ಇರಾ: ಇರಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಾವಬೀಡು ಎಂಬಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಅರಣ್ಯೀಕರಣ ಕಾಮಗಾರಿಗೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಆಗ್ನೇಸ್ ಡಿ.ಸೋಜ.ಪಿ. ಮತ್ತು ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಚಾಲನೆ ನೀಡಿದರು. ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೊಯಿದುಕುಂಞÂ, ಸದಸ್ಯರಾದ ಕೆ. ಪ್ರತಾಪ್ ಚಂದ್ರ, ಅಬ್ದುಲ್ ಹಮೀದ್, ರಮೇಶ್. ಎಸ್. ಪೂಜಾರಿ, ಪಂಚಾಯತ್ ಕಾರ್ಯದರ್ಶಿ ನಳಿನಿ.ಎ.ಕೆ ಮತ್ತಿತರರು ಉಪಸ್ಥಿತರಿದ್ದರು.
Author: UllalaVani
ಹರೇಕಳ: ಹರೇಕಳ ಗ್ರಾಮ ಪಂಚಾಯತ್ನ ನೂತನ ಕಟ್ಟಡ ನಿರ್ಮಾಣವಾಗುವ ಸ್ಥಳ ಪರಿಶೀಲನೆಗೆ ಜಿಲ್ಲಾ ಪಂಚಾಯತ್ ಮುಖ್ಯಕಾರ್ಯನಿರ್ವಹಕ ಅ„ಕಾರಿ ಡಾ| ಕುಮಾರ್ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಪದ್ಮಶ್ರೀ ಪ್ರಶಸ್ತಿ ಪಡೆದ ಹರೇಕಳ ಹಾಜಬ್ಬರ ಮನೆಗೆ ಭೇಟಿ ನೀಡಿದರು.ಹರೇಕಳ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬದ್ರುದ್ದೀನ್ ಫರೀದ್ ನಗರ, ಸದಸ್ಯ ಅಬೂಬಕ್ಕರ್ ಸಿದ್ದೀಕ್, ಗುತ್ತಿಗೆಗಾರ ಇಂತಿಯಾಝ್ ಹರೇಕಳ ಉಪಸ್ಥಿತರಿದ್ದರು.
ಇರಾ: ಮಂಗಳೂರು ವಿಧಾನಸಭಾ ಕ್ಷೇತ್ರಕ್ಕೊಳಪಟ್ಟ ಬಂಟ್ವಾಳ ತಾಲೂಕಿನ ಇರಾ ಗ್ರಾಮ ಪಂಚಾಯತ್ ಅಭಿವೃದ್ಧಿ ಕಾರ್ಯಗಳ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಕುಮಾರ್ ರೊಂದಿಗೆ ಶಾಸಕರಾದ ಯು. ಟಿ. ಖಾದರ್ ನೇತೃತ್ವದ ನಿಯೋಗ ತೆರಳಿ ಮಾತುಕತೆ ನಡೆಸಿತು.ಮ ಪಂಚಾಯತ್ ಅಧ್ಯಕ್ಷ ಆಗ್ನೇಸ್ ಡಿಸೋಜಾ, ಮಾಜಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ, ಉಪಾಧ್ಯಕ್ಷ ಮೊಯಿದು ಕುಂಞ ,ಗ್ರಾಮ ಪಂಚಾಯತ್ ಸದಸ್ಯರು, ಹಾಗೂ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ ಕೆ ಉಪಸ್ಥಿತರಿದ್ದರು
ಉಳ್ಳಾಲ: ಯೆನೆಪೋಯ ವೈದ್ಯಕೀಯ ವಿಶ್ವವಿದ್ಯಾಲಯದ ಶರೀರ ಶಾಸ್ತ್ರ ವಿಭಾಗದ ವತಿಯಿಂದ ಇತ್ತೀಚಿನ ವೈದ್ಯಕೀಯ ವಿಜ್ಞಾನಗಳ ಪ್ರಗತಿಯ ಬಗ್ಗೆ ಅಂತಾರಾಷ್ಟ್ರೀಯ ಇ-ಕಾನ್ಫರೆನ್ಸ್ RAMSIECON 2021 ದೇರಳಕಟ್ಟೆಯ ಯೆನೆಪೋಯ ಸಂಸ್ಥೆಯಲ್ಲಿ ನಡೆಯಿತು.ಗೂಗಲ್ ಮೀಟ್ ಮತ್ತು ಯೂಟ್ಯೂಬ್ ಪ್ಲಾಟ್ಫಾರ್ಮ್ನ ಮುಖಾಂತರ ಉದ್ಘಾಟನೆ ನಡೆಯಿತು. ಈ ಸಮ್ಮೇಳನವು ಯುವ ಸಂಶೋಧಕರಿಗೆ ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ನಡೆಯುತ್ತಿರುವ ನೂತನ ಆವಿಷ್ಕಾರಗಳ ಬಗ್ಗೆ ತಿಳಿಯಲು ಒಂದು ವೇದಿಕೆಯನ್ನು ಒದಗಿಸಿದೆ. ಭಾರತ ಮತ್ತು ವಿದೇಶಗಳಿಂದ ಸುಮಾರು 238 ಪ್ರತಿನಿಧಿಗಳು ಸಮ್ಮೇಳನದಲ್ಲಿ ಭಾಗವಹಿಸಿದರು.ಉಪಮುಖ್ಯಮಂತ್ರಿ ಡಾ.ಅಶ್ವತ್ ನಾರಾಯಣ್ ಸಿ.ಎನ್. ಮಾತನಾಡಿ ವೈದ್ಯಕೀಯ ಪ್ರಗತಿಯ ಮಾಹಿತಿ ಮತ್ತು ಬೆಳವಣಿಗೆಗಳನ್ನು ಪ್ರಚುರ ಪಡಿಸುವಲ್ಲಿ ಯೆನೆಪೋಯ ವಿಶ್ವವಿದ್ಯಾಲಯವು ಮುಂಚೂಣಿಯಲ್ಲಿದ್ದು ಅದು ಸಮಯೋಚಿತವಾದದ್ದು ಎಂದು ಶ್ಲಾಘಿಸಿದರು.ಈ ವೇಳೆ ಯೆನೆಪೋಯ ವಿಶ್ವವಿದ್ಯಾಲಯದ ವಿಶ್ರಾಂತ ಉಪಕುಲಪತಿ ಡಾ. ಬಿ. ಎಚ್. ಶ್ರೀಪತಿ ರಾವ್ ಗೌರವ ಅತಿಥಿಗಳಾಗಿ ಭಾಗವಹಿಸಿದ್ದರು. ಯೆನೆಪೆÇೀಯ ವಿಶ್ವವಿದ್ಯಾಲಯದ ಉಪಕುಲಪತಿ ಪೆÇ್ರ.ಡಾ.ಎಂ.ವಿಜಯ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.ಈ ಕಾರ್ಯಕ್ರಮದಲ್ಲಿ ಯೆನೆಪೋಯದ ವಿಶ್ವಯವಿದ್ಯಾಲಯದ ಕುಲಸಚಿವ ಡಾ.ಕೆ.ಎಸ್ ಗಂಗಾಧರ ಸೋಮಯಾಜಿ ಮತ್ತು ಪರೀಕ್ಷೆಗಳ ನಿಯಂತ್ರಕ ಡಾ.…
ಮಂಗಳೂರು: ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯವು ಜೀವ ವೈದ್ಯಕೀಯ ವಿಜ್ಞಾನ ಮತ್ತು ಮಾಧ್ಯಮ ಹಾಗೂ ಸಂವಹನ ವಿಷಯಗಳಲ್ಲಿ ನಾಲ್ಕು ವರ್ಷಗಳ ಹೊಸ ಬ್ಯಾಚುಲರ್ ಕೋರ್ಸುಗಳನ್ನು ಪ್ರಾರಂಭಿಸಲು ನಿರ್ಧರಿಸಿದೆ. ಈ ಹೊಸ ಕೋರ್ಸುಗಳು ವಿದ್ಯಾರ್ಥಿಗಳು ಮತ್ತು ಉದ್ಯೋಗ ಆಧಾರಿತ ಮತ್ತು 2020ರ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ರೂಪಿಸಲಾದ ಶಿಕ್ಷಣದ ತತ್ವಗಳನ್ನು ಒಳಗೊಂಡಿವೆ ಎಂದು ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾನಿಲಯದ ಕುಲಪತಿಗಳಾದ ಡಾ.ಸತೀಶ್ ಕುಮಾರ್ ಭಂಡಾರಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.ನಾಲ್ಕು ವರ್ಷಗಳ ಬಿ.ಎಸ್ಸಿ (ಆನರ್ಸ್) ಮತ್ತು ಬಿ.ಎ (ಆನರ್ಸ್) ಕೋರ್ಸುಗಳು ಅಂತರ ರಾಷ್ಟ್ರೀಯ ಕೋರ್ಸುಗಳಿಗೆ ಅನುಗುಣವಾಗಿದ್ದು, ಹೆಚ್ಚು ಜಾಗತಿಕ ಮನ್ನಣೆಯನ್ನು ಹೊಂದಿರುತ್ತವೆ. ಈ ಕೋರ್ಸುಗಳಲ್ಲಿ ವಿದ್ಯಾರ್ಥಿಗಳಿಗೆ ಹೆಚ್ಚು ಪ್ರವೇಶ ಮತ್ತು ನಿರ್ಗಮನದ ಆಯ್ಕೆಗಳು ಸಿಗಲಿದ್ದು, ಶಿಕ್ಷಣಕ್ಕೆ ಹೆಚ್ಚಿನ ಗೌರವ ಮತ್ತು ಮನ್ನಣೆ ಗಳಿಸಬಹುದಾಗಿದೆ. ಉದಾಹರಣೆಗೆ, ವಿದ್ಯಾರ್ಥಿಗಳು ಮೂರು ವರ್ಷಗಳಲ್ಲಿ ತಮ್ಮಬಿ.ಎಸ್ಸಿ ಅಥವಾ ಬಿ.ಎ ಪದವಿಯೊಂದಿಗೆ ಕೋರ್ಸು ಮುಗಿಸಿ ತೆರಳಬಹುದು ಅಥವಾ ಮುಂದುವರಿಸಿ ನಾಲ್ಕನೇ ವರ್ಷ ಪೂರ್ಣಗೊಳಿಸಿ ಆನರ್ಸ್ ಪದವಿಯೊಂದಿಗೆ ಕೋರ್ಸನ್ನು ಮುಗಿಸಬಹುದು. ಹೆಚ್ಚುವರಿ ವರ್ಷದ ತರಬೇತಿಯು ಇಂಟರ್ನ್…
ಉಳ್ಳಾಲ: ಯೆನೆಪೋಯ ಸಂಸ್ಥೆಯು ಅಂತರಾಷ್ಟ್ರೀಯವಾಗಿ ಅನುಮೋದಿತ ವಾಗಿರುವ ರಷ್ಯಾದ SPUTNIK – V ಎಂಬ ಕೋವಿಡ್-19 ಲಸಿಕೆಯನ್ನು ನೀಡುವ ಅನುಮತಿಯನ್ನು ಪಡೆದುಕೊಂಡಿದೆ.ಕೋವಿಡ್ – 19 ಆರಂಭಗೊಂಡ ಸಮಯದಿಂದ ಯೆನೆಪೋಯ ಸಂಸ್ಥೆಗಳು ತಮ್ಮ ಸಂಫೂರ್ಣ ಸಂಪನ್ಮೂಲಗಳನ್ನು ಕೋವಿಡ್ ಪೀಡಿತ ರೋಗಿಗಳ ಸುಧಾರಣೆಗೆ ಮೀಸಲ್ಪಟ್ಟಿದೆ. ಇದೇ ಗುರಿಯನ್ನು ಮುಂದಿಟ್ಟುಕೊಂಡು ಯೆನೆಪೋಯ ಸಂಸ್ಥೆಯು ಲಸಿಕೆಯನ್ನು ನೀಡುವ ಕರ್ನಾಟಕದ ಪ್ರಪ್ರಥಮ ಆರೋಗ್ಯ ಸಂಸ್ಥೆಗಳಲ್ಲಿ ಒಂದಾಗಿದೆ.ಲಸಿಕೆಯನ್ನು ಪಡೆಯಲು ಇಚ್ಛಿಸುವ ಫಲಾನುಭವಿಗಳಿಗೆ ಸುಲಭವಾಗಿ ದೊರಕುವಂತೆ ಸಂಸ್ಥೆಯು ದೇರಳಕಟ್ಟೆ, ಯೆನೆಪೋಯ ಮೆಡಿಕಲ್ ಕಾಲೇಜು ಆಸ್ಪತ್ರೆ ಹಾಗೂ ಯೆನೆಪೋಯ ಸ್ಪೆಷಾಲಿಟಿ ಆಸ್ಪತ್ರೆ, ಮಂಗಳೂರಿನಲ್ಲಿ ಲಸಿಕಾ ಕೇಂದ್ರಗಳನ್ನು ಸ್ಥಾಪಿಸಿದೆ.ಸೂಕ್ತವಾದ ಸುರಕ್ಷತ ಮಾರ್ಗಸೂಚಿಗಳನ್ನು ಅನುಸರಿಸಿ ಫಲಾನುಭವಿಗಳಿಗೆ ಲಸಿಕೆ ಫಡೆಯಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಸರ್ಕಾರ ಅನುಮೋದಿಸಿದ ದರಗಳಲ್ಲಿ ಲಸಿಕೆ ಲಭ್ಯವಿದೆ ಎಂದು ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಉಳ್ಳಾಲ: ಕೇರಳದಲ್ಲಿ ಡೆಲ್ಟಾ ಪ್ಲಸ್ ವೇರಿಯಂಟ್ ಪ್ರಕರಣಗಳು ಹೆಚ್ಚಾಗಿ ಕಂಡುಬಂದ ಹಿನ್ನೆಲೆಯಲ್ಲಿ ರಾಜ್ಯ ಸರಕಾರದ ನಿರ್ದೇಶನದಂತೆ ರಾಜ್ಯದ ಗಡಿಭಾಗದ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚಿಸಲಾಗಿದೆ. ಜಿಲ್ಲೆಯನ್ನು ಪ್ರವೇಶಿಸುವವರು ಕಡ್ಡಾಯವಾಗಿ ಆರ್ ಟಿ ಪಿಸಿಆರ್ ವರದಿಯನ್ನು ತೋರಿಸಿಯೇ ಒಳಪ್ರವೇಶಿಸಬೇಕು ಎಂದು ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಹೇಳಿದ್ದಾರೆ.ಕೇರಳ ಗಡಿಭಾಗ ತಲಪಾಡಿಯಲ್ಲಿ ಇಂದು ಬೆಳಿಗ್ಗೆ ಕೇರಳದಿಂದ ಬರುವ ಮಂದಿಯನ್ನು ತಪಾಸಣೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.ಕೇರಳ ಮತ್ತು ದ.ಕ ನಡುವೆ ಇರುವ ಎಲ್ಲಾ ಚೆಕ್ ಪೋಸ್ಟ್ ಗಳನ್ನು ಸಕ್ರಿಯವಾಗುವಂತೆ ಆದೇಶಿಸಲಾಗಿದೆ. ತಲಪಾಡಿ, ನೆಟ್ಟಣಿಗೆ-ಮುಡ್ನೂರು, ಸಾರಡ್ಕ, ಜಾಲ್ಸೂರು ಭಾಗದ ಚೆಕ್ ಪೋಸ್ಟ್ ಗಳು ನಾಳೆಯಿಂದ 24 ಗಂಟೆಗಳ ಕಾಲ ಕಾರ್ಯಾಚರಿಸಲಿದೆ. ಜನಸಂಚಾರ ಹೆಚ್ಚಿರುವ ಗ್ರಾ.ಪಂ ವ್ಯಾಪ್ತಿಗಳಲ್ಲಿ ಚೆಕ್ ಪೋಸ್ಟ್ ಹಾಕಲು ಸೂಚಿಸಲಾಗಿದೆ. ಆರ್ಟಿಪಿಸಿಆರ್ ನೆಗೆಟಿವ್ ವರದಿಯನ್ನು ಕಡ್ಡಾಯವಾಗಿ ಹಿಡಿದುಕೊಂಡು ಜಿಲ್ಲೆಯನ್ನು ಪ್ರವೇಶಿಸಬೇಕಿದೆ. ದ.ಕ ಮತ್ತು ಕಾಸರಗೋಡು ಜಿಲ್ಲೆಗಳ ನಡುವೆ ಆರೋಗ್ಯ ಸಂಬಂಧ ವಿಚಾರಕ್ಕೆ ದಿನನಿತ್ಯ ಹಲವು ಜನರು ಬರುತ್ತಾರೆ. ಅವರಲ್ಲಿ ರೋಗಿಯ ಆರ್…
ಉಳ್ಳಾಲ : ಕರ್ನಾಟಕ ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ವಿತರಿಸಿದ ಆಹಾರ ಸಾಮಗ್ರಿಗಳ ಕಿಟ್ ವಿತರಣೆ ಅಸಮರ್ಪಕವಾಗಿದ್ದು ಮುನ್ನೂರು ಗ್ರಾಮದಲ್ಲಿರುವ ಸುಮಾರು ಐನೂರು ಕಟ್ಟಡ ಕಾರ್ಮಿಕರ ಪೈಕಿ ಕೇವಲ ಐವತ್ತೇಳು ಜನರಿಗೆ ಮಾತ್ರ ವಿತರಿಸಿ ಉಳಿದ ಕಾರ್ಮಿಕರಿಗೆ ಅನ್ಯಾಯ ಮಾಡಲಾಗಿದೆ ಎಂದು ಆರೋಪಿಸಿ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘ ಮುನ್ನೂರು ಗ್ರಾಮ ಸಮಿತಿಯ ನೇತೃತ್ವದಲ್ಲಿ ಕಾರ್ಮಿಕರು ಇಂದು ಮುನ್ನೂರು ಗ್ರಾಮ ಪಂಚಾಯತ್ ಎದುರು ಪ್ರತಿಭಟನೆ ನಡೆಸಿದರು.ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಜಿಲ್ಲಾ ಕಾರ್ಯದರ್ಶಿ ಜಯಂತ್ ನಾಯ್ಕ್ ಮುನ್ನೂರು ಗ್ರಾಮ ಪಂಚಾಯಿತಿ ಅಧ್ಯಕ್ಷರ ನೇತೃತ್ವದಲ್ಲಿ ಕೇವಲ 57 ಜನ ಕಾರ್ಮಿಕರಿಗೆ ಕಿಟ್ ಕೊಟ್ಟು ಉಳಿದವರಿಗೆ ಕೊಡದೇ ವಂಚಿಸಿರುವುದು ಅನ್ಯಾಯವಾಗಿದೆ. ಇಲ್ಲಿರುವ 500 ಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರೆಲ್ಲರೂ ಸಹ ಈ ಲಾಕ್ ಡೌನ್ ನಿಂದ ಸಂಕಷ್ಟ ಅನುಭವಿಸುತ್ತಿರುವವರೇ ಆಗಿದ್ದಾರೆ. ಹೀಗಿರುವಾಗ ಕೇವಲ 57 ಜನರಿಗೆ ಕೊಟ್ಟು ಉಳಿದವರಿಗೆ ಕೊಡದೇ ವಂಚಿಸಿರುವುದು ಅಮಾನವೀಯವಾಗಿದ್ದು ಕೂಡಲೇ ಬಾಕಿ…
ಉಳ್ಳಾಲ: ವೀಕೆಂಡ್ ಕಪ್ರ್ಯೂನ ಎರಡನೇ ದಿನವಾದ ರವಿವಾರವೂ ಉಳ್ಳಾಲದಾದ್ಯಂತ ಅಂಗಡಿ ಮುಗ್ಗಟ್ಟುಗಳು ಸಂಪೂರ್ಣÀ ಬಂದ್ ಆಗಿದ್ದು, ವಾಹನಗಳು ಬೆರಳೆಣಿಕೆಯಷ್ಟೇ ರಸ್ತೆಗಿಳಿದಿದೆ, ಉಳ್ಳಾಲ ಸಮುದ್ರ ತೀರದಲ್ಲಿ ಹವ್ಯಾಸಿ ಮೀನುಗಾರರ ದಂಡೇ ಸಮುದ್ರ ತಟದಲ್ಲಿ ಆಧುನಿಕ ಗಾಳದ ಮೂಲಕ ಮೀನು ಹಿಡಿಯುವ ಮೂಲಕ ವೀಎಂಡ್ ಕಫ್ರ್ಯೂವನ್ನು ಸದುಪಯೋಗಪಡಿಸಿಕೊಂಡರು.ಉಳ್ಳಾಲ ಮತ್ತು ಕೊಣಾಜೆ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ರವಿವಾರವೂ ಪೆÇಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರಿಂದ ಹೆಚ್ಚಿನ ವಾಹನಗಳು ರಸ್ತೆಗಿಳಿಯಿಲ್ಲ ಅಂಗಡಿ ಮುಗ್ಗಟ್ಟುಗಳು ಬಂದ್ ಇದ್ದ ಕಾರಣ ಬೆಳಗ್ಗಿನ ಜಾವ ಜನಸಂಖ್ಯೆಯೂ ಕಡಿಮೆ ಇತ್ತು. ಮಧ್ಯಾಹ್ನದ ನಂತರ ಕೆಲವು ವಾಹನಗಳು ಪೆÇಲೀಸರ ಕಣ್ಣು ತಪ್ಪಿಸಿ ಸಂಚರಿಸಿದವು. ಮಧ್ಯಾಹ್ನದ ನಂತರ ಉಳ್ಳಾಲ, ತೊಕ್ಕೊಟ್ಟು ಕಡೆಯಿಂದ ಬಂದ 50ಕ್ಕೂ ಹೆಚ್ಚು ಹವ್ಯಾಸಿಗಳು ಆಧುನಿಕ ಗಾಳ ಹಿಡಿದುಕೊಂಡು ಉಳ್ಳಾಲ ಸಮುದ್ರ ತೀರದಲ್ಲಿಮೀನು ಹಿಡಿಯುತ್ತಿರುವುದು ಕಂಡು ಬಂತು.
ಉಳ್ಳಾಲ: ಉಳಿಯದ ಅಳಿವೆ ಬಾಗಿಲಿನ ನೇತ್ರಾವತಿ ನದಿ ತಟದ ಬೀಚ್ ಪ್ರವಾಸೋದ್ಯಮಕ್ಕೆ ಪೂರಕವಾಗಿದ್ದು, ಮುಂದಿನ ದಿನಗಳಲ್ಲಿ ಈ ಬೀಚ್ ಅಭಿವೃದ್ಧಿ ಸಂದರ್ಭದಲ್ಲಿ ಅಮಲು ಪದಾರ್ಥ, ಸಿಗರೇಟ್ ಸೇರಿದಂತೆ ತ್ಯಾಜ್ಯಮುಕ್ತ ಸುಂದರ ಬೀಚ್ ಆಗಿ ಪರಿವರ್ತಿಸಲು ಸ್ಥಳೀಯರು ಮುಂದಾಗಬೇಕು ಎಂದು ಶಾಸಕ ಯು.ಟಿ. ಖಾದರ್ ತಿಳಿಸಿದರು.ಉಳಿಯ ಅಳಿವೆ ಪ್ರದೇಶವಾಗಿರುವ ನೇತ್ರಾವತಿ ನದಿ ತಟದ ರಿವರ್ ಸೈಡ್ಗೆ ಭೇಟಿ ನೀಡಿ ಮಾತನಾಡಿ ಸ್ಥಳೀಯರ ಸಮಸ್ಯೆ ಆಲಿಸಿ ಮಾತನಾಡಿದರು. ಈ ಪ್ರದೇಶದಲ್ಲಿ ಇಕ್ಕಟ್ಟಾದ ರಸ್ತೆಯಲ್ಲಿ ಹೊರಗಿನಿಂದ ಬರುವ ದ್ವಿಚಕ್ರ ವಾಹನ ಚಾಲಕರು ಅಡ್ಡಾದಿಡ್ಡಿಯಾಗಿ ಸಂಚರಿಸುತ್ತಾರೆ ಇದಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಶಾಸಕರಿಗೆ ತಿಳಿಸಿದರು.ಈ ಸಂದರ್ಭದಲ್ಲಿ ಉಳ್ಳಾಲ ನಗರಸಭಾ ಉಪಾಧ್ಯಕ್ಷ ಆಯೂಬ್, ಮಾಜಿ ಅಧ್ಯಕ್ಷ ಬಾಝಿಲ್ ಡಿ.ಸೋಜ, ಸದಸ್ಯರಾದಅಶ್ರಫ್, ವೀಣಾ ಉಳಿಯ, ಭಾರತಿ, ಸ್ವಪ್ನಾ ಹರೀಶ್, ರಾಜೇಶ್ ಯಾನೆ ಅಂತ ಗುರಿಕಾರ, ರಾಜೇಶ್ ಬಂಡಸಾಲೆ,ರಿಯಾಝ್, ಸಲೀಂ, ಕಿಂಗ್ ಸ್ಟಾರ್ ಸೇವಾ ಸಮಿತಿ ಉಳಿಯ ಹೊೈಗೆಪ್ರೇಮ್ ಪ್ರಕಾಶ್ ಡಿ.ಸೋಜ , ಕಾರ್ಯದರ್ಶಿ ಪ್ರಮಿತ್ ಡಿ.ಸೋಜ , ಪ್ರಕಾಶ್ ಡಿ.ಸೋಜ…

