ಮಂಗಳೂರು: ಕೇಂದ್ರ ಸರ್ಕಾರದ ಎಸ್ಐಆರ್ ಮ್ಯಾಪಿಂಗ್ ಪ್ರಕ್ರಿಯೆಯು ಮೇ 11ರಂದು ಅಂತ್ಯಗೊಳ್ಳಲಿದ್ದು, ಮತದಾರರು ತಮ್ಮ ಹೆಸರು ಚುನಾವಣಾ ಪಟ್ಟಿಯಲ್ಲಿ ಮ್ಯಾಪಿಂಗ್ ಆಗಿರುವ ಬಗ್ಗೆ ತಮ್ಮ ವಾಸ್ತವ್ಯ ವ್ಯಾಪ್ತಿಯ ಬೂತ್ ಲೆವೆಲ್ ಅಧಿಕಾರಿ (ಬಿಎಲ್ಒ)ರನ್ನು ಸಂಪರ್ಕಿಸಿ ಖಚಿತಪಡಿಸಿಕೊಳ್ಳಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷ ಕೆ. ಅಶ್ರಫ್ ಮನವಿ ಮಾಡಿದ್ದಾರೆ. ಮ್ಯಾಪಿಂಗ್ ಆಗದಿದ್ದಲ್ಲಿ ತಕ್ಷಣ ಅಗತ್ಯ ಕ್ರಮ ಕೈಗೊಂಡು ಮ್ಯಾಪಿಂಗ್ ಮಾಡಿಸಿಕೊಳ್ಳಬೇಕು. ಅಲ್ಲದೆ, ಈ ಕುರಿತು ಶುಕ್ರವಾರ ಜುಮಾ ನಮಾಝ್ ಬಳಿಕ ಪ್ರತಿ ಜಮಾಅತ್ನ ಮಸೀದಿಗಳಲ್ಲಿ ಮಾಹಿತಿ ನೀಡುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: UllalaVani
ಚೆನ್ನೈ, ಮೇ. 09 : ತಮಿಳುನಾಡು ರಾಜಕೀಯದಲ್ಲಿ ನಡೆದ ತೀವ್ರ ರಾಜಕೀಯ ಚರ್ಚೆ ಮತ್ತು ಸಂಖ್ಯಾ ಸಮೀಕರಣಗಳ ಬಳಿಕ ನಟ-ರಾಜಕಾರಣಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಸರ್ಕಾರ ರಚನೆಗೆ ದಾರಿ ಸುಗಮವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆಗೆ ಬಹುಮತಕ್ಕೆ ಅಗತ್ಯವಿದ್ದ 118 ಸ್ಥಾನಗಳ ಸಂಖ್ಯೆಯನ್ನು ತಲುಪಲು ಇನ್ನೂ ಕೆಲ ಶಾಸಕರ ಬೆಂಬಲ ಬೇಕಾಗಿತ್ತು. ಇದೀಗ ಕಾಂಗ್ರೆಸ್, ವಿಸಿಕೆ, ಸಿಪಿಐ ಮತ್ತು ಸಿಪಿಐ(ಎಂ) ಬೆಂಬಲ ಘೋಷಿಸಿರುವುದರಿಂದ ಸರ್ಕಾರ ರಚನೆಯ ಬಿಕ್ಕಟ್ಟು ಅಂತ್ಯಗೊಂಡಂತಾಗಿದೆ. ಟಿವಿಕೆಗೆ ಮೊದಲೇ ಕಾಂಗ್ರೆಸ್ ಬೆಂಬಲ ನೀಡಿತ್ತು. ಇದೀಗ ಸಿಪಿಐ, ಸಿಪಿಐ(ಎಂ) ಮತ್ತು ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಪಕ್ಷಗಳೂ ವಿಜಯ್ ನೇತೃತ್ವದ ಸರ್ಕಾರಕ್ಕೆ ಬೆಂಬಲ ಸೂಚಿಸಿರುವುದರಿಂದ ಟಿವಿಕೆ ಬಹುಮತದ ಮ್ಯಾಜಿಕ್ ನಂಬರ್ ದಾಟಿದೆ.234 ಸದಸ್ಯರ ತಮಿಳುನಾಡು ವಿಧಾನಸಭೆಯಲ್ಲಿ ಟಿವಿಕೆ 108 ಶಾಸಕರನ್ನು ಹೊಂದಿದೆ. ಕಾಂಗ್ರೆಸ್ ತನ್ನ 5 ಶಾಸಕರ ಬೆಂಬಲ ನೀಡಿದ್ದು, ತಲಾ ಇಬ್ಬರು ಶಾಸಕರಿರುವ ಸಿಪಿಐ ಹಾಗೂ ಸಿಪಿಐ(ಎಂ)…
ಮಂಗಳೂರು, ಮೇ. 09: ಮಂಗಳೂರು-ತಣ್ಣೀರುಬಾವಿ ಬ್ರಿಡ್ಜ್ ಮಂಗಳೂರಿನ ಬಹುವರ್ಷದ ಬೇಡಿಕೆ. ಸದ್ಯ ಬ್ರಿಡ್ಜ್ ಕಾಮಗಾರಿ ಅಂತಿಮ ಹಂತಕ್ಕೆ ತಲುಪಿದ್ದು, ಆಗಸ್ಟ್ ಅಥವಾ ಸೆಪ್ಟೆಂಬರ್ನಲ್ಲಿ ಲೋಕಾರ್ಪಣೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಆ ಮೂಲಕ ತಣ್ಣೀರುಬಾವಿ ಬೀಚ್ಗೆ ತೆರಳಲು ದಶಕಗಳಿಂದ ಇದ್ದ ಸಂಚಾರ ಸಂಕಷ್ಟಕ್ಕೆ ಶೀಘ್ರದಲ್ಲೇ ಪರಿಹಾರ ಸಿಗಲಿದೆ. 64 ಕೋಟಿ ರೂ ವೆಚ್ಚದಲ್ಲಿ 285 ಮೀಟರ್ ಉದ್ದದ ಸೇತುವೆ ನಿರ್ಮಾಣ ಮಾಡಲಾಗುತ್ತಿದೆ. 30-35 ನಿಮಿಷ ಬೇಕಾಗುವ ಪ್ರಯಾಣದ ಸಮಯ ಈ ಸೇತುವೆ ಮೂಲಕ ಕೇವಲ 10 ನಿಮಿಷಕ್ಕೆ ಕಡಿತಗೊಳ್ಳಲಿದೆ.ತಣ್ಣೀರುಬಾವಿ ಬೀಚ್ ಮಂಗಳೂರು ಸಿಟಿಗೆ ಹೊಂದಿಕೊಂಡಿರುವ ಬೀಚ್ ಆಗಿದೆ. ಮಂಗಳೂರು ಸಿಟಿಯ ಒಂದು ತುದಿಯಿಂದ ಸುಮಾರು ಒಂದೂವರೆ ಕಿ.ಮೀ ದೂರದಲ್ಲಿರುವ ಈ ಬೀಚ್ಗೆ ವಾಹನದಲ್ಲಿ ಹೋಗಬೇಕು ಅಂದರೆ 15 ರಿಂದ 20 ಕಿ.ಮೀ ಸುತ್ತಿಕೊಂಡು ಹೋಗಬೇಕಿತ್ತು. ಆದರೆ ಫೆರಿಯಲ್ಲಿ ಹೋಗೋದಾದರೆ ಕೆಲವೇ ಮೀಟರ್ ಕ್ರಮಿಸಿದರೆ ಸಾಕು.ಇನ್ನು ತಣ್ಣೀರುಬಾವಿ ಸುತ್ತಾಮುತ್ತಾ 4 ಸಾವಿರಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದು, ಅವರು ಮಂಗಳೂರಿಗೆ…
ಕಡಬ: ಕಡಬ ಪ್ರದೇಶದಲ್ಲಿ ನಡೆದ ದುರ್ಘಟನೆ ಮನಸ್ಸನ್ನು ಮಿಡಿಯಿಸುವಂತದ್ದು. ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಇಡೀ ಊರನ್ನು ಕಣ್ಣೀರಿನಲ್ಲಿ ಮುಳುಗಿಸಿದೆ. ಬೇಸಿಗೆ ರಜೆಯ ಖುಷಿ, ನಗು, ಆಟ ಕ್ಷಣಾರ್ಧದಲ್ಲಿ ಶೋಕವಾಗಿ ಮಾರ್ಪಟ್ಟಿದೆ. ಮೃತ ವಿದ್ಯಾರ್ಥಿನಿಯರನ್ನು ಕುಟ್ರುಪ್ಪಾಡಿ ಗ್ರಾಮದ ವಿಮಲಗಿರಿ ನಿವಾಸಿಗಳಾದ ಅರ್ಪಿತಾ(15) ಹಾಗೂ ಸುನೀತಾ(21) ಎಂದು ಗುರುತಿಸಲಾಗಿದೆ.ಈ ಘಟನೆ ಮತ್ತೊಮ್ಮೆ ಜೀವನದ ಅನಿಶ್ಚಿತತೆಯನ್ನು ನೆನಪಿಸುತ್ತದೆ. ಮನುಷ್ಯ ಬದುಕಿರುವಾಗ ಜಾತಿ, ಧರ್ಮ, ಹುದ್ದೆ, ಅಹಂಕಾರ ಎಂದು ವಿಭಜನೆ ಮಾಡುತ್ತಾನೆ. ಆದರೆ ಸಾವಿನ ಮುಂದೆ ಎಲ್ಲರೂ ಒಂದೇ. ಸಾವಿಗೆ ಜಾತಿ ಇಲ್ಲ, ಧರ್ಮ ಇಲ್ಲ. ಮನುಷ್ಯನ ಉಸಿರು ಇರುವವರೆಗೆ ಮಾತ್ರ ಈ ಭೇದಗಳು. ಜೀವನ ಅಂದರೆ ಹೋರಾಟ, ಹೊಣೆಗಾರಿಕೆ ಮತ್ತು ಪರಸ್ಪರ ಮಾನವೀಯತೆಯ ಪ್ರಯಾಣ. ಒಂದು ಕ್ಷಣದ ಅಜಾಗರೂಕತೆ ಇಡೀ ಕುಟುಂಬದ ಬದುಕನ್ನೇ ಕತ್ತಲೆಗೆ ತಳ್ಳಬಹುದು. ಆದ್ದರಿಂದ ನದಿ, ಕೆರೆ, ಸಮುದ್ರಗಳ ಬಳಿ ಎಚ್ಚರಿಕೆ ಅತ್ಯಗತ್ಯ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೊರಕಲಿ.
ನವದೆಹಲಿ, ಮೇ. 09 ;ಭಾರತದ ರಕ್ಷಣಾ ಪಡೆಗಳ ನೂತನ ಮುಖ್ಯಸ್ಥರನ್ನಾಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ (ನಿವೃತ್ತ) ಅವರನ್ನು, ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ವೈಸ್ ಅಡ್ಮಿರಲ್ ಕೃಷ್ಣ ಸ್ವಾಮಿನಾಥನ್ ಅವರನ್ನು ಕೇಂದ್ರ ಸರ್ಕಾರ ನೇಮಕ ಮಾಡಿದೆ. ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ ಪ್ರಸ್ತುತ ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ಅವರ ಅವಧಿ ಮೇ 30 ಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಜನರಲ್ ಅನಿಲ್ ಚೌಹಾಣ್ ಅವರ ಸ್ಥಾನವನ್ನು ರಾಜಾ ಸುಬ್ರಮಣಿ ವಹಿಸಿಕೊಳ್ಳಲಿದ್ದಾರೆ. ಲೆಫ್ಟಿನೆಂಟ್ ಜನರಲ್ ಸುಬ್ರಮಣಿ ಅವರು ಪ್ರಸ್ತುತ ರಾಷ್ಟ್ರೀಯ ಭದ್ರತಾ ಮಂಡಳಿಯಲ್ಲಿ ಮಿಲಿಟರಿ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ವರ್ಷ ಜುಲೈ 31 ರಂದು ಅವರು ಸೇನಾ ಸಿಬ್ಬಂದಿಯ ಉಪ ಮುಖ್ಯಸ್ಥರಾಗಿ ಸೇನೆಯಿಂದ ನಿವೃತ್ತರಾಗಿದ್ದರು.ಕಳೆದ ವರ್ಷ ಸೆಪ್ಟೆಂಬರ್ 1 ರಂದು ಸುಬ್ರಮಣಿ ಅವರು ರಾಷ್ಟ್ರೀಯ ಭದ್ರತಾ ಮಂಡಳಿ ಸಚಿವಾಲಯದಲ್ಲಿ ಮಿಲಿಟರಿ ಸಲಹೆಗಾರರಾಗಿ ಜವಾಬ್ದಾರಿ ವಹಿಸಿಕೊಂಡಿದ್ದರು. ಅದಕ್ಕೂ ಮೊದಲು, ಜುಲೈ 2024 ರಿಂದ ಜುಲೈ 2025 ರವರೆಗೆ ಭೂಸೇನೆಯ ಉಪಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿದ್ದರು.…
ಬಂಟ್ವಾಳ, ಮೇ. 08 ; ಇಲ್ಲಿನ ಪಚ್ಚಿನಡ್ಕ ಸಮೀಪದ ಗೋರೆಮಾರ್ ನಿವಾಸಿ ಪ್ರಕಾಶ್ ಎಂಬುವವರ ಮನೆಯ ಮುಂಭಾಗದ ಬಾಗಿಲಿನ ಚಿಲಕ ಮುರಿದು ಒಳನುಗ್ಗಿದ ಕಳ್ಳರು, ಚಿನ್ನಾಭರಣ, ನಗದು ಹಾಗೂ ಬೆಳ್ಳಿ ವಿಗ್ರಹವನ್ನು ದೋಚಿದ ಘಟನೆ ಬಂಟ್ವಾಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ವರದಿಯಾಗಿದೆ. ಮನೆಯ ಕಪಾಟಿನ ಲಾಕರ್ನಲ್ಲಿದ್ದ ಸುಮಾರು 16 ಗ್ರಾಂ ತೂಕದ ಮೂರು ಜೋಡಿ ಚಿನ್ನದ ಓಲೆಗಳು ಮತ್ತು ಸುಮಾರು 18 ಗ್ರಾಂ ತೂಕದ ಮೂರು ಚಿನ್ನದ ಉಂಗುರಗಳನ್ನು ಕಳ್ಳರು ದೋಚಿದ್ದಾರೆ. ಇವುಗಳ ಒಟ್ಟು ಮೌಲ್ಯ ಸುಮಾರು 4.13 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಇದರೊಂದಿಗೆ 65,000 ರೂ. ನಗದು ಹಣವನ್ನೂ ಕಳ್ಳರು ಕದ್ದಿರುವುದಾಗಿ ದೂರು ದಾಖಲಿಸಲಾಗಿದೆ.ಜೊತೆಗೆ ಮನೆಯ ದೇವರ ಕೋಣೆಯಲ್ಲಿದ್ದ ಸುಮಾರು 20,000 ರೂ. ಮೌಲ್ಯದ ಕೃಷ್ಣನ ಬೆಳ್ಳಿ ವಿಗ್ರಹ ಹಾಗೂ ಕಾಣಿಕೆ ಡಬ್ಬಿಯಲ್ಲಿದ್ದ ಸುಮಾರು 5,000 ರೂ. ಹಣವನ್ನು ಕಳ್ಳರು ದೋಚಿದ್ದಾರೆ ಎಂದು ಆರೋಪಿಸಲಾಗಿದೆ.ಮನೆಯ ಮಾಲೀಕ ಪ್ರಕಾಶ್ ಕೇರಳದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ತಿಂಗಳಿಗೊಮ್ಮೆ ಊರಿಗೆ…
ಮೈಸೂರು, ಮೇ. 08: ಕೆಎಸ್ಆರ್ಟಿಸಿ ಉಪನಗರ ಬಸ್ ನಿಲ್ದಾಣದ ಹೊರಭಾಗದಲ್ಲಿ ಸಾರ್ವಜನಿಕ ಮೂತ್ರವಿಸರ್ಜನೆ ಮಾಡುವವರನ್ನು ತಡೆಯುವ ಉದ್ದೇಶದಿಂದ ಬಸ್ ನಿಲ್ದಾಣದ ಎದುರಿನ ಬೆಂಗಳೂರು-ನೀಲಗಿರಿ ರಸ್ತೆ ಪಾದಚಾರಿ ಮಾರ್ಗದ ಮೇಲೆ ಪ್ರತಿಬಿಂಬ ಕನ್ನಡಿಯಂತಿರುವ ಸ್ಟೇನ್ಲೆಸ್ ಸ್ಟೀಲ್ ಶೀಟ್ಗಳನ್ನು ಮೈಸೂರು ಮಹಾನಗರ ಪಾಲಿಕೆ ಅಧಿಕಾರಿಗಳು ಅಳವಡಿಸಿದ್ದಾರೆ. 85 ಮೀಟರ್ ವ್ಯಾಪ್ತಿಯಲ್ಲಿ ಈ ಹೊಳೆಯುವ ಸ್ಟೇನ್ಲೆಸ್ ಸ್ಟೀಲ್ ಫ್ರೇಮ್ಗಳನ್ನು ಕನ್ನಡಿಯಂತೆ ಅಳವಡಿಸಲಾಗಿದೆ. ಹೀಗಾಗಿ ಇನ್ನು ಮುಂದೆ ಸಾರ್ವಜನಿಕವಾಗಿ ಮೂತ್ರವಿಸರ್ಜನೆ ಮಾಡಲು ಯತ್ನಿಸುವವರು ಯೋಚಿಸಬೇಕಾಗಿದೆ. ಬಸ್ ನಿಲ್ದಾಣದೊಳಗಿನ ಸಾರ್ವಜನಿಕ ಶೌಚಾಲಯ ಬಳಸುವ ಬದಲು ಹಲವರು ರಸ್ತೆಯ ಪಕ್ಕದ ಮಳೆನೀರು ಕಾಲುವೆಯಲ್ಲೇ ಮೂತ್ರವಿಸರ್ಜನೆ ಮಾಡುತ್ತಿದ್ದರು. ಹೀಗಾಗಿ ಈ ಪ್ರದೇಶದಲ್ಲಿ ದುರ್ವಾಸನೆ ಬೀರುತ್ತಿದ್ದು, ಅಲ್ಲಿ ಓಡಾಡಲು ಕಷ್ಟವಾಗುತ್ತಿತ್ತು. ಈ ಹಿಂದೆ ಎಚ್ಚರಿಕೆ ಫಲಕಗಳು ಹಾಗೂ ಸೂಚನೆಗಳನ್ನು ಹಾಕಿದ್ದರೂ ಸಮಸ್ಯೆ ಮುಂದುವರಿದಿತ್ತು. ಹೀಗಾಗಿ ಮಹಾನಗರ ಪಾಲಿಕೆ ಈ ಪ್ರದೇಶವನ್ನು ಪ್ರಮುಖ ‘ಯೆಲ್ಲೋ ಸ್ಪಾಟ್’ ಎಂದು ಗುರುತಿಸಿ ತುರ್ತು ಕ್ರಮ ಕೈಗೊಂಡಿದೆ. ಮೊದಲು ಕನ್ನಡಿಗಳನ್ನು ಅಳವಡಿಸುವ ಯೋಚನೆ ಇತ್ತು. ನಂತರ ಮೈಕಾ ಗ್ಲಾಸ್…
ಇಸ್ಲಾಮಾಬಾದ್,ಮೇ. 08 : ಅರಬ್ಬೀ ಸಮುದ್ರದಲ್ಲಿ ಸಿಲುಕಿದ್ದ ಭಾರತೀಯ ಹಡಗನ್ನು ಪಾಕಿಸ್ತಾನ ನೌಕಾಪಡೆ ರಕ್ಷಿಸಿದೆ. ಸಮುದ್ರದಲ್ಲಿ ಸಿಲುಕಿಕೊಂಡಿದ್ದ ಭಾರತೀಯ ಹಡಗಿನ ತುರ್ತು ಕರೆಗೆ ಪಾಕಿಸ್ತಾನಿ ನೌಕಾಪಡೆ ಸ್ಪಂದಿಸಿದೆ. ಸಿಬ್ಬಂದಿಗೆ ಆಹಾರ, ವೈದ್ಯಕೀಯ ಮತ್ತು ಇತರ ತುರ್ತು ಸಹಾಯವನ್ನು ನೀಡಿದೆ ಎಂದು ವರದಿಯಾಗಿದೆ.ಎಂವಿ ಗೌತಮ್ ಹೆಸರಿನ ಈ ಹಡಗು ಒಮಾನ್ನಿಂದ ಭಾರತಕ್ಕೆ ವಾಪಸ್ ಆಗುವಾಗ ತಾಂತ್ರಿಕ ವೈಫಲ್ಯವನ್ನು ಅನುಭವಿಸಿ ಸಮುದ್ರದಲ್ಲಿ ಸಿಲುಕಿಕೊಂಡಿತ್ತು ಎಂದು ಪಾಕಿಸ್ತಾನಿ ಮಿಲಿಟರಿ ತಿಳಿಸಿದೆ.ಮುಂಬೈನಲ್ಲಿರುವ ಸಾಗರ ರಕ್ಷಣಾ ಮತ್ತು ಸಮನ್ವಯ ಕೇಂದ್ರವು ಪಾಕಿಸ್ತಾನದ ಅಧಿಕಾರಿಗಳನ್ನು ಸಂಪರ್ಕಿಸಿ ಸಹಾಯವನ್ನು ಕೋರಿತು. ನಂತರ ಪಾಕಿಸ್ತಾನ ನೌಕಾಪಡೆಯು ಆರು ಭಾರತೀಯರು ಮತ್ತು ಓರ್ವ ಇಂಡೋನೇಷ್ಯಾದ ಸಿಬ್ಬಂದಿ ರಕ್ಷಿಸಿದೆ. ಮನವಿಗೆ ಸ್ಪಂದಿಸಿದ ಪಾಕಿಸ್ತಾನ ನೌಕಾಪಡೆಯು ರಕ್ಷಣಾ ಕಾರ್ಯಾಚರಣೆ ನಡೆಸಲು ಪಿಎಂಎಸ್ಎಸ್ ಕಾಶ್ಮೀರ್ ಎಂಬ ಹಡಗನ್ನು ನಿಯೋಜಿಸಿತ್ತು.
ಹರೇಕಳ, ಮೇ.08: ಹರೇಕಳ ಗ್ರಾಮ ಪಂಚಾಯತ್ನ ಪ್ರಸ್ತುತ ಸದಸ್ಯ ಹಾಗೂ ಮಾಜಿ ಅಧ್ಯಕ್ಷರಾದ ಬದ್ರುದ್ದೀನ್ ಫರಿದ್ ನಗರ ವಿರುದ್ಧ ಸಾರ್ವಜನಿಕ ನಿಧಿಗಳ ದುರುಪಯೋಗ ಹಾಗೂ ಟೆಂಡರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆಸಿರುವ ಕುರಿತು ಗಂಭೀರ ಆರೋಪ ಕೇಳಿಬಂದಿತ್ತು. ಈ ಸಂಬAಧ ಡೆನ್ಜಿಲ್ ದಯಾ ಪಿಂಟೋ ಅವರು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿಗಳಿಗೆ ದೂರು ಸಲ್ಲಿಸಿದ್ದು, ದೂರಿನಲ್ಲಿ ಬದ್ರುದ್ದೀನ್ ಫರಿದ್ ನಗರ ಅವರು ಉಳ್ಳಾಲ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯೊಂದಿಗೆ ಒಳಸಂಚು ನಡೆಸಿ, ಟೆಂಡರ್ ಹಂಚಿಕೆ ಹಾಗೂ ಕಾಮಗಾರಿಗಳ ಅನುಷ್ಠಾನದಲ್ಲಿ ಅನಿಯಮಿತತೆ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. 2025-26ನೇ ಸಾಲಿನ ಟೆಂಡರ್ ಪ್ರಕ್ರಿಯೆಯಲ್ಲಿ ಯಾವುದೇ ಸಮಂಜಸ ಕಾರಣಗಳನ್ನು ದಾಖಲಿಸದೇ ಸ್ಪರ್ಧಾತ್ಮಕತೆ ಮತ್ತು ಪಾರದರ್ಶಕತೆಯ ತತ್ವಗಳನ್ನು ಉಲ್ಲಂಘಿಸಿ “ಹಿಂದುಸ್ತಾನ್ ಸೋಲಾರ್ ಇಂಡಸ್ಟ್ರೀಸ್” ಸಂಸ್ಥೆಗೆ ಕಾಮಗಾರಿ ಹಂಚಿಕೆ ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದು ಕರ್ನಾಟಕ ಸಾರ್ವಜನಿಕ ಖರೀದಿ ನಿಯಮಾವಳಿ ಹಾಗೂ ಆಡಳಿತಾತ್ಮಕ ಪಾರದರ್ಶಕತಾ ಸಿದ್ಧಾಂತಗಳಿಗೆ ವಿರುದ್ಧವಾಗಿದೆ ಎಂದು ದೂರಿನಲ್ಲಿ ಹೇಳಲಾಗಿದೆ. ಅದರೊಂದಿಗೆ, 2025-26ನೇ ಸಾಲಿನ…
ಮಂಗಳೂರು, ಮೇ. 08: ಕುಡಿಯುವ ನೀರಿನ ಯೋಜನೆಗಳಿಗೆ ಯಾವುದೇ ವಿಳಂಬವಿಲ್ಲದೆ ತಕ್ಷಣವೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಗುರುವಾರ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಖಾದರ್ ಅವರು, ಅನೇಕ ಕಡೆಗಳಲ್ಲಿ ನೀರಿನ ಟ್ಯಾಂಕ್ಗಳು ಮತ್ತು ಕೊಳವೆಬಾವಿಗಳ ನಿರ್ಮಾಣವಾಗಿದ್ದರೂ, ವಿದ್ಯುತ್ ಸಂಪರ್ಕದ ವಿಳಂಬದಿಂದಾಗಿ ನೀರು ಪೂರೈಕೆಯಲ್ಲಿ ತೊಂದರೆಯಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಸ್ಥಳೀಯ ಸಂಸ್ಥೆಗಳಿಂದ ಠೇವಣಿ ಮೊತ್ತಕ್ಕಾಗಿ ಕಾಯದೆ ವಿದ್ಯುತ್ ಸಂಪರ್ಕ ನೀಡುವಂತೆ ಈಗಾಗಲೇ ಸರ್ಕಾರ ಸೂಚನೆ ನೀಡಿದೆ. ಗ್ರಾಮ ಪಂಚಾಯಿತಿಗಳಿಗೆ ಅನುದಾನ ಬಿಡುಗಡೆಯಾದ ನಂತರ ಈ ಮೊತ್ತವನ್ನು ಹೊಂದಾಣಿಕೆ ಮಾಡುವಂತೆ ಅವರು ತಿಳಿಸಿದ್ದಾರೆ.ಕುಡಿಯುವ ನೀರಿನ ಯೋಜನೆಗಳನ್ನು ಸ್ಥಳೀಯ ಅಗತ್ಯಗಳಿಗೆ ಅನುಗುಣವಾಗಿ ರೂಪಿಸಬೇಕು. ಮುಂದಿನ 30 ವರ್ಷಗಳ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಯೋಜನೆಗಳನ್ನು ಸಿದ್ಧಪಡಿಸಬೇಕು. ಅಗತ್ಯವಿದ್ದರೆ ವಿಶೇಷ ಅನುದಾನ ಒದಗಿಸಲು ಪ್ರಯತ್ನಿಸುವುದಾಗಿ ಅವರು ಭರವಸೆ ನೀಡಿದ್ದಾರೆಪೈಪ್ಲೈನ್ ಮೂಲಕ ನೀರು ಪೂರೈಸಲು ಸಾಧ್ಯವಾಗದ ಕಡೆಗಳಲ್ಲಿ ಟ್ಯಾಂಕರ್ ಮೂಲಕ ನೀರು ಒದಗಿಸಬೇಕು. ಟಾಸ್ಕ್ ಫೋರ್ಸ್ ಮೂಲಕವೂ ಇದಕ್ಕೆ ಆರ್ಥಿಕ ನೆರವು ನೀಡಲಾಗುವುದು ಎಂದರು.…

