ಕೊಣಾಜೆ: ಮಂಗಳೂರು ಮಂಡಲದ ವತಿಯಿಂದ “ವಿಕಸಿತ ಭಾರತ-ಉದ್ಯೋಗ ಮತ್ತು ಜೀವನೋಪಾಯ ಮಿಷನ್ ಗ್ಯಾರಂಟಿ (VBG RAM G)” ಅಡಿಯಲ್ಲಿ ಮಹಾತ್ಮಗಾಂಧಿ ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರ ತೊಡೆದು ಹಾಕಲು, ಕೇಂದ್ರ ಸರ್ಕಾರದ ಕಾಯ್ದೆಯ ಬಗ್ಗೆ ಜನಜಾಗ್ರತಿ ಮೂಡಿಸಲು ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ “ಮುಡಿಪು ಕಾಯರ್ ಗೋಳಿ ಜಂಕ್ಷನ್ ನಿಂದ ಮುಡಿಪು ಜಂಕ್ಷನ್ ವರೆಗೆ” “ಕಾಲ್ನಡಿಗೆ ಜಾಥಾ” ಹಾಗೂ ಜಾಗೃತಿ ಸಭೆಯು ನಡೆಯಿತು. ವಿಧಾನಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಅವರು ಮಾತನಾಡಿ, ಕಾಂಗ್ರೆಸ್ ನವರು ಎಂಜಿ ನರೇಗ ಯೋಜನೆಯ ಮೂಲಕ ಹಣವನ್ನು ಲೂಟಿ ಮಾಡುತ್ತಿದ್ದರು. ಸತ್ತವರ ಹೆಸರಲ್ಲಿ, ವಿದೇಶದವರ ಹೆಸರಲ್ಲಿ ಹಣ ಪಡೆಯುವ ಮೂಲಕ ಭ್ರಷ್ಟಾಚಾರಗಳು ನಡೆಯುತ್ತಿತ್ತು. ಅದಕ್ಕಾಗಿ ಮೋದಿಜಿಯವರು ಇದನ್ನು ತಡೆಯುವುದಕ್ಕಾಗಿ ಹಾಗೂ ಗ್ರಾಮೀಣ ಜನರ ಅಭಿವೃದ್ಧಿಗಾಗಿ ವಿಕಸಿತ ಭಾರತ-ಉದ್ಯೋಗ ಮತ್ತು ಜೀವನೋಪಾಯ ಮಿಷನ್ ಗ್ಯಾರಂಟಿ ಯೋಜನೆಯನ್ನು ಜಾರಿಗೆ ತಂದಿದ್ದಾರೆ ಎಂದರು.ಮಹಾತ್ಮ ಗಾಂಧೀಜಿಯವರು ಗ್ರಾಮಸ್ವರಾಜ್ಯದ, ರಾಮರಾಜ್ಯದ ಕನಸನ್ನು ಕಂಡಿದ್ದರು. ಅದನ್ನು ಪ್ರಧಾನಿ ನರೇಂದ್ರ ಮೋದಿಜಿಯವರು ನನಸು ಮಾಡಿದ್ದಾರೆ. ಆತ್ಮನಿರ್ಭರ ಭಾರತ, ಸ್ವದೇಶಿ…
Author: UllalaVani
ಮಂಗಳೂರು ನಗರದ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 100ಕ್ಕೂ ಅಧಿಕ ಪ್ರಾಣಿಗಳು ಅಸಹಜವಾಗಿ ಸಾವನ್ನಪ್ಪಿದೆ . . ಪ್ರಾಣಿಗಳಿಗೆ ನೀಡಲಾಗುತ್ತಿರುವ ಆಹಾರದಲ್ಲಿ ವಿಷಕಾರಿ ರಾಸಾಯನಿಕ ಮಿಶ್ರಿತಗೊಂಡಿರುವುದೇ ಇದಕ್ಕೆ ಕಾರಣವೆಂಬ ಆತಂಕಕಾರಿ ವಿಚಾರ ಬಯಲಾಗಿದೆ. ಹೌದು ಏಕಾಏಕಿ ಪ್ರಾಣಿಗಳ ಸಾವು, ವಿಷಕಾರಿ ಆಹಾರ ಪೂರೈಕೆ, ಪ್ರಾಣಿಗಳ ವಿನಿಮಯ ಹಗರಣ, ಲೆಕ್ಕಪತ್ರದಲ್ಲಿ ಅವ್ಯವಹಾರ, ದಾಖಲೆಗಳಲ್ಲಿ ವ್ಯತ್ಯಾಸ ಸೇರಿದಂತೆ ವಿವಿಧ ರೀತಿಯ ಹಗರಣಗಳಲ್ಲಿ ಪಿಲಿಕುಳ ಉದ್ಯಾನವನ ಸುದ್ದಿಯಾಗುತ್ತಿತ್ತು. ಸುಮಾರು ನಾಲ್ಕು ವರ್ಷಗಳಲ್ಲಿ ಹುಲಿ, ಜಿಂಕೆ, ಕಡವೆ, ಹಂದಿ ಸೇರಿದಂತೆ 100ಕ್ಕೂ ಅಧಿಕ ಪ್ರಾಣಿಗಳು ಮೃತಪಟ್ಟಿವೆ ಎನ್ನುವ ಮಾಹಿತಿ ಇದೆ. ಈ ಹಿನ್ನೆಲೆಯಲ್ಲಿ ಪ್ರಾಣಿಗಳಿಗೆ ನೀಡುವ ಆಹಾರವನ್ನು ಪರಿಶೀಲಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.ವಿಷಕಾರಿ ರಾಸಾಯನಿಕ ಅಂಶ- 2026ರ ಫೆ.5ರಂದು ಉದ್ಯಾನವನದಲ್ಲಿ ಜಿಂಕೆಯೊಂದು ಮೃತಪಟ್ಟಿತ್ತು. ಅದರ ಮರಣೋತ್ತರ ಪರೀಕ್ಷೆ ನಡೆಸಿ ಹೊಟ್ಟೆಯಲ್ಲಿದ್ದ ಆಹಾರ ಮತ್ತು ಮಾಂಸದ ಮಾದರಿಯನ್ನು ಬೆಂಗಳೂರಿನ ಹೆಬ್ಬಾಳದಲ್ಲಿರುವ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಪರೀಕ್ಷಾ ವರದಿ ಹಿರಿಯ ಅಧಿಕಾರಿಗಳ…
ಮಹಾಕಾಳಿಪಡ್ಪು ರೈಲ್ವೆ ಅಂಡರ್ ಪಾಸ್ ವಾಹನ ಸವಾರರಿಗೆ ಅನುಕೂಲವಾದರೂ, 400 ಮನೆ, ಶಾಲೆ, ದೇವಸ್ಥಾನ, ಮಸೀದಿ ಸಂಪರ್ಕ ಕಡಿತವಾಗಿದೆ. ಸ್ಥಳೀಯರು ಪಾದಚಾರಿ ಗೇಟ್ ಮತ್ತು ಆಂಬುಲೆನ್ಸ್ ದಾರಿಗೆ ಆಗ್ರಹಿಸಿದ್ದಾರೆ. ಮಂಗಳೂರು ನಗರದ ಮಹಾಕಾಳಿಪಡ್ಪು ಪ್ರದೇಶದಲ್ಲಿ ರೈಲ್ವೆ ಅಂಡರ್ ಪಾಸ್ ಬೇಕೆಂಬ ಕೂಗಿಗೆ ಫಲ ದೊರಕಿದೆ. ಅಂಡರ್ ಪಾಸ್ ವಾಹನ ಸವಾರರಿಗೆ ದೊಡ್ಡಮಟ್ಟದ ಅನುಕೂಲ ಒದಗಿಸಿದರೂ, ಸ್ಥಳೀಯ ನಿವಾಸಿಗಳನ್ನು ಸಂಕಷ್ಟಕ್ಕೆ ತಳ್ಳಿದೆ. ರೈಲ್ವೆ ಅಂಡರ್ ಪಾಸ್ ಸಂಚಾರ ಮುಕ್ತಗೊಂಡ ದಿನವೇ ಇಲ್ಲಿನ ರೈಲ್ವೆ ಗೇಟನ್ನು ಕಾಂಕ್ರೀಟ್ ತಡೆಗೋಡೆ ನಿರ್ಮಿಸಿ ಸಂಪೂರ್ಣವಾಗಿ ಮುಚ್ಚಲಾಗಿದೆ. ಪ್ರತಿ ದಿನ ಈ ಹಳಿಯಲ್ಲಿ 40-50ರೈಲುಗಳು ಸಂಚಾರ ನಡೆಸುತ್ತಿರುತ್ತದೆ. ಆದ್ದರಿಂದ ಇಲ್ಲಿ 45 ವರ್ಷಗಳಿಂದ ರೈಲ್ವೆ ಗೇಟ್ ಕಾರ್ಯ ನಿರ್ವಹಿಸುತ್ತಿತ್ತು. ಇದರಿಂದ ಕೇರಳ, ತಲಪಾಡಿ, ತೊಕ್ಕೊಟ್ಟು, ಉಳ್ಳಾಲ ಕಡೆಗಳಿಂದ ಮಂಗಳೂರು ನಗರವನ್ನು ಸಂಪರ್ಕಿಸುವ ವಾಹನ ಸವಾರರಿಗೆ ತೊಂದರೆಯಾಗುತ್ತಿತ್ತು. ಅಂಡರ್ ಪಾಸ್ ನಿಂದ ಅನಾನುಕೂಲ ಇದೀಗ ಅಂಡರ್ ಪಾಸ್ ಸಂಚಾರ ಮುಕ್ತದ ಬಳಿಕ ಹಳೆಯ ರೈಲ್ವೆ ಗೇಟ್ ಬಂದ್ ಮಾಡಿ ಹಳಿ…
ಮಂಗಳೂರು, ಫೆ. 19: ಬಿಜೆಪಿ ಮಂಗಳೂರು ನಗರ ದಕ್ಷಿಣ ಮಂಡಲ ವತಿಯಿಂದ ಕೇಂದ್ರ ಸರಕಾರದ ವಿಬಿ ಜಿ ರಾಮ್ ಜಿ ಕಾಯ್ದೆಯ ಬಗ್ಗೆ ಜನಜಾಗೃತಿ ಹಾಗೂ ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಬಿಜೆಪಿ ಜಿಲ್ಲಾ ಕಚೇರಿ ಬಳಿಯಿಂದ ಮ.ನ.ಪಾ ಕಚೇರಿ ವರೆಗೆ ಬೃಹತ್ ಕಾಲ್ನಡಿಗೆ ಜಾಥಾ ನಡೆಯಿತು. ಈ ವೇಳೆ ಮಾತಾಡಿದ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಸ್ವತಃ ರಾಜೀವ್ ಗಾಂಧಿಯೇ ತಮ್ಮ ಸರಕಾರ ಒಂದು ರೂಪಾಯಿ ಕೊಟ್ರೆ ಅದರಲ್ಲಿ ಕೆಲವೇ ಪೈಸೆ ಮಾತ್ರ ಜನರಿಗೆ ತಲುಪುತ್ತದೆ ಎಂದು ಹೇಳಿ ವೈಫಲ್ಯ ವ್ಯಕ್ತಪಡಿಸಿದ್ದರು. ಆದರೆ ಈಗ ಒಂದೇ ಒಂದು ರೂಪಾಯಿ ಭ್ರಷ್ಟಾಚಾರಕ್ಕೂ ಆಸ್ಪದವಿಲ್ಲದೆದೇ ನರೇಂದ್ರ ಮೋದಿ ಸರ್ಕಾರ ಆಡಳಿತ ನಡೆಸುತ್ತಿದೆ. ಅದರ ಮುಂದುವರಿದ ಭಾಗವೇ ವಿಬಿ ಜಿ ರಾಮ್ ಜಿ. ವಿಧಿಯಿಲ್ಲದೇ ಕಾಂಗ್ರೆಸ್ ವಿರೋಧ ಮಾಡುತ್ತಿದೆ ಅಷ್ಟೇ ಎಂದರು.ನಂತರ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ವಿಬಿ-ಜಿ ರಾಮ್ ಜಿ ಕಾಯ್ದೆ ಮೂಲಕ ಬಡವರಿಗೆ ದುಡಿಯಲು ಹೆಚ್ಚಿನ ಅವಕಾಶ ನೀಡಿದರೂ ಕಾಂಗ್ರೆಸ್ಸಿಗರು ವಿರೋಧಿಸುತ್ತಿದ್ದಾರೆ ಎಂದರೆ ಅವರ…
ಬಂಟ್ವಾಳ, ಫೆ. 19 : ನರೇಗಾ ಯೋಜನೆ ಹಲವು ಬಾರಿ ಹೆಸರು ಪರಿವರ್ತನೆ ಆಗಿದೆ. ನರೇಗಾದಲ್ಲಿರುವ ಕುಂದುಕೊರತೆ ನಿವಾರಿಸಿ ಯೋಜನೆ ಪರಿಷ್ಕರಿಸಲಾಗಿದೆ. 100 ದಿನ ಇದ್ದ ಉದ್ಯೋಗ 125 ದಿನ ಆಗಿರುವುದು ಲಾಭವಾ ನಷ್ಟವಾ ಎಂದು ಜನರು ತಿಳಿದುಕೊಳ್ಳಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು. ಅವರು ಬಂಟ್ವಾಳ ಮಂಡಲದ ವತಿಯಿಂದ ಹಮ್ಮಿಕೊಂಡ ಮಹಾತ್ಮ ಗಾಂಧಿ ನರೇಗಾ ಯೋಜನೆಯಲ್ಲಿನ ಭ್ರಷ್ಟಾಚಾರವನ್ನು ತೊಡೆದು ಹಾಕಲು ಹಾಗೂ ಕೇಂದ್ರ ಸರಕಾರದ ಹೊಸ ಕಾಯ್ದೆಯ ಬಗ್ಗೆ ಜನಜಾಗೃತಿ ಮೂಡಿಸಲು ಹಾಗೂ ಭ್ರಷ್ಟಾಚಾರ ಮುಕ್ತ ಆಡಳಿತಕ್ಕಾಗಿ ಹಮ್ಮಿಕೊಂಡ ಬೃಹತ್ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದರು.ಬಂಟ್ವಾಳ ವಿಧಾನ ಸಭಾ ಕ್ಷೇತ್ರಲ್ಲಿನ ಬಹುತೇಕ ಗ್ರಾ.ಪಂ.ಗಳಲ್ಲಿ ಜಿ.ರಾಮ್ ಜಿ.ಕಾಯ್ದೆಯೇ ಬೇಕು ಎಂದು ನಿರ್ಣಯ ಮಾಡಿ ಸರಕಾರಕ್ಕೆ ಕಳುಹಿಸಿದ್ದಾರೆ ಇದು ಅತ್ಯಂತ ಸಂತಸದ ವಿಚಾರ ಎಂದು ಹೇಳಿದರು. ಕೈಕಂಬ ಪೊಳಲಿ ದ್ವಾರದಿಂದ ಬಿ.ಸಿ.ರೋಡಿನ ವರೆಗೆ ಬೃಹತ್ ಪಾದಯಾತ್ರೆ ನಡೆಯಿತು.ಬಂಟ್ವಾಳ ಮಂಡಲದ ಅಧ್ಯಕ್ಷ ಆರ್.ಚೆನ್ನಪ್ಪ ಕೋಟ್ಯಾನ್ ಮಾಜಿ ಶಾಸಕ ಪದ್ಮನಾಭ ಕೊಟ್ಟಾರಿ, ಪಕ್ಷದ ಪ್ರಮುಖರಾದ…
ಅಸೈಗೋಳಿ; ಯಕ್ಷಮಿತ್ರರು ಅಸೈಗೋಳಿ ಸಾದರ ಪಡಿಸಿದ “ಗರುಡೋದ್ಭವ” ಯಕ್ಷಗಾನ ಬಯಲಾಟ ಸಂದರ್ಭದಲ್ಲಿ ಯಕ್ಷಸೇವೆಯ ರಜತಪರ್ವದಲ್ಲಿ ಮಿಂಚುತ್ತಿರುವ ಮೋಹನ್ ಬೆಳ್ಳಿಪಾಡಿ ಇವರನ್ನು ಬೆಳ್ಳಿಯ ಪದಕದೊಂದಿಗೆ ಮತ್ತು ರಮೇಶ್ ಪಟ್ರಮೆ ಹಾಗೂ ಪಾಕತಜ್ಞ ಹರೀಶ್ ಭಟ್ ಅಸೈಗೋಳಿ ಇವರನ್ನು ಆಯೋಜಕರ ವತಿಯಿಂದ ಗಣ್ಯರ ಉಪಸ್ಥಿತಿಯಲ್ಲಿ ಸಂಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಪಾವಂಜೆ ಮೇಳದ ಸಂಚಾಲಕರು- ಪ್ರಧಾನ ಭಾಗವತರಾದ ಯಕ್ಷಧ್ರುವ ಪಟ್ಲ ಸತೀಶ್ ಶೆಟ್ಟಿ ಇವರನ್ನು ಗೌರವಿಸಲಾಯಿತು.
ಮಂಗಳೂರು, ಫೆ.18: ಮಂಜನಾಡಿಯ ಮೊಂಟೆಪದವು ಎಂಬಲ್ಲಿ 2025ರ ಮೇ 30ರಂದು ಸಂಭವಿಸಿದ ಭೀಕರ ಗುಡ್ಡ ಕುಸಿತದಲ್ಲಿ ಸಿಲುಕಿ ತನ್ನೆರಡೂ ಕಾಲುಗಳನ್ನು ಕಳೆದುಕೊಂಡ ಅಶ್ವಿನಿ ಎಂಬವರು ತನ್ನ ತಾಯಿ ಪುಷ್ಪಾವತಿ ಜತೆ ಮಾನವ ಹಕ್ಕುಗಳ ಆಯೋಗದೆದುರು ನ್ಯಾಯಕ್ಕಾಗಿ ಕಣ್ಣೀರಿಟ್ಟ ಘಟನೆ ಬುಧವಾರ ನಡೆಯಿತು. ರಾಜ್ಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಡಾ.ಶ್ಯಾಂ ಭಟ್ ಮತ್ತು ಸದಸ್ಯರಾದ ಎಸ್.ಕೆ. ವಂಟಿಗೋಡಿ ಅವರು ಜಿ.ಪಂ.ನ ನೇತ್ರಾವತಿ ಸಭಾಂಗಣದಲ್ಲಿ ಸಾರ್ವಜನಿಕ ದೂರುಗಳ ವಿಚಾರಣೆಯನ್ನು ಹಮ್ಮಿಕೊಂಡಿದ್ದರು. ಇದಕ್ಕಾಗಿ ತಾಯಿ ಜೊತೆ ಖಾಸಗಿ ಆಂಬುಲೆನ್ಸ್ ನಲ್ಲಿ ಆಗಮಿಸಿದ್ದ ಅಶ್ವಿನಿಯವರು ಆಂಬುಲೆನ್ಸ್ ನಿಂದ ವೀಲ್ ಚೇರ್ನಲ್ಲಿ ಕೂತು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ಜಿ.ಪಂ. ಸಭಾಂಗಣ ಪ್ರವೇಶ ದ್ವಾರದಲ್ಲಿಯೇ ತಡೆದು ತಮ್ಮ ಅಳಲು ತೋಡಿಕೊಂಡರು. ಅಶ್ವಿನಿ ಪರವಾಗಿ ಪ್ರಕರಣದ ಕುರಿತಂತೆ ಸಾಮಾಜಿಕ ಕಾರ್ಯಕರ್ತ ರವಿ ಎಂಬವರು ಆಯೋಗದ ಪ್ರತಿನಿಧಿಗಳಿಗೆ ವಿವರ ನೀಡಿದರು. ‘ಮಂಜನಾಡಿ ಗ್ರಾಮದ ಮೊಂಟೆಪದವಿನ ಪಂಬದ ಹಿತ್ತಿಲು ಕೋಡಿ ಕೊಪ್ಪಳ ಎಂಬಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ…
ನಿಡ್ಡೋಡಿ ಯೋಜನಾ ಪ್ರದೇಶಕ್ಕೆ ಸಂಬಂಧಿಸಿದಂತೆ ಇತ್ತೀಚಿನ ಬೆಳವಣಿಗೆಗಳನ್ನು ಉಡುಪಿ–ಕಾಸರಗೋಡು ಟ್ರಾನ್ಸ್ಮಿಷನ್ ಲಿಮಿಟೆಡ್ (UKTL) ಗಮನಿಸಿದೆ. ಮೂಲಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದ ಅನ್ವಯವಾಗುವ ಕಾನೂನುಗಳು, ರಾಜ್ಯದ ನಿಯಮಾವಳಿಗಳು, ರಾಜ್ಯ ಸರ್ಕಾರದ ಅಧಿಸೂಚನೆಗಳ ನಿರ್ದೇಶನಗಳು ಹಾಗೂ ಜಿಲ್ಲಾಧಿಕಾರಿಗಳ ಆದೇಶಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ನಮ್ಮ ಎಲ್ಲಾ ಚಟುವಟಿಕೆಗಳನ್ನು ನಡೆಸಲು ನಾವು ಬದ್ಧರಾಗಿದ್ದೇವೆ. ಯೋಜನೆಯ ಪ್ರಕ್ರಿಯೆಗಳ ಸಮಗ್ರತೆ—ವಿಶೇಷವಾಗಿ ಮಾರ್ಗಾಧಿಕಾರ (Right of Way) ಮತ್ತು ಪರಿಹಾರ ವಿತರಣೆಗೆ ಸಂಬಂಧಿಸಿದ ವಿಷಯಗಳಿಗೆ ನಾವು ಹೆಚ್ಚಿನ ಆದ್ಯತೆ ನೀಡುತ್ತೇವೆ. ಈ ಎಲ್ಲಾ ಪ್ರಕ್ರಿಯೆಗಳನ್ನು ಸಂಪೂರ್ಣ ಪಾರದರ್ಶಕತೆಯಿಂದ ಮತ್ತು ಕಾನೂನುಬದ್ಧವಾಗಿ ನಿರ್ವಹಿಸಲಾಗುತ್ತಿದೆ ಎಂದು ನಾವು ಖಚಿತಪಡಿಸುತ್ತೇವೆ. ಪರಿಹಾರ ನೀಡಿಕೆಯಲ್ಲಿ ನಾವು ಸಂಪೂರ್ಣ ಪಾರದರ್ಶಕತೆಯ ನೀತಿಯನ್ನು ಹೊಂದಿದ್ದು, ಭೂಮಾಲೀಕರೊಂದಿಗೆ ಒಪ್ಪಂದ ಮಾಡಿಕೊಳ್ಳುವ ಸಂದರ್ಭದಲ್ಲಿ, ಕಾಮಗಾರಿ ಆರಂಭಿಸುವ ಮೊದಲೇ ಶೇ. 100ರಷ್ಟು ಪರಿಹಾರದ ಮೊತ್ತವನ್ನು ಪಾವತಿಸುತ್ತೇವೆ.ನಾವು ಈ ನಿಯಮ ಮತ್ತು ಮಾನದಂಡಗಳಿಗೆ ಬದ್ಧರಾಗಿದ್ದರೂ, ಸ್ಥಳೀಯ ಸಮುದಾಯದೊಂದಿಗೆ ನಾವು ಹೊಂದಿರುವ ಸಂಬಂಧಕ್ಕೆ ಹೆಚ್ಚಿನ ಗೌರವ ನೀಡುತ್ತೇವೆ. ನಿಗದಿತ ಆಡಳಿತಾತ್ಮಕ ವ್ಯವಸ್ಥೆಗಳ ಮೂಲಕ ರಚನಾತ್ಮಕ ಹಾಗೂ ಶಾಂತಿಯುತ ಸಂವಾದ…
ಉಳ್ಳಾಲ : ತುರ್ತು ಟ್ರ್ಯಾಕ್ ನವೀಕರಣ ಹಾಗೂ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಫೆಬ್ರವರಿ 19ರ ಸಂಜೆ 6.00 ಗಂಟೆಯಿಂದ ಫೆಬ್ರವರಿ 21ರ ಮಧ್ಯಾಹ್ನ 12.00 ಗಂಟೆಯವರೆಗೆ ಉಳ್ಳಾಲ ರೈಲ್ವೆ ನಿಲ್ದಾಣ ಸಮೀಪದ ಸಂಚಾರಕ್ಕೆ ಗೇಟ್ ಸಂಪೂರ್ಣ ಬಂದ್ ಮಾಡಲಾಗುತ್ತದೆ ಎಂದು ದಕ್ಷಿಣ ರೈಲ್ವೆ ಮಂಗಳೂರು ವಿಭಾಗದ ಹಿರಿಯ ಸೆಕ್ಷನ್ ಇಂಜಿನಿಯರ್ (ಪರ್ಮನೆಂಟ್ ವೇ) ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಇಲಾಖೆ ಪ್ರಕಟಣೆಯಲ್ಲಿ , ಕಿ.ಮೀ. 877/200–300ರಲ್ಲಿ ಇರುವ ಎಲ್.ಸಿ. ನಂ.293 (ಸೋಮೇಶ್ವರ ರೈಲು ಗೇಟ್) ನಲ್ಲಿ ಟ್ರ್ಯಾಕ್ ನವೀಕರಣ ಹಾಗೂ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಹಾಗಾಗಿ ಉಳ್ಳಾಲ–ಬೀರಿ ರೈಲು ನಿಲ್ದಾಣಗಳ ಮಧ್ಯೆ ಕಾಮಗಾರಿಯ ಅವಧಿಯಲ್ಲಿ ಎಲ್ಲಾ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗುತ್ತದೆ.ಸಾರ್ವಜನಿಕರು ಬೀರಿ –ಸಂಕೊಳಿಗೆ–ಉಚ್ಚಿಲ ಲೆವೆಲ್ ಕ್ರಾಸಿಂಗ್–ಬೀಚ್ ರಸ್ತೆ–ಸೋಮೇಶ್ವರ ಹಾಗೂ ಕೋಟೆಕಾರ್–ಕೊಲ್ಯ–ತೊಕ್ಕೊಟ್ಟು–ಒಳಪೇಟೆ ರಸ್ತೆ ಮೂಲಕ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ರೈಲ್ವೆ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಮಂಗಳೂರು;ನೀರುಮಾರ್ಗ ಗ್ರಾಮದ ಪೆದಮಲೆಯಲ್ಲಿ ಐದು ಗ್ರಾಮಗೊಳಪಟ್ಟ ಧ್ವಜವೇರಿ ನಡೆಯುವ ಮಾಗಣೆ ದೈವಗಳಾದ ಶ್ರೀ ವಾಜಿಲ್ಲಾಯ – ಧೂಮಾವತಿ ದೈವಸ್ಥಾನದಲ್ಲಿ ಫೆ.19ರಿಂದ ಫೆ.21ರವರೆಗೆ ಪೆದಮಲೆ ವರ್ಷಾವಧಿ ಬಂಡಿ ನೇಮೋತ್ಸವ ನಡೆಯಲಿದೆ. ಈ ಹಿನ್ನಲೆ ಈಗಾಗಲೇ ಕ್ಷೇತ್ರದಲ್ಲಿ ಕೋಳಿಕುಂಟ ನಡೆದಿದೆ. ಈ ಸಂದರ್ಭ ಅಶ್ವಿನ್ ಶೆಟ್ಟಿ ಬೊಂಡAತಿಲ ಗುತ್ತು ಅವರು ಮಾತನಾಡಿ, ಪ್ರಶ್ನಾ ಚಿಂತನೆ ಪ್ರಕಾರ ತಿಳಿದು ಬಂದAತೆ ದೈವಗಳಿಗೆ ದೈವಸ್ಥಾನ ನಿರ್ಮಾಣಗೊಂಡು ಒಂದು ವರ್ಷ ಕಳೆದಿದೆ. ಇದೀಗ ಕಾಲಾವಧಿ ನೇಮೋತ್ಸವ ನಡೆಯಲಿದ್ದು, ಪೂರ್ವಭಾವಿಯಾಗಿ ಕೋಳಿಕುಂಟ ನಡೆದಿದೆ. ಫೆ.19ರಂದು ಬೆಳಗ್ಗೆ 9.00ರಿಂದ ದೈವಸ್ಥಾನದ ನಾಗಬನದಲ್ಲಿ ನಾಗತಂಬಿಲ, ಸಂಜೆ 5.00ರಿಂದ ನೀರುಮಾರ್ಗ ಶ್ರೀ ಸುಬ್ರಹ್ಮಣ್ಯ ಭಜನಾ ಮಂದಿರದಿAದ ದೈವಸ್ಥಾನಕ್ಕೆ ಹೊರೆಕಾಣಿಕೆ, ಸಂಜೆ 6.00ರಿಂದ ದೈವಸ್ಥಾನದ ಭಂಡಾರಮನೆಯಲ್ಲಿ ನವಕ ಕಲಶ ಶುದ್ಧ ಪೂಜೆ ನಡೆಯಲಿದೆ ಎಂದು ಮಾಹಿತಿ ನೀಡಿದ್ದಾರೆ. ಬಳಿಕ ಶ್ರೀ ವಾಜಿಲ್ಲಾಯ- ಧೂಮಾವತಿ ದೈವಸ್ಥಾನ ಟ್ರಸ್ಟ್ನ ಅಧ್ಯಕ್ಷರಾದ ಗಿರಿಧರ್ ಶೆಟ್ಟಿ ಮಾತನಾಡಿ, ದೈವಸ್ಥಾನದ ತಂತ್ರಿಗಳಾದ ವೇದಮೂರ್ತಿ ಬ್ರಹ್ಮಶ್ರೀ ಕುಡುಪು ಕೃಷ್ಣರಾಜ ತಂತ್ರಿಗಳ ಮಾರ್ಗದರ್ಶನದಲ್ಲಿ ದೈವಿಕ ವಿಧಿವಿಧಾನಗಳು…

