ಕೋಟೆಕಾರ್ ಹಾಗೂ ಹಿದಾಯತ್ ನಗರ ಪ್ರದೇಶಗಳಲ್ಲಿ ಮಂಗಳವಾರ ರಾತ್ರಿ ಸುರಿದ ಭಾರೀ ಮಳೆಯಿಂದ ಕೃತಕ ನೆರೆ ಉಂಟಾಗಿ ಸ್ಥಳೀಯ ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸಿದರು. ಸಿಡಿಲು-ಮಿಂಚಿನೊಂದಿಗೆ ಧಾರಾಕಾರವಾಗಿ ಸುರಿದ ಮಳೆಯಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಹಲವು ಮನೆಗಳು ಜಲಾವೃತಗೊಂಡವು. ಸ್ಥಳೀಯ ನಿವಾಸಿಗಳಾದ ಹನೀಫ್ ಎಸ್.ಎಂ., ರಂಲಾ, ಬಶೀರ್ ಹಾಗೂ ಯುಸುಫ್ ಅವರ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ಕುಟುಂಬಸ್ಥರು ಇಡೀ ರಾತ್ರಿ ನಿದ್ರೆಯಿಲ್ಲದೆ ಕಳೆಯುವಂತಾಯಿತು. ಮನೆಗಳಲ್ಲಿ ನೀರು ನಿಂತ ಕಾರಣ ಗೃಹೋಪಯೋಗಿ ವಸ್ತುಗಳಿಗೆ ಹಾನಿಯಾಗಿದ್ದು, ನಿವಾಸಿಗಳು ಆತಂಕದಲ್ಲಿದ್ದರು. ತಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾನಗರ ಪ್ರದೇಶದಲ್ಲಿ ಖಾಸಗಿ ವ್ಯಕ್ತಿಗಳು ಎಕರೆಗಟ್ಟಲೆ ಜಾಗ ಖರೀದಿಸಿ ಸಮತಟ್ಟು ಮಾಡಿದ ಪರಿಣಾಮ ಮಳೆನೀರು ಹರಿಯುವ ಸಹಜ ದಾರಿ ಮುಚ್ಚಲ್ಪಟ್ಟಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಅಲ್ಲದೆ, ಆ ಜಾಗದ ನೀರನ್ನು ಹಿದಾಯತ್ ನಗರ ಮುಳ್ಳುಗುಡ್ಡೆ ಪ್ರದೇಶದ ಸಣ್ಣ ತೋಡಿಗೆ ಹರಿಸಿರುವುದೇ ಈ ಸಮಸ್ಯೆಗೆ ಮುಖ್ಯ ಕಾರಣವಾಗಿದೆ ಎಂದು ನಾಗರಿಕರು ದೂರಿದ್ದಾರೆ. ಪ್ರತಿ ಮಳೆಗಾಲದಲ್ಲೂ ಇದೇ ರೀತಿಯ…
Author: UllalaVani
ಮಂಗಳೂರು, ಮೇ. 13 : ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಆರೋಪಿತೆಯನ್ನು ಮಂಗಳೂರು ನಗರದ ಮುಲ್ಕಿ ಪೊಲೀಸರು ಬಂಧಿಸಿ 35,00,000 ರೂ. ಮೌಲ್ಯದ ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೊವಿಡ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಶಿವಮೋಗ್ಗದ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿ ಸುಹಾನ (21) ಬಂಧಿತ ಆರೋಪಿತೆ. ಬಂಧಿತೆ ಕುಂದಾಪುರ ಕಾಲೇಜೊಂದರ ಅಂತಿಮ ವರ್ಷದ ಬಿಸಿಎ ವಿದ್ಯಾರ್ಥಿನಿ.ಮಂಗಳವಾರ ಮುಲ್ಕಿ ಠಾಣಾ ವ್ಯಾಪ್ತಿಯ ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಹೈಡ್ರೊವಿಡ ಗಾಂಜಾ ಮಾದಕ ದ್ರವ್ಯವನ್ನು ಮಾರಾಟ ಮಾಡಲು ಸಾಗಾಟ ಮಾಡುತ್ತಿದ್ದ ಆರೋಪಿತೆ ಸುಹಾನಾ ಎಂಬಾಕೆಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿತೆಯನ್ನು ವಶಕ್ಕೆ ಪಡೆದು ಆಕೆಯ ಬಳಿ ಇದ್ದ ಸುಮಾರು 35,00,000 ರೂ. ಮೌಲ್ಯದ ಸುಮಾರು 1 ಕೆಜಿ 42 ಗ್ರಾಮ್ ಹೈಡ್ರೊವಿಡ ಗಾಂಜಾ ಎಂಬ ಮಾದಕ ವಸ್ತುವನ್ನು ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ಪೋನ್ ಮತ್ತು ಇತರ ಸೊತ್ತು ಸ್ವಾಧೀನಕೊಳ್ಳಲಾಗಿದೆ.ಈ ಮಾದಕ ವಸ್ತುವನ್ನು ಆರೋಪಿತೆಯು ಚೆನ್ನೈನಿಂದ ತರಿಸಿಕೊಂಡು ಮಂಗಳೂರಿನಲ್ಲಿ ಅಕ್ರಮವಾಗಿ…
ಬೆಂಗಳೂರು: ನೀಟ್ ಮರು ಪರೀಕ್ಷೆ ತಕ್ಷಣವೇ ಆಗಲಿ ಅಂತ ಬಿಜೆಪಿ ನಾಯಕ,ಮಾಜಿ ಡಿಸಿಎಂ ಅಶ್ವಥ್ ನಾರಾಯಣ ಒತ್ತಾಯ ಮಾಡಿದ್ದಾರೆ. ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆಯಾಗಿ ಮರು ಪರೀಕ್ಷೆ ಘೋಷಣೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನೀಟ್ ಪರೀಕ್ಷೆ ವಿಚಾರದಲ್ಲಿ ಪೇಪರ್ ಲೀಕ್ ಆಗಿದೆ ಅಂತ ಕೆಲ ಪ್ರದೇಶದಲ್ಲಿ ವರದಿಯಾಗಿದೆ. ಮರು ಪರೀಕ್ಷೆ ಮಾಡೋದಾಗಿ NTA ಹೇಳಿದೆ. ರೀ ಷಡ್ಯೂಲ್ ಮಾಡಿ ಸಮಯ ವ್ಯರ್ಥವಾಗದಂತೆ ಮಾಡಿ ಎಂದರುಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿರೋರ ಮೇಲೆ ಕಠಿಣ ಕ್ರಮ ಆಗಲಿ. ಮೆರಿಟ್ಗೆ ಕಾಂಪ್ರಮೈಸ್ ಆಗಬಾರದು. ಸಮಸ್ಯೆ ಉದ್ಬವ ಆಗ್ತಿದೆ. ಮೆರಿಟ್ ಸ್ಟೂಡೆಂಟ್ಗೆ ಅನ್ಯಾಯ ಆಗಬಾರದು. ಎಲ್ಲರೂ ಸಹಕರಿಸಿ, ಮರು ಪರೀಕ್ಷೆ ತಕ್ಷಣ ಆಗಲಿ ಅಂತ ಒತ್ತಾಯ ಮಾಡಿದ್ರು
ಸಿನಿಮಾ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನದಿಂದ ಚಿತ್ರರಂಗದಲ್ಲಿ ಶೋಕದ ವಾತಾವರಣ ನಿರ್ಮಾಣ ಆಗಿದೆ. ‘ಮಿಲನ’, ‘ಯು ಟರ್ನ್’ ಮುಂತಾದ ಸಿನಿಮಾಗಳಲ್ಲಿ ಅಭಿನಯಿಸಿ ನಟ ದಿಲೀಪ್ ರಾಜ್ ಅವರು ಜನಮನ ಗೆದ್ದಿದ್ದರು.ಹಲವು ವರ್ಷಗಳಿಂದ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ನಿಧನರಾಗಿದ್ದಾರೆ. ಹೃದಯಾಘಾತದಿಂದ ಅವರು ಕೊನೆಯುಸಿರು ಎಳೆದಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೂ ಅವರು ಬದುಕುಳಿಯಲಿಲ್ಲ. ದಿಲೀಪ್ ರಾಜ್ ನಿಧನಕ್ಕೆ ಚಿತ್ರರಂಗದ ಅನೇಕರು ಹಾಗೂ ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ‘ಮಿಲನ’, ‘ಯು ಟರ್ನ್’, ‘ಆರ್ಕೆಸ್ಟ್ರಾ ಮೈಸೂರು’, ‘ನಿಮ್ಮ ವಸ್ತುಗಳಿಗೆ ನೀವೇ ಜವಾಬ್ದಾರರು’ ಸೇರಿದಂತೆ ಹಲವು ಚಿತ್ರಗಳಲ್ಲಿ ದಿಲೀಪ್ ರಾಜ್ ಅವರು ನಟಿಸಿದ್ದರು. ಸಿನಿಮಾ ಮಾತ್ರವಲ್ಲದೇ ಕಿರುತೆರೆಯಲ್ಲೂ ಅವರು ಸಕ್ರಿಯರಾಗಿದ್ದರು. ‘ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಅವರು ನಟಿಸಿದ್ದರು. ‘ಪಾರು’, ‘ನಾ ನಿನ್ನ ಬಿಡಲಾರೆ’ ಧಾರಾವಾಹಿಗಳನ್ನು ಅವರು…
ಮಂಗಳೂರು, ಮೇ. 12 : ಮೇ 3 ರಂದು ದೇಶಾದ್ಯಂತ ನಡೆದಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ (NEET-UG 2026) ಯನ್ನು ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ರದ್ದುಗೊಳಿಸಿರುವುದನ್ನು ದಕ್ಷಿಣ ಕನ್ನಡ ಜಿಲ್ಲಾ NSUI ಅಧ್ಯಕ್ಷ ಸುಹಾನ್ ಆಳ್ವ ತೀವ್ರವಾಗಿ ಖಂಡಿಸಿದ್ದಾರೆ. ಈ ವರ್ಷ ಸುಮಾರು 22.5 ಲಕ್ಷ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸು ಹೊತ್ತು ಈ ಪರೀಕ್ಷೆಯನ್ನು ಬರೆದಿದ್ದರು. ಆದರೆ, ಪತ್ರಿಕೆ ಸೋರಿಕೆಯಂತಹ ಗಂಭೀರ ಲೋಪದೋಷಗಳಿಂದಾಗಿ ಇಡೀ ಪರೀಕ್ಷಾ ವ್ಯವಸ್ಥೆಯೇ ಕುಸಿದುಬಿದ್ದಿದೆ. ಕೇಂದ್ರ ಸರ್ಕಾರದ ಈ ವೈಫಲ್ಯವು ಲಕ್ಷಾಂತರ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಆತಂಕಕ್ಕೆ ದೂಡಿದೆ ಎಂದು ಸುಹಾನ್ ಆಳ್ವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಪರೀಕ್ಷೆಯ ಪಾವಿತ್ರ್ಯತೆಯನ್ನು ಕಾಪಾಡುವಲ್ಲಿ ಕೇಂದ್ರ ಶಿಕ್ಷಣ ಇಲಾಖೆ ಸಂಪೂರ್ಣವಾಗಿ ವಿಫಲವಾಗಿದೆ. ಪದೇ ಪದೇ ಇಂತಹ ಹಗರಣಗಳು ನಡೆಯುತ್ತಿರುವುದು ಕೇಂದ್ರ ಸರ್ಕಾರದ ಅದಕ್ಷತೆಯನ್ನು ತೋರಿಸುತ್ತದೆ. ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿರುವ ಕೇಂದ್ರ ಶಿಕ್ಷಣ ಸಚಿವ ಶ್ರೀ ಧರ್ಮೇಂದ್ರ ಪ್ರಧಾನ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು,” ಎಂದು ಅವರು ಒತ್ತಾಯಿಸಿದ್ದಾರೆ.ಒಂದೆಡೆ ವಿದ್ಯಾರ್ಥಿಗಳು ಹಗಲಿರುಳು…
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) NEET (UG) 2026 ಪರೀಕ್ಷೆಯನ್ನು ರದ್ದುಪಡಿಸಿ ಮರುಪರೀಕ್ಷೆ ನಡೆಸಲು ಮಹತ್ವದ ತೀರ್ಮಾನ ಕೈಗೊಂಡಿದೆ. ಮೇ 3ರಂದು ನಡೆದಿದ್ದ ಪರೀಕ್ಷೆಯ ಕುರಿತು ಅಕ್ರಮ ಮತ್ತು ಪ್ರಶ್ನೆಪತ್ರಿಕೆ ಸೋರಿಕೆ ಸಂಬಂಧ ಹಲವು ಆರೋಪಗಳು ಕೇಳಿಬಂದ ಹಿನ್ನೆಲೆ, ಸ್ವತಂತ್ರ ಪರಿಶೀಲನೆ ಹಾಗೂ ಕಾನೂನು ಜಾರಿ ಸಂಸ್ಥೆಗಳ ತನಿಖಾ ವರದಿಗಳ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. NTA ಪ್ರಕಟಣೆಯ ಪ್ರಕಾರ, ರಾಷ್ಟ್ರೀಯ ಮಟ್ಟದ ಪರೀಕ್ಷೆಗಳನ್ನು ನ್ಯಾಯಸಮ್ಮತ, ಸುರಕ್ಷಿತ ಹಾಗೂ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಬದ್ಧತೆಯ ಭಾಗವಾಗಿ ಮೇ 8ರಂದು ವಿಚಾರಗಳನ್ನು ಕೇಂದ್ರ ತನಿಖಾ ಸಂಸ್ಥೆಗಳಿಗೆ ಒಪ್ಪಿಸಲಾಗಿತ್ತು. ಬಳಿಕ ಲಭಿಸಿದ ಮಾಹಿತಿ ಹಾಗೂ ತನಿಖಾ ವರದಿಗಳನ್ನು ಸಮಗ್ರವಾಗಿ ಪರಿಶೀಲಿಸಿದಾಗ, ಪ್ರಸ್ತುತ ಪರೀಕ್ಷಾ ಪ್ರಕ್ರಿಯೆಯನ್ನು ಮುಂದುವರಿಸುವುದು ಸಾಧ್ಯವಿಲ್ಲ ಎಂಬುದು ಸ್ಪಷ್ಟವಾಗಿರುವುದಾಗಿ ಸಂಸ್ಥೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಭಾರತ ಸರ್ಕಾರದ ಅನುಮೋದನೆಯೊಂದಿಗೆ NEET (UG) 2026 ಪರೀಕ್ಷೆಯನ್ನು ರದ್ದುಪಡಿಸಿ ಮರುಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಮರುಪರೀಕ್ಷೆಯ ದಿನಾಂಕ ಮತ್ತು ಹೊಸ ಅಡ್ಮಿಟ್ ಕಾರ್ಡ್ಗಳ ವೇಳಾಪಟ್ಟಿಯನ್ನು…
ವಾರoಟ್ ಆರೋಪಿ ಫಾರೂಲ್ ಎಂಬಾತ 6 ವರ್ಷಗಳಿಂದ ತಲೆ ಮರೆಸಿಕೊಂಡಿದ್ದು, ಇದೀಗ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನ್ಯಾಯಾಲಯವು ಆರೋಪಿತನ ಮೇಲೆ ದಸ್ತಗಿರಿ ವಾರಂಟ್ನ್ನು ಹೊರಡಿಸಿತ್ತು. ಬಳಿಕ ಆರೋಪಿಯನ್ನು ಕೇರಳ ರಾಜ್ಯದ ಮಂಜೇಶ್ವರದ ಬಳಿ ಮೇಲಾಧಿಕಾರಿಗಳ ನಿರ್ದೇಶನದಂತೆ, ಪೊಲೀಸ್ ನಿರೀಕ್ಷಕರಾದ ಮೊಹಮ್ಮದ್ ಸಲೀಂ ಅಬ್ಬಾಸ್ ರವರ ಮಾರ್ಗದರ್ಶನದಲ್ಲಿ, ಠಾಣಾ ಸಿ ಹೆಚ್ ಸಿ ಗಳಾದ ನವೀನ ಚಂದ್ರ, ಸಯ್ಯದ್ ಇಂತಿಯಾಜ್, ಸಿಪಿಸಿಗಳಾದ ರಾಕೇಶ್ ಮತ್ತು ವಿನಯ್ ನೇತೃತ್ವದಲ್ಲಿ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಮಂಗಳೂರು: ಅಡ್ಯಾರ್ ಗಾರ್ಡನ್ನಲ್ಲಿ ಮೇ 30ರಂದು ನಡೆಯಲಿರುವ ‘ಪಟ್ಲ ಸಂಭ್ರಮ-2026’ ಸಮಾರಂಭದಲ್ಲಿ ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.90ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಯಕ್ಷಧ್ರುವ ಪಟ್ಲ ಫೌಂಡೇಶನ್ ವತಿಯಿಂದ ವಿದ್ಯಾರ್ಥಿ ವೇತನ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳು ಭಾವಚಿತ್ರ, ಬಿಪಿಎಲ್ ಕಾರ್ಡ್ ಪ್ರತಿ, ಅಂಕಪಟ್ಟಿಯೊoದಿಗೆ ಮೇ 15ರ ಒಳಗಾಗಿ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದವರು ಮೇ 30ರಂದು ಬೆಳಿಗ್ಗೆ 9 ಗಂಟೆಗೆ ಹಾಜರಿರಬೇಕು. ಅರ್ಜಿಯನ್ನು ಸುದೇಶ್ ಕುಮಾರ್ ರೈ, 2ನೇ ಮಹಡಿ, ಎಂಪೈರ್ ಮಾಲ್ (ಅಂಗಡಿ ಸಂಖ್ಯೆ 16 ಮತ್ತು 17), ಎಂ.ಜಿ.ರಸ್ತೆ, ಮಂಗಳೂರು -575003 ಈ ವಿಳಾಸಕ್ಕೆ ಕಳುಹಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಚೆನ್ನೈ,ಮೇ. 12 ; ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ದಳಪತಿ ವಿಜಯ್ ಇದೀಗ ಮೊದಲ ಮಹತ್ವದ ನಿರ್ಧಾರವನ್ನೂ ಪ್ರಕಟಿಸಿದ್ದಾರೆ. ರಾಜ್ಯಾದ್ಯಂತ ದೇವಸ್ಥಾನಗಳು, ಶಾಲೆಗಳು ಮತ್ತು ಬಸ್ ನಿಲ್ದಾಣಗಳ 500 ಮೀಟರ್ ವ್ಯಾಪ್ತಿಯಲ್ಲಿರುವ ಒಟ್ಟು 717 ಸರ್ಕಾರಿ ಸ್ವಾಮ್ಯದ ಟಾಸ್ಮಾಕ್ ಮದ್ಯದ ಅಂಗಡಿಗಳನ್ನು ಮುಚ್ಚುವಂತೆ ಅವರು ಆದೇಶಿಸಿದ್ದಾರೆ. ಶಾಲೆ, ದೇವಸ್ಥಾನ ಮತ್ತು ಬಸ್ ನಿಲ್ದಾಣದ ಬಳಿಯಿರುವ 717 ಮದ್ಯದ ಅಂಗಡಿಗಳು ಎರಡು ವಾರದಲ್ಲಿ ಬಂದ್. ಕಾಂಗ್ರೆಸ್, ಎಡಪಕ್ಷಗಳು ಮತ್ತು ವಿಸಿಟಿ ಬೆಂಬಲದೊಂದಿಗೆ ಸರ್ಕಾರ ರಚಿಸಿದ ಬಳಿಕ ವಿಜಯ್ ಮೊದಲ ನಿರ್ಧಾರ.ತಮಿಳುನಾಡಿನ 234 ಸ್ಥಾನಗಳ ಪೈಕಿ 108 ಸೀಟುಗಳನ್ನು ಗೆದ್ದ ವಿಜಯ್ ಟಿವಿಕೆ ಪಕ್ಷವು ಬಹುಮತಕ್ಕೆ 10 ಸ್ಥಾನಗಳ ಕೊರತೆಯನ್ನು ಎದುರಿಸಿತ್ತು. ಒಂದು ವಾರ ನಡೆದ ರಾಜಕೀಯ ಹಗ್ಗಜಗ್ಗಾಟದ ನಂತರ ಕಾಂಗ್ರೆಸ್, ಎಡಪಕ್ಷಗಳು ಮತ್ತು ವಿಸಿಕೆ ಪಕ್ಷದ ಬೆಂಬಲದೊಂದಿಗೆ ವಿಜಯ್ ಸರ್ಕಾರ ರಚಿಸಿದರು. ಅಧಿಕಾರಕ್ಕೆ ಬರುತ್ತಿದ್ದಂತೆಯೇ ಜನಸಾಮಾನ್ಯರ ಹಿತದೃಷ್ಟಿಯಿಂದ ಈ ಕಟ್ಟುನಿಟ್ಟಿನ ಆದೇಶವನ್ನು ಹೊರಡಿಸಿದ್ದಾರೆ.ಟಾಸ್ಮಾಕ್ ಸದ್ಯ ರಾಜ್ಯಾದ್ಯಂತ 4,765 ಅಂಗಡಿಗಳನ್ನು ನಡೆಸುತ್ತಿದ್ದು, ಅದರಲ್ಲಿ…
ಉಳ್ಳಾಲ: ಅಲ್ ಮದೀನ ಇಸ್ಲಾಮಿಕ್ ಕಾಂಪ್ಲೆಕ್ಸ್ ನ ಶಿಲ್ಪಿ, ಉಚಿತ ವಿದ್ಯಾಭ್ಯಾಸ ನೀಡುವ ಮೂಲಕ ಶೈಕ್ಷಣಿಕ ಕ್ರಾಂತಿಯನ್ನುಂಟುಮಾಡಿದ, ಶರಫುಲ್ ಉಲಮಾ ಅಬ್ಬಾಸ್ ಉಸ್ತಾದ್ ಅವರ ಏಳನೇ ವರ್ಷದ ಅನುಸ್ಮರಣೆ, ಪ್ರಾರ್ಥನಾ ಸಂಗಮ, (ಆಂಡ್ ನೇರ್ಚೆ) ಹಾಗೂ ಆಧ್ಯಾತ್ಮಿಕ ಕಾರ್ಯಕ್ರಮಗಳು ಅಲ್ ಮದೀನ ಮಂಜನಾಡಿ ಕ್ಯಾಂಪಸ್ ನಲ್ಲಿ , ಮೇ 13 , 14 ದ್ವಿದಿನಗಳಲ್ಲಿ ನಡೆಯಲಿದೆ ಎಂದು ಕನ್ವಿನರ್ ಕೆಎಮ್ ಕೆ ಮಂಜನಾಡಿ ಹೇಳಿದರು. ಅವರು ತೊಕ್ಕೊಟ್ಟು ಪ್ರೆಸ್ ಕ್ಲಬ್ ನಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ,ಮೇ 13 ಬುಧವಾರ ಬೆಳಿಗ್ಗೆ ಆರು ಗಂಟೆಗೆ ಸಯ್ಯಿದ್ ಜಲಾಲುದ್ದೀನ್ ತಂಙಳ್ ಮಲ್ಹರ್ ರವರ ನೇತೃತ್ವದಲ್ಲಿ ಖತಮುಲ್ ಕುರ್ ಆನ್ ಮತ್ತು ಮೌಲಿದ್ ಮಜ್ಲಿಸ್ ನಡೆಯಲಿದೆ. ಅದೇ ದಿನ ರಾತ್ರಿ 7ಕ್ಕೆ ಸಯ್ಯಿದ್ ಮುಖ್ತಾರ್ ತಂಙಳ್ ಕುಂಬೋಲ್ ರವರ ನೇತೃತ್ವದಲ್ಲಿ ಜಲಾಲಿಯಾ ಮಜ್ಲಿಸ್ ನಡೆಯಲಿದೆ.ಮೇ 14ನೇ ಗುರುವಾರ ಸಂಜೆ 4 ಗಂಟೆಗೆ ಅನಿವಾಸೀ ಭಾರತೀಯರ ಸ್ನೇಹ ಸಂಗಮ, ಗಲ್ಫ್ ಮೀಟ್ ನಡೆಯಲಿದೆ.. ಅದೇ ದಿನ ರಾತ್ರಿ…

