Author: UllalaVani

Kannada News From Coastal Karnataka

ಅಸೈಗೋಳಿ; ಹಿಂದೆ ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದ ಹಿರಿಯ ಕಾಂಗ್ರೆಸ್ ಮುಖಂಡ ಸಂತೋಷ್ ಶೆಟ್ಟಿ ಅಸೈಗೋಳಿ ಮರಳಿ ಕಾಂಗ್ರೆಸ್ಸಿಗೆ ಬರುವ ಎಲ್ಲಾ ಲಕ್ಷಣಗಳು ಗೋಚರಿಸಿವೆ. ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿದ್ದುಕೊಂಡು ಕಾಂಗ್ರೆಸ್ಸಿನಲ್ಲಿ ಸಕ್ರಿಯವಾಗಿದ್ದ ಸಂತೋಷ್ ಶೆಟ್ಟಿ ಅಸೈಗೋಳಿ, ಬಳಿಕ ಕಾಂಗ್ರೆಸ್ಸನ್ನು ತೊರೆದು ಉಳ್ಳಾಲ ಶಾಸಕರ ವಿರುದ್ಧ ಮಂಗಳೂರಿನಲ್ಲಿ ಸುದ್ಧಿಗೋಷ್ಠಿ ನಡೆಸಿ ಆರೋಪಗಳ ಸುರಿಮಳೆಯನ್ನೇ ಗೈದಿದ್ದರು. ತದನಂತರ ಮಂಗಳೂರು ಮಂಡಲ ಬಿಜೆಪಿ ಹಮ್ಮಿಕೊಂಡಿದ್ದ ಸಭೆಯಲ್ಲಿ ಅಧಿಕೃತವಾಗಿ ಸೇರ್ಪಡೆಗೊಂಡು ಬಿಜೆಪಿಯಲ್ಲಿಯೂ ಪಕ್ಷದ ಜವಾಬ್ದಾರಿಯನ್ನು ಪಡೆದುಕೊಂಡಿದ್ದರು. ಇದೀಗ ಪಟ್ಟೋರಿಯಲ್ಲಿ ನಡೆದ ವರ್ಷಾವಧಿ ಜಾತ್ರೆ ಪ್ರಯುಕ್ತ ವಿಧಾನಸಭಾಧ್ಯಕ್ಷರು ಯು.ಟಿ.ಖಾದರ್, ಸಹೋದರ ಯು.ಟಿ.ಇಫ್ತಿಕಾರ್ ಆಲಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಸಂತೋಷ್ ಶೆಟ್ಟಿ ಅಸೈಗೋಳಿ ಅವರ ಮನಗೆ ಭೇಟಿ ನೀಡಿದ್ದಾರೆ. ಇದರಿಂದ ಮತ್ತೊಮ್ಮೆ ಸಂತೋಷ್ ಶೆಟ್ಟಿ ಅಸೈಗೋಳಿ ಶಾಸಕರ ಜತೆಗಿದ್ದ ಮುನಿಸು ಮರೆತು ಕಾಂಗ್ರೆಸ್ಸಿನತ್ತ ವಾಲಿರುವುದು ಸ್ಪಷ್ಟ ಅನ್ನುವ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿಬಂದಿದೆ. ಇನ್ನು ಮುನಿಸಿನ ಸಂದರ್ಭದಲ್ಲಿ ಇವರ ಜೊತೆಗೆ ಬಿಜೆಪಿ ಪಕ್ಷದಲ್ಲಿದ್ದವರ ನಡೆ ಏನೆಂಬುವುದು ಕುತೂಹಲ ಮೂಡಿಸಿದೆ.

Read More

ಕೊಣಾಜೆ: ನರಿಂಗಾನ ಸಾಮರಸ್ಯದ ಗ್ರಾಮವಾಗಿ ರೂಪುಗೊಂಡು ಇದೀಗ ಗ್ರಾಮಕ್ಕೆ ಪೂರಕವಾಗಿ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆದು ಇಡೀ ರಾಜ್ಯಕ್ಕೆ ಮಾದರಿಯಾಗಿದೆ ಎಂದು ವಿಧಾನಸಭಾ ಅಧ್ಯಕ್ಷರಾದ ಯು.ಟಿ.ಖಾದರ್ ಅವರು ಹೇಳಿದರು. ನರಿಂಗಾನ ಗ್ರಾಮ ಪಂಚಾಯತ್ ವಠಾರದಲ್ಲಿ ಗಾಂಧಿ ಪ್ರತಿಮೆ ಅನಾವರಣ,ಗ್ರಾಮ ವ್ಯಾಪ್ತಿಯ ಬೋಳದಲ್ಲಿ ನಿರ್ಮಿಸಲಾದ ಸ್ವಚ್ಛ ಸಂಕೀರ್ಣ ಮತ್ತು ಮಲತ್ಯಾಜ್ಯ ಘಟಕ ಉದ್ಘಾಟನೆ,ಆಶಾ ಕಾರ್ಯಕರ್ತೆಯರಿಗೆ ಸ್ಕೂಟರ್ ಹಸ್ತಾಂತರ,ಹಕ್ಕುಪತ್ರ ವಿತರಣೆ,ನೀರಿನ ಟ್ಯಾಂಕ್ ಉದ್ಘಾಟನೆ,ವಿಶೇಷ ಚೇತನರಿಗೆ ಚೆಕ್ ವಿತರಣೆ ಸೇರಿದಂತೆ ನರಿಂಗಾನ ಗ್ರಾಮದಲ್ಲಿ ಐದು ಕೋಟಿ ಅನುದಾನದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮಂಗಳವಾರದಂದು ಉದ್ಘಾಟಿಸಿ ಅವರು ಮಾತನಾಡಿದರು. ಉಳ್ಳಾಲ ಕ್ಷೇತ್ರದಲ್ಲಿ 20 ಕೋಟಿ ಅನುದಾನದಲ್ಲಿ ಸೈಬರ್ ಸೆಕ್ಯೂರಿಟಿ ಜಾರಿಗೆ ತರಲು ಯೋಚಿಸಲಾಗಿದ್ದು ಉನ್ನತ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ.ಇದು ಜಾರಿಯಾದಲ್ಲಿ ಅಪರಾಧ ಸಹಿತ ಎಲ್ಲಾ ರೀತಿಯ ಸಮಸ್ಯೆಗಳಿಗೂ ಕಡಿವಾಣ ಹಾಕಲು ಸಾಧ್ಯ. ನರಿಂಗಾನ ಗ್ರಾಮಸ್ಥರಿಗೆ ಈ ಮೊದಲು ನೀಡಿದ ಭರವಸೆಯಂತೆ 24 ಗಂಟೆ ಕುಡಿಯುವ ನೀರು, ರಸ್ತೆ, ಶಿಕ್ಷ‌ಣ ಸೇರಿದಂತೆ ಇನ್ನಿತರ ಅಭಿವೃದ್ಧಿ ಕೆಲಸಗಳು ನರಿಂಗಾನ ಗ್ರಾಮದಲ್ಲಿ…

Read More

ಉಳ್ಳಾಲ : ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ ವಾರಾಹಿ ಪಂಜುರ್ಲಿಗೆ ನೀಡಿದ್ದ ಹರಕೆ ನೇಮೋತ್ಸವದ ವಿವಾದದಲ್ಲಿ ದೈವಾರಾಧನೆಯ ಚಿಂತಕ ತಮ್ಮಣ್ಣ ಶೆಟ್ಟಿಯವರು ಕೊಂಡಾಣ ಕ್ಷೇತ್ರದ ದೈವದ ಬಂಗಾರ ಅಡವಿಟ್ಟ ಬಗ್ಗೆ ವೈಯಕ್ತಿಕ ಆರೋಪ ಮಾಡಿದ್ದ ಕದ್ರಿ ಬಾರೆಬೈಲಿನ ಜಾರಂದಾಯ, ಬಂಟ ಮತ್ತು ವಾರಾಹಿ ಪಂಜುರ್ಲಿ ದೈವಸ್ಥಾನದ ಆಡಳಿತ ಕಮಿಟಿಯ ಗೌರವಾಧ್ಯಕ್ಷ ರವಿ ಪ್ರಸನ್ನ ಅವರು ಕೋಟೆಕಾರು ಗ್ರಾಮದ ಕಾರಣಿಕ ಕ್ಷೇತ್ರ ಕೊಂಡಾಣ ಪಿಲಿಚಾಮುಂಡಿ, ಬಂಟ, ಮುಂಡತ್ತಾಯ ಕ್ಷೇತ್ರಕ್ಕೆ ಸುಮಾರು ನಲ್ವತ್ತರಷ್ಟು ಬೆಂಬಲಿಗರೊಂದಿಗೆ ಭೇಟಿ ನೀಡಿ ದೈವಗಳೆದುರು ಕ್ಷಮೆ ಯಾಚಿಸಿ ತಪ್ಪು ಕಾಣಿಕೆ ಹಾಕಿದ್ದಾರೆ. ಈ ವೇಳೆ ಕುಡ್ಲ ರಾಂಪೇಜ್ ನ ಅಜಯ್ ಅಂಚನ್ ಮೇಲೆ ರವಿ ಪ್ರಸನ್ನ ಬೆಂಬಲಿಗರು ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ. ರಿಷಬ್‌ ಶೆಟ್ಟಿ ವಾರಾಹಿ ಪಂಜುರ್ಲಿಗೆ ಸಲ್ಲಿಸಿದ್ದ ಹರಕೆ ನೇಮ ಮತ್ತು ನೇಮದಲ್ಲಿ ದೈವ ನರ್ತಕ ಅತಿರೇಕವಾಗಿ ವರ್ತಿಸಿದ್ದಾರೆಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ಕೇಳಿಬಂದು ವಿವಾದ ರೂಪ ಪಡೆದ ವಿಚಾರದಲ್ಲಿ ಸ್ವತಃ ಕದ್ರಿ ಬಾರೆಬೈಲಿನ ಜಾರಂದಾಯ, ಬಂಟ…

Read More

ಬೆಂಗಳೂರು, ಡಿಸೆಂಬರ್​ 23: ಕಾಂಗ್ರೆಸ್​​ ನಾಯಕ ರಾಹುಲ್ ಗಾಂಧಿಗೆ ಮಾಜಿ ಸಚಿವ ಕೆ.ಎನ್. ರಾಜಣ್ಣ ಮತ್ತೊಂದು ಪತ್ರ ಬರೆದಿದ್ದಾರೆ. ವೋಟ್​​ ಚೋರಿ ಅಭಿಯಾನದ ಬಗ್ಗೆ ತಮ್ಮ ಹೇಳಿಕೆಯನ್ನು ಹೇಗೆ ತಪ್ಪಾಗಿ ಅರ್ಥೈಸಲಾಗಿದೆ ಎಂಬುದರ ಬಗ್ಗೆ ಸಂಭಾಷಣೆ ಸಮೇತ ಪತ್ರದಲ್ಲಿ ಉಲ್ಲೇಖಿಸಲಾಗಿದ್ದು, ಭೇಟಿಗೂ ಸಮಯ ಕೇಳಿದ್ದಾರೆ. ಈಗಾಗಲೇ ನಾಲ್ಕು ಪತ್ರಗಳನ್ನು ಬರೆದಿರುವ ರಾಜಣ್ಣ, ರಾಜ್ಯದಲ್ಲಿನ ವಿದ್ಯಮಾನದಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್ ಬಗ್ಗೆಯೂ ಅವುಗಳಲ್ಲಿ ಉಲ್ಲೇಖಿಸಿದ್ದರು. ಸಿದ್ದರಾಮಯ್ಯರನ್ನು ಸಿಎಂ ಸ್ಥಾನದಿಂದ ಕೈ ಬಿಟ್ಟರೆ ಆಗುವ ಡ್ಯಾಮೇಜ್ ಬಗ್ಗೆಯೂ ಮನವರಿಕೆ ಯತ್ನ ಮಾಡಿದ್ದರು. ರಾಜಣ್ಣ ಬರೆದ ಪತ್ರದಲ್ಲೇನಿದೆ? ತಾನು ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರದ ಪ್ರಸ್ತುತ ಶಾಸಕನಾಗಿದ್ದು, ಕರ್ನಾಟಕ ಸರ್ಕಾರದಲ್ಲಿ ಸಹಕಾರ ಸಚಿವನಾಗಿಯೂ ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವನಾಗಿಯೂ ಈ ಹಿಂದೆ ಸೇವೆ ಸಲ್ಲಿಸಿದ್ದೇನೆ. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಸಚಿವ ಸಂಪುಟದಿಂದ ತನ್ನನ್ನು ಕೈಬಿಟ್ಟಿರುವ ಹಿನ್ನೆಲೆಯಲ್ಲಿ, ಕೆಲ ಪ್ರಮುಖ ವಿಷಯಗಳನ್ನು ಗಮನಕ್ಕೆ ತರುತ್ತಿದ್ದೇನೆ ಎಂದು ಪತ್ರದಲ್ಲಿ ರಾಜಣ್ಣ ಹೇಳಿದ್ದಾರೆ. ವೋಟ್ ಚೋರಿ ಕಾರ್ಯಕ್ರಮವನ್ನು ತಾನು…

Read More

ಮಂಗಳೂರು,ಡಿ.23: ಮಂಗಳೂರು ಜಿಲ್ಲಾ ಕಾರಾಗೃಹಕ್ಕೆ ರಾಜ್ಯಾದ್ಯಂತ ಕಾರಾಗೃಹಗಳಲ್ಲಿ ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಹೊಸದಾಗಿ ನೇಮಕಗೊಂಡ ಪೊಲೀಸ್ ಮಹಾನಿರ್ದೇಶಕ (ಕಾರಾಗೃಹ) ಅಲೋಕ್ ಕುಮಾರ್ ಭೇಟಿ ನೀಡಿ ಸಮಗ್ರವಾಗಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅಲೋಕ್ ಕುಮಾರ್, ರಾಜ್ಯದ ಎಲ್ಲಾ ಜೈಲುಗಳನ್ನು ಹಂತ ಹಂತವಾಗಿ ಪರಿಶೀಲಿಸಲಾಗುವುದು ಎಂದು ಹೇಳಿದರು. ಮಂಗಳೂರು ಜೈಲು ಸೂಕ್ಷ್ಮ ಪ್ರದೇಶದಲ್ಲಿದೆ ಮತ್ತು ಆದ್ದರಿಂದ ಅದರ ಭದ್ರತಾ ವ್ಯವಸ್ಥೆಗಳಿಗೆ ವಿಶೇಷ ಆದ್ಯತೆ ನೀಡಲಾಗಿದೆ ಎಂದು ಅವರು ಹೇಳಿದರು. ಜೈಲಿನೊಳಗೆ ಶಿಸ್ತು ಉಲ್ಲಂಘಿಸುವ ಮತ್ತು ಗಲಭೆಯಲ್ಲಿ ತೊಡಗಿರುವ ಕೈದಿಗಳನ್ನು ಈಗಾಗಲೇ ಗುರುತಿಸಿ ಇತರ ಜಿಲ್ಲೆಗಳ ಜೈಲುಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು. ಜೈಲಿನೊಳಗೆ ಮೊಬೈಲ್ ಫೋನ್‌ಗಳನ್ನು ಹೇಗೆ ಪೂರೈಸಲಾಗುತ್ತಿದೆ ಎಂಬುದರ ಕುರಿತು ವಿವರವಾದ ತನಿಖೆ ನಡೆಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಜಿಪಿ ಹೇಳಿದರು. ಮೊಬೈಲ್ ಜಾಮರ್‌ಗಳ ಸಮಸ್ಯೆಗಳ ಕುರಿತು ದೂರುಗಳನ್ನು ಉಲ್ಲೇಖಿಸಿದ ಅವರು, ಸಮಸ್ಯೆಯನ್ನು ಪರಿಹರಿಸಲು ಮತ್ತು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸುಧಾರಣೆಗಳನ್ನು ತರುವ ನಿಟ್ಟಿನಲ್ಲಿ ಶೀಘ್ರದಲ್ಲೇ ಸಭೆ ನಡೆಸಲಾಗುವುದು ಎಂದರು.…

Read More

ಹಳೇಕೋಟೆ;ಸರಕಾರವು ಇಂದು ಸರಕಾರಿ ಶಾಲೆಗಳ ಎಲ್ಲಾ ವ್ಯವಸ್ಥೆಗಳೊಂದಿಗೆ ಉತ್ತಮವಾದ ಬೆಳವಣಿಗೆಗೆ ಪೂರಕವಾದ ವ್ಯವಸ್ಥೆಗಳನ್ನು ಕೈಗೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ತನ್ನ ಕನ್ನಡ ಮಾಧ್ಯಮ ಶಾಲೆಗಳಿಗೆ ಬಹಳಷ್ಟು ವ್ಯವಸ್ಥೆಯನ್ನು ಮಾಡುವುದು ಶ್ಲಾಘನೀಯ ಎಂದು ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶಶಿಧರ್ ಅವರು ಹೇಳಿದರು. ಇವರು ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಳೇಕೋಟೆಯಲ್ಲಿ ನಡೆಸಲ್ಪಾಡುತಿರುವ ಸಯ್ಯದ್ ಮದನಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಮತ್ತು ಸಯ್ಯದ್ ಮದನಿ ಪ್ರೌಢ ಶಾಲೆಗಳ ವಾರ್ಷಿಕೋತ್ಸವದ ಮುಖ್ಯ ಶಿಕ್ಷರಾಗಿ ಮಾತನಾಡಿದರು. ಈ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಉಚಿತ ಬಸ್ಸಿನ ವ್ಯವಸ್ಥೆ, ಉಚಿತ ಸಮವಸ್ತ್ರ ಹಾಗು ಇತರ ಶೈಕ್ಷಣಿಕ ಸಲಕರಣೆಯನ್ನು ಒದಗಿಸುವುದು ಶ್ಲಾಘನೀಯ ಎಂದರು. ಸಯ್ಯದ್ ಮದನಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷರಾದ ಜನಾಬ್ ಬಿ. ಜಿ. ಹನೀಫ್ ಹಾಜಿಯವರ ಅಧ್ಯಕ್ಷತೆಯಲ್ಲಿ ನಡೆದ ಸಮಾರಂದಲ್ಲಿ ಯುವ ಉದ್ಯಮಿ ಅಲೈನ್ಸ್ ಪ್ರಾಪರ್ಟಿಸ್ ಮಾಲಕರಾದ ಹನೀಫ್ ಮೈಸೂರ್, ದಕ್ಷಿಣ ಕನ್ನಡ ಜಿಲ್ಲಾ…

Read More

ಕಣಚೂರು;ವೈದ್ಯರನ್ನು ದೇವರ ಸ್ಥಾನದಲ್ಲಿ ನೋಡುವ ಸಂಸ್ಕೃತಿ ಭಾರತೀಯರದ್ದು. ಭಾರತೀಯ ವೈದ್ಯರ ಸಾಮರ್ಥ್ಯ ಹಾಗೂ ವೃತ್ತಿ ನಿಷ್ಠೆ ಬೇರೆ ಯಾವ ದೇಶದಲ್ಲೂ ಕಾಣಲು ಸಾಧ್ಯವಿಲ್ಲ. ಇಂತಹ ಭಾರತೀಯ ವೈದ್ಯ ಪರಂಪರೆಯ ಮಹತ್ವವನ್ನು ಅರಿತುಕೊಂಡು ಆ ಪರಂಪರೆಯನ್ನು ಮುನ್ನಡೆಸಿಕೊಂಡು ಹೋಗುವ ಜವಬ್ದಾರಿ ಇಂದಿನ ಯುವ ವೈದ್ಯರಿಗಿದೆ ಎಂದು ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಹೇಳಿದ್ದಾರೆ. ಇವರು ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜಿನ ಎಂಬಿಬಿಎಸ್‌ನ ಪ್ರಥಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳಿಗೆ ವೈಟ್‌ಕೋಟ್ ವಿತರಣಾ ಸಮಾರಂಭದಲ್ಲಿ ಮಾತನಾಡಿದರು. ವೈದ್ಯಕೀಯ ವೃತಿ ಕೇವಲ ವೃತ್ತಿ ಮಾತ್ರವಲ್ಲ ಜನರ ಆರೋಗ್ಯ ಜೀವದ ರಕ್ಷಣೆಯೊಂದಿಗೆ ನಮ್ಮ ಸಮಾಜಕ್ಕೆ ರಾಷ್ಟçಕ್ಕೆ ಅವರ ಕೊಡುಗೆ ಅಪಾರವಾದುದು. ಈ ವೃತ್ತಿ ಬದುಕಿಗೆ ಸ್ಪೂರ್ತಿಯೂ ಹೌದು, ತಪಸ್ಸು ಕೂಡಾ ಆಗಿದೆ ಎಂದರು. ನರೇಂದ್ರ ಮೋದಿಯವರು ಪ್ರಧಾನಮಂತ್ರಿಯಾದ ಬಳಿ ದೇಶದ ಜನರ ವೈದ್ಯಕೀಯ ಕ್ಷೇತ್ರ ಮತ್ತು ಆರೋಗ್ಯ ಸಂರಕ್ಷಣೆಯ ವಲಯಗಳಲ್ಲಿ ಅನೇಕ ಮಹತ್ತರವಾದ ಬದಲಾವಣೆಗಳಾಗಿವೆ. ಆಯುಷ್ಮಾನ್ ಭಾರತ್, ಪ್ರಧಾನಮಂತ್ರಿ ಜನೌಷಧಿ ಯೋಜನೆ, ಇಂದ್ರಧನುಷ್ ಸೇರಿದಂತೆ ಅನೇಕ ಯೋಜನೆಗಳ ಮೂಲಕ ಹೆಲ್ತ್…

Read More

ಉಳ್ಳಾಲ: ದಿನಾಂಕ 14/11/2025 ರಂದು ಉಳ್ಳಾಲ ತಾಲೂಕಿನ ಕುಂಪಲ ಮೂರು ಕಟ್ಟೆ ಪ್ರದೇಶದಲ್ಲಿ ನಾಯಿ ಕಚ್ಚಿದ ಪರಿಣಾಮ ದಯಾನಂದ (60) ಎಂಬವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೇವಲ ಒಂದು ಅಪಘಾತವಲ್ಲ, ಬದಲಾಗಿ ಸ್ಥಳೀಯ ಆಡಳಿತದ ಗಂಭೀರ ನಿರ್ಲಕ್ಷ್ಯದ ಕಳಂಕವನ್ನು ಹೊತ್ತು ತಂದ ದುರಂತವಾಗಿದೆ. ಈ ಸಂಬಂಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಯು.ಡಿ.ಆರ್ (ಅಸಹಜ ಸಾವು ಪ್ರಕರಣ) ದಾಖಲಾಗಿದ್ದು, ಪೋಸ್ಟ್ ಮಾರ್ಟಮ್ ವರದಿ ಈಗಾಗಲೇ ಠಾಣೆಗೆ ತಲುಪಿದೆ. ವರದಿಯಲ್ಲಿ ಪ್ರಾಣಿ ಕಚ್ಚಿದ ಪರಿಣಾಮ ಸಾವು ಸಂಭವಿಸಿದೆ ಎಂದು ಉಲ್ಲೇಖವಾಗಿದೆ. ಆದರೆ, ಇದು ನಾಯಿ ಕಚ್ಚಿ ಸಂಭವಿಸಿದ ಸಾವು ಆಗಿದೆಯೇ ಅಥವಾ ಇತರೆ ಯಾವುದೇ ಪ್ರಾಣಿ ಕಚ್ಚಿದ ಪರಿಣಾಮವೋ ಎಂಬುದನ್ನು ಖಚಿತಪಡಿಸಿಕೊಳ್ಳಲು ಹೆಚ್ಚಿನ ತನಿಖೆಯ ಅವಶ್ಯಕತೆ ಇರುವುದರಿಂದ, ಪ್ರಕರಣವನ್ನು ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ, ಮಂಗಳೂರು ಗೆ ಕಳುಹಿಸಲಾಗಿದೆ. ಆದರೆ, ಘಟನೆಗೆ ಒಂದು ತಿಂಗಳಿಗಿಂತ ಹೆಚ್ಚು ಕಾಲ ಕಳೆದರೂ ನ್ಯಾಯ ವಿಜ್ಞಾನ ಪ್ರಯೋಗಾಲಯದ ಅಂತಿಮ ವರದಿ ಇನ್ನೂ ಉಳ್ಳಾಲ ಪೊಲೀಸ್ ಠಾಣೆಗೆ ತಲುಪಿಲ್ಲ. ಈ…

Read More

ತೊಕ್ಕೊಟ್ಟು; ತೊಕ್ಕೊಟ್ಟುವಿನಲ್ಲಿ ಕಾರ್ಯಾಚರಿಸುತ್ತಿರುವ ಅಮೂಲ್ ಐಸ್‌ಕ್ರೀಂ ಪಾರ್ಲರ್ 6ನೇ ವರ್ಷವನ್ನು ಪೂರೈಸಿದೆ. ಈ ಹಿನ್ನಲೆ ಪಾರ್ಲರ್ ಮಾಲಕರಾದ ಜಯಪ್ರಕಾಶ್, ನಮಿತಾ ದಂಪತಿ ನೇತೃತ್ವದಲ್ಲಿ ಲಕ್ಕಿ ಕೂಪನ್ ಡ್ರಾ ನಡೆದಿದೆ. ಹೌದು, ಸದಾ ಗ್ರಾಹಕರ ನೆಚ್ಚಿನ ಐಸ್‌ಕ್ರೀಂ ಪಾರ್ಲರ್ ಆಗಿರುವ ಅಮೂಲ್ ಐಸ್‌ಕ್ರೀಂ ಪಾರ್ಲರ್ ತನ್ನ 6ನೇ ವಾರ್ಷಿಕೋತ್ಸವದ ಪ್ರಯುಕ್ತ ಬಿಗ್ ಆಫರ್ ಇಟ್ಟಿತ್ತು. ಫ್ರೀ ಕೂಪನ್ ಪಡೆದ ಗ್ರಾಹಕರ ಪೈಕಿ ಮೊದಲ ಅದೃಷ್ಟಶಾಲಿ ಬಹುಮಾನವನ್ನು ಗ್ರಾಹಕರಾದ ವಜ್ರ ಅವರು ಪಡೆದುಕೊಂಡಿದ್ದಾರೆ. ಎರಡನೇ ಅದೃಷ್ಟಶಾಲಿ ಬಹುಮಾನವನ್ನು ಮೊಹಮ್ಮದ್ ಸಮದ್ ಅವರು ತಮ್ಮದಾಗಿಸಿಕೊಂಡರೆ, ಮೂರನೇ ಬಹುಮಾನವನ್ನು ರೋದಿ ಮೋತೆರೋ ಅವರು ಪಡೆದುಕೊಂಡಿದ್ದಾರೆ. ಇನ್ನುಳಿದಂತೆ 10 ಅದೃಷ್ಟಶಾಲಿ ಗ್ರಾಹಕರು ಗಿಫ್ಟ್ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಅಮೂಲ್ ಐಸ್‌ಕ್ರೀಂ ಅಂದರೆ ಯಾರಿಗೆ ತಾನೇ ಇಷ್ಟ ಆಗಲ್ಲಾ..? ಸಣ್ಣಮಕ್ಕಳಿಂದ ಹಿಡಿದು ಪ್ರತಿಯೊಬ್ಬರಿಗೂ ಅಮೂಲ್ ಬ್ರಾö್ಯಂಡ್ ಐಸ್‌ಕ್ರೀಂ ಅಂದರೆ ಬಲುಇಷ್ಟ. ಸಂತಸದ ಕ್ಷಣಗಳನ್ನು ಅಮೂಲ್ ಐಸ್‌ಕ್ರೀಂ ಜೊತೆ ಕಳೆಯಿರಿ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ; 7349238233, 9611263985

Read More

ಮಂಗಳೂರು, ಡಿ. 23: ನವ ಮಂಗಳೂರು ಬಂದರು ಪ್ರಾಧಿಕಾರ (NMPA) 2025–26ರ ಕ್ರೂಸ್‌ ಋತುವಿನ ಆರಂಭಕ್ಕೆ ಅಧಿಕೃತ ಚಾಲನೆ ನೀಡಿದ್ದು, ಮೊದಲ ಐಷಾರಾಮಿ ಕ್ರೂಸ್ ಹಡಗು ಎಂಎಸ್ ಸೆವೆನ್ ಸೀಸ್ ನ್ಯಾವಿಗೇಟರ್ ಶನಿವಾರ ಮಂಗಳೂರಿಗೆ ಆಗಮಿಸಿದೆ. ಹಡಗು ಬೆಳಿಗ್ಗೆ 6.15ಕ್ಕೆ ಬಂದರು ತಲುಪಿದ್ದು, 7.15ಕ್ಕೆ ಬರ್ತ್ ಸಂಖ್ಯೆ-4ರಲ್ಲಿ ಲಂಗರು ಹಾಕಿತು. ಬಹಾಮಾಸ್ ಧ್ವಜದ ಅಡಿಯಲ್ಲಿ ಸಂಚರಿಸುತ್ತಿರುವ ಈ ಕ್ರೂಸ್ ಹಡಗು ಒಟ್ಟು 172.50 ಮೀಟರ್ ಉದ್ದ, 7.50 ಮೀಟರ್ ಡ್ರಾಫ್ಟ್ ಮತ್ತು 28,803 ಗ್ರಾಸ್ ಟನ್ನೇಜ್ ಹೊಂದಿದೆ. ಮೊರ್ಮುಗಾವೊ ಬಂದರಿನಿಂದ ಮಂಗಳೂರಿಗೆ ಆಗಮಿಸಿದ ಈ ಹಡಗಿನಲ್ಲಿ 450 ಪ್ರಯಾಣಿಕರು ಹಾಗೂ 360 ಸಿಬ್ಬಂದಿ ಸದಸ್ಯರು ಪ್ರಯಾಣಿಸುತ್ತಿದ್ದರು.ಅಂತರರಾಷ್ಟ್ರೀಯ ಕ್ರೂಸ್ ಪ್ರವಾಸಿಗರಿಗೆ ನವ ಮಂಗಳೂರು ಬಂದರು ಪ್ರಾಧಿಕಾರವು ಹಾರ್ದಿಕ, ಸಾಂಪ್ರದಾಯಿಕ ಸ್ವಾಗತ ನೀಡಿತು. ಕರಾವಳಿ ಭಾಗದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪರಿಚಯಿಸುವ ಉದ್ದೇಶದಿಂದ ವಿಶೇಷ ವ್ಯವಸ್ಥೆಗಳನ್ನು ಕೈಗೊಳ್ಳಲಾಗಿತ್ತು. ಪ್ರವಾಸಿಗರಿಗೆ ಸುಗಮ ಹಾಗೂ ಸ್ಮರಣೀಯ ಅನುಭವ ಒದಗಿಸುವ ನಿಟ್ಟಿನಲ್ಲಿ NMPA ಹಾಗೂ ಸಂಬಂಧಿತ ಎಲ್ಲಾ ಇಲಾಖೆಗಳು ವ್ಯಾಪಕ…

Read More