Author: UllalaVani

Kannada News From Coastal Karnataka

ಉಳ್ಳಾಲ: ಮಾತು ಬಾರದ ಪ್ರಾಣಿ ಪಕ್ಷಿಗಳಿಗೂ ಸಹ ಉಳಿಯಲು ಒಂದು ಸೂರು ಇರುತ್ತದೆ.ಅದೇ ರೀತಿ ಮಾನವರು ಕೂಡಾ ವ್ಯವಸ್ಥಿತ ಜೀವನ ಸಾಗಿಸಲು ಮನೆಯು ಅತ್ಯಾವಶ್ಯಕವಾಗಿದೆ.ಪತಿ ಮತ್ತು ಪುತ್ರನನ್ನ ಕಳಕೊಂಡು ಸಂಕಷ್ಟದಲ್ಲಿದ್ದ ವೃದ್ಧೆ ವೀರಮ್ಮ ಅವರಿಗೆ ಸುಸಜ್ಜಿತ ಮನೆ ನಿರ್ಮಿಸಿ ಕೊಟ್ಟು ಸಂಘ ಶತಾಬ್ಧಿಯನ್ನು ಅರ್ಥಪೂರ್ಣವಾಗಿ ಸಂಭ್ರಮಿಸಿದ ಕುಂಪಲದ ರಾಷ್ಟ್ರೀಯ ಸೇವಾ ಭಾರತಿ ಕೇಸರಿ ಶಾಖೆಯ ಕಾರ್ಯ ಸಮಾಜಕ್ಕೆ ಮಾದರಿಯಾಗಿದೆಯೆಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಹೇಳಿದರು. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶತಾಬ್ಧಿಯ ಪ್ರಯುಕ್ತ ಸಂಘ ಪ್ರೇರಿತ ಸಂಸ್ಥೆಯಾದ ಕುಂಪಲದ ರಾಷ್ಟ್ರೀಯ ಸೇವಾ ಭಾರತಿ ಕೇಸರಿ ಶಾಖೆಯ ಮುಂದಾಳುತ್ವದಲ್ಲಿ ಕುಂಪಲ ಕೇಸರಿ ಮಿತ್ರ ವೃಂದ ಸೇವಾ ಟ್ರಸ್ಟ್ ,ಕೇಸರಿ ಮಿತ್ರ ವೃಂದ ,ಕೇಸರಿ ಮಾತೃ ಮಂಡಳಿಯ ಸಹಯೋಗ ಹಾಗೂ ಸಮಾಜದ ದಾನಿಗಳ ಸಹಕಾರದಿಂದ ಪತಿ ಮತ್ತು ಮಗನನ್ನ ಕಳಕೊಂಡು ವಿಧವೆ ಸೊಸೆ ಹಾಗೂ ಮೂರು ಮೊಮ್ಮಕ್ಕಳೊಂದಿಗೆ ವಾಸವಿರುವ ಕುಂಪಲ ಬಗಂಬಿಲದ ಅಮೃತ‌ನಗರ ನಿವಾಸಿ ವೃದ್ಧೆ ವೀರಮ್ಮ ಅವರಿಗೆ ನಿರ್ಮಿಸಿ…

Read More

ಮಂಗಳಗಂಗೋತ್ರಿ : ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಪೀಠ ಮತ್ತು ಕನಕದಾಸ ಸಂಶೋಧನ ಕೇಂದ್ರದ ವತಿಯಿಂದ ‘ಕನಕ ಸ್ಮೃತಿ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಾಗೂ ಕನಕ ಪುರಸ್ಕಾರ ಪ್ರದಾನ ಸಮಾರಂಭವು ಮೇ 06, ಬುಧವಾರ, ಅಪರಾಹ್ನ 2.30 ಗಂಟೆಗೆ ಮಂಗಳಗಂಗೋತ್ರಿಯ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಪ್ರೊ. ಬಿ.ಎ. ವಿವೇಕ ರೈ ವಿಚಾರ ವೇದಿಕೆಯಲ್ಲಿ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆಯನ್ನು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪ್ರೊ. ಪಿ.ಎಲ್‌ ಧರ್ಮ ಇವರು ವಹಿಸಲಿದ್ದಾರೆ, ಮೈಸೂರು ವಿಶ್ವವಿದ್ಯಾನಿಲಯದ ಪ್ರಸಾರಾಂಗದ ಸಹ ನಿರ್ದೇಶಕರಾದ ಡಾ. ಬಿ.ಎಸ್.‌ ಅನಿಲಕುಮಾರ ಬೊಮ್ಮಾಘಟ್ಟ ಇವರು ವಿಶೇಷ ಉಪನ್ಯಾಸ ನೀಡಲಿರುವರು. ವಿಶ್ವವಿದ್ಯಾನಿಲಯದ ಎಸ್.ವಿ.ಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊ. ನಾಗಪ್ಪ ಗೌಡ .ಆರ್, ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕರಾದ ಡಾ ಧನಂಜಯ ಕುಂಬ್ಳೆ ಉಪಸ್ಥಿತರಿರುವರು. ಈ ಕಾರ್ಯಕ್ರಮದಲ್ಲಿ 2025-26ನೇ ಸಾಲಿನ ಕನಕ ಕೀರ್ತನ ಗಂಗೋತ್ರಿ ಕಾರ್ಯಕ್ರಮದಲ್ಲಿ ವಿಜೇತರಾದವರಿಗೆ 16 ಅಭ್ಯರ್ಥಿಗಳಿಗೆ ಮತ್ತು ಆರು ತಂಡಗಳಿಗೆ ‘ಕನಕ ಪುರಸ್ಕಾರ ಪ್ರದಾನ ಮತ್ತು ಕನಕ ಕೀರ್ತನ ಪ್ರಸ್ತುತಿ’ ನಡೆಯಲಿದೆ ಎಂದು ಕನಕದಾಸ ಸಂಶೋಧನ ಕೇಂದ್ರದ ಪ್ರಕಟಣೆ ತಿಳಿಸಿದೆ.

Read More

ಇರಾ : ಇರಾ ಗ್ರಾಮ ಪಂಚಾಯಿತಿಯ ಕಾರ್ಯದರ್ಶಿಯಾಗಿರುವ ದಿನೇಶ್ ಕಕ್ಕೆಮಜಲ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಮತ್ತು ಹ್ಯೂಮನಿಟಿ ಫೌಂಡೇಶನ್ ಮಂಗಳೂರು ಅಧ್ಯಕ್ಷರಾದ ನಾಸೀರ್ ಅಹ್ಮದ್ ಸಾಮಾನಿ ಅವರು ಡಾ. ಬಿ.ಆರ್. ಅಂಬೇಡ್ಕರ್ ವಿದ್ಯಾ ನಿಧಿ ಟ್ರಸ್ಟ್ ಕಚೇರಿಗೆ ಭೇಟಿ ನೀಡಿದರು. ಈ ವೇಳೆ ಅವರು ಟ್ರಸ್ಟ್‌ನ ವಿವಿಧ ಕಾರ್ಯಕ್ರಮಗಳು, ಕಾರ್ಯಚಟುವಟಿಕೆಗಳು ಹಾಗೂ ದಾಖಲೆ ಪತ್ರಗಳನ್ನು ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು. ಮುಂದಿನ ದಿನಗಳಲ್ಲಿ ಟ್ರಸ್ಟ್‌ನೊಂದಿಗೆ ಕೈಜೋಡಿಸಿ ಅದರ ಬೆಳವಣಿಗೆಗೆ ಸಹಕರಿಸುವುದಾಗಿ ತಿಳಿಸಿದರು. ತಮ್ಮ ಸಂಸ್ಥೆಯು ಟ್ರಸ್ಟ್ ಅನ್ನು ಇನ್ನಷ್ಟು ಉನ್ನತ ಮಟ್ಟಕ್ಕೆ ಕೊಂಡೊಯ್ಯಲು ಸಹಾಯ ಮಾಡಲಿದೆ ಎಂದರು. ಈ ಸಂದರ್ಭದಲ್ಲಿ ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷರಾದ ಯಾದವ ಅಸ್ಸೈಗೋಳಿ ಅವರು ಅತಿಥಿಗಳನ್ನು ಶಾಲು ಹೊದಿಸಿ ಸನ್ಮಾನಿಸಿದರು. ಜೊತೆಗೆ ‘ಸಂವಿಧಾನ ಅರಿವು’ ಎಂಬ ಪುಸ್ತಕ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು.

Read More

ಬೆಂಗಳೂರು, ಮೇ. 04 : ಪಶ್ಚಿಮ ಬಂಗಾಲ, ಅಸ್ಸಾಂ, ಪುದುಚೇರಿಯಲ್ಲಿ ಬಿಜೆಪಿ ಗೆಲುವು ಒಂದು ಕಡೆ ನರೇಂದ್ರ ಮೋದಿಜೀ ಅವರ ನಾಯಕತ್ವಕ್ಕೆ ದೊಡ್ಡ ಶಕ್ತಿಯನ್ನು ತುಂಬಿದಂತಾಗಿದೆ. ನಮ್ಮ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬೀನ್‍ಜೀ ಅವರ ಮೊದಲ ಚುನಾವಣೆ ಇದಾಗಿದೆ. ಬಹುದೊಡ್ಡ ಸಂದೇಶವನ್ನು ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡೀ ದೇಶದಲ್ಲಿ ಅಮಿತ್ ಶಾ ಜೀ ಅವರು ಚುನಾವಣಾ ಚಾಣಕ್ಯ ಎಂದು ಪ್ರತಿಯೊಬ್ಬರು ಮಾತನಾಡುತ್ತಿದ್ದಾರೆ. ಅಮಿತ್ ಶಾ ಜೀ ಅವರ ತಂತ್ರಗಾರಿಕೆಯೂ ಈ ಗೆಲುವಿನ ಹಿಂದಿದೆ ಎಂದರು.ಪಶ್ಚಿಮ ಬಂಗಾಲದ ಗೆಲುವಿಗಾಗಿ ಅಲ್ಲಿನ ಕಾರ್ಯಕರ್ತರಿಗೆ ನಾವು ದೊಡ್ಡ ಸಲಾಂ ಹೇಳಬೇಕಿದೆ. ಅಲ್ಲಿ ಹಲವು ದಶಕಗಳಿಂದ ನಮ್ಮ ಕಾರ್ಯಕರ್ತರ ಮೇಲೆ ನಿರಂತರ ದಬ್ಬಾಳಿಕೆ ಆಗುತ್ತಿತ್ತು. ಇದೆಲ್ಲದಕ್ಕೂ ಇತಿಶ್ರೀ ಹಾಕುವ ಕೆಲಸವನ್ನು ನಮ್ಮ ಕಾರ್ಯಕರ್ತರು ಮಾಡಿದ್ದಾರೆ ಎಂದರಲ್ಲದೇ 3 ರಾಜ್ಯಗಳ ಕಾರ್ಯಕರ್ತರಿಗೆ ವಂದನೆ, ಅಭಿನಂದನೆ ತಿಳಿಸುವುದಾಗಿ ಹೇಳಿದರು.ಎರಡೂ ಕ್ಷೇತ್ರಗಳಲ್ಲಿ…

Read More

ಮಂಗಳೂರು, ಮೇ 4: ಕಿಂಗ್‌ಸ್ಟಾರ್ ಸೇವಾಸಮಿತಿ (ರಿ.), ಉಳಿಯ-ಹೊಯ್ಗೆ ಪೆರ್ಮನ್ನೂರು ವ್ಯಾಪ್ತಿಯ ಸಮಾಜಸೇವಾ ಸಂಘಟನೆ, ತನ್ನ ನೂತನ ಕಛೇರಿಯ ಉದ್ಘಾಟನೆಯನ್ನು ಮೇ 9, 2026ರಂದು ಶನಿವಾರ ಬೆಳಿಗ್ಗೆ 8:30ಕ್ಕೆ ಉಳಿಯ ಹೊಯ್ಗೆ ಇರುವ ಕಿಂಗ್‌ಸ್ಟಾರ್ ರಿವರ್ ವ್ಯೂವ್‌ನಲ್ಲಿ ಆಯೋಜಿಸಿದೆ. ಈ ಉದ್ಘಾಟನಾ ಸಮಾರಂಭವನ್ನು ಸಂತ ಸೆಬಾಸ್ಟಿಯನ್ ಚರ್ಚ್, ಪೆರ್ಮನ್ನೂರು ಧರ್ಮಗುರು ರೆವ್. ಫಾ. ಸಿಪ್ರಿಯನ್ ಪಿಂಟೊ ಅವರು ನೆರವೇರಿಸಲಿದ್ದು, ಉಳ್ಳಾಲ್ತಿ ಧರ್ಮ ಅರಸರ ಕ್ಷೇತ್ರದ ವ್ಯವಸ್ಥಾಪನಾ ಅಧ್ಯಕ್ಷರಾದ ರಾಜೇಶ್ ಉಳಿಯ ಹಾಗೂ ಉಳ್ಳಾಲ ದರ್ಗಾದ ಪರಿಚಾರಕರಾದ ಸಯ್ಯದ್ ಸದಕತುಲ್ಲಾ ತಂಜಳ್ ಅವರು ಉಪಸ್ಥಿತರಿರುವರು. ಮೇ 10, 2026ರಂದು ಭಾನುವಾರ ಸಂಜೆ 7:00 ಗಂಟೆಗೆ ಸಭಾ ಕಾರ್ಯಕ್ರಮ ನಡೆಯಲಿದ್ದು, ಕರ್ನಾಟಕ ವಿಧಾನಸಭೆಯ ಅಧ್ಯಕ್ಷರಾದ ಯು.ಟಿ. ಖಾದರ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಕರ್ನಾಟಕ ರಾಜ್ಯ ಅಲೈಡ್ ಮತ್ತು ಹೆಲ್ತ್ ಕೇರ್ ಕೌನ್ಸಿಲ್ ಅಧ್ಯಕ್ಷರಾದ ಡಾ. ಯು.ಟಿ. ಇಫ್ತಿಕರ್ ಅಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಉಳ್ಳಾಲ ಪೋಲೀಸ್ ಠಾಣೆಯ ನಿರೀಕ್ಷಕರಾದ ವಿರೂಪಾಕ್ಷ ಸ್ವಾಮಿ,…

Read More

ಬೆಂಗಳೂರು, ಮೇ. 04: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದ್ದು, ಪಕ್ಷದ ಮುಖ್ಯಸ್ಥ ನಟ ದಳಪತಿ ವಿಜಯ್‌ಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಮದಿಗೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ಆಡಳಿತ ವಿರೋಧಿ ಅಲೆ ಇರಬಹುದು. ಇನ್ನೂ ಟಿವಿಕೆ ಹೊಸ ಪಕ್ಷ ವಿಜಯ್ ಅಲೆಯಿಂದ ಮುನ್ನಡೆ ಸಾಧಿಸಿರಬಹುದು ಎಂದ ಅವರು ವಿಜಯ್ ಅವರಿಗೆ ಅಭಿನಂದನೆ ಸಲ್ಲಿಸಿದರು.”ಪಶ್ಚಿಮ ಬಂಗಾಳದಲ್ಲಿ ನಮ್ಮದೇನು ಇರಲಿಲ್ಲ. ಅಲ್ಲಿ ಬಿಜೆಪಿ ಮುನ್ನಡೆಗೆ ಆಡಳಿತ ವಿರೋಧಿ ಅಲೆ ಇರಬಹುದು. ಅಸ್ಸಾಂನ ಸೋಲನ್ನು ಒಪ್ಪುತ್ತೇವೆ. ಇನ್ನೂ ಕೇರಳದಲ್ಲಿ ನಮ್ಮ ನಿರೀಕ್ಷೆ ಮೀರಿ ಮುನ್ನಡೆ ಗಳಿಸಿದ್ದೇವೆ” ಎಂದು ಹೇಳಿದರು.

Read More

ಮಂಗಳೂರು, ಮೇ. 04 : ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳು ದೇಶದ ರಾಜಕೀಯ ದಿಕ್ಕನ್ನು ಸ್ಪಷ್ಟವಾಗಿ ತೋರಿಸಿವೆ. ವಿಶೇಷವಾಗಿ ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ರಾಜ್ಯಗಳಲ್ಲಿ ಹಿಂದೂ ವಿರೋಧಿ ನೀತಿಗಳನ್ನು ಅನುಸರಿಸಿಕೊಂಡು ಬಂದಿದ್ದ ರಾಜಕೀಯ ಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಪುದುಚೇರಿಯಲ್ಲಿ ಎನ್.ಡಿ.ಎ. ಮೈತ್ರಿ ಆಡಳಿತ ಸ್ಥಾಪನೆಗೆ ಮುನ್ನಡೆಯುತ್ತಿದೆ. ಕೇರಳದಲ್ಲಿಯೂ ಭಾರತೀಯ ಜನತಾ ಪಕ್ಷ ತನ್ನ ಮತಶೇರ್ ಅನ್ನು ಗಣನೀಯವಾಗಿ ಹೆಚ್ಚಿಸಿಕೊಂಡಿದ್ದು, ಅಲ್ಲಿನ ಕಮ್ಯುನಿಸ್ಟ್ ಸರ್ಕಾರದ ವಿರುದ್ಧ ಜನಾಭಿಪ್ರಾಯ ವ್ಯಕ್ತವಾಗಿದೆ.ಈ ಫಲಿತಾಂಶಗಳನ್ನು ಅವಲೋಕಿಸಿದಾಗ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರದ ಜನಪ್ರಿಯತೆ ದೇಶದಾದ್ಯಂತ ಸುನಾಮಿಯಂತೆ ವ್ಯಕ್ತವಾಗಿರುವುದು ಗೋಚರಿಸುತ್ತದೆ. ಜನತೆಯ ಮನೋಭಾವ ಬಿಜೆಪಿ ಪರವಾಗಿ ರೂಪುಗೊಂಡಿರುವುದು ಈ ಚುನಾವಣಾ ಫಲಿತಾಂಶಗಳ ಮೂಲಕ ಸ್ಪಷ್ಟವಾಗಿದೆ.ಈ ಬಾರಿ ಫಲಿತಾಂಶಗಳು ಬಹುತೇಕ ಎಲ್ಲಾ ಎಕ್ಸಿಟ್ ಪೋಲ್‌ಗಳ ಅಂದಾಜುಗಳನ್ನು ಮೀರಿರುವುದು ಗಮನಾರ್ಹವಾಗಿದೆ. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಹಾಗೂ ಪಕ್ಷಕ್ಕೆ ಮತ ನೀಡಿದ ಎಲ್ಲಾ ಮತದಾರರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇನೆ.

Read More

ಹೆಚ್.ವೈ. ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ. ಹೆಚ್.ವೈ. ಮೇಟಿ ನಿಧನದ ಹಿನ್ನೆಲೆ ಅವರ ಪುತ್ರ ಉಮೇಶ್‌ರನ್ನು ಉಪಚುನಾವಣೆಯಲ್ಲಿ ಕಾಂಗ್ರೆಸ್ ತನ್ನ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದ ಉಮೇಶ್ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರನ್ನು ಸೋಲಿಸಿ ಉಮೇಶ್ ಮೇಟಿ ಗೆಲುವಿನ ನಗೆ ಬೀರಿದ್ದಾರೆ. ಈ ಗೆಲುವಿನೊಂದಿಗೆ ಬಾಗಲಕೋಟೆ ಕ್ಷೇತ್ರವನ್ನು ಕಾಂಗ್ರೆಸ್ ಮರಳಿ ತನ್ನ ತೆಕ್ಕೆಗೆ ಪಡೆದುಕೊಂಡಿದೆ. ಬಾಗಲಕೋಟೆ ಉಪಚುನಾವಣೆಯಲ್ಲಿ ಉಮೇಶ್ ಮೇಟಿ ವಿಜಯದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರ ಸಹೋದರ ಮಲ್ಲಿಕಾರ್ಜುನ ಮೇಟಿ ಅವರು, “ಇದೊಂದು ಭಾವುಕ ಕ್ಷಣವಾಗಿದ್ದು, ಈ ಗೆಲುವಿನಿಂದ ನಮ್ಮ ತಂದೆ ಆತ್ಮಕ್ಕೆ ಶಾಂತಿ ಸಿಕ್ಕ ಹಾಗಾಗಿದೆ. ನಮ್ಮ ತಂದೆ ಕೈ ಹಿಡಿದಿದ್ದ ಜನರು ಈಗ ನಮ್ಮ ಸಹೋದರನ ಕೈಯನ್ನೂ ಹಿಡಿದಿದ್ದಾರೆ. ಸಿಎಂ, ಸಚಿವರು ಮತ್ತು ಮತದಾರರಿಗೆ ಧನ್ಯವಾದ ಹೇಳೋದಾಗಿ” ತಿಳಿಸಿದ್ದಾರೆ.

Read More

ಅಡ್ಕರೆ ಪಡ್ಪು: ಸಂಘಟನೆಗಳು ಸಮಾಜದ ಏಳಿಗಾಗಿ ಕಾರ್ಯನಿರ್ವಹಿಸಿ, ಸರ್ಕಾರದ ಉತ್ತಮ ಯೋಜನೆಗಳನ್ನು ಕಟ್ಟಕಡೆಯ ವ್ಯಕ್ತಿಗಳಿಗೂ ತಲುಪಿಸುವ ಸೇತುವೆಯಾಗಬೇಕು ಎಂದು ಮುಹಿಯುದ್ದೀನ್ ಜುಮಾ ಮಸ್ಜಿದ್ ಅಡ್ಕರೆಯ ಅಧ್ಯಕ್ಷ ಅಬ್ದುಲ್ ಖಾದರ್ ಹೇಳಿದರು. ಅವರು ಅಲ್ ಇಹ್ಸಾನ್ ಯೂತ್ ಅಸೋಸಿಯೇಷನ್ ಅಡ್ಕರೆ ಪಡ್ಪು ಹಾಗೂ ಭಾರತೀಯ ಅಂಚೆ ಇಲಾಖೆ ಮಂಗಳೂರು ಇವರ ಸಹಯೋಗದಲ್ಲಿ ಆಯೋಜಿಸಲಾದ ಸುಕನ್ಯಾ ಸಮೃದ್ಧಿ ಯೋಜನೆ ನೋಂದಣಿ ಹಾಗೂ ಆಧಾರ್ ತಿದ್ದುಪಡಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಮಾಜಮುಖಿ ಚಟುವಟಿಕೆಗಳ ಮೂಲಕ ಜನರಿಗೆ ಉಪಯುಕ್ತ ಸೇವೆಗಳನ್ನು ತಲುಪಿಸುವಲ್ಲಿ ಅಲ್ ಇಹ್ಸಾನ್ ಸಂಘಟನೆ ಮಾದರಿಯಾಗಿದೆ. ಇಂತಹ ಸಂಘಟನೆಗಳು ಪ್ರತಿಯೊಂದು ಊರಲ್ಲೂ ಸ್ಥಾಪನೆಯಾಗಬೇಕು. ಯುವಕರು ತಪ್ಪು ದಾರಿಯಲ್ಲಿ ಹೋಗದಂತೆ ತಡೆದು, ಅಹ್ಲು ಸುನ್ನತ್ ಆಶಯದಂತೆ ಸನ್ಮಾರ್ಗದಲ್ಲಿ ನಡೆಯುವಂತೆ ಮಾರ್ಗದರ್ಶನ ನೀಡಬೇಕು ಎಂದರು. ಕಾರ್ಯಕ್ರಮದಲ್ಲಿ ಅಲ್ ಇಹ್ಸಾನ್ ಅಧ್ಯಕ್ಷ ಎಂ. ಸಿರಾಜ್ ಅಡ್ಕರೆ ಮಾತನಾಡಿ, ಸಂಘಟನೆಯು ಪ್ರಾರಂಭದಿಂದಲೇ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ. ಸದಸ್ಯರ ಒಗ್ಗಟ್ಟು, ಶ್ರಮ ಹಾಗೂ ಅನಿವಾಸಿ ಸದಸ್ಯರ ಸಹಕಾರದಿಂದ ಇದು ಸಾಧ್ಯವಾಗಿದೆ…

Read More

ಮಂಗಳೂರು, ಮೇ 4: ಮಂಗಳೂರಿನ ಇನ್‌ಸ್ಟಿಟ್ಯೂಟ್ ಆಫ್ ಪ್ರೊಫೆಷನಲ್ ಲರ್ನಿಂಗ್‌ನ ಆರು ಮಂದಿ ವಿದ್ಯಾರ್ಥಿಗಳು ಮೇ-ಜೂನ್ ಪರೀಕ್ಷಾ ಅವಧಿಯಲ್ಲಿ ನಡೆದ ಯುಎಸ್ ಸರ್ಟಿಫೈಡ್ ಮ್ಯಾನೇಜ್‌ಮೆಂಟ್ ಅಕೌಂಟೆAಟ್ (ಸಿಎಂಎ) ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಏಪ್ರಿಲ್ 14ರಂದು ಫಲಿತಾಂಶ ಪ್ರಕಟವಾಗಿದ್ದು, ಇದು ಸಂಸ್ಥೆಗೆ ಗಮನಾರ್ಹ ಶೈಕ್ಷಣಿಕ ಸಾಧನೆಯಾಗಿದೆ. ಅಮೃತ್ ಸಿ ಶೆಟ್ಟಿ, ಸ್ಥಿತಿ ಜೆ ಶೆಟ್ಟಿ, ಮೇಘಶ್ರೀ ಕೆ ಪೂಜಾರಿ, ಪ್ರಾರ್ಥನಾ ಪ್ರಭು, ನೀಷ್ಮಾ ಹಾಗೂ ಪ್ರಿಯಾಂಕಾ ಚೌಧರಿ ಯಶಸ್ವಿಯಾಗಿ ಉತ್ತೀರ್ಣರಾದ ವಿದ್ಯಾರ್ಥಿಗಳಾಗಿದ್ದಾರೆ. ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ ಅಕೌಂಟೆoಟ್ಸ್ ವತಿಯಿಂದ ನೀಡಲಾಗುವ ಯುಎಸ್ ಸಿಎಂಎ ಅರ್ಹತೆಯು ಹಣಕಾಸು ನಿರ್ವಹಣೆ ಹಾಗೂ ಕಾರ್ಯತಂತ್ರದ ಲೆಕ್ಕಪತ್ರ ನಿರ್ವಹಣೆಯಲ್ಲಿ ಜಾಗತಿಕವಾಗಿ ಮಾನ್ಯತೆ ಪಡೆದ ಅರ್ಹತೆಯಾಗಿದೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆ ಅಭಿನಂದನೆ ಸಲ್ಲಿಸಿದ್ದು, ಅವರ ಮುಂದಿನ ವೃತ್ತಿಪರ ಜೀವನದಲ್ಲಿ ಇನ್ನಷ್ಟು ಯಶಸ್ಸು ದೊರೆಯಲಿ ಎಂದು ಶುಭಹಾರೈಸಿದೆ.

Read More