ಉಳ್ಳಾಲ : ಪ್ರಯಾಣಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವ ಕಾರ್ಯವನ್ನು ಊರಿನ ಹಿರಿಯರು ಹಾಗೂ ಮಂದಿರದ ಆಡಳಿತ ಮಂಡಳಿ ಸೇರಿಕೊಂಡು ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ಹೆಚ್ ಬಿಎಫ್ ಪ್ರೈ. ಲಿ ನ ಆಡಳಿತ ನಿರ್ದೇಶಕ ಬಾಬ್ ಸಿಂಗ್ ಹೇಳಿದರು.ಅವರು ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ರಜತ ವರ್ಷಾಚರಣೆ 1997-2022 ಸೇವಾ ಕಾರ್ಯದ ಅಂಗವಾಗಿ ನೂತನ ಬಸ್ಸು ತಂಗುದಾಣ ನೆರಳು ಇದರ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.ಬಸ್ಸು ತಂಗುದಾಣವನ್ನು ಕೊಡುಗೆಯಾಗಿ ನೀಡಿದ ದಿ| ರಾಮ ಸಾಲಿಯಾನ್ ಕುಂಪಲ ಇವರ ಸೊಸೆ ಶಾಲಿನಿ ಶೇಖರ್ ಬಂಗೇರ, ದಿ. ಮುರಳಿ (ಐಓಸಿ) ಇವರ ಪುತ್ರಿ ಬಿಂದು, ದಿ| ರಾಮ ಭಂಜನ್ ಹನುಮಾನ್ನಗರ ಇವರ ಪತ್ನಿ ಅಂಭಾ ಬಂಗೇರ ಮುಖ್ಯ ಅತಿಥಿಗಳಾಗಿದ್ದರು. ಈ ಸಂದರ್ಭ ಮಂದಿರದ ಗೌರವಾಧ್ಯಕ್ಷ ಕೇಶವದಾಸ್ ಬಗಂಬಿಲ, ಗುತ್ತಿಗೆದಾರ ಪ್ರಸಾದ್ ಕಡಬ ಸುಳ್ಯ, ಪ್ರಧಾನ ಕಾರ್ಯದರ್ಶಿ ರವೀಂದ್ರ ಕುಂಪಲ, ಮಹಿಳಾ ಸಮಿತಿ ಅಧ್ಯಕ್ಷೆ ಸುಶೀಲ ಕೆ, ರಜತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಮೋಹನ್…
Author: UllalaVani
ಉಳ್ಳಾಲ : ರೈಲು ಢಿಕ್ಕಿ ಹೊಡೆದು ನವಿಲೊಂದು ಸಾವನ್ನಪ್ಪಿರುವ ಘಟನೆ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಕೋಟೆಕಾರು ಸ್ಟೆಲ್ಲಾ ಮೇರಿ ಶಾಲಾ ಹಿಂಭಾಗದಲ್ಲಿ ನಡೆದಿದೆ.ಶುಕ್ರವಾರ ಮಧ್ಯಾಹ್ನ ವೇಳೆ ರೈಲು ಹಳಿ ಬಳಿ ನವಿಲು ಸಾವನ್ನಪ್ಪಿರುವ ಸ್ಥಿತಿಯಲ್ಲಿ ಕಂಡುಬಂದಿತ್ತು. ಸ್ಥಳೀಯರು ಪುರಸಭೆ ಮುಖ್ಯಾಧಿಕಾರಿ ಅವರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿತ್ತು. ಸ್ಥಳಕ್ಕಾಗಮಿಸಿದ ಅರಣ್ಯ ಅಧಿಕಾರಿಗಳು , ಸೋಮೇಶ್ವರದ ಹಿಂದು ರುದ್ರಭೂಮಿಯಲ್ಲಿ ಸರಕಾರಿ ಗೌರವದೊಂದಿಗೆ ಅಂತಿಮ ಸಂಸ್ಕಾರ ನಡೆಸಿದರು.ಈ ವೇಳೆ ಸೋಮೇಶ್ವರ ಪುರಸಭೆ ಮುಖ್ಯಾಧಿಕಾರಿ ವಾಣಿ ಆಳ್ವ, ಅರಣ್ಯ ಸಂರಕ್ಷಣಾಧಿಕಾರಿ ಸೌಮ್ಯ, ತಾ.ಪಂ ಮಾಜಿ ಸದಸ್ಯ ರವಿಶಂಕರ್ , ಪುರಸಭೆ ಪ್ರಬಂಧಕ ಕೃಷ್ಣ ಹಾಗೂ ಸಿಬ್ಬಂದಿ ಶ್ರೀನಾಥ್ ಉಪಸ್ಥಿತರಿದ್ದರು.
ಉಳ್ಳಾಲ: ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಗಡಿಭಾಗವಾದ ದಕ್ಷಿಣ ಕನ್ಬಡದಲ್ಲೂ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ಬಲೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ರಾಜ್ಯ ಗಡಿ ಭಾಗದ ತಲಪಾಡಿ ಚೆಕ್ ಪೋಸ್ಟ್ ನಲ್ಲಿ ಕೋವಿಡ್ ತಪಾಸಣೆ ಕುರಿತು ಪರಿಶೀಲಿಸಲು ಶುಕ್ರವಾರ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಗಡಿಯಲ್ಲಿ ಕೈಗೊಳ್ಳಲಾಗಿರುವ ಕೋವಿಡ್ ತಪಾಸಣಾ ಕಾರ್ಯಗಳ ಪ್ರಕ್ರಿಯೆಗಳನ್ನು ಪರಿಶೀಲಿಸಿದ ಅವರು ಗಡಿಭಾಗದಲ್ಲಿ ಕೇರಳದಿಂದ ಜಿಲ್ಲೆಗೆ ಆಗಮಿಸುತ್ತಿರುವವರ ಸಂಖ್ಯೆ ಹೆಚ್ಚಳವಾಗಿದ್ದು ಈಗಾಗಲೇ ಲಸಿಕೆ ಹಾಕಿದವರಿಗೆ ಮತ್ತು ನೆಗೆಟಿವ್ ವರದಿ ಇರುವವರಿಗೆ ಜಿಲ್ಲೆಗೆ ಪ್ರವೇಶಕ್ಕೆ ಅವಕಾಶವಿದ್ದು, ಈ ಮಾರ್ಗಸೂಚಿಯನ್ಬು ಇನ್ಬಷ್ಟು ಕಟ್ಟು ನಿಟ್ಡು ಮಾಡುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆ ಕರೆದು , ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ಕೆಲವೊಂದು ನಿಯಮಗಳನ್ನು ಪಾಲಿಸುವ ನಿಟ್ಟಿನಲ್ಲಿ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಸರಕಾರದ ಮಾರ್ಗದರ್ಶನದಂತೆ ಇನ್ನೆರಡು ದಿನಗಳಲ್ಲಿ ಕೋವಿಡ್ ಗೆ ಸಂಬಂಧಿಸಿದ ಹೊಸ ಮಾರ್ಗಸೂಚಿಯನ್ಬು ಜಿಲ್ಲಾಡಳಿತ ರೂಪಿಸಲಿದೆ ಎಂದರುಈಗಾಗಲೆರ ಜಿಲ್ಲೆಯಲ್ಲಿ ದಿನವೊಂದಕ್ಕೆ 9000 ಜನರ ಪರೀಕ್ಷೆಗೆ ಟಾರ್ಗೆಟ್ ಇಟ್ಟುಕೊಂಡಿದ್ದು ಪ್ರತೀ ದಿನ ಏಳು…
ಉಳ್ಳಾಲ: ಕೇರಳದ ಕಾಸರಗೋಡಿನ ಮಂಜೇಶ್ವರದ ಹೊಸಂಗಡಿಯ ರಾಜಧಾನಿ ಜುವೆಲ್ಲರಿ ಮಳಿಗೆಯ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಳ್ಳಾಲ ಪೆÇಲೀಸರು ಪ್ರಮುಖ ಆರೋಪಿ ಫರಂಗಿಪೇಟೆಯ ಮೊಹಮ್ಮದ್ ಗೌಸ್ ತಂಡದ ಪತ್ತೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು, ಇನ್ನೊಂದೆಡೆ ಮಂಜೇಶ್ವರ ಪೆÇಲೀಸರು ಕರ್ನಾಟಕ ಪೆÇಲೀಸರ ಸಹಕಾರ ದೊಂದಿಗೆ ಆರೋಪಿಗಳ ಬೆನ್ನತ್ತಿದ್ದಾರೆ. ಜು. 26 ರಂದು ತಡ ರಾತ್ರಿ ಹೊಸಂಗಡಿಯ ರಾಜಧಾನಿ ಜುವೆಲ್ಲರಿಯ ವಾಚ್ಮೆನ್ಗೆ ಹಲ್ಲೆ ನಡೆಸಿ ಕಟ್ಟಿ ಹಾಕಿ ದರೋಡೆ ನಡೆಸಿ ಬರುತ್ತಿದ್ದ ವೇಳೆ ಆರೋಪಿಗಳ ಕಾರನ್ನು ತಲಪಾಡಿ ಸಮೀಪದ ಕೆ.ಸಿ. ರೋಡ್ ಜಂಕ್ಷನ್ನಲ್ಲಿ ಅಡ್ಡಗಟ್ಟಿದ ಉಳ್ಳಾಲ ಪೆÇಲೀಸರು 7.75 ಕೆಜಿ ಬೆಳ್ಳಿ ಸೇರಿದಂತೆ ಸುಮಾರು 14,35,500 ರೂ. ಮೌಲ್ಯದ ಸೊತ್ತನ್ನು ವಶಪಡಿಸಿಕೊಂಡಿದ್ದರು.ಕಾಟಿಪಳ್ಳ ಮೂಲದ ವ್ಯಕ್ತಿಯಿಂದ ಉಳ್ಳಾಲದಿಂದ ಬಾಬಾಬುಡಾನ್ಗಿರಿಗೆ ತೆರಳಲು ಇನ್ನೋವಾ ಕಾರನ್ನು ಬಾಡಿಗೆ ಪಡೆದುಕೊಂಡಿದ್ದ ಆರೋಪಿಗಳು ಕೇರಳಕ್ಕೆ ತೆರಳಿದ್ದು ನಡುರಾತ್ರಿ ಕಾರು ಮಂಜೇಶ್ವರದಿಂದ ತಲಪಾಡಿ ಕಡೆ ಬರುತ್ತಿರುವ ಮಾಹಿತಿ ಜಿಪಿಎಸ್ ಆಧಾರದಲ್ಲಿ ಕಾರಿನ ಮಾಲಿಕನಿಗೆ ಸಂಶಯ ಬಂದು ಉಳ್ಳಾಲ ಪೆÇಲೀಸರಿಗೆ ಮಾಹಿತಿ ನೀಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿತ್ತು.…
ಅಂಬ್ಲಮೊಗರು: ಇಲ್ಲಿನ ಗ್ರಾಮ ಪಂಚಾಯತ್ ನ ಗ್ರಾಮ ಸಹಾಯಕ ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಇಂದು ಬೆಳಗ್ಗೆ ನಡೆದಿದೆ. ಅಂಬ್ಲಮೊಗರು ಪಡ್ಯಾರ ಮನೆ ಗುತ್ತಿನ ನಿತಿನ್ ಶೆಟ್ಟಿ (34) ಆತ್ಮಹತ್ಯೆಗೈದವರು. ಮನೆ ಕೋಣೆಯಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಇಂದು ಬೆಳಗ್ಗೆ ಪತ್ನಿಯನ್ನು ವಾಹನದಲ್ಲಿ ಕುತ್ತಾರಿನ ವರೆಗೆ ಕೆಲಸಕ್ಕೆ ಬಿಟ್ಟು ಬಂದಿದ್ದರು. ಬಳಿಕ ಮನೆಯಲ್ಲಿ ಕೃತ್ಯವೆಸಗಿದ್ದಾರೆ. ಮನೆಯಲ್ಲಿದ್ದ ತಾಯಿ ರೂಮಿನೊಳಗೆ ತೆರಳಿದಾಗ . ಮೃತ ನಿತಿನ್ ಅವರು ತಾಯಿ, ಪತ್ನಿ, ಮೂರು ಸಹೋದರರನ್ನ ಅಗಲಿದ್ದಾರೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಂಬ್ಲಮೊಗರು ಪಂಚಾಯಿತಿನಲ್ಲಿ ನಿತಿನ್ ಅವರ ಚಿಕ್ಕಪ್ಪ ಗ್ರಾಮಸಹಾಯಕರಾಗಿದ್ದು, ಅವರ ಅಗಲುವಿಕೆಯ ಬಳಿಕ ಅವರ ನಿತಿನ್ ಅವರಿಗೆ ಕೆಲಸ ದೊರೆತಿತ್ತು. ಎರಡು ವರ್ಷಗಳ ಹಿಂದೆ ನಿತಿನ್ ಅವರ ತಂದೆ ದಯಾನಂದ ಶೆಟ್ಟಿ ಅವರು ತೆಂಗಿನ ಮರದಿಂದ ಬಿದ್ದು ಸಾವನ್ನಪ್ಪಿದ್ದರು.
ಉಳ್ಳಾಲ: ಯೇನೆಪೊಯ ಮೊಯ್ದಿನ್ ಕುಂಞ ಮೆಮೋರಿಯಲ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ನ ಘಟಕವಾಗಿರುವ ಯೇನೆಪೊಯ ಫೌಂಡೇಶನ್ ಹಾಗೂ ಯೇನೆಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯ ಅಡಿಯಲ್ಲಿ 2021-22 ರ ಶೈಕ್ಷಣಿಕ ವರ್ಷಕ್ಕೆ ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಮೆರಿಟ್ ಆಧಾರಿತ ವಿದ್ಯಾರ್ಥಿವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.ಬಿಡಿಎಸ್, ಬಿಎಸ್ಸಿ ನರ್ಸಿಂಗ್, ಬಿಪಿಟಿ, ಬಿಫಾರ್ಮ, ಡಿ.ಫಾರ್ಮ, ಬಿಎಎಂಎಸ್, ಬಿಹೆಚ್ ಎಂ ಎಸ್, ಬಿಎನ್ವೈಎಸ್, ಬಿಹೆಚ್ ಎಂ ಎಸ್, ಬಿಎನ್ ವೈಎಸ್, ಬಿ.ಕಾಂ/ಬಿಬಿಎ/ಬಿಸಿಎ, ಬಿಹೆಚ್ಎ, ಬಿಪಿಹೆಚ್, ಬಿಎಸ್ಸಿ ಪ್ಯಾರ ಮೆಡಿಕಲ್ ಕೋರ್ಸುಗಳು, ಬಿಎಸ್ಸಿ ಹಾಸ್ಪಿಟಾಲಿಟಿ ಸೈನ್ಸ್, ಬಿಎಸ್ಸಿ ಕ್ಲಿನಿಕಲ್ ಸೈಕಾಲಜಿ, ಬಿಎಸ್ಸಿ ಫಾರೆನ್ಸಿಕ್ ಸೈನ್ಸ್, ಬಿಎಸ್ಸಿ ಮೈಕ್ರೋಬಯಾಲಜಿ, ಸ್ನಾತಕೋತ್ತರ ಪದವಿ ಕೋರ್ಸುಗಳ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು, ದ.ಕ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ವ್ಯಾಸಾಂಗ ಮಾಡಿದ ಗ್ರೇಡ್ 10, 11,12 ರಲ್ಲಿ ಶೇ.80 ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಮುಸ್ಲಿಂ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.…
ಉಳ್ಳಾಲ: ಬೇರೆಯವರು ಪಾಠ ಹೇಳಿದರೂ ಅದರ ಅರಿವು ಜ್ಞಾನ ಪಡೆಯುವುದು ವ್ಯಕ್ತಿಯ ಮನೋಭಾವ ಆಗಿದೆ. ಈ ನಿಟ್ಟಿನಲ್ಲಿ ಅರಿವೇ ತಿಳುವಳಿಕೆ, ಜ್ಞಾನವೇ ಗುರು ಆಗಿರುತ್ತದೆ. ಇಂತಹ ಗುರು ಪರಂಪರೆಯನ್ನು ಗೌರವಿಸುವ ಕಾರ್ಯ ಭಗತ್ ಸಿಂಗ್ ಪ್ರತಿಷ್ಠಾನದಿಂದ ಆಗಿದೆ ಎಂದು ನಿವೃತ್ತ ಶಿಕ್ಷಕ ವಾಸುದೇವ ರಾವ್ ಅಭಿಪ್ರಾಯಪಟ್ಟರು ತೊಕ್ಕೊಟ್ಟು ಭಗತ್ ಸಿಂಗ್ ಸೇವಾ ಪ್ರತಿಷ್ಠಾನ ಆಶ್ರಯದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಉಳ್ಳಾಲದ ಸುಂದರಿಭಾಗ್ ಶ್ರೀ ವೀರಾಂಜನೇಯ ಸೇವಾ ಟ್ರಸ್ಟ್ ನ ವ್ಯಾಯಾಮ ಶಾಲೆ ಸಭಾಂಗಣದಲ್ಲಿ ಹಮ್ಮಿಕೊಂಡ ಗುರುವಂದನೆಯನ್ನು ಸ್ವೀಕರಿಸಿ ಮಾತನಾಡಿದರು.ವ್ಯಾಸರು ಬರೆದ ನಾಲ್ಕು ವೇದಗಳನ್ನು ಬರೆದು ಕೊನೆಯಾಗಿಸಿದ ದಿನವೇ ಗುರುಪೂರ್ಣಿಮೆ ದಿನ. ಸಾವಿರಾರು ವರ್ಷಗಳಿಂದ ಗುರುಗಳ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದೆ. ವ್ಯಕ್ತಿಯೋರ್ವನಿಗೆ ಸಂಪರ್ಕದಲ್ಲಿರುವವರು ಎಲ್ಲರೂ ಗುರುಗಳೇ. ವಿವಿಧ ಅನಿಭವಗಳನ್ನು ಕೊಡುವವರು ಗುರುಗಳೇ ಆಗಿರುತ್ತಾರೆ. ಪ್ರಕೃತಿಯೂ ಗುರು ಸಮಾನ, ನಿಸರ್ಗದಿಂದ ಹಲವು ವಿಚಾರಗಳನ್ನು ಕಲಿಯುತ್ತೇವೆ ಎಂದರು .ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಗತ್ ಸಿಂಗ್ ಸೇವಾ ಪ್ರತಿಷ್ಠಾನ ದ ಅಧ್ಯಕ್ಷ ಜೀವನ್ ಕುಮಾರ್ ಕೆರೆಬೈಲು ಮಾತನಾಡಿಶಿಕ್ಷಕ…
ಉಳ್ಳಾಲ: ಆಂಬ್ಯುಲೆನ್ಸ್ ವಾಹನಕ್ಕೆ ಅಡ್ಡಿಪಡಿಸಿದ ವಾಹನದ ವೀಡಿಯೋ ವೈರಲ್ ಆಗಿದ್ದು, ಅದರಂತೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಕಾರು ಚಾಲಕನ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಿ, ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕೋಟೆಕಾರು ನಿವಾಸಿ ಚರಣ್ ರಾಜ್ (28) ಬಂಧಿತ.ಜು. 19 ರ ಸಂಜೆ ಕಣಚೂರು ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ಎಮರ್ಜೆನ್ಸಿ ಇದ್ದ ರೋಗಿಯನ್ನು ಅಂಬುಲೆನ್ಸ್ ಮುಖಾಂತರ ಕೊಂಡೊಯ್ಯಲಾಗುತಿತ್ತು. ಈ ಸಂದರ್ಭಇರ್ಟಿಗಾ KA19 MJ8924 ಕಾರಿನ ಚಾಲಕನು ಬೇಜವಾಬ್ದಾರಿಯಾಗಿ ವರ್ತಿಸಿ ಆಂಬ್ಯುಲೆನ್ಸ್ ಹಾದಿಗೆ ಅಡ್ಡವಾಗಿ ಚಲಿಸುತ್ತಾ ರೋಗಿ ಕೊಂಡೊಯ್ಯಲು ಮತ್ತು ಸಮಯಕ್ಕೆ ಸರಿಯಾಗಿ ತಲುಪಿಸಲು ಅಡ್ಡಿಪಡಿಸಿದ್ದನು. ಈ ಕುರಿತು ಆಂಬ್ಯುಲೆನ್ಸ್ ಸಿಬ್ಬಂದಿ ಕಾರಿನ ವೀಡಿಯೋ ತೆಗೆದು ವೈರಲ್ ಮಾಡಿದ್ದ. ಅದರಂತೆ ನಾಗುರಿ ಸಂಚಾರಿ ಠಾಣಾ ಪೊಲೀಸರು ಕಾರನ್ನು ಇಂದು ವಶಕ್ಕೆ ಪಡೆದು ಕೊಂಡಿದ್ದಾರೆ. ಆರೋಪಿ ಕಿವಿಯಲ್ಲಿ ಇಯರ್ ಫೋನ್ ಇಟ್ಟು ಕಾರು ಚಲಾವಣೆ ನಡೆಸುತ್ತಿದ್ದ ಎಂದು ಪೊಲೀಸ್ ತನಿಖೆ ವೇಳೆ ತಿಳಿಸಿದ್ದಾನೆ.
ವರದಿ : ಪ್ರವೀಣ್ ಕುರ್ನಾಡು (ಉಮಾ ಸ್ಟುಡಿಯೋ) ಉಳ್ಳಾಲ: ಕೇಂದ್ರದ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ(ಎನ್ ಆರ್ ಎಲ್ ಎಂ) ಯೋಜನೆಯಡಿಯಲ್ಲಿ ಕುರ್ನಾಡು ಗ್ರಾಮಪಂಚಾಯತ್ ವ್ಯಾಪ್ತಿಯ ಮಜಲು ನಿವಾಸಿಗಳು ಸಕ್ರಿಯವಾಗಿ ತೊಡಗಿಸಿಕೊಂಡು ಹಡಿಲು ಬಿದ್ದ ಗದ್ದೆಯಲ್ಲಿ ಕೃಷಿ ಚಟುವಟಿಕೆಗಳನ್ನು ನಡೆಸಿ ಯಶಸ್ಸು ಕಂಡಿದ್ದಾರೆ.ಗ್ರಾಮದ ವನಸುಮ ಸಂಜೀವಿನಿ ಅನ್ನುವ ಮಹಿಳಾ ಒಕ್ಕೂಟ ಸಮುದಾಯ ಬಂಡವಾಳದ ನಿಧಿಯನ್ನು ಪಡೆದು ಸುಮಾರು ಏಳು ವರ್ಷಗಳಿಂದ ಹಡಿಲು ಬಿದ್ದ ದಿ| ನಾರಯಣ ದೇವಸ್ಯ ಹಾಗೂ ಮಕ್ಕಳಿಗೆ ಸೇರಿದ ಗದ್ದೆಯಲ್ಲಿ ಭತ್ತದ ಬೇಸಾಯವನ್ನು ನಡೆಸಿದ್ದಾರೆ. ಲಾಕ್ಡೌನ್ ಅವಧಿಯನ್ನು ಸದುಪಯೋಗಪಡಿಸಿಕೊಂಡು ಕಾರ್ಯದಲ್ಲಿ ಪಾಲ್ಗೊಂಡರು.ಒಂದು ತಿಂಗಳ ಕಾಲ ಹಡಿಲು ಬಿದ್ದ ಗದ್ದೆಯಲ್ಲಿ ಬೆಳೆದ ಹುಲ್ಲು, ಗಿಡ ಗಂಟೆಗಳನ್ನು ಕಡಿದು ಬಳಿಕ ಟ್ರ್ಯಾಕ್ಟರ್ ಉಪಯೋಗಿಸಿ ಉಳುಮೆ ನಡೆಸಲಾಗಿದೆ. ಕೆಲಸವಿಲ್ಲದವರಿಗೆ ಕೆಲಸ ಕೊಡುವ ಮೂಲಕ ಕೃಷಿ ಕಾರ್ಯವನ್ನು ನಡೆಸಲಾಯಿತು. ಒಕ್ಕೂಟದಲ್ಲಿ 23 ಸ್ವಸಹಾಯ ಗುಂಪುಗಳು ಸೇರ್ಪಡೆಯಾಗಿ ಈ ಒಂದು ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ಮಹಿಳಾ ಸಬಲೀಕರಣಗೊಳಿಸುವ ಉದ್ದೇಶದಿಂದ ಆರಂಭವಾದ ಕೇಂದ್ರದ ಯೋಜನೆ ಇಲ್ಲಿ ಸಾಕಾರಗೊಂಡಿದೆ.ತಾಲೂಕು ಪಂಚಾಯಿತಿ…
ಉಳ್ಳಾಲ: ಎಸೆಸೆಲ್ಸಿ ಪರೀಕ್ಷೆ ನಡೆಯುತ್ತಿದ್ದ ಕೊಠಡಿಯ ಸಮೀಪವೆ ಇದ್ದ ಲ್ಯಾಬ್ನಲ್ಲಿ ಬೆಂಕಿ ಅವಘಡ ಸಂಭವಿಸಿ ಇಡೀ ಲ್ಯಾಬ್ ಹೊತ್ತಿ ಉರಿದ ಘಟನೆ ಬಬ್ಬುಕಟ್ಟೆಯ ಹಿರಾ ಮಹಿಳಾ ಕಾಲೇಜಿನಲ್ಲಿ ಸೋಮವಾರ ನಡೆದಿದೆ.ಬೆಂಕಿ ಅವಘಡ ಸಂಭವಿಸಿದ ಲ್ಯಾಬ್ ಇದ್ದ ಕಟ್ಟಡದಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಎಸೆಸೆಲ್ಸಿ ಪರೀಕ್ಷೆ ಬರೆಯುತ್ತಿದ್ದು, ಅವರನ್ನೆಲ್ಲಾ ಕರ್ತವ್ಯದಲ್ಲಿದ್ದ ಶಿಕ್ಷಕರು ಮತ್ತು ಸಿಬ್ಬಂದಿಗಳು ಸುರಕ್ಷಿತವಾಗಿ ಮತ್ತೊಂದು ಕಟ್ಟಡಕ್ಕೆ ಸ್ಥಳಾಂತರಿಸಿದ್ದಾರೆ.ಸರ್ವಿಸ್ ಲೈನ್ನಲ್ಲಿನ ವಿದ್ಯುತ್ ಏರಿಳಿತವೇ ಈ ಅವಘಡಕ್ಕೆ ಕಾರಣ ಎಂದು ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.ಸ್ಥಳಕ್ಕೆ ನಗರ ಪೆÇಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿದರು.200 ಕ್ಕೂ ಅಧಿಕ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದರು. 10.30 ಗೆ ಪರೀಕ್ಷೆ ಆರಂಭವಾದರೆ 10.45ರ ಸಮೀಪ ಬಯೋಲಾಜಿ ಲ್ಯಾಬ್ ನಲ್ಲಿ ಹೊಗೆ ಆವರಿಸಿತು. ಸ್ವಲ್ಪ ಹೊತ್ತಿನಲ್ಲಿ ಬೆಂಕಿಯೂ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸ್ಥಳ ಸೂಕ್ತವಲ್ಲ ಎಂದು ಇನ್ನೊಂದು ಕಟ್ಟಡಕ್ಕೆ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಿದ್ದಾರೆ. ಆದರೆ ವಿದ್ಯಾರ್ಥಿಗಳಿಗೆ ಇದರಿಂದ ಯಾವುದೇ ತೊಂದರೆಯಾಗಿಲ್ಲ. ಸೆಂಟರ್ ಇನ್ಚಾರ್ಜ್, ಎಸ್ಎಸ್ಎಲ್ಸಿ ಬೋರ್ಡಿನವರು…

