Author: UllalaVani

Kannada News From Coastal Karnataka

ಮಂಗಳೂರು, ಮೇ 08: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾ ಮಟ್ಟದ ಸಾಮಾಜಿಕ ಜಾಲತಾಣ ಸಭೆಯು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನವಾಝ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ಇಬ್ರಾಹಿಂ ನವಾಝ್, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿನಲ್ಲಿ ಮಹತ್ತರ ಬದಲಾವಣೆ ತಂದಿದ್ದು, ಆ ಯೋಜನೆಗಳ ಬಗ್ಗೆ ಜನರಿಗೆ ಸಮರ್ಪಕ ಮಾಹಿತಿ ತಲುಪಿಸುವಲ್ಲಿ ಸಾಮಾಜಿಕ ಜಾಲತಾಣಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು. ವಿರೋಧ ಪಕ್ಷಗಳು ಹರಡುತ್ತಿರುವ ಅಪಪ್ರಚಾರ ಮತ್ತು ಸುಳ್ಳು ಸುದ್ದಿಗಳಿಗೆ ತಕ್ಕ ಪ್ರತ್ಯುತ್ತರ ನೀಡಲು ಕಾರ್ಯಕರ್ತರು ಸದಾ ಸನ್ನದ್ಧರಾಗಿರಬೇಕು. ವಾಸ್ತವಾಂಶಗಳನ್ನು ಜನರ ಮುಂದಿಡುವ ಮೂಲಕ ಪಾರದರ್ಶಕತೆಯನ್ನು ಕಾಯ್ದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಸಭೆಯಲ್ಲಿ ಯುವನಿಧಿ ಯೋಜನೆಯಡಿ ನಿರುದ್ಯೋಗಿ ಯುವಕರಿಗೆ ದೊರೆಯುತ್ತಿರುವ ನೆರವು ಹಾಗೂ ಮುಂದಿನ ದಿನಗಳಲ್ಲಿ ಯುವ ಸಬಲೀಕರಣಕ್ಕಾಗಿ ಕೈಗೊಳ್ಳಲಿರುವ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಯಿತು. ಜಿಲ್ಲೆಯಾದ್ಯಂತ ಸಾಮಾಜಿಕ ಜಾಲತಾಣದ ತಂಡವನ್ನು ಮತ್ತಷ್ಟು ಬಲಪಡಿಸುವ ಜೊತೆಗೆ, ಪ್ರತಿ ಬೂತ್…

Read More

ಕುತ್ತಾರು ಮೇ 7: ಮುನ್ನೂರು ಗ್ರಾಮದ ಕುತ್ತಾರು ಪ್ರದೇಶದ ಕಂಪ ಮನೆತನದ ದೇವಪ್ಪ ಕಂಪ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಸರಳ ಸ್ವಭಾವ, ಸಹನಶೀಲತೆ ಹಾಗೂ ಸ್ನೇಹಪರ ನಡೆನುಡಿಗಳಿಂದ ದೇವಪ್ಪ ಕಂಪ ಅವರು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಸಮಾಜದಲ್ಲಿ ಉತ್ತಮ ಬಾಂಧವ್ಯ ಬೆಳೆಸಿಕೊಂಡಿದ್ದ ಅವರು ಜನಸೇವೆಯಲ್ಲಿ ಸದಾ ತೊಡಗಿಸಿಕೊಂಡಿದ್ದರು. ಸಿಪಿಎಂ ಪಕ್ಷದ ಹಿತೈಷಿಯಾಗಿ ಕಾರ್ಯನಿರ್ವಹಿಸಿದ್ದ ದೇವಪ್ಪ ಕಂಪ ಅವರು ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಕಾರ್ಯಕರ್ತರಿಗಿಂತಲೂ ಹೆಚ್ಚು ಸಮರ್ಪಣಾಭಾವದಿಂದ ಪಕ್ಷದ ಹೋರಾಟ ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಪಕ್ಷದ ಆಶಯಗಳ ಬಗ್ಗೆ ಅಪಾರವಾದ ಅಭಿಮಾನ ಹೊಂದಿದ್ದ ಅವರು ಪ್ರತಿಯೊಂದು ಹೋರಾಟ ಕಾರ್ಯಕ್ರಮದಲ್ಲೂ ತಮ್ಮ ಹಾಜರಾತಿ ನೀಡುತ್ತಿದ್ದರು. ಇದಲ್ಲದೆ, ಈ ಭಾಗದ ಸಾಮಾಜಿಕ ಸಂಸ್ಥೆಗಳಾದ ಶ್ರೀ ಜೈ ಹನುಮಾನ್ ಕ್ರೀಡಾ ಮಂಡಳಿ ಹಾಗೂ ಮುನ್ನೂರು ಯುವಕ ಮಂಡಳಿಗಳಲ್ಲಿ ಸದಸ್ಯರಾಗಿ ಸೇವೆ ಸಲ್ಲಿಸಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಡಿ.ವೈ.ಎಫ್.ಐ ಹಾಗೂ ರೈತ ಸಂಘದ ಸಮಿತಿ ಸದಸ್ಯರಾಗಿ ಸಾಮಾಜಿಕ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡಿದ್ದ ದೇವಪ್ಪ ಕಂಪ ಅವರು ಪ್ರಸ್ತುತ…

Read More

ಮಂಗಳೂರು: ಪ್ರತಿಯೊಬ್ಬ ಮಹಿಳೆಯೂ ಸ್ವಾವಲಂಬಿಯಾಗಿ ಬದುಕುವಂತಾಗಬೇಕು ಎಂಬ ಆಶಯದೊಂದಿಗೆ ಕಾರ್ಯಾಚರಿಸುತ್ತಿರುವ ವಿಆರ್‌ ಡಿಎಫ್‌ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಕಳೆದ 36 ವರ್ಷಗಳಿಂದ ಯಶಸ್ವಿ ಹೆಜ್ಜೆಗಳನ್ನು ಇಡುತ್ತಾ ಬಂದಿದೆ. ಇದೀಗ ಶಿವಮೊಗ್ಗ ಹಾಗೂ ಹಾಸನ ವಿಸ್ತರಣೆಗೆ ಮುಂದಾಗಿದೆ. ಗ್ರಾಮೀಣ ಮಟ್ಟದಿಂದಲೇ ಅಭಿವೃದ್ಧಿ ಕಾರ್ಯಗಳು, ಜ್ಞಾನ ವೃದ್ಧಿ ಹಾಗೂ ಸಮಾಜ ಸೇವೆಯ ಕೆಲಸಗಳಾಗಬೇಕು ಅನ್ನುವ ಉದ್ದೇಶದೊಂದಿಗೆ ಕಾರ್ಯಾಚರಿಸುತ್ತಿದೆ ಎಂದು ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಪ್ರಧಾನ ವ್ಯವಸ್ಥಾಪಕ ರಾಜೇಶ್‌ ಖನ್ನಾ ತಿಳಿಸಿದರು. ಅವರು ಬ್ಯಾಂಕ್ ಆಫ್ ಬರೋಡ ಪ್ರವರ್ತಿತ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು ವತಿಯಿಂದ ಮಲ್ಲಿಕಟ್ಟೆಯ ಲಯನ್ಸ್ ಸೇವಾ ಮಂದಿರದಲ್ಲಿ ಇಂದು ಹಮ್ಮಿಕೊಂಡ “ಸ್ವಾವಲಂಬಿ 2026” ಮಹಿಳಾ ಉದ್ದಿಮೆದಾರರ ಸಮಾವೇಶ ಕ್ಕೆ ಚಾಲನೆ ನೀಡಿ ಮಾತನಾಡಿದರು.ಭಾರತ ಸರ್ಕಾರದ ಮುಖ್ಯ ಉದ್ದೇಶ ಸಮಾಜದ ಪ್ರತಿಯೊಂದು ವರ್ಗದ ಅಭಿವೃದ್ಧಿಯಾಗಿದೆ. ನಾರಿ ಶಕ್ತಿಯ ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ. “ನಾರಿ ಸರ್ವತ್ರ ಪೂಜ್ಯತೆ” ಎಂಬ ತತ್ವದ ಆಧಾರದ ಮೇಲೆ ಸಮಾಜದ ಸಮಗ್ರ…

Read More

ಎಸ್ ವೈ ಎಸ್, ಎಸ್ ವೈ ಎಸ್‌ಎಸ್‌ಎಫ್ ಹಾಗೂ ಕೆ ಎಮ್ ಜೆ ಕೆ ಸಿ ನಗರ ಯುನಿಟ್ ವತಿಯಿಂದ “ಸುನ್ನೀ ಆದರ್ಶ ಸಂಗಮ” ಕಾರ್ಯಕ್ರಮವು ಮೇ 8ರಂದು ಶುಕ್ರವಾರ ಸಂಜೆ 5 ಗಂಟೆಗೆ ಕೆ ಸಿ ನಗರ ಜಂಕ್ಷನ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕೆ ಪಿ ಹುಸೈನ್ ಸಅದಿ ಕೆ ಸಿ ರೋಡ್ ಉದ್ಘಾಟಿಸಲಿದ್ದು, ಮುಖ್ಯ ಭಾಷಣವನ್ನು ವಹ್ಹಾಬ್ ಸಖಾಫಿ ಮಾಂಬಾಡ್ ನೆರವೇರಿಸಲಿದ್ದಾರೆ. ಅಬ್ದುರ್ರಶಿದ್ ಝೈನಿ ಸಖಾಫಿ ತಲಪಾಡಿ ಹಾಗೂ ಮುನೀರ್ ಸಖಾಫಿ ಕೆ ಸಿ ರೋಡ್ ಉಪಸ್ಥಿತರಿರುವರು. ಸಲಫಿಗಳ ಪೊಳ್ಳು ವಾದಗಳಿಗೆ ತಕ್ಕ ಉತ್ತರ ನೀಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More

ನವದೆಹಲಿ, ಮೇ. 07;  ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪಾಕ್‌ ಮೂಲದ ಉಗ್ರರು ನಡೆಸಿದ ನರಮೇಧಕ್ಕೆ ಪ್ರತೀಕಾರವಾಗಿ ಭಾರತ ನಡೆಸಿದ ʻಆಪರೇಷನ್‌ ಸಿಂಧೂರʼ ವಿಶೇಷ ಕಾರ್ಯಾಚರಣೆಗೆ 1 ವರ್ಷ ಪೂರ್ಣಗೊಂಡಿದೆ. ಈ ಹೊತ್ತಿನಲ್ಲೇ ಪಾಕ್‌ ವಿರುದ್ಧ ತೀರಿಸಿಕೊಂಡ ಪ್ರತೀಕಾರ ಹಾಗೂ ಭಾರತೀಯ ಮೂರು ಸೇನೆಗಳ ಪರಾಕ್ರಮವನ್ನು ನೆನಪಿಸುವ ವಿಶೇಷ ವಿಡಿಯೋವೊಂದನ್ನು ಭಾರತೀಯ ವಾಯುಪಡೆ ಹಂಚಿಕೊಂಡಿದೆ. ಎಕ್ಸ್‌ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಭಾರತೀಯ ವಾಯುಪಡೆ, ಆಪರೇಷನ್ ಸಿಂಧೂರ ನ್ಯಾಯ ದೊರಕಿಸಿದೆ. ಈ ಕಾರ್ಯ ನಿಖರವಾಗಿದ್ದು, ನೆನಪಿನಲ್ಲಿ ಶಾಶ್ವತವಾಗಿ ಉಳಿಯುತ್ತದೆ ಎಂದು ಬರೆದುಕೊಂಡಿದೆ. ಅಲ್ಲದೇ, ಭಾರತ ಯಾವುದನ್ನೂ ಮರೆಯುವುದಿಲ್ಲ-ಭಾರತ ಯಾವುದನ್ನೂ ಕ್ಷಮಿಸುವುದಿಲ್ಲ, ಆಪರೇಷನ್ ಸಿಂಧೂರ ಮುಂದುವರಿಯುತ್ತದೆ ಎಂದು ವಾಯುಪಡೆ ಎಚ್ಚರಿಸಿದೆ.ಅಲ್ಲದೇ ವಾಯುಪಡೆ ಹಂಚಿಕೊಂಡ ಇದೇ ವಿಡಿಯೋನಲ್ಲಿ ಪ್ರಧಾನಿ ನರೇಂದ್ರ ಮೋದಿ ಸಹ ಉಗ್ರರ ವಿರುದ್ಧ ಗುಡುಗಿದ್ದಾರೆ. ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನ ಗುರುತಿಸಿ, ಪತ್ತೆಮಾಡಿ ಶಿಕ್ಷಿಸುತ್ತದೆ ಎಂದು ಹೇಳಿದ್ದಾರೆ.

Read More

ಉಳ್ಳಾಲ‌: ಹಜ್ ಯಾತ್ರೆ ದೇವನ ಮೇಲೆ ವಿಶ್ವಾಸದಿಂದ ಕೂಡಿರಬೇಕಿದ್ದು ಅದರ ಹೊರತು ತೋರ್ಪಡಿಕೆಗೆ ಸೀಮಿತವಾದರೆ ಅದರಿಂದ ಯಾವುದೇ ಪ್ರಯೋಜನ ಇಲ್ಲ.‌ ಯಾತ್ರಿಕರನ್ನು ಬೀಳ್ಕೊಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಹಳೆಕೋಟೆ ಜುಮಾ ಮಸೀದಿಯ ಖತೀಬ್ ಸಿರಾಜುದ್ದೀನ್ ಹಿಮಮಿ ಉಸ್ತಾದ್ ಹೇಳಿದರು. ಕುಟುಂಬ ಸಮೇತ ಪವಿತ್ರ ಹಜ್ ಯಾತ್ರೆ ಕೈಗೊಳ್ಳಲಿರುವ ದರ್ಗಾ ಅಧ್ಯಕ್ಷ ಬಿ.ಜಿ.ಹನೀಫ್ ಹಾಗೂ ಶಾಲಾ ಸಂಚಾಲಕ ಇಸ್ಮಾಯಿಲ್ ಹಾಜಬ್ಬ ಅವರಿಗೆ ಸಯ್ಯದ್ ಮದನಿ ವಿದ್ಯಾ ಸಂಸ್ಥೆಗಳ ವತಿಯಿಂದ ಹಳೆಕೋಟೆ ಸಯ್ಯದ್ ಮದನಿ ಶಾಲಾ ಸಭಾಂಗಣದಲ್ಲಿ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಸನ್ಮಾನ ಸ್ವೀಕರಿಸಿದ ದರ್ಗಾ ಅಧ್ಯಕ್ಷ ಬಿ.ಜಿ.ಹನೀಫ್ ಮಾತನಾಡಿ, ಯಾವುದೇ ಫಲಾಪೇಕ್ಷೆ ಇಲ್ಲದೆ ಕೇವಲ ದೇವಭಯದಿಂದ ಹಜ್ ನಿರ್ವಹಿಸಿದರೆ ಆಗತಾನೇ ಹುಟ್ಟಿದ ಮಗುವಿನಂತೆ ಆಗುತ್ತಾನೆ ಎಂದು ಇಸ್ಲಾಮಿನಲ್ಲಿ ತಿಳಿಸಲಾಗಿದೆ ಎಂದರು.ದರ್ಗಾ ಉಪಾಧ್ಯಕ್ಷ ಅಶ್ರಫ್ ಅಹ್ಮದ್ ರೈಟ್ ವೇ ಮಾತನಾಡಿ, ಹಜ್ ಯಾತ್ರೆ ಅಥವಾ ಯಾವುದೇ ಕಾರ್ಯ ಕೈಗೊಳ್ಳುವ ಸಂದರ್ಭ ಸನ್ಮಾನ ಕಾರ್ಯಕ್ರಮ ನಡೆಸುವಾಗ ಅಹಂಕಾರ ಬಂದರೆ ಆತನ ಎಲ್ಲ ಕರ್ಮಗಳೂ ನಿಷ್ಪ್ರಯೋಜಕ…

Read More

ಉಳ್ಳಾಲ: ಉಳ್ಳಾಲ ಪುರಸಭೆಗೆ ಎರಡು ಬಾರಿ ಕಾಪಿಕಾಡು ವಾರ್ಡಿನಿಂದ ಸ್ಪರ್ಧಿಸಿ ಕೌನ್ಸಿಲರ್ ಆಗಿದ್ದ ಭವಾನಿ (70) ಇವರು ಅಲ್ಪಕಾಲದ ಅಸೌಖ್ಯದಿಂದ ನಗರದ ಸರಕಾರಿ ಆಸ್ಪತ್ರೆಯಲ್ಲಿ ನಿಧನರಾದರು. ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿವಾಸಿಯಾದ ಭವಾನಿ ಇವರು ಅವಿವಾಹಿತರಾಗಿದ್ದು , ಬಿಜೆಪಿ ಸಕ್ರಿಯ ಮಹಿಳಾ ಸದಸ್ಯೆಯಾಗಿದ್ದರು. ಪುಲ್ಕೆದಡಿ ಆದಿ ಕ್ಷೇತ್ರ ಬಂಡಿಕೊಟ್ಯ ಕೋರ್ದಬ್ಬು ದೈವಸ್ಥಾನದ ಸಮಿತಿಯಲ್ಲಿ ಸಕ್ರಿಯ ಸದಸ್ಯೆಯಾಗಿದ್ದರು. ಉಳ್ಳಾಲ ಪುರಸಭೆ ಗೆ ಎರಡು ಬಾರಿ ಕೌನ್ಸಿಲರ್ ಆಗಿ ಆಯ್ಕೆಗೊಂಡು ಒಂದು ಬಾರಿ ಉಪಾಧ್ಯಕ್ಷೆಯಾಗಿ ಆಯ್ಕೆಗೊಂಡಿದ್ದರು.

Read More

ಮಂಗಳೂರು, ಮೇ. 06 : ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಹಾಗೂ ಶಾಸಕರ ಪ್ರಮಾಣವಚನ ಸ್ವೀಕಾರ ವಿಳಂಬವಾಗುತ್ತಿದೆ ಎಂಬ ಬಿಜೆಪಿಯ ಆರೋಪಕ್ಕೆ ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಜಾಪ್ರಭುತ್ವ ಮತ್ತು ಸಂಸದೀಯ ವ್ಯವಸ್ಥೆಯು ವಿಶ್ವಾಸದ ಮೇಲೆ ನಡೆಯಬೇಕು, ವಿಶ್ವಾಸವಿಲ್ಲದಿದ್ದರೆ ವ್ಯವಸ್ಥೆ ಬಲಿಷ್ಠವಾಗಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದರು. ಪ್ರಮಾಣವಚನಕ್ಕೆ ಸಂಬಂಧಿಸಿದಂತೆ ತಾವು ಯಾವುದೇ ವಿಳಂಬ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ ಅವರು, “ನಾನು ಬೆಂಗಳೂರಿನಲ್ಲಿದ್ದ ಅವಧಿಯಲ್ಲಿ ಯಾರೂ ನನ್ನನ್ನು ಭೇಟಿ ಮಾಡಿಲ್ಲ. ನಿನ್ನೆಯಷ್ಟೇ ಸಮಯ ಕೋರಿ ಅರ್ಜಿ ಸಲ್ಲಿಕೆಯಾಗಿದೆ. ಇದೊಂದು ವಿಶಿಷ್ಟ ಸನ್ನಿವೇಶವಾಗಿದ್ದು, ತಾಂತ್ರಿಕ ವಿಚಾರಗಳ ಬಗ್ಗೆ ತಜ್ಞರ ಅಭಿಪ್ರಾಯ ಪಡೆಯುವುದು ಅಗತ್ಯವಾಗಿದೆ” ಎಂದರು.ಸಂವಿಧಾನ ಮತ್ತು ಕಾನೂನಿನ ಚೌಕಟ್ಟಿನಲ್ಲೇ ಕಾರ್ಯನಿರ್ವಹಿಸಬೇಕಾದ ಜವಾಬ್ದಾರಿ ನನ್ನ ಮೇಲಿದೆ. ಸರ್ಕಾರದ ಕಾನೂನು ಹೋರಾಟಕ್ಕೂ ನನಗೂ ಸಂಬಂಧವಿಲ್ಲ. ಈ ವಿಚಾರದಲ್ಲಿ ಆತುರಪಡುವುದು ಅಥವಾ ಸಂಶಯ ವ್ಯಕ್ತಪಡಿಸುವುದು ಸರಿಯಲ್ಲ ಎಂದು ಖಾದರ್ ಕಿವಿಮಾತು ಹೇಳಿದರು. ಇದೇ ವೇಳೆ ರಾಜ್ಯಪಾಲರು ತಮಗೆ ಕರೆ…

Read More

ಕೋಟೆಕಾರ್, ಮೇ 6:ಬದ್ರಿಯಾ ವೆಲ್ಫೇರ್ ಸೊಸೈಟಿ (ರಿ), ಅಜ್ಜಿನಡ್ಕ ಇದರ 40ನೇ ವರ್ಷದ ಅಂಗವಾಗಿ ಬೃಹತ್ ರಕ್ತದಾನ ಹಾಗೂ ಉಚಿತ ವೈದ್ಯಕೀಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ಫಾದರ್ ಮಲ್ಲರ್ ಆಸ್ಪತ್ರೆ, ಕಂಕನಾಡಿ ಹಾಗೂ ಏನಫೋಯ ಮೆಡಿಕಲ್ ಕಾಲೇಜ್ ಮತ್ತು ಬ್ಲಡ್ ಡೋನರ್ಸ್ (ರಿ), ಮಂಗಳೂರು ಇವರ ಸಹಯೋಗದಲ್ಲಿ ನಡೆಯುವ ಈ ಶಿಬಿರವು ಮೇ 10 ರ ಭಾನುವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಅಜ್ಜಿನಡ್ಕದಲ್ಲಿ ನಡೆಯಲಿದೆ. ಶಿಬಿರದಲ್ಲಿ ರಕ್ತದಾನಕ್ಕೆ ಅವಕಾಶವಿರುವುದರ ಜೊತೆಗೆ ಎಲುಬು ಮತ್ತು ನೇತ್ರ ತಪಾಸಣೆ ಸೇವೆಗಳು ಲಭ್ಯವಿದ್ದು, ಅಗತ್ಯವಿರುವವರಿಗೆ ಉಚಿತ ಕನ್ನಡಕ ವಿತರಣೆ ಮಾಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಕ್ತದಾನ ಮಾಡುವುದರ ಜೊತೆಗೆ ಉಚಿತ ವೈದ್ಯಕೀಯ ಶಿಬಿರದ ಪ್ರಯೋಜನ ಪಡೆಯುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉಳ್ಳಾಲ; ಹಿರಾ ಮಹಿಳಾ ಕಾಲೇಜು ವತಿಯಿಂದ ಕಾಲೇಜಿನ ಯೂತ್ ರೆಡ್ ಕ್ರಾಸ್ ಯುನಿಟ್ ಮತ್ತು ಎನ್.ಎಸ್.ಎಸ್.ಜಂಟಿ ಆಶ್ರಯದಲ್ಲಿ ಮಂಗಳೂರು ಕೆಎಂಸಿ ಆಸ್ಪತ್ರೆ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ ಬಬ್ಬುಕಟ್ಟೆ ಹಿರಾ ಕ್ಯಾಂಪಸ್ ಎಂ.ಎಸ್.ಎಸ್.ಎಚ್.ಎo ಸಭಾಂಗಣದಲ್ಲಿ ನಡೆಯಿತು. ಜಮಾತೆ ಇಸ್ಲಾಮಿ ಹಿಂದ್ ಮಂಗಳೂರು ಉತ್ತರ ಅಧ್ಯಕ್ಷ ಇಸಾಕ್ ಪುತ್ತೂರು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಕ್ತದ ಕೊರತೆ ಬಹಳಷ್ಠಿದೆ. ಆದ್ದರಿಂದ ಇಂತಹ ಶಿಬಿರಕ್ಕೆ ಹೆಚ್ಚಿನ ಮಹತ್ವ ನೀಡಬೇಕು. ರಕ್ತದಾನದ ಮೂಲಕ ಒಂದು ಜೀವ ಉಳಿಸಿದರೆ ಇಡೀ ಮನುಕುಲವನ್ನು ರಕ್ಷಿಸಿದಂತಾಗುತ್ತದೆ ಎಂದರು. ಶಾಂತಿ ಎಜುಕೇಷನಲ್ ಟ್ರಸ್ಟ್ ಕಾರ್ಯದರ್ಶಿ ಅಬ್ದುಲ್ ಕರೀಂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.ಕೆ.ಎಂ.ಸಿ. ರಕ್ತ ಮೆಡಿಕಲ್ ಆಫೀಸರ್ ಡಾ.ಲಕ್ಷಿö್ಮ ಶಿಬಿರ ಸಂಯೋಜಕಿ ದುರ್ಗಾ ದಾಮೋದರ್, ಹಿರಾ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಝಾಕೀರ್, ಸಂಚಾಲಕ ರಾಹ್ಮತುಲ್ಲ, ಹಿರಾ ಮಹಿಳಾ ಕಾಲೇಜು ಪ್ರಾಂಶುಪಾಲ ಆಯಿಷಾ ಅಸ್ಮೀನ್, ಹಿರಾ ಪ್ರೌಢ ಶಾಲಾ ಮುಖ್ಯೋಪದ್ಯಾಯಿನಿ ಆಯಿಶಾ ಆಫ್ರೀನ್, ಹಿರಾ ಶಾಲೆಯ ಮುಖ್ಯೋಪದ್ಯಾಯಿನಿ ರೀನಾ ವೇಗಸ್, ಹಿರಾ ಕಾಲೇಜಿನ ಶಿಬಿರ ಸಂಯೋಜಕಿ…

Read More