ಉಳ್ಳಾಲ: ರಾಜ್ಯ ಸರ್ಕಾರ ಕಾರ್ಮಿಕ ವರ್ಗಕ್ಕೆ ಇನ್ನೂ ಸರಿಯಾದ ಪರಿಹಾರ ಘೋಷಿಸದೇ, ಮೆಸ್ಕಾಂ ಬಿಲ್ ಏರಿಕೆ ಮಾಡಿ ಸುಮ್ಮನಿದ್ದು ಕಾಪೆರ್Çರೇಟ್ ಕಂಪೆನಿಗಳ ಪರ ಇರುವುದನ್ನು ಡಿವೈಎಫ್ ಐ ಖಂಡಿಸುತ್ತದೆ ಎಂದು ಸಿಪಿಐಎಂ ಉಳ್ಳಾಲ ವಲಯ ಕಾರ್ಯದರ್ಶಿ ಕೃಷ್ಣಪ್ಪ ಸಾಲ್ಯಾನ್ ಹೇಳಿದರು.ಲಾಕ್ಡೌನ್ ಅವಧಿಯ ಮೂರು ತಿಂಗಳ ವಿದ್ಯುತ್ ಬಿಲ್ ಮನ್ನಾ ಮಾಡಿ ಆಗ್ರಹಿಸಿ ಚೆಂಬುಗುಡ್ಡೆ ಮೆಸ್ಕಾಂ ಕಚೇರಿ ಎದುರು ಡಿವೈ ಎಫ್ ಐ ಉಳ್ಳಾಲ ವಲಯ ಸೋಮವಾರ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.ದೇಶದ್ಯಂತ ತೈಲ ಬೆಲೆ ಏರಿಕೆಯ ಜೊತೆಗೆ ದಿನಬಳಕೆ ವಸ್ತುಗಳ ಬೆಲೆ ಏರಿಕೆ ಚರಿತ್ರೆಯಲ್ಲಿ ಪ್ರಥಮ. ಕಾರ್ಮಿಕ ವರ್ಗ ದುಡಿಮೆಯೇ ಇಲ್ಲದ ಸ್ಥಿತಿಯಲ್ಲಿ ಅವಶ್ಯಕ ವಸ್ತುಗಳನ್ನು ಖರೀದಿಸಲು ಅಸಾಧ್ಯವಾಗಿದೆ. ಇದರ ನಡುವೆ ಮೆಸ್ಕಾಂ ಇಲಾಖೆ ಮೂಲಕ ವಿದ್ಯುತ್ ಬಿಲ್ ಅನ್ನು ಏರಿಕೆ ಮಾಡಿರುವುದು ಜನರ ಬದುಕುವ ಹಕ್ಕನ್ನು ಕಸಿದಂತಿದೆ . ವಿದ್ಯುತ್ ಬಿಲ್ ಏರಿಕೆಯನ್ನು ಹಿಂಪಡೆದು ಲಾಕ್ ಡೌನ್ ಅವಧಿಯ ಬಿಲ್ ಅನ್ನು ರದ್ದುಗೊಳಿಸುವವರೆಗೂ ಹೋರಾಟ ಮುಂದುವರಿಯುತ್ತದೆ ಎಂದರು.ಡಿವೈ ಎಫ್ ಐ…
Author: UllalaVani
ಉಳ್ಳಾಲ: ವೈಯಕ್ತಿಕ ಸುಖ ದು:ಖಗಳನ್ನು ಬದಿಗೊತ್ತಿ ಕೋವಿಡ್-19 ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವಲ್ಲಿ ಗೃಹರಕ್ಷಕರ ಪಾತ್ರ ಬಹಳ ದೊಡ್ಡದು. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಜೊತೆ ಗೃಹರಕ್ಷಕರು ನಿರಂತರ ಕೆಲಸ ನಿರ್ವಹಿಸುತ್ತಿದ್ದಾರೆ. ಅವರ ತ್ಯಾಗದ ಸೇವೆಯನ್ನು ಗುರುತಿಸಿ ರೇಷನ್ ಕಿಟ್ ನೀಡಿದ ಕಾರಣದಿಂದ ಗೃಹರಕ್ಷಕರು ಮತ್ತಷ್ಟು ಹುರುಪಿನಿಂದ ಕೆಲಸ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀಮೋಹನ್ ಚೂಂತಾರು ಹೇಳಿದರು.ಅವರು ಜಿಲ್ಲಾ ಗೃಹರಕ್ಷಕ ದಳದ ಉಳ್ಳಾಲ ಘಟಕಕ್ಕೆ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ಚಾರಿಟೇಬಲ್ ಟ್ರಸ್ಟ್ ಇದರ ಸಿಎಸ್ ಆರ್ ವತಿಯಿಂದ ಕಲ್ಲಾಪು ಆಡಂಕುದ್ರು ಸಂತ ಜೋಸೆಫರ ಅನುದಾನಿತ ಶಾಲೆಯಲ್ಲಿ ಸೋಮವಾರದಂದು ನೀಡಲಾದ ಉಚಿತ ರೇಷನ್ ಕಿಟ್ ವಿತರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ ಇದರ ಮಂಗಳೂರು ಘಟಕದ ಮಾರುಕಟ್ಟೆ ಪ್ರಬಂಧಕ ಫರ್ತಾನ್ ಮಾತನಾಡಿ , 45 ಮಂದಿ ಗೃಹರಕ್ಷಕರಿಗೆ ಆಹಾರ ಕಿಟ್ ಅನ್ನು ವಿತರಿಸಲಾಗಿದೆ. ಬಂದ ಆದಾಯದಲ್ಲಿ ಶೇ.5 ರಷ್ಟನ್ನು ಸಮಾಜ ಸೇವೆಗೆ ಸಂಸ್ಥೆ…
ಉಳ್ಳಾಲ: ಆರ್ಥಿಕ ಸಂಕಷ್ಟದಿಂದ ನೊಂದು ಎಳೆಯ ಮಗುವಿನ ಎದುರೇ ತಾಯಿಯೋರ್ವಳು ಆತ್ಮಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಧರ್ಮನಗರ ಎಂಬಲ್ಲಿ ಇಂದು ಮುಂಜಾನೆ ವೇಳೆ ಬೆಳಕಿಗೆ ಬಂದಿದೆ.ಧರ್ಮನಗರ ನಿವಾಸಿ ಲೋಕೇಶ್ ನಾಯ್ಕ್ ಎಂಬವರ ಪತ್ನಿ ಶುಭ (33) ಆತ್ಮಹತ್ಯೆ ನಡೆಸಿದವರು. ಗುರುವಾರ ತಡರಾತ್ರಿ ವೇಳೆ ಶುಭ ಅವರು ಕೋಣೆಯೊಂದರಲ್ಲಿ ಎರಡೂವರೆ ಹರೆಯದ ಮಗುವಿನ ಜೊತೆಗೆ ಮಲಗಿದ್ದರು. ಪತಿ ಬೇರೆ ಕೋಣೆಯಲ್ಲಿ ಮಲಗಿದ್ದು, ಇಂದು ಬೆಳಿಗ್ಗೆ ಪತಿ ಲೋಕೇಶ್ ಅವರು ಬಾಗಿಲು ತೆರೆದು ನೋಡಿದಾಗ ಪತ್ನಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಂಗಳೂರಿನ ಹಂಪನಕಟ್ಟೆ ಬಳಿ ಫ್ಲೆಕ್ಸ್ ಅಂಗಡಿಯಲ್ಲಿ ಶುಭ ಅವರು ಕೆಲಸಕ್ಕಿದ್ದರು. ಪತಿ ಲೋಕೇಶ್ ಫ್ಯಾಬ್ರಿಕೇಷನ್ ವೃತ್ತಿಯನ್ನು ನಡೆಸುತ್ತಿದ್ದರು. ಆರ್ಥಿಕ ಸಂಕಷ್ಟದಿಂದ ಬೇಸತ್ತು ಆತ್ಮಹತ್ಯೆ ನಡೆಸಿರುವುದಾಗಿ ತಿಳಿದುಬಂದಿದೆ. ಅತ್ತಾವರದಲ್ಲಿದ್ದ ದಂಪತಿ ವರ್ಷದ ಹಿಂದೆ ಧರ್ಮನಗರದಲ್ಲಿ ಮನೆಯನ್ನು ನಿರ್ಮಿಸಿದ್ದರು. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸೋಮೇಶ್ವರ: ಸಮುದ್ರದ ಅಲೆಗಳ ರಭಸ ಕಳೆದ ಎರಡು ದಿನಗಳಿಂದ ಜೋರಾಗಿದ್ದು, ಪರಿಣಾಮ ಸೋಮೇಶ್ವರ ಉಚ್ಚಿಲ ಪ್ರದೇಶದಿಂದ ಬಟ್ಟಪ್ಪಾಡಿ ರಸ್ತೆ ಸಂಪರ್ಕ ಕಡಿತವಾಗುವ ಭೀತಿ ಮತ್ತೆ ಎದುರಾಗಿದೆ.2019 ರಲ್ಲಿ ರಸ್ತೆ ಸಮುದ್ರಕ್ಕೆ ಕೊಚ್ಚಿ ಹೋಗಿ ಸ್ಥಳೀಯರು ಪರದಾಡುವಂತಾಗಿತ್ತು. ಪ್ರದೇಶದ ರಸ್ತೆ ಸಂಪರ್ಕ 5 ತಿಂಗಳ ಕಾಲ ಕಡಿದುಹೋಗಿತ್ತು. ಆನಂತರ ಮತ್ತೆ ಕಲ್ಲುಗಳನ್ನು ಹಾಕಿ ರಸ್ತೆ ನಿರ್ಮಿಸಲಾಗಿತ್ತು. ಕಳೆದ ವರ್ಷವೂ ದುರಸ್ತಿಗೊಳಿಸಿದ್ದ ರಸ್ತೆ ಸಂಪೂರ್ಣ ಸಮುದ್ರಪಾಲಾಗಿ ಕಲ್ಲು ಬಂಡೆಗಳ ಮೇಲಿನಿಂದ ಸಾಗುವಂತಾಗಿತ್ತು. ಇದೀಗ ಮತ್ತೆ ಸರಿಪಡಿಸಿರುವ ರಸ್ತೆ ಮತ್ತೆ ಸಮುದ್ರಪಾಲಾಗುವ ಭೀತಿಯನ್ನು ಎದುರಿಸುತ್ತಿದೆ. ಬುಧವಾರ ಬೆಳಗ್ಗಿನಿಂದ ರಸ್ತೆಗೆ ಸಮುದ್ರದ ಅಲೆಗಳು ಅಪ್ಪಳಿಸಲು ಆರಂಭವಾಗಿದೆ. ರಸ್ತೆ ಸಂಪೂರ್ಣ ಮತ್ತೆ ಸಮುದ್ರಪಾಲಾಗುವುದರಲ್ಲಿ ಸಂಶಯವಿಲ್ಲ.
ಉಳ್ಳಾಲ: ಸೋಮೇಶ್ವರ ಉಚ್ಚಿಲ ಭಾಗದ ಸಮುದ್ರ ಕೊರೆತದಿಂದ ಹಾನಿಗೊಳಗಾದ ಬಡ ಮೀನುಗಾರ ಕುಟುಂಬಗಳನ್ನು ಏಕಾಏಕಿ ಖಾಲಿ ಮಾಡುವಂತೆ ಆದೇಶಿಸಿರುವ ಜಿಲ್ಲಾಡಳಿತ ಕ್ರಮ ಸರಿಯಲ್ಲ. 100 ವರ್ಷಗಳಿಗಿಂತ ಹಿಂದೆ ಸ್ಥಳದಲ್ಲಿ ವಾಸಿಸುತ್ತಿರುವ ಕುರಿತು ಮಿಸ್ಪಟ್ಟಾ ಇದ್ದರೂ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಜಾಗ ಖಾಲಿ ಮಾಡುವಂತೆ ಹೇಳುತ್ತಿರುವ ಸರಕಾರದ ಕ್ರಮ ಸರಿಯಲ್ಲ ಎಂದು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸದಾಶಿವ ಉಳ್ಳಾಲ್ ಹೇಳಿದರು.ಅವರು ಕೊಲ್ಯ ಸಮೀಪ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಸೋಮೇಶ್ವರ ಪುರಸಭಾ ವ್ಯಾಪ್ತಿಯಲ್ಲಿ ಸಮುದ್ರ ಕೊರೆತಕ್ಕೆ ಕಪ್ಪು ಕಲ್ಲು ಹಾಕುವ ವ್ಯವಸ್ಥೆ ಇನ್ನೂ ಆಗಿಲ್ಲ. ಬ್ರೇಕ್ ವಾಟರ್ ಒಂದೇ ಕಡೆಯಲ್ಲಿ ಆಗಿದೆ. ತಾತ್ಕಾಲಿಕ ಕಾಮಗಾರಿ ಎರಡು ವರ್ಷಗಳಿಂದ ಕಾಣುತ್ತಿಲ್ಲ. ಮೊದಲಿನ ಹಾಗೆ ಇಟ್ಟ ಕಲ್ಲುಗಳ ಮೇಲೆ ಮತ್ತೆ ಕಲ್ಲು ಹಾಕುತ್ತಿದ್ದಲ್ಲಿ ಕಡಲ್ಕೊರೆತ ಆಗುತ್ತಿರಲಿಲ್ಲ. ಕೋಟ್ಯಂತರ ವ್ಯಯಿಸಿ ಮರಳು ದಿಬ್ಬ ರಚಿಸಿ ಪರಿಹಾರ ಕಂಡುಕೊಳ್ಳುತ್ತಿರುವುದು ಅವೈಜ್ಞಾನಿಕ. ನ್ಯೂನ್ಯತೆಗಳನ್ನು ಸರಿಪಡಿಸದೇ ಇದ್ದಲ್ಲಿ ಬಿಲ್ ಪಾವತಿಯನ್ನೂ ಮಾಡಬಾರದು. ತೌಕ್ತೇ ಚಂಡಾಮಾರುತದಿಂದಾಗಿ ಹಾನಿಗೊಳಗಾದ ಸಂದರ್ಭ ಉಸ್ತುವಾರಿ ಸಚಿವರು, ಮೀನುಗಾರಿಕಾ ಮತ್ತು…
ಉಳ್ಳಾಲ: ಉಳ್ಳಾಲದ ಕೋಟೆಪುರ ಫಿಶ್ ಮಿಲ್ ಫ್ಯಾಕ್ಟರಿಯ ಹಿಂಬದಿಯಲ್ಲಿರುವ ನೇತ್ರಾವತಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.ಸುಮಾರು3-4 ದಿನಗಳ ಹಿಂದೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಉಸಿರುಗಟ್ಟಿ ಮೃತಪಟ್ಟಿರುವ ಸಾಧ್ಯತೆ ಇದೆ. ಮೃತದೇಹ ಸಂಪೂರ್ಣ ಕೊಳೆತ ಸ್ಥಿತಿಯಲ್ಲಿದೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ವಾರೀಸುದಾರರಿದ್ದಲ್ಲಿ ಉಳ್ಳಾಲ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.
ಉಳ್ಳಾಲ: ಜೂ.14 ರಿಂದ ಜೂ.21 ರವರೆಗೆ ಕೊಣಾಜೆ ಗ್ರಾಮವನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗುವುದು. ಜಿಲ್ಲಾಡಳಿತದ ಆದೇಶದಂತೆ ಕ್ರಮ ಕೈಗೊಳ್ಳಲಾಗಿದೆ. ಗ್ರಾಮಸ್ಥರು ಸಹಕರಿಸಬೇಕು ಎಂದು ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂಚಲಾಕ್ಷಿ ಹೇಳಿದ್ದಾರೆ.ಕೊಣಾಜೆ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಮಂಗಳವಾರ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿದರು.ಗ್ರಾಮದ 50 ಕ್ಕಿಂತ ಹೆಚ್ಚು ಪ್ರಕರಣಗಳನ್ನು ಕಂಡುಬಂದ ಪ್ರದೇಶಗಳಲ್ಲಿ ಹೆಚ್ಚಿನ ಪ್ರಾಧಾನ್ಯತೆ ನೀಡಿ , ವೈದ್ಯಕೀಯ ತಪಾಸಣೆ ಆರಂಭಿಸಲಾಗಿದೆ. ಕೊಣಾಜೆ ಗ್ರಾಮ ಸಂಪರ್ಕಿಸುವ ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಹೊರತುಪಡಿಸಿ ಏಳು ರಸ್ತೆಗಳನ್ನು ಬಂದ್ ಮಾಡಲಾಗಿದೆ. ಬ್ಯಾಂಕ್, ಮದ್ಯದಂಗಡಿ ಸೇರಿದಂತೆ ಎಲ್ಲಾ ಅಂಗಡಿಗಳನ್ನು ಸಂಪೂರ್ಣ ಬಂದ್ ಮಾಡಿ ಕಟ್ಟುನಿಟ್ಟಿನ ಶಿಸ್ತು ಜಾರಿಗೊಳಿಸಲಾಗಿದೆ. ಗ್ರಾಮದ ಎರಡು ನ್ಯಾಯಬೆಲೆ ಅಂಗಡಿಗಳನ್ನು ಪೂರ್ಣವಾಗಿ ಬಂದ್ ಮಾಡಲಾಗಿದೆ. ತುರ್ತು ಅವಶ್ಯಕತೆ ಇದ್ದವರಿಗೆ ಮಾತ್ರ ಹೋಗಲು ಅವಕಾಶ ಮಾಡಿಕೊಡಲಾಗಿದೆ. ಪ್ರತಿ ಗ್ರಾಮದ ಗಡಿಭಾಗದಲ್ಲಿ ಸಹಾಯವಾಣಿ ಆರಂಭಿಸಲಾಗಿದೆ. ಆಹಾರ ಸಾಮಗ್ರಿಗಳನ್ನು ವಿತರಿಸಲು ಕೋವಿಡ್ ಟಾಸ್ಕ್ ಫೆÇೀಸ್9 ರಚಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು , ಗ್ರಾ.ಪಂ…
ಉಳ್ಳಾಲ: ಜನರು ರಕ್ತದಾನ ಮಾಡಲು ಹಿಂಜರಿಯುತ್ತಿರುವ ಕಾಲಘಟ್ಟದಲ್ಲಿ ರಕ್ತದ ಅಭಾವ, ರೋಗಿಗಳಿಗೆ ರಕ್ತ ಸಮರ್ಪಕವಾಗಿ ಪೂರೈಕೆಯಾಗದಿರುವುದನ್ನು ಮನಗಂಡು, ರಕ್ತದಾನದ ಮಹತ್ವ ಹಾಗೂ ಅದರಿಂದ ದಾನಿಗಳಿಗೆ ಆಗುವ ಪ್ರಯೋಜನದ ಬಗ್ಗೆ ಜಾಗೃತಿ ಮೂಡಿಸಿ ಸಂಘದ ಎಲ್ಲ ಸದಸ್ಯರ ಸಾಂಘಿಕ ಪ್ರಯತ್ನದಿಂದ 298ರಕ್ತದಾನ ಶಿಬಿರ ಆಯೋಜಿಸಿ ದಾನಿಗಳಿಂದ 29ಸಾವಿರ ಯೂನಿಟ್ ರಕ್ತ ಸಂಗ್ರಹಿಸಿ ಅರ್ಹ ಫಲಾನುಭವಗಿಳಿಗೆ ಪೂರೈಸಿದ ಮಂಗಳೂರಿನ ಬ್ಲಡ್ ಡೋನರ್ಸ್ ಮಂಗಳೂರು ಎಂಬ ಸಮಾಜ ಸೇವಾ ಸಂಸ್ಥೆ ಜೂ. 20ರಂದು ಬಾಳೆಪುಣಿ ಗ್ರಾಮದ ಹೂ ಹಾಕುವ ಕಲ್ಲಿನ ಎಸ್. ಕೆ. ಸಭಾಭವನದಲ್ಲಿ 300ನೇ ರಕ್ತದಾನ ಶಿಬಿರ ಆಯೋಜಿಸಿದೆ ಎಂದು ಸಂಸ್ಥೆಯ ಅಧ್ಯಕ್ಷ ಸಿದ್ದಿಕ್ ಮಂಜೇಶ್ವರ ಹೇಳಿದರು.ದೇರಳಕಟ್ಟೆಯ ಯೇನೆಪೆÇಯ ಆಸ್ಪತ್ರೆ ಬಳಿಯ ಖಾಸಗಿ ಹೋಟೆಲ್ ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು 2013ರ ಜುಲೈನಲ್ಲಿ ಸಂಘ ಸ್ಥಾಪನೆಗೊಂಡಿದ್ದು ಜೂ. 14ರಂದು ಮಂಜನಾಡಿಯಲ್ಲಿ 299ನೇ ಶಿಬಿರ ಆಯೋಜಿಸಿದೆ. ರಕ್ತದಾನ ಶಿಬಿರವನ್ನು ಕೇವಲ ದಕ್ಷಿಣ ಕನ್ನಡ ಜಿಲ್ಲೆಗೆ ಸೀಮಿತಗೊಳಿಸದೆ ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು…
ಉಳ್ಳಾಲ: ಕೊರೊನ ಪಾಸಿಟಿವ್ನಿಂದ ಎಲ್ಲರೂ ದೂರ ಹೋಗುತ್ತಿರುವ ಕಾಲಘಟ್ಟದಲ್ಲಿ ಟಿ.ಜಿ. ರಾಜಾರಾಮ್ ಭಟ್ ಅವರ ನೇತೃತ್ವದಲ್ಲಿ ಹಿಂದೂ ಸಂಘಟನೆಗಳ ಯುವಕರ ತಂಡದ ಶ್ರಮದಾನದ ಮೂಲಕ ಧನಾತ್ಮಕ ಚಿಂತನೆಯೊಂದಿಗೆ ಆರ್ಥಿಕವಾಗಿ ಹಿಂದುಳಿದ ಕುಟುಂಬವೊಂದಕ್ಕೆ “ಆಸರೆ” ಯೋಜನೆಯಡಿ ಸುಂದರ ಮನೆ ನಿರ್ಮಿಸಿಕೊಟ್ಟಿರುವ ಕಾರ್ಯ ನಿಜಕ್ಕೂ ಶ್ಲಾಘನೀಯವಾಗಿದ್ದು ಇದು ಇಡೀ ಸಮಾಜಕ್ಕೆ ಪಾಸಿಟಿವ್ ಕಾರ್ಯವಾಗಿದೆ ಎಂದು ಆರ್ ಎಸ್ ಎಸ್ ಮುಖಂಡ ಡಾ| ಕಲ್ಲಡ್ಕ ಪ್ರಭಾಕರ ಭಟ್ ಹೇಳಿದರು.ಅವರು ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಶೇಡಿಗುಂಡಿಯ ನಾರಾಯಣ ಪೂಜಾರಿ ಅವರಿಗೆ ಕೈರಂಗಳ ಪುಣ್ಯಕೋಟಿನಗರದ ಶಾರದಾಗಣಪತಿ ವಿದ್ಯಾಕೇಂದ್ರದ ಸಂಚಾಲಕ ಟಿ.ಜಿ. ರಾಜಾರಾಮ್ ಭಟ್ ನೇತೃತ್ವದಲ್ಲಿ ದಾನಿಗಳು, ಸಂಘಟನೆಗಳು, ಸ್ವಯಂಸೇವಕರ ಸಹಕಾರದಲ್ಲಿ ನಿರ್ಮಿಸಲಾದ “ಆಸರೆ” ನೂತನ ಮನೆಯ ಕೀಲಿ ಕೈಯನ್ನು ನಾರಾಯಣ ಪೂಜಾರಿ ಕುಟುಂಬಕ್ಕೆ ಹಸ್ತಾಂತರಿಸಿ, ಮನೆಯೊಳಗೆ ದೀಪ ಬೆಳಗಿಸಿದ ಬಳಿಕ ಅಂಗಳದಲ್ಲಿ ತುಳಸಿಗಿಡ ನೆಟ್ಟು ಮಾಧ್ಯಮದ ಜೊತೆಗೆ ಅವರು ಮಾತನಾಡಿದರು.ಟಿ.ಜಿ. ರಾಜಾರಾಮ್ ಭಟ್ ಅವರ ಅವಿರತ ಶ್ರಮದಿಂದ ಹಿರಿಯರ ಮಾರ್ಗದರ್ಶನದಲ್ಲಿ ಕಿರಿಯರು, ಅನೇಕ ಸಂಘಟನೆ ಸಹಕಾರದಲ್ಲಿ ಒಂದು…
ಉಳ್ಳಾಲ: ಕೇಂದ್ರ ಸರಕಾರ ಪೆಟ್ರೋಲ್ ಡೀಸೆಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಹಗಲು ದರೋಡೆ ಮಾಡುತ್ತಿದ್ದು, ಬೆಲೆ ಕಡಿಮೆ ಮಾಡಿ ಬಡಜನರ ಕಷ್ಟಗಳಿಗೆ ಸ್ಪಂದಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಗ್ರಾಮ ಮಟ್ಟದಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಮುಡಿಪು ಬ್ಲಾಕ್ ಕಾಂಗ್ರೆಸ್ ಆಧ್ಯಕ್ಷ ಪ್ರಶಾಂತ್ ಕಾಜವ ಅಭಿಪ್ರಾಯಪಟ್ಟರು.ಪೆಟ್ರೋಲ್, ಡೀಸೆಲ್, ಗ್ಯಾಸ್ ದರ ಏರಿಸಿದ ಕೇಂದ್ರ ಸರ್ಕಾರ ಮತ್ತು ವಿದ್ಯುತ್ ದರ ಏರಿಸಿದ ರಾಜ್ಯ ಸರ್ಕಾರದ ವಿರುದ್ಧ ಮುಡಿಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಂಗಳವಾರ ಮುಡಿಪು ಜಂಕ್ಷನ್ ನಲ್ಲಿರುವ ಪೆಟ್ರೋಲ್ ಪಂಪ್ ಮುಂಭಾಗದಲ್ಲಿ ನಡೆದ ‘ಪೆಟ್ರೋಲ್ ನಾಟ್ ಔಟ್ 100’ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದರು.ಕಳೆದ ಏಳು ವರ್ಷದ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ಸರಕಾರದ ದುರಾಡಳಿತದಿಂದ ಜನರು ಬೀದಿಗೆ ಇಳಿದು ಹೋರಾಟ ನಡೆಸುವ ಸ್ಥಿತಿ ನಿರ್ಮಾಣವಾಗಿದೆ. ಕೆಲವೇ ಜನರ ಹಿತದೃಷ್ಟಿ ಕಾಯುವ ಈ ಸರಕಾರ ಬಡ ಮತ್ತು ಮದ್ಯಮ ವರ್ಗದ ಜನರ ಬದುಕನ್ನು ದುಸ್ತರಗೊಳಿಸಿದೆ. ಕಾಂಗ್ರೆಸ್ ಅ„ಕಾರವ„ಯಲ್ಲಿ ಪೆಟ್ರೋಲ್ ವಿಚಾರದಲ್ಲಿ…

