Author: UllalaVani

Kannada News From Coastal Karnataka

UN networks ದೇರಳಕಟ್ಟೆ:  ಕ್ರೀಡೆ, ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಸಹಕಾರಿ. ವಿದ್ಯಾರ್ಥಿಗಳು ಹಾಗೂ ಯುವಜನತೆ ಕಲಿಕೆಯ ಜೊತೆಗೆ ಕ್ರೀಡೆಯಲ್ಲೂ ತೊಡಗಿಸಿಕೊಂಡಾಗ ವ್ಯಕ್ತಿತ್ವ ವಿಕಸನ ಸಾಧ್ಯ. ಆ ಮೂಲಕ ಆರೋಗ್ಯದಾಯಕ ಸಮಾಜ ನಿರ್ಮಿಸಬಹುದು ಎಂದು ನಿಟ್ಟೆ ಕ್ಷೇಮ ಆಸ್ಪತ್ರೆಯ ವೈದ್ಯಕೀಯ ಚಿತ್ರಣ ವಿಭಾಗದ ಮುಖ್ಯಸ್ಥ ಶಶಿಕುಮಾರ್ ಅವರು ಹೇಳಿದರು.ಅವರು ದೇರಳಕಟ್ಟೆಯ ನಿಟ್ಟೆ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆದ ನಂತೂರಿನ, ನಿಟ್ಟೆ ಡಾ| ಶಂಕರ ಅಡ್ಯಾಂತಾಯ ಪದವಿ ಪೂರ್ವ ಕಾಲೇಜಿನ ಹಳೆವಿದ್ಯಾರ್ಥಿ ಸಂಘದ ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿದರು.ಹಳೆವಿದ್ಯಾರ್ಥಿಗಳನ್ನು ಒಗ್ಗೂಡಿಸಿಕೊಂಡು ಆಯೋಜಿಸುವಂತಹ ಈ ರೀತಿಯ ಚಟುವಟಿಕೆಗಳು ಸಂಸ್ಥೆಯ ಬೆಳವಣಿಗೆಗೆ ಪೂರಕ ಇದರಿಂದ ಹಳೆವಿದ್ಯಾರ್ಥಿಗಳು ಹಾಗೂ  ಕಾಲೇಜಿನ ನಡುವಿನ ಬಾಂಧವ್ಯ ಇನ್ನಷ್ಟು ಗಟ್ಟಿಯಾಗಲು ಸಾಧ್ಯ. ಎಂದು ಅವರು ಹೇಳಿದರು.ಸಂಸ್ಥೆಯ ಪ್ರಾಂಶುಪಾಲ ಡಾ| ನವೀನ್ ಶೆಟ್ಟಿ ಕೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪಠ್ಯ ಚಟುವಟಿಕೆಗಳ ಜೊತೆ ಅನೇಕ ಸಹಪಠ್ಯ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ಆದರೆ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಕಾಲೇಜು ಬಿಟ್ಟ ನಂತರವೂ ಸಂಸ್ಥೆಯ ಜೊತೆಗೆ…

Read More

UN networks ಮಂಗಳಗಂಗೋತ್ರಿ: ಮಂಗಳೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದ ವತಿಯಿಂದ ಪ್ರಕಟಿಸಲಾದ ‘ನುಡಿಕನ್ನಡ,  ಕನ್ನಡೇತರರಿಗೆ ಕನ್ನಡ’ ಪಠ್ಯ ಪುಸ್ತಕದ ಬಿಡುಗಡೆ ಕಾರ್ಯಕ್ರಮವು ಬುಧವಾರ ಮಂಗಳೂರು ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ನಡೆಯಿತು. ಕೃತಿ ಬಿಡುಗಡೆಗೊಳಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಪೆÇ್ರ|ಪಿ.ಎಸ್.ಯಡಪಡಿತ್ತಾಯ ಅವರು,  ಮಂಗಳೂರು ವಿವಿಯ ಪ್ರಸಾರಾಂಗದ ವತಿಯಿಂದ ಪ್ರಕಟಿಸಲಾಗಿರುವ ನುಡಿಕನ್ನಡ ಪುಸ್ತಕವು ಕನ್ನಡೇತರರಿಗೂ ಅತ್ಯಂತ ಸುಲಭವಾಗಿ ಕನ್ನಡ ಕಲಿಸುವ ನಿಟ್ಟಿನಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಇದರಲ್ಲಿ  ಅಕ್ಷರಗಳ ಪರಿಚಯ, ವ್ಯಂಜನಗಳು, ಕಾಗುಣಿತ, ಒತ್ತಕ್ಷರಗಳು, ಪದಸಂಪತ್ತು, ಸರ್ವನಾಮಗಳು ಹಾಗೂ ಸಾಮಾನ್ಯವಾಗಿ ಜನಬಳಕೆಯ ಪದಗಳ ಬಗ್ಗೆ ಬಹಳ ಅತ್ಯುತ್ತಮವಾದ ಮಾಹಿತಿಯನ್ನು ಈ ಪುಸ್ತಕವು ಒದಗಿಸುತ್ತದೆ. ಇದು ವಿದ್ಯಾರ್ಥಿಗಳಿಗೆ ಬಹಳಷ್ಟು ಅನುಕೂಲತೆಯನ್ನು ಒದಗಿಸಿಕೊಡಲಿದೆ ಎಂದರು.  ಮಂಗಳೂರು ವಿವಿ ಕುಲಸಚಿವ ಡಾ| ಕಿಶೋರ್ ಕುಮಾರ್ ಸಿ.ಕೆ ಅವರು ಕೃತಿ ರಚನೆಯ  ಅಧ್ಯಯನ ಮಂಡಳಿ ಹಾಗೂ ಸಂಪಾದಕ ಮಂಡಳಿ ಸದಸ್ಯರ ಕಾರ್ಯವನ್ನು ಶ್ಲಾಘಿಸಿದರು.ಕಾರ್ಯನಿರ್ವಾಹಕ ಸಂಪಾದಕರಾದ ಡಾ| ಮಾಧವ ಎಂ ಕೆ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಸಾರಾಂಗದ ನಿರ್ದೇಶಕ ಪೆÇ್ರ| ಸೋಮಣ್ಣ ಸ್ವಾಗತಿಸಿದರು. ಪೆÇ್ರ|…

Read More

UN networks ಉಳ್ಳಾಲ: ಅಪಘಾತಕ್ಕೀಡಾದ ರಿಕ್ಷಾ ಚಾಲಕ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರುವ ಘಟನೆ ರಾ.ಹೆ 66 ರ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ರಿಕ್ಷಾ ಹಿಂಬದಿಯಿದ್ದ ಆಂಬ್ಯುಲೆನ್ಸ್ ಚಾಲಕ ಮಾನವೀಯತೆ ಮೆರೆದು ರಿಕ್ಷಾ ಚಾಲಕನ ಪ್ರಾಥಮಿಕ ಚಿಕಿತ್ಸೆಗೆ ನೀಡಲು ಯತ್ನಿಸಿ ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗಲಿಲ್ಲ. ಮೊಹಮ್ಮದ್ ಹನೀಫ್(40) ಮೃತರು. ಮಂಗಳೂರು ನಗರದಿಂದ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಗೆ ತರಕಾರಿ ಖರೀದಿಸಲೆಂದು ಇಂದು ನಸುಕಿನಲ್ಲಿ ವ್ಯಾಪಾರಿಯೋರ್ವರನ್ನು ಕರೆತರುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿದೆ. ಮಂಗಳೂರಿನಿಂದ ಜಪ್ಪಿನ ಮೊಗರು ಹೆದ್ದಾರಿಯಲ್ಲೇ ಚಾಲಕನಿಗೆ ಕಣ್ಣು ಮಂಜಾಗಿದ್ದು ರಸ್ತೆ ಮಧ್ಯದ ವಿಭಜಕಕ್ಕೆ ಡಿಕ್ಕಿ ಹೊಡೆದಿದ್ದರು. ಈ ವೇಳೆ ಆಂಬ್ಯುಲೆನ್ಸ್ ಚಾಲಕ ಕಣ್ಣೂರು ಮಟ್ಟನ್ನೂರಿನ ಟೀಂ ಎಇಟಿ ಗೆ ಸೇರಿದ ಆಂಬ್ಯುಲೆನ್ಸ್ ಚಾಲಕ ಆಕಾಶ್ ವಿಜಯನ್ ಪ್ರಾಥಮಿಕ ಚಿಕಿತ್ಸೆ ನೀಡಿದ್ದರು. ಅಲ್ಲಿಂದ ಮತ್ತೆ ಚಾಲಕ ಎದುರು ಹೋಗುತ್ತಿದ್ದಂತೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಯಿತಾದರೂ , ಅದಾಗಲೇ ಮೃತಪಟ್ಟಿದ್ದಾರೆ.

Read More

UN networks ಉಳ್ಳಾಲ: ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಹಾಗೂ ಉಚ್ಚಿಲದಲ್ಲಿ 19 ಹರೆಯದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಸಿಸಿಬಿ ಹಾಗೂ ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಕೆ.ಸಿ.ರೋಡ್ ಮುಳ್ಳುಗುಡ್ಡೆ ನಿವಾಸಿ ಅಬ್ದುಲ್ ರಾಶಿಕ್(22) ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ರಾಝಿಕ್ ಬುಧವಾರ ಬೆಳಗ್ಗೆ ವೇಳೆ 14ರ ಹರೆಯದ ವಿದ್ಯಾರ್ಥಿನಿ ತನ್ನ ತಂಗಿಯೊಂದಿಗೆ ತಲಪಾಡಿ ಅಲಂಕಾರ ಗುಡ್ಡೆಯಿಂದ ಕಾಲ್ನಡಿಗೆಯ ಮೂಲಕ ತಲಪಾಡಿ ಚೆಕ್ ಪೋಸ್ಟ್ ರಸ್ತೆಯಾಗಿ ಶಾಲೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಬಂದ ಯುವಕನೋರ್ವ ಆಕೆಯ ಕೈ ಎಳೆದು ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇದಲ್ಲದೆ ಅದೇ ದಿನ ಬೆಳಗ್ಗೆ ಉಚ್ಚಿಲದಲ್ಲಿ ಕಾಲೇಜಿಗೆ ಹೋಗುತ್ತಿದ್ದ 19 ಹರೆಯದ ಯುವತಿಯೊಬ್ಬಳಿಗೆ ಯುವಕನೋರ್ವ ಕಿರುಕುಳ ನೀಡಿದ್ದ ಬಗ್ಗೆ ಸಂತ್ರಸ್ತೆ ಪೊಲೀಸ್ ದೂರು ನೀಡಿದ್ದಳು. ಎರಡೂ ದೂರಿನ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಪ್ರಕರಣಕ್ಕೆ ಸಂಬಂಧಿಸಿ…

Read More

UN networks ತೊಕ್ಕೊಟ್ಟು; ಲಾರಿ ಹಾಗೂ ಓಮ್ನಿ ನಡುವೆ ಅಪಘಾತ ನಡೆದ ಘಟನೆ ತೊಕ್ಕೊಟ್ಟು ಫ್ಲೈಓವರ್ ನಲ್ಲಿ ಇಂದು ಸಂಜೆ ವೇಳೆ ಸಂಭವಿಸಿದೆ. ಕೇರಳ ಕಡೆಗೆ ಸರಕು ಸಾಗಾಟ ನಡೆಸುತ್ತಿದ್ದ ಲಾರಿಯ ಟಯರ್ ಫ್ಲೈಓವರ್ ನಲ್ಲಿ ಪಂಕ್ಚರ್ ಆಗಿತ್ತು. ಲಾರಿಯನ್ನು ಅಲ್ಲೇ ನಿಲ್ಲಿಸಿ ದುರಸ್ತಿ ನಡೆಸುತ್ತಿದ್ದ ಸಂದರ್ಭ ಹಿಂಬದಿಯಿಂದ ತಲಪಾಡಿ ಕಡೆಗೆ ತೆರಳುತ್ತಿದ್ದ ಓಮ್ನಿ ಕಾರಿನ ಚಾಲಕನ ಗಮನಕ್ಕೆ ಬಾರದೆ ಲಾರಿ ಹಿಂಬದಿಗೆ ಢಿಕ್ಕಿ ಹೊಡೆದಿದ್ದಾರೆ. ಘಟನೆಯಲ್ಲಿ ಯಾರಿಗೂ ಗಾಯವಾಗಿಲ್ಲ. ಘಟನೆಯಿಂದಾಗಿ ರಾ.ಹೆ 66 ರಲ್ಲಿ ಕೆಲಕಾಲ ವಾಹನ ಸಂಚಾರಕ್ಕೆ ಅಡಚಣೆಯುಂಟಾಯಿತು. ನಾಗುರಿ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

Read More

UN networks ಉಳ್ಳಾಲ: ಶಾಲೆಗೆ ತೆರಳುತ್ತಿದ್ದ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಸ್ಕೂಟರಿನಲ್ಲಿ ಬಂದ ಕಿರಾತಕನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ತಲಪಾಡಿ ಅಲಂಕಾರುಗುಡ್ಡೆ ಬಳಿ ಇಂದು ಬೆಳಿಗ್ಗೆ ನಡೆದಿದೆ. ಕೋಟೆಕಾರು ಬಳಿಯ ಶಾಲೆಗೆ ತೆರಳುತ್ತಿದ್ದ ವಿದ್ಯಾರ್ಥಿನಿ ತಲಪಾಡಿ ಚೆಕ್ ಪೋಸ್ಟ್ ಬಳಿ ಬಸ್ಸು ಹತ್ತಲು ಒಳದಾರಿಯಾಗಿ ನಡೆಕೊಂಡು ಬರುವಾಗ ಘಟನೆ ನಡೆದಿದೆ. ವಿದ್ಯಾರ್ಥಿನಿ ಗಾಬರಿಗೊಂಡು ಬೊಬ್ಬಿಟ್ಟಾಗ ಸ್ಥಳೀಯರು ಜಮಾಯಿಸುವಷ್ಟರಲ್ಲಿ ಆರೋಪಿ ಪರಾರಿಯಾಗಿದ್ದಾನೆ. ಸ್ಥಳೀಯರು ವಿದ್ಯಾರ್ಥಿನಿ ಗೆ ಧೈರ್ಯ ತುಂಬಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ತೆರಳಿ ಆರೋಪಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಸ್ಥಳೀಯವಾಗಿ ಹಲವು ಕಾರ್ಖಾನೆಗಳಿಗೆ ವಲಸೆ ಕಾರ್ಮಿಕರು ಬಂದಿದ್ದು, ಅವರ ದಾಖಲೆಗಳನ್ನು ಪೊಲೀಸ್ ಠಾಣೆಯಲ್ಲಿ ಮಾಲೀಕರು ದಾಖಲಿಸಿರುವುದಿಲ್ಲ. ಅಲ್ಲದೆ ಈ ಭಾಗದಲ್ಲಿ ಇಂತಹ ಕೃತ್ಯಗಳು ಅನೇಕ ನಡೆಯುತ್ತಿದ್ದು, ಈ ಬಗ್ಗೆ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಗಮನಕ್ಕೆ ತಂದಿದ್ದರೂ, ಕ್ರಮ ವಹಿಸಿಲ್ಲ ಅನ್ನುವ ಆರೋಪ ಕೇಳಿಬಂದಿದೆ. ಆರೋಪಿ ಕುರಿತ ಸಿಸಿಟಿವಿಯಲ್ಲಿ ದಾಖಲೆಯಿದ್ದು ಪೊಲೀಸರು ಪರಿಶೀಲನೆ…

Read More

UN networks ಕೊಂಡಾಣ: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರ ಕೊಂಡಾಣ ಶ್ರೀ ಪಿಲಿಚಾಮುಂಡಿ ಬಂಟ ಮುಂಡತ್ತಾಯ ದೈವಸ್ಥಾನದಲ್ಲಿ ಜೋರ್ತಿ ವಿದ್ವಾನ್‌ ಕುಂಬ್ಳೆ ಶೃಜೇಶ್‌ ಪೊದುವಾಳ್‌ ಮತ್ತು ಸತೀಶ್‌ ಪಣಿಕ್ಕರ್‌ ಊರ ಪರವೂರ ಭಕ್ತಾಧಿಗಳ ಹಾಗೂ ಗಣ್ಯರ ಉಪಸ್ಥಿತಿಯಲ್ಲಿ ಅಷ್ಠಮಂಗಲ ಪ್ರಶ್ನೆ ಚಿಂತನೆ ಇತ್ತೀಚೆಗೆ ನಡೆಯಿತು. ವೈಷ್ಣವಿ ಎಸ್.‌ ಆಚಾರ್ಯ ಸ್ವರ್ಣರಾಶಿ ಇಡುವ ಮೂಲಕ ಪ್ರಶ್ನೆ ಚಿಂತನೆ ಆರಂಭಿಸಲಾಯಿತು.ಕ್ಷೇತ್ರದ ತಂತ್ರಿಗಳ ಮಾರ್ಗದರ್ಶನದಲ್ಲಿ ಆರಂಭಗೊಂಡ ಕಾರ್ಯದಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮಾರ್ಗದರ್ಶಕ ಡಾ.ಕಲ್ಲಡ್ಕ ಪ್ರಭಾಕರ್‌ ಭಟ್‌, ಸದಸ್ಯರಾದ ಗಿರಿಪ್ರಕಾಶ್‌ ತಂತ್ರಿ ಪೊಳಲಿ, ಸಂಜೀವ ಸೂಟರ್‌ಪೇಟೆ, ಗೋಪಾಲ್‌ ಕುತ್ತಾರ್‌, ಶೃಂಗೇರಿ ಶಂಕರ ಮಠ ಕೋಟೆಕಾರು ಇದರ ಧರ್ಮದರ್ಶಿ ಸತ್ಯಶಂಕರ ಬೊಳ್ಳಾವ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಕಸ್ತೂರಿ ಪಂಜ, ಈಶ್ವರ್‌ ಕಟೀಲ್‌, ಹಿರಿಯರಾದ ಸೀತಾರಾಮ ಬಂಗೇರ, ಲಕ್ಷ್ಮಣ ಅಬ್ಬಕ್ಕನಗರ, ಬಾಬು ಬಂಗೇರ ಉಳ್ಳಾಲ, ಗೋಪಾಲ ಶೆಟ್ಟಿ ಇನೋಳಿ, ಗಡಿಕಾರರಾದ ದೇವು ಶೆಟ್ಟಿ, ಮೋಹನ್‌ ದಾಸ್‌ ಭಂಡಾರಿ, ಗಡದಗುತ್ತು ರಘುನಾಥ್‌ ಶೆಟ್ಟಿ, ಭಗವತೀಶ ಉಚ್ಚಿಲ, ಪವಿತ್ರ…

Read More

ಉಳ್ಳಾಲ: ಸಮಾಜದಲ್ಲಿರುವ ಕಟ್ಟಕಡೆಯ ವ್ಯಕ್ತಿಗಳನ್ನು ಗುರುತಿಸಿ ಸಹಾಯ ಮಾಡುವ ಕಾರ್ಯ ದ.ಕ ಗ್ಯಾರೇಜ್ ಮಾಲಕರ ಸಂಘದಿಂದ ಆಗಿದೆ. ಗ್ಯಾರೇಜ್ ವ್ಯವಹಾರ ಎಂದಲ್ಲಿ ಅಭಿವೃದ್ಧಿ ಹೊಂದುವ ಕ್ಷೇತ್ರ ಮುಂದಿನ ದಿನಗಳಲ್ಲಿ ಎಲೆಕ್ಟ್ರಾನಿಕ್ ವಾಹನಗಳ ಸವಾಲುಗಳು ಎದುರಾಗಲಿದೆ. ಅದರ ದುರಸ್ತಿ ತರಬೇತಿಯನ್ನು ಗ್ಯಾರೇಜ್ ಸಿಬ್ಬಂದಿಗೆ ನೀಡುವ ಕಾರ್ಯವಾಗಬೇಕಿದೆ ಎಂದು ಕಾಂಚನಾ ಮೋಟರ್ಸ್ ಸಂಸ್ಥೆ ಮಾಲೀಕ ಪ್ರಸಾದ್ ಕಾಂಚನ್ ಹೇಳಿದರು.ಅವರು ದಕ್ಷಿಣ ಕನ್ನಡ ಗ್ಯಾರೇಜ್ ಮಾಲಕರ ಸಂಘ ಮಂಗಳೂರು ( ದ.ಕ ಮತ್ತು ಉಡುಪಿ ಜಿಲ್ಲೆ) ವತಿಯಿಂದ ಕಡೆಮೊಗರು ಸಂಘದ ಸಭಾಭವನದಲ್ಲಿ ಜರಗಿದ ವಾರ್ಷಿಕ ಮಹಾಸಭೆ-2020-21 ಕ್ಕೆ ಚಾಲನೆ ನೀಡಿ ಮಾತನಾಡಿದರು.900 ಗ್ಯಾರೇಜ್ ಮಾಲಕರನ್ನು ಹೊಂದಿರುವ ಸಂಘ ರಾಜ್ಯಕ್ಕೆ ಮಾದರಿ. ದ.ಕ ಜನತೆಯಲ್ಲಿ ಶಿಸ್ತನ್ನು ತೋರಿಸಿದ ಗ್ಯಾರೇಜ್ ಮಾಲಕರ ಸಂಘ,ಕೋವಿಡ್ ಸಂಧಿಗ್ಧ ಸಂದರ್ಭ ಮೂರು ವರ್ಷಗಳಿಂದ ಸ್ಪೇರ್ ಪಾಟ್9 ಪೂರೈಕೆಯಲ್ಲಿ ಕೊರತೆಯಾಗಿದೆ. ಜನವರಿ ತಿಂಗಳಿನಲ್ಲಿ ಎಲ್ಲವೂ ಹಿಂದಿನಂತೆ ಆಗುವ ವಿಶ್ವಾಸವಿದೆ. ಗ್ಯಾರೇಜ್ ಮಾಲೀಕರು ಈ ಸಂದರ್ಭ ಸಹಕರಿಸಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು (ದ.ಕ ಮತ್ತು ಉಡುಪಿ…

Read More

UN networks ಸೋಮೇಶ್ವರ :ಸೋಮೇಶ್ವರ ಸಮುದ್ರ ತೀರದಲ್ಲಿ ಪ್ಲಾಸ್ಟಿಕ್ ಎಸೆದ ಪ್ರವಾಸಿ ಯುವತಿಯರಿಗೆ ಸೋಮೇಶ್ವರ ಪುರಸಭೆ ವತಿಯಿಂದ ರೂ. 500 ದಂಡ ವಿಧಿಸಲಾಯಿತು. ಸಮುದ್ರ ತೀರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಸಮುದ್ರ ತೀರದಲ್ಲಿ ಪ್ಲಾಸ್ಟಿಕ್ ತ್ಯಾಜ್ಯವೂ ಹೆಚ್ಚಾಗಿ ಕಂಡುಬಂದಿತ್ತು. ಈ ಕುರಿತು ಸೋಮೇಶ್ವರ ಪುರಸಭೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ವಿವಿದ ಸಂಘ ಸಂಸ್ಥೆಗಳ ನೇತ್ರತ್ವದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಸಿ 1 ಟನ್ ನಷ್ಟು ಪ್ಲಾಸ್ಟಿಕ್ ಸಂಗ್ರಹಿಸಿತ್ತು. ಅಲ್ಲದೆ ಸ್ಥಳದಲ್ಲಿ ಪ್ಲಾಸ್ಟಿಕ್ ಹಾಕದಂತೆ ಎಚ್ಚರಿಸಿ ನಾಮಫಲಕವನ್ನು ಹಾಕಲಾಗಿತ್ತು. ಆದರೂ ಪ್ರವಾಸಿಗರು ಪ್ಲಾಸ್ಟಿಕ್ ಹಾಕಿದ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ ರೂ.500 ದಂಡ ವಿಧಿಸಿ, ಸ್ಥಳದಲ್ಲಿ ಕಾರ್ಯಾಚರಿಸುತ್ತಿರುವ ಅಂಗಡಿ ಮಾಲೀಕರಿಗೆ ನೋಟೀಸು ನೀಡಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ವಾಣಿ ಆಳ್ವ ತಿಳಿಸಿದ್ದಾರೆ.

Read More

UN networks ಉಳ್ಳಾಲ: ಭಾರತದ ಆರೋಗ್ಯ ಕ್ಷೇತ್ರ ಉತ್ತಮ ಸಾಧನೆಯ ಪಥದಲ್ಲಿದ್ದು, ಇಲ್ಲಿನ ವೈದ್ಯರು, ದಾದಿಯರು ದೇಶ ವಿದೇಶಗಳಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಕಳೆದ 14 ವರ್ಷಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆದುಕೊಂಡಿರುವ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಪಾತ್ರ ಮಹತ್ವದ್ದಾಗಿದೆ ಎಂದು ಭಾರತ ಸರಕಾರದ ಆರೋಗ್ಯ ಸಂಶೋಧನಾ ವಿಭಾಗದ ಕಾರ್ಯದರ್ಶಿ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನ ಡೈರೆಕ್ಟರ್ ಜನರಲ್ ಪೆÇ್ರ. ಡಾ. ಬಲರಾಂ ಭಾರ್ಗವ ಹೇಳಿದರು. ಅವರು ದೇರಳಕಟ್ಟೆಯ ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿರುವ ಕೆ.ಎಸ್. ಹೆಗ್ಡೆ ಆಡಿಟೋರಿಯಂನಲ್ಲಿ ಶನಿವಾರ ನಡೆದ ನಿಟ್ಟೆ ಪರಿಗಣಿಸಲ್ಪಟ್ಟ ವಿವಿಯ 11ನೇ ಘಟಿಕೋತ್ಸವದಲ್ಲಿ ಪ್ರಮುಖ ಭಾಷಣ ಮಾಡಿದರು.ಬಾಹ್ಯಾಕಾಶ ಸಂಶೋಧನೆ, ಸಶಸ್ತ್ರ ಪಡೆ, ಮೊಬೈಲ್, ಪರಮಾಣು ಶಕ್ತಿಗಳ ತಂತ್ರಜ್ಞಾನದಲ್ಲಿ ಭಾರತ ಅಂತರಾಷ್ಟ್ರೀಯವಾಗಿ ಮುಂಚೂಣಿಯಲ್ಲಿದೆ. ಲಾಲ್ ಬಹದ್ದೂರ್ ಶಾಸ್ತ್ರಿ ಪ್ರಧಾನಿಯಾಗಿದ್ದ ಸಂದರ್ಭ ಆಹಾರದ ಕೊರತೆಯುಂಟಾಗಿತ್ತು. ಅವೆಲ್ಲವನ್ನು ಮೆಟ್ಟಿ ನಿಂತ ದೇಶ ಹಸಿರು ಕ್ರಾಂತಿ ಮೂಲಕ ವಿಶ್ವಕ್ಕೆ ಆಹಾರ ಧಾನ್ಯಗಳನ್ನು ಸರಬರಾಜು ಮಾಡುವಂತಹ ದೇಶವಾಗಿ…

Read More