂಡಿಸಿ, ಸಿಐಡಿ ತನಿಖೆ ಆರಂಭವಾಗಿ ಐದು ತಿಂಗಳು ಕಳೆದಿದ್ದರೂ, ಈವರೆಗೆ ಶಾಸಕ ಬೈರತಿ ಬಸವರಾಜ್ ವಿರುದ್ಧ ಯಾವುದೇ ದೃಢ ಸಾಕ್ಷ್ಯ ದೊರೆತಿಲ್ಲ ಎಂದು ಕೋರ್ಟ್ಗೆ ತಿಳಿಸಿದರು. ಐದು ತಿಂಗಳ ಅವಧಿಯಲ್ಲಿ ಸಿಐಡಿ ವಿಚಾರಣೆಗೆ ಸಹ ಕರೆಯಲಾಗಿಲ್ಲ ಎಂದು ಅವರು ವಾದಿಸಿದರು.ಇದಲ್ಲದೆ, ಸಿಐಡಿ ಚಾರ್ಜ್ಶೀಟ್ ಸಲ್ಲಿಸುವ ಸಂದರ್ಭದಲ್ಲಿ ಕೂಡ ಬೈರತಿ ಬಸವರಾಜ್ ವಿರುದ್ಧ ಸ್ಪಷ್ಟ ಕಾರಣಗಳನ್ನು ಉಲ್ಲೇಖಿಸಿಲ್ಲ ಎಂದು ಕೋರ್ಟ್ ಗಮನಿಸಿದೆ. ಈ ಹಿನ್ನಲೆಯಲ್ಲಿ…
ಉಳ್ಳಾಲ; ಅಭಿವೃದ್ಧಿ ನಮ್ಮ ಗುರಿ ಆಗಿದ್ದು, ವಿದ್ಯಾರ್ಥಿಗಳು ಉನ್ನತಮಟ್ಟದ ಶಿಕ್ಷಣ ಪಡೆದು ಅಭಿವೃದ್ಧಿ ಕಡೆ ಹೆಜ್ಜೆ ಇಡಬೇಕು ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದರು. ಇವರು ಉಳ್ಳಾಲ ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ಹಝ್ರತ್ ಸಯ್ಯಿದ್ ಮದನಿ ಮಹಿಳಾ ಕಾಲೇಜು ಕಟ್ಟಡದ ಗೇಟ್ ಉದ್ಘಾಟನೆ ಹಾಗೂ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು. ವಿದ್ಯಾರ್ಥಿಗಳು ಜೀವನದಲ್ಲಿ ಒಂದು ಗುರಿಯನ್ನು ಇಟ್ಟುಕೊಳ್ಳಬೇಕು. ಅದಕ್ಕೆ ಅನುಗುಣವಾಗಿ ಶಿಕ್ಷಣ ಮುಂದುವರಿಸಿ ಒಂದು ಹಂತಕ್ಕೆ ತಲುಪಲು ವಿದ್ಯಾರ್ಥಿಗಳು ಪ್ರಯತ್ನ ಮಾಡಬೇಕು ಎಂದರು. ಸಯ್ಯಿದ್ ಮಸೂದ್ ತಂಙಳ್ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸಗೈದು ದುಅ ನೆರವೇರಿಸಿದರು. ದರ್ಗಾ ಅಧ್ಯಕ್ಷ ಹನೀಫ್ ಹಾಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಈ ಕಾರ್ಯಕ್ರಮದಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ದರ್ಗಾ ಮಾಜಿ ಅಧ್ಯಕ್ಷ ಹಂಝ, ಹಾಲಿ ಸದಸ್ಯ ಝೈನುದ್ದೀನ್ ಮೇಲಂಗಡಿ, ವಕ್ಫ್ ಅಧಿಕಾರಿ ಅಬೂಬಕ್ಕರ್, ದಗಾ ಉಪಾಧ್ಯಕ್ಷ ಆಶ್ರಫ್ ರೈಟ್ ವೇ, ಪ್ರಧಾನ ಕಾರ್ಯದರ್ಶಿ ಶಿಹಾಬುದ್ದೀನ್ ಸಖಾಫಿ, ಕೋಶಾಧಿಕಾರಿ ನಾಝಿಮ್…
ಕೊಣಾಜೆ ; ಮಂಗಳೂರು ವಿಶ್ವವಿದ್ಯಾನಿಲಯದ ವಾಣಿಜ್ಯ ವಿಭಾಗ ಮತ್ತು ಯೂನಿಯನ್ ಬ್ಯಾಂಕ್ ಚೇರ್ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ಕುರಿತು ಒಂದು ವಾರದ ಕಾರ್ಯಾಗಾರ ಇತ್ತೀಚಿಗೆ ನಡೆಯಿತು. ಸಂಪನ್ಲೂಲ ವ್ಯಕ್ತಿಗಳಾಗಿ ಶ್ರೀ ಗೋಕರ್ಣನಾಥೇಶ್ವರ ಕಾಲೇಜು ಮಂಗಳೂರಿನ ಪ್ರಾಧ್ಯಪಕರಾದ ಡಾ.ಯತೀನ್, ಮಂಗಳೂರು ಶಾರದಾ ಕಾಲೇಜಿನ ಇಮಗ್ಲೀಷ್ ಪ್ರಾಧ್ಯಾಪಕರಾದ ಡಾ.ಮೀನಾ ಕೆ ವಣಿಕೇರ್, ಮಂಗಳೂರಿನ ಬೆಸೆಂಟ್ ಸಂಧ್ಯಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಡಾ.ಪ್ರಸನ್ನಕುಮಾರ್ ಎಂ.ಜೆ, ಯೆನಪೋಯ ವಿಶ್ವವಿದ್ಯಾನಿಲಯದ ಸಂಶೋಧನಾ ವಿದ್ಯಾರ್ಥಿ ಮ್ಯೂರಲ್ ಹೆನ್ರಿತ ಕುಟಿನ್ಹ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ.ಪ್ರೀತಿ ಕೀರ್ತಿ ಡಿ’ಸೋಜ ಮಾಹಿತಿಗಳನ್ನು ಹಂಚಿಕೊAಡರು. ಕಾರ್ಯಾಗಾರ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ವಿಶ್ವವಿದ್ಯಾನಿಲಯ ವಿಶ್ರಾಂತ ಕುಲಸಚಿವರಾದ ಕೆ.ರಾಜು ಮೊಗವೀರ ಕೆ.ಎಎಸ್ ಮತ್ತು ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಲೆಕ್ಕಾಧಿಕಾರಿ ಅಸ್ಮಾ ಕೆ.ಎಸ್.ಎ.ಎಸ್ ಉಪಯುಕ್ತ ಮಾರ್ಗದರ್ಶನ ನೀಡಿದರು. ಸಮಾರೋಪ ಸಮಾರಂಭದ ಸಭಾಧ್ಯಕ್ಷತೆಯನ್ನು ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ.ಪ್ರೀತಿ ಕೀರ್ತಿ ಡಿಸೋಜ ವಹಿಸಿದ್ದರು. ವೇದಿಕೆಯಲ್ಲಿ ಉಪನ್ಯಾಸಕರಾದ ಡಾ.ದಿನಕರ…
ಹರೇಕಳ: ಜೀವನದಲ್ಲಿ ಮುಖ್ಯವಾಗಿ ಬೇಕಾದುದು ವಿದ್ಯೆ. ಇದರಿಂದ ಜೀವನದ ಸುಖವನ್ನು ಗಳಿಸಿಕೊಳ್ಳಲು ಸಾಧ್ಯ, ಸುಖದ ಅನುಭವ ಮಕ್ಕಳಿಗೆ ಸಿಗಬೇಕಾದರೆ ಕಷ್ಟದ ಅರಿವೂ ಇರಬೇಕು. ವಿದ್ಯಾರ್ಥಿಗಳಲ್ಲಿ ಸಂಸ್ಕಾರ, ವಿಯೆಯ ಬೆಲೆಯನ್ನು ತಿಳಿಸುವ ಜವಬ್ದಾರಿ ಶಿಕ್ಷಕರದ್ದಾಗಿದೆ. ನಾವು ಜೀವನದಲ್ಲಿ ಎಷ್ಟೇ ಎತ್ತರಕ್ಕೆ ಏರಿದರೂ ನಾವು ಬೆಳೆದು ಬಂದ ದಾರಿ, ಬೇರುಗಳನ್ನು ಮರೆಯದೆ ಮುನ್ನಡೆಯಬೇಕು ಎಂದು ಕರ್ನಾಟಕ ಉಚ್ಛನ್ಯಾಯಾಲಯದ ನ್ಯಾಯಧೀಶರಾದ ಡಾ.ಟಿ.ಎನ್.ಇನ್ನವಳ್ಳಿ ಅವರು ಅಭಿಪ್ರಾಯಪಟ್ಟರು. ಇವರು ಹರೇಕಳ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ, ಪ್ರಾಥಮಿಕ ಶಾಲೆಯ ಪ್ರತಿಭೋತ್ಸವ-೨೦೨೫ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪೊಲೀಸ್ ಸ್ಟೇಷನ್, ಕೋರ್ಟ್ ಮೊದಲಾದವುಗಳನ್ನು ನೋಡದೆ ನಾವು ಬೆಳೆಯಬಹುದು. ಆದರೆ ನೀರು, ಆಹಾರ, ರೈತನನ್ನು ನೋಡದೆ ಬೆಳೆಯಲು ಖಂಡಿತಾ ಸಾಧ್ಯವಿಲ್ಲ. ಆದ್ದರಿಂದ ವಿದ್ಯೆಯೊಂದಿಗೆ ಜೀವನ ಸತ್ವವನ್ನು ಮರೆಯಬಾರದು. ಇಂದು ಹತ್ತು ಹನ್ನೆರಡು ವರ್ಷದ ಮಕ್ಕಳು ಆತ್ಮಹತ್ಯೆ ಮಾಡುತ್ತಾ ಇದ್ದಾರೆ. ಇದಕ್ಕೆಲ್ಲ ಎಳವೆಯಲ್ಲಿ ಮಕ್ಕಳಿಗೆ ಜೀವನದ ಶಿಕ್ಷಣ ಸಿಗದಿರುವುದೇ ಮುಖ್ಯ ಕಾರನ. ಈ ನಿಟ್ಟಿನಲ್ಲಿ ಶಿಕ್ಷಕರು ಹಾಗೂ ಪಾಲಕರ ಪಾತ್ರ ಮಹತ್ತರವಾದುದು ಎಂದರು. ತ್ರಿಶಕ್ತಿ ವಿದ್ಯಾವರ್ಧಕ…
ಕುಂಪಲ: ಕುಂಪಲ-ಮಡ್ಯಾರ್ ಸಂಪರ್ಕ ರಸ್ತೆಯ ಕುರಿತು ಉಳ್ಳಾಲವಾಣಿ ಸರಣಿ ಲೇಖನ ಪ್ರಕಟಿಸಿ ಅಭಿಯಾನ ನಡೆಸಿತ್ತು. ಅದರ ಫಲವಾಗಿ ಇತ್ತೀಚೆಗೆ ಕೋಟೆಕಾರು ಪಟ್ಟಣ ಪಂಚಾಯತ್ ನಲ್ಲಿ ಜರಗಿದ ಸಾಮಾನ್ಯ ಸಭೆಯಲ್ಲಿ ಕೌನ್ಸಿಲರ್ ವಿಚಾರವನ್ನು ಮಂಡಿಸಿದ ಹಿನ್ನೆಲೆಯಲ್ಲಿ ಇದೀಗ ಆಡಳಿತಾತ್ಮಕ ನಿರ್ಣಯದಲ್ಲಿ ಸಂಪರ್ಕ ರಸ್ತೆ ಕಲ್ಪಿಸುವ ಕುರಿತು ನಿರ್ಣಯ ದಾಖಲಾಗುವ ಮೂಲಕ ರಸ್ತೆ ನಿರ್ಮಾಣಕ್ಕೆ ಮೊದಲ ಅಂಕುಶ ದೊರೆತಿದೆ. ಸೋಮೇಶ್ವರ ಪುರಸಭೆ ವ್ಯಾಪ್ತಿಯ ಕುಂಪಲ ಭಾಗದಿಂದ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಬೀರಿ ದೇರಳಕಟ್ಟೆ ಮುಖ್ಯ ರ್ಸತೆಗೆ ಸಂಪರ್ಕ ರಸ್ತೆ ಕಲ್ಪಿಸುವಂತೆ ಎರಡು ಗ್ರಾಮದ ಜನರ ಬೇಡಿಕೆಯಾಗಿದೆ. ಈ ಬಗ್ಗೆ ರಸ್ತೆ ನಿರ್ಮಾಣಕ್ಕೆ ಕೆಲವು ಖಾಸಗಿ ಜಮೀನಿನ ಅಗತ್ಯವಿದೆ. ಜಮೀನು ಮಾಲಕರಲ್ಲಿ ಮಾತುಕತೆ ನಡೆಸಿ ಖಾಸಗಿ ರಸ್ತೆ ನಿರ್ಮಿಸಿಲು ಒಪ್ಪಿದ್ದಲ್ಲಿ ಅದಕ್ಕೆ ಬೇಕಾದ ರಸ್ತೆ ನಿರ್ಮಿಸಲು ಸ್ಥಳ ಪರಿಶೀಲನೆ ಮಾಡಲಾಗುವುದೆಂದು ಸರ್ವಾನುಮತದಿಂದ ತೀರ್ಮಾನಿಸಲಾಗಿದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ. ೨೦೨೫ರ ಅ.೧೬-೩೦ ರ ಉಳ್ಳಾಲವಾಣಿ ಪತ್ರಿಕೆಯ ಸಂಚಿಕೆಯಲ್ಲಿ ಎರಡು ಗ್ರಾಮಗಳ ಸಂಪರ್ಕಕ್ಕೆ ಒಲವು ಹರಿಸುವ ಕುರಿತು…
ಮಂಜನಾಡಿ; ನಿತ್ಯಾನಂದ ಸೇವಾ ಸಮಿತಿ ನಿತ್ಯಾನಂದ ನಗರ, ಹನುಮಾನ್ ಫ್ರೆಂಡ್ಸ್ ಹಿಂದೂಪುರ ಅಸೈಗೋಳಿ, ಟೀಮ್ ಅಸೈಗೋಳಿ,ಶಕ್ತಿ ಫ್ರೆಂಡ್ಸ್ ಆಕಾಶಭವನ ಮಂಗಳೂರು, ಸ್ನೇಹ ಬಳಗ ಮಂಗಳೂರು, ಓಂ ಶಕ್ತಿ ಮಂಗಳೂರು, ಬರ್ಕೆ ಫ್ರೆಂಡ್ಸ್ ಕುದ್ರೋಳಿ, ಬ್ರದರ್ಸ್ ಕೊಲ್ಯ, ಸಾಯಿ ಫ್ರೆಂಡ್ಸ್ ಅಸೈಗೋಳಿ ಅವರಿಂದ ಮಂಜನಾಡಿ ಉರೂಸ್ ಗೆ ಅಸೈಗೋಳಿ ಜಂಕ್ಷನ್ ನಿಂದ ಮಂಜನಾಡಿ ಕೇಂದ್ರ ಮಸೀದಿ ತನಕ ಹೊರೆಕಾಣಿಕೆ ಮೆರವಣಿಗೆಯ ಮೂಲಕÀ 15 ಕ್ವಿಂಟಾಲ್ ಅಕ್ಕಿ, ಸಕ್ಕರೆ, ತರಕಾರಿ ಇತರ ಸಾಮಾಗ್ರಿಯನ್ನು ತರಲಾಯಿತು. ಸಾಯಿ ಫ್ರೆಂಡ್ಸ್ ಅಸೈಗೋಳಿ ಅಧ್ಯಕ್ಷ ಸುನಿಲ್ ಪೂಜಾರಿ ಮಾತನಾಡಿನಾವೆಲ್ಲರೂ ಒಂದಾಗಿರಬೇಕೆAಬ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಮಾಡಿದ್ದೇವೆ, ನಾವೆಲ್ಲರೂ ಒಗ್ಗಟ್ಟಾಗಿ ಈ ಉರೂಸ್ ಕಾರ್ಯಕ್ರಮವನ್ನು ಯಶಸ್ವಿ ಮಾಡುವ ಎಂದರು. ಗಣೇಶ್ ಅಸೈಗೋಳಿ ಮಾತನಾಡಿ ಮಂಜನಾಡಿ ಉರೂಸ್ ಕಾರ್ಯಕ್ರಮಕ್ಕೆ ನಾವು ಹಿಂದೂ ಬಾಂಧವರು ಹೊರೆಕಾಣಿಕೆಯನ್ನು ನೀಡಿದ್ದೇವೆ, ದೇವರು ನಮ್ಮನ್ನು ಹೀಗೆಯೇ ಸೌಹಾರ್ದತೆಯಿಂದ ಮುಂದುವರೆಸಲು ಅನುಗ್ರಹಿಸಲಿ ಎಂದರು. ಮAಜನಾಡಿ ಜುಮಾ ಮಸೀದಿಯ ಅಧ್ಯಕ್ಷ ಅಬ್ದುಲ್ ಅಝೀಝ್ ಮೈಸೂರು ಬಾವ ಮಾತನಾಡಿ ಡಿಸೆಂಬರ್ ೧೭ರಿಂದ…
ಮಂಗಳೂರು;ಉಳ್ಳಾಲ ಮೊಗವೀರಪಟ್ಣ ಮಾರುತಿ ಜನಸೇವಾ ಸಂಘ ಹಾಗೂ ಮಾರುತಿ ಯುವಕ ಮಂಡಲದ 40ನೇ ವರ್ಷದ ಆಚರಣೆಯ ಒಂದು ವರ್ಷದ ಸಮಾಜಮುಖಿ ಕಾರ್ಯಕ್ರಮದ ಹಿನ್ನಲೆಯಲ್ಲಿ ಮಂಗಳೂರಿನ ಪುರಭವನದಲ್ಲಿ ಮಾರುತಿ ಮಾಣಿಕ್ಯ ಮಹೋತ್ಸವ ಸಮಾರೋಪ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಎಂ ಮೋಹನ್ ಆಳ್ವ ಮಾತನಾಡಿ, ಮೊಗವೀರರು ಸಮುದ್ರವನ್ನು ನಂಬಿಕೊAಡ ಸಾಹಸಿಗರು. ಧಾರ್ಮಿಕ ಕಾರ್ಯಕ್ರಮಗಳನ್ನು ಹಾಗೂ ಸೌಹಾರ್ದಮಯ ವಾತಾವರಣ ನಿರ್ಮಿಸುವ ನೆಲೆಯಲ್ಲಿ ಮೊಗವೀರರ ಪಾತ್ರ ಅಪಾರವಾಗಿದೆ. ಅದರಲ್ಲೂ ಮಾರುತಿ ಜನಸೇವಾ ಸಂಘ, ಮಾರುತಿ ಯುವಕ ಮಂಡಲ ಸಮಾಜದ ಶ್ರೇಯಸ್ಸಿಗಾಗಿ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದ್ರು. ಇದೇ ವೇಳೆ ಶಾಸಕರಾದ ಯಶ್ಪಾಲ್ ಸುವರ್ಣ ಮಾತನಾಡಿದ್ದಾರೆ. ಬಳಿಕ ಶಾಸಕ ವೇದವ್ಯಾಸ್ ಕಾಮತ್ ಅವರು ಮಾತನಾಡಿ ಕಾರ್ಯಕ್ರಮಕ್ಕೆ ಶುಭಹಾರೈಸಿದ್ರು.ಮುಖ್ಯ ಅತಿಥಿಗಳಾಗಿ ರಾಜ್ಯ ಅಲೈಡ್ ಹೆಲ್ತ್ ಕೌನ್ಸಿಲ್ ಚೇರ್ ಮ್ಯಾನ್ ಡಾ.ಯು.ಟಿ.ಇಫ್ತಿಕಾರ್, ಮೆಟಲ್ ಗ್ರೂಫ್ ಆಫ್ ಕಂಪೆನೀಸ್ ಬಹರೈನ್ ಚೇರ್ಮ್ಯಾನ್ ಅಬ್ದುಲ್ ರಝಾಕ್, ಮೊಗವೀರ ಬಹರೈನ್ ಅಧ್ಯಕ್ಷರಾದ ಶಿಲ್ಪಾ ಶಮಿತ್ ಕುಂದರ್, ದ.ಕ.ಮೊಗವೀರ ಮಹಾಜನ…

