Author: UllalaVani

Kannada News From Coastal Karnataka

ಮಂಗಳೂರು, ಫೆ.21: ಪಿಲಿಕುಳ ಝೂ‌‌ ಕಳೆದ ಕೆಲ ವರ್ಷಗಳಿಂದ ಅವ್ಯವಸ್ಥೆಯ ಆಗರವಾಗಿದ್ದು, ಇಲ್ಲಿಯ ಸ್ಥಿತಿ ಕಂಡು ಸ್ವತಃ ಹೈಕೋರ್ಟ್ ಗರಂ ಆಗಿತ್ತು. ಆ ಬೆನ್ನಲ್ಲೇ ಕಾಳಿಂಗ ಸರ್ಪದ ಹೆಸರಲ್ಲೂ ಇಲ್ಲಿ ಭ್ರಷ್ಟಾಚಾರ ನಡೆದಿರುವ ಆರೋಪ ಕೇಳಿಬಂದಿದೆ. ಕಾಳಿಂಗ ಸರ್ಪ ಸಂತಾನಾಭಿವೃದ್ಧಿ ಕೇಂದ್ರ ತೆರೆದು 2 ಕೋಟಿಗೂ ಅಧಿಕ ಅನುದಾನ ಪಡೆದಿದ್ದ ಇಲ್ಲಿಯ ಆಡಳಿತ ಅವುಗಳ ಪಾಲನೆ ಮರೆತಿದೆ. ಹೀಗಾಗಿ ಸರಿಯಾಗಿ ಆಹಾರ, ಆರೈಕೆ ಸಿಗದೆ ಅವು ಸಾವನ್ನಪ್ಪಿವೆ ಎಂದು ದೂರಲಾಗಿದೆ. 2022ರ ಜುಲೈನಲ್ಲಿ ಮೊಟ್ಟೆಯೊಡೆದು 38 ಕಾಳಿಂಗ ಸರ್ಪ ಮರಿಗಳು ಹೊರ ಬಂದಿದ್ದ ವಿಚಾರ ಭಾರಿ ಸದ್ದು ಮಾಡಿತ್ತು. ಆದರೆ ಆ ಮರಿಗಳು ಈಗ ಏನಾಗಿವೆ ಎಂಬುದಕ್ಕೆ ದಾಖಲೆಗಳೇ ಇಲ್ಲ. ಇತ್ತ ಪಿಲುಕುಳದ ಆಡಳಿತ ಮಾತ್ರ ಆ ಮರಿಗಳನ್ನು ಚಾರ್ಮಾಡಿ ಬಳಿ ಬಿಟ್ಟಿದ್ದೇವೆ ಎಂದು ಸಬೂಬು ನೀಡುತ್ತಿದೆ. ಪಶ್ಚಿಮಘಟ್ಟಕ್ಕೆ ಮರಿಗಳನ್ನು ಬಿಡುವಾಗ ಅರಣ್ಯ ಇಲಾಖೆ ಅನುಮತಿ ಪಡೆದುಕೊಳ್ಳಬೇಕು. ಇಲ್ಲಿ ಇವರು ಅರಣ್ಯ ಇಲಾಖೆಯಿಂದ ಯಾವುದೇ ಅನುಮತಿ ಪಡೆದಿಲ್ಲ. ಅಲ್ಲದೆ ಮರಿಗಳನ್ನು ಬಿಟ್ಟಿರುವ ಬಗ್ಗೆ…

Read More

ಕಾಸರಗೋಡು, ಫೆ. 21 : ಬದಿಯಡ್ಕದ ನೆಲ್ಲಿಕಟ್ಟೆ ಬಳಿ ಇಂದು ಮುಂಜಾನೆ ಕಾರು ಮತ್ತು ಕರ್ನಾಟಕ ಕೆಎಸ್ ಆರ್ ಟಿಸಿ ಬಸ್ ಪರಸ್ಪರ ಬಡಿದು ಸಂಭವಿಸಿದ ಅಪಘಾತದಲ್ಲಿ ಕಾರಿನಲ್ಲಿದ್ದ ಓರ್ವ ಮೃತಪಟ್ಟು, ಸಹ ಪ್ರಯಾಣಿಕ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ನೆಲ್ಲಿಕಟ್ಟೆ ಸಂಶುದ್ದೀನ್ (68) ಮೃತ ವ್ಯಕ್ತಿಯಾಗಿದ್ದಾರೆ. ಇವರ ಮಗ ಸಲ್ಮಾನ್ ಹಾರಿಸ್(22)ಎಂಬವರು ಗಂಭೀರ ಗಾಯಗೊಂಡಿದ್ದು, ಕಾಸರಗೋಡು ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ. ಮುಂಜಾನೆ ಆರು ಗಂಟೆಗೆ ಬದಿಯಡ್ಕ ಠಾಣಾ ವ್ಯಾಪ್ತಿಯ ಕೆಳಗಿನ ನೆಲ್ಲಿಕಟ್ಟೆಯಲ್ಲಿ ಅಪಘಾತ ಸಂಭವಿಸಿದೆ.ಕಾಸರಗೋಡಿನಿಂದ ಪುತ್ತೂರಿಗೆ ಹೋಗುತ್ತಿದ್ದ ಬಸ್ ಮತ್ತು ನೆಲ್ಲಿಕಟ್ಟೆಯಿಂದ ಕಾಸರಗೋಡು ರೈಲು ನಿಲ್ದಾಣಕ್ಕೆ ಸಾಗುತ್ತಿದ್ದ ಕಾರು ಪರಸ್ಪರ ಬಡಿದು ದುರ್ಮರಣ ಸಂಭವಿಸಿದೆ. ಅಪಘಾತದಲ್ಲಿ ಕಾರು ನಜ್ಜುಗುಜ್ಜಾಗಿದೆ. ಗಂಭೀರ ಗಾಯಗೊಂಡ ತಂದೆ ಮಗ ಇಬ್ಬರನ್ನೂ ತಕ್ಷಣವೇ ಆಸ್ಪತ್ರೆಗೆ ಸೇರಿಸಿದರೂ ಷಂಸುದ್ದೀನ್ ಮೃತಪಟ್ಟಿದ್ದಾರೆ.

Read More

ಉಳ್ಳಾಲ: ಇತ್ತೀಚೆಗೆ ತಲಪಾಡಿಯಲ್ಲಿ ಸಂಭವಿಸಿದ ಬಸ್ ದುರಂತದಲ್ಲಿ ಮೃತಪಟ್ಟ ದಕ್ಷಿಣ ಕನ್ನಡ ಜಿಲ್ಲಾ ಆಟೋ ರಾಜಾಕಮ್ಮಾರ್ ಯೂನಿಯನ್ ಸದಸ್ಯ ಹೈದರ್ ಅಲಿ ಅವರ ಕುಟುಂಬಕ್ಕೆ ಯೂನಿಯನ್ ವತಿಯಿಂದ ಧನಸಹಾಯ ಹಸ್ತಾಂತರಿಸಲಾಯಿತು. ಆಟೋ ಚಾಲಕರು, ವ್ಯಾಪಾರಿಗಳು ಹಾಗೂ ಸಾರ್ವಜನಿಕರ ಸಹಕಾರದಿಂದ ಸಂಗ್ರಹಿಸಲಾದ ಒಟ್ಟು 4,60,000 ರೂ.ಗಳನ್ನು ಚೆಕ್ ಮೂಲಕ ಕುಟುಂಬದವರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಜಿಲ್ಲಾ ಆಟೋ ರಾಜಾಕಮ್ಮಾರ್ ಯೂನಿಯನ್ ಸ್ಥಾಪಕಾಧ್ಯಕ್ಷ ಸಿದ್ದೀಕ್ ಕೊಡಕ್ಕಲ್, ಹೈದರ್ ಅಲಿ ಅವರಿಗೆ ನಾಲ್ಕು ಸಣ್ಣ ಪ್ರಾಯದ ಮಕ್ಕಳು ಇದ್ದು ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಈ ಹಿನ್ನೆಲೆ ಎಲ್ಲರ ಸಹಕಾರದಿಂದ ಸಂಗ್ರಹಿಸಿದ ಮೊತ್ತವನ್ನು ಕುಟುಂಬಕ್ಕೆ ನೀಡಲಾಗಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಯೂನಿಯನ್ ಅಧ್ಯಕ್ಷ ಅಬ್ದುಲ್ ಜಲೀಲ್ ಕೆ., ಪ್ರಧಾನ ಕಾರ್ಯದರ್ಶಿ ಶಫೀಕ್ ಬೋಳಿಯಾರ್, ಹಣಕಾಸು ಕಾರ್ಯದರ್ಶಿ ಇಕ್ಬಾಲ್ ಮಾಡೂರ್, ಉಪಾಧ್ಯಕ್ಷ ಮನ್ಸೂರ್,ಕಾರ್ಯದರ್ಶಿ ಶಫೀಕ್ ಸೇರಿದಂತೆ ಪದಾಧಿಕಾರಿಗಳು ಶರೀಫ್, ಸಿರಾಜ್, ಅಬ್ಬಾಸ್, ಯೂಸುಫ್, ನಿಸಾರ್, ಸಾಧಿಕ್ ಹಾಗೂ ಕಾರ್ಯನಿರ್ವಾಹಕರು ರಿಝ್ವಾನ್, ತಾಸೀನ್, ಉಸ್ಮಾನ್, ಶಾಫೀ, ಹಾರಿಸ್,ಸಮೀರ್,…

Read More

ಮಂಗಳೂರು : ಫೆ.24ರಂದು ಡಾ|ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ದಿನ. ಅದೇ ದಿನ ಎಸ್ಸಿಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ 77ನೇ ಹುಟ್ಟುಹಬ್ಬದ ಸಂಭ್ರಮದ ಜೊತೆಗೆ ಅಭಿವಂದನಾ ಕಾರ್ಯಕ್ರಮ ಹಾಗೂ ಅರ್ಹ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಸಮಾರಂಭ ನಡೆಯಲಿದೆ ಎಂದು ಅಭಿವಂದನಾ ಸಮಿತಿಯ ಅಧ್ಯಕ್ಷರಾದ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದರು. ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರ ಹುಟ್ಟುಹಬ್ಬದ ಅರ್ಥಪೂರ್ಣ ಕಾರ್ಯಕ್ರಮವು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರಿಂದ ಉದ್ಘಾಟನೆಗೊಳ್ಳಲಿದೆ. ಸಮಸ್ತ ಸಹಕಾರಿಗಳ ಪರವಾಗಿ ಈ ಕಾರ್ಯಕ್ರಮದಲ್ಲಿ ಡಾ| ಎಂ.ಎನ್. ರಾಜೇಂದ್ರ ಕುಮಾರ್ ಅವರು ಅಭಿವಂದನೆಯನ್ನು ಸ್ವೀಕರಿಸಲಿದ್ದಾರೆ.ಕರ್ನಾಟಕ ಸರ್ಕಾರದ ಮಾನ್ಯ ಮಾಜಿ ಮುಖ್ಯಮಂತ್ರಿಗಳಾದ ಡಾ|ಎಂ. ವೀರಪ್ಪ ಮೊಯಿಲಿ ಅವರು ಡಾ।ಎಂ.ಎನ್. ರಾಜೇಂದ್ರ ಕುಮಾರ್ ಅವರನ್ನು ಅಭಿವಂದಿಸಿ, ಅಭಿವಂದನಾ ಭಾಷಣ ಮಾಡಲಿದ್ದಾರೆ. ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಿ.ವೇದವ್ಯಾಸ ಕಾಮತ್ ಇವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ಡಾರೆ.

Read More

ಬೆಂಗಳೂರು, ಫೆ. 20: ರಾಜ್ಯದಲ್ಲಿ ದೇವಸ್ಥಾನಗಳು ಮತ್ತು ಧಾರ್ಮಿಕ ಕೇಂದ್ರಗಳಲ್ಲಿ ರೀಲ್ಸ್ ಮತ್ತು ವೀಡಿಯೋ ಶೂಟಿಂಗ್ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹತ್ವದ ನಿಯಮಗಳನ್ನು ಜಾರಿಗೆ ತರುವ ನಿರ್ಧಾರ ಮಾಡಿದೆ. ಇನ್ಮುಂದೆ, ದೇವಸ್ಥಾನಗಳಲ್ಲಿ ಚಿತ್ರೀಕರಣ ಮಾಡಬೇಕಾದರೆ ಆಯ್ಕೆ ಮಾಡಿದ ಸ್ಥಳಗಳಲ್ಲಿ ಮಾತ್ರ ಅವಕಾಶ ದೊರೆಯಲಿದೆ ಮತ್ತು ಅದಕ್ಕಾಗಿ ಶುಲ್ಕ ಕಡ್ಡಾಯವಾಗಲಿದೆ. ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಈ ಬಗ್ಗೆ ತಿಳಿಸಿದ್ದಾರೆ. ರಾಜ್ಯದ ಎಲ್ಲಾ ಎ ಮತ್ತು ಬಿ ವರ್ಗದ ಮುಜರಾಯಿ ದೇವಾಲಯಗಳಲ್ಲಿ ಈ ನಿಯಮ ಅನ್ವಯವಾಗಲಿದೆ. ಸಿನಿಮಾ, ಧಾರಾವಾಹಿ, ಸಾಕ್ಷ್ಯಚಿತ್ರ, ಯೂಟ್ಯೂಬ್ ಚಾನೆಲ್ ಹೀಗೆ ವಿವಿಧ ಪ್ರಕಾರದ ಚಿತ್ರೀಕರಣಕ್ಕೆ ಶೂಟಿಂಗ್ ಶುಲ್ಕ ಪಾವತಿಸುವುದು ಕಡ್ಡಾಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.ಹಿಂದೆ 2003 ಮತ್ತು 2013 ರಲ್ಲಿ ನಿಗದಿತ ಶುಲ್ಕ ಪಾವತಿಸಿ ಶೂಟಿಂಗ್ ಮಾಡಲು ನಿಯಮ ಜಾರಿಗೆ ಬಂದಿದೆ. ಆದರೆ ಇತ್ತೀಚೆಗೆ ದೇವಸ್ಥಾನಗಳಲ್ಲಿ ರೀಲ್ಸ್, ಯೂಟ್ಯೂಬ್ ಚಾನೆಲ್ ಚಿತ್ರೀಕರಣಗಳು ಹೆಚ್ಚಿದ ಪರಿಣಾಮ, ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ಬರುತ್ತಿದೆ. ಹೀಗಾಗಿ ಮುಜರಾಯಿ ಇಲಾಖೆ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಲು…

Read More

ಸುಳ್ಯ, ಫೆ. 20;  ಬೆಳ್ಳಾರೆ ಸೋಣಂಗೇರಿ ರಸ್ತೆಯ ಬಂಡಿ ಮಜಲು ಎಂಬಲ್ಲಿ ಲಾರಿಯಲ್ಲಿ ಅಕ್ರಮವಾಗಿ ಮರ ಸಾಗಾಟ ಮಾಡುತ್ತಿದ್ದ ವೇಳೆ ಮಂಗಳೂರು ಅರಣ್ಯ ಸಂಚಾರಿ ದಳದ ವಲಯ ಅರಣ್ಯಾಧಿಕಾರಿ ಮತ್ತು ಸಿಬಂದಿ ಪತ್ತೆ ಹಚ್ಚಿದ್ದು, ಅಕ್ರಮ ಸಾಗಾಟಕ್ಕೆ ಬಳಸಿದ ಲಾರಿ ಮತ್ತು ದಿಮ್ಮಿಗಳನ್ನು ವಶ ಪಡಿಸಿಕೊಂಡಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಅರಣ್ಯ ಸಂಚಾರಿ ದಳದವರು ಸಾಗಾಟಕ್ಕೆ ಬಳಸಿದ್ದ ಲಾರಿ ಮತ್ತು ದಿಮ್ಮಿಗಳನ್ನು ವಶಪಡಿಸಿಕೊಂಡಿದ್ದಾರೆ. ಸೊತ್ತಿನ ಮೌಲ್ಯ 8 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಮದನ್ ಎಂ. ಎಂಬವರ ಮೇಲೆ ಪ್ರಕರಣ ದಾಖಲಾಗಿದೆ.

Read More

ಕಾಸರಗೋಡು ಕನ್ನಡ ಗ್ರಾಮದಲ್ಲಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಸರಗೋಡು ಗೋ -ಕುಟೀರಕ್ಕೆ ಭಾರತೀಯ ಜನತಾ ಪಾರ್ಟಿಯ ಕೇರಳ ಕೋಯಿಕೋಡ್ ಉತ್ತರ ವಲಯ ಅಧ್ಯಕ್ಷ ನ್ಯಾಯವಾದಿ ಶ್ರೀಕಾಂತ ಕೆ.ಭೇಟಿ ನೀಡಿ, ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಇವರೊಂದಿಗೆ ಕಾಸರಗೋಡು ಗೋ- ಕುಟೀರದ ನಿರ್ಮಾಣ ಕಾಮಗಾರಿಯ ಕುರಿತು ಚರ್ಚಿಸಿದರು. ಕಾಸರಗೋಡು ಗೋ – ಕುಟೀರದ ಆವರಣದಲ್ಲಿ ಸಾವಯವ ಕೃಷಿ, ಗ್ರಾಮೀಣ ಸ್ವ ಉದ್ಯೋಗ ಕೇಂದ್ರ ವಿದ್ಯಾರ್ಥಿಗಳು,ಯುವಜನರು, ಮಹಿಳೆಯರಿಗಾಗಿ ಹೊಲಿಗೆ, ವಸ್ತ್ರ ವಿನ್ಯಾಸ, ಡಿ ಸೈನಿಂಗ್, ಕಂಪ್ಯೂಟರ್,ಡಿಜಿಟಲ್ ಮಾಧ್ಯಮ ಕೇಂದ್ರ ಗ್ರಂಥಾಲಯ ಹಿರಿಯ ನಾಗರಿಕರಿಗಾಗಿ ಗ್ರಾಮೀಣ ವೈದ್ಯಕೀಯ ಕ್ಲಿನಿಕ್,ಗೋ- ವಿಶ್ರಾಂತಿ ಗ್ರಹ ಮುಂತಾದ ವಿವಿಧ ಕಾರ್ಯ ಯೋಜನೆಗಳು ಮಾಹಿತಿಯನ್ನು ಪಡೆದರು.ನ್ಯಾಯವಾದಿ ಶ್ರೀಕಾಂತ ಕೆ ಅವರಿಗೆ ಕರಾವಳಿ ಸಾಂಸ್ಕೃತಿಕ ಪ್ರತಿಷ್ಟಾನದ ವತಿಯಿಂದ ಶಾಲು ಹೊದಿಸಿ ಹಾರವನ್ನಿತ್ತು ಗೋ-ಕುಟೀರದ ಪೋಸ್ಟರ್ ನೀಡಿ ಸನ್ಮಾನಿಸಲಾಯಿತು. ನಗರ ಸಭಾ ಕೌನ್ಸಿಲರ್ ಶಾರದಾ ಬಿ, ಶಂಕರ ಕೆ, ಚಂದ್ರಶೇಖರ ಬಿ ಮೊಗ್ರಾಲ್ ಪುತ್ತೂರ್ ಉಪಸ್ಥಿತರಿದ್ದರು.

Read More

ಉಳ್ಳಾಲ; ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾದ ವಂಚನೆ ಪ್ರಕರಣಗಳಲ್ಲಿ 15 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಲಾಗಿದೆ. ಬೆಂಗಳೂರು ಮೂಲದ ಆರೋಪಿ ಅಜಯ್ ಪ್ರಸಾದ್ ಜಿ (41) ಕರೆನ್ಸಿ ಟ್ರೆಡಿಂಗ್ ಮತ್ತು ಷೇರು ವ್ಯವಹಾರದಲ್ಲಿ ಅಧಿಕ ಲಾಭಂಶ ನೀಡುವುದಾಗಿ ನಂಬಿಸಿ ಸುಮಾರು ರೂ.1ಕೋಟಿ 20 ಲಕ್ಷ ವಂಚನೆ ಮಾಡಿರುವ ಬಗ್ಗೆ ಉಳ್ಳಾಲ ಠಾಣೆಯಲ್ಲಿ 3 ಪ್ರಕರಣಗಳು ದಾಖಲಾಗಿತ್ತು. Nano Forex India ಎಂಬ ಸಂಸ್ಥೆಯ forex Robot Software ಮೂಲಕ ಕರೆನ್ಸಿ ಟ್ರೆಡಿಂಗ್ ಮತ್ತು ಷೇರು ವ್ಯವಹಾರದಲ್ಲಿ ತಿಂಗಳಿಗೆ 40% ಲಾಭ ಹಾಗೂ 20% ಮರುಪಾವತಿ ನೀಡುವುದಾಗಿ ನಂಬಿಸಿ, ಐಡಿ ಕಾರ್ಡ್ ಮತ್ತು ದಾಖಲೆಗಳನ್ನು ನೀಡಿ ವಿಶ್ವಾಸ ಹುಟ್ಟಿಸಿ, ಪ್ರೊರೆಕ್ಸ್ ರೋಬೋಟ್ ಸಾಫ್ಟ್ವೇರ್ ಬಳಸಲು ಅವಕಾಶ ನೀಡುವುದಾಗಿ ತಿಳಿಸಿ, ವಿವಿಧ ಗ್ರಾಹಕರಿಂದ ಸುಮಾರು 1 ಕೋಟಿ 20 ಲಕ್ಷ ಹಣವನ್ನು ಪಡೆದುಕೊಂಡಿರುತ್ತಾರೆ. ಆದರೆ ಹಣಕ್ಕೆ ಯಾವುದೇ ಲಾಭ ಅಥವಾ ಮರುಪಾವತಿ ನೀಡದೇ, ಹಣವನ್ನು ದುರುಪಯೋಗಪಡಿಸಿ ವಂಚಿಸಿದ್ದಾನೆ. ಆರೋಪಿಯನ್ನು ಉಳ್ಳಾಲ ಪೊಲೀಸ್ ಠಾಣೆಯ ಅಧಿಕಾರಿ…

Read More

ಉಳ್ಳಾಲ: ಬಿಜೆಪಿ ಪಕ್ಷದ ಚಿಹ್ನೆಯಿಂದ ಸ್ಪರ್ಧಿಸಿ ಕೋಟೆಕಾರ್ ಪಟ್ಟಣ ಪಂಚಾಯತ್ ಸದಸ್ಯರಾಗಿರುವ ಸುಜೀತ್ ಮಾಡೂರು ಅವರನ್ನು ಪಕ್ಷದ ಶಿಸ್ತನ್ನು ಉಲ್ಲಂಘಿಸಿರುವ ಆರೋಪದ ಹಿನ್ನೆಲೆಯಲ್ಲಿ 6 ವರ್ಷಗಳ ಕಾಲ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಸತೀಶ್ ಕುಂಪಲ ಅವರು ಫೆ.19-ರಂದು ಹೊರಡಿಸಿದ ಆದೇಶದಲ್ಲಿ, ಸುಜೀತ್ ಮಾಡೂರು ಅವರು ನಿರಂತರವಾಗಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಾಗಿ ಉಲ್ಲೇಖಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಅವರನ್ನು 6 ವರ್ಷಗಳ ಕಾಲ ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ.ಈ ಆದೇಶದ ಪ್ರತಿಯನ್ನು ಮಂಗಳೂರು ಮಂಡಲ ಬಿಜೆಪಿ ಅಧ್ಯಕ್ಷರಾದ ಜಗದೀಶ್ ಆಳ್ವ ಅವರಿಗೆ ಕಳುಹಿಸಲಾಗಿದೆ.ಈ ಬೆಳವಣಿಗೆ ಕೋಟೆಕಾರ್ ಪಟ್ಟಣ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.ಜ.29 ರಂದು ಕೋಟೆಕಾರ್ ಪಟ್ಟಣ ಪಂಚಾಯತಿನಲ್ಲಿ ಜರಗಿದ ಸಾಮಾನ್ಯ ಸಭೆಯಲ್ಲಿ ಸುಜಿತ್ ಮಾಡೂರು ಇವರು 15 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ನಿವೇಶನ ರಹಿತರ ಅರ್ಜಿಗಳ ವಿಲೇವಾರಿ ಆಗದೇ ಇರುವ ಕುರಿತು ಅಧಿಕಾರಿಗಳ ಬೇಜವಾಬ್ದಾರಿತನದ ವಿರುದ್ಧ ಬಡವರ ಪರವಾಗಿ ಬಾವಿಗಿಳಿದು ಪ್ರತಿಭಟನೆ…

Read More

ಉಳ್ಳಾಲ; ಪೂರ್ವ ಭಾವಿ ಸಭೆಯಲ್ಲಿ ಅಭಿವೃದ್ಧಿ ಬಗ್ಗೆ ಚರ್ಚೆ ಆಗಬೇಕು. ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಯೋಜನೆ ಆಗಬೇಕು. ಸಭೆಯಲ್ಲಿ ಮಹಿಳಾ ಸದಸ್ಯರು ಜಾಸ್ತಿ ಇದ್ದಾರೆ. ನಿಮ್ಮ ವಾರ್ಡ್ ನ ಪ್ರಮುಖ ಸಮಸ್ಯೆ ಇದ್ದರೆ ಮಾಹಿತಿ ನೀಡಿ. ಪ್ರಮುಖ ಸಮಸ್ಯೆ ಗಳಿಗೆ ಶೀಘ್ರ ಪರಿಹಾರ ಮಾಡಲಾಗುವುದು ಎಂದು ಉಳ್ಳಾಲ ನಗರ ಸಭೆ 2026-27 ಸಾಲಿನ ಬಜೆಟ್ ಮಂಡನೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಉಳ್ಳಾಲ ನಗರಸಭೆ ಆಡಳಿತ ಅಧಿಕಾರಿ ಆಗಿರುವ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಸಲಹೆ ನೀಡಿದರು. ಈ ಸಭೆಯಲ್ಲಿ ಉಳ್ಳಾಲ ಬೈಲ್, ಸುಭಾಷ್ ನಗರ, ಚೆಂಬುಗುಡ್ಡೆ, ಕೃಷ್ಣ ನಗರ ಮುಂತಾದ ಪ್ರದೇಶಗಳಲ್ಲಿ ಚರಂಡಿ ಸಮಸ್ಯೆ ಯಿಂದ ಆಗುವ ತೊಂದರೆ ಬಗ್ಗೆ ಸ್ಥಳೀಯರು ಜಿಲ್ಲಾಧಿಕಾರಿಯ ಗಮನಸೆಳೆದರು.ಇತ್ತೀಚೆಗೆ ನಿರ್ಮಾಣ ಆಗಿರುವ ಸ್ಮಶಾನದಲ್ಲಿ ಮೂರು ಲಕ್ಷ ಮೌಲ್ಯದ ಕಬ್ಬಿಣ ಕಳುವಾಗಿದೆ. ಇದಕ್ಕೆ ಹೊಣೆ ಯಾರು, ಜನನ ಮರಣ ಪ್ರಮಾಣ ಪತ್ರ ದಾಖಲೆ ಇಂಟರ್ ನೆಟ್ ನಲ್ಲಿ ಸಿಗುವ ವ್ಯವಸ್ಥೆ ನಮ್ಮ ರಾಜ್ಯದಲ್ಲೂ ಆಗಬೇಕು ಎಂಬ…

Read More