Author: UllalaVani

Kannada News From Coastal Karnataka

ಬೆಳ್ತಂಗಡಿ, ಮೇ. 11: ಕ್ಯಾಂಟೀನ್ ಹೆಸರಲ್ಲಿ ನಡೆಯುತ್ತಿದ್ದ ಅಕ್ರಮ ವೇಶ್ಯಾವಾಟಿಕೆ ದಂಧೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮೂವರನ್ನು ಬಂಧಿಸಿರುವ ಘಟನೆ ಬೆಳ್ತಂಗಡಿ ನಗರ ಪಂಚಾಯತ್ ವ್ಯಾಪ್ತಿಯ ಕೆ.ಇ.ಬಿ. ರಸ್ತೆಯಲ್ಲಿ ನಡೆದಿದೆ. ಬಂಧಿತರನ್ನು ಕ್ಯಾಂಟೀನ್ ಮಾಲೀಕ ಸುಂದರ್ ಶೆಟ್ಟಿ(55) ಹಾಗೂ ಗ್ರಾಹಕರಾದ ಉಸ್ಮಾನ್(38) ಮತ್ತು ಹೈದರ್(45) ಎಂದು ಗುರುತಿಸಲಾಗಿದೆ.ಕೆ.ಇ.ಬಿ. ರಸ್ತೆಯಲ್ಲಿರುವ ‘ಪವನ್ ಕ್ಯಾಂಟೀನ್’ ಮೇಲೆ ಪೊಲೀಸರು ಹಠಾತ್ ದಾಳಿ ನಡೆಸಿದ್ದಾರೆ. ಸರ್ಕಾರಿ ಜಾಗದಲ್ಲಿ ಈ ಕ್ಯಾಂಟಿನ್ ಅನ್ನು ಕಳೆದ 20 ವರ್ಷಗಳಿಂದ ಕ್ಯಾಂಟೀನ್ ಮಾಲೀಕ ಸುಂದರ್ ಶೆಟ್ಟಿ ನಡೆಸುತ್ತಿದ್ದರು.ಪವನ್ ಕ್ಯಾಂಟೀನ್‌ನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ಪೊಲೀಸರು ಈ ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯ ವೇಳೆ 29 ವರ್ಷದ ಮಹಿಳೆಯೊಬ್ಬರನ್ನು ರಕ್ಷಿಸಲಾಗಿದ್ದು, ಘಟನಾ ಸ್ಥಳದಿಂದ 5,000 ರೂ. ನಗದು ವಶಪಡಿಸಿಕೊಳ್ಳಲಾಗಿದೆ.ಈ ಕುರಿತು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Read More

ಕೋಟೆಕಾರ್: ಬದ್ರಿಯಾ ವೆಲ್ಫೇರ್ ಸೊಸೈಟಿ ಅಜ್ಜಿನಡ್ಕ ಇದರ 40 ನೇ ವಾರ್ಷಿಕದ ಅಂಗವಾಗಿ ಫಾದರ್ ಮಲ್ಲರ್ ಆಸ್ಪತ್ರೆ, ಕಂಕನಾಡಿ ಹಾಗೂ ಏನಫೋಯ ಮೆಡಿಕಲ್ ಕಾಲೇಜ್ ಮತ್ತು ಬ್ಲಡ್ ಡೋನರ್ಸ್ (ರಿ), ಮಂಗಳೂರು ಇವರ ಸಹಯೋಗದಲ್ಲಿ ರಕ್ತದಾನ ಹಾಗೂ ವೈದ್ಯಕೀಯ ಶಿಬಿರ ಮೇ 10 ರವಿವಾರ ಬೆಳಿಗ್ಗೆ, 9 ರಿಂದ ಮಧ್ಯಾಹ್ನ 1 ಗಂಟೆ ವರೆಗೆ ದ ಕ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಹಲವಾರು ಮಂದಿ ರಕ್ತದಾನ ಮಾಡಿದರು ಹಾಗೂ ಉಚಿತ ಆರೋಗ್ಯ ತಪಾಸಣೆ ಶಿಬಿರದ ಸದುಪಯೋಗ ಪಡೆದುಕೊಂಡರು. ಅಧ್ಯಕ್ಷತೆ ವಹಿಸಿದ ಬದ್ರಿಯಾ ವೆಲ್ಫೇರ್ ಸೊಸೈಟಿ ಅಧ್ಯಕ್ಷ ಇರ್ಷಾದ್ ಅಜ್ಜಿನಡ್ಕ ಮಾತನಾಡಿದರು. ಬಂಟ್ವಾಳ ಸರ್ಕಾರಿ ಕಾಲೇಜಿನ ಉಪನ್ಯಾಸಕ ಎಸ್.ಎಂ.ಅಹ್ಮದ್, ಸಮಾಜ ಸೇವಕರಾದ ಇಬ್ರಾಹಿಂ ಕೊಮರಂಗಳ, ಯುಬಿಎಂ ರಹೀಮ್ ಉಚ್ಚಿಲ್, ಅಜ್ಜಿನಡ್ಕ ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಸುಲೈಮಾನ್, ಕೋಟೆಕಾರ್ ಪಟ್ಟಣ ಪಂಚಾಯಿತಿ ಕೌನ್ಸಿಲರ್ ಅಹ್ಮದ್ ಬಾವ ಅಜ್ಜಿನಡ್ಕ, ಇಸ್ಹಾಕ್, ಬದ್ರಿಯಾ ವೆಲ್ಫೇರ್ ಸೊಸೈಟಿ ಉಪಾಧ್ಯಕ್ಷ ಇಸ್ಮಾಯಿಲ್ ಸಿ.ಎಚ್., ರಕ್ತದಾನಿ ಅರ್ಷದ್ ಮೊದಲಾದವರು…

Read More

ಉಳ್ಳಾಲ: ಮೇ 10ರಂದು ಮಧ್ಯಾಹ್ನ ದೇರಳಕಟ್ಟೆಯಿಂದ ತೊಕ್ಕೊಟ್ಟು ಸಮೀಪದ ಸಾಗರ್ ಕಲೆಕ್ಷನ್ ವರೆಗೆ ಆಟೋದಲ್ಲಿ ಪ್ರಯಾಣಿಸಿದ್ದ ವೇಳೆ ಪರ್ಸ್ ಕಳೆದು ಹೋಗಿರುವ ಘಟನೆ ನಡೆದಿದೆ. ಕಳೆದುಹೋದ ಪರ್ಸ್‌ನಲ್ಲಿ ಸುಮಾರು ₹25,000 ನಗದು, ಅಗತ್ಯ ದಾಖಲೆಗಳು ಹಾಗೂ ಮನೆಯ ಕೀ ಇದ್ದುದಾಗಿ ತಿಳಿದುಬಂದಿದೆ. ಮನೆಗೆ ಹಿಂತಿರುಗಿದ ಬಳಿಕ ಪರ್ಸ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ತುಂಬಾ ಕಷ್ಟಪಟ್ಟು ಸಂಪಾದಿಸಿದ ಹಣವಾಗಿರುವುದರಿಂದ, ಪರ್ಸ್ ಸಿಕ್ಕವರು ಮಾನವೀಯತೆ ತೋರಿಸಿ ಹಿಂತಿರುಗಿಸುವಂತೆ ಮನವಿ ಮಾಡಲಾಗಿದೆ. ಪರ್ಸ್ ಕುರಿತು ಮಾಹಿತಿ ದೊರೆತಲ್ಲಿ ಈ ಸಂಖ್ಯೆಗೆ ಸಂಪರ್ಕಿಸಲು ಕೋರಲಾಗಿದೆ: 8904787031.

Read More

ಉಳ್ಳಾಲ, ಮೇ.11:  ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಸಮಾಜ ಒಡೆಯುತ್ತಿರುವ ಇಂದಿನ ದಿನಗಳಲ್ಲಿ, ಮಂಗಳೂರಿನ ಉಳ್ಳಾಲದ ಬಂದಿಕೋಟೆಯ ನಿವಾಸಿಗಳು ಮಾನವೀಯತೆ, ಕೋಮು ಸೌಹಾರ್ದತೆ ಮೆರೆದು ಮಾದರಿಯಾಗಿದ್ದಾರೆ. ಬಂದಿಕೋಟೆಯ ಸ್ಥಳೀಯ ದೇವಸ್ಥಾನವೊಂದರ ಉದ್ಘಾಟನಾ ಸಮಾರಂಭ ನಡೆಯುವುದರಲ್ಲಿತ್ತು. ಆದರೆ ಸಂಜೆ 4 ಗಂಟೆಗೆ ಸರಿಯಾಗಿ ಕಾರ್ಯಕ್ರಮಗಳು ಆರಂಭವಾಗಬೇಕಿತ್ತು. ಆದರೆ, ಅದೇ ಸಮಯದಲ್ಲಿ ಸ್ಥಳೀಯ ನಿವಾಸಿ ಹೈಡ್ರೋಸ್ ಎಂಬುವವರು ಹಠಾತ್ತನೆ ತೀವ್ರ ಅನಾರೋಗ್ಯಕ್ಕೆ ಒಳಗಾದರು. ತಕ್ಷಣವೇ ಕಾರ್ಯಪ್ರವೃತ್ತರಾದ ದೇವಸ್ಥಾನದ ಸಮಿತಿಯವರು ಮತ್ತು ನೆರೆದಿದ್ದ ಭಕ್ತರು, ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಹೈಡ್ರೋಸ್ ಕೊನೆಯುಸಿರೆಳೆದರು.ಹೈಡ್ರೋಸ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ, ದೇವಸ್ಥಾನದ ಸಮಿತಿ ಮತ್ತು ನೆರೆದಿದ್ದ ಭಕ್ತರು ಒಮ್ಮತದ ನಿರ್ಧಾರವೊಂದನ್ನು ತೆಗೆದುಕೊಂಡರು. ನೆರೆಯ ಮನೆಯಲ್ಲಿ ಸೂತಕವಿರುವಾಗ ಸಂಭ್ರಮ ಆಚರಿಸುವುದು ಸರಿಯಲ್ಲ ಎಂದು ಭಾವಿಸಿ, ದೇವಸ್ಥಾನದ ಉದ್ಘಾಟನಾ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಔತಣಕೂಟ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ತಕ್ಷಣವೇ ಸ್ಥಗಿತಗೊಳಿಸಿದರು.ರಾತ್ರಿ ಸುಮಾರು 9.30 ಗಂಟೆಗೆ ಹೈಡ್ರೋಸ್ ಅವರ ಅಂತ್ಯಕ್ರಿಯೆ ಪೂರ್ಣಗೊಳ್ಳುವವರೆಗೆ ದೇವಸ್ಥಾನದ ಎಲ್ಲಾ ಸಂಭ್ರಮದ…

Read More

ಬ್ರಹ್ಮಶ್ರೀ ಬಿಲ್ಲವ ವೇದಿಕೆ (ರಿ) ಉಳ್ಳಾಲ ಇದರ ವತಿಯಿಂದ ಮೇ 24ರಂದು ನಡೆಯುವ “ದತ್ತು ಸ್ವೀಕಾರ” ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಕೇಂದ್ರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ವೇದಿಕೆಯ ಗೌರವ ಅಧ್ಯಕ್ಷರಾದ ಏ ಜೆ ಶೇಖರ್ ಬಿಡುಗಡೆ ಗೊಳಿಸಿದರು. ವೇದಿಕೆಯ ಅಧ್ಯಕ್ಷರಾದ ಕೆ ಟಿ ಸುವರ್ಣ ಉಪಸ್ಥಿತರಿದ್ದರು. ಜೊತೆಗೆ ಕಾರ್ಯಾಧ್ಯಕ್ಷರು ಸತೀಶ್ ಕರ್ಕೇರಾ, ಪ್ರಧಾನ ಕಾರ್ಯದರ್ಶಿ ಆನಂದ್ ಅಸ್ಸೈಗೋಳಿ, ಕೋಶಾಧಿಕಾರಿ ಲಕ್ಷ್ಮಣ್ ಪೂಜಾರಿ, ಉಪಾಧ್ಯಕ್ಷರು ಹರೀಶ್ ಮುಂಡೋಲಿ, ಸಂಘಟನಾ ಕಾರ್ಯದರ್ಶಿಗಳಾದ ಹರೀಶ್ ಅಂಬ್ಲ ಮೊಗೇರ,ಭಗವಾನ್ ದಾಸ್, ಸುರೇಶ್ ಪಾಂಡವರ ಕಲ್ಲು, ಪ್ರವೀಣ್ ನೆರಿಯ, ಜಗದೀಶ್ ಕೆರೆಬೈಲ್, ರಾಜೇಶ್ ಯು ಬಿ ಕೆರೆಬೈಲ್,ಬ್ರಹ್ಮಶ್ರೀ ಬಿಲ್ಲವ ವೇದಿಕೆ ಮುಡಿಪು ವಲಯದ ಅಧ್ಯಕ್ಷರು ಲೋಕೇಶ್ ಪೂಜಾರಿ,ಬೆಳ್ಮ ಬಿಲ್ಲವ ಸಂಘದ ಗೌರವ ಅಧ್ಯಕ್ಷರು ರಾಜೀವ ಮಾಸ್ಟರ್, ಗ್ರಾಮ ಚಾವಡಿ ಯುವ ವಾಹಿನಿ ಪ್ರಮುಖರು ಅಜಿತ್ ಪಜೀರ್, ಗ್ರಾಮ ಚಾವಡಿ ಬಿಲ್ಲವ ಸಂಘದ ಮಾಜಿ ಅಧ್ಯಕ್ಷರು ಸುಭಾಸ್ ಬೋಳಿಯಾರ್, ದೇರಳಕಟ್ಟೆ ಬಿರುವೆರ್ ಕುಡ್ಲ ಸಂಘದ ಗೌರವ ಅಧ್ಯಕ್ಷರು ಪುರುಷೋತ್ತಮ ಅಂಚನ್,…

Read More

ಮಂಗಳೂರು ಮಂಡಲದ ವತಿಯಿಂದ ಪಂಚ ರಾಜ್ಯ ಚುನಾವಣೆಯಲ್ಲಿ ಪಶ್ಚಿಮ ಬಂಗಾಳ, ಅಸ್ಸಾಂ ಹಾಗೂ ಪುದುಚೇರಿಯಲ್ಲಿ ಬಿಜೆಪಿ ಪಕ್ಷವು ಪ್ರಚಂಡ ಬಹುಮತದಿಂದ ಜಯ ಭಾರಿಸಿದ ಪ್ರಯುಕ್ತ ಮುಡಿಪು, ಕಂಬ್ಳಪದವಿನ ಶ್ರೀ ದುರ್ಗಾಕಾಳಿ ದೇವಸ್ಥಾನದ ವಠಾರದಲ್ಲಿ ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷರಾದ ಜಗದೀಶ್ ಆಳ್ವ ಕುವೆತ್ತಬೈಲ್ ರವರ ಅಧ್ಯಕ್ಷತೆಯಲ್ಲಿ ವಿಜಯೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ ರವರು ಪಕ್ಷದ ಪ್ರಮುಖರನ್ನು ಉದ್ದೇಶಿಸಿ ಪಕ್ಷ ಪ್ರಚಂಡ ಬಹುಮತದಿಂದ ವಿಜಯಿಯಾಗಲು ರಾತ್ರಿ ಹಗಲು ಶ್ರಮಪಟ್ಟು ದುಡಿದ ಕಾರ್ಯಕರ್ತರಿಗೆ ಹಾಗೂ ಮತಧಾರ ಬಾಂಧವರಿಗೆ ಅಭಿನಂದನೆ ಸಲ್ಲಿಸಿದರು.ಮಂಡಲ ಪ್ರಭಾರಿ ಹಾಗೂ ಜಿಲ್ಲಾ ಉಪಾಧ್ಯಕ್ಷರಾದ ಪೂಜಾ ಪೈ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಮೋಹನ್ ರಾಜ್ ಕೆಆರ್, ದಯಾನಂದ ತೊಕ್ಕೋಟ್ಟು, ಆತ್ಮ ನಿರ್ಭರ ಭಾರತ್ ಇದರ ಜಿಲ್ಲಾ ಸಂಯೋಜಕರಾದ ಜಯಶ್ರೀ ಕರ್ಕೇರ, ಮಂಡಲ ಉಪಾಧ್ಯಕ್ಷರುಗಳಾದ ಸುಮನ ಹರೀಶ್ ಶೆಟ್ಟಿ, ಯಶವಂತ್ ದೇರಾಜೆ, ಹುಕ್ರಪ್ಪ ನಾಯ್ಕ, ಮಂಡಲ ಕಾರ್ಯದರ್ಶಿ ಗಳಾದ ಕಿಶೋರ್ ಕುತ್ತಾರ್, ಸುರೇಖಾ ಮುನ್ನೂರು, ಮಂಡಲ ಕಾರ್ಯಾಲಯ ಕಾರ್ಯದರ್ಶಿ…

Read More

ಎಂಸಿಸಿ ಬ್ಯಾಂಕ್ ವತಿಯಿಂದ 2026 ಏಪ್ರಿಲ್ 25 ಮತ್ತು 26ರಂದು ಗೋವಾದ Courtyard by Marriottನಲ್ಲಿ ಅಂತರರಾಜ್ಯ ಬ್ಯಾಂಕಿಂಗ್ ಸಂವಾದವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಬ್ಯಾಂಕಿನ ಹಿರಿಯ ಅಧಿಕಾರಿಗಳು, ಶಾಖಾ ವ್ಯವಸ್ಥಾಪಕರು, ಪೆಕ್ರಡಿಟ್ ಅಧಿಕಾರಿಗಳು, ಮುಂದಿನ ವ್ಯವಸ್ಥಾಪಕರು ಹಾಗೂ ನಿರ್ದೇಶಕ ಮಂಡಳಿಯ ಸದಸ್ಯರು ಭಾಗವಹಿಸಿದ್ದರು. ಬ್ಯಾಂಕಿಂಗ್ ಕ್ಷೇತ್ರದಲ್ಲಿ ಬದಲಾಗುತ್ತಿರುವ ಪರಿಸ್ಥಿತಿಗಳನ್ನು ಚರ್ಚಿಸುವುದು ಹಾಗೂ ಅಂತರರಾಜ್ಯ ಸಹಕಾರವನ್ನು ಉತ್ತೇಜಿಸುವುದು ಈ ಸಂವಾದದ ಮುಖ್ಯ ಉದ್ದೇಶವಾಗಿತ್ತು. ಈ ಸಂವಾದದ ಉದ್ಘಾಟನಾ ಕಾರ್ಯಕ್ರಮದಲ್ಲಿ ಎಂಸಿಸಿ ಬ್ಯಾಂಕ್ ಅಧ್ಯಕ್ಷರಾದ ಸಹಕಾರ ರತ್ನ ಅನಿಲ್ ಲೋಬೋ ಅವರು ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಗೋವಾ ಬೀನೌಲಿಂನ ಕ್ಯಾಟೆಕೆಟಿಕ್ಸ್ ಆಯೋಗದ ಕಾರ್ಯದರ್ಶಿ ವಂದನೀಯ ಫಾ| ವಿಜಯ ಮಚಾದೊ, ಗೋವಾ ಅರ್ಬನ್ ಸಹಕಾರ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಶ್ರೀ ಗೋಪಾಲಕೃಷ್ಣ ವೈ. ನಾಯಕ್, IIM Kozhikode ನ ವಿಸಿಟಿಂಗ್ ಪ್ರೊಫೆಸರ್ ಹಾಗೂ ಚಾರ್ಟರ್ಡ್ ಅಕೌಂಟೆಂಟ್ ಸಿಜೆ ಲಾಯ್ನಲ್ ಅರಾನ್ಹಾ, ದೈಜಿವರ್ಲ್ಡ್ ಮೀಡಿಯಾ ಪ್ರೈವೇಟ್ ಲಿಮಿಟೆಡ್‌ನ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ, ಮಿಲಾಗ್ರಿಸ್ ಕಾಲೇಜು…

Read More

ಖ್ಯಾತ ಸಾಹಿತಿ ವಲ್ಲಿ ವಗ್ಗ ಅವರು ಬರೆದಿರುವ ‘ವಿಂಚ್ಣಾರ್ ಕಾಣಿಯೊ’ ಪುಸ್ತಕದ ಲೋಕಾರ್ಪಣೆ ಸಮಾರಂಭವು 2026ರ ಮೇ 10ರಂದು ಸಂಜೆ 5:00 ಗಂಟೆಗೆ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಸಹೋದಯ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ಸೇಂಟ್ ಅಲೋಶಿಯಸ್ ವಿಶ್ವವಿದ್ಯಾಲಯದ ಉಪ ಕುಲಪತಿಗಳಾದ ರೆ. ಡಾ. ಪ್ರವೀಣ್ ಮಾರ್ಟಿಸ್, ಎಸ್.ಜೆ. ಮತ್ತು ಕೊಂಕಣಿ ಸಲಹಾ ಸಮಿತಿ, ಸಾಹಿತ್ಯ ಅಕಾಡೆಮಿ, ಹೊಸ ದೆಹಲಿಯ ಸಂಚಾಲಕರಾದ ಶ್ರೀ ಮೆಲ್ವಿನ್ ರೊಡ್ರಿಗಸ್ ಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಈ ಕೃತಿಯು ‘ಮೈಕಲ್ ಡಿಸೋಜಾ – ವಿಷನ್ ಕೊಂಕಣಿ’ ಸಂಸ್ಥೆಯಡಿಯಲ್ಲಿ ಲೂರ್ಡ್ಸ್ ಪ್ರಕಾಶನದಿಂದ ಪ್ರಕಟಗೊಂಡಿದೆ. ವಲ್ಲಿ ವಗ್ಗ ಎಂಬುದು ವಲೇರಿಯನ್ ಡಿಸೋಜಾ ಅವರ ಕಾವ್ಯನಾಮವಾಗಿದ್ದು, ಇವರು ಕೊಂಕಣಿ ಸಾಹಿತ್ಯ ಲೋಕದ ಚಿರಪರಿಚಿತ ಬರಹಗಾರರಾಗಿದ್ದಾರೆ. ಇವರ ಸಾಹಿತ್ಯ ಪಯಣವು 1964 ರಲ್ಲಿ ‘ರಾಕ್ಣೊ’ ಪತ್ರಿಕೆಯಲ್ಲಿ ಪ್ರಕಟವಾದ ಮೊದಲ ಕಥೆಯೊಂದಿಗೆ ಪ್ರಾರಂಭವಾಯಿತು. ಕಳೆದ ಹಲವಾರು ದಶಕಗಳಲ್ಲಿ ಅವರು ಸುಮಾರು 150 ಕೊಂಕಣಿ ಕಥೆಗಳು ಮತ್ತು 250 ಕವಿತೆಗಳನ್ನು ರಚಿಸಿದ್ದಾರೆ. ಈಗ ಬಿಡುಗಡೆಯಾಗುತ್ತಿರುವ…

Read More

ಕೊಣಾಜೆ: ಕನಕದಾಸರ ಕೀರ್ತನೆಗಳನ್ನು‌ ವಿವಿಧ ಅಧ್ಯಯನ ಶಿಸ್ತುಗಳ ಮೂಲಕ ನೋಡುವ ಅಗತ್ಯವಿದೆ. ಸಮಾಜಶಾಸ್ತ್ರ, ವಿಜ್ಞಾನ, ಇತಿಹಾಸ, ಆಯುರ್ವೇದ ಮೊದಲಾದ‌ ವಿವಿಧ ಅಧ್ಯಯನ ಶಾಖೆಗಳ ಮೂಲಕ ಗ್ರಹಿಸಲು ಸಾಕಷ್ಟು ಅವಕಾಶವಿದೆ. ಕನಕ ಕೇವಲ ಕವಿ ಮಾತ್ರ ಅಲ್ಲ. 60 ಕ್ಕೂ ಹೆಚ್ಚು ಕೆರೆಗಳನ್ನು ಕಟ್ಟಿಸಿದ ಬಗೆಗೆ ಶಾಸನಾಧಾರಗಳಿವೆ. ಕನಕದಾಸರ ಕಾವ್ಯೇತರ ಕಾರ್ಯಗಳ ಬಗೆಗೆ ಹೊಸಶೋಧಗಳು ನಡೆಯಬೇಕಿದೆ ಎಂದು ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದ ಸಹ ನಿರ್ದೇಶಕ ಡಾ.ಅನಿಲಕುಮಾರ ಬೊಮ್ಮಾಘಟ್ಟ ತಿಳಿಸಿದರು.ಅವರು ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಪೀಠ ಮತ್ತು ಕನಕದಾಸ  ಸಂಶೋಧನ  ಕೇಂದ್ರದ  ವತಿಯಿಂದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರೊ. ಬಿ.ಎ. ವಿವೇಕ ರೈ ವಿಚಾರ ವೇದಿಕೆಯಲ್ಲಿ ಬುಧವಾರ ನಡೆದ  ‘ಕನಕ ಸ್ಮೃತಿ’ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ಕನಕ ಪುರಸ್ಕಾರ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.  ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿ, ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಪಿ.ಎಲ್‌ ಧರ್ಮ ಮಾತನಾಡಿ, ಇಂದಿನ ಆಧುನಿಕತೆಯಲ್ಲಿ ಕಾಲಘಟ್ಟದಲ್ಲಿ ಕನಕದಾಸರಂತಹ ಮಹಾತ್ಮರ ಚಿಂತನೆ, ಮೌಲ್ಯಗಳನ್ನು ಅರ್ಥಮಾಡಿಕೊಳ್ಳುವಲ್ಲಿ ನಾವು ಎಡವುತ್ತಿದ್ದೇವೆ. ಸಮಾಜದಲ್ಲಿ ಕಟ್ಟಡಗಳೊಂದಿಗೆ ಜಾತಿ ಸಂಘಟನೆಗಳೂ ಗಟ್ಟಿಗೊಳ್ಳುತ್ತಿವೆ. ಹೊಸ ಜಾತಿ ಸಮೀಕರಣ ನಡೆಯುತ್ತಿರುವ ಈ ಕಾಲದಲ್ಲಿ ಕನಕರ…

Read More

ಉಳ್ಳಾಲ : ಮುಕ್ಕಚೇರಿ ನಿವಾಸಿ ‘ನಜಾತ ಮುಹಮ್ಮದ್ ಹಾಜಿ’ ಯವರು ಅಲ್ಪಕಾಲದ ಅಸೌಖ್ಯದಿಂದ ನಗರದ ಆಸ್ಪತ್ರೆಯಲ್ಲಿ ನಿಧನರಾದರು. ಪ್ರಮುಖ ವ್ಯಾಪಾರಸ್ಥರು ಮತ್ತು ಧಾರ್ಮಿಕ ಸಂಸ್ಥೆಗಳ ಮುಂಚೂಣಿ ನಾಯಕರೂ ಆಗಿದ್ದ ಅವರು ಇಬ್ಬರು ಪುತ್ರರು, ಐದು ಮಂದಿ ಪುತ್ರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ. ಸಂತಾಪ: ಕಾಂಗ್ರೆಸ್ ರಾಜ್ಯ ಸಮಿತಿ ಸಂಯೋಜಕ ಫಾರೂಕ್ ಉಳ್ಳಾಲ್,ಉಳ್ಳಾಲ ದರ್ಗಾ ಮಾಜೀ ಅಧ್ಯಕ್ಷ ಅಬ್ದುಲ್ ರಶೀದ್, ಮೇಲಂಗಡಿ ಹೊಸ ಪಳ್ಳಿ ಜುಮಾ ಮಸೀದಿ ಅಧ್ಯಕ್ಷ ಮುಸ್ತಫಾ ಅಬ್ದುಲ್ಲಾ,ಮಾಜಿ ನಗರ ಪಂಚಾಯತ್ ಅಧ್ಯಕ್ಷ ಮುಹಮ್ಮದ್ ಮುಕ್ಕಚೇರಿ, ಕೌನ್ಸಿಲರ್ ಗಳಾದ ಅಶ್ರಫ್, ಖಲೀಲ್, ಜಬ್ಬಾರ್ ಸಂತಾಪ ಸೂಚಿಸಿದ್ದಾರೆ.

Read More