ಮಂಗಳೂರು, ಫೆ.16: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅತ್ಯಾಧುನಿಕ ತಂತ್ರಜ್ಞಾನದ ಬ್ಯಾಂಕಿಂಗ್ ಸೇವೆಗಳನ್ನು ಗ್ರಾಹಕರಿಗೆ ನೀಡುತ್ತಿದೆ. ಈ ನಿಟ್ಟಿನಲ್ಲಿ ಬ್ಯಾಂಕ್ ತಮ್ಮ ಗ್ರಾಹಕರಿಗೆ ಪ್ರಸಕ್ತ ಅವಶ್ಯಕತೆಗೆ ಅನುಗುಣವಾಗಿ ಡಿಜಿಟಲ್ ಬ್ಯಾಂಕಿಂಗ್ ಅನ್ನು ಕೂಡಾ ಅಳವಡಿಸಿಕೊಂಡಿದೆ ಎಂದು ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ತಿಳಿಸಿದ್ದಾರೆ. ನಮ್ಮ ಬ್ಯಾಂಕಿನ ಗ್ರಾಹಕರಿಗೆ ಡಿಜಿಟಲ್ ಬ್ಯಾಂಕಿಂಗ್ ಸೇವೆಗಳಾದ ಯುಪಿಐ ಮತ್ತು ಐಎಂಪಿಎಸ್ ಸೌಲಭ್ಯಗಳಿಗೆ ಅಧಿಕೃತ ಚಾಲನೆ ಕಾರ್ಯಕ್ರಮ ಫೆ.17ರಂದು ಮಧ್ಯಾಹ್ನ 12ಕ್ಕೆ ಬ್ಯಾಂಕಿನ ಸಭಾಂಗಣದಲ್ಲಿ ನಡೆಯಲಿದೆ ಎಂದವರು ತಿಳಿಸಿದ್ದಾರೆ. ಡಿಜಿಟಲ್ ಬ್ಯಾಂಕಿಂಗ್ ಸೇವೆಗಳನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ನಮ್ಮ ಬ್ಯಾಂಕ್ 2025ರ ಸೆ.16ರಿಂದ ಐಎಂಪಿಎಸ್ (IMPS – Immediate Payment Service) ಸೇವೆಯನ್ನು ಆರಂಭಿಸಿದೆ, ಬ್ಯಾಂಕ್ ಈಗಾಗಲೇ ಕೋರ್ ಬ್ಯಾಂಕಿಂಗ್ ಸೇವೆಯೊಂದಿಗೆ ಆರ್ ಟಿಜಿಎಸ್ / ನೆಫ್ಟ್, ಸಿಟಿಎಸ್, ಎಸ್ಎಂಎಸ್, ಎಟಿಎಂ, ಮೊಬೈಲ್ ಬ್ಯಾಂಕಿಂಗ್, ಪಿಒಎಸ್ (POS) ಸೌಲಭ್ಯ ಸೇರಿದಂತೆ ಹಲವಾರು ಡಿಜಿಟಲ್ ಸೇವೆಗಳನ್ನು ಯಶಸ್ವಿಯಾಗಿ ನೀಡುತ್ತಿದೆ. ಬ್ಯಾಂಕಿಂಗ್ ಕ್ಷೇತ್ರ…
Author: UllalaVani
ಕಾಪಿಕಾಡು; ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಉಳ್ಳಾಲ ನಗರದ ವತಿಯಿಂದ ಶ್ರೀ ಉಮಾಮಹೇಶ್ವರಿ ದೇವಸ್ಥಾನ ಕಾಪಿಕಾಡು ಇಲ್ಲಿ ಶಿವರಾತ್ರಿ ಜಾಗರಣೆ ಹಾಗೂ ಯೋಗ ಶಿವನಮಸ್ಕಾರದ ಕಾರ್ಯಕ್ರಮವನ್ನು ಕ್ಷೇತ್ರದ ಆಡಳಿತ ಮೊಕ್ತೇಸರರಾದ ಎ.ಜೆ ಶೇಖರ್ ಮತ್ತು ಅವರ ಧರ್ಮಪತ್ನಿ ಪೂರ್ಣಿಮಾ ಶೇಖರ್ ದೀಪ ಪ್ರಜ್ವಲನೆಗೈಯುವ ಮೂಲಕ ಚಾಲನೆ ನೀಡಿದರು. ಕ್ಷೇತ್ರದ ಪ್ರಧಾನ ಅರ್ಚಕರಾದ ಪರಮೇಶ್ವರ ಜೋಶಿ, ಮೊಕ್ತೇಸರರಾದ ಆರ್.ಕೆ.ಶೆಟ್ಟಿ, ಪತಂಜಲಿ ಯೋಗ ಶಿಕ್ಷಣ ಸಮಿತಿಯ ಜಿಲ್ಲಾ ಲೆಕ್ಕಪತ್ರ ಪ್ರಮುಖರಾದ ಸುಬ್ರಹ್ಮಣ್ಯ ಭಟ್ ನಗರ ಸಂಚಾಲಕರಾದ ಸುಂದರ ಉಳ್ಳಾಲ ಜಿಲ್ಲಾ ಸಂಘಟನಾ ಪ್ರಮುಖರಾದ ಗೀತಾ ವಿಜಯ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಶಿವರಾತ್ರಿ ಜಾಗರಣೆಯ ಸಂದರ್ಭದಲ್ಲಿ ಶಿವ ಭಜನೆ ಕುಣಿತ ಭಜನೆ ಮೃತ್ಯುಂಜಯ ಜಪ ಪಠಣೆ ಶಿವ ಅಷ್ಟೋತ್ತರ ಶತನಾಮಾನಿ ಪಠಣೆ 1008 ಪಂಚಾಕ್ಷರಿ ಜಪ ಪಠಣೆ ಯೋಗ ಬಂಧುಗಳಿAದ ನಡೆಯಿತು ಇವುಗಳ ಮಹತ್ವದ ಬಗ್ಗೆ ಬೌದ್ಧಿಕ ಅನ್ನು ನಗರದ ಶಿಕ್ಷಕರು ನೀಡಿದರು. ಮುಂಜಾನೆ 4:00ಯಿಂದ ಅಮೃತವಚನ, ಪಂಚಾoಗ ಪಠಣ, ಅಗ್ನಿ ಹೋತ್ರ, ಗಣಪತಿ…
ಕುಂಪಲ ಶ್ರೀ ದುರ್ಗಾ ಪರಮೇಶ್ವರ ಕ್ಷೇತ್ರದಲ್ಲಿ ವರ್ಷಾವದಿ ಶಿವರಾತ್ರಿ ಜಾತ್ರಾ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆಯನ್ನು ಬೆಂಗಳೂರಿನ ಯುವ ಉದ್ಯಮಿ ಪ್ರಕಾಶ್ ಕುಂಪಲ ರವರು ನೆರವೇರಿಸಿ, ನಮ್ಮ ಹಿರಿಯರ ಕಾಲದಿಂದಲೂ ಕುಂಪಲಕ್ಕೆ ಹಬ್ಬ ಶಿವರಾತ್ರಿ, ಈ ಕ್ಷೇತ್ರದಲ್ಲಿ ಊರಿನ ಜನರನ್ನು ಒಟ್ಟಾಗಿಸುವ, ಧಾರ್ಮಿಕತೆಯನ್ನು ಬೆಳೆಸುವಲ್ಲಿ ಪರಿಣಾಮಕಾರಿಯಾಗಿದೆ. ಕುಂಪಲದ ಊರಿನಲ್ಲಿ ನಡೆಯುವ ಎಲ್ಲಾ ಒಳ್ಳೆಯ ಕಾರ್ಯಕ್ಕೆ ನನ್ನ ಪ್ರೋತ್ಸಾಹ ಯಾವಾಗಲೂ ಇದೆ ಎಂದರು. ವೇದಿಕೆಯಲ್ಲಿ ಬಿಲ್ಲವ ಸೇವಾ ಸಮಾಜ ಟ್ರಸ್ಟ್ ನ ಅಧ್ಯಕ್ಷ ವೇಣುಗೋಪಾಲ್ ಕೊಲ್ಯ, ಕ್ಷೇತ್ರದ ಪ್ರಧಾನ ಅರ್ಚಕ ಭವಾನಿ ಶಂಕರ ಶಾಂತಿ, ಸೋಮೇಶ್ವರ ಪುರಸಭಾ ಸದಸ್ಯ ಮೋಹನ್ ಶೆಟ್ಟಿ ಕುಂಪಲ, ಕುಂಪಲ ಶ್ರೀ ಬಾಲಕೃಷ್ಣ ಮಂದಿರದ ಉಪಾಧ್ಯಕ್ಷ ಗಣೇಶ್ ಅಂಚನ್, ಶ್ರೀ ಉಮಾಮಹೇಶ್ವರಿ ದೇವಸ್ಥಾನದ ಪ್ರಚಾರ ಸಮಿತಿ ಅಧ್ಯಕ್ಷ ಜಗದೀಶ್ ಆಚಾರ್ಯ, ಉಳ್ಳಾಲ ತಾಲೂಕು ಜಾನಪದ ಪರಿಷತ್ ಅಧ್ಯಕ್ಷ ಪ್ರವೀಣ್ ಎಸ್ ಕುಂಪಲ, ನಿವೃತ್ತ ಎ.ಎಸ್ ಐ, ನಾರಾಯಣ ನಾಯರ್, ಮಡಿಲು ಸೇವಾ ತಂಡದ ಅಧ್ಯಕ್ಷ ಗಜೇಂದ್ರ ಪೂಜಾರಿ, ಬಾರ್ದೆ…
ಬಂಟ್ವಾಳ: ರೈತರು ನೀಡಿದ ಅಕ್ರಮ ಸಕ್ರಮ ಅರ್ಜಿಯನ್ನು ಶೀಘ್ರ ವಿಲೇವಾರಿ ಮಾಡುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ದ.ಕ. ಜಿಲ್ಲಾ ಸಮಿತಿ ಒತ್ತಾಯಿಸಿದೆ. ರೈತ ಸಂಘದ ರಾಜ್ಯ ಕಾರ್ಯದರ್ಶಿ ಮನೋಹರ ಶೆಟ್ಟಿ ನಡಿಕಂಬಳಗುತ್ತು ಬಿ.ಸಿ.ರೋಡಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಆಡಳಿತ ಮಾಡಿದ ಎಲ್ಲಾ ರಾಜಕೀಯ ಪಕ್ಷಗಳ ಸರಕಾರಗಳು ಚುನಾವಣಾ ಸಂದರ್ಭದಲ್ಲಿ ರೈತರ ಅಕ್ರಮ ಸಕ್ರಮ ಅರ್ಜಿಯನ್ನು ಇತ್ಯರ್ಥ ಪಡಿಸುವ ಬಗ್ಗೆ ಭರವಸೆಗಳನ್ನು ನೀಡಿ ಚುನಾವಣೆಯ ಬಳಿಕ ಮರೆತು ಬಿಡುತ್ತಾರೆ. ಪ್ರಸ್ತುತ ಸಾವಿರಗಟ್ಟಲೆ ಅರ್ಜಿಗಳು ಧೂಳು ಹಿಡಿದಿದ್ದು ತಕ್ಷಣವೇ ಎಲ್ಲಾ ಅರ್ಜಿಗಳನ್ನು ಇತ್ಯರ್ಥ ಪಡಿಸುವಂತೆ ಅವರು ಒತ್ತಾಯಿಸಿದರು. ರೈತರ ಸ್ವಾಧೀನದಲ್ಲಿರುವ ಕುಮ್ಕೀ ಜಮೀನುಗಳ ಮೇಲೆ ಸರಕಾರ ದಾಳಿ ಆರಂಭಿಸಿದೆ. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ರೈತರ ಕುಮ್ಕಿ ಹಕ್ಕನ್ನು ಕಸಿಯುವ ಪ್ರಯತ್ನ ನಡೆಯುತ್ತಿದ್ದು ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ರೈತರ ಸ್ವಾಧೀನದಲ್ಲಿರುವ ಕುಮ್ಕಿ ಜಮೀನನ್ನು ಸರಕಾರ ಮುಟ್ಟಬಾರದು ಎಂದು ಎಚ್ಚರಿಸಿದರು. ಸರಕಾರದ ಅಭಿವೃದ್ದಿ ಕಾರ್ಯಗಳಿಗೆ ನಮ್ಮ ಆಕ್ಷೇಪವಿಲ್ಲ, ಆದರೆ ತಲೆ ತಲಾಂತರಗಳಿಂದ ಬಂದ…
ಮಂಗಳೂರು : ಫೆಬ್ರವರಿ 14ರಂದು ಶಾಲೆಯಲ್ಲಿ ಆಯೋಜಿಸಲಾಗಿದ್ದ “ಸ್ಮಾರ್ಟ್ ಕಿಡ್ ಶೋ” ಕಾರ್ಯಕ್ರಮವು ಅತ್ಯಂತ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಸಿರಿಲ್ ರೋಸಾರಿಯೋ ಅವರು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೆವ್. ಫ್ರಾ. ವ್ಯಾಲೆರಿಯನ್ ವಹಿಸಿದ್ದರು. ಶಾಲೆಯ ಮುಖ್ಯೋಪಾಧ್ಯಾಯಿನಿ ಮೇವಿಸ್ ಸೆರ್ರಾವ್ ಅವರು ಅತಿಥಿಗಳಿಗೆ ಹಾಗೂ ಸಭಿಕರಿಗೆ ಆತ್ಮೀಯ ಸ್ವಾಗತ ಕೋರಿದರು.ಕಾರ್ಯಕ್ರಮದ ನಿರೂಪಣೆಯನ್ನು ಶಿಕ್ಷಕಿ ರಮ್ಯಾ ಅವರು ಸಮರ್ಥವಾಗಿ ನಿರ್ವಹಿಸಿ, ಕಾರ್ಯಕ್ರಮಕ್ಕೆ ವಿಶೇಷ ಮೆರುಗು ತಂದರು. ವಿದ್ಯಾರ್ಥಿಗಳು ತಮ್ಮ ಪ್ರತಿಭೆ, ಸೃಜನಶೀಲತೆ ಹಾಗೂ ಆತ್ಮವಿಶ್ವಾಸವನ್ನು ಮನಮೋಹಕವಾಗಿ ಪ್ರದರ್ಶಿಸಿ ಎಲ್ಲರ ಮೆಚ್ಚುಗೆ ಪಡೆದರು. ಮುಖ್ಯ ಅತಿಥಿಗಳು ವಿದ್ಯಾರ್ಥಿಗಳ ಪ್ರತಿಭೆಯನ್ನು ಶ್ಲಾಘಿಸಿ, ಅವರ ಉಜ್ವಲ ಭವಿಷ್ಯಕ್ಕೆ ಶುಭಾಶಯಗಳನ್ನು ತಿಳಿಸಿದರು. ಕಾರ್ಯಕ್ರಮದ ಅಂತ್ಯದಲ್ಲಿ ಶಿಕ್ಷಕಿ ಜ್ಯೋತಿ ಅವರು ವಂದನಾರ್ಪಣೆ ಸಲ್ಲಿಸಿ, ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆಗಳನ್ನು ವ್ಯಕ್ತಪಡಿಸಿದರು. ಕಾರ್ಯಕ್ರಮವು ಸಂಭ್ರಮ ಹಾಗೂ ಉತ್ಸಾಹಭರಿತ ವಾತಾವರಣದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತು.
ನ್ಯೂಯಾರ್ಕ್: ಸೋಷಿಯಲ್ ಮೀಡಿಯಾ ವೀವ್ಸ್ ಗೆ ವಿಷಕಾರಿ ‘ಡೆವಿಲ್ ಕಾರ್ಬ್’ ತಿಂದು ಫುಡ್ ಇನ್ಫ್ಲುಯೆನ್ಸರ್ ದಾರುಣವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಎಮ್ಮಾ ಅಮಿತ್ ಮೃತ ಫುಡ್ ಇನ್ಫ್ಲುಯೆನ್ಸರ್. ಈಕೆ ತನ್ನ ಸ್ನೇಹಿತರೊಂದಿಗೆ ಪಲವಾನ್ನ ಪೋರ್ಟೊ ಪ್ರಿನ್ಸೆಸಾ ಬಳಿಯ ಮ್ಯಾಂಗ್ರೋವ್ ಕಾಡಿನಲ್ಲಿ ಚಿಪ್ಪು ಮೀನುಗಳನ್ನು ಹಿಡಿದಿದ್ದರು. ಎಮ್ಮಾ ಅವರು ಮೀನುಗಳನ್ನು ಬೇಯಿಸಿ ತಿನ್ನುವುದನ್ನು ಟಿಕ್ಟಾಕ್ ಮತ್ತು ಫೇಸ್ಬುಕ್ಗಾಗಿ ವಿಡಿಯೋ ಮಾಡಿದ್ದರು.ಮರುದಿನ ಏಡಿಯ ವಿಷದಿಂದ ಆಕೆ ತೀವ್ರವಾಗಿ ಅಸ್ವಸ್ಥಗೊಂಡಿದ್ದರು. ಆಕೆಯು ಪ್ರಜ್ಞೆ ಕಳೆದುಕೊಂಡಿದ್ದು, ಆಕೆಯ ತುಟಿಗಳು ಕಡು ನೀಲಿ ಬಣ್ಣಕ್ಕೆ ತಿರುಗಿದ್ದವು. ಆರೋಗ್ಯ ಸ್ಥಿತಿ ಹದಗೆಟ್ಟು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆ ಫಲಿಸದೇ ಆಕೆ ಕೊನೆಯುಸಿರೆಳೆದಿದ್ದಾರೆ.ಈ ಘಟನೆಯ ಬೆನ್ನಲ್ಲೇ ಲುಜ್ವಿಮಿಂಡಾ ಗ್ರಾಮದ ಮುಖ್ಯಸ್ಥೆ ಲ್ಯಾಡಿ ಗೆಮಾಂಗ್, ಪೋರ್ಟೊ ಪ್ರಿನ್ಸೆಸಾ ನಿವಾಸಿಗಳಿಗೆ ಈ ಏಡಿಗಳ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಡೆವಿಲ್ ಕಾರ್ಬ್ಗಳನ್ನು ತಿನ್ನಬೇಡಿ. ಈ ಏಡಿಗಳನ್ನು ಸೇವಿಸಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.ಡೆವಿಲ್ ಕಾರ್ಬ್ಗಳು ವಿಷಕಾರಿ ರೀಫ್ ಏಡಿಗಳಾಗಿವೆ. ಇವು ಇಂಡೋ-ಪೆಸಿಫಿಕ್ ಪ್ರದೇಶದಾದ್ಯಂತ ಹವಳದ…
ಕೊಣಾಜೆ: ಮಹಾತ್ಮಾ ಗಾಂಧಿ ಉದ್ಯೋಗ ಖಾತ್ರಿ ಯೋಜನೆ ಸೇರಿದಂತೆ ಸರ್ಕಾರದ ಅನೇಕ ಮಹತ್ವಪೂರ್ಣವಾದ ಯೋಜನೆಗಳ ಸಮರ್ಪಕ ಸದ್ಭಳಕೆಯನ್ನು ಮಾಡುವ ಮೂಲಕ ಎಷ್ಟೋ ಜನರು ಸ್ವಾವಲಂಬಿ ಬದುಕನ್ನು ಕಂಡುಕೊಂಡಿದ್ದಾರೆ ಎಂದು ಕರ್ನಾಟಕ ಸರ್ಕಾರದ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮಮತಾ ಡಿ.ಎಸ್ ಗಟ್ಟಿ ಹೇಳಿದರು. ಅವರು ಗುರುವಾರ ದ.ಕ.ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಉಳ್ಳಾಲ, ಬಾಳೆಪುಣಿ ಗ್ರಾಮ ಪಂಚಾಯತ್ ಇದರ ವತಿಯಿಂದ ಸ್ವಚ್ಛೋತ್ಸವ, ನರೇಗಾ ಗ್ರಾಮೋತ್ಸವ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ -50 ವರ್ಷ ಸಂಭ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸ್ವಚ್ಛ ಗ್ರಾಮವಾಗಿ ಬಾಳೆಪುಣಿ ಗ್ರಾಮ ಪಂಚಾಯತ್ ಮಾದರಿಯಾಗಿದೆ. ಅನೇಕ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಗಾಂಧಿ ಗ್ರಾಮ ಪುರಸ್ಕಾರ ಪಡೆದುಕೊಂಡಿದೆ. ಗ್ರಾಮ ಅಭಿವೃದ್ಧಿಯಾದರೆ ದೇಶದ ಅಭಿವೃದ್ಧಿಯೂ ಸಾಧ್ಯ ಎಂದರು.ಉಳ್ಳಾಲ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಗುರುದತ್ ಅವರು ಮಾತನಾಡಿ, ಕಾರ್ಯಯೋಜನೆಗಳನ್ನು ಎಸಿ ರೂಮುನೊಳಗೆ ಕೂತು ನಿರ್ಧರಿಸಿದರೆ ಯಶಸ್ಸು ಆಗಲು ಸಾಧ್ಯವಿಲ್ಲ. ಅಧಿಕಾರಿಗಳೊಂದಿಗೆ ಜನರು ಸಂಪೂರ್ಣವಾಗಿ ಯೋಜನೆಯಲ್ಲಿ ಭಾಗವಹಿಸಿ ತೊಡಗಿಸಿಕೊಂಡರೆ ಮಾತ್ರ ಇದು ಯಶಸ್ವಿಯಾಗಲು ಸಾಧ್ಯ.…
ಬಾಳೆಪುಣಿ : ಇರಾ ಗ್ರಾಮದ ಬಾಳೆಪುಣಿಯಲ್ಲಿ ನವೀಕೃತಗೊಂಡ ಬದ್ರಿಯಾ ಜುಮಾ ಮಸೀದಿ ಉದ್ಘಾಟನೆ ಕಾರ್ಯ ಕ್ರಮದ ಪ್ರಯುಕ್ತ ಸ್ವಲಾತ್ ವಾರ್ಷಿಕದ ಸಮಾರಂಭವನ್ನು ಶುಕ್ರವಾರ ಮಸೀದಿ ವಠಾರದಲ್ಲಿ ಆಯೋಜಿಸಲಾಯಿತು. ಸ್ವಲಾತ್ ವಾರ್ಷಿಕೊತ್ಸವದ ಸಮಾರಂಭವನ್ನು ಸ್ಥಳೀಯ ಮುದರ್ರಿಸ್ ಅಲೀ ಪೈಝಿ ಉದ್ಘಾಟಿಸಿದರು , ಮೂಳೂರ್ ನಾಯಿಬ್ ಖಾಝಿ ಅಬ್ದುರ್ಹ್ಮಾನ್ ಮದನಿ ರವರು ವೇದಿಕೆಯಲ್ಲಿರುವ ಗಣ್ಯರನ್ನು ಸ್ವಾಗತಿಸಿದರು. ನವೀಕ್ರತ ಮಸೀದಿಯನ್ನು ಕುಂಬೋಲ್ ತಂಞಳ್ ರವರು ಉದ್ಘಾಟಿಸಿದರು , ಶಹೀರ್ ಸಖಾಫಿ ಇರಾ ಮೂಲೆ ಮುಖ್ಯ ಪ್ರಬಾಷಣ ಗೈದರು ವೇದಿಕೆಯಲ್ಲಿ ಜಮಾಅತ್ ಕಮೀಟಿ ಅಧ್ಯಕ್ಷರಾದ ಮೊಯ್ದೀನ್ ಕುಂಞಿ ಪಾತಕಟ್ಚೆ ಹಾಗೂ ಕಮೀಟಿಯ ಸದಸ್ಯರು ಊರಿನ ಗಣ್ಯರು ಉಪಸ್ಥಿತರಿದ್ದರು
ಮಂಗಳೂರು;ಕನ್ನಡ ಮತ್ತು ಹಿಂದಿ ಭಾಷೆಯಲ್ಲಿ ನಿರ್ಮಾಣಗೊಂಡಿರುವ ವೈಲ್ಡ್ ಟೈಗರ್ ಸಫಾರಿ ಚಿತ್ರದ ಮೊದಲ ಹಾಡನ್ನು ಬಿಡುಗಡೆ ಮಾಡಲಾಯಿತು. ಈ ಬಿಡುಗಡೆ ಕಾರ್ಯಕ್ರಮದಲ್ಲಿ ಬಾಲಿವುಡ್ ಹಿರಿಯ ನಟ, ನೃತ್ಯ ನಿರ್ದೇಶಕರಾದ ಜಾವೆದ್ ಜಾಫ್ರಿ, ಟೆರೇನ್ಸ್ ಹಾಗೂ ಅನೇಕರು ಭಾಗಿಯಾಗಿದ್ದರು. ಇನ್ನು ಚಿತ್ರದ ನಿರ್ದೇಶಕ ಚಂದ್ರಮೌಳಿ ಅವರು ಮಂಗಳೂರಿನ ಹೋಟೇಲ್ವೊಂದರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,ಚಿತ್ರದ ಟೀಸರ್ಗೆ ಕನ್ನಡ ಮತ್ತು ಹಿಂದಿ ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆ ಚಿತ್ರದ ಬಗ್ಗೆ ನಿರೀಕ್ಷೆಗಳು ಇನ್ನಷ್ಟು ಹೆಚ್ಚಾಗಿವೆ. ವೈಲ್ಡ್ ಟೈಗರ್ ಸಫಾರಿ ಸಾಮಾನ್ಯ ಪ್ರೇಕ್ಷಕರ ಹೃದಯವನ್ನು ಸ್ಪರ್ಶಿಸುವ ಚಿತ್ರವಾಗಲಿದೆ ಎಂಬ ನಮ್ಮ ನಂಬಿಕೆಯನ್ನು ಬಲಪಡಿಸಿದೆ ಅಂತ ಹೇಳಿದ್ದಾರೆ. ವಿ.ಕೆ. ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣ ಮಾಡಿರುವ ವಿನೋದ್ ಕುಮಾರ್ ಅವರು ಮಾತನಾಡಿ, ಸಿನಿಮಾ ತುಂಬಾ ಭಿನ್ನವಾಗಿ ಮೂಡಿಬಂದಿದೆ. ಇದು ನನ್ನ ಎರಡನೇ ಸಿನಿಮಾ. ಮೊದಲ ಸಿನಿಮಾ ಕರಾವಳಿ ಬಿಡುಗಡೆ ಹಂತದಲ್ಲಿದೆ ಎಂದ್ರು. ಇನ್ನು ಜಾವೆದ್ ಜಾಫ್ರಿ ಹಾಗೂ ಟೆರೆನ್ಸ್ ಮಾತಾಡಿ, ಈ ಸಿನಿಮಾದಲ್ಲಿ ನನ್ನ ಶಿಷ್ಯರಾದ…
ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಅಧಿಕಾರಿಗಳು ನಾಗರೀಕರನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೆ ಹಾಗೂ ಎಫ್ಐಆರ್ ದಾಖಲಿಸಲು ನಿರಾಕರಿಸಿದರೆ, ಅದು ಮಾನವ ಹಕ್ಕುಗಳ ಉಲ್ಲಂಘನೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. Civil Appeal No. 6358/2025 ಪ್ರಕರಣದಲ್ಲಿ ತಮಿಳುನಾಡಿನ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರು ದೂರು ನೀಡಲು ಬಂದಿದ್ದ ವ್ಯಕ್ತಿಯ ತಾಯಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಎಫ್ಐಆರ್ ದಾಖಲಿಸಲು ನಿರಾಕರಿಸಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಮಾನವ ಹಕ್ಕುಗಳ ಆಯೋಗವು ಅಧಿಕಾರಿಯಿಂದ ₹2 ಲಕ್ಷ ದಂಡ ವಸೂಲಿ ಮಾಡಿ ದೂರುದಾರರಿಗೆ ನೀಡುವಂತೆ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಇನ್ಸ್ಪೆಕ್ಟರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅಪರಾಧದ ವರದಿ ನೀಡಲು ಠಾಣೆಗೆ ಬರುವ ಪ್ರತಿಯೊಬ್ಬ ಪ್ರಜೆಯೂ ಮಾನವ ಘನತೆಯಿಂದ ನಡೆಸಿಕೊಳ್ಳಲ್ಪಡಲು ಅರ್ಹರು. ಅವರನ್ನು ಅಪರಾಧಿಗಳಂತೆ ಕಾಣುವುದು ಸಂವಿಧಾನದ 21ನೇ ವಿಧಿಯ ಉಲ್ಲಂಘನೆಯಾಗುತ್ತದೆ. ಹಿರಿಯ ಅಧಿಕಾರಿಯಾಗಿ ತಕ್ಷಣವೇ ಕ್ರಮ ಕೈಗೊಳ್ಳದೆ, ದೂರುದಾರರೊಂದಿಗೆ ಆಕ್ಷೇಪಾರ್ಹ ನುಡಿ ಬಳಸುವುದು ನಾಗರಿಕರ ಹಕ್ಕುಗಳ ದಮನವಾಗಿದೆ. ಸಂವಿಧಾನವು ಖಾತರಿಪಡಿಸಿದ ಜೀವನ, ಸ್ವಾತಂತ್ರ್ಯ…

