Author: UllalaVani

Kannada News From Coastal Karnataka

UN networks ಉಳ್ಳಾಲ: ಭಾರತದ ಆರೋಗ್ಯ ಕ್ಷೇತ್ರ ಉತ್ತಮ ಸಾಧನೆಯ ಪಥದಲ್ಲಿದ್ದು, ಇಲ್ಲಿನ ವೈದ್ಯರು, ದಾದಿಯರು ದೇಶ ವಿದೇಶಗಳಲ್ಲಿ ಉನ್ನತ ಸ್ಥಾನದಲ್ಲಿದ್ದಾರೆ. ಈ ನಿಟ್ಟಿನಲ್ಲಿ ಕಳೆದ 14 ವರ್ಷಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಪಡೆದುಕೊಂಡಿರುವ ನಿಟ್ಟೆ ಪರಿಗಣಿತ ವಿಶ್ವವಿದ್ಯಾಲಯದ ಪಾತ್ರ ಮಹತ್ವದ್ದಾಗಿದೆ ಎಂದು ಭಾರತ ಸರಕಾರದ ಆರೋಗ್ಯ ಸಂಶೋಧನಾ ವಿಭಾಗದ ಕಾರ್ಯದರ್ಶಿ, ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ನ ಡೈರೆಕ್ಟರ್ ಜನರಲ್ ಪೆÇ್ರ. ಡಾ. ಬಲರಾಂ ಭಾರ್ಗವ ಹೇಳಿದರು. ಅವರು ದೇರಳಕಟ್ಟೆಯ ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿರುವ ಕೆ.ಎಸ್. ಹೆಗ್ಡೆ ಆಡಿಟೋರಿಯಂನಲ್ಲಿ ಶನಿವಾರ ನಡೆದ ನಿಟ್ಟೆ ಪರಿಗಣಿಸಲ್ಪಟ್ಟ ವಿವಿಯ 11ನೇ ಘಟಿಕೋತ್ಸವದಲ್ಲಿ ಪ್ರಮುಖ ಭಾಷಣ ಮಾಡಿದರು.ಬಾಹ್ಯಾಕಾಶ ಸಂಶೋಧನೆ, ಸಶಸ್ತ್ರ ಪಡೆ, ಮೊಬೈಲ್, ಪರಮಾಣು ಶಕ್ತಿಗಳ ತಂತ್ರಜ್ಞಾನದಲ್ಲಿ ಭಾರತ ಅಂತರಾಷ್ಟ್ರೀಯವಾಗಿ ಮುಂಚೂಣಿಯಲ್ಲಿದೆ. ಲಾಲ್ ಬಹದ್ದೂರ್ ಶಾಸ್ತ್ರಿ ಪ್ರಧಾನಿಯಾಗಿದ್ದ ಸಂದರ್ಭ ಆಹಾರದ ಕೊರತೆಯುಂಟಾಗಿತ್ತು. ಅವೆಲ್ಲವನ್ನು ಮೆಟ್ಟಿ ನಿಂತ ದೇಶ ಹಸಿರು ಕ್ರಾಂತಿ ಮೂಲಕ ವಿಶ್ವಕ್ಕೆ ಆಹಾರ ಧಾನ್ಯಗಳನ್ನು ಸರಬರಾಜು ಮಾಡುವಂತಹ ದೇಶವಾಗಿ…

Read More

Un networks ಹರೇಕಳ: ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಇವರನ್ನು ಪದ್ಮಶ್ರೀ ಪುರಸ್ಕೃತೆ ವೃಕ್ಷಮಾತೆ ತುಳಸೀ ಗೌಡ ಶನಿವಾರ ಹರೇಕಳದ ನ್ಯೂಪಡ್ಪು ಮನೆಯಲ್ಲಿ ಭೇಟಿ ಮಾಡಿದರು. ಶನಿವಾರ ಬೆಳಿಗ್ಗೆ 9 ರ ವೇಳೆಗೆ ಭೇಟಿ ನೀಡಿದ ತುಳಸಿ ಗೌಡ ಹಾಜಬ್ಬರ ಜೊತೆ ಉಪಹಾರ ಸ್ವೀಕರಿಸಿದರು. ಈ ಸಂದರ್ಭ ಹರೇಕಳ ಗ್ರಾಮಸ್ಥರಿಂದ ತುಳಸಿ ಗೌಡ ಇವರನ್ನು ಅಭಿನಂದಿಸಲಾಯಿತು.

Read More

UN networks ಉಳ್ಳಾಲ: ಭಗತ್ ಸಿಂಗ್ ಸೇವಾ ಪ್ರತಿಷ್ಠಾನ ನಡೆಸುವ 13 ನೇ ವರ್ಷದ ಗೂಡುದೀಪ ಸಂಗಮ ದೀಪಾವಳಿ ಸಂಭ್ರಮ ಗೂಡುದೀಪ ಸ್ಪರ್ಧೆಯು ನ. 11 ರಂದು ಸಂಜೆ 5.30 ಕ್ಕೆ ಕುತ್ತಾರು ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನಡೆಯಲಿದೆ ಎಂದು ತೊಕ್ಕೊಟ್ಟು ಭಗತ್ ಸಿಂಗ್ ಸೇವಾ ಪ್ರತಿಷ್ಠಾನದ ಅಧ್ಯಕ್ಷ ಜೀವನ್ ಕುಮಾರ್ ತೊಕ್ಕೊಟ್ಟು ಹೇಳಿದರು ತೊಕ್ಕೊಟ್ಟು ಬ್ರಹ್ಮಶ್ರೀ ಬಿಲ್ಲವ ವೇದಿಕೆ ಕಚೇರಿಯಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು. ಸಾಂಪ್ರದಾಯಿಕ ವಿಭಾಗ, ಆಧುನಿಕ ಮತ್ತು ಪ್ರತಿಕೃತಿ ಮೂರು ವಿಭಾಗದಲ್ಲಿ ಸ್ಪರ್ಧೆ ನಡೆಯಲಿದೆ. ಪ್ರಥಮ , ದ್ವಿತೀಯ, ತೃತೀಯ ನಗದು ಮತ್ತು ಸ್ಮರಣಿಕೆಯನ್ನು ನೀಡಲಾಗುವುದು. ಇದೇ ಸಂದರ್ಭ ನಡೆಯುವ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೆರವೇರಿಸಲಿದ್ದಾರೆ. ಅಧ್ಯಕ್ಷತೆಯನ್ನು ಉಚ್ಚಿಲತ್ತಾಯ ನೀಲೇಶ್ವರ ತಂತ್ರಿ ವಹಿಸಲಿದ್ದಾರೆ. ಈ ಬಾರಿಯ ಭಗತ್ ಸಿಂಗ್ ಸಾಧಕ ಪ್ರಶಸ್ತಿಯನ್ನು ಸಮಾಜಸೇವಕ ಹಾಗೂ ಮನಪಾ ಸದಸ್ಯ ಗಣೇಶ್ ಕುಲಾಲ್ ಅವರಿಗೆ ಪ್ರಧಾನ ಮಾಡಲಾಗುವುದು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ…

Read More

ಮಡಂತ್ಯಾರು : ಮಡಂತ್ಯಾರು ಕಾಲೇಜು ರಸ್ತೆಯಲ್ಲಿರುವ ನೋವಾ ಪ್ಲಾಝಾದಲ್ಲಿ ` ಟೆಡ್ಡಿ ಸುಪರ್ ಮಾರ್ಟ್’ ಇದರ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಕಟೀಲು ಇಲ್ಲಿನ ಪ್ರಧಾನ ಅರ್ಚಕ ವೇದಮೂರ್ತಿ ಅನಂತ ಪದ್ಮನಾಭ ಆಸ್ರಣ್ಣ ಶನಿವಾರ ಉದ್ಘಾಟಿಸಿದರು.ಮಡಂತ್ಯಾರು ಗ್ರಾಮೀಣ ಭಾಗದಲ್ಲಿ ಪ್ರಪ್ರಥಮವಾಗಿ ಆರಂಭಗೊಂಡ ದಿನಬಳಕೆ ವಸ್ತುಗಳೆಲ್ಲವೂ ಇರುವಂತಹ ಸುಪರ್ ಮಾರ್ಟ್ ಚಂದ್ರ ಪೂರ್ಣಚಂದ್ರನಾಗಿ ಬೆಳಗುವಂತೆ ಇನ್ನಷ್ಟು ಪ್ರದೇಶಗಳಲ್ಲಿಯೂ ಇಂತಹ ಮಾರುಕಟ್ಟೆ ಶುಭಾರಂಭಗೊಳ್ಳಲಿ. ಗ್ರಾಹಕರಿಗೆ ಉತ್ತಮ ಸೇವೆಯನ್ನು ಒದಗಿಸುವಂತಾಗಲಿ ಎಂದು ಶುಭಹಾರೈಸಿದರು. ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ, ಶ್ರೀ ಕ್ಷೇತ್ರ ಪಣೋಲಿಬೈಲ್ ಇಲ್ಲಿನ ಪ್ರಧಾನ ಅರ್ಚಕ ನಾರಾಯಣ ಮೂಲ್ಯ , ಮಾಜಿ ಶಾಸಕ ವಸಂತ ಬಂಗೇರ, ಕಟೀಲು ಹೊಟೇಲ್ ಸೌಂದರ್ಯ ಪ್ಯಾಲೇಸ್ ಮತ್ತು ಸೌಂದರ್ಯ ರೆಸಾರ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸೌಂದರ್ಯ ರಮೇಶ್, ಜಿ.ಪಂ ಮಾಜಿ ಸದಸ್ಯರುಗಳಾದ ಪದ್ಮಶೇಖರ್ ಜೈನ್, ತುಂಗಪ್ಪ ಬಂಗೇರ, ಮಡಂತ್ಯಾರು ಗ್ರಾ.ಪಂ ಅಧ್ಯಕ್ಷ ಶಶಿಪ್ರಭಾ ಮುಖ್ಯ ಅತಿಥಿಗಳಾಗಿದ್ದರು.ಸಚ್ಚ್ ಪ್ರಾಪರ್ಟಿಸ್ ಮಾಲಕ ಕಿರಣ್ ಬಿ.ಎನ್, ನಗರ ಮತ್ತು ಗ್ರಾಮಾಂತರ ಯೋಜನೆ…

Read More

UN networks ಮಂಗಳೂರು: ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಈ ವರ್ಷ ವಿಶೇಷವಾಗಿ ಹಮ್ಮಿಕೊಂಡ ಕನ್ನಡ ರಾಜ್ಯೋತ್ಸವದ ನಿಮಿತ್ತ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮದ ಅಡಿಯಲ್ಲಿ ಮಂಗಳೂರಿನ ಕೇಂದ್ರೀಯ ರೈಲ್ವೆ ನಿಲ್ದಾಣದಲ್ಲಿ ಅತ್ತಾವರದ ಪ್ರತಿಷ್ಠಿತ ಸರೋಜಿನಿ ಮಧುಸೂದನ ಕುಶೆ ಕಾಲೇಜಿನ ವಿದ್ಯಾರ್ಥಿಗಳು ಕನ್ನಡದ ಮೂರು ಗೀತೆಗಳನ್ನು ಹಾಡುವುದರ ಮೂಲಕ ಕನ್ನಡದ ಡಿಂಡಿಮ ಮೊಳಗಿಸಿ ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕುವೆಂಪು ವಿರಚಿತ ಬಾರಿಸು ಕನ್ನಡ ಡಿಂಡಿಮ ,ನಿಸಾರ್ ಅಹ್ಮದ್ ರ ಜೋಗದ ಸಿರಿ ಬೆಳಕಿನಲ್ಲಿ ಮತ್ತು ಹಂಸಲೇಖರ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಗೀತೆಗಳನ್ನ ಸುಮಧುರವಾಗಿ ಪ್ರಸ್ತುತಪಡಿಸಿದರು.ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯರಾದ ಲಕ್ಷ್ಮೀಶ್ ಹೆಗಡೆ ಸೋಂದಾ ಪ್ರಾಸ್ತಾವಿಕ ಮಾತುಗಳನ್ನಾಡಿದರು.ಸ್ಟೇಶನ ಮಾಸ್ಟರ್ ಕಿಶನ್ ಮತ್ತಿತರರು ಸಹಕರಿಸಿ ಮಂಗಳೂರಿನ ರೈಲ್ವೇ ಇತಿಹಾಸದಲ್ಲೇ ಮೊದಲ ಬಾರಿಗೆ ಈ ರೀತಿಯ ಕಾರ್ಯಕ್ರಮ ಆಗುತ್ತಿರುವುದರ ಕುರಿತು ಸಂತಸ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ಕುಶೆ ಕಾಲೇಜಿನ ಉಪನ್ಯಾಸಕರಾದ ಪುಷ್ಪಾವತಿ, ಪವಿತ್ರ, ಸಂತೋಷ್ ಮತ್ತಿತರರು ಉಪಸ್ಥಿತರಿದ್ದರು. ಕುಶೆ ಸಂಸ್ಥೆಯಲ್ಲೂ ಮೊಳಗಿದ…

Read More

UN networks ಉಳ್ಳಾಲ: ವಾರೆಂಟ್ ಆರೋಪಿಯನ್ನು ಹಿಡಿಯಲು ಹೋದ ಉಳ್ಳಾಲ ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗೆ ರೌಡಿಶೀಟರ್ ತಲವಾರು ತೋರಿಸಿ ಪರಾರಿಯಾದ ಘಟನೆ ಉಳ್ಳಾಲದ ಧರ್ಮನಗರದಲ್ಲಿ ನಡೆದಿದೆ. ಧರ್ಮನಗರ ನಿವಾಸಿ ಮುಕ್ತಾರ್ ಮುಕ್ತಾರ್ ಅಹ್ಮದ್ ಎಂಬಾತನ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದರು. ಈತನ ಮೇಲೆ ಹತ್ತಕ್ಕೂ ಹೆಚ್ಚು ಕೇಸುಗಳಿದ್ದು, ಕೋರ್ಟಿಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಉಳ್ಳಾಲ ಪೊಲೀಸರು ಕೋರ್ಟಿನಿಂದ ವಾರಂಟ್ ಪಡೆದು ಇಂದು ಬೆಳಗ್ಗೆ ಬಂಧಿಸಲು ತೆರಳಿದ್ದರು. ಧರ್ಮನಗರದ ಮನೆಗೆ ತೆರಳಿದ್ದಾಗ ತಲವಾರು ಹಿಡಿದೇ ಹೊರಬಂದ ಮುಕ್ತಾರ್,ಅಲ್ಲಿಂದ ತಲವಾರು ತೋರಿಸುತ್ತಲೇ ಹತ್ತಿರದ ನಿಜಾಮುದ್ದೀನ್ ಎಂಬವನ ಬೈಕಿನಲ್ಲಿ ಪರಾರಿಯಾಗಿದ್ದಾನೆ.ಪೊಲೀಸರು ಬೆನ್ನಟ್ಟಿದ್ದು ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿಯ ರಸ್ತೆಯಲ್ಲಿ ಅಡ್ಡಹಾಕಿ ಬೈಕನ್ನು ಹಿಡಿದಿದ್ದಾರೆ. ಆದರೆ, ಇದರ ನಡುವಲ್ಲೇ ಮುಕ್ತಾರ್ ಅಹ್ಮದ್ ಬೈಕಿನಿಂದ ಇಳಿದು ಪೊಲೀಸರ ಕಣ್ತಪ್ಪಿಸಿ ಎಸ್ಕೇಪ್ ಆಗಿದ್ದಾನೆ. ಬೈಕಿನಲ್ಲಿದ್ದ ನಿಜಾಮುದ್ದೀನ್ ಪೊಲೀಸರು ಹಿಂಬಾಲಿಸಿ ಬಂದಿದ್ದನ್ನು ತಿಳಿದು ಎಸ್ಕೇಪ್ ಆಗುವ ಯತ್ನದಲ್ಲಿ ಮುಂದಿನಿಂದ ಬಂದ ವ್ಯಾಗನರ್ ಕಾರಿಗೆ ಡಿಕ್ಕಿಯಾಗಿ ರಸ್ತೆಗೆ ಬಿದ್ದಿದ್ದಾನೆ. ಈ ವೇಳೆ,…

Read More

UN networks ಕೊಣಾಜೆ: ಬಿಜೆಪಿ ಕಾರ್ಯಕರ್ತನ ಕೊಲೆಗೆ ಯತ್ನಿಸಿರುವ ಘಟನೆ ಕೊಣಾಜೆ ಸಮೀಪ ನಿನ್ನೆ ತಡರಾತ್ರಿ ನಡೆದಿದೆ. ಬಿಜೆಪಿ ಕಾರ್ಯಕರ್ತ , ಕೊಣಾಜೆ ಗ್ರಾ.ಪಂ ಮಾಜಿ ಸದಸ್ಯ ಪ್ರಕಾಶ್ ಶೆಟ್ಟಿ (38) ಎಂಬವರ ಕೊಲೆಗೆ ಯತ್ನಿಸಲಾಗಿದೆ. ಬೈಕಲ್ಲಿ ಬಂದ ಮೂವರು ಕೃತ್ಯ ಎಸಗಿರುವುದಾಗಿ ತಿಳಿದುಬಂದಿದೆ. ಸ್ನೇಹಿತ ಮಂಜುನಾಥ್ ಜೊತಗೆ ಬೈಕಿನಲ್ಲಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಹಿಂಬದಿಯಿಂದ ಬಂದ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ. ಪವಾಡಸದೃಶವಾಗಿ ತಲವಾರು ದಾಳಿ ಕೈಗೆ ಮಾತ್ರ ಬಿದ್ದಿದೆ. ಗಾಯಾಳು ಪ್ರಕಾಶ್ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ವಾರ ಕೊಣಾಜೆ ಜಂಕ್ಷನ್ ನ ಕೊಣಾಜೆ ಸ್ಟೋರ್ಸ್ & ಸ್ವೀಟ್ಸ್ ಮಳಿಗೆಯ ಮಾಲಕ ಉಸ್ಮಾನ್ ಎಂಬಾತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಇದಕ್ಕೆ ಪ್ರತೀಕಾರವಾಗಿ ದಾಳಿ ನಡೆದಿರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

Read More

UN networks ಕೊಣಾಜೆ: ಯುವಕನೋರ್ವ ಮನೆಯೊಳಗೆ ನೆಡಣುಬಿಗಿದು ಆತ್ಮಹತ್ಯೆ ನಡೆಸಿಕೊಂಡಿರುವ ಘಟನೆ ಕೊಣಾಜೆ ಠಾಣಾ ವ್ಯಾಪ್ತಿಯಮೂಡಿಜೇರ ಸೈಟ್ ನಲ್ಲಿ ನಡೆದಿದೆ. ಕೊಣಾಜೆ ಸಮೀಪದ ನಾರಾಯಣ ಶೆಟ್ಟಿ ಎಂಬವರ ಪುತ್ರ ಮಹೇಶ್ ಶೆಟ್ಟಿ(35) ಆತ್ಮಹತ್ಯೆ ಮಾಡಿಕೊಂಡ ಯುವಕ . ಪ್ಲಂಬರ್ ಆಗಿದ್ದ ಮಹೇಶ್ ಶೆಟ್ಟಿ ಅವಿವಾಹಿತರಾಗಿದ್ದಾರೆ. ಓರ್ವನೇ ಪುತ್ರನಾಗಿರುವ ಇವರು ಮನೆಮಂದಿಗೆ ಆಧಾರವಾಗಿದ್ದರು. ಇಬ್ಬರು ಸಹೋದರಿಯರು ವಿವಾಹಿತರಾಗಿದ್ದಾರೆ. ತಾಯಿ ತನ್ನ ಸಹೋದರಿ ಮನೆಗೆ ತೆರಳಿದ್ದ ಸಂದರ್ಭ ಮಹೇಶ್ ಮನೆಯಲ್ಲಿ ಒಬ್ಬರೇ ಇದ್ದರು. ಸಂಜೆ ಗೆಳೆಯರ ಜೊತೆಗೆ ಕ್ರಿಕೆಟ್ ಆಟವಾಡಿ ಮನೆಗೆ ಬಂದಿದ್ದ ಮಹೇಶ್, ಗೆಳೆಯರಿಗೆ ವಾಟ್ಸ್ಯಾಪ್ ನಲ್ಲಿ ಫಾರ್ವಡ್೯ ಮೆಸೇಜ್ ಗಳನ್ನು ಮಾಡಿದ್ದರು. ಆದರೆ ಸಂಜೆ 7 ರ ನಂತರ ಫಿನಾಯಿಲ್ ಸೇವಿಸಿ, ಅರ್ಧ ದೋಸೆ ತಿಂದು ಬಳಿಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮೊಬೈಲ್ ವಶಕ್ಕೆ ಪಡೆದುಕೊಂಡಿರುವ ಕೊಣಾಜೆ ಪೊಲೀಸರು ಅದನ್ನು ಅನ್ಲಾಕ್ ನಡೆಸಿದ ಬಳಿಕವಷ್ಟೇ ಕಾರಣ ತಿಳಿದುಬರಲಿದೆ ಎನ್ನುತ್ತಾರೆ ಮಹೇಶ್ ಆಪ್ತ ವಲಯ.

Read More

UN networks ಉಳ್ಳಾಲ: ಬೈಕ್ ಅಪಘಾತಕ್ಕೀಡಾಗಿ ಮಂಗಳೂರು ದಸರಾ ಮುಗಿಸಿ ವಾಪಸ್ಸಾಗುತ್ತಿದ್ದ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ರಾ.ಹೆ. 66ರ ಕೆ.ಸಿ ರೋಡ್ ಬಳಿ ನಿನ್ನೆ ತಡರಾತ್ರಿ ವೇಳೆ ಸಂಭವಿಸಿದೆ. ಕಾಸರಗೋಡು ಜಿಲ್ಲೆಯ ಕುಂಬ್ಳೆ ನಿವಾಸಿಗಳಾದ ಕೃಷ್ಣಪ್ರಸಾದ್ (26) ಮತ್ತು ಪ್ರಜೀತ್ (24) ಮೃತರು. ನಿನ್ನೆ ರಾತ್ರಿ ಯುವಕರಿಬ್ಬರು ದಸರಾ ವೀಕ್ಷಿಸಿ ವಾಪಸಾಗುತ್ತಿದ್ದ ವೇಳೆ ಅಪಘಾತ ನಡೆದಿದೆ. ಬೈಕ್ ಸ್ಕಿಡ್ ಆಗಿ ಅಪಘಾತ ನಡೆದಿರುವುದಾಗಿ ತಿಳಿದುಬಂದಿದೆ. ಯುವಕರಿಬ್ಬರ ರಕ್ಷಣೆಗೆ ಧಾವಿಸಿದ ಕಾರು ಚಾಲಕನ ವಿರುದ್ಧವೇ ಸ್ಥಳೀಯರು ಆರೋಪಿಸಿದ್ದು, ಪೊಲೀಸರ ವಿಚಾರಣೆ ವೇಳೆ ಆತನ ತಪ್ಪಿಲ್ಲವೆಂದು ತಿಳಿಸಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Read More

UN networks ಮುಡಿಪು : ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಕಾಲೇಜಿನಿಂದ‌ ಬಂದು ಮನೆಯ ಕಡೆ ನಡೆದುಕೊಂಡು ಹೋಗುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊರ್ವಳನ್ನು ಅಡ್ಡಗಟ್ಟಿ ಕಿರುಕುಳ ನೀಡಿ ಘಟನೆ ಮಂಗಳವಾರ ನಡೆದಿದ್ದು, ಘಟನೆಗೆ ಸಂಬಂದಿಸಿದಂತೆ ಕೊಣಾಜೆ ಪೊಲೀಸರು ಆರೋಪಿಯೊರ್ವನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ.ಬಂಧಿತ ಆರೋಪಿಯನ್ನು ಕಣ್ಣೂರು ನಿವಾಸಿ ಯಾಕೂಬ್ (43)ಎಂದು ಗುರುತಿಸಲಾಗಿದೆ. ಯುವತಿಯೋರ್ವಳು ಮದ್ಯಾಹ್ನ ಕಾಲೇಜು ಮುಗಿಸಿ ಮನೆ ಕಡೆಗೆ ಹೋಗುತ್ತಿದ್ದಾಗ ಯಾಕೂಬ್ ಅಡ್ಡಗಟ್ಟಿ ಆಕೆಯ ಕೈ ಎಳೆದು ಅಪ್ಪಿಕೊಳ್ಳಲು ಮುಂದಾಗಿದ್ದ ಎನ್ನಲಾಗಿದೆ., ಈ ಸಂದರ್ಭ .ಪ್ರತಿಭಟಿಸಿದ ಯುವತಿ ಆತನಿಂದ ತಪ್ಪಿಸಿ ಬೊಬ್ಬೆ ಹೊಡೆದು ಓಡಿ ಹೋಗಿದ್ದಳು. ಯುವತಿಯ ಬೊಬ್ಬೆ ಕೇಳಿದ ಗ್ರಾಮಸ್ಥರು ಆರೋಪಿಯನ್ನು ಹಿಡಿಯಲು ಯತ್ನಿಸಿದ್ದು ಕೊಣಾಜೆ ಪೊಲೀಸರಿಗೂ ಮಾಹಿತಿ ನೀಡಿದ್ದಾರೆ. ಎಲಿಯಾರ್ ಪದವು ಎಂಬಲ್ಲಿ ಆರೋಪಿ ಯಾಕೂಬ್ ನನ್ನು ಕೊಣಾಜೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More